Thursday, January 2, 2025

ಕೃಷ್ಣ-ವಾದಿರಾಜ ಮಠದಲ್ಲಿ ವಿಜೃಂಭಣೆಯ ರಥೋತ್ಸವ


ವಿಜಯಪುರ: ಪ್ರಾತಃ ಸ್ಮರಣೀಯ ಶ್ರೀ ಶ್ರೀ 1008 ಯತಿಕುಲಚಕ್ರವರ್ತಿ ಪದ್ಮವಿಭೂಷಣ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಪಂಚಮ ಮಹಾಸಮಾರಾಧನಾ ಪೇಜಾವರಮಠ ಇವರ ಆರಾಧನೋತ್ಸವ ಅಂಗವಾಗಿ ಇಂದು ನಗರದ ಕೃಷ್ಣ - ವಾದಿರಾಜ ಮಠದಲ್ಲಿ ವಿಜೃಂಭಣೆಯ ರಥೋತ್ಸವ ಜರುಗಿತು. 

ಪಂಡಿತ ವಾಸುದೇವಚಾರ್ಯ ಮತ್ತು ಶ್ರೀಮಠದ ಗೌರವಧ್ಯಕ್ಷ ಗೋಪಾಲ ನಾಯಕ ಮಂಗಳಾರತಿ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಪಂಡಿತ ಭಾರತೀಯ ರಮಾಣಾಚಾರ್ಯ ಅವರು ಶ್ರೀಗಳ ಕುರಿತು ಪ್ರವಚನ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಮಠದ ಅಧ್ಯಕ್ಷರು ಹಾಗೂ ವೈದ್ಯರಾದ ಕಿರಣ್ ಚುಳಕಿ, ಸಮೀರ ಆಚಾರ್ಯ, ಶ್ರೀ ಮಠದ ಕಾರ್ಯದರ್ಶಿಗಳಾದ ಪ್ರಕಾಶ ಅಕ್ಕಲಕೋಟ, ಸದಸ್ಯರಾದ ವಿಕಾಸ ಪದಕಿ, ಗೋವಿಂದ ಜೋಶಿ, ವಿಜಯ ಜೋಶಿ, ರಾಕೇಶ್ ಕುಲಕರ್ಣಿ, ಪವನ ಜೋಶಿ, ಅಶೋಕ ರಾವ್, ಕೃಷ್ಣ ಪಾಡಗಾನೂರ, ಅಶೋಕ್ ಪದಕಿ, ವಿ.ಸಿ.ಕುಲಕರ್ಣಿ, ಉಮೇಶ ಕಾರಜೋಳ, ಹರೀಶಗೌಡ ಪಾಟೀಲ, ಚಂದ್ರಶೇಖರ ಕವಟಗಿ, ಭೀಮಾಶಂಕರ ಹದನೂರ, ಮಹಾನಗರ ಪಾಲಿಕೆಸದಸ್ಯರಾದ ಪ್ರೇಮಾನಂದ ಬಿರಾದಾರ, ಗಿರೀಶ ಪಾಟೀಲ, ಮಹೇಂದ್ರ ನಾಯಕ, ವಿಷ್ಣು ಜಾಧವ, ಬಿ.ಆರ್.ಕುಲಕರ್ಣಿ, ವಿ.ಬಿ.ಕುಲಕರ್ಣಿ, ವೆಂಕಟೇಶ ಗುಡಿ, ಗೋವಿಂದರಾವ ದೇಶಪಾಂಡೆ ಸೇರಿದಂತೆ ಹಲವಾರು ಭಕ್ತಾದಿಗಳು ಭಾಗವಹಿಸಿದ್ದರು. 

ಇದೇ ಸಂದರ್ಭದಲ್ಲಿ ಆಗಮಿಸಿ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment