ಕೊಲ್ಹಾರ : ಜೂನ್ 1 ರಂದು ಕೊಲ್ಹಾರ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಸವನಬಾಗೇವಾಡಿ ವಿಧಾನಸಭೆಯನ್ನು ಪ್ರತಿನಿಧಿಸುತ್ತಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಅವರು ಚಾಲನೆ ನೀಡಲಿದ್ದಾರೆ.
ಕೊಲ್ಹಾರ ಪಟ್ಟಣದಲ್ಲಿ ಜೂನ್ ರಂದು ಸಂಜೆ 5 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ನಿಧಿಯಿಂದ 45 ಲಕ್ಷ ರೂ. ವೆಚ್ಚದಲ್ಲಿ ಸರಕಾರಿ ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಇದಲ್ಲದೇ 1.45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ ನಡೆಯಲಿದೆ. ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ 87 ಲಕ್ಷ ರೂ. ಹಾಗೂ ಅಡುಗೆ ಪರಿಕರಗಳಿಗೆ 48 ಲಕ್ಷ ರೂ. ವೆಚ್ಚಾಗಿದೆ. ಪೌರಾಡಳಿತ ನಿರ್ದೇಶನಾಲಯದ ಜೊತೆಗೆ ಕೊಲ್ಹಾರ ಪಟ್ಟಣ ಪಂಚಾಯತ್ ನಿಂದ 10 ಲಕ್ಷ ರೂ ಅನುದಾನ ಒದಗಿಸಲಾಗಿದೆ.
ಸದರಿ ಎಲ್ಲ ಅಭಿವೃದ್ಧಿ ಯೋಜನೆಗಳಿಗೆ ಸಚಿವರು ಚಾಲನೆ ನೀಡಲಿದ್ದಾರೆ ಎಂದು ಸಚಿವರ ಕಛೇರಿ ಪ್ರಕಟಣೆ ತಿಳಿಸಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment