Wednesday, December 31, 2025

ಸಚಿವರ ನಿವಾಸದ ಎದುರು ಪ್ರತಿಭಟನೆ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟಗಾರರ ಬಂಧನ

ವಿಜಯಪುರ : ಜಿಲ್ಲೆಗೆ ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಗುರುವಾರ 106ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆ, ಹೊಸ ವರ್ಷದಂದೂ ನಗರದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ನಿವಾಸದ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದ ಸಂದರ್ಭ ಪೊಲೀಸರು ಹೋರಾಟಗಾರರನ್ನು ಬಂಧಿಸಿ ವಾಹನದಲ್ಲಿ ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಗೆ ಕರೆದೊಯ್ದಿರುವ ಘಟನೆ ನಡೆದಿದೆ.

ಹೋರಾಟಗಾರರು ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಈ ವೇಳೆ ಹೋರಾಟಗಾರರು ಸರ್ಕಾರಕ್ಕೆ ಧಿಕ್ಕಾರ.. ಧಿಕ್ಕಾರ.., ಸರ್ಕಾರಿ ವೈದ್ಯಕೀಯ ಕಾಲೇಜು ಹೊರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕುತ್ತಿರುವ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 ಸಂಗನ ಬಸವೇಶ್ವರ ಶ್ರೀಗಳು, ಹೋರಾಟಗಾರರಾದ ಅರವಿಂದ ಕುಲಕರ್ಣಿ, ಸುರೇಖಾ ರಜಪೂತ, ಅನಿಲ ಹೊಸಮನಿ, ಭಿ. ಭಗವಾನ ರೆಡ್ಡಿ, ಸಿದ್ಧರಾಮ ಹಳ್ಳೂರ, ಜಗದೇವ ಸೂರ್ಯವಂಶಿ, ಮಲ್ಲಿಕಾರ್ಜುನ ಎಚ್. ಟಿ, ಗಿರೀಶ ಕಲಘಟಗಿ, ವಿನೋದ ಖೇಡ, ಮಲ್ಲಿಕಾರ್ಜುನ ಬಟಗಿ, ಅಕ್ರಮ ಮಾಶ್ಯಾಳಕರ, ಲಲಿತಾ ಬಿಜ್ಜರಗಿ, ಲಾಯಪ್ಪ ಇಂಗಳೆ, ಭೋಗೇಶ ಸೋಲಾಪುರ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ ಎಚ್., ಶಿವಬಾಳಮ್ಮ ಕೊಂಡಗೂಳಿ ಇದ್ದರು.

Saturday, December 27, 2025

ಪರೀಕ್ಷೆಗಳಿಗೆ ಅರ್ಜಿ ಆಹ್ವಾನ : ಕಲಬುರ್ಗಿ ಕೇಂದ್ರಿಯ ವಿವಿ ಹಿಂದಿ ವಿಭಾಗದ ಪ್ರಾಧ್ಯಾಪಕ ಪ್ರೊ.ಗಣೇಶ ಪವಾರ

 ವಿಜಯಪುರ : ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾಲಯಕ್ಕೆ ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊAಡಿದ್ದು, ಜನವರಿ 14 ರವರೆಗೆ ಪ್ರವೇಶ ಪಡೆದುಕೊಳ್ಳಬಹುದಾಗಿದೆ ಎಂದು ಕಲಬುರ್ಗಿ ಕೇಂದ್ರಿಯ ವಿವಿ ಹಿಂದಿ ವಿಭಾಗದ ಪ್ರಾಧ್ಯಾಪಕ ಪ್ರೊ.ಗಣೇಶ ಪವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ವಿಶ್ವವಿದ್ಯಾಲಯದಲ್ಲಿ ಹಲವಾರು ಕೋರ್ಸ್ಗಳ ಅಧ್ಯಯನ ಅವಕಾಶವಿದ್ದು, ಇಂಗ್ಲಿಷ್, ಹಿಂದಿ, ಕನ್ನಡ, ಭಾಷಾಶಾಸ್ತ್ರ, ಜಾನಪದ ಮತ್ತು ಬುಡಕಟ್ಟು ಅಧ್ಯಯನ, ಅರ್ಥಶಾಸ್ತ್ರ, ಇತಿಹಾಸ, ಸಾರ್ವಜನಿಕ ಆಡಳಿತ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ,

ಪ್ರವಾಸೋದ್ಯಮ - ಪ್ರಯಾಣ ನಿರ್ವಹಣೆ, ಮನೋವಿಜ್ಞಾನ, ಭುಗೋಳಶಾಸ್ತç, ಭೂವಿಜ್ಞಾನ, ಗಣಿತ ಮೊದಲಾದ ಕೋರ್ಸ್ಗಳ ಪ್ರವೇಶ ಜೊತೆಗೆ ಎಂ.ಟೆಕ್ ಪವರ್ ಆ್ಯಂಡ್ ಎನರ್ಜಿ ಸೋರ್ಸಸ್ ಇಂಜಿನಿಯರಿAಗ್, ಆರ್‌ಎಫ್ ಮೈಕ್ರೋವೇವ್ ಇಂಜಿನಿಯರಿAಗ್‌ನಲ್ಲಿ ಅಧ್ಯಯನಕ್ಕೆ ಅವಕಾಶವಿದೆ, ಹಿಂದೂಸ್ತಾನಿ ಶಾಸ್ತಿçÃಯ ಸಂಗೀತದಲ್ಲಿ ಎಂಪಿಎ, ಇನ್ಸುö್ಯಟ್ರುö್ಯಮೆಂಟಲ್ ಸಂಗೀತದಲ್ಲಿ ಎಂಪಿಎ, ಸಸ್ಯಶಾಸ್ತç, ಪ್ರಾಣಿ ಶಾಸ್ತç ಹೀಗೆ ಅನೇಕ ಕೋರ್ಸ್ಗಳ ಅಧ್ಯಯನಕ್ಕೆ ಅವಕಾಶವಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಶೇ.8 ರಷ್ಟು ಮೀಸಲಾತಿ ಕಲ್ಪಿಸಲಾಗುತ್ತಿದೆ, ಕರ್ನಾಟಕದಾದ್ಯಂತ 16 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದರು. ಎಂ.ಟೆಕ್‌ನ ಶೇ.50 ರಷ್ಟು ಸೀಟುಗಳನ್ನು ಸಿಯುಇಟಿ ಮೂಲಕ ಹಾಗೂ ಶೇ.50 ರಷ್ಟು ಸೀಟುಗಳನ್ನು ಗೇಟ್ ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದರು.

ಹೆಲ್ಪ್ ಡೆಸ್ಕ್  : ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ತೊಂದರೆ ಎದುರಿಸಿದರೆ ಅದರ ನಿವಾರಣೆಗಾಗಿ ವಿಶೇಷ ಹೆಲ್ಪ್ಡೆಸ್ಕ್ ಸ್ಥಾಪಿಸಲಾಗಿದೆ. ತೊಂದರೆ ಎದುರಿಸುವ ವಿದ್ಯಾರ್ಥಿಗಳು 011-40759000 ಅಥವಾ 011-69227700 ಸಂಪರ್ಕಿಸಬಹುದಾಗಿದೆ, ಅಲ್ಲಿ ತಂತ್ರಜ್ಞರು ಸೂಕ್ತವಾದ ಮಾರ್ಗದರ್ಶನ ನೀಡಲಿದ್ದಾರೆ. ಅಥವಾ ಜಾಲತಾಣದ ವಿಳಾಸ Www.nta.ac.in https://exams.nta.nic.in/cuet-pgನೊಂದಿಗೆ ಸಂಪರ್ಕ ಸಾಧಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಳ್ಳಬಹುದಾಗಿದೆ ಎಂದು ವಿವರಿಸಿದರು. ಸಂಪೂರ್ಣ ಪುವೇಶ ಪ್ರಕ್ರಿಯೆಯು ಆನ್‌ಲೈನ್ ಮೂಲಕ ನಡೆಯುತ್ತದೆ, ಆದ್ದರಿಂದ ಅಭ್ಯರ್ಥಿಗಳು ಭವಿಷ್ಯದ ಸಂವಹನಕ್ಕಾಗಿ ಅರ್ಜಿಯಲ್ಲಿ ಸರಿಯಾದ ಇಮೇಲ್ ಮತ್ತು ಫೋನ್ ಸಂಖ್ಯೆಯನ್ನು ನಮೂದಿಸಬೇಕು ಎಂದು ಕೋರಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಡಿ.30 ರಂದು 330 ಜೋಡೆತ್ತಿನ ಬಂಡಿಗಳ ಐತಿಹಾಸಿಕ ಸಮಾವೇಶ



ವಿಜಯಪುರ : ನಡೆದಾಡುವ ಸಂತ ಶ್ರೀ ಸಿದ್ದೇಶ್ವರ ಸ್ವಾಮಿಗಳ ಜನ್ಮಭೂಮಿ ಪವಿತ್ರ ಬಿಜ್ಜರಗಿಯಲ್ಲಿ ಇದೇ ದಿನಾಂಕ 30 ರಂದು ವೈಕುಂಠ ಏಕಾದಶಿಯಂದು 330 ಜೋಡೆತ್ತಿನ ಬಂಡಿಗಳ ಐತಿಹಾಸಿಕ ಸಮಾವೇಶ ಹಾಗೂ ಬಸವ ತತ್ವದಡಿಯಲ್ಲಿ ಸ್ವಾವಲಂಬಿ ಗ್ರಾಮ ನಿರ್ಮಾಣಕ್ಕೆ ಸಂಬAಧಿಸಿದ ವೈಜ್ಞಾನಿಕ ಚಿಂತನ-ಮAಥನ ಸಮಾವೇಶ ನಡೆಯಲಿದೆ, ಕೀನ್ಯಾ ಸೇರಿದಂತೆ ಹಲವು ಭಾಗಗಳಿಂದ ಪರಿಣಿತರು ಭಾಗವಹಿಸಿ ಅನುಭವ ಹಂಚಿಕೊಳ್ಳಲಿದ್ದಾರೆ ಎಂದು ಕೃಷಿ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಎಸ್.ಜೆ. ನಾಡಗೌಡ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹತ್ವಪೂರ್ಣವಾಗಿರುವ ಈ ಸಮಾವೇಶಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ, ನಂದಿ ಕೂಗು ಅಭಿಯಾನದ ಅಡಿಯಲ್ಲಿ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ 3ನೇ ಪುಣ್ಯ ಸ್ಮರಣೆ ಅಂಗವಾಗಿ ಈ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ, 

ಮುಗಳಖೋಡ ಮಠದ ಶ್ರೀ ಡಾ.ಮುರಘರಾಜೇಂದ್ರ ಮಹಾಸ್ವಾಮಿಗಳು, ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮೀಜಿಗಳ ಸಾನಿಧ್ಯದಲ್ಲಿ ಜರಗುವುದು. ರೈತ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಯುವ ಸನ್ಯಾಸಿ ಶಶಿಕಾಂತ ಗುರುಜಿ ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನುಡಿಗಳನ್ನಾಡಲಿದ್ದಾರೆ, ಜೋಡೆತ್ತಿನ ಕೃಷಿಯ ಕುರಿತು ವಿಶೇಷ ಒಲವು ಹೊಂದಿರುವ ಕರ್ನಾಟಕ ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆಯ ನಿರ್ದೇಶಕ ವೆಂಕನಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. 

ಭಾರತೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷ ಭೀಮಸೇನ ಕೋಕರೆ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಚುನ್ನಪ್ಪ ಪುಜಾರಿ ಆಗಮಿಸಲಿದ್ದು, ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೀನ್ಯಾ ದೇಶದಲ್ಲಿ ಬೃಹತ್ ಕೃಷಿ ಉದ್ದಿಮೆ ಸ್ಥಾಪಿಸುವುದರ ಜೊತೆಗೆ ನಂದಿ ಸಂತತಿ ರಕ್ಷಣೆಯಲ್ಲಿ ಹೆಸರುವಾಸಿಯಾಗಿರುವ ಮಲ್ಲಿಕಾರ್ಜುನ ಕೋರಿ ಅವರು ಬಸವ ತತ್ವದಿಂದ ಸ್ವಾವಲಂಬಿ ಗ್ರಾಮ ನಿರ್ಮಿಸುವ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ನಾಡಗೌಡರು ವಿವರಿಸಿದರು.

ಬಸವ ತತ್ವದಿಂದ ಸ್ವಾವಲಂಬಿ ಗ್ರಾಮ ನಿರ್ಮಾಣ ಸಾಧ್ಯ :

ಕರ್ನಾಟಕ ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆಯ ನಿರ್ದೇಶಕ ವೆಂಕನಗೌಡ ಪಾಟೀಲ ಮಾತನಾಡಿ, ಬಸವ ತತ್ವವೆಂದರೆ ಜೋಡೆತ್ತಿನ ರೈತರು ತಮ್ಮ ಕಾಯಕದಿಂದ ಪಂಚ ಮಹಾಭೂತಗಳ ಜೀವಂತಿಕೆಯನ್ನು ಉಳಿಸುವುದರ ಜೊತೆಗೆ ಕಾಯಕ ಹಾಗೂ ದಾಸೋಹ ಸಂಸ್ಕೃತಿ ನಾಶವಾಗದಂತೆ ನೋಡಿಕೊಳ್ಳುವ ಕಲೆ ಎಂದು ಅರ್ಥ. ಕ್ರಿಸ್ತಶಕ 6 ರಿಂದ 12 ನೇ ಶತಮಾನದ ಕಾಲಘಟ್ಟದಲ್ಲಿ ಜೋಡೆತ್ತಿನ ಕೃಷಿಕರ ಬಸವ ತತ್ವದ ಅನುಷ್ಠಾನದಿಂದ ರಾಜರುಗಳು ಸುಸಂಸ್ಕೃತ ಸಮಾಜ ನಿರ್ಮಿಸಿದರು. ಸಮಾಜದಲ್ಲಿ ಜೋಡೆತ್ತಿನ ಕೃಷಿಕರ ಪಾದಗಳ ಕೊರತೆಯಾದರೆ ಸಮಾಜದ ಮಾರ್ಗದರ್ಶಕರಾದ ಗುರುಗಳಿಗೆ ಭವಿಷ್ಯವಿಲ್ಲ ಎಂದು ಅಣ್ಣ ಬಸವಣ್ಣ ಸಹ ಹೇಳಿದ್ದಾರೆ ಎಂದರು.

ಕೃಷಿಕರ ಬಸವ ತತ್ವಕ್ಕೆ ವಿರುದ್ಧವಾದ ಪೆಟ್ರೋಲ್ ಹಾಗೂ ಡೀಸೆಲ್ ಆಧಾರಿತ ತೈಲ ತತ್ವಕ್ಕೆ ಸರ್ಕಾರಗಳು ಹೆಚ್ಚು ಆದ್ಯತೆ ನೀಡುತ್ತಾ ಬಂದ ಕಾರಣ ಜೋಡೆತ್ತಿನ ಕೃಷಿಕರು ನಾಶವಾಗಿ ಗ್ರಾಮಗಳು ಸರ್ವ ರೀತಿಯಲ್ಲಿ ಪರಾವಲಂಬಿಗಳಾಗುತ್ತಾ ಸಾಗುತ್ತಿವೆ. ಜೋಡೆತ್ತಿನ ಕೃಷಿ ನಾಶವಾದಂತೆ ರೈತರ ಸಾಗುವಳಿ ವೆಚ್ಚ ಹೆಚ್ಚಾಗಿ ರೈತರ ತೊಂದರೆ ಅಧಿಕವಾಗಿದೆ, ಈ ಹಿನ್ನೆಲೆಯಲ್ಲಿ ಜೋಡೆತ್ತಿನ ಕೃಷಿಕರಿಗೆ ಪ್ರತಿ ತಿಂಗಳು ರೂ. 11000 ಪ್ರೋತ್ಸಾಹ ಧನ ನೀಡುವ ಯೋಜನೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. 

ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಸಂಗಮೇಶ ಕಾಮನ್ನವರ, ಬಸವರಾಜ ಬಿರಾದಾರ, ಬಸವರಾಜ ಕೋನರೆಡ್ಡಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, December 23, 2025

2.50 ಕೋಟಿ ಅಕ್ರಮ ಆಸ್ತಿ ಪತ್ತೆ : ಕೃಷಿ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ

ವಿಜಯಪುರ: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆ ಜಿಲ್ಲೆಯ ಬಸವನಬಾಗೇವಾಡಿಯ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ ಹನಮಂತಪ್ಪ ಯರಝರಿ ಅವರಿಗೆ ಸಂಬಂಧಿಸಿದ ನಾಲ್ಕು ಕಡೆ ಆಸ್ತಿಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದು, 2.50 ಕೋಟಿ ರೂ.ಗೂ ಹೆಚ್ಚು ಅಕ್ರಮ ಆಸ್ತಿ ಗಳಿಸಿರುವುದು ಪತ್ತೆಯಾಗಿದೆ.

ಅಕ್ರಮ ಆಸ್ತಿ ಕುರಿತು ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಆರೋಪಿ ನೌಕರನಿಗೆ ಸಂಬಂಧಿಸಿದ ಮನೆಯ ಶೋಧನೆ ನಡೆಸಲು ನ್ಯಾಯಾಲಯದಿಂದ ವಾರಂಟ್‌ನ್ನು ಪಡೆದು. ಬೆಳಗ್ಗೆ ಆರೋಪಿ ನೌಕರರಿಗೆ ಸಂಬಂಧಿಸಿದ ವಿಜಯಪುರ ನಗರದ ನವರಸಪುರದ ಮನೆ, ನೌಕರರಿಗೆ ಸಂಬಂಧಿಸಿದ ಬಸವನಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದ ಫಾರ್ಮಹೌಸ್, ಮುದ್ದೇಬಿಹಾಳ ನಗರದಲ್ಲಿರುವ ಆರೋಪಿ ಅಧಿಕಾರಿಯ ಮಾವನ ಮನೆ, ಅಪಾದಿತರು ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಶೋಧನೆ ಕಾರ್ಯ ನಡೆಸಿದ್ದು, ಶೋಧನೆ ವೇಳೆ ಆರೋಪಿ ವಿಜಯಪುರ ನವರಸಪುರ ಮನೆ, ಲಾಕರ್ ಮತ್ತು ಮಾವನ ಮನೆ ಸೇರಿ ಸುಮಾರು 29,42,000 ರೂ. ನಗದು ಹಣ, ಬೆಳ್ಳಿ ಬಂಗಾರದ ಆಭರಣಗಳು, ವಾಹನಗಳು ಮತ್ತು ಇತರೆ ಆಸ್ತಿಗಳಿಗೆ ಸಂಬಂಧಿಸಿದ ದಾಖಲಾತಿಗಳು ದೊರೆತಿದ್ದು, ಅಂದಾಜು 2.50 ಕೋಟಿಗೂ ಹೆಚ್ಚಿನ ಅಕ್ರಮ ಆಸ್ತಿ ಗಳಿಸಿರುವದು ಪತ್ತೆಯಾಗಿದೆ.

ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ್ ಮಾರ್ಗದರ್ಶನದಲ್ಲಿ ಡಿಎಸ್‌ಪಿಗಳಾದ ಮಲ್ಲಿಕಾರ್ಜುನ ತುಳಸಿಗೇರಿ, ಬಿ.ಎಸ್. ಪಾಟೀಲ್, ಪೊಲೀಸ್ ಇನ್ಸಪೆಕ್ಟರ್‌ಗಳಾದ ಆನಂದ ಟಕ್ಕನ್ನವರ್, ಆನಂದ ಡೋಣಿ, ನಿಂಗಪ್ಪ ಪೂಜೇರಿ, ಸಂಗಮನಾಥ ಹೊಸಮನಿ ಹಾಗೂ ವಿಜಯಪುರ ಹಾಗೂ ಬೆಳಗಾವಿ ಪೊಲೀಸ್ ಠಾಣೆಯ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, December 9, 2025

https://drive.google.com/file/d/1ue_FGs31toJBL_Q-s565xGBbGsQe8l6e/view?usp=sharing

Monday, December 8, 2025

ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಬೇಡಿಕೆ | ಸುವರ್ಣ ವಿಧಾನಸೌಧದಲ್ಲಿ ಪ್ರತಿಧ್ವನಿ

ವರದಿ : ಉಮೇಶ ಶಿವಶರಣ, ಸಂಪಾದಕ

ಈ ದಿವಸ ವಾರ್ತೆ ಬೆಳಗಾವಿ : ಸುವರ್ಣ ವಿಧಾನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ವಿಜಯಪುರ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಅನಿರ್ಧಿಷ್ಟಾವಧಿ ಧರಣಿ ವಿಷಯ ಮೇಲ್ಮನೆಯಲ್ಲಿ ಸೋಮವಾರ ಪ್ರತಿಧ್ವನಿಸಿತು.

ವಿಧಾನ ಪರಿಷತ್ತಿನ ಸದಸ್ಯ ಕೇಶವಪ್ರಸಾದ್ ಎಸ್. ಅವರು ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಶಿಕ್ಷಣ ಕಾಲೇಜುಗಳ ಬಹುದಿನಗಳ ಬೇಡಿಕೆಯಿದ್ದು ಸದರಿ ಬೇಡಿಕೆಗೆ ಅನಿರ್ಧಿಷ್ಟಾವಧಿ ಧರಣಿ ನಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ? ಬಂದಿದ್ದರೆ ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನು ಸ್ಥಾಪಿಸಲು ಸರ್ಕಾರ ಕೈಕೊಂಡಿರುವ ಕ್ರಮಗಳೇನು? ಎಂದು ಪ್ರಶ್ನಿಸಿದರು.

ವಿಧಾನ ಪರಿಷತ್ತಿನ ಸದಸ್ಯ ಕೇಶವ್ ಪ್ರಸಾದ್ ಎಸ್ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆ 54(104)ರ ಕ್ಕೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲರವರು ಉತ್ತರಿಸಿ, ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಹೋರಾಟ ಸರ್ಕಾರದ ಗಮನಕ್ಕೆ ಬಂದಿದೆ. ರಾಜ್ಯದ ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಬೇಕೆAಬುವುದು ಸರ್ಕಾರದ ನೀತಿಯಾಗಿರುತ್ತದೆ. ರಾಜ್ಯ ಸರ್ಕಾರದ ವತಿಯಿಂದ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಅಂದಾಜು ರೂ. 610 ಕೋಟಿಗಳ ಆವರ್ತಕದ ವೆಚ್ಚದ ಅವಶ್ಯಕತೆ ಇರುತ್ತದೆ. ಅದರಂತೆ ಅನುದಾನದ ಲಭ್ಯತೆಯನ್ನು ಆಧರಿಸಿ ಸರ್ಕಾರಿ ವೈದ್ಯಕಿಯ ಕಾಲೇಜುಗಳನ್ನು ಹೊಂದಿರದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುವುದು. ವೈದ್ಯಕೀಯ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಬಗ್ಗೆ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕಿಯ ಕಾಲೇಜನ್ನು ಪ್ರಾರಂಭಿಸುವAತೆ ಧರಣಿಗಳು ನಡೆಯುತ್ತಿದ್ದು ಕಾಲೇಜು ಪ್ರಾರಂಭದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು ಗಣ್ಯರು ಹಾಗೂ ಜಿಲ್ಲಾ ಮುಖಂಡರೊAದಿಗೆ ಸಭೆಯನ್ನು ನಡೆಸಿ ಪರಿಶೀಲಿಸಲಾಗುವುದು ಎಂದು ವೈದ್ಯಕೀಯ ಸಚಿವರು ತಿಳಿಸಿದ್ದಾರೆ. 

ವಿಜಯಪುರ ಜಿಲ್ಲೆಯಲ್ಲಿ ಕಳೆದ 82 ದಿನಗಳಿಂದ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗಾಗಿ ಹೋರಾಟ ಸಮಿತಿಯಿಂದ ನಿರಂತರ ಧರಣಿ ನಡೆಯುತ್ತಿದೆ. ಧರಣಿಗೆ ಜಿಲ್ಲೆಯ ವಿವಿಧ ಸಂಘಟನೆಗಳು, ವಿವಿಧ ಪಕ್ಷದ ಮುಖಂಡರು, ವಿದ್ಯಾರ್ಥಿಗಳು ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, December 4, 2025

ಬಾಲ್ಯವಿವಾಹ ಹಾಗೂ ಪೋಕ್ಸ್ ಕಾಯ್ದೆ ಹಾಗೂ ಮಕ್ಕಳ ಸಂರಕ್ಷಣಾ ಕಾಯ್ದೆಗಳ ಕುರಿತ ಕಾರ್ಯಾಗಾರ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯ ವಿವಾಹ ತಡೆಗೆÀ ಕೈಜೊಡಿಸಿ - ಸಂಗಮೇಶ ಬಬಲೇಶ್ವರ

ವಿಜಯಪುರ : ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಠ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಘ-ಸAಸ್ಥೆಗಳು ಕೈಜೋಡಿಸಬೇಕು. ಅದರಂತೆ ಜಿಲ್ಲೆಯ ವಸತಿ ನಿಲಯಗಳ ವಾರ್ಡ್ನ ಹಾಗೂ ಶಾಲಾ ಶಿಕ್ಷಕರು ಈ ಕಾಯ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ವ್ಯಾಪಕ ಜಾಗೃತಿ ಮೂಡಿಸಿ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯ ವಿವಾಹ ತಡೆಗೆÀ ಕೈಜೊಡಿಸಬೇಕು ಎಂದು ಧಾರವಾಡದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.

 ಅವರು ಗುರುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಬಾಲ್ಯ ವಿವಾಹ-ಫೋಕ್ಸೊ ಕಾಯ್ದೆ ಹಾಗೂ ಮಕ್ಕಳ ಸಂರಕ್ಷಣಾ ಕಾಯ್ದೆಗಳ ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಅತ್ಯಂತ ಮಾದರಿಯಾಗಿದೆ. ಮಕ್ಕಳ ರಕ್ಷಣೆಗಾಗಿ ಇರುವ ಬಾಲ್ಯ ವಿವಾಹ-ಫೋಕ್ಸೊ ಕಾಯ್ದೆ, ಬಾಲ ಕಾರ್ಮಿಕ ತಡೆ ಕಾಯ್ದೆಗಳ ಕುರಿತಾಗಿ ಮಕ್ಕಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ತಿಳಿಸಿಕೊಡುತ್ತಿರುವ ಈ ಕಾರ್ಯಾಗಾರ ಅತ್ಯಂತ ಸಮಂಜಸವಾಗಿದೆ.ಮಕ್ಕಳ ಹಿತಕಾಯುವಲ್ಲಿ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲರೂ ಜವಾಬ್ದಾರಿ ಅರಿತು ಮಕ್ಕಳ ಒಳಿತಿಗಾಗಿ ಕಾರ್ಯನಿರ್ವಹಿಸೋಣ ಎಂದು ಹೇಳಿದರು. ಐತಿಹಾಸಿಕ ಹಿನ್ನೆಲೆ ಇರುವ ನಮ್ಮ ಹೆಮ್ಮೆಯ ಜಿಲ್ಲೆಯಲ್ಲಿ ಸಂಪೂರ್ಣ ಬಾಲಕಾರ್ಮಿಕ, ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ನಮ್ಮೆಲ್ಲರ ಜವಾಬ್ದಾರಿ ಹೆಚ್ಚಾಗಿದೆ. ಎಲ್ಲ ಮಕ್ಕಳನ್ನು ಶಾಲಾ ದಾಖಲಾತಿ ಮಾಡಿಸುವ ಮೂಲಕ ಶಾಲೆಯಿಂದ ಯಾವುದೇ ಮಗು ಹೊರಗುಳಿಯದಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಿ, ಶಾಲೆಬಿಟ್ಟ ಮಕ್ಕಳ ಮಾಹಿತಿ ಕ್ರೋಢಿಕರಿಸಬೇಕು. ಈ ಬಗ್ಗೆ ಪಾಲಕರಿಗೆ ತಿಳುವಳಿಕೆ ನೀಡಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಸುಂದರಗೊಳಿಸಿಕೊAಡು ಸಮಾಜಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಹೇಳಿದರು.

 ವಸತಿ ನಿಲಯಗಳಲ್ಲಿ ಮಕ್ಕಳ ರಕ್ಷಣೆಯ ಕುರಿತು ಅತ್ಯಂತ ಕಾಳಜಿವಹಿಸಿ ಕಾರ್ಯ ನಿರ್ವಹಿಸಬೇಕು. ಪಾಲಕರು ಗಂಡು-ಹೆಣ್ಣು ಎಂಬ ಭೇದವೆಣಿಸದೇ ಮಕ್ಕ್ಕಳ ಉಜ್ವಲ ಭವಿಷ್ಯಕ್ಕೆ ಶ್ರಮಿಸಬೇಕು. ಈ ಕಾರ್ಯಕ್ರಮದಲ್ಲಿ ಮಕ್ಕಳ ಸಂರಕ್ಷಣೆಯಲ್ಲಿರುವ ವಿವಿಧ ಕಾಯ್ದೆ, ಕಾನೂನು ಕುರಿತು ವಿಷಯ ತಜ್ಞರು ಇಲ್ಲಿ ವ್ಯಕ್ತಪಡಿಸುವ ಮಾಹಿತಿಯನ್ನು ಪೂರಕವಾಗಿ ಮಕ್ಕಳಿಗೆ ತಿಳಿಸಿಕೊಡಬೇಕು ಎಂದು ಅವರು ಹೇಳಿದರು. 

 ಜಿಲ್ಲಾಧಿಕಾರಿ ಡಾ.ಆನಂದ.ಕೆ ಮಾತನಾಡಿ, ಮಕ್ಕಳ ಕ್ಷೇತ್ರಗಳ ಕಾಯ್ದೆಗಳ ಬಗ್ಗೆ ಅರಿವು ಮತ್ತು ಜಾಗೃತಿ ಅಗತ್ಯವಾಗಿದೆ. ನಮಗೆ ಹಾಕಿಕೊಟ್ಟ ಕಾರ್ಯನಿರ್ವಹಣೆಯ ಪರಿಧಿಯನ್ನು ಹೊರತುಪಡಿಸಿ,ಸಾಮಾಜಿಕ ಕಳ-ಕಳಿಯ ಹೊಂದಿ, ಸಮಾಜಮುಖಿಯಾಗಿ ಹಾಗೂ ಮಕ್ಕಳ ಹಿತದೃಷ್ಟಿಯಿಂದ ನಾವೆಲ್ಲರೂ ಕಾರ್ಯನಿರ್ವಹಿಸಿ,ಸಾಮಾಜಿಕ ಬದ್ಧತೆಯನ್ನು ಮೆರೆಯೋಣ.ಮಕ್ಕಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳು ಅರಿತುಕೊಂಡು ಪರಿಹರಿಸಿ ಎಂದು ಹೇಳಿದರು.

 ಬಾಲ್ಯವಿವಾಹ ಸೇರಿದಂತೆ ಅನಿಷ್ಟ ಪದ್ಧತಿ ಕುರಿತ ಸಾರ್ವಜನಿಕರು ಜಾಗೃತಿ ಹೊಂದುವುದು ಅಗತ್ಯವಾಗಿದೆ. ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಿ, ಮಕ್ಕಳ ಮನಸ್ಸನ್ನು ಅರಿತು ಸಮಸ್ಯೆ ಪರಿಹರಿಸುವ ಮೂಲಕ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವದ ಬದಲಾವಣೆಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು.ಶಿಕ್ಷಕರು ಮಕ್ಕಳ ವರ್ತನಾ ಬದಲಾವಣೆ ಅವಲೋಕಿಸಿ ಸೂಕ್ಷö್ಮವಾಗಿ ಗ್ರಹಿಸಿ,ಅವರಿಗೆ ಸೂಕ್ತ ಸಲಹೆ ನೀಡಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಅಣಿಗೊಳ್ಳುವಂತೆ ಮಕ್ಕಳನ್ನು ಪ್ರೋತ್ಸಾಹಿಸಬೇಕು. ಲಿಂಗಾನುಪಾತ ಬಗ್ಗೆ ಜಾಗೃತಿ ಮೂಡಿಸಬೇಕು. ಗಂಡು-ಹೆಣ್ಣು ಎಂಬ ಲಿಂಗ ತಾರತಮ್ಯ ತೊಡೆದು ಹಾಕಲು ಶ್ರಮಿಸಿ, ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಪ್ರಸವ ಪೂರ್ವ ಭ್ರೂಣ ಲಿಂಗ ಪತ್ಯೆ ಸೇರಿದಂತೆ ವಿವಿಧ ಅನಿಷ್ಠ ಪದ್ಧತಿ ಹೋಗಲಾಡಿಸಲು, ಜನರಲ್ಲಿ ಸೂಕ್ತ ಜಾಗೃತಿ ಮೂಡಿಸಲು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿಯಮಿತವಾಗಿ ಕಾವಲು ಸಮಿತಿ ನಡೆಸಿ, ಸ್ಥಳೀಯವಾಗಿ ಎದುರಾಗುವÀ ಸಮಸ್ಯೆಗಳನ್ನು ಪರಿಹರಿಸುವುದಕ್ಕಾಗಿ ಗ್ರಾಮ ಹಂತದಲ್ಲಿ ಸಭೆ ನಡೆಸುವುದು ಅತ್ಯಂತ ಮಹತ್ವದಾಗಿದೆ. ಈ ಸಭೆಗಳಲ್ಲಿ ಗ್ರಾಮಸ್ಥರು ಪಾಲ್ಗೊಳ್ಳುವಿಕೆಯಿಂದ ಕಾನೂನು ಅರಿವು ಹೊಂದಿ ಇಂತಹ ಪ್ರಕರಣ ಇಳಿಮುಖವಾಗಲು ಸಾಧ್ಯವಾಗುತ್ತದೆ. ಮಕ್ಕಳ ಉಚಿತ ಸಹಾಯವಾಣಿ ಸಂಖ್ಯೆ 1098 ದೂರು ಕರ ಮಾಡಿ ಸಮಸ್ಯೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ಇದರ ಪ್ರಕ್ರಿಯೆ ಅತ್ಯತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಮಾನಸಿಕ ಖಿನ್ನತೆಗೆ ಸಮಬಂಧಿಸಿದ ಪರಿಹಾರ ದೊರಕಿಸಿಕೊಡುವ ಟೆಲಿ ಮನಸ್ ಉಚಿತ ಸಹಾವಾಣಿ ಸಂಖ್ಯೆ 14416 ಸಂಪರ್ಕಿಸಿ ತಮ್ಮ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ಮಕ್ಕಳ ಸಂರಕ್ಷಣಾ ಕಾಯ್ದೆಗಳ ಕುರಿತು ತಿಳಿದುಕೊಂಡು, ಮಕ್ಕಳ ಹಿತದೃಷ್ಟಿಯಿಂತ ತಾವೆಲ್ಲ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಅವರು ಹೇಳಿದರು. 

 ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಮಾತನಾಡಿ, ಮಕ್ಕಳಿಗೆ ಪಠ್ಯ ಬೋಧನೆ ಜೊತೆಗೆ ಮಕ್ಕಳಲ್ಲಿ ಸಂಸ್ಕೃತಿ,ಮಕ್ಕಳ ರಕ್ಷಣೆಗಾಗಿ ಇರುವ ಹಕ್ಕುಗಳ ಬಗ್ಗೆ ತಿಳಿಸಿಕೊಡಬೇಕು. ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯಲ್ಲಿ ಕಾನೂನು ಅರಿವು ಮೂಡಿಸುವ ಮೂಲಕ ಕಾಯ್ದೆಗಳ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಬೇಕು. ಮಕ್ಕಳ ಹಿತದೃಷ್ಟಿಯಿಂದ ಎಲ್ಲ ಇಲಾಖೆಗಳು ಸಮನÀ್ವಯದಿಂದ ಕಾರ್ಯನಿರ್ವಹಿಸಬೇಕು. ಈ ಕಾರ್ಯಾಗಾರದಲ್ಲಿನ ಮಾಹಿತಿಯನ್ನು ಮನೆ-ಮನೆಗೂ ಹಾಗೂ ಮಗು-ಮಗುವಿಗೂ ತಲುಪಿಸಬೇಕು ಎಂದು ಹೇಳಿದರು. 

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಅವರು ಮಾತನಾಡಿ, ಸೈಬರ್ ಅಪರಾಧದ ಕುರಿತು ಜಾಗೃತಿ ಹೊಂದುವುದು ಅತಿ ಅಗತ್ಯವಾಗಿದೆ. ಆನ್‌ಲೈನ್ ಆ್ಯಪ್ ನಂಬಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ಅಪರಾಧಗಳ ಬಗ್ಗೆ ಮಕ್ಕಳಿಗೆ ತಿಳುವಳಿಕೆ ನೀಡಬೇಕು. ವಿವಿಧ ಸೈಬರ್ ಅಪರಾಧಗಳ ಕುರಿತು ಪಿಪಿಟಿಯ ಮೂಲಕ ವಿಸ್ತೃತವಾಗಿ ವಿವರಿಸಿದ ಅವರು ವಂಚಕರು ಎಸಗುವ ಆಮಿಷಕ್ಕೆ ಒಳಗಾಗದೇ ಸಾರ್ವಜನಿಕರು ಜಾಗೃತಿ ವಹಿಸಬೇಕು. ಇಂದಿನ ತಂತ್ರಜ್ಞಾನದ ಯುಗದಲ್ಲಿ ಸೈಬರ ಅಪರಾಧದ ಕುರಿತು ಜಾಗೃತಿ ಹೊಂದಿ, ಸೈಬರ್ ವಂಚಕರಿAದ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು. ಸೈಬರ್ ವಂಚನೆಗೆ ಒಳಗಾದ ಸಂದರ್ಭದಲ್ಲಿ 1930 ಉಚಿತ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅವರು ಹೇಳಿದರು.

 ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ವಸತಿ ನಿಲಯ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಬೇಕು. ಮಕ್ಕಳ ಕಲ್ಯಾಣಕ್ಕಾಗಿ ಒಗ್ಗೂಡಿ ಕಾರ್ಯನಿರ್ವಹಿಸೋಣ. ಕಾಯ್ದೆಗಳ ಅನುಷ್ಠಾನ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಕಾಳಜಿಪೂರ್ವಕವಾಗಿ ಕಾರ್ಯನಿರ್ವಹಿಸಿ ಸಮಸ್ಯೆಗಳಿದ್ದಲ್ಲಿ ತಮ್ಮನ್ನು ಖುದ್ದಾಗಿ ಸಂಪರ್ಕಿಸುವAತೆ ಹೇಳಿದರು. 

 ನ್ಯಾಯವಾದಿಗಳೂ ಆದ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀಧರ ಕುಲಕರ್ಣಿ ಅವರು, ಬಾಲ್ಯ ವಿವಾಹ ಕಾಯ್ದೆ ಬಗ್ಗೆ, ನ್ಯಾಯವಾದಿಗಳೂ ಆದ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರಶಾಂತ ದೇಶಪಾಂಡೆ ಅವರು ಫೋಕ್ಷೆÆ ಕಾಯ್ದೆಯ ಕುರಿತಾಗಿ, ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ ಅವರು ಬಾಲ ಕಾರ್ಮಿಕ ನಿಷೇಧ ಹಾಗೂ ನಿಯಂತ್ರಣ ಕಾಯ್ದೆಯ ಬಗ್ಗೆ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ಆತ್ಮಹತ್ಯೆ ತಡೆ ವಿಷಯದ ಕುರಿತಾಗಿ ಮನೋವೈದ್ಯ ಡಾ.ಮಂಜುನಾಥ ಮಸಳಿ ಅವರು ವಿಷಯ ಮಂಡಿಸಿದರು. 

 ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಬಸಮ್ಮ ಹತ್ತರಕಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ ಹೊಸಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ, ವಾರ್ತಾಧಿಕಾರಿ ಅಮರೇಶ ದೊಡಮನಿ ಸೇರಿದಂತೆ ಜಿಲ್ಲೆಯ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ವಸತಿ ನಿಲಯಗಳ ವಾರ್ಡ್ನ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Saturday, November 22, 2025

ಕನ್ನಡ ಪುಸ್ತಕ ಪ್ರಾಧಿಕಾರ ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಾಗಿ ಸಾಹಿತಿ, ಪತ್ರಕರ್ತ ಪರಶುರಾಮ ಶಿವಶರಣ ನೇಮಕ

ಈ ದಿವಸ ಕನ್ನಡ ದಿನ ಪತ್ರಿಕೆ ವಿಜಯಪುರ

ವಿಜಯಪುರ: ಕನ್ನಡ ಪುಸ್ತಕ ಪ್ರಾಧಿಕಾರದ ಮನೆ ಮನೆ ಗ್ರಂಥಾಲಯ ಜಾಗೃತಿ ಸಮಿತಿ ಸದಸ್ಯರಾಗಿ ನಗರದ ಸಾಹಿತಿ, ಪತ್ರಕರ್ತ ಪರಶುರಾಮ ಶಿವಶರಣ ಅವರನ್ನು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಪರಶುರಾಮ ಶಿವಶರಣ ಅವರ ‘ಜೀವಪೀಠ’ ಕೃತಿ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅರಳು ಪ್ರಶಸ್ತಿ ಪಡೆದಿದೆ, ರಾಣಿಬಗೀಚ ಕಥಾ ಸಂಕಲನ, ವಾರ ನೋಟ ಅಂಕಲನ ಸಂಕಲನ, ನೀಲಿ ಮಿಂಚು ಕರ್ನಾಟಕ ಸರ್ಕಾರ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಗಿದೆ. ಇವರ ಕಾದಂಬರಿ ಜೀವಯಂತ್ರ ಯೋನಿ, ಕಥಾ ಸಂಕಲನ ಹುಳಿ ಮಜ್ಜಿಗೆ, ಕವನ ಸಂಕಲನ ಕಾಡು ಕವಿತೆ ಮುದ್ರಣ ಅಂಚಿನಲ್ಲಿವೆ.

ಅದರಂತೆ ಸಾಮಾಜಿಕ ಕಾಳಜಿಯನ್ನು ಮೈಗೂಡಿಸಿಕೊಂಡು ಬದ್ಧತೆಯಿಂದ, ಜವಾಬ್ದಾರಿ, ನಿರ್ಭೀಡೆಯಿಂದ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ನಿಟ್ಟಿನಲ್ಲಿ ಪತ್ರಕರ್ತರಾಗಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ದೀನ ದಲಿತರ, ಶೋಷಿತರ, ನೊಂದವರ, ನಿರ್ಗತಿಕರ, ಅನ್ಯಾಯ ದೌರ್ಜನ್ಯಕ್ಕೆ ಒಳಗಾದವರ ಧ್ವನಿಯಾಗಿ ವಿಶೇಷ ವರದಿಗಳನ್ನು ಮಾಡಿ ಸಮಾಜ ಹಾಗೂ ಸರ್ಕಾರವನ್ನು ಎಚ್ಚರಿಸುತ್ತಿದ್ದಾರೆೆ. ಪರಶುರಾಮ ಅವರ ಸಮಾಜ ಮುಖಿ, ಜನಮುಖಿ ಹಲವು ವಿಶೇಷ ವರದಿಗಳು ವಿಧಾನ ಸೌಧದ ಅಧಿವೇಶನದಲ್ಲಿ ಪ್ರತಿಧ್ವನಿಸಿ ಸರ್ಕಾರದ ಗಮನ ಸೆಳೆದಿದ್ದು, ಹಲವು ಪ್ರಶಸ್ತಿಗಳು ಅರಿಸಿ ಬಂದಿವೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, November 20, 2025

21-11-2025 EE DIVASA KANNADA DAILY NEWS PAPER

ವಿವಿಧ ಅನಿಷ್ಠ ಪದ್ಧತಿಗೆ ಕಡಿವಾಣ-ಮಕ್ಕಳ ರಕ್ಷಣಾ ಕಾನೂನಿನ ಕುರಿತು ಪ್ರತಿ ತಿಂಗಳಿಗೊಮ್ಮೆ ಕಾವಲು ಸಮಿತಿ ಸಭೆ ನಡೆಸಿ ಸೂಕ್ತ ತಿಳುವಳಿಕೆ ಮೂಡಿಸಲು ಸೂಚನೆ


 ವಿಜಯಪುರ : ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಪೋಕ್ಸೋ ಕಾಯ್ದೆ, ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾನೂನು ಸೇರಿದಂತೆ ವಿವಿಧ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಲು, ಜನರಲ್ಲಿ ಸೂಕ್ತ ತಿಳುವಳಿಕೆ ಮೂಡಿಸಲು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿ ತಿಂಗಳಿಗೊಮ್ಮೆ ಕಾವಲು ಸಮಿತಿ ಸಭೆ ನಡೆಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು. 

 ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ವಿವಿಧ ಅನಿಷ್ಠ ಪದ್ಧತಿಗಳ ನಿರ್ಮೂಲನೆಗಳಾಗಿ ಜಾರಿಗೊಳಿಸಿರುವ ಕಾನೂನಿನ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಸಭೆ ನಡೆಸುವುದು ಅತ್ಯಂತ ಮಹತ್ವದ್ದಾಗಿದ್ದು, ಇಂತಹ ಸಭೆಗಳಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆಯಿಂದ ಕಾನೂನು ಅರಿವು ಹೊಂದಿ ಪ್ರಕರಣ ಇಳಿಮುಖವಾಗಲು ಸಾಧ್ಯವಾಗುತ್ತದೆ ಹಾಗೂ ಕಾವಲು ಸಮಿತಿ ಉದ್ದೇಶ ಸಾಫಲ್ಯತೆ ಕಾಣಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. 

 ಪ್ರತಿ ತಿಂಗಳಿಗೊಮ್ಮೆ ಸಂಬAಧಿಸಿದ ಸ್ಥಳೀಯ ಮಟ್ಟದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಶಾಲಾ ಮುಖ್ಯೊಪಾಧ್ಯಾಯರು, ಪೊಲಿಸ್ ಇಲಾಖೆ ಬೀಟ್ ಸಿಬ್ಬಂದಿ, ಗ್ರಾಮ ಪಂಚಾಯತ್ ಸದಸ್ಯರನ್ನೊಳಗೊಂಡು ಸಭೆ ನಡೆಸಿ ಕಾನೂನಿನ್ವಯ ನಿಷೇಧಕ್ಕೊಳಗಾಗಿರುವ ಕಾಯ್ದೆಗಳ ಕುರಿತು ಅರಿವು ಮೂಡಿಸುವುದಲ್ಲದೇ, ಸಭೆ ಜರುಗಿಸಿರುವ ಕುರಿತು ಮಾಹಿತಿ ಒದಗಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. 

 ಈ ಹಿಂದೆಯೂ ಹಲವಾರು ಬಾರಿ ಸಭೆ ನಡೆಸಲು ಸೂಚಿಸಲಾಗಿತ್ತಾದ್ದರೂ ಸಭೆ ನಡೆಸದೇ ಇರುವುದರಿಂದ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಸರ್ಕಾರಿ ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಗೊಳಿಸುತ್ತಿದೆ, ಈ ಯೋಜನೆ ಲಾಭ ಮಕ್ಕಳಿಗೆ ದೊರಕಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ನಡೆಸದಿದ್ದಲ್ಲಿ ಸಂಬAಧಿಸಿದವರ ಮೇಲೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ಜರುಗಿಸಿರುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ಕ್ರೋಢಿಕರಿಸಬೇಕು ಎಂದು ಅವರು ಹೇಳಿದರು. 

 ಅದರಂತೆ ಜಿಲ್ಲೆಯ ವಿವಿಧ ಸಾರ್ವಜನಿಕ ಸ್ಥಳಗಳು, ಗ್ರಾಮ ಪಂಚಾಯತ್, ಸ್ಥಳೀಯ ಸಂಸ್ಥೆ ಹಾಗೂ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಿಂಗಲ್ಸ್ ಮೂಲಕ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸಲು ಕ್ರಮ ವಹಿಸಬೇಕು. ಸಾಮಾಜಿಕ ಪಿಡುಗು ತೊಡೆದು ಹಾಕಲು ಸಂಬAಧಿಸಿದ ಇಲಾಖೆಗಳು ಹೆಚ್ಚೆಚ್ಚು ಅರಿವು ಮೂಡಿಸಲು ಕ್ರಮ ವಹಿಸಬೇಕು. ಅತ್ಯಂತ ಕಾಳಜಿಪೂರ್ವಕವಾಗಿ ಜವಾಬ್ದಾರಿಯುತವಾಗಿ ಈ ಅನಿಷ್ಠ ಪದ್ಧತಿಗಳ ವಿರುದ್ಧ ಜನ ಜಾಗೃತಿ ಮೂಡಿಸುವಲ್ಲಿ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಸಮನ್ವಯ ಸಾಧಿಸಿಕೊಂಡು ಇಂತಹ ಅನಿಷ್ಠ ಪದ್ಧತಿಗಳು ಜರುಗದಂತೆ ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು. 

 ಬಾಣಂತಿ ಮತ್ತು ಗರ್ಭೀಣಿ ಮಹಿಳೆಯರಿಗಾಗಿರುವ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಂಡಿದ್ದು, ಈ ಯೋಜನೆಯಡಿ ಮೊದಲನೆ ಹರಿಗೆಗೆ 5 ಸಾವಿರ ರೂ. ನೇರ ನಗದು ವರ್ಗಾವಣೆ ಮೂಲಕ ಎರಡು ಕಂತುಗಳಲ್ಲಿ ಪಾವತಿಸಲಾಗುತ್ತದೆ. ದಿನಾಂಕ : 01-04-2022ರಂದು ಅಥವಾ ನಂತರ ಜನನವಾದ ಎರಡನೇ ಮಗು ಹೆಣ್ಣು ಮಗು ಫಲಾನುಭವಿಗೆ ಒಂದೇ ಕಂತಿನಲ್ಲಿ 6 ಸಾವಿರ ರೂ.ಗಳನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ. ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯನ್ನು ಗುರಿ ನಿಗದಿಪಡಿಸಿಕೊಂಡು ನೂರರಕ್ಕೆ ನೂರು ಪ್ರಗತಿ ಸಾಧಿಸಬೇಕು. ಎಲ್ಲ ಇಲಾಖೆಗಳು ಮಕ್ಕಳ ಕ್ಷೇತ್ರದದಲ್ಲಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಸೌಲಭ್ಯ ಒದಗಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು. 

 ಶಕ್ತಿ ಸದನಕ್ಕೆ ನಿರಂತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಕ್ತಿ ಸದನದಲ್ಲಿ ಪುನಶ್ಚೇತನ ಹೊಂದಿದ ಮಹಿಳೆಯರಿಗೆ ಕೌಶಲ್ಯಾಧಾರಿತ ತರಬೇತಿ ಒದಗಿಸುವ ಮೂಲಕ ಅವರ ಜೀವನಾಧಾರಕ್ಕೆ ಕ್ರಮ ವಹಿಸಬೇಕು ಅವಶ್ಯವಿದ್ದಲ್ಲಿ ಕಾನೂನು ನೆರವು ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು. 

 ರಾಷ್ಟಿçÃಯ ಪೋಷಣ ಅಭಿಯಾನವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಜಾರಿಗೊಳಿಸಬೇಕು. ಮಕ್ಕಳಿಗೆ ಲಾಭ ತಲುಪಿಸುವ ಮೂಲಕ ಯೋಜನೆ ಯಶಸ್ವಿಗೊಳಿಸಬೇಕು. ಮಹಿಳಾ ಮತ್ತು ಮಕ್ಕಳ ಇಲಾಕೆ ಮಹತ್ತರ ಜವಾಬ್ದಾರಿಯಾಗಿದೆ. ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಹಾಗೂ ವಿವಿಧ ಆರೋಗ್ಯ ಸಮಸ್ಯೆಯಿಂದ ಅಪೌಷ್ಠಿಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಲು ಮನೆ-ಮನೆಗೆ ಭೇಟಿ ನೀಡಿ. ಪರಿಶೀಲನೆ ನಡೆಸಬೇಕು. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿದ್ದಲ್ಲಿ, ಅಂತಹ ಮಕ್ಕಳಿಗೆ ಎಲ್ಲ ಅಗತ್ಯ ಸೌಲಭ್ಯ ಒದಗಿಸಬೇಕು. ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸುವ ಮೂಲಕ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

 ಅನಿಮಿಯಾದಿಂದ ಬಳಲುವ ಗರ್ಭೀಣಿ ಮಹಿಳೆಯಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು ಎದುರಾಗಲಿದ್ದು, ಈ ಕುರಿತು ಜನರಲ್ಲಿ ಸೂಕ್ತ ತಿಳುವಳಿಕೆ ಮೂಡಿಸಬೇಕು. ಈ ಕುರಿತು ಜನರಲ್ಲಿರುವ ಅನುಮಾನವನ್ನು ದೂರ ಮಾಡಿ ಅಗತ್ಯ ಆರೋಗ್ಯ ಸಲಹೆ ನೀಡುವಂತೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಆಹಾರ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಒಂದು ವೇಳೆ ಅಂಗನವಾಡಿ ಕೇಂದ್ರಗಳು ವಿವಿಧ ಕಾರಣಗಳಿಂದ ಸ್ಥಳಾಂತರಗೊAಡಿದ್ದಲ್ಲಿ, ಈ ಕುರಿತು ಮಾಹಿತಿಯನ್ನು ಸ್ಥಳೀಯ ಸಾರ್ವಜನಿಕರಿಗೆ ಒದಗಿಸಬೇಕು. ಮಕ್ಕಳ ಸರ್ವಾಗೀಣ ಅಭಿವೃದ್ದಿ ಸರ್ಕಾರ ಹಲವು ಯೋಜನೆ ಸೌಲಭ್ಯಗಳನ್ನು ಒದಗಿಸಿದ್ದು, ಇದರ ಸದುಪಯೋಗ ಮಕ್ಕಳಿಗೆ ದೊರಕಿಸಲು ಅಧಿಕಾರಿಗಳು ಸೇವಾಮನೋಭಾವದಿಂದ ಕಾರ್ಯನಿರ್ವಹಿಸಿ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು. 

ಪ್ರಗತಿ ಪರಿಶೀಲನಾ ಸಭೆ : ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಮತ್ತು ಮಕ್ಕಳ ಕಲ್ಯಾಣ ಸಮಿತಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.

 ಸಭೆಯಲ್ಲಿ ಬಾಲ ನ್ಯಾಯ ಕಾಯ್ದೆಯಡಿ ನೊಂದಣಿಯಾದ 11 ಕೇಂದ್ರಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಕೇಂದ್ರಗಳಲ್ಲಿ ಎಲ್ಲ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವ ಕುರಿತು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಶಿಶು ಅಭಿವೃದ್ದಿ ಯೋಜನಾಧಿಕಾರಿಗಳನ್ನು ನಿಯೋಜಿಸಿ ಮೂಲಭೂತ ಸೌಕರ್ಯಗಳು ಕಲ್ಪಿಸಿರುವ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು. ಕೇಂದ್ರಗಳಲ್ಲಿ ಸುರಕ್ಷತೆ ಕುರಿತು ಸಿಸಿಟಿವಿ ಅಳವಡಿಸಿಕೊಂಡಿರುವ ಕುರಿತು ಪರಿಶೀಲನೆ ನಡೆಸಬೇಕು. ದುರಸ್ತಿಗೊಳಗಾದಲ್ಲಿ ಅಂತಹ ಸಿಸಿಟಿ ಟಿವಿಗಳನ್ನು ದುರಸ್ತಿಗೊಳಿಸಲು ಕ್ರಮ ವಹಿಸಬೇಕು. ಬಾಲಮಂದಿರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಔಷಧ ಪೂರೈಸಬೇಕು. ನಿರಂತರÀವಾಗಿ ಮಕ್ಕಳ ಆರೋಗ್ಯ ತಪಾಸಣೆ ನಡೆಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. 

 ಮಕ್ಕಳ ಸಹಾಯವಾಣಿ ಸಂಖ್ಯೆ 1098/112 ಗೆ ಏಪ್ರಿಲ್‌ದಿಂದ ಅಕ್ಟೋಬರ್ ವರೆಗೆ ಸ್ವೀಕರಿಸಲಾದ ಕರೆಗಳ ಮಾಹಿತಿಯನ್ನು ಸಭೆಗೆ ನೀಡಲಾಯಿತು. 

 ಸಭೆಯಲ್ಲಿ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಡಿವೈಎಸ್‌ಪಿ ಬಸವರಾಜ ಯಲಿಗಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ದೀಪಾ ಕಾಳೆ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೀಪಾಕ್ಷಿ ಜಾನಕಿ, ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ಪ್ರಶಾಂತ ಪೂಜಾರ, ಕಾರ್ಮಿಕ ಇಲಾಖೆ ಅಧಿಕಾರಿ ಉಮಾಶ್ರೀ ಕೋಳಿ ಸೇರಿದಂತೆ ಜಿಲ್ಲೆಯ ವಿವಿಧ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tuesday, November 4, 2025

ಮಾಧ್ಯಮ ಮಿತ್ರರು ತಮ್ಮ ಅಮೂಲ್ಯವಾದ ಮತ ನನಗೆ ನೀಡಿ : ಅಶೋಕ ಯಡಳ್ಳಿ

ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಕಾನಿಪ ಚುನಾವಣೆ ಪ್ರಚಾರ ಸಭೆಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಅಶೋಕ ಯಡಳ್ಳಿ ಮತಯಾಚಿಸಿದರು.

ಸಿಂದಗಿ: ಗ್ರಾಮೀಣ ಭಾಗದ ಪತ್ರಕರ್ತರಿಗಾಗಿ ತಾಲೂಕು ಕೇಂದ್ರದಲ್ಲಿ ಪತ್ರಿಕಾ ಭವನಕ್ಕಾಗಿ ನಿವೇಶನ, ಆರೋಗ್ಯ ವಿಮೆ, ಮಕ್ಕಳ ಶಿಕ್ಷಣಕ್ಕಾಗಿ ಸರಕಾರದ ಸೌಕರ್ಯ ಸೇರಿದಂತೆ ಸಂಘದ ವಿವಿಧ ರೀತಿಯ ಅನುದಾನದಲ್ಲಿ ಸಹಾಯ ಸೌಲಭ್ಯ ಒದಗಿಸಲು ನಮ್ಮ ತಂಡ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಅಶೋಕ ಯಡಳ್ಳಿ ಭರವಸೆ ನೀಡಿದರು.

ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಕಾನಿಪ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮತಯಾಚಿಸಿ ಅವರು ಮಾತನಾಡಿದರು.

ಒತ್ತಡದ ಬದುಕಿನ ಮದ್ಯದಲ್ಲಿಯೂ ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ಜನತೆಗೆ ತಿಳಿಸುತ್ತಾ ಸಮಾಜದ ಏಳ್ಗೆಗೆ ಶ್ರಮಿಸುವ ನಮ್ಮ ಪತ್ರಕರ್ತರಿಗೆ ಹಾಗೂ ಅವರ ಕುಟುಂಬಗಳಿಗೆ ಸಾಮಾಜಿಕ ಭದ್ರತೆ ಅತ್ಯವಶ್ಯವಾಗಿದೆ. ಜಿಲ್ಲೆಯ ಹಿರಿಯ ಪತ್ರಕರ್ತರ ಮಾರ್ಗದರ್ಶನ, ಸಹಕಾರ ಮತ್ತು ಬೆಂಬಲದಿಂದ 24 ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮಾತ್ರ ನ.09 ರಂದು ಚುನಾವಣೆ ನಡೆಯಲಿದೆ. ಮಾಧ್ಯಮ ಮಿತ್ರರೆಲ್ಲರೂ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಬೆಂಬಲಿಸಬೇಕು ಎಂದರು.

ಈ ಸಂದರ್ಭ ಇಂದುಶೇಖ ಮಣೂರ, ರಾಜು ಕೊಂಡಗೂಳಿ, ಶರಣು ಮಸಳಿ, ಮೊಹ್ಮದಸಮೀರ ಇನಾಮದಾರ, ಪ್ರಕಾಶ ಬೆಣ್ಣೂರ, ಪ್ರಭು ಕುಮಟಗಿ, ಬಾಬು ತಡಲಗಿ, ಮೋಹನ ಕುಲಕರ್ಣಿ, ಗುರುರಾಜ ಗದ್ದನಕೇರಿ, ದೇವೆಂದ್ರ ಹೆಳವರ, ಶಶಿಕಾಂತ ಮೇಂಡೆಗಾರ, ರಾಹುಲ ಆಪ್ಟೆ, ಕಾನಿಪ ತಾಲೂಕಾಧ್ಯಕ್ಷ ಆನಂದ ಶಾಬಾದಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಅಲ್ಲಾಪುರ, ಎಂ.ಎ.ಖತೀಬ, ಸಲೀಂಪಟೇಲ್ ಮರ್ತೂರ, ನವೀನ ಶೆಳ್ಳಗಿ, ಶಿವಾನಂದ ಆಲಮೇಲ, ಗುಂಡು ಕುಲಕರ್ಣಿ, ಸಿದ್ದು ಕಡಗಂಚಿ, ವಿಜಯಕುಮಾರ ಪತ್ತಾರ, ಅಂಬರೀಷ ಸುಣಗಾರ, ಸಿದ್ದಲಿಂಗ ಕಿಣಗಿ, ರಮೇಶ ಪೂಜಾರಿ ಸೇರಿದಂತೆ ಅನೇಕರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗುಮ್ಮಟ ನಗರಿಯಲ್ಲಿ ಹೆಚ್ಚಿದ ಆತಂಕ ಅಧಿಕಾರಿಗಳು ಮಾತ್ರ ನಿರಾತಂಕ ಮುಂಜಾಗೃತೆ-ಜನಜಾಗೃತೆಗಿಲ್ಲ ಕ್ರಮ ಪದೇ ಪದೇ ಭೂಕಂಪನ-ಬೆಚ್ಚಿಬಿದ್ದ ಜನ


ವಿಜಯಪುರ: ಕಳೆದೊಂದು ವರ್ಷದಿಂದ ಪದೇ ಪದೇ ಭೂಮಿ ಕಂಪಿಸುತ್ತಲೇ ಇದ್ದ, ಜನರ ಆತಂಕ ಹೆಚ್ಚಾಗಿದ್ದರೂ ಅಧಿಕಾರಿಗಳು ಮಾತ್ರ ನಿರಾತಂಕವಾಗಿದ್ದಾರೆ.

ಆಗಾಗ ಕೇಳಿ ಬರುತ್ತಿರುವ ಜೋರಾದ ಸದ್ದು ಜನರ ಎದೆ ನಡುಗಿಸುತ್ತಿದೆ. ಆದರೆ, ಅಧಿಕಾರಿಗಳು ಇದೊಂದು ಸಾಮಾನ್ಯ ಪ್ರಕ್ರಿಯೆ ಎನ್ನುತ್ತಿದ್ದಾರೆ. ಕೆಲವೊಮ್ಮ ದೊಡ್ಡ ಪ್ರಮಾಣದಲ್ಲಿ ಭೂಮಿ ಕಂಪಿಸಿದರೂ ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರ ದಾಖಲಾಗಿಲ್ಲ ಎನ್ನುತ್ತಾರೆ. ಹೀಗಾಗಿ ಜನರ ಆತಂಕ ಹೆಚ್ಚಾಗುತ್ತಿದ್ದು, ಜೀವ ಅಂಗೈಯಲ್ಲಿ ಹಿಡಿದು ಜೀವಿಸುವಂತಾಗಿದೆ. ಸ್ವಲ್ಪ ನೆಲ ಅದುರಿದರೂ ರಾತ್ರಿಯಿಡೀ ನಿದ್ರೆಗೆಡುವ ಸ್ಥಿತಿ ನಿರ್ಮಾಣವಾಗಿದೆ. ಯಾವಾಗ ಏನಾಗುತ್ತದೆಯೋ ಎಂಬ ಭಯ ಕಾಡಲಾರಂಭಿಸಿದೆ. 

ಕಳೆದ ಎರಡು ವಾರದಲ್ಲಿ ಹಲವು ಬಾರಿ ಹಲವರಿಗೆ ಭೂಕಂಪನದ ಅನುಭವ ಹಾಗೂ ಭಾರಿ ಶಬ್ದದಿಂದ ನಗರದ ಕೆಲವೊಂದು ಬಡಾವಣೆಗಳಲ್ಲಿ ಜನರ ಭಯಭೀತರಾಗಿ ಮನೆಯಿಂದ ಹೊರ ಬಂದಿದ್ದಾರೆ. ಇದು ಭೂಕಂಪನ ಅಥವಾ ಯಾವುದೇ ಬೇರೆ ಕಾರಣಗಳಿಗೆ ಇಂತಹ ಘಟನೆಗಳಾಗುತ್ತಿವೆಯೇ ಎಂಬುದು ಜನರಿಗೆ ತಿಳಿಯದಾಗಿದೆ. ಪರಸ್ಪರ ತಮ್ಮ ಸ್ನೇಹಿತರಿಗೆ- ನೆರೆ ಹೊರೆಯವರಿಗೆ ಫೋನ್ ಮಾಡಿ ನಿಮಗೆ ಭೂಕಂಪನದ ಅನುಭವದ ಕುರಿತು ವಿಚಾರಣೆ ಮಾಡಿ, ಗೊಂದಲಕ್ಕೀಡಾಗಿದ್ದಾರೆ. 

ಜನರಲ್ಲಿನ ಆತಂಕವನ್ನು ದೂರ ಮಾಡಲು ಸಂಬಂಧಿಸಿದ ಅಧಿಕಾರಿಗಳು, ಪರೀಕ್ಷೆ ನಡೆಸಿ ನಿಖರ ಕಾರಣ ಕಂಡು ಹಿಡಿಯಬೇಕಿದೆ. ವಿಜ್ಞಾನಿಗಳಿಂದ ಅಧ್ಯಯನ ನಡೆಯಬೇಕಿದೆ. ಯಾವುದೇ ದೊಡ್ಡ ಅನಾಹುತ ಸಂಭವಿಸುವ ಮೊದಲೇ ಅಧಿಕಾರಿಗಳು ಈ ವಿಷಯದ ಗಂಭೀರತೆಯನ್ನು ಅರಿತುಕೊಂಡು ಇಂತಹ ಘಟನೆಗಳು ಜರುಗಲು ಇರುವ ವೈಜ್ಞಾನಿಕ ಕಾರಣವನ್ನು ಕಂಡು ಹಿಡಿದು ಜನರಿಗೆ ಈ ಕುರಿತು ತಿಳುವಳಿಕೆ ಮೂಡಿಸಿದ್ದಲ್ಲಿ ಮಾತ್ರ ಜನರು ನಿಟ್ಟುಸಿರು ಬಿಡಲು ಸಾಧ್ಯವಾಗುತ್ತದೆ. ಇಲ್ಲಿ ನಡೆಯುತ್ತಿರುವ ಶಬ್ದ-ಕಂಪನ ಭೂಕಂಪನವೇ  ಆಗಿದ್ದಲ್ಲಿ ಸೂಕ್ತ ಎಚ್ಚರಿಕೆ ಜಿಲ್ಲಾಡಳಿತದಿಂದ ನೀಡಿ, ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತವಾಗಿದೆ.

ಭೂಕಂಪನ ಸಂಭವಿಸಿರುವ ಕುರಿತು ಜಿಲ್ಲೆಯಲ್ಲಿ  ಸ್ಥಾಪಿಸಲಾದ ಭೂಕಂಪನ ಮಾಪನ ಕೇಂದ್ರದಲ್ಲಿ ದಾಖಲಾಗಿಲ್ಲ. ಪದೇ ಪದೇ ಕಂಪನ ಹಾಗೂ ಭಾರಿ ಶಬ್ದವಾಗುವುದು ಇದು ಭೂಕಂಪನವಲ್ಲ, ಇದೊಂದು ಭೂಮಿಯೊಳಗೆ ಕ್ರಿಯೆಯಾಗಿದೆ. ಇದರಿಂದ ಭೂಮಿಯ ಮೇಲ್ಮೈ ಭಾಗದಲ್ಲಿ ಯಾವುದೇ ಹಾನಿವುಂಟು ಮಾಡುವುದಿಲ್ಲ ಎಂದು ಅಧಿಕಾರಿಗಳ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.

ವರದಿ: A.I.Bagewadi

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

05-11-2025 EE DIVASA KANNADA DAILY NEWS PAPER

ಐಎಎಸ್-ಕೆಎಎಸ್ ಹಾಗೂ ಗ್ರೂಪ್ ಸಿ ಪರೀಕ್ಷಾ ಪೂರ್ವ ತರಬೇತಿಗೆ ಸಾಮಾನ್ಯ ಪರೀಕ್ಷೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

 ವಿಜಯಪುರ  : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸುವ ಪ್ರಸಕ್ತ 2025-26ನೇ ಸಾಲಿನ ಯುಪಿಎಸ್‌ಸಿ ನಾಗರೀಕ ಸೇವೆ, ಕೆಎಎಸ್ ಗೆಜೆಟೆಡ್ ಪ್ರೊಬೆಷನರ್ ಮತ್ತು ಗ್ರೂಪ್-ಸಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು ವಿಜಯಪುರ ನಗರದಲ್ಲಿ ನ.8 ಹಾಗೂ 9 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಗರದ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜ್‌ನಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಗ್ರೂಪ್-ಸಿ ಪರೀಕ್ಷೆಗೆ 131 ಹಾಗೂ ಐಎಎಸ್ ಮತ್ತು ಕೆಎಎಸ್ ಪರೀಕ್ಷೆ 381 ಅಭ್ಯರ್ಥಿಗಳು ನೊಂದಾಯಿಸಿಕೊAಡಿದ್ದು, ನ.8 ರ ಶನಿವಾರ ಬೆಳಿಗ್ಗೆ 10-30ರಿಂದ ಮಧ್ಯಾಹ್ನ 12-30ರವರೆಗೆ ಗ್ರೂಪ್-ಸಿ ಪರೀಕ್ಷೆಗಳು ಹಾಗೂ ನ.9ರ ಭಾನುವಾರ ಬೆಳಿಗ್ಗೆ 10-30ರಿಂದ 12-30ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2 ರಿಂದ 3-30ರವರೆಗೆ ಪತ್ರಿಕೆ-2 ಯುಪಿಎಸ್‌ಸಿ ನಾಗರಿಕ ಸೇವೆ, ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಗಳು ಜರುಗಲಿವೆ. 

 ವ್ಯವಸ್ತಿತ ಪರೀಕ್ಷೆಗಾಗಿ ತ್ರಿ-ಸದಸ್ಯ ಸಮಿತಿ ನಿಯೋಜಿಸಲಾಗಿದೆ. ಪರೀಕ್ಷಾ ದಿನದಂದು ಸೂಕ್ತ ಪೊಲೀಸ್ ಭದ್ರತೆ, ಪ್ರಾಥಮಿಕ ಚಿಕಿತ್ಸಾ ವ್ಯವಸ್ಥೆ, ಪಶ್ನೆ ಪತ್ರಿಕೆಗಳನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಸ್ವೀಕರಿಸಿ, ಭದ್ರಪಡಿಸುವುದು ಹಾಗೂ ನಿಯಮಾನುಸಾರ ಪರೀಕ್ಷಾ ದಿನದಂದು ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆ ರವಾನೆ, ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆ ತಲುಪಿಸುವುದು, ನಂತರ ಉತ್ತರ ಪತ್ರಿಕೆಗಳನ್ನು ನಿಯಮಾನುಸಾರ ಜಿಲ್ಲಾ ಖಜಾನೆಗೆ ಮರಳಿಸುವುದು, ಪರೀಕ್ಷೆಗೆ ನಿಯೋಜಿತ ಸ್ಥಾನಿತ ಜಾಗೃತ ಅಧಿಕಾರಿಗಳು ಯಾವುದೇ ರೀತಿಯ ಅಕ್ರಮ ನಡೆಯದಂತೆ ಸೂಕ್ತ ಗಮನ ಹರಿಸಬೇಕು. ಮುಖ್ಯ ಅಧೀಕ್ಷಕರು ಮತ್ತು ಉಪ ಅಧೀಕ್ಷಕರು ಪರೀಕ್ಷೆಗೆ ಮುನ್ನ ಪರೀಕ್ಷಾ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ಖಚಿತಪಡಿಸಿಕೊಳ್ಳುವುದು ಸೇರಿದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಲು ಸೂಕ್ತ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

 ಪರೀಕ್ಷೆ ಮುಗಿಯವರೆಗೂ ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರ-ಕೊಠಡಿಗಳಿAದ ಪ್ರಶ್ನೆ ಪತ್ರಿಕೆ ಬಹಿರಂಗವಾಗುವAತಿಲ್ಲ. ಈ ಬಗ್ಗೆ ಜಿಲ್ಲಾ ನೊಡಲ್ ಅಧಿಕಾರಿಗಳು ತೀವ್ರ ನಿಗಾ ಇರಿಸಬೇಕು. ತಪ್ಪಿದ್ದಲ್ಲಿ ನೊಡಲ್ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿಸಲಾಗುವುದು ಎಂದು ಅವರು ಹೇಳಿದರು. 

 ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ಪ್ರಶಾಂತ ಪೂಜಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಎಂ.ಎ.ಶೇಖ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕಾ ವಿಸ್ತರಣಾಧಿಕಾರಿ ರಾಮಲಿಂಗ ಭೈರೋಡಗಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸೋಮಶೇಖರ ಕೊಲ್ಲೂರು, ಅರಕೇರಿಯ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜ್ ಪ್ರಾಂಶುಪಾಲ ಸಂಗಣ್ಣ ಆಲಗೂರ, ಅಫಜಲಪೂರ ಟಕ್ಕೆ ಮುಸ್ಲಿಂ ವಸತಿ ಶಾಲೆ ಪ್ರಾಂಶುಪಾಲ ಸಿದ್ರಾಮ ಎಂಟೆತ್ತ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ತಾಲೂಕಾ ವಿಸ್ತರಣಾಧಿಕಾರಿ ಇಲಾಯಿ ನಾಗರಾಳ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಾದಕ ವಸ್ತು ನಿಷೇಧ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ


 ವಿಜಯಪುರ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಬಾಲಿಕೆಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿಜಯಪೂರ ಇವರ ಸಂಯುಕ್ತಾಶ್ರಯದಲ್ಲಿ ನ.4ರ ಮಂಗಳವಾರ ನಗರದ ಬಾಲಿಕೆಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ಮಾದಕ ವಸ್ತು ನಿಷೇಧ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು. 

 ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್. ಹಾಗರಗಿ ಅವರು ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳನ್ನು ಚಾಕಲೇಟ, ಪಾನ್ ಮಸಾಲಾ ಮತ್ತು ಇತರೆ ತಿಂಡಿ-ತಿನಿಸುಗಳಲ್ಲಿ ಕಲಬೆರಕೆ ಮಾಡುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಮಾದಕ ವಸ್ತುಗಳ ನಿಯಂತ್ರಣವು ವ್ಯಸನದ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ತಡೆಗಟ್ಟುವಿಕೆಯ ಹಂತಗಳನ್ನು ಒಳಗೊಂಡಿದೆ. ಇದು ವ್ಯಸನದ ಮೂಲ ಕಾರಣಗಳನ್ನು ಮತ್ತು ಅದರ ಪರಿಣಾಮಗಳನ್ನು ನಿರ್ವಹಿಸಲು ವಿವಿಧ ವಿಧಾನಗಳನ್ನು ಬಳಸುತ್ತದೆ. ಉತ್ತೇಜಕಗಳು ನಮ್ಮ ದೇಹದ ನೈಸರ್ಗಿಕ ಕಾರ್ಯಗಳನ್ನು ಹೆಚ್ಚಿಸುವ ಔಷಧಿಗಳ ವಿಧಗಳಾಗಿವೆ. ಅವು ಜಾಗರೂಕತೆ ಮತ್ತು ಸಂಭ್ರಮದ ಭಾವನೆಯನ್ನು ಉಂಟುಮಾಡುತ್ತವೆ. ಒಬ್ಬ ವ್ಯಕ್ತಿಯು ನಿಗದಿತ ಪ್ರಮಾಣವನ್ನು ಅನುಸರಿಸದೆ ಅದನ್ನು ಸೇವಿಸಿದರೆ, ಅದು ಮಾದಕತೆ ಅಥವಾ ಅವಲಂಬನೆಗೆ ಕಾರಣವಾಗಹುಬುದು ಎಂದು ಅವರು ಹೇಳಿದರು. 

 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿ.ಜಿ. ಬಿರಾದಾರ, ಮಾದಕ ವಸ್ತು ನಿಷೇದ ಕುರಿತು ಸ-ವಿಸ್ತಾರವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸಿ.ಚಿ.ನಾಟೀಕಾರ ವಹಿಸಿದ್ದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಎಸ್.ಎಸ್.ಚೂರಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, November 3, 2025

ಸಿದ್ಧರಾಮೇಶ್ವರ ಸ್ಮರಣೆಗಾಗಿ ಪ್ರತಿವರ್ಷ ಒಂದು ಕೆರೆ ನಿರ್ಮಾಣ : ಸಚಿವ ಶಿವಾನಂದ ಪಾಟೀಲ

 

ಚಿಕ್ಕಬಾಸೂರು : 12ನೇ ಶತಮಾನದ ಸಿದ್ಧರಾಮೇಶ್ವರ ಶರಣ ಸಾಮಾಜಿಕ ಕಾಳಜಿಯ ಪರಿಣಾಮ ಜೀವಜಲ ಸಂರಕ್ಷಣೆಯಿಂದಾಗಿ ನಾಡು ಜೀವಜಲ ಕಂಡಿದೆ. ಹೀಗಾಗಿ ಸಿದ್ಧರಾಮೇಶ್ವರ ಸ್ಮರಣೆಗಾಗಿ ರಾಜ್ಯದಲ್ಲಿ ಪ್ರತಿವರ್ಷ ಒಂದೊಂದು ಕೆರೆ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುವುದಾಗಿ ಹಾವೇರಿ ಜಿಲ್ಲಾ ಉಸ್ತುವಾರಿ ಹೊಂದಿರುವ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

ಸೋಮವಾರ ನಗರದ ಚಿಕ್ಕಬಾಸೂರು ಗ್ರಾಮದಲ್ಲಿ ಶ್ರೀಗುರು ಸಿದ್ಧರಾಮೇಶ್ವರ ದೇವಸ್ಥಾನ ನಿರ್ಮಾಣ ಹಾಗೂ ಸರ್ಕಾರಿ ಪದವಿ ಕಾಲೇಜಿನ ಸಭಾಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಿದ್ಧರಾಮೇಶ್ವರ ಶರಣರು ನಾಡಿನಾದ್ಯಂದ ಜಲ ಸಂರಕ್ಷಣೆಗಾಗಿ ಕೆರೆ, ಭಾವಿಗಳನ್ನು ನಿರ್ಮಿಸಿ ಸಮಾಜಕ್ಕೆ ಅನುಕರಣೀಯ ಸೇವಾ ಮಾರ್ಗ ಹಾಕಿ ಕೊಟ್ಟಿದ್ದಾರೆ ಎಂದು ವಿವರಿಸಿದರು.

ಬಸವೇಶ್ವರರ ನೇತೃತ್ವದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಜಾತಿ, ಮತ‌, ಪಂಥಗಳಿಲ್ಲದೇ, ಲಿಂಗಭೇದ ಇಲ್ಲದೇ ಸೌಹಾರ್ದಯುತ ಸಮಾಜ ಕಟ್ಟಲಾಗಿತ್ತು. ಸಿದ್ಧರಾಮೇಶ್ವರರ ಹೆಸರಿನಲ್ಲಿ ದೇವಸ್ಥಾನ ನಿರ್ಮಿಸುತ್ತಿರುವ ಚಿಕ್ಕಬಾಸೂರು ಗ್ರಾಮಸ್ಥರು ಶರಣರ ಆಶಯದಂತೆ ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಸಿದ್ಧರಾಮೇಶ್ವರ ಶರಣರ ಸ್ಮರಣೆಗಾಗಿ ಚಿಕ್ಕಬಾಸೂರು ಗ್ರಾಮಸ್ಥರು ದೇವಸ್ಥಾನ ಜೀರ್ಣೋದ್ಧಾರಕ್ಕೆ ಮುಂದಾಗಿದ್ದೀರಿ. ರಾಜ್ಯದಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡುತ್ತಿದ್ದು, ಜನರು ಕೂಡ ದೇಣಿಗೆ ಸಂಗ್ರಹಿಸಿ ದೇವಸ್ಥಾನ ಕಟ್ಟುತ್ತಿದ್ದಾರೆ ಎಂದರು.

ಈ ಹಿಂದೆ ಹಲವು ಬಾರಿ ಮಳೆ ಇಲ್ಲದೇ ಭೀಕರ ಬರ ಕಂಡಿರುವ  ನಾವು, ಇದೀಗ ಅತಿವೃಷ್ಟಿ ಕಾಡಿದೆ. ಪ್ರಸಕ್ತ ವರ್ಷ ನಿರೀಕ್ಷೆ ಮೀರಿ ಮಳೆಯಾಗಿದ್ದು, ಅಂತರ್ಜಲದ ಮಟ್ಟ ಮೇಲೇರಿದೆ. ರಾಜ್ಯದ ಎಲ್ಲ ಜಲಾಶಯಗಳು ಸಂಪೂರ್ಣ ಭರ್ತಿ ಆಗಿವೆ. ಆದರೆ ರೈತರು ಹಸಿಬರದಿಂದ ಆರ್ಥಿಕ ನಷ್ಟ ಅನುಭವಿಸಿದ್ದಾರೆ. ಈಗಾಗಲೇ ನಮ್ಮ ಸರ್ಕಾರ ಬೆಳೆ ಹಾನಿ ಪರಿಹಾರ ನೀಡುತ್ತಿದ್ದು, ಶೀಘ್ರವೇ ಹಾವೇರಿ ಜಿಲ್ಲೆಯಲ್ಲೂ ಬೆಳೆಹಾನಿ ಪರಿಹಾರ ವಿತರಿಸುವುದಾಗಿ ಹೇಳಿದರು.

ಇದಲ್ಲದೇ ಚಿಕ್ಕಬಾಸೂರು ಗ್ರಾಮದಲ್ಲಿ ಸರಕಾರಿ ಪದವಿ ಕಾಲೇಜಿನಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಸಭಾಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಸ್ಥಳೀಯ ಶಾಸಕರಾದ ಬಸವರಾಜ ಶಿವಣ್ಣವರ ಪರಿಶ್ರಮದಿಂದ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಚಿಕ್ಕಬಾಸೂರು ಗ್ರಾಮದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯಕ್ಕೆ ಮನವಿ ಮಾಡಿದ್ದು, ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.

ಬ್ಯಾಡಗಿ ಶಾಸಕರಾದ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವರಾಜ ಶಿವಣ್ಣವರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಸುರೇಶಗೌಡ ಪಾಟೀಲ, ವಿರೂಪಾಕ್ಷಪ್ಪ ಬಳ್ಳಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ನೀರಲಕೇರಿ, ಪಂಚ ಗ್ಯಾರಂಟಿ ಯೋಜನೆ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ,  ಸೋಮಶೇಖರ ಬಣಕಾರ, ಜಗದೀಶ್ವರಯ್ಯ ಮಠದ,  ಷಣ್ಮುಖಪ್ಪ ತಲ್ಲೂರು, ಜಯಣ್ಣ ಮಲ್ಲಿಗಾರ, ಸುರೇಶಗೌಡ ಪಾಟೀಲ ದಿಡಗೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು



Friday, October 24, 2025

25-10-2025 EE DIVASA KANNADA DAILY NEWS PAPER

ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ರಕ್ತದಲ್ಲಿ ಸಹಿ ಮಾಡಿ ಪ್ರತಿಭಟನೆ

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಹೋರಾಟಗಾರರು ತಮ್ಮ ರಕ್ತದ ಮೂಲಕ ಸಹಿ ಮಾಡಿ ಸರ್ಕಾರಕ್ಕೆ ಸಂದೇಶ ರವಾನಿಸಿದರು.

ವಿಜಯಪುರ: ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸುವಂತೆ ಆಗ್ರಹಿಸಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ 37 ನೇ ದಿನ ಪೂರೈಸಿದ ಹಿನ್ನೆಲೆ ಶುಕ್ರವಾರ ರಕ್ತದ ಮೂಲಕ ಸಹಿ ಸಂಗ್ರಹಿಸಿ ಪ್ರತಿಭಟಿಸಲಾಯಿತು.

ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿ ಪದಾಧಿಕಾರಿಗಳು, ವೈದ್ಯರು, ಮಾಧ್ಯಮ ಪ್ರತಿನಿಧಿಗಳು, ವಿವಿಧ ಸಹಕಾರಿ ಸಂಘಗಳ ಮುಖಂಡರು, ಕನ್ನಡ ಹೋರಾಟಗಾರರು, ವಿದ್ಯಾರ್ಥಿಗಳು ಬಿಳಿ ಬಟ್ಟೆ ಮೇಲೆ ತಮ್ಮ ರಕ್ತದ ಮೂಲಕ ಸಹಿ ಮಾಡಿ ಸರ್ಕಾರಕ್ಕೆ ಒತ್ತಾಯಿಸಿದ್ದು, ರಕ್ತ ಸಹಿ ಸಂಗ್ರಹ ಮಾಡಿರುವ ಬೃಹತ್ ಬ್ಯಾನರ್, ಮನವಿಯೊಂದಿಗೆ ಮುಖ್ಯಮಂತ್ರಿಗಳಿಗೆ ರವಾನಿಸಲಾಯಿತು.

ಪ್ರತಿಭಟನಾಕಾರರು, ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆಯಿಂದ ಶೋಷನೆಗೆ ದಾರಿಯಾಗಿ, ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ನಿಲುಕದ ನಕ್ಷತ್ರವಾಗುವ ಜೊತೆಗೆ ಬಡ ರೋಗಿಗಳು ಚಿಕಿತ್ಸೆ ಪಡೆಯಲು ಪರದಾಡುವಂತಾಗುತ್ತದೆ. ಹೀಗಾಗಿ ಪೂರ್ಣವಾಗಿ ಸರ್ಕಾರವೇ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಹೋರಾಟ ಸಮಿತಿಯ ಸದಸ್ಯರಾದ ಅರವಿಂದ ಕುಲಕರ್ಣಿ, ಭಗವಾನ್ ರೆಡ್ಡಿ, ಅಕ್ರಂ ಮಾಶಾಳಕರ, ಲಲಿತಾ ಬಿಜ್ಜರಗಿ, ಸುರೇಶ ಜೀಬಿ, ಸುರೇಶ ಬಿಜಾಪುರ, ಲಕ್ಷ್ಮಣ ಹಂದ್ರಾಳ, ಮಲ್ಲಿಕಾರ್ಜುನ ಬಟಗಿ, ಮಲ್ಲಿಕಾರ್ಜುನ ಎಚ್.ಟಿ., ಭರತಕುಮಾರ ಎಚ್.ಟಿ., ಸಿದ್ದಲಿಂಗ ಬಾಗೇವಾಡಿ, ಜಗದೇವ ಸೂರ್ಯವಂಶಿ, ಶಿವಬಾಳಮ್ಮ ಕೊಂಡಗೂಳಿ, ಸಿದ್ದರಾಮ ಹಿರೇಮಠ, ಗೀತಾ ಎಚ್., ಶ್ರೀಕಾಂತ ಕೊಂಡಗೂಳಿ, ಸಿದ್ರಾಮ ಹಳ್ಳೂರ, ಲಕ್ಷ್ಮಣ ಕಂಬಾಗಿ, ಸುಶೀಲ ಮಿಣಜಗಿ, ಜ್ಯೋತಿ ಮಿಣಜಗಿ, ಕಾವೇರಿ ರಜಪೂತ, ಸುನೀತಾ ಮೋರೆ, ಮೀನಾಕ್ಷಿ ಸಿಂಗೆ, ಬಾಬುರಾವ್ ಬೀರಕಬ್ಬಿ, ರೇಷ್ಮಾ ಕಟ್ಟಿಮನಿ, ಟೀನಾ ಜೆವರಲ್, ಫಾದರ್ ಕೆವಿನ್, ದಸ್ತಗಿರ್ ಉಕ್ಕಲಿ, ಅಬ್ದುಲ್ ರೆಹಮಾನ್ ನಾಸಿರ್, ಚಂದ್ರಶೇಖರ ಘಂಟೆಪ್ಪಗೋಳ, ಫಯಾಜ್ ಕಲಾದಗಿ, ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು



Tuesday, October 21, 2025

22-10-2025 EE DIVASA KANNADA DAILY NEWS PAPER

21-10-2025 EE DIVASA KANNADA DAILY NEWS PAPER

ದೀಪದಲ್ಲಿ ಸರಕಾರಕ್ಕೆ ಧಿಕ್ಕಾರ ಎಂದು ಬರೆದು ; ಸರ್ಕಾರಿ ಮೆಡಿಕಲ್ ಕಾಲೇಜಿಗಾಗಿ ಕರಾಳ ದೀಪಾವಳಿ ಆಚರಣೆ

ವಿಜಯಪುರ : ನಗರದಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಇಂದು 34ನೇ ದಿನ ಪೂರೈಸಿದೆ,

ದೀಪಾವಳಿ ಹಬ್ಬದ ಮಧ್ಯೆಯು ಹೋರಾಟ ನಡೆಯುತ್ತಿದೆ. ಸರಕಾರ ಹೋರಾಟಕ್ಕೆ ಸ್ಪಂದನೆ ಮಾಡದ ಹಿನ್ನೆಲೆಯಲ್ಲಿ ಹೋರಾಟಗಾರರು ದೀಪದಲ್ಲಿ ಸರಕಾರಕ್ಕೆ ಧಿಕ್ಕಾರ ಎಂದು ದೀಪದಲ್ಲಿ ಬರೆದು ಕರಾಳ. ದೀಪಾವಳಿ ಆಚರಣೆ ಮಾಡಿದರು.

ಇದೇ ಸಂದರ್ಭದಲ್ಲಿ ಸರಕಾರ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿದ ಮುಖಂಡರು ಸರಕಾರದ ಬೇಜವಾಬ್ದಾರಿತನವನ್ನು ಕಟು ಮಾತಿನಲ್ಲಿ ಟೀಕಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ, ಅರವಿಂದ ಕುಲಕರ್ಣಿ, ಭಗವಾನ ರೆಡ್ಡಿ ಡಾ ಟಿ ಎಸ್ ಸುನೀತಕುಮಾರ, ಸುರೇಶ ಬಿಜಾಪುರ, ಬೋಗೇಶ ಸೋಲಾಪುರ, ಮಲ್ಲಿಕಾರ್ಜುನ ಬಟಗಿ, ಸಿದ್ದಲಿಂಗ ಬಾಗೇವಾಡಿ,ಲಕ್ಷ್ಮಣ ಹಂದ್ರಾಳ ಲಲಿತಾ ಬಿಜ್ಜರಗಿ, ಭರತಕುಮಾರ ಎಚ್ ಟಿ,ಸುರೇಶ ಜೇಬಿ, ಅಕ್ರಂ ಮಾಶಾಳಕರ, ಸಿದ್ದರಾಮಯ್ಯ ಹಿರೇಮಠ ಗೀತಾ ಎಚ್, ಜ್ಯೋತಿ ಮಿಣಜಗಿ, ಲಕ್ಷ್ಮಣ ಕಂಬಾಗಿ, ಭೀಮು ಉಪ್ಪಾರ ಶಿವಬಾಳಮ್ಮ ಕೊಂಡಗೂಳಿ, ಗಿರೀಶ ಕಲಘಟಗಿ, ಪೂಜಾ ಜೋಮಿವಾಲೆ,ಫಯಾಜ್ ಕಲಾದಗಿ, ಶಿವಾನಂದ ಸುತಗುಂಡಿ, ಎ ಎಂ ಪಟೇಲ್ ಚಂದ್ರಶೇಖರ ಗಬ್ಬೂರ ಸೇರಿ ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Friday, October 17, 2025

ಸಿ.ಎಂ.ಗೆ ಮನವರಿಕೆ ಮಾಡಿದ್ದೇನೆ : ಸಚಿವ ಶಿವಾನಂದ ಪಾಟೀಲ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು

 


ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ
ರಾದ ಶಿವಾನಂದ ಪಾಟೀಲ ಹೇಳಿದರು.

ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಮೊನ್ನೆ ಕರೆದಿದ್ದ ಸಚಿವರ ಸಭೆಯಲ್ಲಿ ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದೇನೆ. ಸಿದ್ಧರಾಮಯ್ಯ ಅವರು ಈ ಹಿಂದೆ ಮುಖ್ಯಮತ್ರಿಗಳಾಗಿದ್ದಾಗ ನಾನೇ ಮೂರು ಬಾರಿ ಸದನದಲ್ಲಿ ಪ್ರಶ್ನೆ ಮಾಡಿದ್ದೇನೆ ಎಂಬುದನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದ್ದೇನೆ ಎಂದರು.

400 ಕೋಟಿ ರೂ. ಖರ್ಚಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದಾಗ ಬೇರೆಯವರು 500 ಕೋಟಿ ರೂ. ಖರ್ಚು ಮಾಡಿದರೂ, ನಮ್ಮ ಜಿಲ್ಲೆಯಲ್ಲಿ ಅದರ ಅರ್ಧಕ್ಕಿಂತ ಕಡಿಮೆ ಖರ್ಚಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಗಲಿದೆ ಎಂದು ಮನವರಿಕೆ ಮಾಡಿದ್ದೇನೆ. ವೈದ್ಯಕೀಯ ಶಿಕ್ಷಣ ಸಚಿವರಿಗೂ ಹೇಳಿದ್ದು, ಅವರೂ ಒಪ್ಪಿದ್ದಾರೆ. ಸಚಿವ ಸಂಪುಟ ಸಭೆಯಲ್ಲೂ ಈ ವಿಷಯವನ್ನು ಚರ್ಚೆ ಮಾಡಿದಾಗ ಜಿಲ್ಲಾ ಉಸ್ತುವಾರಿ ಮಂತ್ರಿಗಳೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದಾರೆ ಎಂದರು.

ವಿಜಯಪುರ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಸ್ವಯಂ ಪ್ರೇರಿತ ಹೋರಾಟ ನಡೆಯುತ್ತಿದೆ. ಯಾವುದೇ ಪ್ರತಿಭಟನೆ ಒಂದು ಬೇಡಿಕೆ ಇಟ್ಟುಕೊಂಡು ನಡೆಯುತ್ತದೆ. ಧರಣಿ ಕುಳಿತವರು ಅಪರಾಧಿ-ನಿರಪರಾಧಿ ಎಂದು ಸಂಬೋಧಿಸುವುದು ಸರಿಯಲ್ಲ. ಯಾರದೋ ಕುಮ್ಮಕ್ಕಿನಿಂದ ಹೋರಾಟ ನಡೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳು ಹೇಳಿದ್ದಾರೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಯಾವ ದೃಷ್ಟಿಕೋನದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ, ಅವರನ್ನೇ ಕೇಳಿ.

ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ನಿರ್ಧರಿಸಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ನಮ್ಮ ಸರ್ಕಾರದ ಅವಧಿಯಲ್ಲಾಗಿಲ್ಲ, ಈ ಕುರಿತು ಮರು ಪರಿಶೀಲನೆ ಪ್ರಸ್ತಾವನೆ ಸಲ್ಲಿಸಬೇಕಿದ್ದು, ಕಾನೂನು ಪ್ರಕ್ರಿಯೆ ಮುಗಿದ ಮೇಲೆ ಸರಳವಾಗಿ ಕಾಲೇಜು ಸ್ಥಾಪನೆಗೆ ಅವಕಾಶ ಸಿಗಲಿದೆ ಎಂದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Wednesday, October 15, 2025

16-10-2025 EE DIVASA KANNADA DAILY NEWS PAPER

ವಿಜಯಪುರ ಬಂದ್ ; ವಾಲ್ಮೀಕಿ ಸಮಾಜದ ಬೆಂಬಲ

 ವಿಜಯಪುರ : ವಿಜಯಪುರ ನಗರದಲ್ಲಿ ಅ.16 ರಂದು ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿಯವರ ಮೇಲಿನ ಶೂ ಎಸೆತ ಪ್ರಕರಣವನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನೀಡಿರುವ ಬಂದ್ ಕರೆಗೆ ವಾಲ್ಮೀಕಿ ಸಮಾಜವು ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯವರ ಮೇಲಿನ ಹಲ್ಲೆಯು ಭಾರತದ ಇತಿಹಾಸದಲ್ಲಿಯೇ ಒಂದು ಕರಾಳ ಘಟನೆಯಾಗಿದ್ದು ಭಾರತೀಯರಾದ ನಾವೆಲ್ಲರೂ ಅದನ್ನು ಒಕ್ಕೊರಲಿನಿಂದ ಖಂಡಿಸಬೇಕಿದೆ. ಅದಕ್ಕಾಗಿ ಪ್ರತಿಯೊಬ್ಬರು ವಿಜಯಪುರ ಬಂದ್ ಗೆ ಬೆಂಬಲಿಸುವ ಮೂಲಕ ಕರಾಳ ಘಟನೆ ಮತ್ತೊಮ್ಮೆ ಮರುಕಳಿಸದಂತೆ ಎಚ್ಚರಿಕೆ ನೀಡಬೇಕಾಗಿದೆ ಎಂದು ಮಲ್ಲಿಕಾರ್ಜುನ ಬಟಗಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Tuesday, October 14, 2025

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ


ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಬೇಕೆಂದು ಆಗ್ರಹಿಸಿ 27ನೇ ದಿನದದಂದು ಬಬಲೇಶ್ವರ ತಾಲೂಕಿನ ವಿವಿಧ ಸಂಘಟನೆಯ ಆಶ್ರಯದಲ್ಲಿ ಹೋರಾಟ ಸಮಿತಿಯ ವತಿಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

ಪಟ್ಟಣದಿಂದ ಶಾಂತವೀರ್ ವೃತ್ತದಿಂದ ತೆಹಸೀಲ್ದಾರ್ ಕಚೇರಿವರೆಗೆ ತಲುಪಿ ತಹಸೀಲ್ದಾರ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಸರ್ಕಾರದ ಮಟ್ಟದಲ್ಲಿ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಬೇಕೆಂದು ಹುನ್ನಾರ ನಡೆದಿದೆ. ಜಿಲ್ಲೆಯಲ್ಲಿ ಶಾಸಕರೊಬ್ಬರು ಬಂಡವಾಳ ಹೂಡುವುದಾಗಿ ಹೇಳಿದ್ದು, ಇದು ಸರಿಯಲ್ಲ. ಬೇಕಿದ್ದರೆ ಅವರೇ ಮತ್ತೊಂದು ಖಾಸಗಿ ಕಾಲೇಜು ಸ್ಥಾಪಿಸಿಕೊಳ್ಳಲಿ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿಜಯಪುರ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆ ತುಂಬಾ ಸರಿಯಾಗಿ ನಡೆದಿದೆ. ಅಲ್ಲಿ ಸುಮಾರು 153 ಏಕರೆಗಳಷ್ಟು ಜಾಗವೂ ಕೂಡ ಇದೆ. ಸರ್ಕಾರ ಅಲ್ಲಿಯೇ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು. ಇದು ಬಡವರ ಪಾಲಿಗೆ ಆಶಾಕಿರಣವಾಗಲಿದೆ ಎಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ಸದಸ್ಯರು ಆಗ್ರಹಿಸಿದರು.
ಬಿ.ಭಗವಾನ್ ರೆಡ್ಡಿ ಮಾತನಾಡುತ್ತಾ 153 ಎಕರೆ ಜಮೀನು ಹೊಂದಿರುವ ಏಕೈಕ ಜಿಲ್ಲೆ ವಿಜಯಪುರ ಆಗಿದ್ದು ಬಡವರ ಮತ್ತು ಹಿಂದುಳಿದ ಮಕ್ಕಳು ಕಲಿಯಲು ಸರ್ಕಾರ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂದು ಹೇಳಿದರು. ಜಮಖಂಡಿ ವಿಜಯಪುರ ರಾಜ್ಯ ಹೆದ್ದಾರಿ ತಡೆದು ಶಾಂತವೀರ ಸರ್ಕಲ್ ನಿಂದ ತಹಶಿಲ್ದಾರರ ಕಛೇರಿಯವರೆಗೆ ರ್ಯಾಲಿಯನ್ನು ಮಾಡಲಾಯಿತು. ಮಲ್ಲು ಕನ್ನೂರ ಜಿಲ್ಲಾ ಪಂಚಾಯತ ಮಾಜಿ ಸದಸ್ಯರು ಮಾತನಾಡುತ್ತಾ ಮೆಡಿಕಲ್ ಕಾಲೇಜು ಆಗಲೇಬೆಕು ಇಲ್ಲವಾದರೆ ಬಬಲೇಶ್ವರ ತಾಲ್ಲೂಕು ಬಂದ ಮಾಡುವುದಾಗಿ ಕರೆ ನೀಡಿದರು. ಮಲ್ಲಿಕಾರ್ಜುನ ಬಟಗಿ ಯವರು ಮಾತನಾಡುತ್ತಾ ಬಿಜಾಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಲೇಬೇಕು ಎಂದು ಶಾಸಕರಲ್ಲಿ ವಿನಂತಿ ಮಾಡಿಕೊಳ್ಳಲಾಯಿತು. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಮಂತ್ರಿಗಳು ಇದನ್ನು ಅರ್ಥ ಮಾಡಿಕೊಂಡು ಕಾಲೇಜು ನಿರ್ಮಾಣ ಮಾಡಬೇಕೆಂದು ಒತ್ತಾಯಿಸಲಾಯಿತು.
ಹೋರಾಟ ಸಮಿತಿಯ ಲಕ್ಷ್ಮಣ ಹಂದ್ರಾಳ ರವರು ಮಾತನಾಡುತ್ತಾ ಬಡ ಮಕ್ಕಳು ಓದಲು ಸರಕಾರಿ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿ ಪಡಿಸಬೇಕು ಹಾಗೂ ಉಚಿತ ಶಿಕ್ಷಣ ಪಡೆಯಲು ಎಲ್ಲರಿಗೂ ಸಹಾಯವಾಗುತ್ತದೆ. ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವುದು ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿರಬೇಕು ಎಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ಫಾತಿಮಾ ಮಕಂದಾರ್, ಗಂಗಾ ಪೂಜಾರಿ, ಮಹಾದೇವಿ ಮಾದರ, ನಿಂಗವ್ವ ಗಾದಿವಡರ, ಲಕ್ಷ್ಮಿ ಕವಟಗಿ, ಭಾಗಮ್ಮ ಗೆನ್ನರ, ಸುಜಾತಾ ಚಲಿಬೆಳಿ, ಸುನಂದಾ ಕನಮಡಿ, ಹೋರಾಟ ಸಮಿತಿಯ ಸದಸ್ಯರಾದ ಲಕ್ಷ್ಮಣ್ ಹಂದ್ರಾಳ, ಭಗವಾನ್ ರೆಡ್ಡಿ, ಅಕ್ರಮ ಮಾಶಾಲ್ಕರ್, ಲಕ್ಷ್ಮಣ್ ಕಂಬಾಗಿ, ಮಲ್ಲಿಕಾರ್ಜುನ ಬಟಗಿ, ಲಲಿತಾ ಬಿಜ್ಜರಗಿ, ಕೆವಿನ್, ಜಗದೇವ ಸೂರ್ಯವಂಶಿ, ರೈತ ಮುಖಂಡರಾದ  ಮಲ್ಲು ಕನ್ನೂರ್, ಬೀರಪ್ಪ ಸೊಡ್ಡಿ, ಈರಣ್ಣ ಶಿರಮಗೊಂಡ, ಬಸವರಾಜ್ ರೆಡ್ಡಿ, ಸುರೇಶ್ ಅರಸೂರು, ರಾಜಶೇಖರ್ ರೆಡ್ಡಿ, ಸಿದ್ರಾಮ್ ಹಲ್ಲೂರ್, ರುದ್ರಪ್ಪ ಗೋಲಸಂಗಿ, ಆಮ್ ಆದ್ಮಿ ಪಕ್ಷದ ಬಾಬು ಬಿಜಾಪುರ, ಪೀರಸಾಭ್ ವಾಲಿಕಾರ್, ಮೀರಾಸಾಬ್ ತೊದಲಬಾಗಿ, ಅಬ್ದುಲ್ ಗೋರಿ, ಮಹಿಳಾ ಸಂಘದ ಜಯಾ ಪಿಳ್ಳೈ, ಸುನಿತಾ ಮೋರೆ, ಜೀವನ್ ಜ್ಯೋತಿ ದೇವದಾಸಿ ಸಂಘದ ಚಂದಾಬಾಯಿ ಮಾದರ,  ಹೀನಾ ನದಾಫ್, ಮಹಿಳಾ ಒಕ್ಕೂಟದ ಶ್ರೀದೇವಿ ಡೆಂಗಿ, ಪಡೆವ್ವಾ ಮಾದರ, ಶೋಭಾ ಹರಿಜನ, ಸುಜಾತಾ ಏಳಿಬಲ್ಲಿ, ಮಾನಸಾ ಏಳಬಲ್ಲಿ, ಅಬ್ದುಲ್ ಕಲಾಂ ಸಂಸ್ಥೆಯ ರಜಿಯಾ ಮೊಮಿನ್  ಮತ್ತಿರರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

15-10-2025 EE DIVASA KANNADA DAILY NEWS PAPER

Monday, October 13, 2025

14-10-2025 EE DIVASA KANNADA DAILY NEWS PAPER

ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

 ವಿಜಯಪುರ  : ಸರ್ವೋಚ್ಛ ನ್ಯಾಯಾಲಯದ ತೀರ್ಪಿನಂತೆ ಬೀದಿ ನಾಯಿಗಳಿಗೆ ಆಶ್ರಯ ಒದಗಿಸಲು ಬುರಾನಪುರನಲ್ಲಿ ಕಾಯ್ದಿರಿಸಿದ ಎರಡು ಎಕರೆ ಜಾಗದಲ್ಲಿ ಡಾಗ್ ಶೆಲ್ಟರ್ ನಿರ್ಮಾಣಕ್ಕಾಗಿ ನೀಲ ನಕ್ಷೆ ತಯಾರಿಸಿ ಸಲ್ಲಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದ್ದಾರೆ. 

 ಸೋಮವಾರ ನಗರದ ಬುರಾನಪುರದಲ್ಲಿರುವ ಗೋಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಸೂಚನೆ ನೀಡಿ, ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಕಾಳಜಿಯಿಂದ ನೋಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. 

 ನಗರದಲ್ಲಿರುವ ಪಶುಪಾಲನಾ ಇಲಾಖೆ ಕಚೇರಿಗೆ ಭೇಟಿ ನೀಡಿದ ಅವರು, ಬೀದಿ ನಾಯಿಗಳ ಸಂತಾನ ಹರಣಶಸ್ತç ಚಿಕಿತ್ಸಾ ಕಾರ್ಯಕ್ರಮದ ಕಟ್ಟಡವನ್ನು ನವೀಕರಿಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ ಅವರು, ಪಾಲಿಕ್ಲಿನಿಕ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಜಾನುವಾರು ಚಿಕಿತ್ಸೆ, ನಾಯಿ ಮತ್ತು ಬೆಕ್ಕುಗಳ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸಾ ಕೊಠಡಿ, ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡುವುದನ್ನು ಸಂಬAಧಿಸಿದ ಪಶುವೈದ್ಯರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. 

 ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಅಶೋಕ ಘೋಣಸಗಿ, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ವಿ.ಎನ್.ಹಾಸಂಗಿಹಾಳ, ಅಮೋಘ ತಳವಾರ ಸೇರಿದಂತೆ ವಿವಿಧ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Sunday, October 12, 2025

13-10-2025 EE DIVASA KANNADA DAILY NEWS PAPER

ಶಾಂತಿ, ಸದ್ಭಾವದ ಭಾವನೆಯನ್ನು ಅರಳಿಸುವುದೇ ಬೌದ್ಧ ಧರ್ಮದ ದಿವ್ಯ ಸಂದೇಶ ಹಾಗೂ ಉದ್ದೇಶವಾಗಿದೆ,

ವಿಜಯಪುರ : ಶಾಂತಿ, ಸದ್ಭಾವದ ಭಾವನೆಯನ್ನು ಅರಳಿಸುವುದೇ ಬೌದ್ಧ ಧರ್ಮದ ದಿವ್ಯ ಸಂದೇಶ ಹಾಗೂ ಉದ್ದೇಶವಾಗಿದೆ, ಈ ಕಾರ್ಯವನ್ನಿರಿಸಿಕೊಂಡು ಇದೇ ದಿ.14 ರಂದು ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಧಮ್ಮಚಕ್ರ ಪರಿವರ್ತನ ದಿನ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮ, ಧಮ್ಮ ರಥಯಾತ್ರೆ ನಡೆಯಲಿದೆ ಎಂದು ಬೌದ್ಧ ವಿಹಾರ ನಿರ್ಮಾಣ ಸಮಿತಿ ಗೌರವಾಧ್ಯಕ್ಷ, ಝೆನ್ ಮಾಸ್ಟರ್ ಡಾ. ಶಾಕು ಬೋಧಿಧಮ್ಮ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು, ಭಗವಾನ ಬುದ್ಧರು ಸಾರಾನಾಥದಲ್ಲಿ ಧರ್ಮೋಪದೇಶ ಮಾಡುವ ಮೂಲಕ ಧಮ್ಮಚಕ್ರವನ್ನು ಸ್ಥಾಪಿಸಿದರು, ಸಾಮ್ರಾಟ ಅಶೋಕನು ಸಹ ಧರ್ಮಚಕ್ರ ಸ್ಥಾಪನೆ ಮಾಡಿದರು, ನಂತರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರು ಲಕ್ಷಾಂತರ ಅನುಯಾಯಿಗಳ ಸಮ್ಮುಖದಲ್ಲಿ ಅಶೋಕ ವಿಜಯದಶಮಿ ದಿವಸ ಬೌದ್ಧ ಧರ್ಮ ಸ್ವೀಕರಿಸಿ ಮೂರನೇಯ ಬಾರಿಗೆ ಧರ್ಮಚಕ್ರ ಸ್ಥಾಪಿಸಿದರು, ಶಾಂತಿ, ಸಹೋದರತೆ, ಸಮಾನತೆಯ ಚಿಂತನೆಗಳು ಎಲ್ಲೆಡೆ ಪಸರಿಸಬೇಕು ಎನ್ನುವ ದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ ಎಂದರು.

ವರ್ಷಾವಾಸ ಎಂದರೆ ಮಳೆಗಾಲ ವಾಸ, ಮಳೆಗಾಲದ ಮೂರು ತಿಂಗಳಲ್ಲಿ ಬೌದ್ಧ ಧರ್ಮ ಪ್ರಸಾರಕರು ಧ್ಯಾನ ಹಾಗೂ ಸಾಧನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದರು, ಅಧ್ಯಾತ್ಮಿಕ ಅಧ್ಯಯನದಲ್ಲಿ ತೊಡಗಿಸಿಕೊಳ್ಳುತ್ತಿದ್ದರು, ಆಂತರಿಕ ಶುದ್ಧೀಕರಣಕ್ಕೆ ಇದು ಒಂದು ದಿವ್ಯ ಭಾಗವಾಗಿ ಪರಿಗಣಿತವಾಗಿತ್ತು. ಮಳೆಗಾಲದಲ್ಲಿ ಪ್ರಯಾಣ ಕೈಗೊಂಡರೆ ಅರಿವಿಲ್ಲದೇ ಅನೇಕ ಸಣ್ಣ ಜೀವಿಗಳಿಗೆ ಹಾನಿಯಾಗುವುದನ್ನು ತಪ್ಪಿಸುವ ಉದ್ದೇಶಕ್ಕಾಗಿ ಬೌದ್ಧ ಧರ್ಮ ಪ್ರಸಾರಕರು ಈ ಅವಧಿಯಲ್ಲಿ ಪ್ರಯಾಣ ಮಾಡುತ್ತಿರಲಿಲ್ಲ ಎಂದು ವಿವರಿಸಿದರು. ಹೀಗಾಗಿ ವರ್ಷಾವಾಸ ಎನ್ನುವುದು ಬೌದ್ಧ ಧರ್ಮದ ಪ್ರಮುಖ ಆಚರಣೆಯಾಗಿದ್ದು, ಈ ಅವಧಿಯಲ್ಲಿ ಎಲ್ಲರೂ ಆತ್ಮಶುದ್ಧೀಕರಣದ ಪವಿತ್ರ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಧಮ್ಮ ರಥಯಾತ್ರೆ :

ವರ್ಷಾವಾಸ ಕಾರ್ಯಕ್ರಮದ ಪ್ರಯುಕ್ತ ಧಮ್ಮ ರಥಯಾತ್ರೆ ಅತ್ಯಂತ ವೈಭವದಿಂದ ನಡೆಯಲಿದ್ದು, ಜಿಲ್ಲಾ ಪಂಚಾಯತ ಬಳಿ ಇರುವ ಡಾ.ಬಿ.ಆರ್. ಅಂಬೇಡ್ಕರ ಭವನದ ಆವರಣದಿಂದ ಬೆಳಿಗ್ಗೆ 9.30 ಗಂಟೆಗೆ ಈ ರಥಯಾತ್ರೆ ಆರಂಭಗೊಳ್ಳಲಿದ್ದು, ಭಗವಾನ ಬುದ್ಧ ಹಾಗೂ ವಿಶ್ವ ರತ್ನ ಡಾ.ಬಿ.ಆರ್. ಅಂಬೇಡ್ಕರ ಅವರ ಭಾವಚಿತ್ರದ ಬೌದ್ಧ ಧಮ್ಮ ರಥ ಯಾತ್ರೆ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಾಗಿ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರಕ್ಕೆ ತಲುಪಲಿದೆ. ನಂತರ ಮಧ್ಯಾಹ್ನ 11.30 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

ಬುದ್ಧ ವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ, ಉಪಾಧ್ಯಕ್ಷ ಶಶಿಕಾಂತ ಹೊನವಾಡಕರ, ಪ್ರಧಾನ ಕಾರ್ಯದರ್ಶಿ ನಾಗರಾಜ ಲಂಬು, ನಿರ್ದೇಶಕರಾದ ದಶವಂತ ಗುನ್ನಾಪೂರ, ಸಾಬು ಚಲವಾದಿ, ಸುರೇಶ ಗೊಣಸಗಿ, ಕಾನೂನು ಸಲಹೆಗಾರ ಕೆ.ಎಂ. ಕೂಡಲಗಿ ಸೇರಿದಂತೆ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

12-10-2025 EE DIVASA KANNADA DAILY NEWS PAPER

Friday, October 10, 2025

11-10-2025 EE DIVASA KANNADA DAILY NEWS PAPER

ಮಾನಸಿಕ ಆರೋಗ್ಯ ಮತ್ತು ಸೌಲಭ್ಯಗಳ ಅರಿವು ಮೂಡಿಸಿ : ನ್ಯಾಯಾಧೀಶ ಅರವಿಂದ ಹಾಗರಗಿ


 

ವಿಜಯಪುರ  : ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಹೇಳಿದರು. 

 ಜಿಲ್ಲಾ ಆಡಳಿತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ವಿಜಯಪುರ ಹಾಗೂ ವಿವಿದ ನರ್ಸಿಂಗ್ ಕಾಲೇಜು ಹಾಗೂ ಮನೋಜ್ಯೋತಿ ಫೌಂಡೇಶನ್ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಪದ್ಮಶ್ರೀ ಪ್ರಶಸ್ತಿ ವಿಜೇತರರು ಹಾಗೂ ಹಿರಿಯ ಮನೋರೋಗ ತಜ್ಞ ಡಾ|| ಸಿ.ಆರ್. ಚಂದ್ರಶೇಖರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಸಂಪತ್ತ ಗುಣಾರಿ ಅವರೊಂದಿಗೆ ಜಂಟಿಯಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 ಮಾನಸಿಕ ಕಾಯಿಲೆಯು ಪುರಾತನ ಕಾಲದಿಂದ ಮನುಷ್ಯನನ್ನು ಕಾಡುತ್ತಾ ಬಂದಿದೆ ಇದಕ್ಕೆ ಸರಳವಾದ ಚಿಕಿತ್ಸೆ ಇರಲಿಲ್ಲ ಈಗ ಆ ಕಾಲ ಬದಲಾಗಿದೆ. ರಾಷ್ಟಿçÃಯ ಮಾನಸಿಕ ಆರೋಗ್ಯ ಕಾರ್ಯಕ್ರಮ ಬಂದ ನಂತರ ಸಮುದಾಯಕ್ಕೆ ಆರೋಗ್ಯದ ಅರಿವು ಮತ್ತು ಜ್ಞಾನವನ್ನು ಕೊಡಲಾಗುತ್ತಿದ್ದು, ಅಲ್ಲದೇ ಮಾನಸಿಕ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ಹಾಗೂ ಆಪ್ತಸಮಾಲೋಚನೆ ಮೂಲಕ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಜೀವನ ಶೈಲಿಯ ಬದಲಾವಣೆಯಿಂದ ಮಾನಸಿಕವಾಗಿ ಆರೋಗ್ಯವಂತರಾಬೇಕು ಎಂದು ಅವರು ಹೇಳಿದರು. 

 ಮಾನಸಿಕ ಆರೋಗ್ಯದ ಬಗೆಗೆ ಸಾರ್ವಜನಿಕರಲ್ಲಿ ಅರಿವುವನ್ನು ಮೂಡಿಸುವುದು ಬಹಳ ಅತ್ಯವಶ್ಯಕ ಎಂಬುದನ್ನು ಮನಗಂಡು 1948ರಲ್ಲಿ ವಿಶ್ವ ಮಾನಸಿಕ ಆರೋಗ್ಯ ಒಕ್ಕೂಟ ಸ್ಥಾಪನೆಯಾಯಿತು. 1992ರಲ್ಲಿ ಮೊದಲ ಬಾರಿಗೆ ಒಕ್ಕೂಟದ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು ಎಂದು ಅವರು ಹೇಳಿದರು. 

 ಡಾ|| ಸಿ.ಆರ್. ಚಂದ್ರಶೇಖರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಹಿರಿಯ ಮನೋರೋಗ ತಜ್ಞರು ಮಾತನಾಡುತ್ತಾ ದೈಹಿಕ ರೋಗಗಳನ್ನು ಗುಣಪಡಿಸಲು ಚಿಕಿತ್ಸೆ ನೀಡುವಂತೆ ಮಾನಸಿಕ ರೋಗಗಳನ್ನು ಚಿಕಿತ್ಸೆ ನೀಡಿ ಗುಣಪಡಿಸಬಹುದು ಇದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕೇಂದ್ರಗಳನ್ನು ಪ್ರಾರಂಭಿಸಿ ಚಿಕಿತ್ಸಾ ಸೌಲಭ್ಯಗಳನ್ನು ನೀಡುತ್ತಿದೆ. ಈ ಸೌಲಭ್ಯದ ಅರಿವು ರೋಗಿಗಳಿಗೆ ಮೂಡಿಸುವುದು ದಿನಾಚರಣೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು. 

ಡಾ|| ಸಂಪತ್ತ ಗುಣಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ರವರು ರಾಜ್ಯ ಸರ್ಕಾರ 2014ರಲ್ಲಿ “ಮನೋಚೈತನ್ಯ ಕ್ಲಿನಿಕ” ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿತ್ತು. ಈ ಕಾರ್ಯಕ್ರಮದಡಿಯಲ್ಲಿ ಪ್ರತಿ ಮಂಗಳವಾರ ತಾಲೂಕು ಆಸ್ಪತ್ರೆಗಳಲ್ಲಿ ಮಾನಸಿಕ ಆರೋಗ್ಯ ತಪಾಸಣೆ ಮತ್ತು ಆರೈಕೆ ಕುರಿತಾಗಿ ಶಿಬಿರಗಳನ್ನು ಆಯೋಜಿಸಲಾಗುತ್ತದೆ. ಗರ್ಭಿಣಿ ಮತ್ತು ಬಾಣಂತಿಯರ ಮಾನಸಿಕ ಸಮಸ್ಯೆಗಳನ್ನು ಗುರುತಿಸಿ ಅವರುಗಳಿಗೆ ಸೂಕ್ತ ಮಾನಸಿಕ ಚಿಕಿತ್ಸೆ ಮತ್ತು ಆಪ್ತ ಸಮಾಲೋಚನಾ ಸೇವಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶವಾಗಿದೆ. ರಾಷ್ಟಿçÃಯ ಟೆಲಿಮಾನಸಿಕ ಆರೋಗ್ಯ ಕಾರ್ಯಕ್ರಮವಾಗಿದ್ದು ಇದು ಮಾನಸಿಕ ಆರೋಗ್ಯ ಸೇವಾ ಸೌಲಭ್ಯವನ್ನು ಉಚಿತವಾಗಿ ದಿನದ 24 ಗಂಟೆಗಳು ಒದಗಿಸುವ ಮಾನಸಿಕ ಆರೋಗ್ಯ ಸಹಾಯವಾಣಿಯಾಗಿದೆ (ಸಹಾಯವಾಣಿ ಸಂಖ್ಯೆ:14416) ಪರೀಕ್ಷೆ ಒತ್ತಡ, ಮಾದಕ ಮತ್ತು ಮಧ್ಯವ್ಯಸನಿಗಳು, ಕೌಟುಂಬಿಕ ಸಮಸ್ಯೆ, ಖಿನ್ನತೆ ಮುಂತಾದ ಮಾನಸಿಕ ರೋಗಗಳಿಂದ ಬಳಲುವವರಿಗೆ ಮಾನಸಿಕ ಆರೋಗ್ಯ ವಿಷಯ ಪರಿಣಿತರು ಆಪ್ತಸಲಹೆ ಸೇವೆಯನ್ನು ಒದಗಿಸುವರು. ಮಾನಸಿಕ ರೋಗಿಗಳ ಗೌಷ್ಯತೆಯನ್ನು ಕಾಪಾಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮನೋರೋಗ ತಜ್ಞರಾದ ಡಾ|| ಮಂಜುನಾಥ ಮಸಳಿ ಪ್ರಾಸ್ತಾವಿಕವಾಗಿ ಮಾತನಾಡಿ, ತಂಬಾಕು ಹಾಗೂ ದೂಮಪಾನ ಸೇವನೆಯಿಂದ ಮಾನಸಿಕ ಖಿನ್ನತೆಯಿಂದ ಹೆಚ್ಚು ಜನರು ಬಳಲುತ್ತಿದ್ದು. ಅದರಲ್ಲಿ ಮಹಿಳೆಯರು ಶೇ 3ರಷ್ಟು ಮಾನಸಿಕ ರೋಗಕ್ಕೆ ತುತ್ತಾಗುತ್ತಿದ್ದಾರೆ. ಹಾಗೂ ವಿವಿದ ರೀತಿಯ ಮಾನಸಿಕ ರೋಗಗಳ ಕುರಿತು ಮತ್ತು ಅದರ ಚಿಕಿತ್ಸೆಯ ಬಗ್ಗೆ ಮಾತನಾಡಿದರು.

ಜಾಥಾ ಹಾಗೂ ವೇಧಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿಮೂಲನಾ ಅಧಿಕಾರಿ ಡಾ|| ಅರ್ಚನಾ ಕುಲಕರ್ಣಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಜಾನ್ ಕಟವಟೆ, ಮನೋರೋಗ ತಜ್ಞ ಡಾ.ಚೌಕಿಮಠ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲೂರ, ಸುರೇಶ ಹೊಸಮನಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ದಶವಂತ, ಕೆ.ಬಿ ಬಾಗವಾನ ಕ್ಲಿನಿಕ್ ಸೈಕಾಲೋಜಿಸ್ಟ್, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ವಿವಿಧ ನರ್ಸಿಂಗ ಕಾಲೇಜಿನ ಭೋದಕ ಸಿಬ್ಬಂದಿ ವರ್ಗದವರು ಮತ್ತು ವಿಧ್ಯಾರ್ಥಿ/ವಿಧ್ಯಾರ್ಥಿನಿಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್ ಭಾಗವಾನ ಸ್ವಾಗತಿಸಿದರು. ರವಿ ಕಿತ್ತೂರ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

ವಸತಿ ನಿಲಯ ನಿರ್ವಹಣೆಗೆ ಹಾಸ್ಟೆಲ್ ಮೆಂಟರ್-ವಾರ್ಡನ್‌ಗಳಿಗೆ ಮಾರ್ಗದರ್ಶನ ಸಭೆ ವಸತಿ ನಿಲಯಗಳಲ್ಲಿನ ಮಕ್ಕಳ ಒತ್ತಡ ನಿವಾರಣೆ-ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ವಹಿಸಿ -ಜಿಲ್ಲಾಧಿಕಾರಿ ಡಾ.ಆನಂದ ಕೆ.


 ವಿಜಯಪುರ  : ಜಿಲ್ಲೆಯಲ್ಲಿರುವ ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಪರೀಕ್ಷಾ ಒತ್ತಡವನ್ನು ತಗ್ಗಿಸುವ ನಿಟ್ಟಿನಲ್ಲಿ ಸಂಬAಧಿಸಿದ ವಸತಿ ನಿಲಯಗಳ ವಾರ್ಡನ್‌ಗಳು ಹಾಗೂ ಹಾಸ್ಟೆಲ್ ಮೆಂಟರ್‌ಗಳು ಮಕ್ಕಳಿಗೆ ಮುಕ್ತವಾದ ವಾತಾವರಣ ಕಲ್ಪಿಸಿ, ಮಕ್ಕಳೊಂದಿಗೆ ಬೆರೆತು, ಸಮಸ್ಯೆಗಳನ್ನು ಆಲಿಸಿ-ಚರ್ಚಿಸಿ, ಪರಿಹರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು. 

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವಿಹಯಪುರ ಇವರ ಸಂಯುಕ್ತಾಶ್ರಯದಲ್ಲಿ ಹಾಸ್ಟೇಲ್ ಮೆಂಟರ್ ಮತ್ತು ವಾರ್ಡನ್ ರವರಿಗೆ ವಸತಿ ನಿಲಯಗಳ ನಿರ್ವಹಣೆಯ ಕುರಿತು ಮಾರ್ಗದರ್ಶಿ ಸಭೆ ಹಾಗೂ ಜಿಲ್ಲಾ ಮಟ್ಟದ. ವಿದ್ಯಾರ್ಥಿಗಳ ಸುರಕ್ಷಾ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

 ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆಯಲು ತಮ್ಮ ಕುಟುಂಬದಿAದ ದೂರವಾಗಿರುತ್ತಾರೆ. ವಾರಕ್ಕೊಮ್ಮೆಯಾದರೂ ಒಂದು ಅವರೊಂದಿಗೆ ಊಟ ಮಾಡುವ ಮೂಲಕ ಅವರೊಂದಿಗೆ ಬೆರೆತು, ಕುಟುಂಬದಿAದ ದೂರವಿರುವ ಭಾವನೆ ಹೋಗಲಾಡಿಲು ಪ್ರಯತ್ನಿಸಬೇಕು. ವಸತಿ ನಿಲಯಗಳಲ್ಲಿ ಉತ್ತಮವಾದ ಮುಕ್ತ ವಾತಾವರಣ ನಿರ್ಮಿಸಬೇಕು. ಅವರೊಂದಿಗೆ ಚರ್ಚಿಸಬೇಕು. ಮಕ್ಕಳೊಂದಿಗೆ ಮುಕ್ತವಾಗಿ ಮಾತನಾಡಿದಾಗ ಮಾತ್ರ ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಆಸಕ್ತ ವಿಷಯಗಳ ಕುರಿತು ಮಕ್ಕಳಿಗೆ ಬೋಧನೆ ಮಾಡಬೇಕು. ವಿಚಾರಗಳು ತಮ್ಮಲ್ಲಿರುವ ಅನುಭವ ಜ್ಞಾನವನ್ನು ಹಂಚಿಕೊಳ್ಳಬೇಕು. ವಸತಿ ನಿಲಯಗಳಲ್ಲಿನ ಸಣ್ಣ ಪುಟ್ಟ ಸಮಸ್ಯೆಗಳನ್ನು ತಮ್ಮ ಹಂತದಲ್ಲಿಯೇ ಪರಿಹರಿಸುವ ಮೂಲಕ ಮಕ್ಕಳಲ್ಲಿನ ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು. 

 ವಸತಿ ನಿಲಯಗಳಲ್ಲಿ ಅವಶ್ಯಕವಿರುವ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಬೇಕು. ಸಾಧಾರಣವಾಗಿ ಮಕ್ಕಳಲ್ಲಿ ಚರ್ಮರೋಗ ಸಮಸ್ಯೆ ಉಂಟಾಗುತ್ತದೆ. ಇದನ್ನು ಸಂಬAಧಿಸಿದ ಹಾಸ್ಟೆಲ್ ವಾರ್ಡನ್, ಮೆಂಟರ್‌ಗಳು ಅವಲೋಕಿಸಬೇಕು. ವಾರಕ್ಕೊಮ್ಮೆ ವೈದ್ಯರನ್ನು ಹಾಸ್ಟೇಲ್‌ಗೆ ಕರೆಸಿ ತಪಾಸಣೆ ನಡೆಸಬೇಕು. ರಕ್ತಹೀನತೆ ತಪಾಸಣೆ ನಡೆಸಬೇಕು. ಆಗಾಗ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ವೈದ್ಯಕೀಯ ತಪಾಸಣೆ ನಡೆಸಬೇಕು. ಯೋಗ, ವ್ಯಾಯಾಮಗಳಂತಹ ದೈಹಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಸುಸಜ್ಜಿತವಾದ ಗ್ರಂಥಾಲಯ ಇರುವಂತೆ ನೋಡಿಕೊಳ್ಳಬೇಕು. ಕಂಪ್ಯೂಟರ್ ತರಬೇತಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ವಸತಿ ನಿಲಯಗಳ ವಿದ್ಯಾರ್ಥಿಗಳ ಬೆಳವಣಿಗೆ ಹಾಗೂ ಜೀವನ ಮಟ್ಟ ಸುಧಾರಿಸಲು ಪ್ರೇರೆಪಿಸಬೇಕು ಎಂದು ಅವರು ಹೇಳಿದರು.

 ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಕುಟುಂಬದಿAದ ದೂರ ಬಂದು, ಹಾಸ್ಟೆಲ್‌ನಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಬಂದಿರುವ ಮಕ್ಕಳ ಪೋಷಕರಾಗಿ ಹಾಸ್ಟೆಲ್ ವಾರ್ಡನ್‌ಗಳು ಕಾರ್ಯನಿರ್ವಹಿಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಹಾಸ್ಟೆಲ್‌ಗಳಲ್ಲಿನ ಕೊಠಡಿಗಳ ಸ್ವಚ್ಛತೆ, ಶುಚಿತ್ವ ಶೌಚಾಲಯ, ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಅಗತ್ಯವಿರುವ ಪುಸ್ತಕಗಳು ಸ್ಪರ್ಧಾತ್ಮ, ಪುಸ್ತಕಗಳು, ಉತ್ತಮ ಪೌಷ್ಠಿಕಾಂಶವುಳ್ಳ ಮೆನು ಪ್ರಕಾರ ಆಹಾರ ಒದಗಿಸುವುದು ಬಹುಮುಖ್ಯ ಜವಾಬ್ದಾರಿಯಾಗಿದೆ. ಇದನ್ನರಿತುಕೊಂಡು ಕಾರ್ಯನಿರ್ವಹಿಸಬೇಕು. ಮಿಷನ್ ವಿಜಯಪುರದಡಿ ವೆಬ್ ಕಾಸ್ಟಿಂಗ್ ಮೂಲಕ ಸಂಜೆ ಕ್ಲಾಸ್ ಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುಂತೆ ನಿಗಾ ವಹಿಸಬೇಕು ಎಂದು ಅವರು ಹೇಳಿದರು. 

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಅವರು ಮಾತನಾಡಿ, ವಸತಿ ನಿಲಯಗಳಲ್ಲಿರುವ ಮಕ್ಕಳೊಂದಿಗೆ ಸಂಬAಧಿಸಿದ ಹಾಸ್ಟೆಲ್ ವಾರ್ಡನ್‌ಗಳು ಬೆರೆತು, ಮುಕ್ತವಾಗಿ ಮಾತನಾಡಿ, ವಿಷಯಗಳನ್ನು ಹಂಚಿಕೊAಡಾಗ ಅವರ ಸಮಸ್ಯೆಗಳನ್ನು ಅರಿಯಲು ಸಾಧ್ಯವಾಗುತ್ತದೆ. ಅವರಲ್ಲಿನ ಸಮಸ್ಯೆ ಅರ್ಥ ಮಾಡಿಕೊಂಡು ಪರಿಹಾರ ಕಲ್ಪಿಸಲು ಮುಂದಾಗಬೇಕು. ಮಕ್ಕಳಿಗೆ ಓದಿನ ವಾತಾವರಣ ಕಲ್ಪಿಸಬೇಕು. ಸರ್ಕಾರ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು, ಶೈಕ್ಷಣಿಕ ಅಭಿವೃದ್ದಿಗೆ ಸಾಕಷ್ಟು ಅನುದಾನ ನೀಡಿದೆ. ಇದರ ಸದ್ವಿನಿಯೋಗ ಪಡಿಸಿಕೊಂಡು ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಅವರು ಹೇಳಿದರು. 

 ಉತ್ತಮ ಸಮಾಜ ನಿರ್ಮಾಣಕ್ಕೆ ಮಾರ್ಗದರ್ಶನ ಅಗತ್ಯವಿದೆ. ಈ ನಿಟ್ಟಿನಲ್ಲಿ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಭವಿಷ್ಯಕ್ಕೆ ರೂಪಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ನೀಡಬೇಕು. ದುಶ್ಚಟಗಳಿಗೆ ಬಲಿಯಾಗದಂತೆ ತಿಳುವಳಿಕೆ ಮೂಡಿಸಬೇಕು. ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹಾಸ್ಟೆಲ್ ಜವಾಬ್ದಾರಿ ಹೊಂದಿರುವ ವಾರ್ಡನ್‌ಗಳು, ಮೆಂಟರ್‌ಗಳು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಮೂಲಕ ಮಾದರಿಯಾಗಬೇಕು. ನೂರು ವಿದ್ಯಾರ್ಥಿಗಳು ಸುಧಾರಿಸಿದಾಗ, ಬೆಳವಣಿಗೆ ಹೊಂದಿದಾಗ ನೂರು ಕುಟುಂಬಗಳು ಬೆಳವಣಿಗೆ ಹೊಂದುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮಾಜದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು. 

 ಡಿ.ಎ.ಮೂಲಿಮನಿ ಉಪನ್ಯಾಸ ನೀಡಿದರು. ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದೀನ್ ಸೌದಾಗರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಡಾ.ನಾಗರಾಜ್, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಆಹಾರ ಸುರಕ್ಷತಾ ಅಧಿಕಾರಿ ಬಿರಾದಾರ, ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಸಮಾಜ ಕಲ್ಯಾಣ ಇಲಾಖೆ ಮಹೇಶ ಪೋತದಾರ, ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು


ಸಹಕಾರಿ ಯಶಸ್ಸಿಗೆ ಕಾನೂನು ಅರಿವು ಅಗತ್ಯ : ಸಚಿವ ಶಿವಾನಂದ


ನಗರದಲ್ಲಿರುವ ವಿಡಿಸಿಸಿ ಬ್ಯಾಂಕ್ ಆವರಣದಲ್ಲಿ ಹಮ್ಮಿಕೊಂಡಿದ್ದ ಸಹಕಾರಿ ಕಾಯ್ದೆ ತಿದ್ದುಪಡಿಗಳ ಕುರಿತ ತರಬೇತಿ ಕಾರ್ಯಾಗಾರಕ್ಕೆ ಸಚಿವ ಶಿವಾನಂದ ಪಾಟೀಲ ಚಾಲನೆ ನೀಡಿದರು.

ವಿಜಯಪುರ : ಸಹಕಾರಿ ರಂಗದಲ್ಲಿರುವ ಎಲ್ಲರೂ ಪ್ರಾಮಾಣಿಕ, ಪಾರದರ್ಶಕ ಹಾಗೂ ಸೇವಾ ಮನೋಭಾವದ ಜೊತೆಗೆ ಕಾನೂನಿನ ಅರಿವಿನೊಂದಿಗೆ ಕೆಲಸ ಮಾಡಿಬೇಕಿದೆ. ಹಾಗಾದಲ್ಲಿ ಸಹಕಾರಿ ರಂಗವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಾಧ್ಯವಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ವಿಜಾಪುರ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಹಾಗೂ ಸಹಕಾರಿ ಸಹಕಾರ ಒಕ್ಕೂಟದ ಸಹಯೋಗದಲ್ಲಿ ಪಟ್ಟಣ ಸಹಕಾರಿ ಬ್ಯಾಂಕ್, ಪತ್ತಿನ ಸಹಕಾರಿ ಸಂಘಗಳು ಹಾಗೂ ವಿವಿಧೊದ್ದೇಶಗಳ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯ ನಿರ್ವಾಹಕರಿಗೆ ಹಮ್ಮಿಕೊಂಡಿದ್ದ ಸಹಕಾರಿ ಕಾಯ್ದೆಗಳಿಗೆ ತಿದ್ದುಪಡಿ, ಅಭಿವೃದ್ಧಿ ಹಾಗೂ ಎದುರಿಸುತ್ತಿರುವ ಸವಾಲುಗಳ ಸಮಾಲೋಚನೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಹಕಾರಿ ರಂಗದ ಬಲವರ್ಧನೆಗೆ ಸರ್ಕಾರಗಳು ಮೇಲಿಂದ ಮೇಲೆ ಸಕಾರಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತವೆ. ಸರ್ಕಾರದ ನಿಯಮಗಳ ಪಾಲನೆಯೊಂದಿಗೆ ಸಹಕಾರಿ ಬಲವರ್ಧನೆಗೆ ಶ್ರಮಿಸಬೇಕಿದೆ ಎಂದರು.

ಪ್ರಸಕ್ತ ಸ್ಪರ್ಧಾತ್ಮಕ ಸಂದರ್ಭದಲ್ಲಿ ಸಹಕಾರಿ ರಂಗದ ಪ್ರಗತಿ ನಿರೀಕ್ಷಿತದಂತೆ ಪ್ರಗತಿ ಕಂಡಿಲ್ಲ ಎಂಬುದು ಸತ್ಯವಾದರೂ ತೀರಾ ನಿರಾಶಾದಾಯವಾಗೇನೂ ಇಲ್ಲ. ಕಾನೂನು ಚೌಕಟ್ಟಿನೊಳಗಿನ ವ್ಯವಹಾರ ಒಂದೆಡೆಯಾದರೆ, ಮಾನವೀಯ ನೆಲೆಯಲ್ಲಿ ವ್ಯವಹರಿಸುವ ಮೂಲಕ ಸಹಕಾರಿ ರಂಗದಲ್ಲಿ ಅಭಿವೃದ್ಧಿಯ ಪರಿವರ್ತನೆ ತರುವ ಅಗತ್ಯವಿದೆ. ರೈತರು, ಜನ ಸಾಮಾನ್ಯರ ಆರ್ಥಿಕ ಜೀವನ ಮಟ್ಟ ಸುಧಾರಣೆಗಾಗಿ ಸಹಕಾರಿ ವ್ಯವಸ್ಥೆಯಲ್ಲಿ ಇರುವ ಎಲ್ಲರೂ ಬದ್ಧತೆಯಿಂದ ಸೇವೆ ಸಲ್ಲಿಸಬೇಕಿದೆ ಎಂದರು.

ಸಹಕಾರಿ ರಂಗದಲ್ಲಿ ಉತ್ತುಂಗದಲ್ಲಿರುವ ಸಹಕಾರಿ ಸಂಸ್ಥೆಗಳೂ ಇವೆ, ಕೆಲವು ಸಾಮಾನ್ಯ ಸ್ಥಿತಿಯಲ್ಲೂ, ಮತ್ತೆ ಕೆಲವು ಸುಧಾರಣೆ ಹಂತದಲ್ಲೂ, ಇನ್ನಷ್ಟು ಸಂಸ್ಥೆಗಳು ಸಂಕಷ್ಟದ ಸ್ಥಿತಿಯಲ್ಲಿವೆ. ಆದರೆ ಸೋತವರನ್ನು ಕೈ ಬಿಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವುದು ಇಂದಿನ ಅಗತ್ಯವಾಗಿದೆ ಎಂದರು.

ಸಹಕಾರಿ ರಂಗದದಲ್ಲಿ ಆರ್ಥಿಕ ವ್ಯವಹಾರ ಪಾರದರ್ಶಕತೆ, ನಿಸ್ವಾರ್ಥದ ಜೊತೆಗೆ ಆಡಳಿತದ ನ್ಯೂನ್ಯತೆಗಳು ಕಂಡು ಬಂದಾಗ ತಿದ್ದಿಕೊಂಡು ಮುನ್ನಡೆಯಬೇಕು. ಸಹಕಾರಿ ರಂಗದ ಬಲವರ್ಧನೆ ಎಂದರೆ ಅದು ಜನ ಸಾಮಾನ್ಯನ ಆರ್ಥಿಕ ಬಲವರ್ಧನೆ ಎಂದೇ ಅರ್ಥ ಎಂದು ವಿಶ್ಲೇಷಿಸಿದರು.

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಗುಡದಿನ್ನಿ ಅವರು ಮಾತನಾಡಿ, ಸಹಕಾರಿ ಕ್ಷೇತ್ರದ ಬಲವರ್ಧನೆಗಾಗಿ ಸಹಕಾರಿ ಪತ್ತಿನ ಸಂಘಗಳು ಹೆಚ್ಚಿನ ಪ್ರಮಾಣದಲ್ಲಿ ಠೇವಣಿ ಸಂಗ್ರಹಿಸಿ, ಆರ್ಥಿಕ ಸುಸ್ಥಿತಿ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಹಕಾರಿ ಸಂಘಗಳ ವಿಶ್ರಾಂತ ಅಪರ ನಿಬಂಧಕರಾದ ಎಂ.ಜಿ.ಪಾಟೀಲ ಅವರು, ಸಹಕಾರಿ ಸಂಘಗಳ ಕಾಯ್ದೆಗಳ ಇತ್ತೀಚಿನ ತಿದ್ದುಪಡಿ, ಪತ್ತಿನ ಸಹಕಾರಿ ಸಂಸ್ಥೆಗಳ ಅಭಿವೃದ್ಧಿ ಮತ್ತು ಎದುರಿಸುತ್ತಿರುವ ಸವಾಲುಗಳ ಕುರಿತು ಸಮಗ್ರ ವಿವರ ನೀಡಿದರು.

ವಿಜಾಪುರ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಹಾಗೂ ಸಹಕಾರಿ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿರುವ ವಿಡಿಸಿಸಿ ನಿರ್ದೇಶಕರಾದ ಗುರುಶಾಂತ ನಿಡೋಣಿ ಅಧ್ಯಕ್ಷತೆ ವಹಿಸಿದ್ದರು. ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಚಂದ್ರಶೇಖರಗೌಡ ಪಾಟೀಲ ಮನಗೂಳಿ, ಸುರೇಶಗೌಡ ಬಿರಾದಾರ, ಎಸ್.ಎಸ್.ಜಾಗೀರದಾರ, ಶೇಖರ ದಳವಾಯಿ, ಸಿಇಒ ಎಸ್.ಎ.ಢವಳಗಿ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕøತರಾದ ಶ್ರೀ ಶಾಂತೇಶ್ವರ ವಿವಿಧೋದ್ದೇಶಗಳ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀಮಂತ ಇಂಡಿ, ವಿಡಿಸಿಸಿ ಹಿರಿಯ ಅಧಿಕಾರಿಗಳು ಸೇರಿದಂತೆ ಇತರರು ವೇದಿಕೆ ಮೇಲಿದ್ದರು. 

ವಿಶ್ರಾಂತ ಪ್ರಾಚಾರ್ಯ ಬಸವರಾಜ ಸಾವಕಾರ ನಿರೂಪಿಸಿದರೆ, ವಿಡಿಸಿಸಿ ಉಪ ಪ್ರಧಾನ ವ್ಯವಸ್ಥಾಪಕರಾದ ಸತೀಶ ಪಾಟೀಲ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು