Tuesday, November 4, 2025

ಮಾಧ್ಯಮ ಮಿತ್ರರು ತಮ್ಮ ಅಮೂಲ್ಯವಾದ ಮತ ನನಗೆ ನೀಡಿ : ಅಶೋಕ ಯಡಳ್ಳಿ

ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಕಾನಿಪ ಚುನಾವಣೆ ಪ್ರಚಾರ ಸಭೆಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಅಶೋಕ ಯಡಳ್ಳಿ ಮತಯಾಚಿಸಿದರು.

ಸಿಂದಗಿ: ಗ್ರಾಮೀಣ ಭಾಗದ ಪತ್ರಕರ್ತರಿಗಾಗಿ ತಾಲೂಕು ಕೇಂದ್ರದಲ್ಲಿ ಪತ್ರಿಕಾ ಭವನಕ್ಕಾಗಿ ನಿವೇಶನ, ಆರೋಗ್ಯ ವಿಮೆ, ಮಕ್ಕಳ ಶಿಕ್ಷಣಕ್ಕಾಗಿ ಸರಕಾರದ ಸೌಕರ್ಯ ಸೇರಿದಂತೆ ಸಂಘದ ವಿವಿಧ ರೀತಿಯ ಅನುದಾನದಲ್ಲಿ ಸಹಾಯ ಸೌಲಭ್ಯ ಒದಗಿಸಲು ನಮ್ಮ ತಂಡ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಅಶೋಕ ಯಡಳ್ಳಿ ಭರವಸೆ ನೀಡಿದರು.

ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಕಾನಿಪ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮತಯಾಚಿಸಿ ಅವರು ಮಾತನಾಡಿದರು.

ಒತ್ತಡದ ಬದುಕಿನ ಮದ್ಯದಲ್ಲಿಯೂ ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ಜನತೆಗೆ ತಿಳಿಸುತ್ತಾ ಸಮಾಜದ ಏಳ್ಗೆಗೆ ಶ್ರಮಿಸುವ ನಮ್ಮ ಪತ್ರಕರ್ತರಿಗೆ ಹಾಗೂ ಅವರ ಕುಟುಂಬಗಳಿಗೆ ಸಾಮಾಜಿಕ ಭದ್ರತೆ ಅತ್ಯವಶ್ಯವಾಗಿದೆ. ಜಿಲ್ಲೆಯ ಹಿರಿಯ ಪತ್ರಕರ್ತರ ಮಾರ್ಗದರ್ಶನ, ಸಹಕಾರ ಮತ್ತು ಬೆಂಬಲದಿಂದ 24 ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮಾತ್ರ ನ.09 ರಂದು ಚುನಾವಣೆ ನಡೆಯಲಿದೆ. ಮಾಧ್ಯಮ ಮಿತ್ರರೆಲ್ಲರೂ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಬೆಂಬಲಿಸಬೇಕು ಎಂದರು.

ಈ ಸಂದರ್ಭ ಇಂದುಶೇಖ ಮಣೂರ, ರಾಜು ಕೊಂಡಗೂಳಿ, ಶರಣು ಮಸಳಿ, ಮೊಹ್ಮದಸಮೀರ ಇನಾಮದಾರ, ಪ್ರಕಾಶ ಬೆಣ್ಣೂರ, ಪ್ರಭು ಕುಮಟಗಿ, ಬಾಬು ತಡಲಗಿ, ಮೋಹನ ಕುಲಕರ್ಣಿ, ಗುರುರಾಜ ಗದ್ದನಕೇರಿ, ದೇವೆಂದ್ರ ಹೆಳವರ, ಶಶಿಕಾಂತ ಮೇಂಡೆಗಾರ, ರಾಹುಲ ಆಪ್ಟೆ, ಕಾನಿಪ ತಾಲೂಕಾಧ್ಯಕ್ಷ ಆನಂದ ಶಾಬಾದಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಅಲ್ಲಾಪುರ, ಎಂ.ಎ.ಖತೀಬ, ಸಲೀಂಪಟೇಲ್ ಮರ್ತೂರ, ನವೀನ ಶೆಳ್ಳಗಿ, ಶಿವಾನಂದ ಆಲಮೇಲ, ಗುಂಡು ಕುಲಕರ್ಣಿ, ಸಿದ್ದು ಕಡಗಂಚಿ, ವಿಜಯಕುಮಾರ ಪತ್ತಾರ, ಅಂಬರೀಷ ಸುಣಗಾರ, ಸಿದ್ದಲಿಂಗ ಕಿಣಗಿ, ರಮೇಶ ಪೂಜಾರಿ ಸೇರಿದಂತೆ ಅನೇಕರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗುಮ್ಮಟ ನಗರಿಯಲ್ಲಿ ಹೆಚ್ಚಿದ ಆತಂಕ ಅಧಿಕಾರಿಗಳು ಮಾತ್ರ ನಿರಾತಂಕ ಮುಂಜಾಗೃತೆ-ಜನಜಾಗೃತೆಗಿಲ್ಲ ಕ್ರಮ ಪದೇ ಪದೇ ಭೂಕಂಪನ-ಬೆಚ್ಚಿಬಿದ್ದ ಜನ


ವಿಜಯಪುರ: ಕಳೆದೊಂದು ವರ್ಷದಿಂದ ಪದೇ ಪದೇ ಭೂಮಿ ಕಂಪಿಸುತ್ತಲೇ ಇದ್ದ, ಜನರ ಆತಂಕ ಹೆಚ್ಚಾಗಿದ್ದರೂ ಅಧಿಕಾರಿಗಳು ಮಾತ್ರ ನಿರಾತಂಕವಾಗಿದ್ದಾರೆ.

ಆಗಾಗ ಕೇಳಿ ಬರುತ್ತಿರುವ ಜೋರಾದ ಸದ್ದು ಜನರ ಎದೆ ನಡುಗಿಸುತ್ತಿದೆ. ಆದರೆ, ಅಧಿಕಾರಿಗಳು ಇದೊಂದು ಸಾಮಾನ್ಯ ಪ್ರಕ್ರಿಯೆ ಎನ್ನುತ್ತಿದ್ದಾರೆ. ಕೆಲವೊಮ್ಮ ದೊಡ್ಡ ಪ್ರಮಾಣದಲ್ಲಿ ಭೂಮಿ ಕಂಪಿಸಿದರೂ ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರ ದಾಖಲಾಗಿಲ್ಲ ಎನ್ನುತ್ತಾರೆ. ಹೀಗಾಗಿ ಜನರ ಆತಂಕ ಹೆಚ್ಚಾಗುತ್ತಿದ್ದು, ಜೀವ ಅಂಗೈಯಲ್ಲಿ ಹಿಡಿದು ಜೀವಿಸುವಂತಾಗಿದೆ. ಸ್ವಲ್ಪ ನೆಲ ಅದುರಿದರೂ ರಾತ್ರಿಯಿಡೀ ನಿದ್ರೆಗೆಡುವ ಸ್ಥಿತಿ ನಿರ್ಮಾಣವಾಗಿದೆ. ಯಾವಾಗ ಏನಾಗುತ್ತದೆಯೋ ಎಂಬ ಭಯ ಕಾಡಲಾರಂಭಿಸಿದೆ. 

ಕಳೆದ ಎರಡು ವಾರದಲ್ಲಿ ಹಲವು ಬಾರಿ ಹಲವರಿಗೆ ಭೂಕಂಪನದ ಅನುಭವ ಹಾಗೂ ಭಾರಿ ಶಬ್ದದಿಂದ ನಗರದ ಕೆಲವೊಂದು ಬಡಾವಣೆಗಳಲ್ಲಿ ಜನರ ಭಯಭೀತರಾಗಿ ಮನೆಯಿಂದ ಹೊರ ಬಂದಿದ್ದಾರೆ. ಇದು ಭೂಕಂಪನ ಅಥವಾ ಯಾವುದೇ ಬೇರೆ ಕಾರಣಗಳಿಗೆ ಇಂತಹ ಘಟನೆಗಳಾಗುತ್ತಿವೆಯೇ ಎಂಬುದು ಜನರಿಗೆ ತಿಳಿಯದಾಗಿದೆ. ಪರಸ್ಪರ ತಮ್ಮ ಸ್ನೇಹಿತರಿಗೆ- ನೆರೆ ಹೊರೆಯವರಿಗೆ ಫೋನ್ ಮಾಡಿ ನಿಮಗೆ ಭೂಕಂಪನದ ಅನುಭವದ ಕುರಿತು ವಿಚಾರಣೆ ಮಾಡಿ, ಗೊಂದಲಕ್ಕೀಡಾಗಿದ್ದಾರೆ. 

ಜನರಲ್ಲಿನ ಆತಂಕವನ್ನು ದೂರ ಮಾಡಲು ಸಂಬಂಧಿಸಿದ ಅಧಿಕಾರಿಗಳು, ಪರೀಕ್ಷೆ ನಡೆಸಿ ನಿಖರ ಕಾರಣ ಕಂಡು ಹಿಡಿಯಬೇಕಿದೆ. ವಿಜ್ಞಾನಿಗಳಿಂದ ಅಧ್ಯಯನ ನಡೆಯಬೇಕಿದೆ. ಯಾವುದೇ ದೊಡ್ಡ ಅನಾಹುತ ಸಂಭವಿಸುವ ಮೊದಲೇ ಅಧಿಕಾರಿಗಳು ಈ ವಿಷಯದ ಗಂಭೀರತೆಯನ್ನು ಅರಿತುಕೊಂಡು ಇಂತಹ ಘಟನೆಗಳು ಜರುಗಲು ಇರುವ ವೈಜ್ಞಾನಿಕ ಕಾರಣವನ್ನು ಕಂಡು ಹಿಡಿದು ಜನರಿಗೆ ಈ ಕುರಿತು ತಿಳುವಳಿಕೆ ಮೂಡಿಸಿದ್ದಲ್ಲಿ ಮಾತ್ರ ಜನರು ನಿಟ್ಟುಸಿರು ಬಿಡಲು ಸಾಧ್ಯವಾಗುತ್ತದೆ. ಇಲ್ಲಿ ನಡೆಯುತ್ತಿರುವ ಶಬ್ದ-ಕಂಪನ ಭೂಕಂಪನವೇ  ಆಗಿದ್ದಲ್ಲಿ ಸೂಕ್ತ ಎಚ್ಚರಿಕೆ ಜಿಲ್ಲಾಡಳಿತದಿಂದ ನೀಡಿ, ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತವಾಗಿದೆ.

ಭೂಕಂಪನ ಸಂಭವಿಸಿರುವ ಕುರಿತು ಜಿಲ್ಲೆಯಲ್ಲಿ  ಸ್ಥಾಪಿಸಲಾದ ಭೂಕಂಪನ ಮಾಪನ ಕೇಂದ್ರದಲ್ಲಿ ದಾಖಲಾಗಿಲ್ಲ. ಪದೇ ಪದೇ ಕಂಪನ ಹಾಗೂ ಭಾರಿ ಶಬ್ದವಾಗುವುದು ಇದು ಭೂಕಂಪನವಲ್ಲ, ಇದೊಂದು ಭೂಮಿಯೊಳಗೆ ಕ್ರಿಯೆಯಾಗಿದೆ. ಇದರಿಂದ ಭೂಮಿಯ ಮೇಲ್ಮೈ ಭಾಗದಲ್ಲಿ ಯಾವುದೇ ಹಾನಿವುಂಟು ಮಾಡುವುದಿಲ್ಲ ಎಂದು ಅಧಿಕಾರಿಗಳ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.

ವರದಿ: A.I.Bagewadi

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

05-11-2025 EE DIVASA KANNADA DAILY NEWS PAPER

ಐಎಎಸ್-ಕೆಎಎಸ್ ಹಾಗೂ ಗ್ರೂಪ್ ಸಿ ಪರೀಕ್ಷಾ ಪೂರ್ವ ತರಬೇತಿಗೆ ಸಾಮಾನ್ಯ ಪರೀಕ್ಷೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

 ವಿಜಯಪುರ  : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸುವ ಪ್ರಸಕ್ತ 2025-26ನೇ ಸಾಲಿನ ಯುಪಿಎಸ್‌ಸಿ ನಾಗರೀಕ ಸೇವೆ, ಕೆಎಎಸ್ ಗೆಜೆಟೆಡ್ ಪ್ರೊಬೆಷನರ್ ಮತ್ತು ಗ್ರೂಪ್-ಸಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು ವಿಜಯಪುರ ನಗರದಲ್ಲಿ ನ.8 ಹಾಗೂ 9 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಗರದ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜ್‌ನಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಗ್ರೂಪ್-ಸಿ ಪರೀಕ್ಷೆಗೆ 131 ಹಾಗೂ ಐಎಎಸ್ ಮತ್ತು ಕೆಎಎಸ್ ಪರೀಕ್ಷೆ 381 ಅಭ್ಯರ್ಥಿಗಳು ನೊಂದಾಯಿಸಿಕೊAಡಿದ್ದು, ನ.8 ರ ಶನಿವಾರ ಬೆಳಿಗ್ಗೆ 10-30ರಿಂದ ಮಧ್ಯಾಹ್ನ 12-30ರವರೆಗೆ ಗ್ರೂಪ್-ಸಿ ಪರೀಕ್ಷೆಗಳು ಹಾಗೂ ನ.9ರ ಭಾನುವಾರ ಬೆಳಿಗ್ಗೆ 10-30ರಿಂದ 12-30ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2 ರಿಂದ 3-30ರವರೆಗೆ ಪತ್ರಿಕೆ-2 ಯುಪಿಎಸ್‌ಸಿ ನಾಗರಿಕ ಸೇವೆ, ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಗಳು ಜರುಗಲಿವೆ. 

 ವ್ಯವಸ್ತಿತ ಪರೀಕ್ಷೆಗಾಗಿ ತ್ರಿ-ಸದಸ್ಯ ಸಮಿತಿ ನಿಯೋಜಿಸಲಾಗಿದೆ. ಪರೀಕ್ಷಾ ದಿನದಂದು ಸೂಕ್ತ ಪೊಲೀಸ್ ಭದ್ರತೆ, ಪ್ರಾಥಮಿಕ ಚಿಕಿತ್ಸಾ ವ್ಯವಸ್ಥೆ, ಪಶ್ನೆ ಪತ್ರಿಕೆಗಳನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಸ್ವೀಕರಿಸಿ, ಭದ್ರಪಡಿಸುವುದು ಹಾಗೂ ನಿಯಮಾನುಸಾರ ಪರೀಕ್ಷಾ ದಿನದಂದು ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆ ರವಾನೆ, ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆ ತಲುಪಿಸುವುದು, ನಂತರ ಉತ್ತರ ಪತ್ರಿಕೆಗಳನ್ನು ನಿಯಮಾನುಸಾರ ಜಿಲ್ಲಾ ಖಜಾನೆಗೆ ಮರಳಿಸುವುದು, ಪರೀಕ್ಷೆಗೆ ನಿಯೋಜಿತ ಸ್ಥಾನಿತ ಜಾಗೃತ ಅಧಿಕಾರಿಗಳು ಯಾವುದೇ ರೀತಿಯ ಅಕ್ರಮ ನಡೆಯದಂತೆ ಸೂಕ್ತ ಗಮನ ಹರಿಸಬೇಕು. ಮುಖ್ಯ ಅಧೀಕ್ಷಕರು ಮತ್ತು ಉಪ ಅಧೀಕ್ಷಕರು ಪರೀಕ್ಷೆಗೆ ಮುನ್ನ ಪರೀಕ್ಷಾ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ಖಚಿತಪಡಿಸಿಕೊಳ್ಳುವುದು ಸೇರಿದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಲು ಸೂಕ್ತ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

 ಪರೀಕ್ಷೆ ಮುಗಿಯವರೆಗೂ ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರ-ಕೊಠಡಿಗಳಿAದ ಪ್ರಶ್ನೆ ಪತ್ರಿಕೆ ಬಹಿರಂಗವಾಗುವAತಿಲ್ಲ. ಈ ಬಗ್ಗೆ ಜಿಲ್ಲಾ ನೊಡಲ್ ಅಧಿಕಾರಿಗಳು ತೀವ್ರ ನಿಗಾ ಇರಿಸಬೇಕು. ತಪ್ಪಿದ್ದಲ್ಲಿ ನೊಡಲ್ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿಸಲಾಗುವುದು ಎಂದು ಅವರು ಹೇಳಿದರು. 

 ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ಪ್ರಶಾಂತ ಪೂಜಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಎಂ.ಎ.ಶೇಖ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕಾ ವಿಸ್ತರಣಾಧಿಕಾರಿ ರಾಮಲಿಂಗ ಭೈರೋಡಗಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸೋಮಶೇಖರ ಕೊಲ್ಲೂರು, ಅರಕೇರಿಯ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜ್ ಪ್ರಾಂಶುಪಾಲ ಸಂಗಣ್ಣ ಆಲಗೂರ, ಅಫಜಲಪೂರ ಟಕ್ಕೆ ಮುಸ್ಲಿಂ ವಸತಿ ಶಾಲೆ ಪ್ರಾಂಶುಪಾಲ ಸಿದ್ರಾಮ ಎಂಟೆತ್ತ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ತಾಲೂಕಾ ವಿಸ್ತರಣಾಧಿಕಾರಿ ಇಲಾಯಿ ನಾಗರಾಳ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಾದಕ ವಸ್ತು ನಿಷೇಧ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ


 ವಿಜಯಪುರ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಬಾಲಿಕೆಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿಜಯಪೂರ ಇವರ ಸಂಯುಕ್ತಾಶ್ರಯದಲ್ಲಿ ನ.4ರ ಮಂಗಳವಾರ ನಗರದ ಬಾಲಿಕೆಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ಮಾದಕ ವಸ್ತು ನಿಷೇಧ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು. 

 ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್. ಹಾಗರಗಿ ಅವರು ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳನ್ನು ಚಾಕಲೇಟ, ಪಾನ್ ಮಸಾಲಾ ಮತ್ತು ಇತರೆ ತಿಂಡಿ-ತಿನಿಸುಗಳಲ್ಲಿ ಕಲಬೆರಕೆ ಮಾಡುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಮಾದಕ ವಸ್ತುಗಳ ನಿಯಂತ್ರಣವು ವ್ಯಸನದ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ತಡೆಗಟ್ಟುವಿಕೆಯ ಹಂತಗಳನ್ನು ಒಳಗೊಂಡಿದೆ. ಇದು ವ್ಯಸನದ ಮೂಲ ಕಾರಣಗಳನ್ನು ಮತ್ತು ಅದರ ಪರಿಣಾಮಗಳನ್ನು ನಿರ್ವಹಿಸಲು ವಿವಿಧ ವಿಧಾನಗಳನ್ನು ಬಳಸುತ್ತದೆ. ಉತ್ತೇಜಕಗಳು ನಮ್ಮ ದೇಹದ ನೈಸರ್ಗಿಕ ಕಾರ್ಯಗಳನ್ನು ಹೆಚ್ಚಿಸುವ ಔಷಧಿಗಳ ವಿಧಗಳಾಗಿವೆ. ಅವು ಜಾಗರೂಕತೆ ಮತ್ತು ಸಂಭ್ರಮದ ಭಾವನೆಯನ್ನು ಉಂಟುಮಾಡುತ್ತವೆ. ಒಬ್ಬ ವ್ಯಕ್ತಿಯು ನಿಗದಿತ ಪ್ರಮಾಣವನ್ನು ಅನುಸರಿಸದೆ ಅದನ್ನು ಸೇವಿಸಿದರೆ, ಅದು ಮಾದಕತೆ ಅಥವಾ ಅವಲಂಬನೆಗೆ ಕಾರಣವಾಗಹುಬುದು ಎಂದು ಅವರು ಹೇಳಿದರು. 

 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿ.ಜಿ. ಬಿರಾದಾರ, ಮಾದಕ ವಸ್ತು ನಿಷೇದ ಕುರಿತು ಸ-ವಿಸ್ತಾರವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸಿ.ಚಿ.ನಾಟೀಕಾರ ವಹಿಸಿದ್ದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಎಸ್.ಎಸ್.ಚೂರಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, November 3, 2025

ಸಿದ್ಧರಾಮೇಶ್ವರ ಸ್ಮರಣೆಗಾಗಿ ಪ್ರತಿವರ್ಷ ಒಂದು ಕೆರೆ ನಿರ್ಮಾಣ : ಸಚಿವ ಶಿವಾನಂದ ಪಾಟೀಲ

 

ಚಿಕ್ಕಬಾಸೂರು : 12ನೇ ಶತಮಾನದ ಸಿದ್ಧರಾಮೇಶ್ವರ ಶರಣ ಸಾಮಾಜಿಕ ಕಾಳಜಿಯ ಪರಿಣಾಮ ಜೀವಜಲ ಸಂರಕ್ಷಣೆಯಿಂದಾಗಿ ನಾಡು ಜೀವಜಲ ಕಂಡಿದೆ. ಹೀಗಾಗಿ ಸಿದ್ಧರಾಮೇಶ್ವರ ಸ್ಮರಣೆಗಾಗಿ ರಾಜ್ಯದಲ್ಲಿ ಪ್ರತಿವರ್ಷ ಒಂದೊಂದು ಕೆರೆ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುವುದಾಗಿ ಹಾವೇರಿ ಜಿಲ್ಲಾ ಉಸ್ತುವಾರಿ ಹೊಂದಿರುವ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

ಸೋಮವಾರ ನಗರದ ಚಿಕ್ಕಬಾಸೂರು ಗ್ರಾಮದಲ್ಲಿ ಶ್ರೀಗುರು ಸಿದ್ಧರಾಮೇಶ್ವರ ದೇವಸ್ಥಾನ ನಿರ್ಮಾಣ ಹಾಗೂ ಸರ್ಕಾರಿ ಪದವಿ ಕಾಲೇಜಿನ ಸಭಾಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಿದ್ಧರಾಮೇಶ್ವರ ಶರಣರು ನಾಡಿನಾದ್ಯಂದ ಜಲ ಸಂರಕ್ಷಣೆಗಾಗಿ ಕೆರೆ, ಭಾವಿಗಳನ್ನು ನಿರ್ಮಿಸಿ ಸಮಾಜಕ್ಕೆ ಅನುಕರಣೀಯ ಸೇವಾ ಮಾರ್ಗ ಹಾಕಿ ಕೊಟ್ಟಿದ್ದಾರೆ ಎಂದು ವಿವರಿಸಿದರು.

ಬಸವೇಶ್ವರರ ನೇತೃತ್ವದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಜಾತಿ, ಮತ‌, ಪಂಥಗಳಿಲ್ಲದೇ, ಲಿಂಗಭೇದ ಇಲ್ಲದೇ ಸೌಹಾರ್ದಯುತ ಸಮಾಜ ಕಟ್ಟಲಾಗಿತ್ತು. ಸಿದ್ಧರಾಮೇಶ್ವರರ ಹೆಸರಿನಲ್ಲಿ ದೇವಸ್ಥಾನ ನಿರ್ಮಿಸುತ್ತಿರುವ ಚಿಕ್ಕಬಾಸೂರು ಗ್ರಾಮಸ್ಥರು ಶರಣರ ಆಶಯದಂತೆ ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಸಿದ್ಧರಾಮೇಶ್ವರ ಶರಣರ ಸ್ಮರಣೆಗಾಗಿ ಚಿಕ್ಕಬಾಸೂರು ಗ್ರಾಮಸ್ಥರು ದೇವಸ್ಥಾನ ಜೀರ್ಣೋದ್ಧಾರಕ್ಕೆ ಮುಂದಾಗಿದ್ದೀರಿ. ರಾಜ್ಯದಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡುತ್ತಿದ್ದು, ಜನರು ಕೂಡ ದೇಣಿಗೆ ಸಂಗ್ರಹಿಸಿ ದೇವಸ್ಥಾನ ಕಟ್ಟುತ್ತಿದ್ದಾರೆ ಎಂದರು.

ಈ ಹಿಂದೆ ಹಲವು ಬಾರಿ ಮಳೆ ಇಲ್ಲದೇ ಭೀಕರ ಬರ ಕಂಡಿರುವ  ನಾವು, ಇದೀಗ ಅತಿವೃಷ್ಟಿ ಕಾಡಿದೆ. ಪ್ರಸಕ್ತ ವರ್ಷ ನಿರೀಕ್ಷೆ ಮೀರಿ ಮಳೆಯಾಗಿದ್ದು, ಅಂತರ್ಜಲದ ಮಟ್ಟ ಮೇಲೇರಿದೆ. ರಾಜ್ಯದ ಎಲ್ಲ ಜಲಾಶಯಗಳು ಸಂಪೂರ್ಣ ಭರ್ತಿ ಆಗಿವೆ. ಆದರೆ ರೈತರು ಹಸಿಬರದಿಂದ ಆರ್ಥಿಕ ನಷ್ಟ ಅನುಭವಿಸಿದ್ದಾರೆ. ಈಗಾಗಲೇ ನಮ್ಮ ಸರ್ಕಾರ ಬೆಳೆ ಹಾನಿ ಪರಿಹಾರ ನೀಡುತ್ತಿದ್ದು, ಶೀಘ್ರವೇ ಹಾವೇರಿ ಜಿಲ್ಲೆಯಲ್ಲೂ ಬೆಳೆಹಾನಿ ಪರಿಹಾರ ವಿತರಿಸುವುದಾಗಿ ಹೇಳಿದರು.

ಇದಲ್ಲದೇ ಚಿಕ್ಕಬಾಸೂರು ಗ್ರಾಮದಲ್ಲಿ ಸರಕಾರಿ ಪದವಿ ಕಾಲೇಜಿನಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಸಭಾಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಸ್ಥಳೀಯ ಶಾಸಕರಾದ ಬಸವರಾಜ ಶಿವಣ್ಣವರ ಪರಿಶ್ರಮದಿಂದ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಚಿಕ್ಕಬಾಸೂರು ಗ್ರಾಮದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯಕ್ಕೆ ಮನವಿ ಮಾಡಿದ್ದು, ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.

ಬ್ಯಾಡಗಿ ಶಾಸಕರಾದ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವರಾಜ ಶಿವಣ್ಣವರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಸುರೇಶಗೌಡ ಪಾಟೀಲ, ವಿರೂಪಾಕ್ಷಪ್ಪ ಬಳ್ಳಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ನೀರಲಕೇರಿ, ಪಂಚ ಗ್ಯಾರಂಟಿ ಯೋಜನೆ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ,  ಸೋಮಶೇಖರ ಬಣಕಾರ, ಜಗದೀಶ್ವರಯ್ಯ ಮಠದ,  ಷಣ್ಮುಖಪ್ಪ ತಲ್ಲೂರು, ಜಯಣ್ಣ ಮಲ್ಲಿಗಾರ, ಸುರೇಶಗೌಡ ಪಾಟೀಲ ದಿಡಗೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು



Friday, October 24, 2025

25-10-2025 EE DIVASA KANNADA DAILY NEWS PAPER

ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ರಕ್ತದಲ್ಲಿ ಸಹಿ ಮಾಡಿ ಪ್ರತಿಭಟನೆ

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಹೋರಾಟಗಾರರು ತಮ್ಮ ರಕ್ತದ ಮೂಲಕ ಸಹಿ ಮಾಡಿ ಸರ್ಕಾರಕ್ಕೆ ಸಂದೇಶ ರವಾನಿಸಿದರು.

ವಿಜಯಪುರ: ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸುವಂತೆ ಆಗ್ರಹಿಸಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ 37 ನೇ ದಿನ ಪೂರೈಸಿದ ಹಿನ್ನೆಲೆ ಶುಕ್ರವಾರ ರಕ್ತದ ಮೂಲಕ ಸಹಿ ಸಂಗ್ರಹಿಸಿ ಪ್ರತಿಭಟಿಸಲಾಯಿತು.

ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿ ಪದಾಧಿಕಾರಿಗಳು, ವೈದ್ಯರು, ಮಾಧ್ಯಮ ಪ್ರತಿನಿಧಿಗಳು, ವಿವಿಧ ಸಹಕಾರಿ ಸಂಘಗಳ ಮುಖಂಡರು, ಕನ್ನಡ ಹೋರಾಟಗಾರರು, ವಿದ್ಯಾರ್ಥಿಗಳು ಬಿಳಿ ಬಟ್ಟೆ ಮೇಲೆ ತಮ್ಮ ರಕ್ತದ ಮೂಲಕ ಸಹಿ ಮಾಡಿ ಸರ್ಕಾರಕ್ಕೆ ಒತ್ತಾಯಿಸಿದ್ದು, ರಕ್ತ ಸಹಿ ಸಂಗ್ರಹ ಮಾಡಿರುವ ಬೃಹತ್ ಬ್ಯಾನರ್, ಮನವಿಯೊಂದಿಗೆ ಮುಖ್ಯಮಂತ್ರಿಗಳಿಗೆ ರವಾನಿಸಲಾಯಿತು.

ಪ್ರತಿಭಟನಾಕಾರರು, ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆಯಿಂದ ಶೋಷನೆಗೆ ದಾರಿಯಾಗಿ, ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ನಿಲುಕದ ನಕ್ಷತ್ರವಾಗುವ ಜೊತೆಗೆ ಬಡ ರೋಗಿಗಳು ಚಿಕಿತ್ಸೆ ಪಡೆಯಲು ಪರದಾಡುವಂತಾಗುತ್ತದೆ. ಹೀಗಾಗಿ ಪೂರ್ಣವಾಗಿ ಸರ್ಕಾರವೇ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಹೋರಾಟ ಸಮಿತಿಯ ಸದಸ್ಯರಾದ ಅರವಿಂದ ಕುಲಕರ್ಣಿ, ಭಗವಾನ್ ರೆಡ್ಡಿ, ಅಕ್ರಂ ಮಾಶಾಳಕರ, ಲಲಿತಾ ಬಿಜ್ಜರಗಿ, ಸುರೇಶ ಜೀಬಿ, ಸುರೇಶ ಬಿಜಾಪುರ, ಲಕ್ಷ್ಮಣ ಹಂದ್ರಾಳ, ಮಲ್ಲಿಕಾರ್ಜುನ ಬಟಗಿ, ಮಲ್ಲಿಕಾರ್ಜುನ ಎಚ್.ಟಿ., ಭರತಕುಮಾರ ಎಚ್.ಟಿ., ಸಿದ್ದಲಿಂಗ ಬಾಗೇವಾಡಿ, ಜಗದೇವ ಸೂರ್ಯವಂಶಿ, ಶಿವಬಾಳಮ್ಮ ಕೊಂಡಗೂಳಿ, ಸಿದ್ದರಾಮ ಹಿರೇಮಠ, ಗೀತಾ ಎಚ್., ಶ್ರೀಕಾಂತ ಕೊಂಡಗೂಳಿ, ಸಿದ್ರಾಮ ಹಳ್ಳೂರ, ಲಕ್ಷ್ಮಣ ಕಂಬಾಗಿ, ಸುಶೀಲ ಮಿಣಜಗಿ, ಜ್ಯೋತಿ ಮಿಣಜಗಿ, ಕಾವೇರಿ ರಜಪೂತ, ಸುನೀತಾ ಮೋರೆ, ಮೀನಾಕ್ಷಿ ಸಿಂಗೆ, ಬಾಬುರಾವ್ ಬೀರಕಬ್ಬಿ, ರೇಷ್ಮಾ ಕಟ್ಟಿಮನಿ, ಟೀನಾ ಜೆವರಲ್, ಫಾದರ್ ಕೆವಿನ್, ದಸ್ತಗಿರ್ ಉಕ್ಕಲಿ, ಅಬ್ದುಲ್ ರೆಹಮಾನ್ ನಾಸಿರ್, ಚಂದ್ರಶೇಖರ ಘಂಟೆಪ್ಪಗೋಳ, ಫಯಾಜ್ ಕಲಾದಗಿ, ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು



Tuesday, October 21, 2025

22-10-2025 EE DIVASA KANNADA DAILY NEWS PAPER

21-10-2025 EE DIVASA KANNADA DAILY NEWS PAPER

ದೀಪದಲ್ಲಿ ಸರಕಾರಕ್ಕೆ ಧಿಕ್ಕಾರ ಎಂದು ಬರೆದು ; ಸರ್ಕಾರಿ ಮೆಡಿಕಲ್ ಕಾಲೇಜಿಗಾಗಿ ಕರಾಳ ದೀಪಾವಳಿ ಆಚರಣೆ

ವಿಜಯಪುರ : ನಗರದಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಇಂದು 34ನೇ ದಿನ ಪೂರೈಸಿದೆ,

ದೀಪಾವಳಿ ಹಬ್ಬದ ಮಧ್ಯೆಯು ಹೋರಾಟ ನಡೆಯುತ್ತಿದೆ. ಸರಕಾರ ಹೋರಾಟಕ್ಕೆ ಸ್ಪಂದನೆ ಮಾಡದ ಹಿನ್ನೆಲೆಯಲ್ಲಿ ಹೋರಾಟಗಾರರು ದೀಪದಲ್ಲಿ ಸರಕಾರಕ್ಕೆ ಧಿಕ್ಕಾರ ಎಂದು ದೀಪದಲ್ಲಿ ಬರೆದು ಕರಾಳ. ದೀಪಾವಳಿ ಆಚರಣೆ ಮಾಡಿದರು.

ಇದೇ ಸಂದರ್ಭದಲ್ಲಿ ಸರಕಾರ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿದ ಮುಖಂಡರು ಸರಕಾರದ ಬೇಜವಾಬ್ದಾರಿತನವನ್ನು ಕಟು ಮಾತಿನಲ್ಲಿ ಟೀಕಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ, ಅರವಿಂದ ಕುಲಕರ್ಣಿ, ಭಗವಾನ ರೆಡ್ಡಿ ಡಾ ಟಿ ಎಸ್ ಸುನೀತಕುಮಾರ, ಸುರೇಶ ಬಿಜಾಪುರ, ಬೋಗೇಶ ಸೋಲಾಪುರ, ಮಲ್ಲಿಕಾರ್ಜುನ ಬಟಗಿ, ಸಿದ್ದಲಿಂಗ ಬಾಗೇವಾಡಿ,ಲಕ್ಷ್ಮಣ ಹಂದ್ರಾಳ ಲಲಿತಾ ಬಿಜ್ಜರಗಿ, ಭರತಕುಮಾರ ಎಚ್ ಟಿ,ಸುರೇಶ ಜೇಬಿ, ಅಕ್ರಂ ಮಾಶಾಳಕರ, ಸಿದ್ದರಾಮಯ್ಯ ಹಿರೇಮಠ ಗೀತಾ ಎಚ್, ಜ್ಯೋತಿ ಮಿಣಜಗಿ, ಲಕ್ಷ್ಮಣ ಕಂಬಾಗಿ, ಭೀಮು ಉಪ್ಪಾರ ಶಿವಬಾಳಮ್ಮ ಕೊಂಡಗೂಳಿ, ಗಿರೀಶ ಕಲಘಟಗಿ, ಪೂಜಾ ಜೋಮಿವಾಲೆ,ಫಯಾಜ್ ಕಲಾದಗಿ, ಶಿವಾನಂದ ಸುತಗುಂಡಿ, ಎ ಎಂ ಪಟೇಲ್ ಚಂದ್ರಶೇಖರ ಗಬ್ಬೂರ ಸೇರಿ ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Friday, October 17, 2025

ಸಿ.ಎಂ.ಗೆ ಮನವರಿಕೆ ಮಾಡಿದ್ದೇನೆ : ಸಚಿವ ಶಿವಾನಂದ ಪಾಟೀಲ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು

 


ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ
ರಾದ ಶಿವಾನಂದ ಪಾಟೀಲ ಹೇಳಿದರು.

ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಮೊನ್ನೆ ಕರೆದಿದ್ದ ಸಚಿವರ ಸಭೆಯಲ್ಲಿ ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದೇನೆ. ಸಿದ್ಧರಾಮಯ್ಯ ಅವರು ಈ ಹಿಂದೆ ಮುಖ್ಯಮತ್ರಿಗಳಾಗಿದ್ದಾಗ ನಾನೇ ಮೂರು ಬಾರಿ ಸದನದಲ್ಲಿ ಪ್ರಶ್ನೆ ಮಾಡಿದ್ದೇನೆ ಎಂಬುದನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದ್ದೇನೆ ಎಂದರು.

400 ಕೋಟಿ ರೂ. ಖರ್ಚಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದಾಗ ಬೇರೆಯವರು 500 ಕೋಟಿ ರೂ. ಖರ್ಚು ಮಾಡಿದರೂ, ನಮ್ಮ ಜಿಲ್ಲೆಯಲ್ಲಿ ಅದರ ಅರ್ಧಕ್ಕಿಂತ ಕಡಿಮೆ ಖರ್ಚಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಗಲಿದೆ ಎಂದು ಮನವರಿಕೆ ಮಾಡಿದ್ದೇನೆ. ವೈದ್ಯಕೀಯ ಶಿಕ್ಷಣ ಸಚಿವರಿಗೂ ಹೇಳಿದ್ದು, ಅವರೂ ಒಪ್ಪಿದ್ದಾರೆ. ಸಚಿವ ಸಂಪುಟ ಸಭೆಯಲ್ಲೂ ಈ ವಿಷಯವನ್ನು ಚರ್ಚೆ ಮಾಡಿದಾಗ ಜಿಲ್ಲಾ ಉಸ್ತುವಾರಿ ಮಂತ್ರಿಗಳೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದಾರೆ ಎಂದರು.

ವಿಜಯಪುರ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಸ್ವಯಂ ಪ್ರೇರಿತ ಹೋರಾಟ ನಡೆಯುತ್ತಿದೆ. ಯಾವುದೇ ಪ್ರತಿಭಟನೆ ಒಂದು ಬೇಡಿಕೆ ಇಟ್ಟುಕೊಂಡು ನಡೆಯುತ್ತದೆ. ಧರಣಿ ಕುಳಿತವರು ಅಪರಾಧಿ-ನಿರಪರಾಧಿ ಎಂದು ಸಂಬೋಧಿಸುವುದು ಸರಿಯಲ್ಲ. ಯಾರದೋ ಕುಮ್ಮಕ್ಕಿನಿಂದ ಹೋರಾಟ ನಡೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳು ಹೇಳಿದ್ದಾರೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಯಾವ ದೃಷ್ಟಿಕೋನದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ, ಅವರನ್ನೇ ಕೇಳಿ.

ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ನಿರ್ಧರಿಸಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ನಮ್ಮ ಸರ್ಕಾರದ ಅವಧಿಯಲ್ಲಾಗಿಲ್ಲ, ಈ ಕುರಿತು ಮರು ಪರಿಶೀಲನೆ ಪ್ರಸ್ತಾವನೆ ಸಲ್ಲಿಸಬೇಕಿದ್ದು, ಕಾನೂನು ಪ್ರಕ್ರಿಯೆ ಮುಗಿದ ಮೇಲೆ ಸರಳವಾಗಿ ಕಾಲೇಜು ಸ್ಥಾಪನೆಗೆ ಅವಕಾಶ ಸಿಗಲಿದೆ ಎಂದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Wednesday, October 15, 2025

16-10-2025 EE DIVASA KANNADA DAILY NEWS PAPER

ವಿಜಯಪುರ ಬಂದ್ ; ವಾಲ್ಮೀಕಿ ಸಮಾಜದ ಬೆಂಬಲ

 ವಿಜಯಪುರ : ವಿಜಯಪುರ ನಗರದಲ್ಲಿ ಅ.16 ರಂದು ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿಯವರ ಮೇಲಿನ ಶೂ ಎಸೆತ ಪ್ರಕರಣವನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನೀಡಿರುವ ಬಂದ್ ಕರೆಗೆ ವಾಲ್ಮೀಕಿ ಸಮಾಜವು ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯವರ ಮೇಲಿನ ಹಲ್ಲೆಯು ಭಾರತದ ಇತಿಹಾಸದಲ್ಲಿಯೇ ಒಂದು ಕರಾಳ ಘಟನೆಯಾಗಿದ್ದು ಭಾರತೀಯರಾದ ನಾವೆಲ್ಲರೂ ಅದನ್ನು ಒಕ್ಕೊರಲಿನಿಂದ ಖಂಡಿಸಬೇಕಿದೆ. ಅದಕ್ಕಾಗಿ ಪ್ರತಿಯೊಬ್ಬರು ವಿಜಯಪುರ ಬಂದ್ ಗೆ ಬೆಂಬಲಿಸುವ ಮೂಲಕ ಕರಾಳ ಘಟನೆ ಮತ್ತೊಮ್ಮೆ ಮರುಕಳಿಸದಂತೆ ಎಚ್ಚರಿಕೆ ನೀಡಬೇಕಾಗಿದೆ ಎಂದು ಮಲ್ಲಿಕಾರ್ಜುನ ಬಟಗಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Tuesday, October 14, 2025

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ


ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಬೇಕೆಂದು ಆಗ್ರಹಿಸಿ 27ನೇ ದಿನದದಂದು ಬಬಲೇಶ್ವರ ತಾಲೂಕಿನ ವಿವಿಧ ಸಂಘಟನೆಯ ಆಶ್ರಯದಲ್ಲಿ ಹೋರಾಟ ಸಮಿತಿಯ ವತಿಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

ಪಟ್ಟಣದಿಂದ ಶಾಂತವೀರ್ ವೃತ್ತದಿಂದ ತೆಹಸೀಲ್ದಾರ್ ಕಚೇರಿವರೆಗೆ ತಲುಪಿ ತಹಸೀಲ್ದಾರ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಸರ್ಕಾರದ ಮಟ್ಟದಲ್ಲಿ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಬೇಕೆಂದು ಹುನ್ನಾರ ನಡೆದಿದೆ. ಜಿಲ್ಲೆಯಲ್ಲಿ ಶಾಸಕರೊಬ್ಬರು ಬಂಡವಾಳ ಹೂಡುವುದಾಗಿ ಹೇಳಿದ್ದು, ಇದು ಸರಿಯಲ್ಲ. ಬೇಕಿದ್ದರೆ ಅವರೇ ಮತ್ತೊಂದು ಖಾಸಗಿ ಕಾಲೇಜು ಸ್ಥಾಪಿಸಿಕೊಳ್ಳಲಿ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿಜಯಪುರ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆ ತುಂಬಾ ಸರಿಯಾಗಿ ನಡೆದಿದೆ. ಅಲ್ಲಿ ಸುಮಾರು 153 ಏಕರೆಗಳಷ್ಟು ಜಾಗವೂ ಕೂಡ ಇದೆ. ಸರ್ಕಾರ ಅಲ್ಲಿಯೇ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು. ಇದು ಬಡವರ ಪಾಲಿಗೆ ಆಶಾಕಿರಣವಾಗಲಿದೆ ಎಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ಸದಸ್ಯರು ಆಗ್ರಹಿಸಿದರು.
ಬಿ.ಭಗವಾನ್ ರೆಡ್ಡಿ ಮಾತನಾಡುತ್ತಾ 153 ಎಕರೆ ಜಮೀನು ಹೊಂದಿರುವ ಏಕೈಕ ಜಿಲ್ಲೆ ವಿಜಯಪುರ ಆಗಿದ್ದು ಬಡವರ ಮತ್ತು ಹಿಂದುಳಿದ ಮಕ್ಕಳು ಕಲಿಯಲು ಸರ್ಕಾರ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂದು ಹೇಳಿದರು. ಜಮಖಂಡಿ ವಿಜಯಪುರ ರಾಜ್ಯ ಹೆದ್ದಾರಿ ತಡೆದು ಶಾಂತವೀರ ಸರ್ಕಲ್ ನಿಂದ ತಹಶಿಲ್ದಾರರ ಕಛೇರಿಯವರೆಗೆ ರ್ಯಾಲಿಯನ್ನು ಮಾಡಲಾಯಿತು. ಮಲ್ಲು ಕನ್ನೂರ ಜಿಲ್ಲಾ ಪಂಚಾಯತ ಮಾಜಿ ಸದಸ್ಯರು ಮಾತನಾಡುತ್ತಾ ಮೆಡಿಕಲ್ ಕಾಲೇಜು ಆಗಲೇಬೆಕು ಇಲ್ಲವಾದರೆ ಬಬಲೇಶ್ವರ ತಾಲ್ಲೂಕು ಬಂದ ಮಾಡುವುದಾಗಿ ಕರೆ ನೀಡಿದರು. ಮಲ್ಲಿಕಾರ್ಜುನ ಬಟಗಿ ಯವರು ಮಾತನಾಡುತ್ತಾ ಬಿಜಾಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಲೇಬೇಕು ಎಂದು ಶಾಸಕರಲ್ಲಿ ವಿನಂತಿ ಮಾಡಿಕೊಳ್ಳಲಾಯಿತು. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಮಂತ್ರಿಗಳು ಇದನ್ನು ಅರ್ಥ ಮಾಡಿಕೊಂಡು ಕಾಲೇಜು ನಿರ್ಮಾಣ ಮಾಡಬೇಕೆಂದು ಒತ್ತಾಯಿಸಲಾಯಿತು.
ಹೋರಾಟ ಸಮಿತಿಯ ಲಕ್ಷ್ಮಣ ಹಂದ್ರಾಳ ರವರು ಮಾತನಾಡುತ್ತಾ ಬಡ ಮಕ್ಕಳು ಓದಲು ಸರಕಾರಿ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿ ಪಡಿಸಬೇಕು ಹಾಗೂ ಉಚಿತ ಶಿಕ್ಷಣ ಪಡೆಯಲು ಎಲ್ಲರಿಗೂ ಸಹಾಯವಾಗುತ್ತದೆ. ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವುದು ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿರಬೇಕು ಎಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ಫಾತಿಮಾ ಮಕಂದಾರ್, ಗಂಗಾ ಪೂಜಾರಿ, ಮಹಾದೇವಿ ಮಾದರ, ನಿಂಗವ್ವ ಗಾದಿವಡರ, ಲಕ್ಷ್ಮಿ ಕವಟಗಿ, ಭಾಗಮ್ಮ ಗೆನ್ನರ, ಸುಜಾತಾ ಚಲಿಬೆಳಿ, ಸುನಂದಾ ಕನಮಡಿ, ಹೋರಾಟ ಸಮಿತಿಯ ಸದಸ್ಯರಾದ ಲಕ್ಷ್ಮಣ್ ಹಂದ್ರಾಳ, ಭಗವಾನ್ ರೆಡ್ಡಿ, ಅಕ್ರಮ ಮಾಶಾಲ್ಕರ್, ಲಕ್ಷ್ಮಣ್ ಕಂಬಾಗಿ, ಮಲ್ಲಿಕಾರ್ಜುನ ಬಟಗಿ, ಲಲಿತಾ ಬಿಜ್ಜರಗಿ, ಕೆವಿನ್, ಜಗದೇವ ಸೂರ್ಯವಂಶಿ, ರೈತ ಮುಖಂಡರಾದ  ಮಲ್ಲು ಕನ್ನೂರ್, ಬೀರಪ್ಪ ಸೊಡ್ಡಿ, ಈರಣ್ಣ ಶಿರಮಗೊಂಡ, ಬಸವರಾಜ್ ರೆಡ್ಡಿ, ಸುರೇಶ್ ಅರಸೂರು, ರಾಜಶೇಖರ್ ರೆಡ್ಡಿ, ಸಿದ್ರಾಮ್ ಹಲ್ಲೂರ್, ರುದ್ರಪ್ಪ ಗೋಲಸಂಗಿ, ಆಮ್ ಆದ್ಮಿ ಪಕ್ಷದ ಬಾಬು ಬಿಜಾಪುರ, ಪೀರಸಾಭ್ ವಾಲಿಕಾರ್, ಮೀರಾಸಾಬ್ ತೊದಲಬಾಗಿ, ಅಬ್ದುಲ್ ಗೋರಿ, ಮಹಿಳಾ ಸಂಘದ ಜಯಾ ಪಿಳ್ಳೈ, ಸುನಿತಾ ಮೋರೆ, ಜೀವನ್ ಜ್ಯೋತಿ ದೇವದಾಸಿ ಸಂಘದ ಚಂದಾಬಾಯಿ ಮಾದರ,  ಹೀನಾ ನದಾಫ್, ಮಹಿಳಾ ಒಕ್ಕೂಟದ ಶ್ರೀದೇವಿ ಡೆಂಗಿ, ಪಡೆವ್ವಾ ಮಾದರ, ಶೋಭಾ ಹರಿಜನ, ಸುಜಾತಾ ಏಳಿಬಲ್ಲಿ, ಮಾನಸಾ ಏಳಬಲ್ಲಿ, ಅಬ್ದುಲ್ ಕಲಾಂ ಸಂಸ್ಥೆಯ ರಜಿಯಾ ಮೊಮಿನ್  ಮತ್ತಿರರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

15-10-2025 EE DIVASA KANNADA DAILY NEWS PAPER

Monday, October 13, 2025

14-10-2025 EE DIVASA KANNADA DAILY NEWS PAPER

ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

 ವಿಜಯಪುರ  : ಸರ್ವೋಚ್ಛ ನ್ಯಾಯಾಲಯದ ತೀರ್ಪಿನಂತೆ ಬೀದಿ ನಾಯಿಗಳಿಗೆ ಆಶ್ರಯ ಒದಗಿಸಲು ಬುರಾನಪುರನಲ್ಲಿ ಕಾಯ್ದಿರಿಸಿದ ಎರಡು ಎಕರೆ ಜಾಗದಲ್ಲಿ ಡಾಗ್ ಶೆಲ್ಟರ್ ನಿರ್ಮಾಣಕ್ಕಾಗಿ ನೀಲ ನಕ್ಷೆ ತಯಾರಿಸಿ ಸಲ್ಲಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದ್ದಾರೆ. 

 ಸೋಮವಾರ ನಗರದ ಬುರಾನಪುರದಲ್ಲಿರುವ ಗೋಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಸೂಚನೆ ನೀಡಿ, ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಕಾಳಜಿಯಿಂದ ನೋಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. 

 ನಗರದಲ್ಲಿರುವ ಪಶುಪಾಲನಾ ಇಲಾಖೆ ಕಚೇರಿಗೆ ಭೇಟಿ ನೀಡಿದ ಅವರು, ಬೀದಿ ನಾಯಿಗಳ ಸಂತಾನ ಹರಣಶಸ್ತç ಚಿಕಿತ್ಸಾ ಕಾರ್ಯಕ್ರಮದ ಕಟ್ಟಡವನ್ನು ನವೀಕರಿಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ ಅವರು, ಪಾಲಿಕ್ಲಿನಿಕ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಜಾನುವಾರು ಚಿಕಿತ್ಸೆ, ನಾಯಿ ಮತ್ತು ಬೆಕ್ಕುಗಳ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸಾ ಕೊಠಡಿ, ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡುವುದನ್ನು ಸಂಬAಧಿಸಿದ ಪಶುವೈದ್ಯರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. 

 ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಅಶೋಕ ಘೋಣಸಗಿ, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ವಿ.ಎನ್.ಹಾಸಂಗಿಹಾಳ, ಅಮೋಘ ತಳವಾರ ಸೇರಿದಂತೆ ವಿವಿಧ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Sunday, October 12, 2025

13-10-2025 EE DIVASA KANNADA DAILY NEWS PAPER

ಶಾಂತಿ, ಸದ್ಭಾವದ ಭಾವನೆಯನ್ನು ಅರಳಿಸುವುದೇ ಬೌದ್ಧ ಧರ್ಮದ ದಿವ್ಯ ಸಂದೇಶ ಹಾಗೂ ಉದ್ದೇಶವಾಗಿದೆ,

ವಿಜಯಪುರ : ಶಾಂತಿ, ಸದ್ಭಾವದ ಭಾವನೆಯನ್ನು ಅರಳಿಸುವುದೇ ಬೌದ್ಧ ಧರ್ಮದ ದಿವ್ಯ ಸಂದೇಶ ಹಾಗೂ ಉದ್ದೇಶವಾಗಿದೆ, ಈ ಕಾರ್ಯವನ್ನಿರಿಸಿಕೊಂಡು ಇದೇ ದಿ.14 ರಂದು ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಧಮ್ಮಚಕ್ರ ಪರಿವರ್ತನ ದಿನ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮ, ಧಮ್ಮ ರಥಯಾತ್ರೆ ನಡೆಯಲಿದೆ ಎಂದು ಬೌದ್ಧ ವಿಹಾರ ನಿರ್ಮಾಣ ಸಮಿತಿ ಗೌರವಾಧ್ಯಕ್ಷ, ಝೆನ್ ಮಾಸ್ಟರ್ ಡಾ. ಶಾಕು ಬೋಧಿಧಮ್ಮ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು, ಭಗವಾನ ಬುದ್ಧರು ಸಾರಾನಾಥದಲ್ಲಿ ಧರ್ಮೋಪದೇಶ ಮಾಡುವ ಮೂಲಕ ಧಮ್ಮಚಕ್ರವನ್ನು ಸ್ಥಾಪಿಸಿದರು, ಸಾಮ್ರಾಟ ಅಶೋಕನು ಸಹ ಧರ್ಮಚಕ್ರ ಸ್ಥಾಪನೆ ಮಾಡಿದರು, ನಂತರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರು ಲಕ್ಷಾಂತರ ಅನುಯಾಯಿಗಳ ಸಮ್ಮುಖದಲ್ಲಿ ಅಶೋಕ ವಿಜಯದಶಮಿ ದಿವಸ ಬೌದ್ಧ ಧರ್ಮ ಸ್ವೀಕರಿಸಿ ಮೂರನೇಯ ಬಾರಿಗೆ ಧರ್ಮಚಕ್ರ ಸ್ಥಾಪಿಸಿದರು, ಶಾಂತಿ, ಸಹೋದರತೆ, ಸಮಾನತೆಯ ಚಿಂತನೆಗಳು ಎಲ್ಲೆಡೆ ಪಸರಿಸಬೇಕು ಎನ್ನುವ ದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ ಎಂದರು.

ವರ್ಷಾವಾಸ ಎಂದರೆ ಮಳೆಗಾಲ ವಾಸ, ಮಳೆಗಾಲದ ಮೂರು ತಿಂಗಳಲ್ಲಿ ಬೌದ್ಧ ಧರ್ಮ ಪ್ರಸಾರಕರು ಧ್ಯಾನ ಹಾಗೂ ಸಾಧನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದರು, ಅಧ್ಯಾತ್ಮಿಕ ಅಧ್ಯಯನದಲ್ಲಿ ತೊಡಗಿಸಿಕೊಳ್ಳುತ್ತಿದ್ದರು, ಆಂತರಿಕ ಶುದ್ಧೀಕರಣಕ್ಕೆ ಇದು ಒಂದು ದಿವ್ಯ ಭಾಗವಾಗಿ ಪರಿಗಣಿತವಾಗಿತ್ತು. ಮಳೆಗಾಲದಲ್ಲಿ ಪ್ರಯಾಣ ಕೈಗೊಂಡರೆ ಅರಿವಿಲ್ಲದೇ ಅನೇಕ ಸಣ್ಣ ಜೀವಿಗಳಿಗೆ ಹಾನಿಯಾಗುವುದನ್ನು ತಪ್ಪಿಸುವ ಉದ್ದೇಶಕ್ಕಾಗಿ ಬೌದ್ಧ ಧರ್ಮ ಪ್ರಸಾರಕರು ಈ ಅವಧಿಯಲ್ಲಿ ಪ್ರಯಾಣ ಮಾಡುತ್ತಿರಲಿಲ್ಲ ಎಂದು ವಿವರಿಸಿದರು. ಹೀಗಾಗಿ ವರ್ಷಾವಾಸ ಎನ್ನುವುದು ಬೌದ್ಧ ಧರ್ಮದ ಪ್ರಮುಖ ಆಚರಣೆಯಾಗಿದ್ದು, ಈ ಅವಧಿಯಲ್ಲಿ ಎಲ್ಲರೂ ಆತ್ಮಶುದ್ಧೀಕರಣದ ಪವಿತ್ರ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಧಮ್ಮ ರಥಯಾತ್ರೆ :

ವರ್ಷಾವಾಸ ಕಾರ್ಯಕ್ರಮದ ಪ್ರಯುಕ್ತ ಧಮ್ಮ ರಥಯಾತ್ರೆ ಅತ್ಯಂತ ವೈಭವದಿಂದ ನಡೆಯಲಿದ್ದು, ಜಿಲ್ಲಾ ಪಂಚಾಯತ ಬಳಿ ಇರುವ ಡಾ.ಬಿ.ಆರ್. ಅಂಬೇಡ್ಕರ ಭವನದ ಆವರಣದಿಂದ ಬೆಳಿಗ್ಗೆ 9.30 ಗಂಟೆಗೆ ಈ ರಥಯಾತ್ರೆ ಆರಂಭಗೊಳ್ಳಲಿದ್ದು, ಭಗವಾನ ಬುದ್ಧ ಹಾಗೂ ವಿಶ್ವ ರತ್ನ ಡಾ.ಬಿ.ಆರ್. ಅಂಬೇಡ್ಕರ ಅವರ ಭಾವಚಿತ್ರದ ಬೌದ್ಧ ಧಮ್ಮ ರಥ ಯಾತ್ರೆ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಾಗಿ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರಕ್ಕೆ ತಲುಪಲಿದೆ. ನಂತರ ಮಧ್ಯಾಹ್ನ 11.30 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

ಬುದ್ಧ ವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ, ಉಪಾಧ್ಯಕ್ಷ ಶಶಿಕಾಂತ ಹೊನವಾಡಕರ, ಪ್ರಧಾನ ಕಾರ್ಯದರ್ಶಿ ನಾಗರಾಜ ಲಂಬು, ನಿರ್ದೇಶಕರಾದ ದಶವಂತ ಗುನ್ನಾಪೂರ, ಸಾಬು ಚಲವಾದಿ, ಸುರೇಶ ಗೊಣಸಗಿ, ಕಾನೂನು ಸಲಹೆಗಾರ ಕೆ.ಎಂ. ಕೂಡಲಗಿ ಸೇರಿದಂತೆ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

12-10-2025 EE DIVASA KANNADA DAILY NEWS PAPER

Friday, October 10, 2025

11-10-2025 EE DIVASA KANNADA DAILY NEWS PAPER

ಮಾನಸಿಕ ಆರೋಗ್ಯ ಮತ್ತು ಸೌಲಭ್ಯಗಳ ಅರಿವು ಮೂಡಿಸಿ : ನ್ಯಾಯಾಧೀಶ ಅರವಿಂದ ಹಾಗರಗಿ


 

ವಿಜಯಪುರ  : ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಹೇಳಿದರು. 

 ಜಿಲ್ಲಾ ಆಡಳಿತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ವಿಜಯಪುರ ಹಾಗೂ ವಿವಿದ ನರ್ಸಿಂಗ್ ಕಾಲೇಜು ಹಾಗೂ ಮನೋಜ್ಯೋತಿ ಫೌಂಡೇಶನ್ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಪದ್ಮಶ್ರೀ ಪ್ರಶಸ್ತಿ ವಿಜೇತರರು ಹಾಗೂ ಹಿರಿಯ ಮನೋರೋಗ ತಜ್ಞ ಡಾ|| ಸಿ.ಆರ್. ಚಂದ್ರಶೇಖರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಸಂಪತ್ತ ಗುಣಾರಿ ಅವರೊಂದಿಗೆ ಜಂಟಿಯಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 ಮಾನಸಿಕ ಕಾಯಿಲೆಯು ಪುರಾತನ ಕಾಲದಿಂದ ಮನುಷ್ಯನನ್ನು ಕಾಡುತ್ತಾ ಬಂದಿದೆ ಇದಕ್ಕೆ ಸರಳವಾದ ಚಿಕಿತ್ಸೆ ಇರಲಿಲ್ಲ ಈಗ ಆ ಕಾಲ ಬದಲಾಗಿದೆ. ರಾಷ್ಟಿçÃಯ ಮಾನಸಿಕ ಆರೋಗ್ಯ ಕಾರ್ಯಕ್ರಮ ಬಂದ ನಂತರ ಸಮುದಾಯಕ್ಕೆ ಆರೋಗ್ಯದ ಅರಿವು ಮತ್ತು ಜ್ಞಾನವನ್ನು ಕೊಡಲಾಗುತ್ತಿದ್ದು, ಅಲ್ಲದೇ ಮಾನಸಿಕ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ಹಾಗೂ ಆಪ್ತಸಮಾಲೋಚನೆ ಮೂಲಕ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಜೀವನ ಶೈಲಿಯ ಬದಲಾವಣೆಯಿಂದ ಮಾನಸಿಕವಾಗಿ ಆರೋಗ್ಯವಂತರಾಬೇಕು ಎಂದು ಅವರು ಹೇಳಿದರು. 

 ಮಾನಸಿಕ ಆರೋಗ್ಯದ ಬಗೆಗೆ ಸಾರ್ವಜನಿಕರಲ್ಲಿ ಅರಿವುವನ್ನು ಮೂಡಿಸುವುದು ಬಹಳ ಅತ್ಯವಶ್ಯಕ ಎಂಬುದನ್ನು ಮನಗಂಡು 1948ರಲ್ಲಿ ವಿಶ್ವ ಮಾನಸಿಕ ಆರೋಗ್ಯ ಒಕ್ಕೂಟ ಸ್ಥಾಪನೆಯಾಯಿತು. 1992ರಲ್ಲಿ ಮೊದಲ ಬಾರಿಗೆ ಒಕ್ಕೂಟದ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು ಎಂದು ಅವರು ಹೇಳಿದರು. 

 ಡಾ|| ಸಿ.ಆರ್. ಚಂದ್ರಶೇಖರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಹಿರಿಯ ಮನೋರೋಗ ತಜ್ಞರು ಮಾತನಾಡುತ್ತಾ ದೈಹಿಕ ರೋಗಗಳನ್ನು ಗುಣಪಡಿಸಲು ಚಿಕಿತ್ಸೆ ನೀಡುವಂತೆ ಮಾನಸಿಕ ರೋಗಗಳನ್ನು ಚಿಕಿತ್ಸೆ ನೀಡಿ ಗುಣಪಡಿಸಬಹುದು ಇದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕೇಂದ್ರಗಳನ್ನು ಪ್ರಾರಂಭಿಸಿ ಚಿಕಿತ್ಸಾ ಸೌಲಭ್ಯಗಳನ್ನು ನೀಡುತ್ತಿದೆ. ಈ ಸೌಲಭ್ಯದ ಅರಿವು ರೋಗಿಗಳಿಗೆ ಮೂಡಿಸುವುದು ದಿನಾಚರಣೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು. 

ಡಾ|| ಸಂಪತ್ತ ಗುಣಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ರವರು ರಾಜ್ಯ ಸರ್ಕಾರ 2014ರಲ್ಲಿ “ಮನೋಚೈತನ್ಯ ಕ್ಲಿನಿಕ” ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿತ್ತು. ಈ ಕಾರ್ಯಕ್ರಮದಡಿಯಲ್ಲಿ ಪ್ರತಿ ಮಂಗಳವಾರ ತಾಲೂಕು ಆಸ್ಪತ್ರೆಗಳಲ್ಲಿ ಮಾನಸಿಕ ಆರೋಗ್ಯ ತಪಾಸಣೆ ಮತ್ತು ಆರೈಕೆ ಕುರಿತಾಗಿ ಶಿಬಿರಗಳನ್ನು ಆಯೋಜಿಸಲಾಗುತ್ತದೆ. ಗರ್ಭಿಣಿ ಮತ್ತು ಬಾಣಂತಿಯರ ಮಾನಸಿಕ ಸಮಸ್ಯೆಗಳನ್ನು ಗುರುತಿಸಿ ಅವರುಗಳಿಗೆ ಸೂಕ್ತ ಮಾನಸಿಕ ಚಿಕಿತ್ಸೆ ಮತ್ತು ಆಪ್ತ ಸಮಾಲೋಚನಾ ಸೇವಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶವಾಗಿದೆ. ರಾಷ್ಟಿçÃಯ ಟೆಲಿಮಾನಸಿಕ ಆರೋಗ್ಯ ಕಾರ್ಯಕ್ರಮವಾಗಿದ್ದು ಇದು ಮಾನಸಿಕ ಆರೋಗ್ಯ ಸೇವಾ ಸೌಲಭ್ಯವನ್ನು ಉಚಿತವಾಗಿ ದಿನದ 24 ಗಂಟೆಗಳು ಒದಗಿಸುವ ಮಾನಸಿಕ ಆರೋಗ್ಯ ಸಹಾಯವಾಣಿಯಾಗಿದೆ (ಸಹಾಯವಾಣಿ ಸಂಖ್ಯೆ:14416) ಪರೀಕ್ಷೆ ಒತ್ತಡ, ಮಾದಕ ಮತ್ತು ಮಧ್ಯವ್ಯಸನಿಗಳು, ಕೌಟುಂಬಿಕ ಸಮಸ್ಯೆ, ಖಿನ್ನತೆ ಮುಂತಾದ ಮಾನಸಿಕ ರೋಗಗಳಿಂದ ಬಳಲುವವರಿಗೆ ಮಾನಸಿಕ ಆರೋಗ್ಯ ವಿಷಯ ಪರಿಣಿತರು ಆಪ್ತಸಲಹೆ ಸೇವೆಯನ್ನು ಒದಗಿಸುವರು. ಮಾನಸಿಕ ರೋಗಿಗಳ ಗೌಷ್ಯತೆಯನ್ನು ಕಾಪಾಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮನೋರೋಗ ತಜ್ಞರಾದ ಡಾ|| ಮಂಜುನಾಥ ಮಸಳಿ ಪ್ರಾಸ್ತಾವಿಕವಾಗಿ ಮಾತನಾಡಿ, ತಂಬಾಕು ಹಾಗೂ ದೂಮಪಾನ ಸೇವನೆಯಿಂದ ಮಾನಸಿಕ ಖಿನ್ನತೆಯಿಂದ ಹೆಚ್ಚು ಜನರು ಬಳಲುತ್ತಿದ್ದು. ಅದರಲ್ಲಿ ಮಹಿಳೆಯರು ಶೇ 3ರಷ್ಟು ಮಾನಸಿಕ ರೋಗಕ್ಕೆ ತುತ್ತಾಗುತ್ತಿದ್ದಾರೆ. ಹಾಗೂ ವಿವಿದ ರೀತಿಯ ಮಾನಸಿಕ ರೋಗಗಳ ಕುರಿತು ಮತ್ತು ಅದರ ಚಿಕಿತ್ಸೆಯ ಬಗ್ಗೆ ಮಾತನಾಡಿದರು.

ಜಾಥಾ ಹಾಗೂ ವೇಧಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿಮೂಲನಾ ಅಧಿಕಾರಿ ಡಾ|| ಅರ್ಚನಾ ಕುಲಕರ್ಣಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಜಾನ್ ಕಟವಟೆ, ಮನೋರೋಗ ತಜ್ಞ ಡಾ.ಚೌಕಿಮಠ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲೂರ, ಸುರೇಶ ಹೊಸಮನಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ದಶವಂತ, ಕೆ.ಬಿ ಬಾಗವಾನ ಕ್ಲಿನಿಕ್ ಸೈಕಾಲೋಜಿಸ್ಟ್, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ವಿವಿಧ ನರ್ಸಿಂಗ ಕಾಲೇಜಿನ ಭೋದಕ ಸಿಬ್ಬಂದಿ ವರ್ಗದವರು ಮತ್ತು ವಿಧ್ಯಾರ್ಥಿ/ವಿಧ್ಯಾರ್ಥಿನಿಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್ ಭಾಗವಾನ ಸ್ವಾಗತಿಸಿದರು. ರವಿ ಕಿತ್ತೂರ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

ವಸತಿ ನಿಲಯ ನಿರ್ವಹಣೆಗೆ ಹಾಸ್ಟೆಲ್ ಮೆಂಟರ್-ವಾರ್ಡನ್‌ಗಳಿಗೆ ಮಾರ್ಗದರ್ಶನ ಸಭೆ ವಸತಿ ನಿಲಯಗಳಲ್ಲಿನ ಮಕ್ಕಳ ಒತ್ತಡ ನಿವಾರಣೆ-ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ವಹಿಸಿ -ಜಿಲ್ಲಾಧಿಕಾರಿ ಡಾ.ಆನಂದ ಕೆ.


 ವಿಜಯಪುರ  : ಜಿಲ್ಲೆಯಲ್ಲಿರುವ ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಪರೀಕ್ಷಾ ಒತ್ತಡವನ್ನು ತಗ್ಗಿಸುವ ನಿಟ್ಟಿನಲ್ಲಿ ಸಂಬAಧಿಸಿದ ವಸತಿ ನಿಲಯಗಳ ವಾರ್ಡನ್‌ಗಳು ಹಾಗೂ ಹಾಸ್ಟೆಲ್ ಮೆಂಟರ್‌ಗಳು ಮಕ್ಕಳಿಗೆ ಮುಕ್ತವಾದ ವಾತಾವರಣ ಕಲ್ಪಿಸಿ, ಮಕ್ಕಳೊಂದಿಗೆ ಬೆರೆತು, ಸಮಸ್ಯೆಗಳನ್ನು ಆಲಿಸಿ-ಚರ್ಚಿಸಿ, ಪರಿಹರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು. 

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವಿಹಯಪುರ ಇವರ ಸಂಯುಕ್ತಾಶ್ರಯದಲ್ಲಿ ಹಾಸ್ಟೇಲ್ ಮೆಂಟರ್ ಮತ್ತು ವಾರ್ಡನ್ ರವರಿಗೆ ವಸತಿ ನಿಲಯಗಳ ನಿರ್ವಹಣೆಯ ಕುರಿತು ಮಾರ್ಗದರ್ಶಿ ಸಭೆ ಹಾಗೂ ಜಿಲ್ಲಾ ಮಟ್ಟದ. ವಿದ್ಯಾರ್ಥಿಗಳ ಸುರಕ್ಷಾ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

 ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆಯಲು ತಮ್ಮ ಕುಟುಂಬದಿAದ ದೂರವಾಗಿರುತ್ತಾರೆ. ವಾರಕ್ಕೊಮ್ಮೆಯಾದರೂ ಒಂದು ಅವರೊಂದಿಗೆ ಊಟ ಮಾಡುವ ಮೂಲಕ ಅವರೊಂದಿಗೆ ಬೆರೆತು, ಕುಟುಂಬದಿAದ ದೂರವಿರುವ ಭಾವನೆ ಹೋಗಲಾಡಿಲು ಪ್ರಯತ್ನಿಸಬೇಕು. ವಸತಿ ನಿಲಯಗಳಲ್ಲಿ ಉತ್ತಮವಾದ ಮುಕ್ತ ವಾತಾವರಣ ನಿರ್ಮಿಸಬೇಕು. ಅವರೊಂದಿಗೆ ಚರ್ಚಿಸಬೇಕು. ಮಕ್ಕಳೊಂದಿಗೆ ಮುಕ್ತವಾಗಿ ಮಾತನಾಡಿದಾಗ ಮಾತ್ರ ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಆಸಕ್ತ ವಿಷಯಗಳ ಕುರಿತು ಮಕ್ಕಳಿಗೆ ಬೋಧನೆ ಮಾಡಬೇಕು. ವಿಚಾರಗಳು ತಮ್ಮಲ್ಲಿರುವ ಅನುಭವ ಜ್ಞಾನವನ್ನು ಹಂಚಿಕೊಳ್ಳಬೇಕು. ವಸತಿ ನಿಲಯಗಳಲ್ಲಿನ ಸಣ್ಣ ಪುಟ್ಟ ಸಮಸ್ಯೆಗಳನ್ನು ತಮ್ಮ ಹಂತದಲ್ಲಿಯೇ ಪರಿಹರಿಸುವ ಮೂಲಕ ಮಕ್ಕಳಲ್ಲಿನ ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು. 

 ವಸತಿ ನಿಲಯಗಳಲ್ಲಿ ಅವಶ್ಯಕವಿರುವ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಬೇಕು. ಸಾಧಾರಣವಾಗಿ ಮಕ್ಕಳಲ್ಲಿ ಚರ್ಮರೋಗ ಸಮಸ್ಯೆ ಉಂಟಾಗುತ್ತದೆ. ಇದನ್ನು ಸಂಬAಧಿಸಿದ ಹಾಸ್ಟೆಲ್ ವಾರ್ಡನ್, ಮೆಂಟರ್‌ಗಳು ಅವಲೋಕಿಸಬೇಕು. ವಾರಕ್ಕೊಮ್ಮೆ ವೈದ್ಯರನ್ನು ಹಾಸ್ಟೇಲ್‌ಗೆ ಕರೆಸಿ ತಪಾಸಣೆ ನಡೆಸಬೇಕು. ರಕ್ತಹೀನತೆ ತಪಾಸಣೆ ನಡೆಸಬೇಕು. ಆಗಾಗ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ವೈದ್ಯಕೀಯ ತಪಾಸಣೆ ನಡೆಸಬೇಕು. ಯೋಗ, ವ್ಯಾಯಾಮಗಳಂತಹ ದೈಹಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಸುಸಜ್ಜಿತವಾದ ಗ್ರಂಥಾಲಯ ಇರುವಂತೆ ನೋಡಿಕೊಳ್ಳಬೇಕು. ಕಂಪ್ಯೂಟರ್ ತರಬೇತಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ವಸತಿ ನಿಲಯಗಳ ವಿದ್ಯಾರ್ಥಿಗಳ ಬೆಳವಣಿಗೆ ಹಾಗೂ ಜೀವನ ಮಟ್ಟ ಸುಧಾರಿಸಲು ಪ್ರೇರೆಪಿಸಬೇಕು ಎಂದು ಅವರು ಹೇಳಿದರು.

 ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಕುಟುಂಬದಿAದ ದೂರ ಬಂದು, ಹಾಸ್ಟೆಲ್‌ನಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಬಂದಿರುವ ಮಕ್ಕಳ ಪೋಷಕರಾಗಿ ಹಾಸ್ಟೆಲ್ ವಾರ್ಡನ್‌ಗಳು ಕಾರ್ಯನಿರ್ವಹಿಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಹಾಸ್ಟೆಲ್‌ಗಳಲ್ಲಿನ ಕೊಠಡಿಗಳ ಸ್ವಚ್ಛತೆ, ಶುಚಿತ್ವ ಶೌಚಾಲಯ, ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಅಗತ್ಯವಿರುವ ಪುಸ್ತಕಗಳು ಸ್ಪರ್ಧಾತ್ಮ, ಪುಸ್ತಕಗಳು, ಉತ್ತಮ ಪೌಷ್ಠಿಕಾಂಶವುಳ್ಳ ಮೆನು ಪ್ರಕಾರ ಆಹಾರ ಒದಗಿಸುವುದು ಬಹುಮುಖ್ಯ ಜವಾಬ್ದಾರಿಯಾಗಿದೆ. ಇದನ್ನರಿತುಕೊಂಡು ಕಾರ್ಯನಿರ್ವಹಿಸಬೇಕು. ಮಿಷನ್ ವಿಜಯಪುರದಡಿ ವೆಬ್ ಕಾಸ್ಟಿಂಗ್ ಮೂಲಕ ಸಂಜೆ ಕ್ಲಾಸ್ ಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುಂತೆ ನಿಗಾ ವಹಿಸಬೇಕು ಎಂದು ಅವರು ಹೇಳಿದರು. 

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಅವರು ಮಾತನಾಡಿ, ವಸತಿ ನಿಲಯಗಳಲ್ಲಿರುವ ಮಕ್ಕಳೊಂದಿಗೆ ಸಂಬAಧಿಸಿದ ಹಾಸ್ಟೆಲ್ ವಾರ್ಡನ್‌ಗಳು ಬೆರೆತು, ಮುಕ್ತವಾಗಿ ಮಾತನಾಡಿ, ವಿಷಯಗಳನ್ನು ಹಂಚಿಕೊAಡಾಗ ಅವರ ಸಮಸ್ಯೆಗಳನ್ನು ಅರಿಯಲು ಸಾಧ್ಯವಾಗುತ್ತದೆ. ಅವರಲ್ಲಿನ ಸಮಸ್ಯೆ ಅರ್ಥ ಮಾಡಿಕೊಂಡು ಪರಿಹಾರ ಕಲ್ಪಿಸಲು ಮುಂದಾಗಬೇಕು. ಮಕ್ಕಳಿಗೆ ಓದಿನ ವಾತಾವರಣ ಕಲ್ಪಿಸಬೇಕು. ಸರ್ಕಾರ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು, ಶೈಕ್ಷಣಿಕ ಅಭಿವೃದ್ದಿಗೆ ಸಾಕಷ್ಟು ಅನುದಾನ ನೀಡಿದೆ. ಇದರ ಸದ್ವಿನಿಯೋಗ ಪಡಿಸಿಕೊಂಡು ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಅವರು ಹೇಳಿದರು. 

 ಉತ್ತಮ ಸಮಾಜ ನಿರ್ಮಾಣಕ್ಕೆ ಮಾರ್ಗದರ್ಶನ ಅಗತ್ಯವಿದೆ. ಈ ನಿಟ್ಟಿನಲ್ಲಿ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಭವಿಷ್ಯಕ್ಕೆ ರೂಪಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ನೀಡಬೇಕು. ದುಶ್ಚಟಗಳಿಗೆ ಬಲಿಯಾಗದಂತೆ ತಿಳುವಳಿಕೆ ಮೂಡಿಸಬೇಕು. ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹಾಸ್ಟೆಲ್ ಜವಾಬ್ದಾರಿ ಹೊಂದಿರುವ ವಾರ್ಡನ್‌ಗಳು, ಮೆಂಟರ್‌ಗಳು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಮೂಲಕ ಮಾದರಿಯಾಗಬೇಕು. ನೂರು ವಿದ್ಯಾರ್ಥಿಗಳು ಸುಧಾರಿಸಿದಾಗ, ಬೆಳವಣಿಗೆ ಹೊಂದಿದಾಗ ನೂರು ಕುಟುಂಬಗಳು ಬೆಳವಣಿಗೆ ಹೊಂದುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮಾಜದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು. 

 ಡಿ.ಎ.ಮೂಲಿಮನಿ ಉಪನ್ಯಾಸ ನೀಡಿದರು. ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದೀನ್ ಸೌದಾಗರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಡಾ.ನಾಗರಾಜ್, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಆಹಾರ ಸುರಕ್ಷತಾ ಅಧಿಕಾರಿ ಬಿರಾದಾರ, ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಸಮಾಜ ಕಲ್ಯಾಣ ಇಲಾಖೆ ಮಹೇಶ ಪೋತದಾರ, ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು


ಸಹಕಾರಿ ಯಶಸ್ಸಿಗೆ ಕಾನೂನು ಅರಿವು ಅಗತ್ಯ : ಸಚಿವ ಶಿವಾನಂದ


ನಗರದಲ್ಲಿರುವ ವಿಡಿಸಿಸಿ ಬ್ಯಾಂಕ್ ಆವರಣದಲ್ಲಿ ಹಮ್ಮಿಕೊಂಡಿದ್ದ ಸಹಕಾರಿ ಕಾಯ್ದೆ ತಿದ್ದುಪಡಿಗಳ ಕುರಿತ ತರಬೇತಿ ಕಾರ್ಯಾಗಾರಕ್ಕೆ ಸಚಿವ ಶಿವಾನಂದ ಪಾಟೀಲ ಚಾಲನೆ ನೀಡಿದರು.

ವಿಜಯಪುರ : ಸಹಕಾರಿ ರಂಗದಲ್ಲಿರುವ ಎಲ್ಲರೂ ಪ್ರಾಮಾಣಿಕ, ಪಾರದರ್ಶಕ ಹಾಗೂ ಸೇವಾ ಮನೋಭಾವದ ಜೊತೆಗೆ ಕಾನೂನಿನ ಅರಿವಿನೊಂದಿಗೆ ಕೆಲಸ ಮಾಡಿಬೇಕಿದೆ. ಹಾಗಾದಲ್ಲಿ ಸಹಕಾರಿ ರಂಗವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಾಧ್ಯವಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ವಿಜಾಪುರ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಹಾಗೂ ಸಹಕಾರಿ ಸಹಕಾರ ಒಕ್ಕೂಟದ ಸಹಯೋಗದಲ್ಲಿ ಪಟ್ಟಣ ಸಹಕಾರಿ ಬ್ಯಾಂಕ್, ಪತ್ತಿನ ಸಹಕಾರಿ ಸಂಘಗಳು ಹಾಗೂ ವಿವಿಧೊದ್ದೇಶಗಳ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯ ನಿರ್ವಾಹಕರಿಗೆ ಹಮ್ಮಿಕೊಂಡಿದ್ದ ಸಹಕಾರಿ ಕಾಯ್ದೆಗಳಿಗೆ ತಿದ್ದುಪಡಿ, ಅಭಿವೃದ್ಧಿ ಹಾಗೂ ಎದುರಿಸುತ್ತಿರುವ ಸವಾಲುಗಳ ಸಮಾಲೋಚನೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಹಕಾರಿ ರಂಗದ ಬಲವರ್ಧನೆಗೆ ಸರ್ಕಾರಗಳು ಮೇಲಿಂದ ಮೇಲೆ ಸಕಾರಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತವೆ. ಸರ್ಕಾರದ ನಿಯಮಗಳ ಪಾಲನೆಯೊಂದಿಗೆ ಸಹಕಾರಿ ಬಲವರ್ಧನೆಗೆ ಶ್ರಮಿಸಬೇಕಿದೆ ಎಂದರು.

ಪ್ರಸಕ್ತ ಸ್ಪರ್ಧಾತ್ಮಕ ಸಂದರ್ಭದಲ್ಲಿ ಸಹಕಾರಿ ರಂಗದ ಪ್ರಗತಿ ನಿರೀಕ್ಷಿತದಂತೆ ಪ್ರಗತಿ ಕಂಡಿಲ್ಲ ಎಂಬುದು ಸತ್ಯವಾದರೂ ತೀರಾ ನಿರಾಶಾದಾಯವಾಗೇನೂ ಇಲ್ಲ. ಕಾನೂನು ಚೌಕಟ್ಟಿನೊಳಗಿನ ವ್ಯವಹಾರ ಒಂದೆಡೆಯಾದರೆ, ಮಾನವೀಯ ನೆಲೆಯಲ್ಲಿ ವ್ಯವಹರಿಸುವ ಮೂಲಕ ಸಹಕಾರಿ ರಂಗದಲ್ಲಿ ಅಭಿವೃದ್ಧಿಯ ಪರಿವರ್ತನೆ ತರುವ ಅಗತ್ಯವಿದೆ. ರೈತರು, ಜನ ಸಾಮಾನ್ಯರ ಆರ್ಥಿಕ ಜೀವನ ಮಟ್ಟ ಸುಧಾರಣೆಗಾಗಿ ಸಹಕಾರಿ ವ್ಯವಸ್ಥೆಯಲ್ಲಿ ಇರುವ ಎಲ್ಲರೂ ಬದ್ಧತೆಯಿಂದ ಸೇವೆ ಸಲ್ಲಿಸಬೇಕಿದೆ ಎಂದರು.

ಸಹಕಾರಿ ರಂಗದಲ್ಲಿ ಉತ್ತುಂಗದಲ್ಲಿರುವ ಸಹಕಾರಿ ಸಂಸ್ಥೆಗಳೂ ಇವೆ, ಕೆಲವು ಸಾಮಾನ್ಯ ಸ್ಥಿತಿಯಲ್ಲೂ, ಮತ್ತೆ ಕೆಲವು ಸುಧಾರಣೆ ಹಂತದಲ್ಲೂ, ಇನ್ನಷ್ಟು ಸಂಸ್ಥೆಗಳು ಸಂಕಷ್ಟದ ಸ್ಥಿತಿಯಲ್ಲಿವೆ. ಆದರೆ ಸೋತವರನ್ನು ಕೈ ಬಿಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವುದು ಇಂದಿನ ಅಗತ್ಯವಾಗಿದೆ ಎಂದರು.

ಸಹಕಾರಿ ರಂಗದದಲ್ಲಿ ಆರ್ಥಿಕ ವ್ಯವಹಾರ ಪಾರದರ್ಶಕತೆ, ನಿಸ್ವಾರ್ಥದ ಜೊತೆಗೆ ಆಡಳಿತದ ನ್ಯೂನ್ಯತೆಗಳು ಕಂಡು ಬಂದಾಗ ತಿದ್ದಿಕೊಂಡು ಮುನ್ನಡೆಯಬೇಕು. ಸಹಕಾರಿ ರಂಗದ ಬಲವರ್ಧನೆ ಎಂದರೆ ಅದು ಜನ ಸಾಮಾನ್ಯನ ಆರ್ಥಿಕ ಬಲವರ್ಧನೆ ಎಂದೇ ಅರ್ಥ ಎಂದು ವಿಶ್ಲೇಷಿಸಿದರು.

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಗುಡದಿನ್ನಿ ಅವರು ಮಾತನಾಡಿ, ಸಹಕಾರಿ ಕ್ಷೇತ್ರದ ಬಲವರ್ಧನೆಗಾಗಿ ಸಹಕಾರಿ ಪತ್ತಿನ ಸಂಘಗಳು ಹೆಚ್ಚಿನ ಪ್ರಮಾಣದಲ್ಲಿ ಠೇವಣಿ ಸಂಗ್ರಹಿಸಿ, ಆರ್ಥಿಕ ಸುಸ್ಥಿತಿ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಹಕಾರಿ ಸಂಘಗಳ ವಿಶ್ರಾಂತ ಅಪರ ನಿಬಂಧಕರಾದ ಎಂ.ಜಿ.ಪಾಟೀಲ ಅವರು, ಸಹಕಾರಿ ಸಂಘಗಳ ಕಾಯ್ದೆಗಳ ಇತ್ತೀಚಿನ ತಿದ್ದುಪಡಿ, ಪತ್ತಿನ ಸಹಕಾರಿ ಸಂಸ್ಥೆಗಳ ಅಭಿವೃದ್ಧಿ ಮತ್ತು ಎದುರಿಸುತ್ತಿರುವ ಸವಾಲುಗಳ ಕುರಿತು ಸಮಗ್ರ ವಿವರ ನೀಡಿದರು.

ವಿಜಾಪುರ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಹಾಗೂ ಸಹಕಾರಿ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿರುವ ವಿಡಿಸಿಸಿ ನಿರ್ದೇಶಕರಾದ ಗುರುಶಾಂತ ನಿಡೋಣಿ ಅಧ್ಯಕ್ಷತೆ ವಹಿಸಿದ್ದರು. ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಚಂದ್ರಶೇಖರಗೌಡ ಪಾಟೀಲ ಮನಗೂಳಿ, ಸುರೇಶಗೌಡ ಬಿರಾದಾರ, ಎಸ್.ಎಸ್.ಜಾಗೀರದಾರ, ಶೇಖರ ದಳವಾಯಿ, ಸಿಇಒ ಎಸ್.ಎ.ಢವಳಗಿ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕøತರಾದ ಶ್ರೀ ಶಾಂತೇಶ್ವರ ವಿವಿಧೋದ್ದೇಶಗಳ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀಮಂತ ಇಂಡಿ, ವಿಡಿಸಿಸಿ ಹಿರಿಯ ಅಧಿಕಾರಿಗಳು ಸೇರಿದಂತೆ ಇತರರು ವೇದಿಕೆ ಮೇಲಿದ್ದರು. 

ವಿಶ್ರಾಂತ ಪ್ರಾಚಾರ್ಯ ಬಸವರಾಜ ಸಾವಕಾರ ನಿರೂಪಿಸಿದರೆ, ವಿಡಿಸಿಸಿ ಉಪ ಪ್ರಧಾನ ವ್ಯವಸ್ಥಾಪಕರಾದ ಸತೀಶ ಪಾಟೀಲ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು


Friday, October 3, 2025

04-10-2025 EE DIVASA KANNADA DAILY NEWS PAPER

ಸಚಿವ ಶಿವಾನಂದ ಪಾಟೀಲರಿಂದ ಬನ್ನಿ ವಿನಿಮಯ

ವಿಜಯಪುರ :  ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ಶುಕ್ರವಾರ ವಿಜಯಪುರ ನಗರದ ತೋಟದ ಮನೆಯಲ್ಲಿ  ಸಾರ್ವಜನಿಕ ಬನ್ನಿ ವಿನಿಮಯ ಆಚರಿಸಿದರು.

ನಗರದ ಜಮಖಂಡಿ ರಸ್ತೆಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿ ಮಾತ್ರವಲ್ಲದೆ ವಿಜಯಪುರ, ಬಾಗಲಕೋಟೆ, ಹಾವೇರಿ ಜಿಲ್ಲೆಯಿಂದ ಆಗಮಿಸಿದ್ದ ಜನಸ್ತೋಮದ ಮಧ್ಯೆ ಬನ್ನಿ ವಿನಿಮಯ ಮಾಡಿಕೊಂಡು  ವೈರತ್ವ ಮರೆತು ಬನ್ನಿ ತಗೊಂಡ ಬಂಗಾರದಂಗ ಇರೋಣ ಎಂಬ ಸಂದೇಶ ಸಾರಿದರು.
ಶುಕ್ರವಾರ ಬೆಳಿಗ್ಗೆಯಿಂದಲೇ ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿರುವ ತೋಟದ ಮನೆಯ ಆವರಣದಲ್ಲಿ ನೆರೆದಿದ್ದ ಅಪಾರ ಜನಸ್ತೋಮ, ವಿವಿಧ ಮಠಾಧೀಶರು, ಮಾಜಿ ಸಚಿವರು, ಹಾಲಿ ಶಾಸಕರು, ರಾಜಕೀಯ ಗಣ್ಯರು, ಮುಖಂಡರು, ರೈತರು, ಸಾರ್ವಜನಿಕರು, ಯುವಕರು, ಮಹಿಳೆಯರು, ಬೆಂಬಲಿಗರು, ಅಭಿಮಾನಿಗಳು, ಸೇರಿದಂತೆ ಸುಮಾರು ಅರ್ಧ ಲಕ್ಷಕ್ಕೂ ಮಿಕ್ಕಿದ ಜನರು ಆಗಮಿಸಿ ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡು ಶುಭಾಶಯ ಕೋರಿದರು.
ತಮಗೆ ಪ್ರೀತಿಯಿಂದ ದಸರಾ ಶುಭಾಶಯ ಕೋರಿದ ಸಾರ್ವಜನಿಕರಿಗೆ ಸಚಿವರೂ ಕೂಡ ಬನ್ನಿ ನೀಡಿ ವಿಜಯ ದಶಮಿ ಹಬ್ಬದ ಶುಭಾಶಯ ಕೋರಿದರು.
ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ವಿಡಿಸಿಸಿ ಬ್ಯಾಂಕ್ ನಿರ್ದೇಶಕಿತಾಗಿರುವ ಪುತ್ರು ಸಂಯುಕ್ತ ಪಾಟೀಲ, ನಂದಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾಗಿರುವ ಪುತ್ರ ಸತ್ಯಜೀತ ಪಾಟೀಲ ಅವರೂ ಉಪಸ್ಥಿತರಿದ್ದು ಬನ್ನಿ ವಿನಿಮಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಬಸವನಬಾಗೇವಾಡಿ ವಿಧಾನಸಭೆ ಕ್ಷೇತ್ರ ಸೇರಿದಂತೆ ವಿಜಯಪುರ, ಹಾವೇರಿ, ಬಾಗಲಕೋಟೆ ಜಿಲ್ಲೆಯಿಂದಲೂ ಪಕ್ಷಾತೀತವಾಗಿ ಆಗಮಿಸಿದ್ದ ಜನರು ಸಚಿವ ಶಿವಾನಂದ ಪಾಟೀಲ ಅವರ ಅಭಿಮಾನಿಗಳು, ಕಾಂಗ್ರೆಸ ಮುಖಂಡರು, ಕಾರ್ಯಕರ್ತರು ಸಚಿವರೊಂದಿಗೆ ಬನ್ನಿ ವಿನಿಮಶುಭಾಶಯ ಕೋರಿದರು. 
ಬನ್ನಿ ವಿನಿಮಯ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಜನರಿಗೆ ಬೆಳಿಗ್ಗೆಯಿಂದಲೇ ಉಪಹಾರ, ಮಧ್ಯಾಹ್ನ ಗೋದಿ ಹುಗ್ಗಿ ಸೇರಿದಂತೆ ವಿವಿಧ ಖಾದ್ಯಗಳ ಊಟೋಪಚಾರದ ವ್ಯವಸ್ಥೆ ನಡೆದಿತ್ತು.
ಮತ್ತೊಂದೆಡೆ, ವಿವಿಧ ಜಾನಪದ ಕಲಾತಂಡಗಳ ಪ್ರದರ್ಶನ, ವಿರೇಶ ವಾಲಿ ತಂಡದಿಂದ ಸಂಗೀತ ಕಾರ್ಯಕ್ರಮ ನಡೆದಿತ್ತು.


ರಾಜ್ಯದಲ್ಲಿ ಹಲವೆಡೆ ಅತೀವೃಷ್ಟಿಯಿಂದ ರೈತರು ಸಂಕಷ್ಟದಲ್ಲಿದ್ದಾರೆ, ನಾಡದೇವಿ ಚಾಮುಂಡೇಶ್ವರಿ ನಾಡಿನಾದ್ಯಂತ ರೈತರಿಗೆ, ನಾಡಿನ ಜನತೆಗೆ ನೆಮ್ಮದಿ ಸುಖ ಶಾಂತಿ ಸಮೃದ್ದಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಶಿವಾನಂದ ಪಾಟೀಲ
ಸಚಿವರು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ.

ಸ್ವಚ್ಛತೆಯು ಕೇವಲ ವೈಯಕ್ತಿಕ ಅಭ್ಯಾಸವಲ್ಲ, ಸಮಾಜದ ಉನ್ನತಿ ಮತ್ತು ಸಮೃದ್ಧಿಗೆ ಅಗತ್ಯವಾದ ಜವಾಬ್ದಾರಿ : ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ

 ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್. ಎಸ್ ಕೋಶ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ವಿಶ್ವವಿದ್ಯಾಲಯದ ಆವರಣದಲ್ಲಿ ಮಹಾತ್ಮಾ ಗಾಂಧಿಜಿಯವರ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಚಾಲನೆ ನೀಡಿದರು.

 ವಿಜಯಪುರ: ಸ್ವಚ್ಛತೆಯು ಕೇವಲ ವೈಯಕ್ತಿಕ ಅಭ್ಯಾಸವಲ್ಲ, ಸಮಾಜದ ಉನ್ನತಿ ಮತ್ತು ಸಮೃದ್ಧಿಗೆ ಅಗತ್ಯವಾದ ಜವಾಬ್ದಾರಿ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್. ಎಸ್ ಕೋಶ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ವಿಶ್ವವಿದ್ಯಾಲಯದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ  ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಚ್ಛತೆಯು ಉತ್ತಮ ಆರೋಗ್ಯಕ್ಕೆ ಅವಶ್ಯಕವಾಗಿದ್ದು, ಇದು ರೋಗಾಣುಗಳು ಮತ್ತು ಸೋಂಕುಗಳ ಹರಡುವಿಕೆಯನ್ನು ತಡೆಯುವುದರೊಂದಿಗೆ ಮಾನಸಿಕ ಯೋಗಕ್ಷೇಮವನ್ನು ಹೆಚ್ಚಿಸಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಸಹಕಾರಿ ಆಗುತ್ತದೆ. ವೈಯಕ್ತಿಕ ಸ್ವಚ್ಛತೆ, ಪರಿಸರ ಸ್ವಚ್ಛತೆ ಮತ್ತು ಆಹಾರದ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ವ್ಯಕ್ತಿಗೂ ಸಮಾಜಕ್ಕೂ ಸಮಾನವಾಗಿ ಪ್ರಯೋಜನಕಾರಿ ಎಂದರು.

ಈ ಕಾರ್ಯಕ್ರಮದಲ್ಲಿ ಪ್ರೊ.ಪಿ.ಜಿ.ತಡಸದ, ಪ್ರೊ.ಸಕ್ಪಾಲ್ ಹೂವಣ್ಣ, ಪ್ರೊ.ಮಹೇಶ ಚಿಂತಾಮಣಿ, ಪ್ರೊ.ಅಶೋಕಕುಮಾರ ಸುರಪುರ, ಪ್ರೊ.ಜ್ಯೋತಿ ಉಪಾಧ್ಯಾಯ, ಪ್ರೊ. ಹಣಮಂತಯ್ಯ ಪೂಜಾರಿ, ಪ್ರೊ.ರಾಜು ಬಾಗಲಕೋಟ, ಪ್ರೊ. ರಾಜಕುಮಾರ ಮಾಲಿಪಾಟೀಲ, ಪ್ರೊ. ನಾರಾಯಣ ಪವಾರ, ಪ್ರೊ. ನಾಮದೇವ ಗೌಡ, ಡಾ. ಜಾಯ್ ಹೊಸಕೇರಿ, ಡಾ.ಅಮರನಾಥ ಪ್ರಜಾಪತಿ, ಡಾ.ಗುಲಾಬ್ ರಾಠೋಡ, ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿನಿಯರು, ಸಂಶೋಧನಾ ವಿದ್ಯಾರ್ಥಿನಿಯರು, ಅತಿಥಿ ಉಪನ್ಯಾಸಕರು ಹಾಗೂ ಎನ್.ಎಸ್.ಎಸ್ ಸ್ವಯಂಸೇವಕಿಯರು ಭಾಗವಹಿಸಿ ವಿಶ್ವವಿದ್ಯಾನಿಲಯದ ಆವರಣವನ್ನು ಸ್ವಚ್ಛಗೊಳಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, September 30, 2025

01-10-2025 EE DIVASA KANNADA DAILY NEWS PAPER

ರಾಷ್ಟಿçÃಯ ಪೋಷಣ ಮಾಸಾಚರಣೆ-ಸ್ವಸ್ಥö್ಯನಾರಿ- ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ

 ವಿಜಯಪುರ : ತಾಯಂದಿರು ಸಂಸಾರವನ್ನು ಸಾಗಿಸುವುದರ ಜೊತೆ ಸ್ವಸ್ಥö್ಯವಾಗಿರಲು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಅವರು ಹೇಳಿದರು. 

 ಮಂಗಳವಾರ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಈಶ್ವರಲಿಂಗ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಆರೋಗ್ಯ ಇಲಾಖೆ ಹಾಗೂ ಬಿ.ಎಲ್.ಡಿ.ಇ ಕಾನೂನು ಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪೋಷಣ ಮಾಸಾಚರಣೆ, ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 ತಾಯಂದಿರು ಬೆಳಿಗ್ಗೆಯಿಂದ ರಾತ್ರಿಯವರೆಗೆ ಪ್ರತಿಯೊಂದು ಕೆಲಸಗಳಲ್ಲಿ ನಿರತರಾಗಿರುತ್ತಾರೆ ಅವರಿಗೆ ಬಿಡುವು ಅನ್ನುವುದೆ ಮರಿಚಿಕೆಯಾಗಿರುತ್ತದೆ ಇಂತಹ ಸಮಯದಲ್ಲಿ ಅವರು ಅನಾರೋಗ್ಯ ತುತ್ತಾಗಿ ಕಷ್ಟ ಪಡುವಂತಹ ಪರಿಸ್ಥಿತಿ ಒದಗಿ ಬರುತ್ತವೆ ಈ ದೃಷ್ಟಿಯಲ್ಲಿ ತಮ್ಮ ಆರೋಗ್ಯ ರಕ್ಷಣೆ ಕೂಡ ಅಷ್ಟೆ ಮಹತ್ವದಾಗಿರುತ್ತದೆ. ಕೆಲಸಗಳ ಮದ್ಯ ತಮ್ಮ ಆರೋಗ್ಯಕ್ಕೂ ಮೀಸಲಿಡಬೇಕು. ಹೆಣ್ಣು ಮಕ್ಕಳಿಗಾಗಿ ಉಚಿತ ಕಾನೂನು ಹಾಗೂ ಆರೋಗ್ಯ ಸೇವೆಗಳ ಕುರಿತು ಅಧಿಕಾರಿಗಳು ತಮಗೆ ಸಂಪೂರ್ಣವಾಗಿ ಮಾಹಿತಿ ನೀಡಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

 ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರಿನ ಜಿಲ್ಲಾ ನ್ಯಾಯಾದೀಶರು ಮತ್ತು ಸದಸ್ಯ ಕಾರ್ಯದರ್ಶಿಗಳಾದ ಹೆಚ್ ಶಶಿಧರ ಶೆಟ್ಟಿ ಅವರು ಮಾತನಾಡಿ, ನಿರಂತರ ಕರ್ತವ್ಯಗಳ ಮದ್ಯ ಮಹಿಳೆಯರು, ಮಕ್ಕಳು ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆ ತಮ್ಮ ಸ್ವಾಸ್ತö್ಯವನ್ನು ಕಾಪಾಡಿಕೊಳ್ಳಬೇಕು. ದೌರ್ಜನ್ಯ, ಅನ್ಯಾಯವಾದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹಾಗೂ ಪ್ರಶ್ನಿಸುವ ಹಕ್ಕವುಳ್ಳವರಾಗಿದ್ದು ತಮಗೆ ಹತ್ತಿರದ ಗ್ರಾಮ ಪಂಚಾಯತಿ ಇಲ್ಲವೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿರುವ ಜನತಾ ನ್ಯಾಯಾಲಯಗಳಲ್ಲಿ ದೂರು ದಾಖಲಿಸಬೇಕು. ತಮಗೆ ಕಾನೂನುಗಳ ಕುರಿತು ಅರಿವು ಮೂಡಿಸಲು ತಮ್ಮ ಗ್ರಾಮ ಮಟ್ಟಗಳಲ್ಲಿ ಶಿಭಿರಗಳನ್ನು ಆಯೋಜಿಸಲಾಗುತ್ತಿದೆ ಅದರ ಸದುಪಯೊಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

 ಕಾನೂನು ಸೇವಾ ಪ್ರಾಧಿಕಾರವು ಹಲವಾರು ಜನರಿಗೆ ಉಚಿತ ಕಾನೂನಿನ ನೆರವನ್ನು ನೀಡುತ್ತಿದೆ ಮಹಿಳೆಯರು ಹಾಗೂ ಮಕ್ಕಳ ಹಕ್ಕುಗಳಿಗಾಗಿ ಇದು ಕಾನೂನಾತ್ಮಕ ಹಕ್ಕಾಗಿದೆ. ಇತ್ತೀಚೆಗೆ ಪೋಕ್ಸೊ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮನೆಯಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವುದು ಮತ್ತು ಪೋಕ್ಸೊ ಕಾಯಿದೆ ಕುರಿತು ಅರಿವು ಹೊಂದಬೇಕು ಎಂದು ಅವರು ಹೇಳಿದರು. 

 ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡುವುದು ಅದರೊಂದಿಗೆ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ನಿಷೇದ, ಗ್ರಾಮದ ಕೆರೆಗಳನ್ನು ರಕ್ಷಿಸಿ ಅದರಲ್ಲಿರುವ ಹೂಳು ತೆಗೆಯುವುದರಿಂದ ಅಂತರ್ಜಲ ಮಟ್ಟ ಹೆಚ್ಚುವುದು ಇದಕ್ಕೆ ತಾವೆಲ್ಲರೂ ಕೈಜೋಡಿಸಬೇಕು. ಕಾನೂನಿನ ಅರಿವಿನ ಕಾರ್ಯಕ್ರಮಗಳನ್ನು ಸಾಮಾನ್ಯವಾಗಿ ಎಲ್ಲಾ ನಾಗರಿಕರಿಗೆ ವಿಶೇಷವಾಗಿ ಸಮಾಜದ ದುರ್ಬಲ ವರ್ಗಗಳಿಗೆ ಕಾನೂನು ಜ್ಞಾನದ ಸಬಲೀಕರಣಕ್ಕಾಗಿ ತೆಗೆದುಕೊಳ್ಳಲಾಗುತ್ತದೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರು ಮತ್ತು ಮಕ್ಕಳಂತಹ ಸಮಾಜದ ದುರ್ಬಲ ವರ್ಗಗಳನ್ನು ತಲುಪಲು ವಿವಿಧ ಕಾರ್ಯಚಟುವಟಿಕೆಗಳನ್ನು ಏರ್ಪಡಿಸಲಾಗುತ್ತಿದೆ. ಎಂದು ಅವರು ಹೇಳಿದರು. 

 ಪ್ರತಿ ಗ್ರಾಮ ಪಂಚಾಯತಿ, ಕಾನೂನು ಮಹಾವಿದ್ಯಾಲಯಗಳಲ್ಲಿ, ಲೀಗಲ್ ಸೇವಾ ಕ್ಲಿನಿಕ್‌ಗಳನ್ನು ತೆರೆಲು ಕ್ರಮ ವಹಿಸಲಾಗುತ್ತಿದೆ. ಲೋಕ ಅದಾಲತ್‌ಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ರಾಜಿ ಸಂದಾನದ ಮೂಲಕ ಮಧ್ಯಸ್ಥಿಕೆ ವಹಿಸಿ ತಮ್ಮ ತಮ್ಮ ದೂರುಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಸಾರ್ವಜನಿಕರು, ಮಹಿಳೆಯರು, ಮಕ್ಕಳು ಇದರ ಸದುಪಯೊಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು. 

 ಬೆಂಗಳೂರಿನ ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷರು ಹಾಗೂ ಜಿಲ್ಲಾ ನ್ಯಾಯಾಧೀಶರಾದ ಜೈ ಶಂಕರ ಮಾತಾನಾಡಿ, ಈಗ ಸರ್ಕಾರದ ವಿವಿಧ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸು ಸಮಯೋಚಿತ ನ್ಯಾಯವನ್ನು ಒದಗಿಸಲು ತಮ್ಮ ಗ್ರಾಮಗಳಿಗೆ ಅಧಿಕಾರಿಗಳು ಬಂದು ಸಲಹೆ ಸೂಚನೆಗಳನ್ನು ನೀಡಿ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಮಾಹಿತಿ ಗರ್ಭಿಣಿ ಮಹಿಳೆಯರಿಗೆ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ದೊರಕುವಂತೆ ಕಾನೂನು ಸೇವಾ ಪ್ರಾಧಿಕಾರ ಕರ್ತವ್ಯ ನಿರ್ವಹಿಸುತ್ತದೆ ಹಾಗೂ ನ್ಯಾಯಾಧೀಶರೆ ಇದರ ಉಸ್ತುವಾರಿ ವಹಿಸಿಕೊಳ್ಳುತ್ತದ್ದಾರೆ ಎಂದು ಅವರು ತಿಳಿಸಿದರು.

 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳಾದ ಗೃಹಲಕ್ಷಿö್ಮÃ ಯೋಜನೆ ಐಸಿಡಿಎಸ್ ಯೋಜನೆ,ಐಸಿಡಿಎಸ್ ಯೋಜನೆ,ಬೇಟಿ ಬಚಾವೋ ಬೇಟಿ ಪಡಾವೋ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಪೋಷಣ್ ಅಭಿಯಾನ ಸಾಂತ್ವನ ಯೋಜನೆ, ಬಾಲಕಿಯರ ವಸತಿ ನಿಲಯ ಯೋಜನೆ, ಉದ್ಯೋಗಿನಿ ಚೇತನಾ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ, ಮಿಷÀನ್ ಶಕ್ತಿ ಯೋಜನೆಗಳ ಕುರಿತು ಸಮಗ್ರವಾಗಿ ವಿವರ ನೀಡಿದರು.

 ಗ್ರಾಮ ಪಂಚಾಯತ ಅಧ್ಯಕ್ಷರಾದ ಮಕಲನಗೌಡ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಬಬಲೇಶ್ವರ ತಹಶೀಲ್ಧಾರರಾದ ಶಾಂತಲಾ ಚಡಚಣ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿ.ಬಿ. ಬಿರಾದಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಸಂಪತ ಗುಣಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ.ಕೆ. ಚವ್ಹಾಣ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ, ಬಬಲೇಶ್ವರ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಿ.ಎಚ್ ಪಠಾಣ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಪವಿತ್ರಾ ನೀಲಖೇಣಿ, ಎಸ್.ಸಿ ಮ್ಯಾಗೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಕಾನೂನು ಮಹಾವಿದ್ಯಾಲಯಗಳ ಪ್ರಾಂಶುಪಾಲರು, ವಿದ್ಯಾರ್ಥಿಗಳು, ಗ್ರಾಮದ ಸಮಸ್ತ ನಾಗರೀಕರು ಹಾಗೂ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ನವರಾತ್ರಿ ಪ್ರಯುಕ್ತ ಗಂಗಾಧರ ಕೋರಳ್ಳಿ ಮಹಾಶಕ್ತಿ ಮಂದಿರದಲ್ಲಿ ಅನ್ನ ಪ್ರಸಾದ

ವಿಜಯಪುರ : ನಗರದ ಇಂಡಿ ರಸ್ತೆಯಲ್ಲಿರುವ ಗೋಕಾಕ ಚಳುವಳಿ ಹೋರಾಟಗಾರ ಗಂಗಾಧರ ಕೋರಳ್ಳಿ ಪ್ರತಿಷ್ಠಾಪಿತ ಮಹಾಶಕ್ತಿ ನಾಡದೇವಿ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಮಂಗಳವಾರ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಅನ್ನ ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದÀರ್ಭದಲ್ಲಿ ನೀಲಕಂಠ ಕೋರಳ್ಳಿ, ಮಹಾದೇವಿ ಕೋರಳ್ಳಿ, ವೀಣಾ ಕೋರಳ್ಳಿ ಆದಿತ್ಯ ಕೋರಳ್ಳಿ, ಗಂಗಾಬಾಯಿ ಮನಗೂಳಿ, ತ್ರಿವೇಣಿ ಮನಗೂಳಿ, ಸವಿತಾ ಬಿರಾದಾರ, ನಿಹಾರಿಕಾ ಮಂಟಾಳೆ, ಶಾಂತಾಬಾಯಿ ಬಿದರಿ, ಹಣಮಂತ ಕಲಾದಗಿ, ಶೋಭಾ ಪಾಟೀಲ, ಉಮಾ ಇಟ್ಟಂಗಿ, ಕವಿತಾ ಪ್ಯಾಟಿ ಎಚ್ ಜಿ ವಾಲಿ, ರಾಜೇಂದ್ರ, ಗುರು ಹಿರೇಮಠ, ಸಂಗು ಹಿರೇಮಠ, ಭೀಮರಾಯ ಕುಂಟೋಜಿ, ಕಲ್ಲಪ್ಪ ಶಿವಶರಣ, ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, September 25, 2025

26-09-2025 EE DIVASA KANNADA DAILY NEWS PAPER

ನಮಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಡಿ ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

ವಿಜಯಪುರ : ವಿಜಯಪುರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಬೇಕೆಂಬ ಬೇಡಿಕೆ ಅನೇಕ ವರ್ಷಗಳಿಂದ ಇದೆ. ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಿ ಬಡ ಜನರಿಗೆ ಆರೋಗ್ಯ ರಕ್ಷಣೆ ಹಾಗೂ ಜಿಲ್ಲೆಯ ಬಡ ಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಕೊಡಬೇಕಾದ ಸರಕಾರ ಜಿಲ್ಲೆಗೆ ಖಾಸಗಿ ಸಹ ಭಾಗಿತ್ವದ ವೈದ್ಯಕೀಯ ಮಹಾವಿದ್ಯಾಲಯ ಘೋಷಣೆ ಮಾಡಿರುವುದರಿಂದ ಜಿಲ್ಲೆಗೆ ದೊಡ್ಡ ಅನ್ಯಾಯವಾಗಿದೆ.

ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ “ನಮಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಡಿ” ಎಂಬ ವಿಷಯದ ಕುರಿತು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನ ಹಾಗೂ ಶಿವಶರಣ ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿದೋದ್ದೇಶಗಳ ಸಂಸ್ಥೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ನಾಡಿನ ಕವಿಗಳಿಂದ ರಾಜ್ಯ ಮಟ್ಟದ ಬಹು ಭಾಷಾ ಕವಿಗೋಷ್ಠಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.

ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ಸೆಪ್ಟೆಂಬರ್ 27ರ ಒಳಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಲು 9632096714/ 72042 79187 ಗೆ ಸಂಪರ್ಕಿಸಬೇಕೆAದು  ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಮತ್ತು ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ಹಾಗೂ ವಿವಿದೋದ್ದೇಶ ಸಂಸ್ಥೆ ಅಧ್ಯಕ್ಷ ಕಲ್ಲಪ್ಪ ಶಿವಶರಣ ಅವರು ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, September 23, 2025

ವಿಜಯಪುರ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ‘ವಾರ್ತಾಲಾಪ’ ಭಾರತ ಸರ್ಕಾರದ ವಾರ್ತಾ ಶಾಖೆಯಿಂದ ವಿಜಯಪುರದಲ್ಲಿ 26 ಸೆಪ್ಟೆಂಬರ್, 2025ರಂದು ಕಾರ್ಯಾಗಾರ ಆಯೋಜನೆ

 ವಿಜಯಪುರ: ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್‌ಟಿಪಿಸಿ) ಕೂಡಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಮತ್ತು ಕರ್ನಾಟಕ ಸಂಪಾದಕೀಯರ ಸಂಘ (ರಿ), ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಇದೇ 26 ಶುಕ್ರವಾರದಂದು ವಿಜಯಪುರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಾರ್ತಾಲಾಪ ಕಾರ್ಯಾಗಾರ ಆಯೋಜಿಸಲಾಗಿದೆ. 

ಕರ್ನಾಟಕ ಸರ್ಕಾರದ ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಕರ್ನಾಟಕ ಸರ್ಕಾರದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶ್ರೀ ಶಿವಾನಂದ ಎಸ್. ಪಾಟೀಲ ಗೌರವ ಉಪಸ್ಥಿತಿ ವಹಿಸಲಿದ್ದು, ವಿಜಯಪುರ ನಗರದ ಶಾಸಕರಾದ ಶ್ರೀ ಬಸನಗೌಡ ಆರ್. ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ. ವಿಜಯಪುರ ಕ್ಷೇತ್ರದ ಸಂಸದರಾದ ಶ್ರೀ ರಮೇಶ ಚಂ. ಜಿಗಜಿಣಗಿ ಹಾಗೂ ರಾಜ್ಯಸಭೆ ಸಂಸದರಾದ ಶ್ರೀಮತಿ ಸುಧಾ ಮೂರ್ತಿ ಅವರು ವಾರ್ತಾಲಾಪ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. 

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ರವಿಕುಮಾರ್ ಎನ್., ವಿಧಾನ ಪರಿಷತ್ ಶಾಸಕ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ - 2, ನವದೆಹಲಿ ಶ್ರೀ ಪ್ರಕಾಶ ಬಿ. ಹುಕ್ಕೇರಿ, ಮುದ್ದೇಬಿಹಾಳ ಕ್ಷೇತ್ರದ ಶಾಸಕರು ಹಾಗೂ ಕೆ.ಎಸ್.ಡಿ.ಎಲ್. ಅಧ್ಯಕ್ಷರಾದ ಶ್ರೀ ಅಪ್ಪಾಜಿ ಸಿ.ಎಸ್. ನಾಡಗೌಡ, ಇಂಡಿ ಕ್ಷೇತ್ರದ ಶಾಸಕರಾದ ಶ್ರೀ ಯಶವಂತರಾಯಗೌಡ ಬಿ. ಪಾಟೀಲ, ವಿಧಾನ ಪರಿಷತ್ ಶಾಸಕರಾದ ಶ್ರೀ ಹನುಮಂತ ಆರ್. ನಿರಾಣಿ, ಶ್ರೀ ಸುನೀಲ್ ಗೌಡ ಬಿ. ಪಾಟೀಲ್, ಶ್ರೀ ಪಿ.ಎಚ್. ಪೂಜಾರ, ನಾಗಠಾಣ ಕ್ಷೇತ್ರದ ಶಾಸಕರಾದ ಶ್ರೀ ವಿಠ್ಠಲ ಧೋಂಡಿಬಾ ಕಟಕಧೋಂಡ, ದೇವರಹಿಪ್ಪರಗಿ ಶಾಸಕರಾದ ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಸಿಂಧಗಿ ಶಾಸಕರಾದ ಶ್ರೀ ಅಶೋಕ ಮಲ್ಲಪ್ಪ ಮನಗೂಳಿ, ವಿಧಾನ ಪರಿಷತ್ ಶಾಸಕರಾದ ಶ್ರೀ ಕೇಶವ ಪ್ರಸಾದ ಎಸ್., ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸಂಗಮೇಶ ಅಪ್ಪಾಸಿ ಬಬಲೇಶ್ವರ, ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಕಾನನ್ ಅಬ್ದುಲ್ ಹಮೀದ್ ಮುಶ್ರೀಫ್, ಭಾರತ ಸರ್ಕಾರದ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕರಾದ ಶ್ರೀ ಎಸ್.ಜಿ. ರವೀಂದ್ರ, ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ., ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ರಿಷಿ ಆನಂದ್, ಕೂಡಗಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸಂತೋಷ್ ತಿವಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ಪ್ರಕಾಶ್ ಜಿ. ಬೆಣ್ಣೂರ, ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘದ ಅಧ್ಯಕ್ಷರಾದ ಶ್ರೀ ಈರ್ಫಾನ್ ಶೇಖ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷರಾದ ಶ್ರೀ ಗುರುರಾಜ್ ಹೂಗಾರ್, ಕರ್ನಾಟಕ ರಾಜ್ಯ ಮಹಿಳಾ ಸಂಪಾದಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ರಶ್ಮಿ ಪಾಟೀಲ್ ಅವರು ಭಾಗವಹಿಸಲಿದ್ದಾರೆ. 

ಕಾರ್ಯಾಗಾರದ ಮೊದಲ ಅಧಿವೇಷನದಲ್ಲಿ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ರಿಷಿ ಆನಂದ್ ಅವರು ಮಾತನಾಡಲಿದ್ದಾರೆ. ‘ಜಿ.ಎಸ್.ಟಿ. 2.0’ ಕುರಿತು ಸಿಜಿಎಸ್‌ಟಿ ವಿಜಯಪುರ ವಿಭಾಗದ ಸಹಾಯಕ ಆಯುಕ್ತರಾದ ಶ್ರೀ ವಾಯ್.ಸಿ. ಪೂಜಾರಿ, ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸಂಪತ್ ಕುಮಾರ್ ಗುಣಾರಿ, ‘ಕೃಷಿ ತೋಟಗಾರಿಕಾ ವಲಯದ ಯೋಜನೆಗಳ ಅನುಷ್ಠಾನ’ ಕುರಿತು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಶಿವನಗೌಡ ಎಸ್. ಪಾಟೀಲ್ ಮಾಹಿತಿ ಹಂಚಿಕೊಳ್ಳಲಿದ್ದಾರೆ. 

ಕಾರ್ಯಾಗಾರದ ಎರಡನೇ ಅಧಿವೇಶನದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ, ಭಾರತೀಯ ಸಾಕ್ಷ್ಯಾ ಅಧಿನಿಯಮ 2023 ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಲಕ್ಷ್ಮಣ ನಿಂಬರಗಿ, ‘ಹಣಕಾಸು ಸೇರ್ಪಡೆ ಪರಿಪೂರ್ಣತೆ ಅಭಿಯಾನ’ ಕುರಿತು ಕೆನರಾ ಬ್ಯಾಂಕ್ ಮತ್ತು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕರಾದ ಶ್ರೀ ಬಿ. ಸಿದ್ದಯ್ಯ, ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಹಾಗೂ ಪೋಷಣಾ ಅಭಿಯಾನ’ದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀ ಕೆ.ಕೆ. ಚವ್ಹಾಣ್ ಅವರು ಮಾಹಿತಿ ಹಂಚಿಕೊಳ್ಳಲಿದ್ದಾರೆ. 

24-09-2025 EE DIVASA KANNADA DAILY NEWS PAPER

Monday, September 22, 2025

23-09-2025 EE DIVASA KANNADA DAILY NEWS PAPER

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರಕ್ಕೆ ಮನವರಿಕೆ ಮಾಡಿಸುವೆ ಜಿಲ್ಲೆಗೆ ನನ್ನ ಕೊಡುಗೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿದೆ ಸಾಕ್ಷಿ 100 ಕೋಟಿ ರೂ. ಕೊಡಿ ಸಾಕು- ಸಚಿವ ಶಿವಾನಂದ ಪಾಟೀಲ

ವಿಜಯಪುರ : ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಭರವಸೆ ನೀಡಿದರು.

ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಡೆದಿರುವ ಸರ್ಕಾರ ಘೋಷಿಸಿರುವ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಡೆದಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಸಚಿವರು, ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿರುವ ಬಂಥನಾಳ ಶಿವಯೋಗಿಗಳ ಹೆಸರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ಕನಸಿದೆ. ಇದಕ್ಕಾಗಿ ನಾನು ಆರೋಗ್ಯ ಸಚಿವನಾಗಿದ್ದ ಸಂದರ್ಭದಲ್ಲಿ ಸರ್ಕಾರಿ ಕಾಲೇಜು ಆರಂಭಕ್ಕೆ ಬೇಕಿರುವ ಎಲ್ಲ ಸೌಲಭ್ಯ ಕಲ್ಪಿಸಿದ್ದೇನೆ ಎಂದು ವಿವರಿಸಿದರು.

ಹೊಸದಾಗಿ ಸರ್ಕಾರಿ ಕಾಲೇಜು ಸ್ಥಾಪನೆಗೆ ಕನಿಷ್ಟ 500 ಕೋಟಿ ರೂ. ಬೇಕು‌. ಆದರೆ ವಿಜಯಪುರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಾನು ಸಚಿವನಾಗಿ ಅಗತ್ಯ ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಸರ್ಕಾರ ಆರಂಭದಲ್ಲಿ 50 ಕೋಟಿ ರೂ.ನಂತೆ ಕೇವಲ 100 ಕೋಟಿ ರೂ‌. ಅನುದಾನ ನೀಡಿದರೂ ಸಾಕು ಎಂದರು.

ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ 2013 ರಿಂದಲೂ ನಾನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಪ್ರಯತ್ನಿಸುತ್ತಿದ್ದೇನೆ. ಆಗ ಮುಖ್ಯಮಂತ್ರಿ ಆಗಿದ್ದ ಸಿದ್ಧರಾಮಯ್ಯ ಹಾಗೂ ಈ ಹಿಂದೆ ಅಧಿಕಾರದಲ್ಲಿದ್ದ ಬಸವರಾಜ ಬೊಮ್ಮಾಯಿ ಇಬ್ಬರೂ ಈ ವಿಷಯವಾಗಿ ನನಗೆ ಸದನದಲ್ಲೂ ಭರವಸೆ ನೀಡಿದ್ದರು. ಆದರೂ ರಾಜ್ಯದಲ್ಲಿ ಮಾತ್ರವಲ್ಲ ದೇಶದ ಯಾವುದೇ ರಾಜ್ಯದಲ್ಲಿ ಇಲ್ಲದ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಅನುಷ್ಠಾನ ವಿಜಯಪುರ ಜಿಲ್ಲೆಗೆ ಮಾತ್ರ ಏಕೆ ಎಂಬುದು ನನಗೂ ಅರ್ಥವಾಗುತ್ತಿಲ್ಲ ಎಂದರು‌

ವಿಜಯಪುರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸುಪರ್ ಸ್ಪೆಶಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಎಂ.ಆರ್.ಐ. ಸ್ಕ್ಯಾನಿಂಗ್ ಸೆಂಟರ್, ರಾಜ್ಯದಲ್ಲೇ ಎಲ್ಲೂ ಇಲ್ಲದ 150 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಬಿಎಸ್ಸಿ ನರ್ಸಿಂಗ್ ಹಾಗೂ ಡಿಪ್ಲೊಮಾ ನರ್ಸಿಂಗ್ ಕಾಲೇಜುಗಳು, 150  ಎಕರೆ ವಿಸ್ತೀರ್ಣದ ಸರ್ಕಾರಿ ಆಸ್ಪತ್ರೆ ಆಸ್ತಿ ಸಂರಕ್ಷಣೆಗಾಗಿ ಕಾಂಪೌಂಡ್ ನಿರ್ಮಿಸಿದ್ದೇನೆ ಎಂದು ವಿವರಿಸಿದರು.

ವಿಜಯಪುರ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಐತಿಹಾಸಿಕ ತಾಜ್ ಬಾವಡಿಯಿಂದ ನೀರಿನ ಸೌಲಭ್ಯ ಕಲ್ಪಿಸಿದ್ದು ಹಾಗೂ  ರಾಜ್ಯದಲ್ಲಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಆಯುಷ್ಯ ಆಸ್ಪತ್ರೆ ನಿರ್ಮಿಸಿದ್ದು ನನ್ನ ಅವಧಿಯಲ್ಲೇ ಎಂದು ವಿವರಿಸಿದರು.

ಬೆಳಗಾವಿ ಕಲಬುರಗಿ ವಿಭಾಗದ ಮಧ್ಯದಲ್ಲಿ ವಿಜಯಪುರದಲ್ಲಿ ಆರೋಗ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕರ ಹುದ್ದೆ ಸೃಷ್ಟಿಸಿದ್ದೇ ನಾನು. ನನ್ನ ಅವಧಿಯಲ್ಲಿ ನಿರ್ಮಿಸಿದ ಸುಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ಈಚೆಗೆ ನಾನೇ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ 200 ಹುದ್ದೆ ಮಂಜೂರು ಮಾಡಿಸಿದ್ದೇನೆ ಎನ್ನುವ ಮೂಲಕ ಸಚಿವನಾಗಿ ಮಾಡಿದ ಕೆಲಸಗಳು ಎಂದು ಜಿಲ್ಲೆಗೆ ಶಿವಾನಂದ ಪಾಟೀಲ ಅವರ ಕೊಡುಗೆ ಏನು ಎಂದು ಪ್ರಶ್ನಿಸುವವರಿಗೆ ಕಣ್ಣ ಮುಂದಿರುವ ದಾಖಲೆಗಳನ್ನು ಬಿಚ್ಚಿಟ್ಟರು.

ನಾನು ಬಸವವನಬಾಗೇವಾಡಿ ಕ್ಷೇತ್ರದಲ್ಲಿ ಸರ್ಕಾರಿ ಪದವಿ ಕಾಲೇಜು ಆರಂಭಿಸಿದ ಬಳಿಕವೇ ಜಿಲ್ಲಾ ಕೇಂದ್ರ ವಿಜಯಪುರದಲ್ಲಿ ಪದವಿ ಕಾಲೇಜು ಸ್ಥಾಪನೆ ಆಗಿದ್ದು. ನಮ್ಮ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾತ್ರವಲ್ಲ ಸರ್ಕಾರಿ ಎಂಜಿನಿಯರಿಂಗ್ ಹಾಗೂ ಕಾನೂನು ಕಾಲೇಜುಗಳಂಥ ಶೈಕ್ಷಣಿಕ ಸೌಲಭ್ಯಗಳೂ ಇಲ್ಲವಾಗಿವೆ. 

ಏಮ್ಸ್ ತಂದರೆ ಸಂಸದ ಜಿಗಜಿಣಗಿಗೆ ಸನ್ಮಾನ

ಬಡ ಮಕ್ಕಳು ವೈದ್ಯಕೀಯ ಶಿಕ್ಷಣ ಪಡೆಯುವಂತಾಗಲು

ವಿಜಯಪುರ ಜಿಲ್ಲೆಗೆ ಏಮ್ಸ್ ಕಾಲೇಜು ಮಂಜೂರು ಮಾಡಿಸಿದರೆ ಸಂಸದ ರಮೇಶ ಜಿಗಜಿಣಗಿ ಅವರನ್ನು ಸನ್ಮಾನ ಮಾಡುತ್ತೇನೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

ಕುರಿತು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರೊಂದಿಗೆ ಮಾತನಾಡಿದ್ದೆ. ಆದರೆ ಧಾರವಾಡ, ರಾಯಚೂರು ಭಾಗದವರು ಪ್ರಯತ್ನ ಮಾಡಿದರು‌. ಈಗಲೂ ಕಾಲ ಮಿಂಚಿಲ್ಲ, ಸಂಸದ ಜಿಗಜಿಣಗಿ, ಜಿಲ್ಲೆಯ ಸಚಿವರು, ಶಾಸಕರು ಪಕ್ಷಾತೀತವಾಗಿ ಏಮ್ಸ್ ಕಾಲೇಜಿಗೆ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು.

ಧರಣಿಯಲ್ಲಿ ಪ್ರಮುಖರಾದ ಅರವಿಂದ ಕುಲಕರ್ಣಿ, ಪೂಜ್ಯ ಸಂಗನಬಸವ ಶ್ರೀಗಳು, ಅನೀಲ ಹೊಸಮನಿ, ಅಕ್ರಮ ಮಾಶ್ಯಾಳಕರ, ಅಪ್ಪಾಸಾಬ ಯರನಾಳ, ಡಾ. ಗೋಪಾಲ ದಾಬಡೆ, ಶ್ರೀನಾಥ ಪೂಜಾರಿ, ಬೋಗೇಶ ಸೋಲಾಪೂರ, ಮಲ್ಲಿಕಾರ್ಜುನ ಬಟಗಿ, ಪ್ರಭುಗೌಡ ಪಾಟೀಲ, ಲಕ್ಷö್ಮಣ ಹಂದ್ರಾಳ, ಸುರೇಶ ಬಿಜಾಪೂರ, ಭರತಕುಮಾರ ಎಚ್.ಟಿ., ಮಲ್ಲಿಕಾರ್ಜುನ ಎಸ್.ಟಿ., ಸಂಜು ಕಂಬಾಗಿ, ಸಿದ್ದಲಿಂಗ ಬಾಗೇವಾಡಿ, ಗಿರೀಶ ಕಲಘಟಗಿ, ಲಕ್ಷö್ಮಣ ಕಂಬಾಗಿ, ವಿ.ಎ. ಪಾಟೀಲ, ಚನ್ನು ಕಟ್ಟಿಮನಿ, ಬಾಳು ಜೇವೂರ, ಗೀತಾ ಎಚ್., ಸಿದ್ರಾಮ ಹಿರೇಮಠ, ಜಗದೀಶ ಸೂರ್ಯವಂಶಿ, ದಸ್ತಗೀರ ಉಕ್ಕಲಿ, ವಿದ್ಯಾವತಿ ಅಂಕಲಗಿ, ಗೀತಾ ಕಟ್ಟಿ, ಗೀತಾ ಪಾಟೀಲ, ಕಾಮಿನಿ ಕಸಬೆ, ಶೋಭಾ ವಾಲೀಕಾರ, ಶಿವಬಾಳಮ್ಮ ಕೊಂಡಗೂಳಿ, ಸೋಮು ರಣದೇವ ಹಾಗೂ ಅಖಂಡ ಕರ್ನಾಟಕ ರೈತ ಸಂಘಟನೆ ಮುಖಂಡರಾದ ಬಾಪುಗೌಡ ಲಿಂಗದಳ್ಳಿ, ವಿಠ್ಠಲ ಬಿರಾದಾರ, ಗುರುಲಿಂಗಪ್ಪ ಪಡಸಲಗಿ, ರಾಜೇಸಾಬ ವಾಲೀಕಾರ ಮುಂತಾದವರು ಭಾಗವಹಿಸಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, September 20, 2025

ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಧರಣಿ 3 ನೇ ದಿನಕ್ಕೆ


ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಧರಣಿ ನಡೆಸುತ್ತಿರುವುದು.

ವಿಜಯಪುರ: ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವಂತೆ ಆಗ್ರಹಿಸಿ ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಹೋರಾಟ ಸಮಿತಿ ಪದಾಧಿಕಾರಿಗಳು ಹಮ್ಮಿಕೊಂಡ ಧರಣಿ ಶನಿವಾರ 3 ನೇ ದಿನ ಪೂರೈಸಿ, ಭಾನುವಾರ 4 ನೇ ದಿನಕ್ಕೆ ಕಾಲಿಟ್ಟಿದೆ.

ಈ ಸಂದರ್ಭ ಧರಣಿಗೆ ವಿವಿಧ ಸಂಘಟನೆಗಳು ಹಾಗೂ ಛಾಯಾಗ್ರಾಹಕರ ಸಂಘದವರು ಬೆಂಬಲ ವ್ಯಕ್ತಪಡಿಸಿದರು.

ಛಾಯಾಗ್ರಾಹಕ ಸಂಘದ ಜಿಲ್ಲಾಧ್ಯಕ್ಷ ರಮೇಶ ಚವ್ಹಾಣ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಸಚಿವದ್ವಯರು ರಾಜ್ಯ ಕಂಡ ಪ್ರಭಾವಿ ನಾಯಕರುಗಳಾಗಿದ್ದು, ನಮ್ಮ ಜಿಲ್ಲೆಯು ಅತಿ ಹಿಂದುಳಿದ ಜಿಲ್ಲೆ ಎಂಬುದು ಗೊತ್ತಿದೆ. ಇದಕ್ಕೆ ಕೂಡಲೇ ಸ್ಪಂದಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು. ನಾವು ಜಿಲ್ಲೆಯಲ್ಲಿ ಏನೇ ಯೋಜನೆ ಅಥವಾ ಯಾವುದೇ ಸೌಲಭ್ಯಗಳು ಪಡೆಯಬೇಕು ಎಂದರೆ ಹೋರಾಟ, ಪ್ರತಿಭಟನೆ ಮಾಡಲೇಬೇಕಾದಂತಹ ಅನಿವಾರ್ಯವಾಗಿದೆ ಎಂದರು.

ಅನಿರ್ಧಿಷ್ಟ ಧರಣಿಯನು ಉದ್ದೇಶಿಸಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಎಮ್.ಎಮ್. ಶೇಖ ಮಾತನಾಡಿ, ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವವರೆಗೆ ನಾವು ಹೋರಾಟದಶ ಜೊತೆ ಇರುತ್ತೇವೆ, ಯಾವುದೇ ಕಾರಣಕ್ಕೂ ಖಾಸಗೀಯವರಿಗೆ ಬಿಟ್ಟುಕೊಡಲು ಬಿಡುವುದಿಲ್ಲ ಎಂದರು.

ನಿವೃತ್ತ ಉಪನ್ಯಾಸಕ ಎಸ್.ಆರ್. ಟಿಂಗ್ರಿ, ಮುಖಂಡರಾದ ಡಾ. ಗುರಿಕಾರ, ಪರಶುರಾಮ ಬಂದಪಟೆ, ವಿಶ್ವನಾಥ ಅಲಕುಂಟೆ, ಬಸವರಾಜ ಬಾಗೇವಾಡಿ, ದಾವಲಸಾಬ ಸೊಲ್ಲಾಪುರ, ಕರವೇ ಜಿಲ್ಲಾಧ್ಯಕ್ಷ ಗಿರೀಶ ಕಲಘಟಗಿ, ಸುಶಿಲಾ ಮಿಣಜಗಿ, ಜ್ಯೋತಿ ಮಿಣಜಗಿ, ರೈತ ಸಂಘಟನೆಯ ನೀಲಾಂಬಿಕಾ ಬಿರಾದಾರ, ಅರವಿಂದ ಕುಲಕರ್ಣಿ, ಅಕ್ರಂ ಮಾಶಾಳಕರ, ಮಲ್ಲಿಕಾರ್ಜುನ ಬಟಗಿ, ಬಾಬುರಾವ್ ಬೀರಬ್ಬಿ, ಬೋಗೇಶ ಸೊಲ್ಲಾಪುರ, ಅನಿಲ ಹೊಸಮನಿ, ಭರತಕುಮಾರ ಎಚ್.ಟಿ., ಸಿದ್ದಲಿಂಗ ಬಾಗೇವಾಡಿ, ಗೀತಾ ಎಚ್., ದಸ್ತಗಿರಿ ಉಕ್ಕಲಿ, ಸಿದ್ರಾಮ ಹಿರೇಮಠ, ಮಹಾದೇವಿ ಧರ್ಮಶೆಟ್ಟಿ, ಜಯದೇವ ಸರ‍್ಯವಂಶಿ, ಸುರೇಶ ಬಿಜಾಪುರ, ಶಮಸೊದ್ದಿನ ಬಾವಿಕಟ್ಟಿ, ಕಾವೇರಿ ರಜಪುತ, ಪ್ರಭುಗೌಡ ಪಾಟೀಲ, ಸತೀಶ ಕಲಾಲ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

21-09-2025 EE DIVASA KANNADA DAILY NEWS PAPER

Friday, September 19, 2025

20-09-2025 EE DIVASA KANNADA DAILY NEWS PAPER

ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಪ್ರಯತ್ನಿಸಿ- ಮಾಧ್ಯಮದವರಿಗೆ ಮುಖ್ಯಮಂತ್ರಿಗಳ ಸಲಹೆ- ಎಲ್ಲಾ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಲಾಗುವುದು - ಮುಖ್ಯಮಂತ್ರಿ ಸಿದ್ದರಾಮಯ್ಯ

 ವಿಜಯಪುರ : ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕು. ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಬೇಕು. ಹಾಗೆಯೇ ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

 ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023 ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು ಮಾಧ್ಯಮಗಳು ಸತ್ಯ ಅಸತ್ಯದ ಶೋಧನೆ ನಡೆಸಬೇಕು. ವರದಿಗಳಾಗಲಿ ಅಥವಾ ಅಭಿಪ್ರಾಯಗಳಾಗಲಿ ವಸ್ತುಸ್ಥಿತಿಯಿಂದ ಕೂಡಿರಬೇಕು. ಕಲ್ಪನೆಯ ವರದಿ ಆಗಬಾರದು ಎಂದು ತಿಳಿಸಿದರು.

 ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಊಹಾ ಪತ್ರಿಕೋದ್ಯಮ ಜೋತುಬೀಳುತ್ತಿವೆ. ಅದು ಆಗಬಾರದು. ಸತ್ಯ ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು ಎಂದು ತಿಳಿಸಿದರು.

 ಯಾವುದೇ ಕಾರಣಕ್ಕೂ ಒಬ್ಬ ವ್ಯಕ್ತಿಯು ತಪ್ಪು ಮಾಡದಿದ್ದರೂ, ಸುಮ್ಮನೆ ಆರೋಪಗಳನ್ನು ಮಾಡಬಾರದು. ಸರ್ಕಾರದಲ್ಲಿ ಎಲ್ಲವೂ ಸರಿಯಾಗಿರುವುದಿಲ್ಲ ನಿಜ, ಆದರೆ ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.

ಅಸಮಾನತೆ ಹೋದರೆ ಮಾತ್ರ ಜಾತಿ ವ್ಯವಸ್ಥೆ ನಿಲ್ಲುವುದು :ಸಮಾಜದಲ್ಲಿ ಜಾತಿ ವ್ಯವಸ್ಥೆ, ಅಸಮಾನತೆ ಇದೆ. ಸಾಮಾಜಿಕ ಅಸಮಾನತೆ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಬಹುಸಂಖ್ಯಾತರಾಗಿರುವ ಜನ ಅಕ್ಷರ ಸಂಸ್ಕೃತಿಯಿAದ ವಂಚಿತರಾಗಿರುವುದು ಅಸಮಾನತೆಗೆ ಪ್ರಮುಖ ಕಾರಣ. ಇದನ್ನು ನೇರವಾಗಿ ಜನರಿಗೆ ತಿಳಿಸುವ ಪ್ರಯತ್ನವಾಗಬೇಕು. ಯಾವುದೇ ರಾಜಿ ಇಲ್ಲದೆ, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಕ್ಕಿದೆಯೇ, ಇಲ್ಲವೇ, ಸಮಬಾಳು, ಸಮಪಾಲು ಅನುಷ್ಠಾನಕ್ಕೆ ಬಂದಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮ ಮಾಡಬೇಕು ಎಂದರು

ದಸರಾ- ಸಾಂಸ್ಕೃತಿಕ ನಾಡ ಹಬ್ಬ: ಇತ್ತೀಚಿಗೆ ಟಿವಿ ಚಾನೆಲ್‌ಗಳು ಇನ್ನೊಬ್ಬರ ಹೇಳಿಕೆ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿ ಸುದ್ದಿ ಮಾಡುತ್ತವೆ. ಅದರಲ್ಲಿ ಅನೇಕ ವಿಚಾರಗಳು ಸಮಾಜಕ್ಕೆ ಸಂಬAಧವೇ ಪಟ್ಟಿರುವುದಿಲ್ಲ. ಸಮಾಜಕ್ಕೆ ಸಂಬAಧಪಟ್ಟAತಹ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ. ಭಾನು ಮುಷ್ತಾಕ್ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ್ ಸಹ ಇದನ್ನು ವಜಾಗೊಳಿಸಿದೆ. ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡ ಹಬ್ಬವಾಗಿದ್ದು, ಸಾಂಸ್ಕೃತಿಕ ವಿಚಾರವಾಗಿದೆ. ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಮಾಜದಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ನಿರ್ಮಾಣ ಮಾಡಬೇಕು. ಅಂಬೇಡ್ಕರ್ ಅವರು ಸ್ವಾತಂತ್ರ‍್ಯ ದೊರೆತ ಸಂದರ್ಭದಲ್ಲಿ ನಾವು ವೈರುಧ್ಯಗಳಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಮಾಜದ ದುರ್ಬಲ ವರ್ಗದವರ ಅಭಿವೃದ್ಧಿಯಾದರೆ ಮಾತ್ರ ನಿಜವಾದ ಅಭಿವೃದ್ಧಿ ಎಂದು ಹೇಳಿದ್ದರು. ಆ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಬೇಕು. ದುರ್ಬಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ಸಮ ಸಮಾಜದ ಕನಸು ಕಂಡ ಪರ್ತಕರ್ತ - ರಘುರಾಮ ಶೆಟ್ಟಿ :ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು. ಬದ್ದತೆಯುಳ್ಳ, ಯಾವುದೇ ಪ್ರಶಸ್ತಿ, ಪ್ರಚಾರ ಬಯಸದ ವ್ಯಕ್ತಿ. ಮಾಧ್ಯಮ ರಂಗವು ಓದುಗರನ್ನೇ ಇಡಯರನ್ನಾಗಿ ಅವಲಂಬಿಸಬೇಕು ಹಾಗಾದಾಗ ಮಾತ್ರ ನಿಷ್ಠುರ ಮತ್ತು ವಸ್ತುನಿಷ್ಠ, ಜನಪರ ಪತ್ರಿಕೋದ್ಯಮ ಸಾಧ್ಯ ಎಂದು ಬಲವಾಗಿ ನಂಬಿ ಆ ನಿಟ್ಟಿನಲ್ಲಿ ಕನ್ನಡ ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯದ ಸ್ಪಷ್ಟ ಧ್ವನಿಯಾಗಿ ಹೊಸ ಮಾರ್ಗದಲ್ಲಿ ನೆಡೆದ ವ್ಯಕ್ತಿ ಎಂದು ರಘುರಾಮ ಶೆಟ್ಟಿಯವರನ್ನು ಸ್ಮರಿಸಿದರು.

ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು :ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು. ಸ್ವಾತಂತ್ರ‍್ಯ ಪೂರ್ವದ ಮಾಧ್ಯಮ ರಂಗಕ್ಕೂ ಇಂದಿನ ಮಾಧ್ಯಮ ರಂಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಸ್ವಾತಂತ್ರ‍್ಯೋತ್ತರ ಪತ್ರಿಕೋದ್ಯಮ ಶ್ರೀಮಂತರ ಕೈಗಳಿಗೆ ಸಿಕ್ಕಿಹಾಕಿಕೊಂಡಿದೆ. ಪತ್ರಕರ್ತರು ಇದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕಿದೆ ಎಂದರು.

ಮಹಿಳೆಯರಿಗೂ ಸಮಾನತೆ :ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಹೇಗೆ ಬೇರು ಬಿಟ್ಟಿದೆ ಎಂದರೆ ಐದಾರು ವರ್ಷಗಳಲ್ಲಿ, ಹತ್ತಿಪ್ಪತ್ತು ವರ್ಷಗಳಲ್ಲಿ ಹೋಗುವಂತದ್ದಲ್ಲ. ಆದರೆ ಅಸಮಾನತೆಯ ಮಟ್ಟವನ್ನು ಕಡಿಮೆ ಮಾಡಿ ಸಮ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮಹಿಳೆಯರಿಗೂ ಸಮಾನತೆ ಬರಬೇಕು ಎನ್ನುವ ನಿಟ್ಟಿನಲ್ಲಿ ಮಹಿಳಾ ಸಬಲೀಕರಣಕ್ಕೂ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಲ್ಲರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ , ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಎಂದರು.

ಶಾಲಾ - ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ :ಬಹಳಷ್ಟು ಜನರು ಸಂವಿಧಾನವನ್ನೇ ಓದಿರುವುದಿಲ್ಲ ಇದೇ ಕಾರಣಕ್ಕೆ ನಮ್ಮ ಸರ್ಕಾರ, ಶಾಲಾ - ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವಂತಹ ಕಾರ್ಯಕ್ರಮ ಹಮ್ಮಿಕೊಂಡಿತು ಸಂವಿಧಾನದ ಕರ್ತವ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಂಡಲ್ಲಿ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಸಹಾಯಕವಾಗುತ್ತದೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡಿದರೆ ಸಮಾಜ, ನಾಡು ದೇಶ ಎಲ್ಲಕ್ಕೂ ಒಳ್ಳೆಯದಾಗುತ್ತದೆ ಎಂದರು.

 ಸುಮಾರು 2017ರಿಂದ ಬಾಕಿ ಇದ್ದ ಪ್ರಶಸ್ತಿಗಳನ್ನು ಇಂದು ಪ್ರದಾನ ಮಾಡಲಾಗಿದೆ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಿದರೆ ಉತ್ತಮ. ಅನೇಕ ವರ್ಷಗಳ ಪ್ರಶಸ್ತಿಗಳನ್ನು ಒಟ್ಟಿಗೆ ನೀಡುವುದು ಒಳ್ಳೆಯ ಪದ್ಧತಿಯಲ್ಲ ಎನ್ನುವ ಅಭಿಪ್ರಾಯ ವ್ಯಕ್ತಪಡಿಸುತ್ತಾ ಇನ್ನು ಮುಂದೆ ಯಾವುದೇ ಪ್ರಶಸ್ತಿಗಳಿರಲಿ ಆಯಾ ವರ್ಷವೇ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ಎಂ.ನಿAಬಾಳ್ಕರ್ ಅವರು ಪ್ರಾಸ್ತಾವಿಕ ಮಾತನಾಡುತ್ತಾ, ಪ್ರಸಕ್ತ ವರ್ಷ ವಡ್ಡರ್ಸೆ ರಘುರಾಮಶೆಟ್ಟಿ ಅವರ ಸ್ಮರಣಾರ್ಥವಾಗಿ 2024ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮಶೆಟ್ಟಿ “ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ವಿಶೇಷ ಪ್ರಶಸ್ತಿ ಹಾಗೂ 2017 ರಿಂದ 2023ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರದಾನ ಮಾಡಲಾಗುತ್ತಿದೆ ಎಂದರು.

ಸರ್ಕಾರವು 2017 ರಿಂದ ಬಾಕಿ ಇದ್ದ ಪರಿಸರ ಮತ್ತು ಅಭಿವೃದ್ಧಿ ಪ್ರಶಸ್ತಿ ಹಾಗೂ 5 ವರ್ಷಗಳಿಂದ ಬಾಕಿ ಇದ್ದ ಮೊಹರೆ ಹಣಮಂತರಾಯ ಹಾಗೂ ಟಿಯೇಸ್ಸಾರ್ ಪ್ರಶಸ್ತಿ ನೀಡಲು ಸಮಿತಿಯನ್ನು ರಚಿಸಿ, ಪ್ರಶಸ್ತಿ ನೀಡುವ ಮೂಲಕ ಪತ್ರಕರ್ತರಿಗೆೆ ಶಬ್ಬಾಷ್ ಎಂದು ಸರ್ಕಾರ ಹೇಳಿದೆ. ಅಲ್ಲದೆ ಸರ್ಕಾರವು ಕಳೆದ ಎರಡು ವರ್ಷಗಳಿಂದ ಪತ್ರಕರ್ತರಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್, ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ. ಸಂಕಷ್ಟದಲ್ಲಿರುವ ಪತ್ರಕರ್ತರ ಮಾಸಾಶನ, ಕುಟುಂಬ ಮಾಸಾಶನವನ್ನು ಸಹ ನೀಡಿದೆ. ಪತ್ರಕರ್ತರಿಗಾಗಿ ಮೀಡಿಯಾ ಫೆಸ್ಟ್, ಕಾರ್ಯಾಗಾರಗಳು ಇಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಕ್ಯಾಮೆರಾ, ಲ್ಯಾಪ್ ಟಾಪ್ ಹಾಗೂ ಇನ್ನಿತರ ಉಪಕರಣಗಳನ್ನೊಳಗೊಂಡ ಮಾಧ್ಯಮ ಕಿಟ್‌ಗಳನ್ನು ಸಹ ವಿತರಿಸುವುದರ ಮೂಲಕ ಸರ್ಕಾರ ಪತ್ರಕರ್ತರಿಗೆ ಶಬ್ಬಾಷ್ ಹೇಳುವಂತಹ ಕೆಲಸ ಮಾಡುತ್ತಿದೆ.

 ಕನ್ನಡ ಚಿತ್ರರಂಗಕ್ಕೆ ಶಕ್ತಿ ತುಂಬಲು ಕಲಾವಿದರಿಗೂ ಅನುಕೂಲ ಕಲ್ಪಿಸಿಕೊಟ್ಟಿದೆ. ಚಿತ್ರರಂಗದಲ್ಲಿ 25 ವರ್ಷಗಳ ಸೇವೆ ಪೂರೈಸಿದ ಮಹಿಳಾ ಕಲಾವಿದರಿಗೆ ಪ್ರಶಸ್ತಿ ನೀಡಲು ಹಿರಿಯ ನಟಿ, ಬಿ.ಸರೋಜದೇವಿ ಅವರ ಹೆಸರಿನಲ್ಲಿ ಜೀವಮಾನ ಸಾಧನೆಗಾಗಿ ಅಭಿನಯ ಸರಸ್ವತಿ ಪ್ರಶಸ್ತಿಯನ್ನು ಪ್ರದಾನ ಮಾಡಲು ಸರ್ಕಾರವು ಆದೇಶ ಹೊರಡಿಸಿದೆ. ಈ ಪ್ರಶಸ್ತಿಯು 2025 ನೇ ಸಾಲಿನಿಂದಲೇ ನೀಡಲಾಗುವುದು. ಬಡಜನರು ಚಲನಚಿತ್ರ ನೋಡಲು ಅನುಕೂಲವಾಗುವಂತೆ ಟಿಕೆಟ್ ದರವನ್ನು ರೂ.200 ಗಳಿಗೆ ನಿಗಧಿ ಮಾಡಿದೆ. ಮೈಸೂರಿನಲ್ಲಿ 160 ಎಕರೆ ಪ್ರದೇಶದಲ್ಲಿ ಫಿಲಂಸಿಟಿ ನಿರ್ಮಿಸಲು ಕ್ರಮವಹಿಸಿದೆ. ಸರ್ಕಾರ ತಾವು ಮಾಡಿರುವ ಕೆಲಸಕ್ಕೆ ಪುರಸ್ಕಾರ ನೀಡಿ ಶ್ಲಾಘಿಸುತ್ತಿದೆ. ಪತ್ರಕರ್ತರ ಹಿತಕ್ಕಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.

 ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ಡಿ.ಉಮಾಪತಿ ಅವರು ಮಾತನಾಡುತ್ತಾ, ಸಮಾಜದ ಅಭಿವೃದ್ಧಿಯಾಗಬೇಕೆಂದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತುಗಳು ತಲುಪಬೇಕು. ಇದು ಸರ್ಕಾರ, ಸಮಾಜ ಹಾಗೂ ಪತ್ರಿಕೆಗಳ ಸಾಮೂಹಿಕ ಜವಾಬ್ದಾರಿಯಾಗಿದೆ. ಜನಪರ ಆಶಯಗಳನ್ನಿಟ್ಟುಕೊಂಡು ಪತ್ರಿಕೆಗಳು, ಮಾಧ್ಯಮಗಳು ಜನಪರ ಆಶಯಗಳನ್ನಿಟುಕೊಂಡು ಕೆಲಸ ನಿರ್ವಹಿಸಬೇಕು. ದೀನ ದಲಿತರ, ದಮನಿತರ ಧ್ವನಿಯಾಗಬೇಕು ಎಂದರು.

 ವಡ್ಡರ್ಸೆ ರಘುರಾಮಶೆಟ್ಟಿ ಅವರು “ಮುಂಗಾರು” ಪತ್ರಿಕೆಯನ್ನು ಹೊರತಂದು ಶೋಷಿತರ ಧ್ವನಿಗಳಿಗೆ ಸ್ಪಂದಿಸಿ ಸಾಮಾಜಿಕ ಚಿಂತನೆಗಳು ಹಾಗೂ ತಮ್ಮ ಬರಹಗಳ ಮೂಲಕ ಗಟ್ಟಿ ಪತ್ರಿಕೋದ್ಯಮವನ್ನು ಕಟ್ಟಿದವರು. ಜನರ ದನಿಯಾಗಿ ಹೊರಹೊಮ್ಮಿದ ಅವರ ಪತ್ರಿಕೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಎತ್ತು ಹಿಡಿಯುವಲ್ಲಿ ಯಶಸ್ವಿಯಾಯಿತು. ಆದರೆ ಈಗಿನ ಕೆಲವು ಮಾಧ್ಯಮಗಳು ಸತ್ಯ, ನ್ಯಾಯವನ್ನು ಮರೆಮಾಚಿ ವರದಿಗಳನ್ನು ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ. ಯಾವುದೇ ಮಾಧ್ಯಮಗಳಿರಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

 ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ.ಕಾವೇರಿ ಅವರು ಸ್ವಾಗತ ಕೋರಿದರು.

 ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ 2017ನೇ ಸಾಲಿಗೆ, ಶ್ರೀಮತಿ ವಿಜಯಲಕ್ಷ್ಮಿ ಶಿಬರೂರು, 2018 ನೇ ಸಾಲಿಗೆ ಶ್ರೀ ಬಿ.ಟಿ.ಎಂ. ರಾಜೀವ್, 2019ನೇ ಸಾಲಿಗೆ ಶ್ರೀ ವಿನೋದ ಕುಮಾರ್ ನಾಯ್ಕ್, 2020ನೇ ಸಾಲಿಗೆ ಶ್ರೀ ಮಾಲತೇಶ ಅಂಗೂರ, 2021ನೇ ಸಾಲಿಗೆ ಶ್ರೀ ಸುಧೀರ್ ಶೆಟ್ಟಿ, 2022ನೇ ಸಾಲಿಗೆ ಶ್ರೀ ಮಲ್ಲಿಕಾರ್ಜುನ ಹೊಸಪಾಳ್ಯ ಹಾಗೂ 2023ನೇ ಸಾಲಿಗೆ ಆರ್. ಮಂಜುನಾಥ್ ಅವರು ಭಾಜನರಾಗಿದ್ದು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.


ಅಭಿವೃದ್ಧಿ ಪತ್ರಿಕೋದ್ಯಮಕ್ಕೆ 2017ನೇ ಸಾಲಿಗೆ ಶ್ರೀ ಚೀ.ಜ. ರಾಜೀವ್, 2018ನೇ ಸಾಲಿಗೆ ಶ್ರೀ ದೇವಯ್ಯ ಗುತ್ತೇದಾರ್, 2019ನೇ ಸಾಲಿಗೆ ಶ್ರೀ ಗಿರೀಶ್ ಲಿಂಗಣ್ಣ, 2020ನೇ ಸಾಲಿಗೆ ಶ್ರೀ ಯೋಗೀಶ್ ಎಂ.ಎನ್., 2021ನೇ ಸಾಲಿಗೆ ಶ್ರೀ ನೌಶಾದ್ ಬಿಜಾಪುರ, 2022ನೇ ಸಾಲಿಗೆ ಶ್ರೀ ಸತೀಶ್ ಜಿ.ಟಿ ಮತ್ತು 2023ನೇ ಸಾಲಿಗೆ ಶ್ರೀ ಗಿರೀಶ್ ಬಾಬು ಅವರು ಭಾಜನರಾಗಿದ್ದು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

2024 ನೇ ಕ್ಯಾಲೆಂಡರ್ ವರ್ಷದ ಶ್ರೀ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಯನ್ನು ಹಿರಿಯ ಪತ್ರಕರ್ತರಾದ ಡಿ.ಉಮಾಪತಿ ಅವರಿಗೆ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವರಾದ ಬಿ.ಎಸ್.ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹಮದ್, ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಕಾನೂನು ಆಯೋಗದ ಅಧ್ಯಕ್ಷರು ಮತ್ತು 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾದ ಅಶೋಕ್ ಬಿ ಹಿಂಚಿಗೇರಿ, ವಿಧಾನ ಪರಿಷತ್ ಸದಸ್ಯರು ಹಾಗೂ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರೂ ಆದ ಕೆ.ಶಿವಕುಮಾರ್, ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷಾ ಖಾನಂ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಸಾಧು ಕೋಕಿಲ, ಶ್ರೀ ಕಂಠೀರವ ಸ್ಟುಡಿಯೋಸ್ ಅಧ್ಯಕ್ಷರಾದ ಮೆಹಬೂಬ್ ಪಾಷಾ ಸೇರಿದಂತೆ ಹಿರಿಯ ಪತ್ರಕರ್ತರು, ಪ್ರಶಸ್ತಿ ಪುರಸ್ಕೃತರ ಕುಟುಂಬದವರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಮಾಧ್ಯಮದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.