Thursday, May 29, 2025

ಕರ್ನಾಟಕದ ಯಾವುದೇ ಚಿತ್ರ ಮಂದಿರಗಳಲ್ಲಿ ತಮಿಳು ಚಲನಚಿತ್ರ ಥಗ್ ಲೈಫ ಬಿಡುಗಡೆ ಮಾಡದಿರಲು ಕರವೇ ಆಗ್ರಹ


ವಿಜಯಪುರ: ಕರ್ನಾಟಕದ ಯಾವುದೇ ಚಿತ್ರ ಮಂದಿರಗಳಲ್ಲಿ ತಮಿಳು ಚಲನಚಿತ್ರ ಥಗ್ ಲೈಫ ಬಿಡುಗಡೆ ಮಾಡಬಾರದು ಎಂದು ಒತ್ತಾಯಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರಶೆಟ್ಟಿ ಬಣ) ಪದಾಧಿಕಾರಿಗಳು ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಅ ತಾಳಿಕೋಟಿ ಮಾತನಾಡಿ, ಮೊನ್ನೆ ನಡೆದ ಥಗ್ ಲೈಫ್ ಚಲನಚಿತ್ರದ ಧ್ವನಿ ಸುರಳಿ ಬಿಡುಗಡೆ ಸಮಾರಂಭದಲ್ಲಿ ತಮಿಳು ನಟ ಕಮಲ ಹಾಸನ್ ಕನ್ನಡ ಹುಟ್ಟಿದ್ದು ತಮಿಳುನಿಂದ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡುವದಲ್ಲದೆ ಕನ್ನಡಿಗರ ಹಾಗೂ ತಮಿಳು ಮಧ್ಯ ವಿಷಬಿಜ ಬಿತ್ತುವದೊರಂದಿಗೆ ಕನ್ನಡಿಗರಿಗೆ ಅಫಮಾನ ಮಾಡಿರುತ್ತಾರೆ ಪ್ರತಿ ಭಾರಿ ತಮಿಳು ಹೊಸ ಚಲನಚಿತ್ರ ಬಿಡುಗಡೆ ಸಂಧರ್ಭದಲ್ಲಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಮಾಡುತ್ತಲ್ಲೆ ಬಂದಿದ್ದಾರೆ. ಈ ಹೇಳಿಕೆಗಳು ನಿರಂತರವಾಗಿ ನಿಡಿ ಹೊಗುತ್ತಾರೆ. ನಂತರ ಇಲ್ಲಿ ಕನ್ನಡಿಗರು ಮತ್ತು ತಮಿಳು ಮಧ್ಯ ಶಾಂತಿ, ಸು ವ್ಯವಸ್ತೆ ಹದಗೆಡುವಂತೆ ಮಾಡಿರುತ್ತಾರೆ. ಆದರಿಂದ ಹಿಂತಹ ಹೇಳಿಕೆ ನೀಡಿರುವ ಈ ನಟನ ಚಿತ್ರ ನಮ್ಮ ರಾಜ್ಯದಲ್ಲಿ ಥಗ್ ಲೈಪ್ ಚಿತ್ರ ಬಿಡುಗಡೆ ಮಾಡಬಾರದೆಂದು ಎಂದು ಒತ್ತಾಯಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ಹಿರೇಮಠ, ಆನಂದ ಹಡಗಲಿ, ರವಿ ಗೊಳಸಂಗಿ, ಸತೀಶ, ವಿನುತ, ಭೀಮು, ವಿರೇಶ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

No comments:

Post a Comment