Tuesday, July 2, 2024

03-07-2024 EE DIVASA KANNADA DAILY NEWS PAPER

ವಸತಿ ನಿಲಯಗಳ ಪರಿಶೀಲನೆ ಮಾಡಿದ ಜಿಪಂ ಸಿಇಒ ಪ್ರತಿದಿನವೂ ವಸತಿನಿಲಯಗಳ ನಿರ್ವಹಣೆಗೆ ಕ್ರಮವಹಿಸಿ: ರಿಷಿ ಆನಂದ ಸೂಚನೆ


ವಿಜಯಪೂರ: ವಸತಿ ನಿಲಯಗಳಲ್ಲಿ ಅಡುಗೆ ಕೋಣೆ, ಭೋಜನಾಲಯ, ದಾಸ್ತಾನು ಕೊಠಡಿ, ಸ್ನಾನದ ಗೃಹಗಳು, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ವಚ್ಚತೆ ಹಾಗೂ ಕಲ್ಪಿಸಿರುವ ಮೂಲಭೂತ ಸೌಲಭ್ಯಗಳನ್ನು ಪ್ರತಿದಿನವೂ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಸೂಚಿಸಿದರು.

ಅವರು ಸೋಮವಾರ ವಿಜಯಪುರ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಮೂರು ಬಾಲಕಿಯರ ವಸತಿ ನಿಲಯಗಳು ಹಾಗೂ ಎರಡು ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಗಳಿಗೆ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿನೆ ನಡೆಸಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿದ್ಯಾರ್ಥಿಗಳಿಗೆ ಸಮಯಾನುಸಾರ ಉಪಹಾರ, ಊಟ, ಶುದ್ಧ ಕುಡಿಯುವ ನೀರು ಮತ್ತು ಮೂಲಸೌಕರ್ಯಗಳನ್ನು ಒದಗಿಸಲು ಆಧ್ಯತೆ ನೀಡಬೇಕು. ವಸತಿ ನಿಲಯದ ಗ್ರಂಥಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬAಧಿಸಿದ ಪುಸ್ತಕಗಳು, ದಿನಪತ್ರಿಕೆಗಳು, ಮಾಸ ಪತ್ರಿಕೆಗಳನ್ನು ಪೂರೈಸಬೇಕು. ಗಣಕಯಂತ್ರ ಕೊಠಡಿಗಳಲ್ಲಿ ಕಡ್ಡಾಯವಾಗಿ ಇಂಟರ್ನೆಟ್ ವ್ಯವಸ್ಥೆ ಒದಗಿಸಬೇಕು. ಪ್ರತಿ ಮಾಹೆ ತಪ್ಪದೇ ವೈದ್ಯಕೀಯ ತಪಾಸಣೆ ನಡೆಸಿ, ಅವರ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಪೂರೈಸಿ ಕ್ರೀಡೆಯಲ್ಲಿ ತೊಡಗುವಂತೆ ಪ್ರೇರೆಪಿಸಬೇಕು. ವಸತಿ ನಿಲಯದಲ್ಲಿ ಸಣ್ಣಪುಟ್ಟ ದುರಸ್ತಿ ಕಾರ್ಯಗಳು ಬಾಕಿ ಇದ್ದಲ್ಲಿ ತುರ್ತಾಗಿ ದುರಸ್ತಿಪಡಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.

ಅಡುಗೆ ಕೊಠಡಿ, ಭೋಜನಾಲಯ, ಸೋಲಾರ್ ವ್ಯವಸ್ಥೆ, ವಿದ್ಯಾರ್ಥಿ ತಂಗುವ ಕೊಠಡಿಗಳು, ಆಹಾರ ಪದಾರ್ಥಗಳ ಪರಿಶೀಲಿಸಿದರು.

ವಸತಿ ನಿಲಯದ ಆವರಣದಲ್ಲಿರುವ ಗ್ರಂಥಾಲಯಕ್ಕೆ ತೆರಳಿ, ವಿದ್ಯಾರ್ಥಿ ಜೀವನ ಬಹು ಪ್ರಮುಖ ಘಟ್ಟವಾಗಿದ್ದು, ಓದಿನೆಡೆಗೆ ಗಮನಹರಿಸಬೇಕು ಪಠ್ಯ ವಿಷಯ ಕರಗತ, ಮಾಡಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಜ್ಞಾನವೂ ಅಗತ್ಯ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಕೈಗೊಳ್ಳಬೇಕು. ಓದಿನಲ್ಲಿ ಆಸಕ್ತಿ ತಾಳಿದಾಗ ಗುರಿ ಸಾಧಿಸಲು ಸಾಧ್ಯ ಎಂದು ಸಂವಾದ ನಡೆಸಿದರು. 

ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದೃಢವಿಶ್ವಾಸದಿಂದ ಅಧ್ಯಯನ ಕೈಗೊಂಡು, ಉತ್ತಮ ಸಾಧನೆ ತೋರಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಈರಣ್ಣ ಆಶಾಪುರ, ಸಹಾಯಕ ನಿರ್ದೇಶಕರಾದ ಎಸ್.ಎಮ್. ಪಾಟೀಲ ಹಾಗೂ ವಸತಿ ನಿಲಯಗಳ ನಿಲಯ ಪಾಲಕರಾದ ಟಿ.ವಿ.ಹಂಚನಾಳ, ಪಾರ್ವತಿ ಆಲಮೇಲ, ರೂಪಾ ಮೇತ್ರಿ, ಪೂಜಾ ನಿಕ್ಕಂ, ಶೀರಿನಾ ಅಗಸಿಮುಂದಿನ ಅವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಡಾ. ಶಿವಾನಂದ ಮಾಸ್ತಿಹೊಳಿ ಅವರಿಗೆ ‘ಶ್ರೇಷ್ಠ ವೈದ್ಯ ಪ್ರಶಸ್ತಿ’

ವಿಜಯಪುರ : ವಿಜಯಪುರ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ ಶಿವಾನಂದ ಮಾಸ್ತಿಹೊಳಿ ಇವರಿಗೆ ರಾಜ್ಯ ಸರ್ಕಾರದಿಂದ ‘ಶ್ರೇಷ್ಠ ವೈದ್ಯ ಪ್ರಶಸ್ತಿ’ಯನ್ನು ಸೋಮವಾರ ವಿಧಾನಸೌಧದ ಬ್ಯಾಂಕ್ವೆೆಟ್ ಹಾಲ್‌ನಲ್ಲಿ ನಡೆದ ವೈದ್ಯರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವÀರು ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಪ್ರಧಾನ ಕಾರ್ಯದರ್ಶಿಗಳಾದ ಹರ್ಷ ಗುಪ್ತಾ ಉಪಸ್ಥಿತರಿದ್ದರು. 

 ಇದೇ ಸಂದರ್ಭದಲ್ಲಿ ಆರ್‌ಸಿಎಚ್ ಅಧಿಕಾರಿಗಳಾದ ಡಾ ಕೇಶರ್ ಸಿಂಗ್ ಗುಂಡಬಾವಡಿ ಇವರಿಗೆ ಉತ್ತಮ ಆರ್‌ಸಿಎಚ್ ವಿಭಾಗದಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯ ಕಣ್ಣಿನ ವಿಭಾಗದ ವೈದ್ಯರಾದ ಡಾ. ಮೀನಾಕ್ಷಿ ಮುತ್ತಪ್ಪನವರ್ ಅವರಿಗೆ ಉತ್ತಮ ವೈದ್ಯರೆಂದು ಹಾಗೂ ಇಂಡಿ ತಾಲೂಕಾ ವೈದ್ಯಾಧಿಕಾರಿಗಳಾದ ಡಾ ಅರ್ಚನಾ ಕುಲಕರ್ಣಿ, ಮುಳವಾಡ ವೈದ್ಯಾಧಿಕಾರಿಗಳಾದ ಡಾ. ನಂದಿನಿ ಇವರುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಪ್ರಶಸ್ತಿ ನೀಡಲಾಯಿತು.

 ಪ್ರಶಸ್ತಿ ಸ್ವೀಕರಿಸಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಅವರಿಗೆ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.