ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ಪ್ರೊ.ನಾಮದೇವಗೌಡ ಅವರು, ಸೋಮವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಚಿತ್ರದಲ್ಲಿ ಪ್ರೊ..ಮಲ್ಲಿಕಾರ್ಜುನ ಎನ್.ಎಲ್, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚAದ್ರಶೇಖರ್, ಇದ್ದಾರೆ.
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಭಾಷಾ ನಿಕಾಯದ ಡೀನ್ ಪ್ರೊ.ನಾಮದೇವಗೌಡ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಶ್ರೀ.ಥಾವರಚಂದ ಗೆÀಹಲೋಟ್ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಹಂಗಾಮಿ ಕುಲಪತಿಯಾಗಿದ್ದ ಪ್ರೊ..ಶಾಂತಾದೇವಿ ಟಿ ಅವರ ಡೀನ್ಶಿಪ್ ಅವಧಿ ಜೂನ್ 27ರಂದು ಪೂರ್ಣಗೊಂಡಿದ್ದರಿಂದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ಹಂಗಾಮಿ ಕುಲಪತಿಯಾಗಿ ನೇಮಕ ಮಾಡಲಾಗಿತ್ತು. ಪ್ರೊ.ಮಲ್ಲಿಕಾರ್ಜುನ ಅವರ ಅಧಿಕಾರ ಅವಧಿ 27-6-2025ರ ಮಧ್ಯಾಹ್ನದಿಂದ 30-06-2025ರ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಇರುತ್ತದೆ ಎಂದು ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿತ್ತು.
ಪ್ರೊ.ಮಲ್ಲಿಕಾರ್ಜುನ ಅವರ ಡೀನ್ಶಿಪ್ ಅವಧಿ ಸೋಮವಾರ ಪೂರ್ಣಗೊಂಡಿದ್ದರಿಂದ ರಾಜ್ಯಪಾಲರು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- 2000ನ ಸೆಕ್ಷನ್ 16 (2) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ದಿನಾಂಕ 26-7-2025 ಅಥವಾ ಖಾಯಂ ಕುಲಪತಿಗಳ ನೇಮಕವಾಗುವವರೆಗೆ ಅಥವಾ ಮುಂದಿನ ಆದೇಶದ ವರೆಗೆ ಹಂಗಾಮಿ ಕುಲಪತಿಯಾಗಿ ಪ್ರೊ.ನಾಮದೇವಗೌಡ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ನೂತನ ಹಂಗಾಮಿ ಕುಲಪತಿ ಪ್ರೊ.ನಾಮದೇವಗೌಡ ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪ್ರೊ..ಮಲ್ಲಿಕಾರ್ಜುನ ಎನ್.ಎಲ್., ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್ sಸಿಂಡಿಕೇಟ್ ಸದಸ್ಯರಾದ ಶಿವಯೋಗೆಪ್ಪ ಮಾಡ್ಯಾಳ, ಅತೀಕ್ ಮಕಾನದಾರ, ಸೈದಪ್ಪ ಮಾದರ, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ s ಉಪಸ್ಥಿತರಿದ್ದರು ಎಂದು ವಿವಿ ಪ್ರಕಟಣೆ ತಿಳಿಸಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment