ವಿಜಯಪುರ: ಮಹಿಳಾ ಸಬಲೀಕರಣಕ್ಕೆ ಕೇವಲ ಪ್ರಮಾಣಪತ್ರವμÉ್ಟೀ ಸಾಕಾಗದು, ವೈಜ್ಞಾನಿಕ ಜ್ಞಾನ ಮತ್ತು ತಂತ್ರಜ್ಞಾನ ಪ್ರಭಾವವೂ ಅವಶ್ಯಕ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಹಾಗೂ ಕ್ರೀಡಾ ನಿರ್ದೇಶನಾಲಯ ಇವರ ಸಂಯುಕ್ತಾಶ್ರಯದಲ್ಲಿ ಮಹಿಳಾ ಸಾಂಸ್ಕøತಿಕ ಹಬ್ಬದ-2025 ಪ್ರಯುಕ್ತ ಬುಧವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಮ್ಯಾರಥಾನ್ಗೆ ಚಾಲನೆ ನೀಡಿ ಮಾತನಾಡಿದರು.
ಈ ಮ್ಯಾರಥಾನ್ ನಾಲ್ಕು ದಿಕ್ಕಿನಿಂದ ಆಯೋಜಿಸುವ ಉದ್ದೇಶವೆಂದರೆ ನಮ್ಮ ಮಹಿಳಾ ವಿಶ್ವವಿದ್ಯಾಲಯದ ಅಸ್ತಿತ್ವವನ್ನು ತಲುಪಿಸುವುದಾಗಿದೆ. ಮಹಿಳೆಯರ ಹಕ್ಕುಗಳಿಗೆ ಇನ್ನೂ ಮಹಿಳೆಯರೇ ಹೋರಾಡಬೇಕಾಗಿದೆ. ಎμÉ್ಟೀ ಶಿಕ್ಷಣ ಪಡೆದರೂ ಮಹಿಳೆಯರ ಮೇಲೆ ದೌರ್ಜನ್ಯ ಕಡಿಮೆಯಾಗಿಲ್ಲ. ಮಹಿಳೆಯರು ವಿಶ್ವದ ಮುಂಚೂಣಿಯಲ್ಲಿ ತಲುಪಲು ಅವರಿಗೆ ಸಮಾನ ಅವಕಾಶಗಳನ್ನು ನೀಡಬೇಕಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಸಿಂಡಿಕೇಟ್ ಸದಸ್ಯೆ ಮಲ್ಲಮ್ಮಾ ಯಾಳವಾರ ಮ್ಯಾರಥಾನ್ನಲ್ಲಿ ಮಾತನಾಡಿ, ವಿಜಯಪುರದ ಎಲ್ಲಾ ನಾಗರಿಕರಿಗೆ ಮಹಿಳೆಯರ ಹಕ್ಕುಗಳು ಮತ್ತು ಅವರ ಮಹತ್ವದ ಬಗ್ಗೆ ಜಾಗೃತಿಯನ್ನು ಉಂಟುಮಾಡಬೇಕು. ಮಹಿಳೆಯರಿಗೆ ಸಮಾನತೆಯ ನೋಟವುಳ್ಳ ಶಿಕ್ಷಣವನ್ನು ನೀಡುವುದು ಅವಶ್ಯಕ. ಮಹಿಳೆಯರು ತಮ್ಮ ಸ್ವಂತ ಬದುಕನ್ನು ಕಟ್ಟಿಕೊಳ್ಳುವುದರ ಜೊತೆಗೆ, ಸಮಾಜ ಮತ್ತು ದೇಶದ ನಿರ್ಮಾಣದಲ್ಲೂ ಪ್ರಮುಖ ಪಾತ್ರ ವಹಿಸಬೇಕು. ಈ ಕಾರಣಕ್ಕಾಗಿ, ಎಲ್ಲರೂ ಒಗ್ಗೂಡಿ ಮಹಿಳೆಯರನ್ನು ಸಬಲಗೊಳಿಸಲು ಕಾರ್ಯನಿರ್ವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮ್ಯಾರಥಾನ್ನಲ್ಲಿ ಮಾತನಾಡಿ, ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಅವರ ಹಕ್ಕುಗಳನ್ನು ದೊರಕಿಸುವುದು ಅತ್ಯಂತ ಮುಖ್ಯವಾಗಿದೆ. ಮಹಿಳೆಯರು ಶಕ್ತಿಯಾಗಲು, ಸ್ವಯಂ ನಿರ್ಧಾರ ತೆಗೆದುಕೊಳ್ಳಲು ಮತ್ತು ಸಮಾಜದಲ್ಲಿ ಗೌರವಯುತ ಜೀವನ ನಡೆಸಲು ಸಹಾಯ ಮಾಡಬೇಕು. ನಮ್ಮ ಸಮಾಜದಲ್ಲಿ ಮಹಿಳೆಯರ ಸುರಕ್ಷತೆ ಸವಾಲಾಗಿದರೂ, ಅವರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಅಭಿವೃದ್ಧಿ ಅತ್ಯವಶ್ಯಕವಾಗಿದೆ. ಇದನ್ನು ಸಾಧಿಸಲು ಸಮರ್ಥನೀಯ ನೀತಿಗಳು, ಮಕ್ಕಳ ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿಯ ಅಗತ್ಯವಿದೆ ಎಂದರು.
ನಗರದ ಬಿ.ಎಲ್.ಡಿ.ಇ. ತಾಂತ್ರಿಕ ಮಹಾವಿದ್ಯಾಲಯ, ಗೋಳಗುಮ್ಮಟ, ಜಿಲ್ಲಾ ನ್ಯಾಯಾಲಯ ಹಾಗೂ ಸೈನಿಕ ಶಾಲೆ, ಹೀಗೆ ನಾಲ್ಕು ಕಡೆಗಳಿಂದ ಮ್ಯಾರಥಾನ್ ಹೊರಟು, ಗಾಂಧೀ ವೃತ್ತದ ಬಳಿ ಸಮಾರೋಪಗೊಂಡಿತು. ಈ ಮ್ಯಾರಥಾನ್ನಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್. ಎಂ ಚಂದ್ರಶೇಖರ, ಮಹಿಳಾ ಸಾಂಸ್ಕøತಿಕ ಹಬ್ಬದ ಸದಸ್ಯ ಸಂಚಾಲಕಿ ಪ್ರೊ. ಲಕ್ಷ್ಮೀದೇವಿ ವೈ, ಸಂಯೋಜಕರಾದ ಪ್ರೊ.ಸಕ್ಪಾಲ್ ಹೂವಣ್ಣ, ಪ್ರೊ.ಜಿ.ಜಿ.ರಜಪೂತ, ಪ್ರೊ. ಶ್ರೀನಿವಾಸ, ಡಾ.ಜ್ಯೋತಿ ಅವಟಿ, ಪ್ರೊ.ಪಿ.ಜಿ.ತಡಸದ, ಪ್ರೊ ಜ್ಯೋತಿ ಉಪ್ಯಾದೆ, ಡಾ. ಕಸ್ತೂರಿ ರಜಪೂತ, ಪ್ರೊ.ರಾಜಕುಮಾರ ಪಿ ಮಾಲಿಪಾಟೀಲ್, ಡಾ. ಕಿರಣ ಜಿ. ಎನ್, ಪ್ರೊ.ನಾಮದೇವ. ಎಮ್. ಗೌಡ, ಪ್ರೊ.ಹನುಮಂತಯ್ಯ ಪೂಜಾರಿ ಹಾಗೂ ಪ್ರೊ.ವಿಜಯಾ ಕೋರಿಶೇಟ್ಟಿ, ಪ್ರೊ. ಯು.ಕೆ.ಕುಲಕರ್ಣಿ, ಡಾ.ಚಂದ್ರಶೇಖರ ಮಠಪತಿ, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ವಿಷ್ಣು ಶಿಂದೆ ಸ್ವಾಗತಿಸಿ ನಿರೂಪಿಸಿದರು. ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಹಾಗೂ ಕ್ರೀಡಾ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಹನುಮಂತಯ್ಯ ಪೂಜಾರ ವಂದಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment