Friday, January 17, 2025

ಜ. 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ- 2025


ವಿಜಯಪುರ: ಭಾರತ ಚುನಾವಣಾ ಆಯೋಗವು ಚುನಾವಣೆ ಕುರಿತ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಧ್ಯೇಯವಾಕ್ಯವನ್ನು ಜ.25 ರಂದು ತಮ್ಮ ತಮ್ಮ ಕಚೇರಿಯ ಪತ್ರ ವ್ಯವಹಾರಗಳಲ್ಲಿ ಬಳಕೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜ. 25 ರಂದು ನಡೆಯುವು 15 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರಿ ಹಾಗೂ ಅಧೀನ ಕಚೇರಿಗಳಲ್ಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಮತದಾರರ ಪ್ರತಿಜ್ಞಾ ವಿಧಿ ಬೋಧನೆ ಬೋಧಿಸುವುದರ ಜೊತೆಗೆ ಛಾಯಾಚಿತ್ರ ತೆಗೆದು ಪ್ರಚಾರ ಪಡಿಸಬೇಕು. ಸಾಮಾಜಿಕ ಸೇವಾ ಸಂಸ್ಥೆಗಳು, ಯುವ ಸ್ವಯಂ ಸೇವಾ ಸಂಸ್ಥೆಗಳು, ಎನ್‍ಎಸ್‍ಎಸ್, ಎನ್‍ಸಿಸಿ ಸ್ಕೌಟ್ ಮತ್ತು ಗೈಡ್ಸ್. ನೆಹರು ಯುವಕ ಕೇಂದ್ರ ಸೇರಿದಂತೆ ರಾಷ್ಟ್ರೀಯ ಮತದಾರರ ದಿನಾಚರಣೆ 2025 ರ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.

ಕಾರ್ಯಕ್ರಮಗಳನ್ನು ಜಿಲ್ಲಾ ಪಂಚಾಯಿತಿ ಸಭಾಂಗಣದ ವೇದಿಕೆ ಆಯೋಜಿಸಬೇಕು, ವೇದಿಕ ಕಾರ್ಯಕ್ರಮ ಮುಂಚೆ ಜಾಥಾ ಕಾರ್ಯಕ್ರಮ ಏರ್ಪಡಿಸುವುದು, ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಚುನಾವಣೆಯ ಮತದಾನ ಕುರಿತು ಪ್ರಬಂಧ ಸ್ಪರ್ಧೇ ಏರ್ಪಡಿಸಬೇಕು, ಸ್ಪರ್ಧೇಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲು ಕ್ರಮ ವಹಿಸಬೇಕು ಎಂದರು.

ಪತ್ರಿಕೆ, ರೇಡಿಯೋ, ಟಿವಿ ಸಾಮಾಜಿಕ ಜಾಲತಾಣ ಹಾಗೂ ಪರಸ್ಪರ ಸಂವಹನ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳುವುದು ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ವಿತರಿಸುವುದು ಅಂಚೆ ಮತಪತ್ರ, ಮತದಾರರಿಗೆ ಮತ್ತು ಮತಗಟ್ಟೆಗಳಲ್ಲಿ ಒದಗಿಸಿರುವ ಮೂಲಭೂತ ಸೌಲಭ್ಯಗಳು, ಇವಿಎಮ್, ವಿವಿ ಪ್ಯಾಟ್, ಓಟರ್ ಹೆಲ್ಪಲೈನ್ ನೈತಿಕ ಮತದಾನ ಇತ್ಯಾದಿಗಳ ಕುರಿತು ಜಾಗೃತಿ ಚಿತ್ರಗಳನ್ನು ಪ್ರದರ್ಶಿಸುವುದು ಇದರ ಜೊತೆಗೆ ಸ್ವೀಪ್ ಕಾರ್ಯಕ್ರಮಗಳು ಕೂಡ ಒಂದು ಭಾಗವಾಗಿವೆ ಎಂದರು.

ಜ.30 ರಂದು ಹುತಾತ್ಮ ದಿನಾಚರಣೆ: ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತು ಹುತಾತ್ಮರಾದ ಮಹಣೀಯರ ಸ್ಮರಣಾರ್ಥ ಜ. 30 ರಂದು ಜಿಲ್ಲಾಡಳಿತ ವತಿಯಿಂದ ಪರ್ವಾಹ್ನ 11.2 ಕ್ಕೆ ನಗರದ ಮೀನಾಕ್ಷೀ ವೃತ್ತದಲ್ಲಿ ಆಚರಿಸಲು ನಿರ್ಧರಿಸಲಾಯಿತು.

ವೇದಿಕೆ ಕಾರ್ಯಕ್ರಮದಲ್ಲಿ ಶಿಷ್ಟಾಚರದಂತೆ ಆಹ್ವಾನ ನೀಡುವುದು, ಭಾರತದ ಸ್ವಾತಂತ್ರಕ್ಕಾಗಿ ಹೋರಾಟಗಾರರ ಪಾತ್ರವನ್ನು ತಿಳಿಸುವಂತಹ ಭಾಷಣ, ಚರ್ಚೆಗಳನ್ನು ಏರ್ಪಡಿಸುವುದು ಹಾಗೂ ಪ್ರಾರ್ಥನೆ ಸರ್ವಧರ್ಮ ಭಜನೆ ಕಾರ್ಯಕ್ರಮ ಆಯೋಜಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸೂಚಿಸಲಾಯಿತು.

ಸಭೆಯಲ್ಲಿ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆ ಮುಖಂಡರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



No comments:

Post a Comment