Thursday, December 5, 2024

ಒಂದು ಘಂಟೆಯಲ್ಲೆ ಸಂಧ್ಯಾ ಸುರಕ್ಷಾ ಪಿಂಚಣಿ ಮಂಜೂರಿಸಿ ಮಾನವೀಯ ಪ್ರಜ್ಞೆ ಮೆರೆದ ಅಧಿಕಾರಿಗಳು

 


ಈ ದಿವಸ ವಾರ್ತೆ

ವಿಜಯಪುರ : ಶ್ರೀ ಸಂಗಮೇಶ ಮಹಾಲಿಂಗಪೂರ ವಿಜಯಪುರ ಮಾನ್ಯ ತಹಶೀಲದಾರ ಸಾಹೇಬರಿಗೆ ಹಳೆ ಪ್ರವಾಸಿ ಮಂದಿರ ಮುಂದೆ ಬಿಕ್ಷಾಟನೆಗೆ ಕುಳಿತಿರುವ ಬಗ್ಗೆ ತಿಳಿಸಿದರು. ಹಾಗೂ ಅವರಿಗೆ ಯಾರು ಕುಟುಂಬಸ್ಥರು ಇರುವುದಿಲ್ಲವೆಂದು ತಿಳಿಸಿದರು. ಸದರಿ ವಿಷಯ ತಿಳಿದ ತಕ್ಷಣ ತಮ್ಮ ಅಧೀನ ಸಿಬ್ಬಂದಿಗಳಾದ ಮಾಜೀದ ಇನಾಮದಾರ, ಉಪತಹಶೀಲದಾರ ವಿಜಯಪುರ ಮತ್ತು ವಾಸೀಮ ಶೇಖ, ಕಂದಾಯ ನಿರೀಕ್ಷಕರು ವಿಜಯಪುರ ಹಾಗೂ ಡಿ.ಸಿ.ವೀರಕರ, ಗ್ರಾಮ ಆಡಳಿತ ಅಧಿಕಾರಿ ಮಹಲಬಾಗಾಯತ ವಿಜಯಪುರ ಇವರೊಂದಿಗೆ ಸ್ಥಳಕ್ಕೆ ಧಾವಿಸಿ ಅಜ್ಜಿಯ ದಾಖಲೆಗಳನ್ನು ಪರಿಶೀಲಿಸಿ ಕೇವಲ ಒಂದು ಘಂಟೆಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಿಕ ರೂ 1200/- ಗಳ ಸಂಧ್ಯಾ ಸುರಕ್ಷಾ ಪಿಂಚಣಿ ಮಂಜೂರಾತಿ ಆದೇಶ ಪ್ರತಿಯನ್ನು ಶ್ರೀ ವಿಜಯಪುರ ಗೇಡ್-2 ಇವರು ವಿತರಿಸಿದರು. ಆಯ್. ಹೆಚ್. ತುಂಬಗಿ, ತಹಶೀಲದಾರ ವಿಜಯಪುರ ಗ್ರೇಡ್ -2 ವಿತರಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕವಾಗಿ ಜಾರಿಗೊಳಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ



ವಿಜಯಪುರ, ಡಿಸೆಂಬರ್ 05 (ಕರ್ನಾಟಕ ವಾರ್ತೆ) : ಅನಧಿಕೃತವಾಗಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಅಪರಾಧವಾಗಿದ್ದು, ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ, ಸಂಬAಧಿಸಿದ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು. 

 ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಿಸಿಪಿಎನ್‌ಡಿಟಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾಯ್ದೆಯನ್ವಯ ಅಪರಾಧವಾಗಿದ್ದು, ಒಂದು ವೇಳೆ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸಂಬAಧಿಸಿದ ಅಧಿಕಾರಿಗಳು ಅಂತಹವರ ಮೇಲೆ ಕಾಯ್ದೆಯನ್ವಯ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. 

 ಅಧಿಕಾರಿಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕಾö್ಯನಿಂಗ್ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅನಿರೀಕ್ಷಿತವಾಗಿ ಭೇಟಿ ನೀಡುವ ಮೂಲಕ ಕೇಂದ್ರಗಳಲ್ಲಿ ಕಾಯ್ದೆಯನ್ವಯ ನಿಯಮಗಳನ್ನು ಪಾಲಿಸಲಾಗುತ್ತಿವೆಯೇ, ಇಲ್ಲ ಎಂಬುದನ್ನು ಹಾಗೂ ಸ್ಕಾö್ಯನಿಂಗ್ ಕೇಂದ್ರಗಳು ಕಡ್ಡಾಯವಾಗಿ ನೊಂದಣಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಗೋಚರಿಸುವ ಹಾಗೆ ಮಾಹಿತಿ ಫಲಕಗಳು, ನಿಗದಿತ ನಮೂನೆಗಳ ನಿರ್ವಹಣೆ ಸೇರಿದಂತೆ ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡುವಂತೆ ಸೂಚನೆ ನೀಡಿದ ಅವರು, ಅನಧಿಕೃತವಾಗಿ ಸ್ಕಾö್ಯನಿಂಗ್ ಮಾಡುವವರ ಮೇಲೆ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. 

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕಾö್ಯನಿಂಗ್ ಕೇಂದ್ರಗಳ ನವೀಕರಣಕ್ಕಾಗಿ ಹಾಗೂ ಹೊಸದಾಗಿ ಕೇಂದ್ರಗಳ ಸ್ಥಾಪನೆಗೆ ಬಂದಿರುವ ಅರ್ಜಿಗಳನ್ನು, ದಾಖಲೆಗಳನ್ನು ಪರಿಶೀಲನೆ ನಡೆಸಬೇಕು. ಈ ಕುರಿತು ರಚಿಸಲಾದ ಸಮಿತಿ ಸದಸ್ಯರ ಪರಿಶೀಲನಾ ಮಾಹಿತಿ ದೃಢೀಕರಣ ಸಹಿತ ವರದಿ ಸಲ್ಲಿಸಬೇಕು. ವರದಿ ಆಧರಿಸಿ ಕ್ರಮ ವಹಿಸಿ, ತಪಾಸಣಾ ವರದಿ ಪುರ್ಣ ಪ್ರಮಾಣದಲ್ಲಿ ದೊರಕಬೇಕು. ನಿರಾಪೇಕ್ಷಣಾ ಪತ್ರ ನೀಡುವಾಗ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸಿ, ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸಬೇಕು. ಈ ಅರ್ಜಿಗಳ ಕುರಿತು ಸಭೆಯಲ್ಲಿ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

 ಪಿಸಿಪಿಎನ್‌ಡಿಸಿ ಕಾಯ್ದೆಯ ಕುರಿತು ಜಿಲ್ಲೆಯಾದ್ಯಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಕಾಯ್ದೆಯ ಕುರಿತು ತಿಳುವಳಿಕೆ ಮೂಡಿಸಬೇಕು. ಕಾಯ್ದೆಯ ನಿಯಮಗಳ ಕುರಿತು ಕರಪತ್ರಗಳನ್ನು ಮುದ್ರಿಸಿ ಜನನಿಬಿಡ ಪ್ರದೇಶಗಳಾದ ಬಸ್‌ನಿಲ್ದಾಣ, ರೈಲು ನಿಲ್ದಾಣ ಒಳಗೊಂಡAತೆ ವಿವಿಧ ಸ್ಥಳಗಳಲ್ಲಿ ಪ್ರಚುರಪಡಿಸುವ ಮೂಲಕ ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು. ಲಿಂಗಾನುಪಾತದ ಸಮಾನತೆ ಕಾಪಾಡಲು ಜಾಗೃತಿ ಅಭಿಯಾನ ಕೈಗೊಳ್ಳಬೇಕು. ರೇಡಿಯೋ ಜಿಂಗಲ್ಸ್ ಮೂಲಕ ಪ್ರಚುರಪಡಿಸಬೇಕು. ಜನನಿಬಿಡ ಪ್ರದೇಶಗಳಲ್ಲಿ ವಿಡಿಯೋ ಪ್ರದರ್ಶನ ಮೂಲಕ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು. 

 ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತçಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ವರಿ ಗೊಲಗೇರಿ, ಪಿಸಿಪಿಎನ್‌ಡಿಟಿಯ ತಪಾಸಣಾ ಹಾಗೂ ಮೇಲ್ವಿಚಾರಣಾ ಸಮಿತಿ ಸದಸ್ಯರಾದ ಟಿ.ಪಿ.ನಾಯ್ಡು, ಡಾ.ಶೈಲಜಾ ಬಿದರಿ, ಡಾ.ರವಿಕುಮಾರ ನಾಗನೂರ, ಪೀಟರ್ ಅಲೆಕ್ಸಾಂಡರ್, ಎಸ್.ಜಿ.ರೂಡಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಆಲಮಟ್ಟಿ ಅಣೆಕಟ್ಟೆ 524 ಮೀ. ಎತ್ತರವಾಗಲೇಬೇಕು: ಶಾಸಕ ಯಶವಂತರಾಯಗೌಡ ಪಾಟೀಲ


ವಿಜಯಪುರ: ಜಿಲ್ಲೆಗೆ ಸಂಬAಧಿಸಿದ ಎಲ್ಲ ಯೋಜನೆಗಳನ್ನು ವರ್ಷೊಪ್ಪತ್ತು ಕಾಲ ನಿಲ್ಲಿಸಿದರೂ ಚಿಂತೆಯಿಲ್ಲ, ಆಲಮಟ್ಟಿ ಅಣೆಕಟ್ಟೆ 524 ಮೀ. ವರೆಗಿನ ಎತ್ತರ ಹೆಚ್ಚಿಸುವ ಕಾರ್ಯ ಆಗಬೇಕು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಒತ್ತಾಯಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರ್ಥಿಕ ಸೇರಿದಂತೆ ಇತರೆ ಕಾರಣವಲ್ಲದೇ ಯಾವ ಕಾರಣಕ್ಕೂ ಅಣೆಕಟ್ಟೆ ಎತ್ತರ ಹೆಚ್ಚಳ ನಿಲ್ಲಿಸಬಾರದು, ಎತ್ತರ ಹೆಚ್ಚಳಕ್ಕೆ ನಡೆಯುತ್ತಿರುವ ಹೋರಾಟಕ್ಕೆ ನಾನು ಸಂಪೂರ್ಣ ಬೆಂಬಲ ನೀಡುವೆ ಎಂದರು.

ಈ ಭಾಗದ ರೈತರ ತ್ಯಾಗದ ಪ್ರತಿಫಲ ಸಾಕಾರಗೊಳ್ಳಲು ಅಣೆಕಟ್ಟು ಎತ್ತರವಾಗಲೇಬೇಕಿದೆ. ಸರ್ಕಾರಗಳು ಕೃಷ್ಣೆ, ಕಾವೇರಿಗೆ ನೀಡಿದ ಆದ್ಯತೆಯನ್ನು ಉಳಿದ ನದಿಗಳಿಗೂ ನೀಡಲಿ, ಭೀಮೆಯ ಬಗ್ಗೆ ಗಮನ ಹರಿಸಲಿ ಎಂದರು.

ಅಣೆಕಟ್ಟು ಎತ್ತರ ಹೆಚ್ಚಳ ನಮ್ಮ ಪಕ್ಷದ ಹಾಗೂ ಸರ್ಕಾರ ಬದ್ಧತೆ ಕೂಡ ಆಗಿದೆ. ಸರ್ಕಾರ ಈ ಕಾರ್ಯ ಸಾಧನೆ ಮಾಡಲಿದೆ ಎನ್ನುವ ವಿಶ್ವಾಸವಿದೆ, ರೈತರ ಹಾಗೂ ಇಂತಹ ವಿಷಯ ಬಂದಾಗ ಪಕ್ಷ ಭೇದ ಮರೆತು ಒಂದಾಗುತ್ತೇವೆ ಎಂದರು.

ಸರ್ಕಾರ ನಿರೀಕ್ಷಿತ ಪ್ರಮಾಣದಲ್ಲಿ ಕೃಷ್ಣೆಗೆ ಅನುದಾನ ನೀಡಿಲ್ಲ, ಆದರೆ ಇನ್ನೂ ಮೂರು ವರ್ಷಗಳಿವೆ ಖಂಡಿತವಾಗಿಯೂ ಆದ್ಯತೆಯ ದೊಡ್ಡ ಅನುದಾನ ದೊರಕುವ ನಿರೀಕ್ಷೆ ಇದೆ ಎಂದರು.

ಗ್ಯಾರAಟಿ ಯೋಜನೆ ಕಡು ಬಡವರಿಗೆ ದೊಡ್ಡ ಪ್ರಯೋಜನವಾಗಿದೆ, ಇದು ನಮ್ಮ ಬದ್ಧತೆ, ಇದನ್ನು ಕೊಡಲೇಬೇಕು, ಅದರ ಜೊತೆಗೆ ಉಳಿದ ಅಭಿವೃದ್ಧಿ ಯೋಜನೆಗಳಿಗೂ ಆದ್ಯತೆ ನೀಡಬೇಕು ಎಂದರು.

ಸರ್ಕಾರ ಈ ವಿಷಯದಲ್ಲಿ ರೈತರಿಗೆ ಅನ್ಯಾಯ ಮಾಡಬಾರದು, ಈ ವಿಷಯದಲ್ಲಿ ಆತಂಕ್ಕೊಳಗಾಗಿರುವ ರೈತರು ಪ್ರತ್ಯೇಕತೆ ಬೇಡಿಕೆ ಇರಿಸಿದ್ದಾರೆ. ನಮ್ಮ ನಾಡು ಕಟ್ಟಲು ಅನೇಕ ಮಹನೀಯರು ಶ್ರಮಿಸಿದ್ದಾರೆ, ಹೀಗಾಗಿ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಂಡು ಪ್ರತ್ಯೇಕತೆ ಭಾವನೆ ಬೆಳೆಯದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಬೇಕಿದೆ. ರೈತರ ವಿಷಯದಲ್ಲಿ ರಾಜಕಾರಣ ಮಾಡಿದರೆ ಅದು ಅನ್ನದಾತನಿಗೆ ಮಾಡುವ ಮೋಸ, ಹೀಗಾಗಿ ರೈತರಿಗೆ ಅನ್ಯಾಯವಾದಾಗ ನಮ್ಮದೇ ಸರ್ಕಾರ ಇದ್ದಾಗಲೇ ಟೀಕಿಸಿದ್ದೆ ಎಂದರು.

ಕೃಷ್ಣಾ ಕೊಳ್ಳ ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ನಾವೆಲ್ಲ ಜನಪ್ರತಿನಿಧಿಗಳು ಶ್ರಮಿಸುತ್ತಿದ್ದೇವೆ, ನ್ಯಾಯಾಧೀಕರಣ ಸೇರಿ ಇತರೆ ವಿಷಯಕ್ಕೆ ಸಂಬAಧಿಸಿದAತೆ, ಈ ಯೋಜನೆ ಸಕಾಲಕ್ಕೆ ಪೂರ್ಣಗೊಳ್ಳುತ್ತಿಲ್ಲ, ಹೀಗಾಗಿ ಆಮೆ ವೇಗ ಪಡೆದಿದೆ. ಆದ್ದರಿಂದ ಈ ಯೋಜನೆ ಸಾಕಾರಕ್ಕೆ ಈ ಭಾಗದ ಜನಪ್ರತಿನಿಧಿಗಳ ವೈಫಲ್ಯ ಕಾರಣವಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.