Friday, June 27, 2025

ರಾಜ್ಯದ ರೈತರ ಸುಭಿಕ್ಷೆಗಾಗಿ ತಿರುಪತಿ ಬಾಲಾಜಿಗೆ ಸಚಿವ ಶಿವಾನಂದ ವಿಶೇಷ ಪೂಜೆ


ವಿಜಯಪುರ : ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಅವರು ರಾಜ್ಯದಲ್ಲಿ ಸುಭಿಕ್ಷೆಗಾಗಿ ಸಮೃದ್ಧ ಮಳೆ-ಬೆಳೆ, ರೈತರಿಗೆ ಸಂತೃಪ್ತ ಜೀವನ ಕರುಣಿಸುವಂತೆ ತಿರುಪತಿಗೆ ತೆರಳಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕುಟುಂಬ ಸಮೇತರಾಗಿ ತಿರುಪತಿಗೆ ತೆರಳಿ ತಿರುಮಲ ತಿಮ್ಮಪ್ಪ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದು, ನಾಡಿನ ಅನ್ನದಾತರು ಸಂತೃಪ್ತ ಜೀವನ ನಡೆಸುವಂತೆ ಕರುಣಿಸುವಂತೆ ಬಾಲಾಜಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಕುಟುಂಬದ ಸದಸ್ಯರಾದ ಪತ್ನಿ ಭಾಗ್ಯಶ್ರೀ, ಮಕ್ಕಳಾದ ಸಂಯುಕ್ತ, ಸಂಪ್ರದಾ, ಸತ್ಯಜಿತ್‌, ಶ್ರೇಯಸ್, ಅಳಿಯ ಶಿವಕುಮಾರ ತಾಳಂಪಳ್ಳಿ ಇವರ ಜೊತೆ ತೆರಳಿ ಸಚಿವರು ತಿರುಪತಿ ಬಾಲಾಜಿ ದರ್ಶನ ಪಡೆದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



No comments:

Post a Comment