Friday, August 2, 2024

ವಾರ್ತಾಧಿಕಾರಿ ಮಮತ ಇನ್ನಿಲ್ಲ

 

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ ಆರ್ ಮಮತ ಅವರು ಇಂದು ದೈವಾಧೀನರಾಗಿದ್ದಾರೆ.

ಪ್ರಸಕ್ತ ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪತಿ‌ ಹಿರಿಯ ಪತ್ರಕರ್ತ ಎಚ್ ಆರ್ ರವೀಶ್, ಮಗ ಪ್ರಜ್ವಲ್ ಹಾಗೂ ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ.

ಮಮತ ಅವರ ಅಂತ್ಯಕ್ರಿಯೆ ತುಮಕೂರು ತಾಲ್ಲೂಕು ಹಾಲನೂರು ಗ್ರಾಮದ ಅವರ ತೋಟದಲ್ಲಿ ಶನಿವಾರ ಮಧ್ಯಾಹ್ನ ನೆರವೇರಲಿದೆ.

ಬೆಂಗಳೂರಿನ ಅವರ ಮನೆಯಲ್ಲಿ ನಾಳೆ ಬೆಳಿಗ್ಗೆ 9 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

ಈ ದಿವಸ ಪತ್ರಿಕಾ ಬಳಗದಿಂದ ಸಂತಾಪ:

ಹಿರಿಯ ವಾರ್ತಾಧಿಕಾರಿ ಮಮತಾ ಅವರ ನಿಧನಕ್ಕೆ ಈ ದಿವಸ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಕಲ್ಲಪ್ಪ ಶಿವಶರಣ, ಹಾಗೂ ಈ ದಿವಸ ಪತ್ರಿಕಾ ಬಳಗ ಸಂತಾಪ ಸೂಚಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

03-08-2024 EE DIVASA KANNADA DAILY NEWS PAPER