Wednesday, July 10, 2024

11-07-2024 EE DIVASA KANNADA DAILY NEWS PAPER

ನಾರಾಯಣಸ್ವಾಮಿ ಪರಿಷತ್‌ ವಿಪಕ್ಷ ನಾಯಕರಾಗಲಿ: ಗೋಪಾಲ ಘಟಕಾಂಬಳೆ

ವಿಜಯಪುರ: ಪಕ್ಷ ಸಂಘಟನೆಯಲ್ಲಿ ಹೋರಾಟ ಮಾಡುತ್ತ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವಲ್ಲಿ ಶ್ರಮಿಸಿರುವ ಬಿಜೆಪಿ ರಾಜ್ಯ ವಕ್ತಾರ, ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಬೇಕು ಎಂದು ಬಿಜೆಪಿ ಎಸ್ಸಿ ಮರ‍್ಚಾ ರಾಜ್ಯ ಉಪಾಧ್ಯಕ್ಷ ಗೋಪಾಲ ಘಟಕಾಂಬಳೆ ಆಗ್ರಹಿಸಿದ್ದಾರೆ.

ಬಿಜೆಪಿ ಎಸ್.ಸಿ ಮರ‍್ಚಾ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ ಅವರು ಅಲ್ಪ ಸಮಯದಲ್ಲೇ ರಾಜ್ಯ ಪ್ರವಾಸ ಮಾಡಿ ಪಕ್ಷ ಕಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ವಿಧಾನಸಭಾ, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ರ‍್ಥಿಗಳ ಪರವಾಗಿ ಪ್ರಚಾರ ಮಾಡಿ ಅವರ ಗೆಲುವಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆಮಾಡಿ ಸಾಮಾಜಿಕ ಪ್ರಾತಿನಿಧ್ಯ ಕೊಡೆಬೇಕು ಎಂದು ಪ್ರಕಟಣೆಯಲ್ಲಿ ಗೋಪಾಲ ಘಟಕಾಂಬಳೆ ತಿಳಿಸಿದ್ದಾರೆ.

ಜಮೀನು ದಾರಿ ಸಮಸ್ಯೆ ಇಥ್ಯರ್ತಕ್ಕಾಗಿ ಕಾನೂನು ತಿದ್ದುಪಡಿ ಮಾಡಿ ಜಮೀನು ದಾರಿ ಸಮಸ್ಯೆ ಬಗೆಹರಿಸಲು ತಹಶೀಲ್ದಾರುಗಳಿಗೆ ಸಂಪೂರ್ಣ ಅಧಿಕಾರವನ್ನು ವಹಿಸಿಕೊಡಲು ಆಗ್ರಹ


ವಿಜಯಪುರ: ಜಮೀನು ದಾರಿ ಸಮಸ್ಯೆ ಇಥ್ಯರ್ತಕ್ಕಾಗಿ ಕಾನೂನು ತಿದ್ದುಪಡಿ ಮಾಡಲು ಈ ಗಂಭೀರ ಸಮಸ್ಯೆಯನ್ನು ಅಧಿವೇಶನದಲ್ಲಿ ಚರ್ಚಿಸಿ ಕ್ರಮ ವಹಿಸುವಂತೆ ಒತ್ತಾಯಿಸಿ ಕಂದಾಯ ಇಲಾಖೆ ಆಯುಕ್ತರಾದ ಪಿ. ಸುನೀಲ ಕುಮಾರ ಅವರನ್ನು ಬೆಂಗಳೂರಿನ ಬಹುಮಹಡಿ ಕಟ್ಟದ ಆಯುಕ್ತಾಲದಯಲ್ಲಿ ಭೇಟಿ ನೀಡಿ ಆಯುಕ್ತರೊಂದಿಗೆ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಬುಧವಾರ ದಿನಾಂಕ: 10-07-2024 ರಂದು ಚರ್ಚಿಸಿದರು.

ಈ ಸಂದರ್ಭದಲ್ಲಿ ಅರವಿಂದ ಕುಲಕರ್ಣಿ ಮಾತನಾಡಿ, ರಾಜ್ಯದ ರೈತರು ತಮ್ಮ ತಮ್ಮ ಜಮೀನುಗಳಿಗೆ ಹೋಗಲು ಮುಂದಿನ ರೈತರು ದಾರಿ ಕೊಡದ ಕಾರಣ ಜಮೀನು ಭಿತ್ತನೆ ಮಾಡದೆ ಜಮೀನು ಬೀಳು ಬಿದ್ದು ರೈತ ಕುಟುಂಬಗಳು ಉಪವಾಸ ಬೀಳುವ ಪರಸ್ಥಿತಿ ನಿರ್ಮಾಣವಾಗಿದೆ ಈ ವಿಷಯವಾಗಿ ಕಳೆದ 10 ವರ್ಷಗಳಿಂದ ಹೋರಾಟ ಮಾಡಿ ಸರಕಾರ ಗಮನ ಸೆಳೆಯಲಾಗಿತ್ತು ನಂತರ ಸರಕಾರ ಕಾಟಾಚಾರಕ್ಕೆ ಎಂಬAತೆ ಸುತ್ತೋಲೆ ಹೊರಡಿಸಿದೆ. ಆದರೆ ರಾಜ್ಯದ ಯಾವೊಬ್ಬ ತಹಶೀಲ್ದಾರಗಳು ದಾರಿ ಮಾಡಿಕೊಟ್ಟ ಉದಾಹರಣೆ ಇಲ್ಲ ತಹಶೀಲ್ದಾರಗಳನ್ನು ಕೇಳಿದರೆ ಸರಕಾರದ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ದಾರಿ ಮಾಡಿಕೊಡಲು ಆದೇಶ ವಿಲ್ಲ ಆದ್ದರಿಂದ ಮಾಡಿಕೊಡಲು ಸಾದ್ಯವಿಲ್ಲವೆಂದು ರೈತರಿಗೆ ಹೇಳುತಿದ್ದಾರೆ. ಇದರಿಂದ ಸರಕಾರದ ಸುತ್ತೋಲೆಗೆ ಬೆಲೆ ಇಲ್ಲದಂತಾಗಿದೆ ಆದ್ದರಿಂದ ಜುಲೈ 15 ರಂದು ಪ್ರಾರಂಭವಾಗಲಿರುವ ವಿಧಾನ ಸಭಾ ಅಧಿವೇಶನದಲ್ಲಿ ಜಮೀನು ದಾರಿ ವಿಷಯವನ್ನು ಚರ್ಚಿಸಿ ಸೂಕ್ತ ಕಾನೂನು ತಿದ್ದುಪಡಿ ಮಾಡಿ ತಹಶೀಲ್ದಾರುಗಳಿಗೆ ದಾರಿ ಮಾಡಿಕೊಡುವ ಅಧಿಕಾರವನ್ನು ವಹಿಸಿಕೊಡಬೇಕು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರದಂತೆ ಕಾನೂನು ತಿದ್ದುಪಡಿ ಮಾಡಬೇಕೆಂದು ಮತ್ತು ಕರ್ನಾಟಕ ವಿಧಾನಸಭೆ ಈ ಗಂಭೀರ ಸಮಸ್ಯೆಯನ್ನು ಅಧಿವೇಶನದಲ್ಲಿ ಚರ್ಚಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪಾಂಡು ಹ್ಯಾಟಿ, ವಿಠ್ಠಲ ಬಿರಾದಾರ, ಹೊನಕೇರೆಪ್ಪ ತೆಲಗಿ, ಮಲಗೆಪ್ಪಾ ಸಾಸನೂರ, ಲಾಲಸಾಬ ಹಳ್ಳೂರ, ಬಸಪ್ಪ ತೋಟದ, ಮುದನೂರ ಬಿ. ಗ್ರಾಮದ ಜಯಕರ್ನಾಟಕ ಸಂಘಟನೆ ಹುಣಸಗಿ ತಾಲೂಕಾಧ್ಯಕ್ಷ ಪ್ರಭುಗೌಡ ಪೋತರಡ್ಡಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ರಾಜ್ಯಾದ್ಯಂತ ಜುಲೈ 15. 2024 ರಿಂದ ಬಿಸಿಯೂಟ ಬಂದ್ ಅನಿರ್ದಿಷ್ಟಾವಧಿ ಹೋರಾಟ


ವಿಜಯಪುರ : ವಿಜಯಪುರ ನಗರದ ಬಾರಾ ಕಮಾನಿನಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ವಿಜಯಪುರ ಜಿಲ್ಲಾ ಸಮಿತಿ ಪದಾಧಿಕಾರಿಗಳ ಪೂರ್ವಭಾವಿ ಸಭೆ ಜರುಗಿತು.

ಈ ಸಂದರ್ಭದಲ್ಲಿ ಅಕ್ಷರದಾಸೋಹ ನೌಕರರ ಸಂಘದ ಅಧ್ಯಕ್ಷರಾದ ಕಾಳಮ್ಮ ಬಡಿಗೇರ ಮಾತನಾಡಿ, ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘಟನೆ (ಸಿಐಟಿಯು) ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ 2023 ಅಕ್ಟೋಬರ್ 30 ರಿಂದ ನವೆಂಬರ್ 10 ರವರೆಗೆ ಅನಿರ್ದಿಷ್ಟಾವಧಿ ಹೋರಾಟ ನಡೆದಿದೆ. ಈ ಹೋರಾಟದ ಸಂದರ್ಭದಲ್ಲಿ ನಮ್ಮ ಬೇಡಿಕೆಗಳ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು. ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿರ್ದೆಶಕರು ಮತ್ತು ಸಂಘಟನೆ ಮುಖಂಡರೊAದಿಗೆ 04-11-2023 ರಂದು ಆಯುಕ್ತರ ಕಛೇರಿಯಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. 10-11- 2023 ರಂದು ಮಾನ್ಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸಂಘಟನೆಯ ಪದಾಧಿಕಾರಿಗಳ ಜೊತೆ ಸಭೆ ನಡೆದಿದೆ. 15-11-2023 ರಂದು ಮಾನ್ಯ ಶಿಕ್ಷಣ ಸಚಿವರು ನಮ್ಮ ಬೇಡಿಕೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳುವ ಕುರಿತು ಲಿಖಿತವಾಗಿ ಪತ್ರ ಕಳುಹಿಸಿದ್ದರು. ಮತ್ತು ಹೋರಾಟವನ್ನು ವಾಪಸ್ಸು ಪಡೆಯಲು ಕೋರಿದ್ದರಿಂದ ಇಲಾಖೆಯ ಮಾತಿಗೆ ಗೌರವಿಸಿ ಹೋರಾಟವನ್ನು ವಾಪಸ್ಸು ಪಡೆಯಲಾಗಿತ್ತು.

ಅಕ್ಷರದಾಸೋಹ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಸುಮಂಗಲಾ ಆನಂದಶೆಟ್ಟಿ ಮಾತನಾಡಿ, 2022 ರಿಂದ 2024 ರವರೆಗೆ 10,500 ಕ್ಕೂ ಹೆಚ್ಚಿನ ನೌಕರರನ್ನು ಕೆಲಸದಿಂದ ತೆಗೆದಿರುವುದನ್ನು ವಿರೋಧಿಸಿ 3-4 ಹಂತದ ಹೋರಾಟಗಳು ನಡೆದಿವೆ. ಹೋರಾಟದ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಚಿವರು ಜಂಟಿ ಸಭೆಗಳನ್ನು ನಡೆಸಲಾಗಿದೆ. ಹೋರಾಟದ ಸಂದರ್ಭದಲ್ಲಿ ಮಾತುಕತೆ ನಡೆಸಿದಂತೆ ನಿವೃತ್ತಿ ಹೊಂದಿದ ಮತ್ತು ಹೊಂದುತ್ತಿರುವ ಅಡುಗೆ ನೌಕರರಿಗೆ ಇಡಿಗಂಟು ಜಾರಿ ಮಾಡಬೇಕು. ಚುನಾವಣಾ ಸಂದರ್ಭದಲ್ಲಿ ವೇತನ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೂ ಜಾರಿ ಆಗಿರುವುದಿಲ್ಲ. ಜಾರಿ ಆಗುವವರೆಗೆ ಯಾವುದೇ ನೌಕರರನ್ನು ಕೆಲಸದಿಂದ ಕೈ ಬಿಡಬಾರದು. ದಯಾಳುಗಳಾದ ತಾವು ಈ ಸಮಸ್ಯೆಯನ್ನು ಬಗೆಹರಿಸಿ ನ್ಯಾಯ ಒದಗಿಸಬೇಕೆಂದು ಹೇಳಿದರು.

ಅಕ್ಷರದಾಸೋಹ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಸುರೇಖಾ ವಾಗ್ಮೊಡೆ ಮಾತನಾಡಿ, ಇದುವರೆಗೂ ಯಾವುದೇ ಸಮಸ್ಯೆಗೆ ಪರಿಹಾರ ಸಿಗದೆ ಇರುವ ಕಾರಣಕ್ಕೆ ಆನಿವಾರ್ಯವಾಗಿ ಜುಲೈ 15. 2024 ರಿಂದ ಬಿಸಿಯೂಟ ನೌಕರರು ತಮ್ಮ ಕೆಲಸಸ್ಥಗಿತ ಗೊಳಿಸಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರು ವಿಜಯಪುರ ಜಿಲ್ಲೆಯಿಂದ ಪಾಲ್ಗೊಳ್ಳುತ್ತಿದ್ದಾರೆ.

ಈ ಸಂದರ್ಭದಲ್ಲಿ ಸುವರ್ಣ ರಾಠೋಡ, ಬಿಸ್ಮಿಲ್ಲಾ ಇನಾಂದಾರ, ಸೈನಾಜ ಮುಲ್ಲಾ, ಭಾರತಿ ಮಠಪತಿ, ರಾಜಶ್ರೀ ಬಗಲಿ, ದಾನಮ್ಮ ರೇಣುಕಾ, ಸುಮಂಗಲಾ ಹಿರೇಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಹಳೆಯ ಸಂಸತ್ ಭವನದ ಮೂಲ ಸ್ಥಳದಲ್ಲಿ ಪುನಃ ಪುತ್ಥಳಿ ಸ್ಥಾಪಿಸಲು ಆಗ್ರಹ



ವಿಜಯಪುರ : ನವದೆಹಲಿಯ ಐತಿಹಾಸಿಕ ಮಹತ್ವದ ಹಳೆಯ ಸಂಸತ್ ಭವನದ ಮುಂದಿದ್ದ, ರಾಷ್ಟçದ ಮಹಾನ್ ನಾಯಕರಾದ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ತೆರುವುಗೊಳಿಸಿದನ್ನು ಖಂಡಿಸಿ ಬುದ್ಧ, ಬಸವ, ಅಂಬೇಡ್ಕರ್ ಸೇವಾ ಸಂಸ್ಥೆಯವತಿಯಿAದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾ ರ‍್ಯಾಲಿಯ ನೇತೃತ್ವ ವಹಿಸಿದ್ದ ಬುದ್ಧ, ಬಸವ, ಅಂಬೇಡ್ಕರ್ ಸೇವಾ ಸಂಸ್ಥೆಯ ಅಧ್ಯಕ್ಷ ತುಳಸಿರಾಮ ಹರಿಜನ ಮಾತನಾಡಿ, ಭಾರತೀಯ ಚರಿತ್ರೆಯ ಪುಟದಲ್ಲಿ ಅಜರಾಮರವಾಗಿ ಉಳಿದ ವಿಶ್ವಮಾನ್ಯ ಅಮೂಲ್ಯ ರತ್ನಗಳೆಂದರೆ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಅಂತಹ ಮಹಾನ್ ನಾಯಕರಿಗೆ ಗೌರವ ಸಲ್ಲಿಸುವ ದ್ಯೋತಕವಾಗಿ ಹಿಂದಿನ ನಾಯಕರು ರಾಷ್ಟçದ ಐತಿಹಾಸಿಕ ಸಂಸತ್ ಭವನದ ಮುಂದೆ ಪುತ್ಥಳಿಗಳನ್ನು ನಿರ್ಮಿಸಿ ಚರಿತ್ರೆಯ ಪುಟದಲ್ಲಿ ಅಚ್ಛಳಿಯದಂತೆ ನೋಡಿಕೊಂಡಿದ್ದರು. ಆದರೆ ದೇಶದಲ್ಲಿರುವ ಈಗಿನ ಕೇಂದ್ರ ಸರ್ಕಾರ ಯಾವುದೇ ಸಕಾರಣವಿಲ್ಲದೇ ಏಕಾಏಕಿ ಪ್ರತಿಮೆಗಳನ್ನು ತೆರವುಗೊಳಿಸಿರುವ ಕ್ರಮ ವಿಶ್ವವ್ಯಾಪಿ ಇರುವ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಅಸಂಖ್ಯಾತ ಅನುಯಾಯಿಗಳಿಗೆ ಆಘಾತವನ್ನುಂಟು ಮಾಡಿದೆ. ಕೂಡಲೇ ರಾಷ್ಟçಪತಿಗಳು ಹಳೆಯ ಸಂಸತ್ ಭವನದ ಮೂಲ ಸ್ಥಳದಲ್ಲಿ ಪುನಃ ಪ್ರತಿಷ್ಠಾಪಿಸುವ ಮೂಲಕ ಗೌರವ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು. 

ಈ ಸಂದರ್ಭ ಯುವ ಮುಖಂಡ ಪ್ರತಾಪ ಚಿಕ್ಕಲಕಿ ಮಾತನಾಡಿ, ವಿದೇಶ ಮೂಲದ ಪರಕೀಯ ದಾಳಿಕೋರರ ದಾಳಿಗೆ ತುತ್ತಾದ ವಿಶ್ವಪ್ರಸಿದ್ಧ ನಳಂದಾ ವಿಶ್ವವಿದ್ಯಾಲಯವನ್ನು ಮರು ನಿರ್ಮಾಣ ಮಾಡುವ ಮೂಲಕ ಭಾರತವು ಎಲ್ಲ ದಾಳಿಗಳನ್ನು ತಡೆದುಕೊಂಡು ಮತ್ತೆ ಮತ್ತೆ ಪುಟಿದೇಳುತ್ತದೆ ಎಂಬುದನ್ನು ಸಾಬೀತು ಪಡಿಸಿದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಾಗಿದ್ದಾರೆ. ಇಂತಹ ಪ್ರಧಾನ ಮಂತ್ರಿಯವರು ಹಳೆಯ ಸಂಸತ್ ಭವನ ಮುಂದಿನ ಛತ್ರಪತಿ ಶಿವಾಜಿ ಮಹರಾಜರು ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗಳನ್ನು ಯಾವ ಉದ್ದೇಶಕ್ಕೆ ಸ್ಥಳಾಂತರ ಮಾಡಿದ್ದಾರೆ ಎಂಬುದನ್ನು ದೇಶದ ಜನತೆಗೆ ಮನವರಿಕೆ ಮಾಡಿಕೊಡಬೇಕು ಜೊತೆಗೆ ಮೂಲ ಸ್ಥಳದಲ್ಲಿಯೇ ಪುನಃ ಪ್ರತಿಷ್ಠಾಪನೆ ಮಾಡಬೇಕೆಂದು ಒತ್ತಾಯಿಸಿದರು. 

ಇದೇ ಸಂದರ್ಭ ಮುಖಂಡರಾದ ಜಿತೇಂದ್ರ ಕಾಂಬಳೆ, ಮತೀನಕುಮಾರ ದೇವದರ, ವೈ.ಸಿ. ಮಯೂರ, ಭಾರತಿ ಹೊಸಮನಿ, ನಾಗೇಶ ತಳಕೇರಿ, ಪರಶುರಾಮ ಚಲವಾದಿ, ರಮೇಶ ಕವಲಗಿ, ಅಕ್ಷಯ ಅಜಮನಿ, ಬಸವಕುಮಾರ ಕಾಂಬಳೆ, ಗೋಪಿನಾಥ ಚಲವಾದಿ, ಪ್ರದೀಪ ಚಲವಾದಿಯವರು ಮಾತನಾಡಿದರು. 

ಈ ಸಂದರ್ಭ ಸಂಜು ಮೇಲಿನಮನಿ, ರಘು ಕಣಮೇಶ್ವರ, ಮಲ್ಲು ಜಾಲಗೇರಿ, ವಿವೇಕ ಶಾಹಾಪೂರ, ವೆಂಕಟೇಶ ವಗ್ಯಾಣವರ, ಸಿದ್ಧು ರಾಯಣ್ಣವರ, ಶಂಕರ ಚಲವಾದಿ, ಸಂಜು ಕಂಬಾಗಿ, ಆಕಾಶ ಕಲ್ಲವಗೋಳ, ಬಾಗ್ಯಶ್ರೀ ವಗ್ಯಾಣವರ, ಲಕ್ಷö್ಮಣ ಬಿರಾದಾರ, ಮಲ್ಲಿಕಾರ್ಜುನ ಪಾಟೀಲ, ಲಕ್ಷö್ಮಣ ಚಲವಾದಿ, ರೋಹಿತ ಮಲಕಣ್ಣವರ, ಮಂಜುನಾಥ ಶಿವಶರಣ, ರಮೇಶ ಕಾಂಬಳೆ, ಅಪ್ಪಾಸಾಬ ಬನಸೋಡೆ, ಮಲ್ಲು ಬನಸೊಡೆ, ವಿಕಾಸ ಹೊಸಮನಿ, ರುದ್ರು ಬನಸೋಡೆ ಇದ್ದರು.

ಇದಕ್ಕೂ ಮುನ್ನ ಪ್ರತಿಭಟನಾ ರ‍್ಯಾಲಿಯು ನಗರದ ಶ್ರೀ ಸಿದ್ದೇಶ್ವರದಿಂದ ಆರಂಭಗೊAಡು ಗಾಂಧಿವೃತ್ತ, ಬಸವೇಶ್ವರ, ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.