Wednesday, July 17, 2024

18-07-2024 EE DIVASA KANNADA DAILY NEWS PAPER

ಕ್ರೀಡಾ ಅಸೋಶಿಯೆಷನ್ ಪದಾಧಿಕಾರಿಗಳ ಬೇಡಿಕೆ ಡಿಸಿ ಸ್ಪಂದನೆ



ವಿಜಯಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ ಹಾಗೂ ಎಸ್ಪಿ ರಿಷಿಕೇಶ ಸೋನಾವಣೆ ದಿಢೀರ್ ಭೇಟಿ ನೀಡಿದ ವೇಳೆ, ವಿವಿಧ ಕ್ರೀಡಾ ಅಸೋಶಿಯೆಷನ್ ಪದಾಧಿಕಾರಿಗಳ ಬೇಡಿಕೆ ಸ್ಪಂದಿಸಿದ್ದು, ಮೂಲಸೌಲಭ್ಯ ಒದಗಿಸುವ ಭರವಸೆ ನೀಡಿದರು.

ಕ್ರೀಡಾ ಅಸೋಶಿಯೆಷನ್ ಪದಾಧಿಕಾರಿಗಳ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಅವರು, ಇಲ್ಲಿನ ವಾಲಿಬಾಲ್‌ಗ್ರೌಂಡಗೆ ಪೆಡ್‌ಲೈಟ್ ಮಾಡಿಕೊಡುವುದು, ವೇಟ್ ಲಿಫ್ಟಿಂಗ್‌ರೂಮ್ ಸೇರಿದಂತೆ ಎಲ್ಲ ಸಾಮಗ್ರಿಗಳನ್ನು ಪೂರೈಸುವುದು, ಜೋಡೋ, ಕುಸ್ತಿ ಗರಡಿಮನೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಾಲಿಬಾಲ್ ಅಸೋಶಿಯೇಶನ್ ಅಧ್ಯಕ್ಷ ಬಿ.ಎಂ.ಕೋಕರೆ, ಫುಟ್‌ಬಾಲ್ ಅಸೋಶಿಯೇಷನ್ ಅಧ್ಯಕ್ಷ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವೇಟ್ ಲಿಪ್ಟಿಂಗ್ ಅಧ್ಯಕ್ಷ ದಾದಾಸಾಹೇಬ ಬಾಗಾಯತ, ಹಾಕಿ ಅಸೋಶಿಯೇಶನ್ ಅಧ್ಯಕ್ಷ ಎಸ್.ಕೆ. ಇನಾಂದಾರ, ಅಥ್ಲೇಟಿಕ್ಸ್ ಎಸ್.ಎಸ್. ಹಿರೇಮಠ, ಸ್ವಿಮ್ಮಿಂಗ್ ಅಸೋಶೀಯೇಶನ್ ಕಾರ್ಯದರ್ಶಿ ಚಂದ್ರಕಾAತ ತಾರನಾಳ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ.ಲೋಣ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಸೊಳ್ಳೆ ನಿಯಂತ್ರಣಕ್ಕೆ ಧೂಮೀಕರಣ, ಸ್ವಚ್ಛತೆಗೆ ಆಯುಕ್ತರ ಸೂಚನೆ



ವಿಜಯಪುರ: ಸೊಳ್ಳೆಗಳಿಂದ ಹರಡುವ ಡೆಂಘೀ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ವಾರ್ಡ್ಗಳಲ್ಲಿ ಸ್ವಚ್ಛತೆ ಹಾಗೂ ಧೂಮೀಕರಣ (ಫಾಗಿಂಗ್) ಕಾರ್ಯವನ್ನು ಕೈಗೊಳ್ಳಬೇಕು ಎಂದು ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಹೇಳಿದರು.

ಇಲ್ಲಿನ ಪಾಲಿಕೆ ಕಚೇರಿಯಲ್ಲಿ ಆರೋಗ್ಯಾಧಿಕಾರಿ, ಪಾಲಿಕೆ ಆರೋಗ್ಯ ವಿಭಾಗದ ಅಧಿಕಾರಿ, ಸಿಬ್ಬಂದಿ, ಸಹಾಯಕ ಕಾರ್ಯಪಾಲಕ ಅಭಿಯಂತರರ ಹಾಗೂ ಆರೋಗ್ಯ ನಿರೀಕ್ಷಕ ಮತ್ತು ನೈರ್ಮಲ್ಯ ಮೇಲ್ವಿಚಾರಕರೊಂದಿಗೆ ಬುಧವಾರ ಹಮ್ಮಿಕೊಂಡ ಡೆಂಘೀ ಮತ್ತು ನಗರ ಸ್ವಚ್ಛತೆ ಕುರಿತಂತೆ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.

ನಗರದ ವಾರ್ಡ್ಗಳಲ್ಲಿ ಸ್ವಚ್ಛತೆಯನ್ನು ಕೈಗೊಂಡು, ಸೊಳ್ಳೆಗಳಿಂದ ಹರಡುವ ಡೆಂಘೀ ನಿಯಂತ್ರಣಕ್ಕೆ ಧೂಮೀಕರಣ ಹಾಗೂ ಬೈ ಲಾರ್ವಾ ಸಿಂಪಡಣೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.



ನಗರದ ಸಾರ್ವಜನಿಕರುಗಳು ಮತ್ತು ವರ್ತಕರು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕಸವನ್ನು ಕಡ್ಡಾಯವಾಗಿ ಕಸದ ವಾಹನಕ್ಕೆ ನೀಡಬೇಕು. ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಸಾರ್ವಜನಿಕರುಗಳು ತಮ್ಮ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಗೂ ಆವರಣದ ಹೂವಿನ ಕುಂಡಗಳಲ್ಲಿ, ನೀರು ಶೇಖರಿಸಿಟ್ಟ ಬಕೇಟ್‌ಗಳಲ್ಲಿ, ಹಳೆಯದಾದ ಟೈರ್‌ಗಳಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹವಾಗದAತೆ ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಡೆಂಘೀ ಜ್ವರ ಹರಡುವುದನ್ನು ತಡೆಗಟ್ಟಲು ಮತ್ತು ನಗರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಪಾಲಿಕೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದರು.

ಸ್ವಚ್ಛತೆ ಕುರಿತು ಯಾವುದೇ ರೀತಿಯ ಉಲ್ಲಂಘನೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು ಸೂಕ್ತ ದಂಡ ವಿಧಿಸಿಲಾಗುವುದು ಎಂದು ಎಚ್ಚರಿಸಿದರು.

ಪಾಲಿಕೆ ಪರಿಸರ ಅಧಿಕಾರಿ ಅಶೋಕ ಸಜ್ಜನ, ಆರೋಗ್ಯಾಧಿಕಾರಿ ಸಂಗಣ್ಣ ಲಕ್ಕಣ್ಣವರ ಸೇರಿ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಎಸ್‌ಎಮ್‌ಎನ್ ಸೌಹಾರ್ದ ಕ್ಲೇಮ್‌ಗಳ ಮಾನದಂಡ ಸಡಲಿಕೆಗೆ ಒತ್ತಾಯ



ವಿಜಯಪುರ: ಎಸ್‌ಎಂಎನ್ ಸೌಹಾರ್ದ ಕ್ಲೇಮ್‌ಗಳ ಮಾನದಂಡ ಸಡಲಿಕೆ ಮಾಡುವಂತೆ ಆಗ್ರಹಿಸಿ ರೈತ ಮುಖಂಡ ಹಾಗೂ ಎಸ್‌ಎಂಎನ್ ಸೌಹಾರ್ದ ಹೋರಾಟ ಸಮಿತಿ ಅಧ್ಯಕ್ಷ ಅರವಿಂದ ಕುಲಕರ್ಣಿ ಒತ್ತಾಯಿಸಿದ್ದಾರೆ.

ನಗರದ ಗಗನ ಮಹಲ್‌ದಲ್ಲಿ ವಂಚಿತ ಠೇವಣಿದಾರರ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಎಂಎನ್ ಸೌಹಾರ್ದ ವಿವಿಧ ಶಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ತೊಡಗಿಸಿ ವಂಚನೆಗೊಳಗಾದ ಗ್ರಾಹಕರಿಗೆ ಹಣ ಮರುಪಾವತಿಸಲು ಬೆಂಗಳೂರಿನ ಸಹಾಯಕ ಪ್ರಾದೇಶಿಕ ಆಯುಕ್ತರು ಹಾಗೂ ಎಸ್‌ಎಂಎನ್ ಸೌಹಾರ್ದ ಸಕ್ಷಮ ಪ್ರಾಧಿಕಾರಿಯವರು ವಂಚಿತ ಠೇವಣಿದಾರರಿಗೆ ಕ್ಲೇಮ್‌ಗೆ ಅರ್ಜಿ ಸಲ್ಲಿಸಲು ಜು. 22, 2024 ರಿಂದ ಆ.21, 2024 ರವರೆಗೆ ಒಂದು ತಿಂಗಳ ಕಾಲಾವಧಿ ನಿಗದಿಪಡಿಸಿದ್ದಾರೆ. ಆದ್ದರಿಂದ ನಿಗದಿತ ಸಮಯಕ್ಕೆ ತಮ್ಮಲ್ಲಿರುವ ದಾಖಲಾತಿಗಳನ್ನು ಸಕ್ಷಮ ಪ್ರಾಧಿಕಾರಿ ಅವರಿಗೆ ಕ್ಲೇಮ್ ಸಲ್ಲಿಸಬೇಕು ಎಂದರು.

ಅಲ್ಲದೆ ಕ್ಲೇಮ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಹಲವು ಮಾನದಂಡಗಳನ್ನು ಅಳವಡಿಸಿದ್ದು, ಠೇವಣಿದಾರರಿಗೆ ಸಕ್ಷಮ ಪ್ರಾಧಿಕಾರಿಯವರು ಕೇಳಿದ ಮಾನದಂಡಗಳಲ್ಲಿ ಕೆಲವು ಮಾನದಂಡಗಳು ಪೂರೈಸಲು ಸಾಧ್ಯವಿಲ್ಲ. ನಾಮಿನಿ ಇದ್ದವರಿಗೆ ಒಂದು ಸಂದರ್ಭದಲ್ಲಿ ಡಿಪಾಜಿಟರ್ ಮೈತರಾದ್ದಲ್ಲಿ ನೇರವಾಗಿ ನಾಮಿನಿ ಇದ್ದವರಿಗೆ ಡಿಪಾಜಿಟ್‌ಬಾಂಡ್ ಪಡೆದುಕೊಂಡು ನೇರವಾಗಿ ಅವರ ಖಾತೆಗೆ ಹಣ ಜಮೆಮಾಡಬೇಕು. ಆದರೆ ವಂಶಾವಳಿ ಮತ್ತು ಉತ್ತರ ಜೀವಿತ, ವಾರ್ಸಾ ಇವೆಲ್ಲವುಗಳನ್ನು ಕೇಳಿದ್ದು ಕೇವಲ ಒಂದೇ ತಿಂಗಳಲ್ಲಿ ಇವೆಲ್ಲಗಳನ್ನು ತಹಶೀಲ್ದಾರ್ ಕಚೇರಿಯಿಂದ ಪಡೆದುಕೊಳ್ಳಲು ಸಾಧ್ಯವಿಲ್ಲ. ದೂಷಿತ ಸೌಹಾರ್ದದಿಂದ ಮ್ಯಾನೇಜರ್ ಅವರಿಂದ ದೃಢೀಕರಿಸಲ್ಪಟ್ಟ ಉಳಿತಾಯ ಖಾತೆಯ ನಕಲು ಪ್ರತಿಯನ್ನು ಕೇಳಿದ್ದಾರೆ. ಆದರೆ ದೂಷಿತ ಸೌಹಾರ್ದದ ಎಲ್ಲ ಶಾಖೆಗಳು ಬಂದ್‌ಗೊಳಿಸಿದ್ದರಿAದ ವಂಚಿತಗ್ರಾಹಕರು ಈ ದಾಖಲೆಗಳನ್ನು ಎಲ್ಲಿಂದ ಪೂರೈಸಬೇಕು ಇದರ ಕುರಿತು ಸಕ್ಷಮ ಪ್ರಾಧಿಕಾರ ಸ್ಪಷ್ಟಪಡಿಸುವುದು ಅಗತ್ಯವಿದೆ ಎಂದು ಆಗ್ರಹಿಸಿದರು.

ಈ ಸಭೆಯಲ್ಲಿ ಎನ್.ಕೆ. ಮನಗೊಂಡ, ಐ.ಬಿ. ಸಾರವಾಡ, ಎಸ್.ಜಿ. ಸಂಗೊAದಿಮಠ, ಕೆ.ಡಿ.ನರಗುಂದ, ಬಸವರಾಜ ಅವಟಿ, ಬಸವರಾಜ ಚಿಕ್ಕೊಂಡ, ಬಸವರಾಜ ಬಾಡಗಿ, ಬಸವರಾಜ ನಂದಿಹಾಳ, ಮುಕ್ಕಪ್ಪ ಹುದ್ದಾರ, ಮಹಾಂತೇಶ ನಡಕಟ್ಟಿ, ಶರಣಪ್ಪ ಕಲ್ಲೂರ, ಶಾಂತಪ್ಪ ಪಾಟೀಲ, ಜಿ.ಜಿ.ಬಳ್ಳಿಗೇರ, ಶಿವಪ್ಪ ಚಂದಾನವರ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.