ವಿಜಯಪುರ : ವಿಜಯಪುರ ಜಿಲ್ಲೆಯ ನಗರ ನಿವಾಸಿ ಕಲಾವಿದ ಮಹೇಶ ಶಿವಶರಣ ಅವರು ಸಿದ್ಧಗಂಗಾ ಶ್ರೀ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಹೇಶ ಶಿವಶರಣ ಅವರು ಕಲಾ ಕ್ಷೇತ್ರದಲ್ಲಿ ನಿಸ್ವಾರ್ಥ ಮತ್ತು ಪ್ರಾಮಾಣಿಕವಾಗಿ ಶಕ್ತಿಮೀರಿ ಸಲ್ಲಿಸಿದ ಸಾಧನೆಯನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದೆ.
ಅನಾಥ, ನಿರ್ಗತಿಕ ಹಾಗೂ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಗಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ) ಶ್ರೀ ಸಿದ್ಧಗಂಗಾ ಕಿರಿಯ ಪ್ರಾಥಮಿಕ ಶಾಲೆ ತುರಕನಗೇರಿ ತಾ| ತಾಳಿಕೋಟಿ ಜಿ| ವಿಜಯಪುರ ವತಿಯಿಂದ ತ್ರಿವಿದ ದಾಸೋಹಿ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 118 ನೇ ಜಯಂತ್ಯೋತ್ಸವ ಹಾಗೂ ಸಿದ್ಧಗಂಗಾ ಕಿರಿಯ ಪ್ರಾಥಮಿಕ ಶಾಲೆಯ 7ನೇ ವಾರ್ಷಿಕ ಸ್ನೇಹ ಸಮ್ಮೇಳನ ನಿಮಿತ್ಯ “ಸಿದ್ಧಗಂಗಾ ಶ್ರೀ ರತ್ನ ಪ್ರಶಸ್ತಿ”ಯನ್ನು ಕಲಾವಿದ ಮಹೇಶ ಶಿವಶರಣ ಅವರಿಗೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಂಶೂದ್ದೀನ ಇನಾಂದಾರ ಹಾಗೂ ಬಸವರಾಜ ಹೂಗಾರ ಸೇರಿದಂತೆ ರಜಾಕ ಇನಾಮದಾರ, ಅಲ್ತಾಪ ಇನಾಮದಾರ, ವಿರೇಶ ಹಿರೇಮಠ, ಅಮರೇಶ ಬಸವಪಟ್ಟಣ, ಮಂಜುನಾಥ ಮೋಪಗಾರ, ಪ್ರವೀಣ ಮೋಪಗಾರ ಸೇರಿದಂತೆ ಮುಂತಾದವರು ಇದ್ದರು.
ಮಹೇಶ ಶಿವಶರಣ ಸಿದ್ಧಗಂಗಾ ಶ್ರೀ ರತ್ನ ಪ್ರಶಸ್ತಿ ಪಡೆದ ಹಿನ್ನೆಲೆ ಸ್ನೇಹಿತರು, ಹಿತೈಷಿಗಳು, ಕಲಾಭಿಮಾನಿಗಳು, ಕುಟಂಬದ ಸದಸ್ಯರು ಸೇರಿದಂತೆ ಅಪಾರ ಬಂಧು-ಬಳಗದವರು ಶುಭಕೋರಿ ಹಾರೈಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:
Post a Comment