Thursday, May 8, 2025

ಸಿಂಧೂರ್ ಯಶಸ್ವಿ ಕಾರ್ಯಾಚರಣೆಗೆ ನಡೆಸಿದ ಸೇನಾಪಡೆದೆ ಕೋಟಿ ಧನ್ಯವಾದ : ಜಿಗಜಿಣಗಿ

ವಿಜಯಪುರ : ಉಗ್ರರ ನೆಲೆಗಳನ್ನು ಆಪರೇಷನ್ ಸಿಂಧೂರ ಹೆಸರಿನಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ನಮ್ಮ ಹೆಮ್ಮೆಯ ಸೇನಾಪಡೆಗೆ ಎಷ್ಟು ಕೋಟಿ ಧನ್ಯವಾದ ಅರ್ಪಿಸಿದರೂ ಕಡಿಮೆಯೇ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಪ್ರವಾಸಕ್ಕೆ ಬಂದಿದ್ದ ಅಮಾಯಕ ಪ್ರವಾಸಿಗರನ್ನು ಅಮಾನುಷ ರೀತಿಯಲ್ಲಿ ಹತ್ಯೆ ಮಾಡಿರುವ ಉಗ್ರಗಾಮಿಗಳು ಮನುಷ್ಯರೇ ಅಲ್ಲ, ಅವರಿಗೆ ಮನುಷ್ಯತ್ವವೇ ಇಲ್ಲ. ಇಂತಹ ಕ್ರೂರಿಗಳನ್ನು ನಮ್ಮ ಹೆಮ್ಮೆಯ ಸೈನಿಕರು ಮಟ್ಟ ಹಾಕಿದ್ದಾರೆ, ಅವರ ಅನೇಕ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿ ಅವರಿಗೆ ತಕ್ಕಶಾಸ್ತಿ ಮಾಡಿದ್ದಾರೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಈ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾದ ಪ್ರತಿಯೊಬ್ಬ ಯೋಧನಿಗೂ ನಾನು ಕೋಟಿ ಕೋಟಿ ಧನ್ಯವಾದ ಅರ್ಪಿಸುತ್ತೇನೆ, ಗಡಿಯಲ್ಲಿ ನಮಗಾಗಿ ಜೀವದ ಹಂಗು ತೊರೆದು ಕರ್ತವ್ಯದಲ್ಲಿರುವ ನಮ್ಮ ಹೆಮ್ಮೆಯ ಸೈನಿಕರ ಋಣವನ್ನು ನಮಗೆ ತೀರಿಸಲು ಈ ಜನ್ಮದಲ್ಲಿ ಸಾಧ್ಯವಿಲ್ಲ ಎಂದು ಜಿಗಜಿಣಗಿ ಹೇಳಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



No comments:

Post a Comment