Saturday, March 1, 2025

ಮೂಲಭೂತ ಸೌಕರ್ಯ ಒದಗಿಸಲು ಮನವಿ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಜಯ ಕರ್ನಾಟಕ ಸಂಘಟನೆ ಸಿಂದಗಿ ತಾಲೂಕಾ ಘಟಕದ ವತಿಯಿಂದ ಸಿಂದಗಿ ತಾಲ್ಲೂಕಿನ ಹಂದಿಗನೂರ ಗ್ರಾಮದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಮಸ್ಯೆಗಳಾದ ಕುಡಿಯುವ ನೀರು, ಮೂರು ನೂತನ ಕೋಣೆಗಳು ನಿರ್ಮಿಸುವುದು, ಮತ್ತು ಶಾಲಾ ಕಂಪೌಂಡ ನಿರ್ಮಿಸುವುದು, ಹಾಗೂ ವಿವಿಧ ಬೇಡಿಕೆಗಳ ಕುರಿತು. ಮಾನ್ಯ ತಹಶಿಲ್ದಾರರ ಸಾಹೇಬರಿಗೆ ಮನವಿ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ವಕ್ತಾರರು, ಹಾಗೂ ಸಿಂದಗಿ ತಾಲೂಕಾ ಉಸ್ತುವಾರಿಗಳಾದ ಚನ್ನಪ್ಪಗೌಡ ಎಸ್, ಬಿರಾದಾರ, ಹಾಗೂ ಸಿಂದಗಿ ತಾಲೂಕಾಧ್ಯಕ್ಷರಾದ ಸಂತೋಷ ಮನಗೂಳಿ, ಮತ್ತು ಜಯ ಕರ್ನಾಟಕ ಸಂಘಟನೆಯ ತಾಲೂಕಾ ಪದಾಧಿಕಾರಿಗಳಾದ,

ನಾಗಣ್ಣ ಪಡೇಕನೂರ, ತಾಲೂಕಾ ಉಪಾಧ್ಯಕ್ಷರು, ರಮೇಶ ರಾಠೋಡ, ಕಾರ್ಯಧ್ಯಕ್ಷರು, ಭೀಮನಗೌಡ ಬಿರಾದಾರ, ಪ್ರಧಾನ ಕಾರ್ಯದರ್ಶಿಗಳು, ಸಿದ್ದನಗೌಡ ಅಂಬಳನೂರ, ಸಂಘಟನಾ ಕಾರ್ಯದರ್ಶಿ, ಶಿವಪುತ್ರ ಮಲ್ಲೇದ, ಸಿಂದಗಿ 21, ನೇ ವಾರ್ಡ ಅಧ್ಯಕ್ಷರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment