Thursday, July 31, 2025

ಜೀವನ್ಮುಕ್ತಿಗೆ ಗುರೂಪದೇಶ ಬೇಕು:

     

ವಿಜಯಪುರ: ಹಿಂದೂಗಳಿಗೆ ಶ್ರಾವಣ ಮಾಸ ಒಂದು ಪವಿತ್ರ ಹಬ್ಬ. ಸತ್ಸಂಗದಲ್ಲಿ ಪಾಲ್ಗೊಂಡು  ಪುರಾಣ ಪ್ರವಚನಗಳನ್ನು ಶ್ರವಣ ಮಾಡಿದರೆ ಆತ್ಮಾನಂದ ಪ್ರಾಪ್ತಿಯಾಗುವುದು.ಎಲ್ಲರೂ ಕ್ರಮವಾಗಿ ಶ್ರವಣ,ಜಪ,ತಪ,ಧ್ಯಾನ ಮತ್ತು ದಾನಗಳೆಂಬ ಪಂಚ ಕ್ರಿಯೆಗಳನ್ನು ಸಿದ್ಧಿಸಿಕೊಳ್ಳಬೇಕೆಂದು ಡಾ.ಸಂಗಮೇಶ ಮೇತ್ರಿಯವರು ಹೇಳಿದರು.

    ಅವರು ವಿಜಯಪುರ ಕೀರ್ತಿನಗರದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರವಚನವನ್ನು ಉದ್ಘಾಟಿಸಿ ಮಾತನಾಡಿದರು.

        ಪ್ರವಚನಕಾರರಾದ ಪ.ಪೂ.ಶ್ರೀ ಸಂಗಮೇಶ ಸ್ವಾಮಿಗಳು ಶ್ರೀ ಸಿದ್ಧಾರೂಢರ ಆಧ್ಯಾತ್ಮಿಕ ಪ್ರವಚನವನ್ನು ಶುಭಾರಂಭ ಮಾಡಿದರು. ಸದ್ಭಕ್ತರು ಪ್ರಪಂಚದೊಡನೆ ಪರಮಾರ್ಥ ಸಾಧಿಸಲು ಗುರು ತೋರುವ ಪಥದಲ್ಲಿ ಸಾಗಬೇಕು.ಸಾಧು ಸಂತರನ್ನು ಸ್ಮರಿಸಿ ಅವರ ವಚನಾಮೃತವನ್ನು ಸವಿದು ಪುನೀತರಾಗಬೇಕೆಂದು ಹೇಳಿದರು.

          ಶ್ರೀ ಶಿರಡಿ ಸಾಯಿಬಾಬ ದೇವಸ್ಥಾನ ಟ್ರಸ್ಟ ಕಮಿಟಿ, ಸಮಾನ ಮನಸ್ಕರ ಸೇವಾಸಂಸ್ಥೆ,ಜೀಜಾ ಮಾತಾ ಮಾತೃ ಸಂಸ್ಥೆ, ಹಾಗೂ ಶ್ರೀ ಸಾಯಿಗಜಾನನ ಯುವಕ ಮಂಡಳದವರ ಸಂಯುಕ್ತಾಶ್ರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದ ವೇದಿಕೇಯಲ್ಲಿ ಅಧ್ಯಕ್ಷರಾದ ಶ್ರೀ ಎ.ಎ.ಪಾರ್ಸಿ,ಶ್ರೀ ಪ್ರೇಮಾನಂದ ಬಿರಾದಾರ, ಶ್ರೀಮತಿ ಭುವನೇಶ್ವರಿ

 ಕೋರವಾರ,ಅರ್ಜುನ ಜಾಧವ ಅತಿಥಿಗಳಾಗಿ ಭಾಗವಹಿಸಿದ್ದರು.ಬಿ. ಎಸ್. ಬಿರಾದಾರ ಸ್ವಾಗತಿಸಿದರು.ಜಂಬುನಾಥ  ಕಂಚ್ಯಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕುಮಾರಿ ನಕ್ಷತ್ರಾ ಜಾಧವ,ಶ್ರೀಮತಿ ಕುಲಕರ್ಣಿ, ಎಂ.ಎನ್.ಕೆರೂರ,ಎ.ವಾಯ್. ಹಿರೇಗೌಡರ,ಎಂ.ಪಿ.ತಂಗಾ, ಸುರೇಶ,ಆಶೋಕ ಕೋರವಾರ , ಕೆ.ಎಂ.ಕಾರಜೋಳ,ಎಚ್.ಬಿ.ಗೂಗಿಹಾಳ,ಕವಿತಾ, ಸುನಂದಾ ಮುಂತಾದವರು ಉಪಸ್ತಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

01-08-2025 EE DIVASA KANNADA DAILY NEWS PAPER

371ಜೆ ಮೀಸಲಾತಿಗೆ ಆಗ್ರಹಿಸಿ ವಿಜಯಪುರದಲ್ಲಿ ರೈತ ಭಾರತ ಪಕ್ಷದಿಂದ ಬೃಹತ್ ಪ್ರತಿಭಟನೆ ಜಿಲ್ಲೆಯ ಮಕ್ಕಳ ಭವಿಷ್ಯದೊಂದಿಗೆ ಚಲ್ಲಾಟ ನಿಲ್ಲಿಸಿ 371ಜೆ ಜಾರಿಗೊಳಿಸಿ ; ಮಲ್ಲಿಕಾರ್ಜುನ ಕೆಂಗನಾಳ

ವಿಜಯಪುರ: ಜಿಲ್ಲೆಗೆ 371 ಜೆ ಮೀಸಲಾತಿಗೆ ಆಗ್ರಹಿಸಿ ವಿಜಯಪುರ ನಗರದಲ್ಲಿ ಇಂದು ರೈತ ಭಾರತ ಪಕ್ಷದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು 

ವಿಜಯಪುರ :ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಾಂಧಿ ಚೌಕ್, ಬಸವೇಶ್ವರ ವೃತ್ತ, ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ, ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವರು, ಕರ್ನಾಟಕ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮೆರವಣಿಗೆಯುದ್ದಕ್ಕೂ ವಿಜಯಪುರ ಜಿಲ್ಲೆಗೆ ಅನ್ಯಾಯ ಮಾಡಿದ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಘೋಷಣೆ ಮೊಳಗಿದವು.

ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಅವರು ಮಾತನಾಡಿ, ಕಳೆದ 90 ರ ದಶಕದಲ್ಲಿ ವಿಜಯಪುರ ಜಿಲ್ಲೆ ಸೇರಿ ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಕಲಂ 371 ಜೆ ವಿಶೇಷ ಮೀಸಲಾತಿ ನೀಡಬೇಕೆಂದು ಜಿಲ್ಲೆಯ ಹಿರಿಯರು, ಜನ,ಸಂಘ ಸಂಸ್ಥೆಗಳು ನಿರಂತರ ಹೋರಾಟ ಮಾಡುತ್ತ ಬಂದಿದ್ದರು, 2014ರಲ್ಲಿ ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರ ವಿಜಯಪುರ ಜಿಲ್ಲೆಗೆ ನ್ಯಾಯಯುತವಾಗಿ ಸಿಗಬೇಕಾದ ಮೀಸಲಾತಿಯನ್ನು ನೀಡದೆ ವಂಚಿಸಿದವು ಇದರಿಂದ ವಿಜಯಪುರ ಜಿಲ್ಲೆಗೆ ದೊಡ್ಡ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಕೂಡಲೇ 371 ಜೆ ಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಜಿಲ್ಲೆಯ ಜನರ ಮುಗ್ದತೆಯನ್ನು ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುತ್ತಿರುವ ರಾಜಕೀಯ ಪಕ್ಷಗಳು ಜನರನ್ನು ನಿರಂತರವಾಗಿ ಅಭಿವೃದ್ಧಿಯಿಂದ ವಂಚಿಸುತ್ತಾ ಬಂದಿವೆ. ವಿಜಯಪುರ ಜಿಲ್ಲೆಯನ್ನು 371 ಜೆ ಮೀಸಲಾತಿಯಿಂದ ಕೈಬ್ಬಿಟ್ಟಿದ್ದರಿಂದ ಜಿಲ್ಲೆಯ ಮಕ್ಕಳು ಉನ್ನತ ಶಿಕ್ಷಣದ ಹಾಗೂ ಯುವಕ-ಯುವತಿಯರು ಸರಕಾರಿ ಉದ್ಯೋಗದಿಂದ ವಂಚಿತರಾಗಿದ್ದಾರೆ. ಜಿಲ್ಲೆಯ ಮಕ್ಕಳ ಭವಿಷ್ಯದೊಂದಿಗೆ ಚಲ್ಲಾಟ ಆಡುವುದನ್ನು ನಿಲ್ಲಿಸಿ ಜಿಲ್ಲೆಯ ಜನಪ್ರತಿನಿಧಿಗಳು ಕೂಡಲೇ ಜಿಲ್ಲೆಗೆ ಮೀಸಲಾತಿ ಒದಗಿಸಲು ಒತ್ತಾಯಿಸಿದರು.

ಕಳೆದ ಹತ್ತು ವರ್ಷದಿಂದ ಅನ್ಯಾಯ ಸಹಿಸಿಕೊಂಡಿರುವ ನಮ್ಮ ವಿಜಯಪುರ ಜಿಲ್ಲೆಯ ಯುವ ಜನಾಂಗ ಹೋರಾಟದಲ್ಲಿ ಭಾಗವಹಿಸಿ ನಮ್ಮ ಪಾಲಿನ ಹಕ್ಕನ್ನು ಪಡೆಯಲು ಮುಂದಾಗಬೇಕು ಎಂದು ಯುವಕರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ನವಸ್ಫೂರ್ತಿ ಸಂಘದ ಅಧ್ಯಕ್ಷರಾದ ಶಬ್ಬೀರ್ ಅವರು ಮಾತನಾಡಿದರು. 

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಅಂಬಾಜಿ ನಾರಾಯಣಕರ ಸಿದ್ದಪ್ಪ ನಾಟಿಕಾರ ನವಸ್ಫೂರ್ತಿ ಸಂಘದ ಗುಲಾಬ ರಾಠೋಡ, ಪ್ರಾರ್ಥನಾ ಅಂಬಿ, ಈರಣ್ಣ ಲಗಳಿ, ನಾಗಮ್ಮ ದಲಾಲ, ದಾವಲಸಾಬ ಕೊರಬು ಸೇರಿದಂತೆ ನೂರಾರು ಜನ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, July 30, 2025

ಸಚಿವರ ಸ್ಪಂದನೆಗೆ ಸಂತ್ರಸ್ತರು ಖುಷ್ ಪು.ಕೇ. ನಿವಾಸಿಗಳ ಸಮಸ್ಯೆ ಆಲಿಸಿದ ಸಚಿವ ಶಿವಾನಂದ


ನಿಡಗುಂದಿ (ವಿಜಯಪುರ) : ಕೃಷ್ಣಾ ಮೇಲ್ದಂಡೆ ಯೋಜನಾ ಬಾಧಿತರಾದ ನಮ್ಮ ಎಲ್ಲ ಸಮಸ್ಯೆಗಳಿಗೆ ಶಾಸ್ವತ ಹಾಗೂ ಸಂತೃಪ್ತ ಪರಿಹಾರ ಕಂಡುಕೊಟ್ಟಿದ್ದೀರಿ. ಯೋಜನಾ ನಿರಾಶ್ರಿತರ ಬಗ್ಗೆ ನಿಮಗಿರುವ ಕಾಳಜಿಗೆ ನಾವು ಕೃತಜ್ಞರಾಗಿದ್ದೇವೆ ಎಂದು ಸಚಿವ ಶಿವಾನಂದ ಪಾಟೀಲ ಅವರ ಸ್ಪಂದನೆಗೆ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಕೇಂದ್ರದ ನಿರಾಶ್ರಿತರು ಕೃತಜ್ಞತಾ ಭಾವ ವ್ಯಕ್ತಪಡಿಸಿದ ಘಟನೆ ಜರುಗಿತು.

ನಿಡಗುಂದಿ ತಾಲೂಕ ಕೇಂದ್ರಕ್ಕೆ ಹೊಂದಿಕೊಂಡಿರುವ ಕಮದಾಳ ಪುನರ್ವಸತಿ ಕೇಂದ್ರದ ಶಾಲಾ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳಿದ್ದ ಸಚಿವರು, ಅನಿರೀಕ್ಷಿತವಾಗಿ ಸಂತ್ರಸ್ತರ ಅಹವಾಲು ಆಲಿಸಲು ಮುಂದಾದರು. 

ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಆಲಮಟ್ಟಿಯ ಲಾಲ ಬಹಾದ್ದೂರ ಶಾಸ್ತ್ರೀ ಜಲಾಶಯದ ಹಿನ್ನೀರಿಗೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೊಲ-ಮನೆ, ಕೃಷಿ ಅವಲಂಬಿತ ಎಲ್ಲ ಬದುಕನ್ನು ಕಳೆದುಕೊಂಡ ನಮ್ಮನ್ನು ನಿಮ್ಮ ಮಡಿಲಿಗೆ ತಂದು ಹಾಕಿದ್ದಾರೆ. ನಿಡಗುಂದಿ ಭಾಗದ ಈ ಪುನರ್ವಸತಿ ಕೇಂದ್ರಕ್ಕೆ ಬಂದ ಮೇಲೆ ಕಷ್ಟದ ದಿನಗಳನ್ನು ಕಳೆಯುತ್ತಿದ್ದೆವು. ನೀವು ಆಯ್ಕೆಯಾಗಿ ಬಂದ ಮೇಲೆ ನಮ್ಮ ಸಮಸ್ಯೆಗಳಿಗೆ ಶಾಸ್ವತ ಪರಿಹಾರ ಕಂಡುಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೀರಿ ಎಂದು ಸಂತ್ರಸ್ತರು ಸಂತೃಪ್ತಿ ವ್ಯಕ್ತಪಡಿಸಿದರು.

ಇದ್ದಲ್ಲದೇ ಬೀಳಗಿ ಭಾಗದಲ್ಲಿ ಯೋಜನೆ ನಿರಾಶ್ರಿತರಾದ ನಮಗೆ ಕೃಷ್ಣಾ ಭಾಗ್ಯ ಜಲ ನಿಗದಮದ ಪುನರ್ವಸತಿ-ಪುನರ್ ನಿರ್ಮಾಣ ವಿಭಾಗದಿಂದ ಇನ್ನೂ ಹಲವರಿಗೆ ಕೆಲವು ಸೌಲಭ್ಯ ಸಿಗಬೇಕಿದೆ. ಕೂಡಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಡುವಂತೆ ಮನವಿ ಮಾಡಿದರು.

ಇದಲ್ಲದೇ ಎರಡು ದಶಕಗಳ ಬೇಡಿಕೆಯಾಗಿದ್ದ ಕುಡಿಯುವ ನೀರಿನ ಸಮಸ್ಯೆಗೆ ಬಗೆ ಹರಿದಿದ್ದರೂ, ವಾರಕ್ಕೊಮ್ಮೆ ನೀರು ಬರುತ್ತಿದ್ದು, ದಿನ ಬಿಟ್ಟು ದಿನ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ರಸ್ತೆಗೆ ಹರಿಯುವ ಕೊಳಚೆ ನೀರಿನ ಸಮಸ್ಯೆ ನೀಗಲು ಚರಂಡಿ ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ನಿಡಗುಂದಿ ಪಕ್ಕದಲ್ಲೇ ನಿರ್ಮಾಣಗೊಂಡಿರುವ ಕಮದಾಳ, ಮಣಗೂರು, ಚಿನಿವಾಲ, ನಿಂಗಾಪುರ, ಗುಂಡನಪಲ್ಯ ಸೇರಿದಂತೆ ಇತರೆ ಪುನರ್ವಸತಿ ಕೇಂದ್ರಗಳಲ್ಲಿನ ಯೋಜನಾ ನಿರಾಶ್ರಿತರು ತಮ್ಮ ಸಮಸ್ಯೆ ನಿವೇದಿಸಿಕೊಂಡರು.

ಕೂಡಲೇ ಕೃಷ್ಣಾ ಭಾಗ್ಯ ಜಲ ನಿಗಮದ ಪುವರ್ನಸತಿ-ಪುನರ್ ನಿರ್ಮಾಣದ ಆಯುಕ್ತರಾದ ಸುನೀಲಕುಮಾರ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ, ಬೀಳಗಿ ತಾಲೂಕಿಗೆ ಪ್ರಭಾರಿ ಅಧಿಕಾರಿಗೆ ಬದಲಾಗಿ ಶಾಸ್ವತವಾಗಿ ಪುನರ್ವಸತಿ ಅಧಿಕಾರಿಯನ್ನೇ ನೇಮಿಸಿ, ನಿರಾಶ್ರಿತರ ಸಮಸ್ಯೆ ಆಲಿಸಿ, ಪರಿಹಾರ ಕಂಡುಕೊಳ್ಳಲು ಅಧಿಕಾರಿಯನ್ನೇ ಸ್ಥಳಕ್ಕೆ ಕಳಿಸಿಕೊಡುವಂತೆ ಸಚಿವರು ಸೂಚಿಸಿದರು.

ಇದಲ್ಲದೇ ಪುನರ್ವಸತಿ ಕೇಂದ್ರಗಳಲ್ಲಿ ಚರಂಡಿ ನಿರ್ಮಾಣಕ್ಕೆ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಗಮನ ಹರಿಸಬೇಕು ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ  ಪ್ರತಾಪ ಕೊಡಗೆ ಅವರಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಣಗೂರು ಪುನರ್ವಸತಿ ಕೇಂದ್ರದ ವಿನಾಯಕ ವಂದಾಲ, ಹನುಮಂತಗೌಡ ಪಾಟೀಲ, ಕಮದಾಳ ಪುನರ್ವಸತಿ ಕೇಂದ್ರದ ಬಸವರಾಜ ಮೇಟಿ, ಅಶೋಕ ಖಾನಾಪುರ,  ನಿಡಗುಂದಿ ಪ್ರಮುಖರಾದ ಸಿದ್ದಣ್ಣ ನಾಗಠಾಣ, ಸಂಗಮೇಶ ಬಳಿಗಾರ, ಲಕ್ಷ್ಮಣ ವಿಭೂತಿ, ಪುನರ್ವಸತಿ ಕೇಂದ್ರಗಳ ಪಟ್ಟಣ ಪಂಚಾಯತ್ ಸದಸ್ಯರಾದ ಕರಿಯಪ್ಪ, ರಾಜು, ಬಸವರಾಜ ಹಾಗೂ ವಿವಿಧ ಪುನರ್ವಸತಿ ಕೇಂದ್ರಗಳ ಯೋಜನಾ ನಿರಾಶ್ರಿತರು, ಪಂಚಾಯತ್ ರಾಜ್ ಇಂಜಿಯರಿಂಗ್‍ನ ಎಇಇ ವಿಲಾಸ ರಾಠೋಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸೊಂಬೆರಿ, ಕರ್ತವ್ಯ ಪ್ರಜ್ಞೆ ಮರೆತ ಭ್ರಷ್ಟ ಅಧಿಕಾರಿಗಳ ಮೇಲೆ ಕ್ರಮ ಕೈಕೊಳ್ಳಲು; ಜಯ ಕರ್ನಾಟಕ ಸೇನೆ ಆಗ್ರಹ

ವಿಜಯಪುರ : ಸೊಂಬೆರಿ, ಕರ್ತವ್ಯ ಪ್ರಜ್ಞೆ ಮರೆತ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಕೃಷ್ಣಾ ಭೋಸಲೆ ಮಾತನಾಡಿ, ಸಾರ್ವಜನಿಕರ ಕಚೇರಿಗಳನ್ನು ತಮ್ಮ ಅಪ್ಪನ ಮನೆಯಂತೆ ತಿಳಿದುಕೊಂಡಿರುವ ಸೊಂಬೆರಿ, ಕರ್ತವ್ಯ ಪ್ರಜ್ಞೆ ಮರೆತ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು. ರೈತರು, ಸಾರ್ವಜನಿಕರು, ದಲಿತರು, ಮಹಿಳೆಯರು, ಪುರುಷರು, ಹಿಂದುಳಿದವರು, ಪ್ರತಿಯೊಬ್ಬ ಫಲಾನುಭವಿಗಳು ತಮ್ಮ ತಮ್ಮ ಹಕ್ಕನ್ನು ಸಂವಿಧಾನ ಬದ್ಧ ಹಕ್ಕನ್ನು ಪಡೆದುಕೊಳ್ಳಲು ಸರ್ಕಾರಿ ಕಚೇರಿಗಳಿಗೆ ತೆರಳಿದರೆ ಅಲ್ಲಿನ ಅಧಿಕಾರಿಗಳ ಖುರ್ಚಿ ಖಾಲಿ ಇರುತ್ತದೆ. ಇಲ್ಲವಾದಲ್ಲಿ ಸಾರ್ವಜನಿಕರೊಂದಿಗೆ ಸರಿಯಾಗಿ ಸ್ಪಂದಿಸದೆ ಫೋನಿನಲ್ಲಿಯೇ ಮಾತನಾಡುತ್ತಾ ಫೋಜುಕೊಡುತ್ತಾ, ಮೀಟಿಂಗ್ ಇಟಿಂಗ್ ಎನ್ನುತ್ತಾ ಕಾಲ ಹರಣ ಮಾಡಿ ಸಾರ್ವಜನಿಕರ ತೆರಿಗೆಯಿಂದ ಸರ್ಕಾರದ ಸಂಬಳದ ಪಡೆಯುತ್ತಾರೆ. ಆದರೆ ರೈತರು, ಸಾರ್ವಜನಿಕರು ತಮ್ಮ ತಮ್ಮ ಕೆಲಸ ಮಾಡಿಕೊಡುವಂತೆ ಕಚೇರಿಗೆ ಪದೇ ಪದೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಂತ. ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಸರಿಯಾದ ಮಾಹಿತಿಯನ್ನು ಬಂದತಹ ಸಾರ್ವಜನಿಕರಿಗೆ ತಿಳಿ ಹೇಳದೆ ತಮ್ಮ ಕರ್ತವ್ಯ ಪ್ರಜ್ಞೆಯಿಂದ ಜಾರಿಗೊಳ್ಳುತ್ತಿದ್ದಾರೆ. 

ಸರ್ಕಾರಿ ಕಚೇರಿಗಳಲ್ಲಿ ಏಜಂಟರ್ ಹಾವಳಿಯೇ ಜಾಸ್ತಿಯಾಗಿದೆ. ತಿಂಗಳಿಗೆ ಒಂದು ಬಾರಿಯಾದರೂ ಸರ್ಕಾರಿ ಕಚೇರಿಗಳಿಗೆ ತಾವು ಅಧಿಕಾರಿಗಳಿಗೆ ಮಾಹಿತಿ ನೀಡದೆ ಖುದ್ದಾಗಿ ಕಚೇರಿಗೆ ತೆರಳಿ ಅಲ್ಲಿನ ವಾಸ್ತು ಪರಿಸ್ಥಿತಿಯನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಗಳವೆ ಮಾತನಾಡಿ, ಸರ್ಕಾರಿ ಕಚೇರಿಗೆ ಸಾರ್ವಜನಿಕರು ಹೋದಾಗ ಅಧಿಕಾರಿಗಳ ವಿವರ ಗೊತ್ತಾಗುವುದಿಲ್ಲ. ಅವರ ಹೆಸರು ಅವರ ಹುದ್ದೆ ಗೊತ್ತಾಗುವುದಿಲ್ಲ. ಅವರ ಕಾರ್ಯಗಳ ವಿವರ ಸರ್ಕಾರದ ಪ್ರಕಾರ ಅವರು ಗುರುತಿನ ಚೀಟಿ ಹಾಕಿಕೊಳ್ಳುವಂತೆ ಖಡಕ್ ಆದೇಶ ಹೊರಡಿಸಬೇಕು. ಪ್ರತಿಯೊಂದು ಇಲಾಖೆಯ ಸೊಂಬೆರೆ ಕರ್ತವ್ಯ ಪ್ರಜ್ಞೆ ಮರೆತ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು. ಪ್ರತಿಯೊಂದು ಇಲಾಖೆಯ ಸಭೆಯನ್ನು ತಿಂಗಳಲ್ಲಿ ನಡೆಸಿ ಸಾರ್ವಜನಿಕರಿಂದ ಬಂದ ಪ್ರತ್ಯೇಕ ಅರ್ಜಿಗಳು ಹಾಗೂ ವಿಲೇವಾರಿಗಳ ಸಂಪೂರ್ಣ ವಿವರಗಳನ್ನು ತಿಳಿದುಕೊಂಡು ಪಾರದರ್ಶಕವಾಗಿ ಅದಕ್ಕೆ ಸ್ಪಂದಿಸಬೇಕು ಎಂದು ಜಯ ಕರ್ನಾಟಕ ರಕ್ಷಣಾ ಸೇನೆ ಒತ್ತಾಯಿಸುತ್ತದೆ ಎಂದರು.

ಈ ಸಂದರ್ಭ ರಾಜ್ಯ ಉಪಾಧ್ಯಕ್ಷೆ ಮಂಜುಳಾ ವಾಲಿ, ಜಿಲ್ಲಾಧ್ಯಕ್ಷ ವಾಣಿಶ್ರೀ ಪಟ್ಟಣಶೆಟ್ಟಿ, ಎಸ್ಸಿ ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಯಮನಪ್ಪ ಬೂದಿಹಾಳ, ಜಿಲ್ಲಾ ಮುಖಂಡರಾದ ರಾಜು ಕೋಟ್ಯಾಳ, ಸಕಾರಾಂ ಪವಾರ, ಮಾದೇವ ಢಗೆ, ರಾಜು ಬಿಸೆ, ಆನಂದ ಪೂಜಾರಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, July 29, 2025

10 ಸಾವಿರ ಲಂಚ ಪಡೆಯುತ್ತಿದ್ದ ಗ್ರಾಪಂ ನೌಕರ ಲೋಕಾ ಬಲೆಗೆ


ಈ ದಿವಸ ವಾರ್ತೆ

ವಿಜಯಪುರ: 10 ಸಾವಿರ ರೂ.ಗಳ ಲಂಚ ಪಡೆಯುತ್ತಿದ್ದ ಗ್ರಾಪಂ ದ್ವಿತೀಯ ದರ್ಜೆ ಸಹಾಯಕನೊಬ್ಬ ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ನಡೆದಿದೆ.

ಇಲ್ಲಿನ ದ್ವಿತೀಯ ದರ್ಜೆಯ ಸಹಾಯಕ ಮಲ್ಲಪ್ಪ ಸಾಬು ಹೊಸಕೇರಿ ಲೋಕಾ ಬಲೆಗೆ ಬಿದ್ದ ಆರೋಪಿ.

ಮಲ್ಲಪ್ಪ ಹೊಸಕೇರಿ ಈತ ಮುಳವಾಡ ಕೆಐಎಡಿಬಿ ವಸಾಹತು ಪ್ರದೇಶದ ನಿವೇಶನದ ಇ- ಸ್ವತ್ತು ಉತಾರೆ ನೀಡಲು 10,000 ರೂ.ಗಳ ಬೇಡಿಕೆ ಇಟ್ಟಿದ್ದ, ಈ ಕುರಿತು ಫಿರ್ಯಾದಿದಾರರು ದೂರು ನೀಡಿದ ಹಿನ್ನೆಲೆ, ಆರೋಪಿ ಮಲ್ಲಪ್ಪ ಹೊಸಕೇರಿ 10 ಸಾವಿರ ರೂ. ಲಂಚ ಪಡೆಯುವಾಗ, ಲೋಕಾ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸಪೆಕ್ಟರ್ ಆನಂದ ಟಕ್ಕನ್ನವರ್, ಆನಂದ ಡೋಣಿ ಹಾಗೂ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ನಡೆಸಿದೆ.

ವಿಜಯಪುರ ಜಿಲ್ಲೆಗೆ 371 ಜೆ ಮೀಸಲಾತಿ ಕಲ್ಪಿಸುವಂತೆ ಬೃಹತ್ ಹೋರಾಟ : ಮಲ್ಲಿಕಾರ್ಜುನ ಕೆಂಗನಾಳ

ವಿಜಯಪುರ : ದಿನಾಂಕ: 31-07-2025, ಬೆಳಿಗ್ಗೆ 10.00 ಗಂಟೆಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಸಂವಿಧಾನದ ಕಲಂ 371 ಜೆ ಅಡಿ ವಿಶೇಷ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಸುಳ್ಳು ಭರವಸೆಗಳನ್ನು ನೀಡಿ ಜಿಲ್ಲೆಯ ಜನರ ಮುಗ್ದತೆಯನ್ನು ರಾಜಕೀಯವಾಗಿ ದುರುಪಯೋಗ ಮಾಡಿಕೊಳ್ಳುತ್ತಿರುವ ರಾಜಕೀಯ ಪಕ್ಷಗಳ ನಡೆಯನ್ನು ಖಂಡಿಸಿ ಜಿಲ್ಲೆಯ ಮಕ್ಕಳು ಹಾಗೂ ಯುವಕರಿಗೆ ನ್ಯಾಯ ದೊರಕಿಸಿಕೊಡಲು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಳೆದ 10 ವರ್ಷಗಳಿಂದ ಜಿಲ್ಲೆಗೆ ಸಾಕಷ್ಟು ಅನ್ಯಾಯವಾಗಿದೆ.

 371 ಜೆ ವಿಶೇಷ ಸ್ಥಾನ ಮಾನ ಪಡೆಯಲು ಎಲ್ಲ ಅರ್ಹತೆ ಹೊಂದಿರುವ ವಿಜಯಪುರ ಜಿಲ್ಲೆಯನ್ನು ಕೈಬಿಟ್ಟಿದ್ದರಿಂದ ಜಿಲ್ಲೆಯು ಅಭಿವೃದ್ಧಿ ವಂಚಿತವಾಗಿದೆ. ಬಿಟ್ಟು ಹೋದ ಪ್ರದೇಶವಾದ ವಿಜಯಪುರ ಜಿಲ್ಲೆಗೆ ಮೀಸಲಾತಿ ಪಡೆಯಲು ಜಿಲ್ಲೆಯ ಜನರು, ಸಂಘ, ಸಂಸ್ಥೆಯವರು, ಪ್ರಜ್ಞಾವಂತ ನಾಗರಿಕರು ನಮ್ಮ ಹೋರಾಟಕ್ಕೆ ಬೆಂಬಲಿಸಬೇಕು. ಮುಖ್ಯವಾಗಿ ಯುವ ಜನಾಂಗ ಹೋರಾಟದಲ್ಲಿ ಭಾಗವಹಿಸಿ ನಮ್ಮ ಪಾಲಿನ ಹಕ್ಕನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, July 28, 2025

ಭೀಮಶಿ ಅಗಲಿಕೆಯಿಂದ ರೈತಪರ ಧ್ವನಿ ಕ್ಷೀಣ : ಶಿವಾನಂದ




ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಜಿಲ್ಲೆಯ ನೀರಾವರಿ ಯೋಜನೆಗಳ ಅನುಷ್ಠಾನದ ವಿಷಯದಲ್ಲಿ ಚಪ್ಪಲಿ ಹಾಕದೇ ಬದ್ಧತೆಯ  ಹೋರಾಟ ನಡೆಸಿದ್ದ ರೈತ-ಕಾರ್ಮಿಕ ನಾಯಕ ಭೀಮಶಿ ಕಲಾದಗಿ ಅವರಿಲ್ಲದ ವಿಜಯಪುರ ಜಿಲ್ಲೆಯಲ್ಲಿ ರೈತ-ಕಾರ್ಮಿಕ ಧ್ವನಿ ಕ್ಷೀಣಿಸಿದಂತಾಗಿದೆ. ಹೋರಾಟಕ್ಕೆ ಮತ್ತೊಂದು ಹೆಸರೇ ಭೀಮಶಿ ಕಲಾದಗಿ ಎಂಬಂತಾಗಿದ್ದು ಎಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.

ಸೋಮವಾರ ಇಂಡಿ ತಾಲೂಕಿನ ಹಂಜಗಿ ಗ್ರಾಮದ ತೋಟದ ವಸ್ತಿಯಲ್ಲಿ ರೈತ-ಕಾರ್ಮಿಕ ನಾಯಕ ಭೀಮಶಿ ಕಲಾದಗಿ ಪುಣ್ಯಸ್ಮರಣೆ ಸಂದರ್ಭದಲ್ಲಿ ಭೀಮಶಿ ಅವರ ಪುತ್ಥಳಿ ಅನಾವರಣ ಮಾಡಿ ಮಾತನಾಡಿದ ಅವರು, ನನ್ನೊಂದಿಗೆ ಸುದೀರ್ಘ 35 ವರ್ಷಗಳ ಒಡನಾಡ ಹೊಂದಿದ್ದ ಭೀಮಶಿ ಕಲಾದಗಿ ಅವರು, ಹಲವು ಸಮಸ್ಯೆಗಳ ಪರಿಹಾರದ ವಿಷಯವಾಗಿ ನನ್ನೊಂದಿಗೆ ಚರ್ಚಿಸುತ್ತಿದ್ದರು. ಜಿಲ್ಲೆಯ ಸಮಗ್ರ ನೀರಾವರಿ ವಿಷಯಗಾಗಿ ಅವರು ಚಪ್ಪಲಿ ಹಾಕದೇ ಬರಿಗಾಲಲ್ಲಿ ನಡೆಯುವ ಶಪಥ ಮಾಡಿದ್ದರು. ನೀರಾವರಿ ಯೋಜನೆ ಅನುಷ್ಠಾನದ ಬಳಿಕ ನಾನೇ ಅವರಿಗೆ ಚಪ್ಪಲಿ ಹಾಕುವ ಕುರಿತು ಮಾತನಾಡಿದ್ದೆ ಎಂದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿ ವಿಷಯವಾಗಿ ಸಮಾಜಮುಖಿ ಹೋರಾಟದಲ್ಲೇ ತಮ್ಮನ್ನು ಸಂಪೂರ್ಣ ಸಮರ್ಪಿಸಿಕೊಂಡಿದ್ದ ಭೀಮಶಿ ಅವರು, ಸಮಾಜದ ಕುರಿತು ಹೊಂದಿದ್ದ ಕಾಳಜಿ ಅನುಕರಣೀಯ. ತಮ್ಮ ಹೋರಾಟದ ಹಾದಿಯಲ್ಲಿ ಕುಟುಂಬವನ್ನೂ ಲೆಕ್ಕಿಸದೇ ಹೋದಾಗ ಅವರ ಪತ್ನಿ, ಮಕ್ಕಳು ಸಂಘರ್ಷದ ಮೂಲಕವೇ ಬದುಕು ಕಟ್ಟಿಕೊಂಡ ಬಗೆಯೂ ಬಹುದೊಡ್ಡ ಹೋರಾಟದ ಹಾದಿ ಎಂದು ಬಣ್ಣಿಸಿದರು.

ಭೀಮಶಿ ಅವರು ನಡೆಸಿದ ಪ್ರಜಾ ಸತ್ತಾತ್ಮಕ ಹೋರಾಟಗಳು ಇಂದಿನ ಹೋರಾಟಗಾರರಿಗೆ ಮಾದರಿಯಾಗಿದೆ. ಯಾವುದೇ ಪಕ್ಷದ ಸರ್ಕಾರವಿದ್ದರೂ ನ್ಯಾಯದ ಪರ ಧ್ವನಿಯಾಗುತ್ತಿದ್ದ ಭೀಮಶಿ ಅವರು, ಎಲ್ಲರೊಂದಿಗೆ ಸೌಹಾರ್ದಯುತ ಬಾಂಧವ್ಯ ಹೊಂದಿದ್ದರು ಎಂದು ಸ್ಮರಿಸಿದರು.

ಭೀಮಶಿ ಅವರು ಅಗಲಿದಾಗ ಸರ್ಕಾರದ ಮೂಲಕ ಅವರಿಗೆ ಗೌರವ ಸಲ್ಲಿಸುವ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಲ್ಲಿ ನಾನೇ ಮನವಿ ಮಾಡಿದ್ದೆ ಎಂದು ನೆನಪು ಮಾಡಿಕೊಂಡ ಸಚಿವರು, ಭೀಮಸಿ ಅವರು ಕುರಿತು ಹಲವರು ಅಪಪ್ರಚಾರವನ್ನೂ ಮಾಡಿದರೂ, ತಲೆ ಕೆಡಿಸಿಕೊಳ್ಳದ ಅವರು ತಮ್ಮ ಹೋರಾಟ ಮುಂದುವರೆಸಿದ್ದರು. ಭೀಮಶಿ ಅವರ ಕುಟುಂಬಕ್ಕೆ ಸರ್ಕಾರದಿಂದ ಸಾಧ್ಯ ಇರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ರೈತ ಮುಖಂಡ ಪಂಚಪ್ಪ ಕಲಬುರ್ಗಿ ಮಾತನಾಡಿ, ಭೀಮಶಿ ಕಲಾದಗಿ ಅವರೊಂದಿಗೆ ಸೇರಿ ಹಲವು ಹೋರಾಟಗಳಲ್ಲಿ ಪಾಲ್ಗೊಂಡಿದ್ದೆ. ಹೋರಾಟಗಾರರು ಸಮಾಜಕ್ಕೆ ಬಹಳಷ್ಟು ಕೊಟ್ಟಿದ್ದಾರೆ. ಆದರೆ, ಕುಟುಂಬಕ್ಕೆ ಏನು ಕೊಟ್ಟಿಲ್ಲ, ಅವರ ವೈಯಕ್ತಿಕ ಜೀವನ ಮೇಣದ ಬತ್ತಿಯಂತೆ ಇತ್ತು.

ಕಾವೇರಿ ಹೋರಾಟದ ನಂತರ ನಡೆದ ರಾಜ್ಯದ ದೊಡ್ಡ ಹೋರಾಟ ಭೀಮಾ ಹೋರಾಟವಾಗಿದೆ ಎಂದು ಸ್ಮರಿಸಿದರು. ಔಜ್ ಬ್ಯಾರೇಜ್ ಗೇಟ್ ಕೀಳಲು ಸಚಿವ ಕಾಶಪ್ಪನವರ ಕರೆ ಮೇರೆಗೆ ಕಿತ್ತು ಒಗೆದೆವು. ಗೇಟ್ ಕೀಳಿಸಿ ಸಚಿವರು ಕಾರಿನಲ್ಲಿ ಹೋದರು. ಆಗ ಕಾರು ತಡೆದು, ವಾಗ್ವಾದ ನಡೆಯಿತು. ನಮ್ಮ ಮೇಲೆ ದೂರು ದಾಖಲಾಯಿತು. 

ಸಿಐಟಿಯು ಮುಖಂಡ ವಿ.ಜಿ.ಕೆ.ನಾಯರ್, ಜೆಡಿಎಸ್ ಮುಖಂಡರಾದ ರಿಯಾಜ್ ಫಾರೂಕಿ,  ಬಿ.ಡಿ.ಪಾಟೀಲ, ಮಲ್ಲಿಕಾರ್ಜುನ ಯಂಡಿಗೇರಿ, ಮಲ್ಲಿಕಾರ್ಜುನ ಭೃಂಗಿಮಠ, ರೈತ ಸಂಘದ ಅಧ್ಯಕ್ಷ ಅಣ್ಣಾರಾಯ ಈಳಗೇರ, ಶ್ರೀಧರ ಕುಲಕರ್ಣಿ, ಲಕ್ಷ್ಮಣ ಹಂದ್ರಾಳ, ಭೀಮರಾಯ ಪೂಜಾರಿ, ಅಪ್ಪಸಾಬ್ ಯರನಾಳ, ಟಿ.ಯಶವಂತ, ಸುರೇಖಾ ರಜಪೂತ, ಭಾರತಿ ವಾಲಿ, ಮಧು ಕಲಾದಗಿ, ಅಶ್ವಿನಿ ತಳವಾರ, ಸುನಂದಾ ನಾಯಕ,  ಸುರೇಶ ಕಲಾದಗಿ, ಗಂಗಾಬಾಯಿ ಭೀಮಶಿ ಕಲಾದಗಿ, ಮಾಳಪ್ಪ ಕಲಾದಗಿ, ಹನಮಂತಪ್ಪ ಕಲಾದಗಿ, ಸತೀಶ ಅಡವಿ, ಹನುಮಂತ ಚಿಂಚಲಿ, ಸೋಮನಾಥ ಕಳ್ಳಿಮನಿ, ಅನಿಲ ಹೊಸಮನಿ, ಲಾಯಪ್ಪ ಇಂಗಳೆ, ದಯಾನಂದ ಸಾವಳಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ರಫ್ತು ಗುಣಮಟ್ಟದ ಒಣದ್ರಾಕ್ಷಿ ಉತ್ಪಾದನೆಗೆ ಮಾರ್ಗಸೂಚಿ ಅಪಘಾನಿಸ್ತಾನದ ತಳಿ ಆಮದಿಗೆ ಚಿಂತನೆ


ವಿಜಯಪುರ : ರಾಸಾಯನಿಕ ಬಳಕೆಗೆ ಬದಲಾಗಿ ವಿಷಮುಕ್ತವಾಗಿ ಹಾಗೂ ಯುರೋಪಿಯನ್ ರಾಷ್ಟ್ರಗಳಿಗೆ ಸಾಗಿಸಲು ರಫ್ತು ಗುಣಮಟ್ಟದ ಒಣ ದ್ರಾಕ್ಷಿ ಬೆಳೆಯಲು ಮಾರ್ಗಸೂಚಿ ರೂಪಿಸುವ ಅಗತ್ಯವಿದೆ. ಜೊತೆಗೆ ಅಧಿಕ ಇಳುವರಿ, ವಿಶಿಷ್ಟ ಸ್ವಾದ ಹೊಂದಿರುವ ಅಪಘಾನಿಸ್ತಾನ ರಾಷ್ಟ್ರದ 5-6 ದ್ರಾಕ್ಷಿ ತಳಿಗಳನ್ನು ಪರಿಚಯಿಸಲು ಯೋಜಿಸುವ ಕುರಿತು ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ನಡೆದ ದಕ್ಷಿಣ ಭಾರತದ ದ್ರಾಕ್ಷಿ ಬೆಳೆಗಾರರ ಸಭೆಯಲ್ಲಿ ನಿರ್ಧರಿಸಲಾಯಿತು.

ಭಾನುವಾರ ಸಂಜೆ ನಗರದಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿ ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ದ್ರಾಕ್ಷಿ ಬೆಳೆಗಾರರ ಸಂಘದ ಪ್ರತಿನಿಧಿಗಳು ಒಣದ್ರಾಕ್ಷಿ ಸುದೀರ್ಘ ಚರ್ಚೆ ನಡೆಸಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ರಾಷ್ಟ್ರೀಯ ದ್ರಾಕ್ಷಿ ಬೆಳೆಗಾರರ ಮಹಾಮಂಡಳದ ಅಧ್ಯಕ್ಷ ಸೋಪನ್ ಕಾಂಚನ್ ನೇತೃತ್ವದಲ್ಲಿ ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿಯಾದ ದ್ರಾಕ್ಷಿ ಬೆಳೆಗಾರರು, ದಕ್ಷಿಣ ಭಾರತದ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳು ದ್ರಾಕ್ಷಿ ಉತ್ಪಾದನೆಯ ಕಣಜ ಎನಿಸಿದೆ. ಆದರೆ ಇಲ್ಲಿ ಉತ್ಪಾದನೆಯಾಗುವ ಒಣದ್ರಾಕ್ಷಿಗೆ ವೈಜ್ಞಾನಿಕ ಮಿತಿ ಮಿತಿಯನ್ನು ಮೀರಿ ರಾಸಾಯನಿಕ ಬಳಕೆ ಮಾಡಲಾಗುತ್ತಿದೆ, ಅಧಿಕ ಉತ್ಪಾದನೆ ಮಾಡಿದರೂ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ವಿಫಲವಾಗುತ್ತಿದ್ದೇವೆ ಎಂಬ ಗಂಭೀರ ವಿಷಯದ ಕುರಿತು ದ್ರಾಕ್ಷಿ ಬೆಳೆಗಾರರು ಮುಕ್ತಮನಸ್ಸಿನಿಂದ ಚರ್ಚೆ ನಡೆಸಿದರು.

ಪ್ರಸಕ್ತ ಸಂದರ್ಭದಲ್ಲಿ ಆಫ್ರಿಕನ್ ರಾಷ್ಟ್ರಗಳಲ್ಲಿ ದ್ರಾಕ್ಷಿ ಬೆಳೆಯಲಾಗುತ್ತಿದ್ದರೂ ತಾಂತ್ರಿಕತೆ ಇಲ್ಲದ ಕಾರಣ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅವರು ಪೈಪೋಟಿ ನೀಡಲು ಸಾಧ್ಯವಾಗುತ್ತಿಲ್ಲ. ಇದರ ಲಾಭ ಪಡೆಯಲು ಭಾರತೀಯ ದ್ರಾಕ್ಷಿ ಬೆಳೆಗಾರರಿಗೆ ಸುವರ್ಣಾವಕಾಶವಿದ್ದು, ಈ ನಿಟ್ಟಿನಲ್ಲಿ ಗಂಂಭೀರ ಚಿಂತನೆ ನಡೆಸಿ, ಸದೃಢ ಹೆಜ್ಜೆ ಇರಿಸಬೇಕಿದೆ ಒಣದ್ರಾಕ್ಷಿ ಉದ್ಯಮಿ ಎ.ಎಸ್.ಬಿರಾದಾರ ಸಲಹೆ ನೀಡಿದರು. 


ಪ್ರಸಕ್ತ ಸಂದರ್ಭದಲ್ಲಿ ಜಾಗತಿಕ ಮಟ್ಟದಲ್ಲಿ ಆರೋಗ್ಯ ಪೂರಕ ಆಹಾರದ ಕುರಿತು ಹೆಚ್ಚು ಕಾಳಜಿ ಹೆಚ್ಚುತ್ತಿದೆ. ಕೃತಕ ಸಕ್ಕರೆ ಅಂಶ ಸೇರಿಸುವ ರಾಸಾಯನಿಕ ಹೊಂದಿರುವ ಒಣದ್ರಾಕ್ಷಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ವೀಕೃತವಾಗುತ್ತಿಲ್ಲ. ಹೀಗಾಗಿ ವಿಷಮುಕ್ತವಾಗಿ ಸಾವಯವದಲ್ಲಿ ನೈಸಗಿರ್ಕ ಸಕ್ಕರೆ ಅಂಶ ಇರುವಂತೆ ಬೆಳೆಯುವ ಕುರಿತು ದ್ರಾಕ್ಷಿ ಬೆಳೆಗಾರರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಮಹಾರಾಷ್ಟ್ರದ ದ್ರಾಕ್ಷಿ ಬೆಳೆಗಾರರ ಸಂಘಟನೆ ಉಪಾಧ್ಯಕ್ಷ ಮಾರುತಿ ಚವ್ಹಾಣ ಹೇಳಿದರು.

ರಫ್ತು ಗುಣಮಟ್ಟದ ಒಣದ್ರಾಕ್ಷಿ ಉತ್ಪಾದನೆ ವಿಷಮುಕ್ತ ದ್ರಾಕ್ಷಿ ಬೆಳೆಯುವುದಕ್ಕಾಗಿ ನಿರ್ಧಿಷ್ಟವಾಗಿ ಮಾರ್ಗಸೂಚಿ ರೂಪಿಸಬೇಕಿದೆ. ಮಹಾರಾಷ್ಟ್ರ ಸರ್ಕಾರದ ನೀತಿಗಳು ದ್ರಾಕ್ಷಿ ಬೆಳೆಗಾರರಿಗೆ ಪ್ರೋತ್ಸಾಹದಾಯಕ ಆಗಿಲ್ಲ. ಕರ್ನಾಟಕದಲ್ಲಿ ಇಲ್ಲಿನ ಸರ್ಕಾರದ ನೀತಿಗಳು ದ್ರಾಕ್ಷಿ ಬೆಳೆಗಾರರಿಗೆ ಪ್ರೇರಣಾದಾಯಕವಾಗಿವೆ. ಹೀಗಾಗಿ ಎರಡೂ ರಾಜ್ಯಗಳ ದ್ರಾಕ್ಷಿ ಬೆಳೆಗಾರರ ಶ್ರೇಯಕ್ಕಾಗಿ ವಿಜಯಪುರ ಭಾಗದಲ್ಲಿ ಪ್ರಯೋಗಾಲಯ ಸ್ಥಾಪಿಸಬೇಕು. ರಾಷ್ಟ್ರೀಯ ಸಂಶೋಧನಾ ಕೇಂದ್ರದ ಮಾರ್ಗದರ್ಶನದಲ್ಲಿ ಮಾರ್ಗಸೂಚಿ ರೂಪಿಸಬೇಕು. ಕೃಷಿ ವಿಷಯದಲ್ಲಿ ಪರಿಣಿತಿ ಹೊಂದಿರುವ ನಿವೃತ್ತ ಐಎಎಸ್ ಅಧಿಕಾರಿಯನ್ನು ಸಮನ್ವಯಕ್ಕಾಗಿ ನೇಮಿಸಿಕೊಂಡು, ದ್ರಾಕ್ಷಿ ಬೆಳೆಗಾರರಿಗೆ ಆದಾಯ ಹೆಚ್ಚಿಸುವ ಕುರಿತು ಯೋಜನೆ ರೂಪಿಸಬೇಕು ಎಂದು ಐಐಎಚ್‍ಆರ್ ರೈತ ಪ್ರತಿನಿಧಿ ಡಾ.ಎಸ್.ಡಿ.ಶಿಖಾಮಣಿ, ದ್ರಾಕ್ಷಿ ಬೆಳೆಗಾರರ ಸಂಘಟನೆ ಉಪಾಧ್ಯಕ್ಷ ಅನಿಲ ಮೆಹರೆ ಇತರರು ಸಲಹೆ ನೀಡಿದರು.

ರೈತರಿಗೆ ರಫ್ತು ಗುಣಮಟ್ಟದ ಒಣದ್ರಾಕ್ಷಿ ಉತ್ಪಾದನೆ ಮಾಡುವ ಕುರಿತು ಪ್ರಸಕ್ತ ವರ್ಷದಿಂದಲೇ ಸೂಕ್ತ ಅರಿವು ಮೂಡಿಸಬೇಕು. ಮಾರುಕಟ್ಟೆ ಅವಕಾಶಗಳು, ವಿಷಮುಕ್ತ ಉತ್ಪಾದನೆಗೆ ಪ್ರೋತ್ಸಾಹಿಸಲು ರಿಯಾಯ್ತಿ, ಸರ್ಕಾರದ ತೋಟಗಾರಿಕೆ ಇಲಾಖೆ ಮೂಲಕ ಸಾವಯವ ಒಣದ್ರಾಕ್ಷಿ ಉತ್ಪಾದಕ ರೈತರ ನೋಂದಣಿಯಂಥ ಕೆಲಸಗಳು ನಡೆಸಬೇಕು. ಕೃಷಿ ಮಾರುಕಟ್ಟೆಯಲ್ಲಿ ಒಣದ್ರಾಕ್ಷಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಎಂದು ಕರ್ನಾಟಕ ರಾಜ್ಯದ ದ್ರಾಕ್ಷಿ ಬೆಳೆಗಾರರ ಸಂಘದ ಬಿ.ಎಂ.ಕೋಕರೆ ಸಚಿವರಿಗೆ ಮನವಿ ಮಾಡಿದರು.

ದ್ರಾಕ್ಷಿ ಬೆಳೆಗಾರರ ಮನವಿ ಆಲಿಸಿದ ಸಚಿವ ಶಿವಾನಂದ ಪಾಟೀಲ, ನಮ್ಮ ಸರ್ಕಾರ ದ್ರಾಕ್ಷಿ ಬೆಳೆಗಾರರ ಹಿತ ರಕ್ಷಣೆಗಾಗಿ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಮುಂದಾಗಿರ. ಒಣದ್ರಾಕ್ಷಿ ಮಾರುಕಟ್ಟೆಗೆ ವಿಶೇಷ ಆದ್ಯತೆ ನೀಡುತ್ತಿದೆ. ದ್ರಾಕ್ಷಿ ಬೆಳೆಗಾರರಿಗೆ ಕಡಿಮೆ ಬಡ್ಡಿದರದ ಸಾಲದ ಸೌಲಭ್ಯ ಸೇರಿದಂತೆ ಇತರೆ ಅನುಕೂಲ ಕಲ್ಪಿಸಿದೆ. ಭವಿಷ್ಯದಲ್ಲಿ ದ್ರಾಕ್ಷಿ ಬೆಳೆಗಾರರ ಬೇಡಿಕೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ನಮ್ಮ ಸರ್ಕಾರ ಸಕಾರಾತ್ಮವಾಗಿ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.

ದ್ರಾಕ್ಷಿ ಬೆಳೆಗಾರರಾದ ಪ್ರಕಾಶ ಗಣಿ, ಮಲ್ಲಿಕಾರ್ಜುನ ತುಂಗಳ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶದ ದ್ರಾಕ್ಷಿ ಬೆಳೆಗಾರರು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Sunday, July 27, 2025

ಜಲ್ ಜೀವನ್ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ - ಜಿ.ಪಂ. ಸಿಇಒ ರಿಷಿ ಆನಂದ

ವಿಜಯಪುರ : ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭಾನುವಾರ ತಿಕೋಟಾ ಹಾಗೂ ಬಬಲೇಶ್ವರ ತಾಲೂಕಿನ ಜಲ್ ಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡಿರುವÀ ಕಾಮಗಾರಿಗಳನ್ನು ಪರಿಶೀಲಿಸಿದರು.

 ವಿಜಯಪುರ ತಾಲೂಕಿನ ಖತಿಜಾಪುರ,ಬಬಲೇಶ್ವರ ತಾಲೂಕಿನ ಸಾರವಾಡ, ಹಲಗಣಿ ಮತ್ತು ನಿಡೋಣಿ, ತಿಕೋಟಾ ತಾಲೂಕಿನ ಬಾಬಾನಗರ ಮತ್ತು ಘೊಣಸಗಿ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿ, ಯೋಜನೆ ಕುರಿತು ಮಾಹಿತಿ ಪಡೆದರು. ಪ್ರತಿದಿನ ನೀರು ಸರಬರಾಜಾಗುವ ಕುರಿತು ವಿಚಾರಿಸಿದರು. ನೀರನ್ನು ಮಿತವಾಗಿ ಬಳಸಿ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಗ್ರಾಮಸ್ಥರಿಗೆ ಹೇಳಿದರು. ಕೆಲವು ಮನೆಗಳಲ್ಲಿ ನಳ ಸಂಪರ್ಕಗಳಲ್ಲಿ ನೀರು ಮೀಟರ್ ಮೂಲಕ ಬಾರದೆ ನೇರವಾಗಿ ಪಡೆಯುತ್ತಿರುವುದನ್ನು ಗಮನಿಸಿದ ಅವರು, ಬೈಪಾಸ್ ಆದಂತಹ ಸಂಪರ್ಕಗಳನ್ನು ಗ್ರಾಮ ಪಂಚಾಯಿತಿಯವರು ಕೂಡಲೇ ಮರುಜೋಡಣೆ ಹಾಗೂ ಈ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಸಹ ನಿಗಾವಹಿಸುವಂತೆ ಸೂಚಿಸಿದರು. 

 ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ನೀಡಲಾದ ಹೊಸ ನಳ ಸಂಪರ್ಕಗಳ ಮೂಲಕ ನೀರನ್ನು ಪೂರೈಸಲು ಗ್ರಾಮ ಪಂಚಾಯಿತಿಯವರಿಗೆ ಸೂಚಿಸಿದ ಅವರು, ಎಲ್ಲ ಗ್ರಾಮಗಳಲ್ಲಿನ ಶಾಲೆ ಮತ್ತು ಅಂಗನವಾಡಿಗಳಿಗೆ ನೀರಿನ ಸಂಪರ್ಕ ಒದಗಿಸಿರುವುದನ್ನು ಖುದ್ದು ಖಾತರಿ ಪಡಿಸಿಕೊಂಡರು. ನೀರು ಪೂರೈಸುವ ಪೂರ್ವದಲ್ಲಿ ನಿಯಮಿತವಾಗಿ ಕಡ್ಡಾಯವಾಗಿ ಪರೀಕ್ಷಿಸಿದ ನಚಿತರ ಖಾತ್ರಿಪಡಿಸಕೊಂಡು ನೀರು ಪೂರೈಸಬೇಕು. ಯಾವುದೇ ಸಮಸ್ಯೆ ಉದ್ಭವವಾದರೆ ಸಂಬAಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಕಟ್ಟುನಿಟ್ಟಾಗಿ ಸೂಚಿಸಿದರು. ಒವರ್ ಹೆಡ್ ಟ್ಯಾಂಕಗಳÀನ್ನು ನಿಯಮಿತವಾಗಿ ಸ್ವಚ್ಛಗೊಳಿಸಲು ಕ್ರಮವಹಿಸುವುದರ ಜೊತೆಗೆ ಹಾಗೂ ಕ್ಲೋರಿನೇಷನ್ ಮಾಡಲು ತಿಳಿಸಿದರು. ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸುವುದು. ಯಾವುದೇ ದುರಸ್ತಿಗಳು ಕಂಡು ಬಂದಲ್ಲಿ ಕೂಡಲೇ ಕ್ರಮ ವಹಿಸಲು ಸಂಬAಧಿಸಿದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಶಾಖಾಧಿಕಾರಿಗಳಿಗೆ ಸೂಚಿಸಿದರು. ಪ್ರತಿ ಮನೆಗೆ ನೀರು ಸರಿಯಾದ ಪ್ರಮಾಣದಲ್ಲಿ ಪೂರೈಕೆಯಾಗುವುದನ್ನು ಖಾತರಿಪಡಿಸಿಕೊಳ್ಳಬೇಕು ಹಾಗೂ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲು ಸೂಚನೆ ನೀಡಿದರು. ಗ್ರಾಮ ಪಂಚಾಯಿತಿಗೆ ಯೋಜನೆ ಹಸ್ತಾಂತರಗೊAಡ ನಂತರ ಯೋಜನೆಯನ್ನು ಸರಿಯಾಗಿ ನಿರ್ವಹಣೆಯು ಗ್ರಾಮ ಪಂಚಾಯತಿಯ ಜವಾಬ್ದಾರಿಯಾಗಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಆದಷ್ಟು ಬೇಗ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿಯನ್ನು ಅಳವಡಿಸಿಕೊಳ್ಳಲು ಸೂಚಿಸಿದರು. ಹಾಲಿ ಇರುವ ಮನೆಗಳ ಸಂಖ್ಯೆ ಹೆಚ್ಚಾದಾಗ ಅಥವಾ ಕಡಿಮೆ ಇದ್ದಲ್ಲಿ ವಿಭಾಗ ಕಚೇರಿಗೆ ಐಎಂಎಸ್‌ನಲ್ಲಿ ತಿದ್ದುಪಡಿಗೊಳಿಸಲು ಮಾಹಿತಿಯನ್ನು ವಿಭಾಗ ಕಚೇರಿಗೆ ಪ್ರಸ್ತಾವನೆಯನ್ನು ಸಲ್ಲಿಸಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

 ಈ ಸಂದರ್ಭದಲ್ಲಿ ತಿಕೋಟಾ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವಂತ್ರಾಯಗೌಡ ಬಿರಾದಾರ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರಾದ ಬಸವರಾಜ್ ಕುಂಬಾರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಎಸ್ ಬಿ ಪಾಟೀಲ ಹಾಗೂ ಶಾಖಾಧಿಕಾರಿಗಳಾದ ಶೀಲವಂತ ಹಾಗೂ ಎಂ ವೈ ವಗ್ಗರ್ ಸ್ಭೆರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, July 26, 2025

27-07-2025 EE DIVASA KANNADA DAILY NEWS PAPER

26-07-2025 EE DIVASA KANNADA DAILY NEWS PAPER

25-07-2025 EE DIVASA KANNADA DAILY NEWS PAPER

24-07-2025 EE DIVASA KANNADA DAILY NEWS PAPER

23-07-2025 EE DIVASA KANNADA DAILY NEWS PAPER

22-07-2025 EE DIVASA KANNADA DAILY NEWS PAPER

21-07-2025 EE DIVASA KANNADA DAILY NEWS PAPER

20-07-2025 EE DIVASA KANNADA DAILY NEWS PAPER

ರಮೇಶ ಕೋಟ್ಯಾಳಗೆ ಪ್ರತಿಷ್ಠಿತ ಅತ್ಯುತ್ತಮ ಪ್ರಶಸ್ತಿ


ವಿಜಯಪುರ: ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಭಾರತೀಯ ಶಿಕ್ಷಣ ಮಂಡಲ ಹಮ್ಮಿಕೊಂಡ ಉತರ ಕರ್ನಾಟಕ ಪ್ರಾಂಥ ಗುರು ನಮನ ಕಾರ್ಯಕ್ರಮದಲ್ಲಿ ಕವಿ, ಸಾಹಿತಿ, ದರಬಾರ ಶಾಲೆ ಮುಖ್ಯೋಪಧ್ಯಾಯ ರಮೇಶ ಕೋಟ್ಯಾಳ ಅವರಿಗೆ 2025 ನೇ ಸಾಲಿನ ಭಾಷೆ, ಸಾಹಿತ್ಯಕ್ಕಾಗಿ ಪ್ರತಿಷ್ಠಿತ ಅತ್ಯುತ್ತಮ ಪ್ರಶಸಿ ಪ್ರದಾನ ಮಾಡಿ ಗೌರವಿಸಲಾಯಿತು.

ಈ ಸಂದರ್ಭ ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷ ಬಿ.ಎಸ್. ಪಾಪಗೊಂಡ, ಖ್ಯಾತ ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ (ಧಾರವಾಡ), ಸಿದ್ಧೇಶ್ವರ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸಯ್ಯ ಹಿರೇಮಠ, ಬಸವರಾಜ ಕೌಲಗಿ, ವಿಕಾಸ ದರ್ಬಾರ, ಡಾ.ವಿ.ಬಿ. ಗ್ರಾಮಪುರೋಹಿತ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮೌಲ್ಯಮಾಪನ ಕುಲಸಚಿವರರಾಗಿ ಪ್ರೊ.ಬಿ.ಎಲ್.ಲಕ್ಕಣ್ಣನವರ ನೇಮಕ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವರನ್ನಾಗಿ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎಲ್.ಲಕ್ಕಣ್ಣನವರ ಅವರನ್ನು ತಕ್ಷಣ ಜಾರಿಗೆ ಬರುವಂತೆ ನೇಮಕ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮಹಿಳಾ ವಿಶ್ವವಿದ್ಯಾನಿಲಯದ ಪ್ರಸ್ತುತ ಮೌಲ್ಯಮಾಪನ ಕುಲಸಚಿವರಾಗಿದ್ದ ಪ್ರೊ.ಎಚ್.ಎಂ.ಚAದ್ರಶೇಖರ್ ಅವರ ಸೇವೆಯನ್ನು ಅವರ ಮಾತೃ ಸಂಸ್ಥೆಯಾಗಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ತಕ್ಷಣ ಜಾರಿಗೆ ಬರುವಂತೆ ಹಿಂತಿರುಗಿಸಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸಹೋದರತೆಯ ಭಾವವೇ ನಾಗರ ಪಂಚಮಿ ಹಬ್ಬ

ಹಿಂದೂ ಪಂಚಾಂಗದ ಪ್ರಕಾರ ಎಲ್ಲಾ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ಹಬ್ಬ ಎಂದರೆ ಅದು ನಾಗರ ಪಂಚಮಿ. ಶ್ರಾವಣ ಶುದ್ಧ ಪಂಚಮಿಯಿಂದ ಆಚರಿಸಲ್ಪುಡುವ ಈ ಹಬ್ಬ ಮುಂದೆ ಬರಲಿರುವ ಗಣೇಶ ಚತುರ್ಥಿ, ಕೃಷ್ಣಾಷ್ಟಮಿ, ನವರಾತ್ರಿ, ಊರಿನ ಜಾತ್ರೆಗೆ, ಎಲ್ಲಾ ಶುಭ ಆಚರಣೆಗಳಿಗೆ ಮೊದಲ ಮೆಟ್ಟಿಲು. 

ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ನಾಗಪ್ಪನಿಗೆ ಹಲವು ವಿಧದ ಉಂಡೆಗಳು, ಕರಿ ಎಳ್ಳಿನಿಂದ ಮಾಡಿದ ಉಂಡೆ, ಚಿಗಳಿ ತಂಬಿಟ್ಟು, ಕರದಂಟು, ನಾನಾತರದ ಕಡಬುಗಳು,  ಚುರುಮುರಿ ಚುಡಾ, ಮತ್ತು ಬೆಲ್ಲ ಬೆರೆಸಿ ಮಾಡಿದ ತಂಬಿಟ್ಟಿನ ನೈವೇದ್ಯವನ್ನು ಮಾಡಲಾಗುತ್ತದೆ.

ಅಣ್ಣ ತಂಗಿಯ ಪ್ರೀತಿ ಸಾರುವಂತಹ ಈ ಹಬ್ಬದಲ್ಲಿ ಅಕ್ಕ ತಂಗಿಯರು ಅಣ್ಣ ತಮ್ಮಂದಿರ ಆಯಸ್ಸು, ಆರೋಗ್ಯ ಮತ್ತು ಸಕಲ ಸುಖಗಳನ್ನು ನೀಡುವಂತೆ ದೇವರಲ್ಲಿ ಪ್ರಾರ್ಥಿಸಿಕೊಳ್ಳವ ದಿನವಾಗಿದೆ. ಹುತ್ತಕ್ಕೆ ಹಾಲು ಎರೆದು, ಹುತ್ತದ ಮಣ್ಣನ್ನು ಹೊಕ್ಕಳು ಅಥವಾ ಬೆನ್ನಿಗೆ ಹಚ್ಚಿ ಒಳ್ಳೆದಾಗಲಿ ಎಂದು ಹಾರೈಸುತ್ತಾರೆ. ನಾಗದೇವತೆಗಳಿಗೆ ಅನುಗ್ರಹ ಮತ್ತು ನಿಗ್ರಹ ಮಾಡುವಂತಹ ಸಾಮರ್ಥ್ಯ ಇರುವುದರಿಂದ ಸರ್ಪು ಪೂಜೆಗೆ ವಿಶೇಷವಾದ ಮಾನ್ಯತೆ ನೀಡಲಾಗಿದೆ.

ಇನ್ನು ಉತ್ತರ ಕರ್ನಾಟಕದಲ್ಲಿ ಈ ಹಬ್ಬ ಮತ್ತಷ್ಟು ವಿಶಿಷ್ಟವಾಗಿರುತ್ತದೆ. ಈ ಹಬ್ಬದಲ್ಲಿ ಮನೆಗಳಲ್ಲಿ ಮತ್ತು ಊರಿನಲ್ಲಿ ಜೋಕಾಲಿ ಕಟ್ಟಿ ಹಾಡುವಂತಹ ವಿಶಿಷ್ಟ ಪದ್ಧತಿ ಇದೆ. ಹಿರಿಯರು ಕಿರಿಯರು ಭೇದವಿಲ್ಲದೇ ಜೋಕಾಲಿ ಆಡುತ್ತಾರೆ. ನಾಗರಪಂಚಮಿ ಹಬ್ಬ ಉತ್ತರ ಕರ್ನಾಟಕ ಭಾಗದಲ್ಲಿ ಜೋಕಾಲಿ ಹಬ್ಬವೆಂದು ಪ್ರಸಿದ್ಧಿ ಪಡೆದಿದೆ. ನಾಗ ಪೂಜೆ ಮಾಡಿ ಸುಬ್ರಮಣ್ಯನನ್ನು ಆರಾಧನೆ ಮಾಡಿದರೆ ನಮ್ಮ ಇಡೀ ಕುಟುಂಬವನ್ನು ನಾಗಪ್ಪ ಕಾಯ್ತಾನೆ ಎಂಬ ನಂಬಿಕೆ ಇದೆ.

ನಾಗರ ಪಂಚಮಿ ಸಂಬಂಧಿಸಿದಂತೆ ಜನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲದ ಕೃಷಿ ಚಟುವಟಿಕೆಗಳು ಒಂದು ಹಂತ ತಲುಪಿರುತ್ತವೆ. ಈ ಕಾಲದಲ್ಲಿ ಕೀಟ, ಮಿಡತೆಗಳ ಹಾವಳಿ ಅಧಿಕ. ಅಷ್ಟೇ ಅಲ್ಲದೆ ಫಸಲು ತಿನ್ನಲು ಬರುವ ಇಲಿಗಳಿಗೂ ಕೊರತೆಯಿಲ್ಲ. ಇವೆಲ್ಲದರಿಂದ ರೈತನ ಫಸಲನ್ನು ಕಾಪಾಡುವುದು ಹಾವುಗಳು. ಇಲಿ, ಕಪ್ಪೆಗಳ ಅತಿಯಾದ ಹಾವಳಿಯನ್ನು ನಿಯಂತ್ರಿಸುವ ನಾಗರನಿಗೆ ಪುಟ್ಟದೊಂದು ಧನ್ಯವಾದ ಹೇಳಲು ನಡೆಸುವ ಪೂಜೆಯೇ ನಾಗರ ಪಂಚಮಿ.

ಸ್ಕಂದ ಪುರಾಣದಲ್ಲಿ ನಾಗರ ಪಂಚಮಿಯ ಬಗ್ಗೆ ಕೆಲ ಮಾಹಿತಿಗಳು ಸಿಗುತ್ತದೆ. ಶ್ರೀಕೃಷ್ಣನ ಮಗನಾದ ಸಾಂಬನು ಶಿವಸುತ ಸುಬ್ರಹ್ಮಣ್ಯನಲ್ಲಿ ನಾಗರ ಪಂಚಮಿಯನ್ನು ಯಾಕೆ ಆಚರಿಸಲಾಗುತ್ತದೆ ಎಂದು ಪ್ರಶ್ನೆ ಕೇಳಿದಾಗ ಆತನ ಒಂದು ಕಥೆಯನ್ನು ಹೇಳುತ್ತಾನೆ. 

ಹಿಂದೆ ದೇವಶರ್ಮ ಎಂಬ ಬ್ರಾಹ್ಮಣನೊಬ್ಬನಿದ್ದನು. ಆತನಿಗೆ 8 ಗಂಡು ಮಕ್ಕಳು ಹಾಗೂ ಒಬ್ಬಾಕೆ ಹೆಣ್ಣು ಮಗಳಿದ್ದಳು. ಒಂದು ದಿನ ಗರುಡನಿಂದ ಹೆದರಿಸಲ್ಪಟ್ಟ ನಾಗರವೊಂದು ಈ ಕನ್ನಿಕೆಯ ಬಳಿ ಬಂದು ಆಶ್ರಯವನ್ನು ಕೇಳುತ್ತದೆ. ಭಕ್ತಿಯಿಂದ ಕನ್ನಿಕೆ ಆ ನಾಗನಿಗೆ ಹಾಲು, ಫಲಗಳನ್ನು ಇಟ್ಟು ಭಕ್ತಿಯಿಂದ ಸಾಕುತ್ತಾಳೆ. ಇದಕ್ಕೆ ಪ್ರತಿಯಾಗಿ ಆ ನಾಗವು ದಿನಂಪ್ರತಿ ಆಕೆಗೆ ಒಂದು ತೊಲೆ ಚಿನ್ನವನ್ನು ನೀಡುತ್ತಿರುತ್ತದೆ. ಹೀಗಿರಲು ಒಂದು ದಿನ ಎಂಟು ಗಂಡು ಮಕ್ಕಳಲ್ಲಿ ಒಬ್ಬನು ತುಂಬಾ ಬಂಗಾರ ಬೇಕೆಂದು ನಾಗನನ್ನು ಪೀಡಿಸಿ, ಕಾಲಿನಿಂದ ಒದೆಯುತ್ತಾನೆ. ಕೋಪಗೊಂಡ ನಾಗರ ಹಾವು ಅವನ್ನು ಸೇರಿದಂತೆ ಇತರ ಏಳು ಜನರನ್ನು ಕೊಂದು ಹೊರಟು ಹೋಗುತ್ತದೆ. ತನ್ನ ಅಣ್ಣಂದಿರ ಸಾವಿಗೆ ತಾನೇ ಕಾರಣನಾದೇ ಎಂದು ಆ ಕನ್ನಿಕೆ, ದೇವರ ಇದಿರಿನಲ್ಲಿ ಶಿರಚ್ಛೇದನಕ್ಕೆ ಮುಂದಾದಾಗ, ನಾರಾಯಣನು ವಾಸುಕಿಗೆ ಆ ಸತ್ತ ಹುಡುಗರನ್ನು ಬದುಕಿಸಲು ಹೇಳುತ್ತಾನೆ. ಈ ರೀತಿ ಪುನಃ ಅಣ್ಣಂದಿರ ಜೀವವನ್ನು ಮರಳಿ ಪಡೆದುಕೊಳ್ಳುವಲ್ಲಿ ಆ ಕನ್ನಿಕೆ ಯಶಸ್ವಿಯಾದ ದಿನವೇ ನಾಗರ ಪಂಚಮಿ ಹಬ್ಬ   ನಮ್ಮ ಅಣ್ಣ ತಮ್ಮ ಹಾಗೂ ಕುಟುಂಬದವರಿಗೆ ನಾಗಪ್ಪನ ಆಶೀರ್ವಾದದಿಂದ ಒಳ್ಳೆದಾಗಲಿ ಎಂದು ಹೇಳುತ್ತಾ ಈ ಸಂಪ್ರಧಾಯನ್ನು ಹೀಗೆ ಮುನ್ನಡೆಸಿಕೊಂಡು ಹೋಗೋಣ ನಿಮಗೂ ಹಾಗೂ ನಿಮ್ಮ ಕುಟುಂಬದವರಿಗೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು. 


ಶಿಲ್ಪಾ ಚವ್ಹಾಣ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, July 25, 2025

ದೋಷರಹಿತ-ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಕ್ರಮ -ಅಧ್ಯಕ್ಷ ಸೈಯ್ಯದ ಅಜೀಮಪೀರ ಎಸ್.ಖಾದ್ರಿ


 

ವಿಜಯಪುರ  : ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರ ಮಾರ್ಗದರ್ಶನದಲ್ಲಿ ಈಗಾಗಲೇ ಇರುವ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಂಡು ಇರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸಿ ದೋಷರಹಿತ, ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷರಾದ ಮಾಜಿ ಶಾಸಕ ಸೈಯ್ಯದ ಅಜೀಮಪೀರ ಎಸ್.ಖಾದಿ ಅವರು ಹೇಳಿದರು.

 ನಗರದ ಬಿಡಿಎ ಕಚೇರಿಯ ಹತ್ತಿರವಿರುವ ಹೆಸ್ಕಾಂ ಅಧೀಕ್ಷಕ ಅಭಿಯಂತರರ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಸ್ಕಾಂ ವ್ಯಾಪ್ತಿಯ 7 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಹೆಸ್ಕಾಂ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.

 ಕಳೆದ 2023ನೇ ಸಾಲಿನವರೆಗೆ 10 ಸಾವಿರ ರೂ. ಹಣ ತುಂಬಿ ಆರ್.ಆರ್.ನಂಬರ್ ಪಡೆದ 15200 ರೈತರಿಗೆ ಪಂಪಸೆಟ್‌ಗಳಿಗೆ ಸಂಪರ್ಕ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದ್ದು, 50 ರೂ. ಹಣ ತುಂಬಿ ಆರ್.ಆರ್.ನಂಬರ್ ಪಡೆದ 23 ಸಾವಿರ ರೈತರಿಗೆ ಐಪಿ ಸೆಟ್ ಕಲ್ಪಿಸುವ ಟೆಂಡರ್ ಪ್ರಗತಿಯಲ್ಲಿದೆ. ಗೃಹ ಜ್ಯೋತಿ ಸೇರಿದಂತೆ ರೈತರು, ಸಾರ್ವಜನಿಕರಿಗೆ ಸಮರ್ಪಕವಾಗಿ ವಿದ್ಯುತ್ ಒದಗಿಸಲಾಗುವುದು ಎಂದು ತಿಳಿಸಿದ ಅವರು, ರೈತರ ಬೇಡಿಕೆಯಂತೆ ಗ್ರಾಮೀಣ ಭಾಗದಲ್ಲಿ ಹಗಲು ವೇಳೆಯಲ್ಲಿ 7 ಗಂಟೆ ನಿರಂತರ ತ್ರಿಫೇಸ್ ವಿದ್ಯುತ್ ಪೂರೈಕೆ ಕಾರ್ಯಕ್ಕೆ ಈಗಾಗಲೇ ರಾಜ್ಯದ ದೊಡ್ಡಬಳ್ಳಾಪುರ ಹಾಗೂ ಗದಗ ಜಿಲ್ಲೆಯ ಮೂಸಿಗೆರಿಯಲ್ಲಿ ಜಿಲ್ಲೆಯಲ್ಲಿ ಕುಸುಮಸಿಯಡಿಯಲ್ಲಿ ಚಾಲನೆ ನೀಡಲಿದ್ದು, ಶೀಘ್ರದಲ್ಲೇ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಸಹ ಸೋಲಾರದಿಂದ ಉತ್ಪಾದಿಸಲಾದ ವಿದ್ಯುತ್ ಪಡೆದುಕೊಂಡು ಹಗಲು ವೇಳೆಯಲ್ಲಿ 7 ಗಂಟೆ ವಿದ್ಯುತ್ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು. 

ವಿಜಯಪುರಗೆ ಭೂಗರ್ಭ ಕೇಬಲ್ ಅಳವಡಿಕೆ ಮಂಜೂರಾತಿ : ವಿಜಯಪುರ ನಗರದಲ್ಲಿ ಭೂಗರ್ಭ (ಅಂಡರ್‌ಗ್ರೌAಡ್ ಕೇಬಲ್ ಅಳವಡಿಕೆ) ಕೇಬಲ್ ಅಳವಡಿಕೆಗೆ ಇಂಧನ ಇಲಾಖೆಯಿಂದ ಮಂಜೂರಾತಿ ದೊರೆತಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು. ಕಳೆದ 20 ರಿಂದ 30 ವರ್ಷ ಹಳೆಯದಾದ ಅಪಾಯಕಾರಿಯಾದ ವಿದ್ಯುತ್ ಕಂಬಗ್‌ಗಳಿAದ ಯಾವುದೇ ಅಪಘಾತಗಳು ಸಂಭವಿಸದAತೆ ನೋಡಿಕೊಳ್ಳಲು ಈಗಾಗಲೇ ಇಂತಹ ಪೋಲ್ಸ್ಗಳನ್ನು ಗುರುತಿಸಿ ತೆರವುಗೊಳಿಸಿ ಬದಲಿ ಕಂಬಗಳÀ ಅವಳಡಿಕೆ ಹಾಗೂ ಅಪಾಯಕಾರಿಯಾದ ವಿದ್ಯುತ್ ಟ್ರಾನ್ಸ್ಫಾರ್ಮರ್‌ಗಳಿದ್ದಲ್ಲಿ ಇದನ್ನು ಶಿಫ್ಟ್ ಮಾಡಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಹೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದಲ್ಲಿ ತಕ್ಷಣವೇ ಹೆಸ್ಕಾಂ ಅಧಿಕಾರಿಗಳು ಸ್ಪಂದಿಸಿ ಅಗತ್ಯ ಕ್ರಮ ವಹಿಸಲಿದ್ದಾರೆ ಎಂದು ಅವರು ಹೇಳಿದರು. 

 ಸ್ಮಾರ್ಟ್ ಮೀಟರ್ ಅಳವಡಿಕೆಗೆ ಚೆಸ್ಕಾಂ ಹಾಗೂ ಬೆೆಸ್ಕಾಂನಲ್ಲಿ ಈಗಾಗಲೇ ಚಾಲನೆ ನೀಡಲಾಗಿದ್ದು, ಈ ಭಾಗದಲ್ಲಿ ಸ್ಮಾರ್ಟ್ ಮಿಟರ್ ಅಳವಡಿಸುವ ಪ್ರಸ್ತಾವನೆ ಇದ್ದು, ಈ ಕುರಿತು ಸರ್ಕಾರದ ಮಟ್ಟದಲ್ಲಿ ಕ್ರಮ ವಹಿಸಲಾಗುವುದು. ಹೆಸ್ಕಾಂ ವ್ಯಾಪ್ತಿಯ 7 ಜಿಲ್ಲೆಗಳಲ್ಲಿ 350 ಲೈನ್‌ಮನ್ ನೇಮಕಾತಿ ಪ್ರಕ್ರಿಯೆಯಲ್ಲಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು. ಮೆರಿಟ್ ಹಾಗೂ ಕೌನ್ಸಿಲಿಂಗ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿ, ನೇಮಕಾತಿಯಾದವರಿಗೆ ಅಗತ್ಯವಿರುವ ಕಡೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದರು. 

 ಪತ್ರಿಕಾಗೋಷ್ಠಿಯಲ್ಲಿ ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ಧಪ್ಪ ಬಿಂಜಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಕ್ಕಳ ಆರೋಗ್ಯ ಕಡೆ ಹೆಚ್ಚಿನ ನಿಗಾ ವಹಿಸಿ - ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ


 ವಿಜಯಪುರ  : ಯುವಕರಲ್ಲಿ ಹೃದಯ ಸಂಬAಧಿ ಕಾಯಿಲೆಗಳು ಹೆಚ್ಚುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಮಕ್ಕಳ ಆರೋಗ್ಯ ಕಡೆ ಹೆಚ್ಚು ನಿಗಾ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣಗೌಡ ಹೇಳಿದರು.

 ಇಂದು ನಗರದ ಅಲ್ಪ ಸಂಖ್ಯಾತರ ವಸತಿ ಶಾಲೇಜು, ಎಸ್.ಎಸ್. ಪಿ.ಯು ಕಾಲೇಜು ಹಾಗೂ ಸೇಂಟ್ ಜೊಸೆಪ್ ಶಾಲೆಗಳಿಗೆ ಅನಿರೀಕ್ಷವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಠಕ್ಕೆ ಹತ್ತಿರ ವಿರುವ ಅಲ್ಪ ಸಂಖ್ಯಾತರ ವಸತಿ ಕಾಲೇಜಿಗೆ ಭೇಟಿ ನೀಡಿ ಆವರಣದಲ್ಲಿರುವ ಹೆಣ್ಣು ಮಕ್ಕಳ ವಾಸಿಸುವ ಕೊಠಡಿಯಲ್ಲಿ ಅವಶ್ಯಕ್ಕಿಂತ ಹೆಚ್ಚು ಮಕ್ಕಳ ವಾಸಿಸುತ್ತಿರುವುದನ್ನು ಕಂಡು ಹೆಚ್ಚುವರಿ ಮಕ್ಕಳಿಗೆ ಪರ್ಯಾಯ ವ್ಯವಸ್ಥ ಕಲ್ಪಿಸಬೇಕು, ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ಉತ್ತಮ ಆಹಾರ ಹಾಗೂ ಸುವ್ಯವಸ್ಥಿತ ವಸತಿ ಕಲ್ಪಿಸುವಂತೆ ಹಾಗೂ ಸ್ವಚ್ಚತೆಗೆ ಹೆಚ್ಚು ಗಮನ ಹರಿಸಬೇಕು ಎಂದು ಅವರು ಹೇಳಿದರು. 

 ಯುವಕರಲ್ಲಿ ಹೆಚ್ಚು ಹೃದಯಕ್ಕೆ ಸಂಬAಧಿತ ಕಾಯಿಲೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಶಿಕ್ಷಣದೊಂದಿಗೆ ಯೋಗ, ಪಿಜಿಕಲ್ ಎಜುಕೇಶನ್ ಮೇಲಿಂದ ಮೇಲೆ ನೀಡಬೇಕು, ಪ್ರತಿ ವಾರ ಮಕ್ಕಳ ಆರೋಗ್ಯ ತಪಾಸನೆ ಕೈಗೊಳ್ಳಬೇಕು, ಮಕ್ಕಳಿಗೆ ಕನ್ನಡ ಬಾಷೆಯೊಂದಿಗೆ ಇಂಗ್ಲೀಷ ಬಾಷೆಯನ್ನು ಕಲಿಸಿದಲ್ಲಿ ಮುಂದಿನ ದಿನಗಳಲ್ಲಿ ಸ್ಪರ್ದಾತ್ಮಕವಾಗಿ ಪರೀಕ್ಷೆಗಳನ್ನು ಬರೆಯಲು ಹೆಚ್ಚು ಅನುಕೂಲವಾಗಲಿದೆ. ವಸತಿ ನಿಲಯ, ಶಾಲಾ ಕಾಲೇಜುಗಳಲ್ಲಿ ಚೈಲ್ಡ್ ಪ್ರೊಟಕ್ಷನ್ ಪಾಲಸಿ ಕಾಯಿದೆ 2016 ಕುರಿತು ಜಾಗೃತಿ ಮೂಡಿಸಬೇಕು. ಮಕ್ಕಳ ಸಹಾಯವಾಣಿ, ಸಲಹಾ ಪೆಟ್ಟಿಗೆ ಕಡ್ಡಾಯ ಅಳವಡಿಸಿರಬೇಕು ಮಕ್ಕಳ ಸುರಕ್ಷತೆ ಕುರಿತು ಸಮಿತಿಗಳನ್ನು ರಚಿಸಿರಬೇಕು, ಮೇಲಿಂದ ಮೇಲೆ ಪಾಲಕರ ಸಭೆಗಳನ್ನು ಕರೆದು ಪಾಲಕರ ಹಾಗೂ ಮಕ್ಕಳ ಅಭಿಪ್ರಾಯ ತಿಳಿಯಬೇಕು. 500 ಶಾಲಾ ಮಕ್ಕಳಿರುವಲ್ಲಿ ಓರ್ವ ಕೌನ್ಸಿಲರಗಳನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಅದರಂತೆ ನಗರದ ಎಸ್.ಎಸ್. ಪಿ.ಯು ಕಾಲೇಜು ಹಾಗೂ ಸೇಂಟ್ ಜೊಸೆಪ್ ಶಾಲೆಗಳಿಗೆ ಪರಿಶೀಲನೆ ನಡೆಸಿದ ಅವರು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಯಾವುದೇ ತರಹದ ತೊಂದರೆಗಳಿದ್ದಲ್ಲಿ ಪತ್ರ ಮುಖಾಂತರ ತಿಳಿಸಿದಲ್ಲಿ ಆಯೋಗವು ಈ ಕುರಿತು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು. 

 ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ ಚವ್ಹಾಣ, ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿಗಳಾದ ಆರ್.ವಿ. ಹೊಸುರ, ಎಸ್.ಎಸ್ ಕಾಲೇಜಿನ ಪ್ರಾಚಾರ್ಯರಾದ ಡಾ. ಡಿ.ಬಿ ಅಕಮಂಚಿ, ಸೇಂಟ್ ಜೊಸೆಪ್ ಕಾಲೇಜಿನ ಪ್ರಾಚಾರ್ಯರಾದ ಆನ್ವಿಸಾ ಬೋಸ್ಕೋ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, July 24, 2025

ಜು.28 ಕ್ಕೆ ಹಿರಿಯ ಹೋರಾಟಗಾರ ಕಾಂ. ಭೀಮಶಿ ಕಲಾದಗಿ ಮೂರ್ತಿ ಪ್ರತಿಷ್ಠಾಪನೆ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ರೈತ ಮುಖಂಡ, ಹೋರಾಟಗಾರ ಕಾಂ. ದಿ.ಭೀಮಶಿ ಕಲಾದಗಿ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ನೆನಪು ಕಾರ್ಯಕ್ರಮ ಜುಲೈ 28 ರಂದು ಬೆಳಿಗ್ಗೆ 11ಕ್ಕೆ ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದ ತೋಟದ ವಸ್ತಿಯಲ್ಲಿ ನಡೆಯಲಿದೆ. ಸಚಿವ ಶಿವಾನಂದ ಪಾಟೀಲ ಅವರು ಕಲಾದಗಿ ಅವರ ಪುತ್ಥಳಿಯನ್ನು ಅನಾವರಣ ಮಾಡಲಿದ್ದಾರೆ. ಕಾರ್ಮಿಕ ಮುಖಂಡ ವಿ.ಜಿ.ಕೆ.ನಾಯರ್,  ಹಿರಿಯ ಹೋರಾಟಗಾರರಾದ ಅಣ್ಣಾರಾಯ ಈಳಗೇರ, ವಕೀಲ ಶ್ರೀಧರ ಕುಲಕರ್ಣಿ, ರೈತ ಮುಖಂಡ ಪಂಚಪ್ಪ ಕಲಬುರ್ಗಿ, ಮಲ್ಲಿಕಾರ್ಜುನ ಯಂಡಿಗೇರಿ, ರಿಯಾಜ್ ಫಾರೂಕಿ, ಡಿ.ಜಿ.ಬಿರಾದಾರ, ಸೋಮನಾಥ ಕಳ್ಳಿಮನಿ,  ಮುಖಂಡ ಬಿ.ಡಿ.ಪಾಟೀಲ ಸೇರಿದಂತೆ ಅಪಾರ ಅಭಿಮಾನಿಗಳು ಸೇರಿದಂತೆ ಮತ್ತಿತರರು ಅಪಾಲ್ಗೊಳ್ಳುವರು ಎಂದು ಭೀಮಶಿ ಅವರ ಸುಪುತ್ರ ಸುರೇಶ ಕಲಾದಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, July 23, 2025

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಅಸಂಘಟಿತ ಕಾರ್ಮಿಕರ ಜೀವನ ಮಟ್ಟ ಸುಧಾರಣೆಗೆ ಕ್ರಮ : ಸಚಿವ ಸಂತೋಷ ಲಾಡ್

                                    

 ವಿಜಯಪುರ : ವಿವಿಧ ಸಣ್ಣ ಸಣ್ಣ ವೃತ್ತಿ ಕೈಗೊಂಡು, ವೃತ್ತಿಯನ್ನೇ ಅವಲಂಬಿಸಿ ಶ್ರಮಿಜೀವಿಯಾಗಿ ತಮ್ಮ ಜೀವನ ನಿರ್ವಹಿಸುತ್ತಿರುವ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಜೀವನ ಮಟ್ಟ ಸುಧಾರಣೆಗೆ ಸರ್ಕಾರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಹೇಳಿದರು. 

 ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಬುಧವಾರ ಆಯೋಜಿಸಿದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ವಿತರಿಸಿ ಅವರು ಮಾತನಾಡಿದರು. 

 ರಾಜ್ಯದಾದ್ಯಂತ ವಿವಿಧ ವೃತ್ತಿಗಳಲ್ಲಿ ತೊಡಗಿರುವ 91 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದೆ. ಅಸಂಘಟಿತ ವಲಯದ ಕಾರ್ಮಿಕರು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅಷ್ಟೇನೂ ಸಬಲರಾಗಿರುವುದಿಲ್ಲ. ಸಂಘಟಿತ ಕಾರ್ಮಿಕರಿಗೆ ದೊರಕುವ ಕಾನೂನಾತ್ಮಕ ಸೌಲಭ್ಯಗಳು ಅಸಂಘಟಿತ ಕಾರ್ಮಿಕರಿಗೂ ದೊರೆತು ಅವರ ಜೀವನಮಟ್ಟ ಸುಧಾರಣೆಗೊಳ್ಳಲಿ ಎಂದು ಸರ್ಕಾರ ಸದುದ್ದೇಶ ಹೊಂದಿ, ವಿವಿಧ ಯೋಜನೆಗಳಡಿ ಈ ಕಾರ್ಮಿಕರನ್ನು ಒಳಪಡಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದರು. 

 ಅಸಂಘಟಿತ ವಲಯದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬAಧಿಸಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಸೌಲಭ್ಯ ಒದಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಮೋಟಾರ ಸಾರಿಗೆ ಮತ್ತು ಇತರೆ ಸಂಬAಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ದಿ ಅಧಿನಿಯಮ 2024ನ್ನು ಜಾರಿಗೆ ತಂದಿದ್ದು, ಇದಕ್ಕನುಗುಣವಾಗಿ ನಿಯಮಾವಳಿಗಳನ್ನು ರೂಪಿಸಿ ಮಂಡಳಿ ಮೂಲಕ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ.ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ, ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ, ಕರ್ನಾಟಕ ರಾಜ್ಯ ದಿನ ಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬAಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ದಿ ಮಂಡಳಿ, ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024, ಕರ್ನಾಟಕ ಪ್ಲಾಟ್‌ಫಾರ್ಮ ಆಧಾರಿತ ಗಿಗ್ ಕಾರ್ಮಿಕರ ಅಧಿನಿಮ-2025, ಕಾರ್ಮಿಕರಿಗೆ ಸುರಕ್ಷತೆ ಒದಗಿಸುವ ಕರ್ನಾಟಕ ಕಡ್ಡಾಯ ಉಪಧನ ವಿಮಾ ನಿಯಮಗಳು-2024 ಸೇರಿದಂತೆ ಮಂಡಳಿ ವತಿಯಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು. 

 ಅಸಂಘಟಿತ ವಲಯದ ಕಾರ್ಮಿಕರಿಗೆ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 91 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು, ಸುಮಾರು 30 ರಿಂದ 40 ಲಕ್ಷ ಕಾರ್ಮಿಕರು ಒಳಗೊಂಡಿದ್ದು, ಈ ಕಾರ್ಮಿಕರನ್ನು ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ. ಸರ್ಕಾರದಿಂದ ಜಾರಿಗೊಂಡಿರುವ ಸೌಲಭ್ಯಗಳು ಕಾರ್ಮಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ಒದಗಿಸಲಾಗುತ್ತಿದ್ದು, ಈವರೆಗೆ ರಾಜ್ಯದಲ್ಲಿ 25,45,607 ಕಾರ್ಮಿಕರು ನೊಂದಣಿಯಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ 102971 ನೊಂದಾಯಿಸಿಕೊAಡ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರು ಸ್ಮಾರ್ಟ್ ಕಾರ್ಡ್ ಪಡೆದುಕೊಂಡು ಸರ್ಕಾರದ ಯೋಜನೆಗಳ ಲಾಭ ಪಡೆದು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು. 

 ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕ್ಕಿಂಗ್ ಗುಮಾಸ್ತ್, ಸಮಯ ಪಾಲಕರು, ಕಾವಲುಗಾರ ಹಾಗೂ ಪರಿಚಾರಕರು, ಮೋಟಾರ್ ಗ್ಯಾರೇಜ್‌ಗಳಲ್ಲಿ ಟೈರ್ ಜೋಡಿಸುವ ಮತ್ತು ಬೇರ್ಪಡಿಸುವ ಘಟಕಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ಸೇರಿದಂತೆ ವಿವಿಧ ಕಾರ್ಮಿಕರನ್ನು ಸಾಮಾಜಿಕ ಭದ್ರತಾ ಸೌಲಭ್ಯದಡಿ ಒಳಪಡಿಸಲಾಗಿದೆ ಎಂದು ಅವರು ಹೇಳಿದರು. 

 ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೀದರ ಮಾದರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸೊಸಾಯಿಟಿ ರಚನೆ ಮಾಡಿ ಸೊಸಾಯಿಟಿ ಮೂಲಕವೇ ವೇತನ ಪಾವತಿಸುವ ವ್ಯವಸ್ಥೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ವಿವಿಧ ಖಾಸಗಿ ವಲಯದ ಕೈಗಾರಿಕೆ, ಕಾರ್ಖಾನೆಗಳಲ್ಲಿ ಹೆಚ್ಚೆಚ್ಚು ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆಶಾ ದೀಪ ಯೋಜನೆಯನ್ನು ಜಾರಿಗೊಳಿಸಿ ಮಾಲೀಕರು ಹಾಗೂ ಉದ್ಯೋಗದಾತರನ್ನು ಉತ್ತೇಜಿಸಲಾಗುತ್ತಿದೆ ಎಂದು ಅವರು ಹೇಳಿದರು.

 ಸರ್ಕಾರ ಜಾರಿಗೊಳಿಸಿರುವ ಪಂಚ್ ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಹಸನಗೊಳಿಸಿದೆ. ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಪ್ರಯಾಣ ಬೆಳೆಸಲಾಗಿದೆ. ಸರ್ಕಾರದಿಂದ ಪಂಚ್ ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ 60 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಎಲ್ಲ ವರ್ಗದ ಜನರನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಡಿ ಸೌಲಭ್ಯಗಳನ್ನು ದೊರಕಿಸಲಾಗುತ್ತಿದೆ ಎಂದು ಅವರು ಹೇಳಿದರು. 

 ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಅವರು ಮಾತನಾಡಿ, ಅಸಂಘಟಿತ ಕಾರ್ಮಿಕರ ಹಿತದೃಷ್ಟಿಯಿಂದ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಸ್ಮಾರ್ಟ್ ಕಾರ್ಡ್ ವಿತರಿಸುವ ಮೂಲಕ ದುರ್ಬಲ ವರ್ಗದವರನ್ನು ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕಾರ್ಮಿಕರು ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ತಮ್ಮ ಬದುಕನ್ನು ಸುಭದ್ರಗೊಳಿಸಿಕೊಳ್ಳುವಂತೆ ಅವರು ಕರೆ ನೀಡಿದರು.

 ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ 15 ಜನ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಯಿತು. ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರದಡಿ ಇಬ್ಬರಿಗೆ ಪರಿಹಾರ ಚೆಕ್, ಅಪಘಾತದಿಂದ ಮರಣ ಹೊಂದಿದ ಇಬ್ಬರೂ ಕಾರ್ಮಿಕರ ಮಕ್ಕಳಿಗೆ ತಲಾ 10 ಸಾವಿರ ರೂ. ಚೆಕ್ ಮತ್ತು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಮರಣ ಹೊಂದಿದ ಕಾರ್ಮಿಕರ ಅವಲಂಬಿತರಿಗೆ 10 ಸಾವಿರ ರೂ.ಗಳ ಚೆಕ್‌ನ್ನು ವಿತರಿಸಲಾಯಿತು. 

 ಕಾರ್ಯಕ್ರಮದಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಗಳಾದ ಡಾ.ಎಸ್.ಬಿ.ರವಿಕುಮಾರ, ಕಾರ್ಮಿಕ ಇಲಾಖೆ ಉಪ ಕಾರ್ಮಿಕ ಆಯುಕ್ತರಾದ ಡಿ.ಜಿ.ನಾಗೇಶ, ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ, ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಕಾರ್ಮಿಕ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ ಕೊಪ್ಪಳ ಗವಿಸಿದ್ದೇಶ್ವರ ಮಠಕ್ಕೆ 101 ಕ್ವಿಂಟಲ್ ಅಕ್ಕಿ, 5001 ವಿಭೂತಿ

ವಿಜಯಪುರ: ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಮಠದ ದಾಸೋಹಕ್ಕಾಗಿ 101 ಕ್ವಿಂಟಲ್ ಅಕ್ಕಿ ಹಾಗೂ 5001 ವಿಭೂತಿಗಳನ್ನು ಬುಧವಾರ ನೀಡಲಾಯಿತು.

ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರ ನೇತೃತ್ವದಲ್ಲಿ ಶ್ರೀಮಠಕ್ಕೆ ಭೇಟಿ ನೀಡಿ, ಅಭಿನವ ಗವಿಸಿದ್ದೇಶ್ವರ ಶ್ರೀಗಳ ದರ್ಶನಾಶೀರ್ವಾದ ಪಡೆದುಕೊಂಡು, 101 ಕ್ವಿಂಟಲ್ ಅಕ್ಕಿ ಹಾಗೂ ಸಿದ್ದೇಶ್ವರ ಸಂಸ್ಥೆಯ ರಾಮನಗೌಡ ಬಾ.ಪಾಟೀಲ ಯತ್ನಾಳ ಗೋರಕ್ಷಾ ಕೇಂದ್ರದಲ್ಲಿ ಸಿದ್ದಪಡಿಸಲಾದ 5001 ವಿಭೂತಿ, 5 ಕೆ.ಜಿ ಕುಂಕುಮ, 5 ಕೆ.ಜಿ ತುಪ್ಪ ನೀಡಲಾಯಿತು.

ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಹಿರೇಮಠ, ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ನಿರ್ದೇಶಕರಾದ ಬಸವರಾಜ ಸೂಗೂರ, ಸದಾಶಿವ ಗುಡ್ಡೋಡಗಿ, ಎನ್.ಎಂ.ಗೊಲಾಯಿ, ಮಲ್ಲಿಕಾರ್ಜುನ ಹಕ್ಕಾಪಕ್ಕಿ, ಮಲಕಪ್ಪ ಗಾಣಿಗೇರ, ಸಾಯಿಬಣ್ಣ ಭೋವಿ, ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ ನಿರ್ದೇಶಕರಾದ ಪ್ರಭುಗೌಡ ದೇಸಾಯಿ, ಕನಕಗೌಡರ ಆಡಳಿತ ಮಂಡಳಿ ಸದಸ್ಯರು, ಗಣ್ಯರು, ಅಭಿಮಾನಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿಗೆ ಸೇರಿಸಲು ಜಯ ಕರ್ನಾಟಕ ರಕ್ಷಣಾ ಸೇನೆ ಆಗ್ರಹ



ವಿಜಯಪುರ: ಜಿಲ್ಲೆಯನ್ನು 371ಜೆ ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಪದಾಧಿಕಾರಿಗಳು ವಿಜಯಪುರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೆನೆಯ ಜಿಲ್ಲಾಧ್ಯಕ್ಷ ಕೃಷ್ಣಾ ಭೋಸಲೆ ಮಾತನಾಡಿ, ವಿಜಯಪುರ ಜಿಲ್ಲೆಗೆ ಆದ ಐತಿಹಾಸಿಕ ಅನ್ಯಾಯ ಸರಿಪಡಿಸಲು 371ಜೆ ಮೀಸಲಾತಿ ಒದಗಿಸುವುದಾಗಿ ಪಕ್ಷದವರು ಹಾಗೂ ಪಕ್ಷೇತರ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ಘೋಷಿಸಿದ್ದರು. ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿಗೆ ಸೇರಿಸಬೇಕು. ವಿಜಯಪುರ ಜಿಲ್ಲೆಯು ಅತಿ ಹಿಂದುಳಿದ ಪ್ರದೇಶವಾಗಿದೆ. ಮೀಸಲಾತಿ ವಿರೋಧಿಸಿದ ಪಕ್ಷ ಮತ್ತು ಮುಖಂಡರು ಯುವ ಜನರ ಮತ ಪಡೆಯುವಗೋಸ್ಕರ 371 ಜೆ ಕಲ್ಯಾಣ ಕರ್ನಾಟಕ ಮೀಸಲಾತಿಯನ್ನು ಒದಗಿಸುವುದಾಗಿ ಭರವಸೆ ನೀಡಿದ್ದರು. ಚುನಾವಣೆ ಮುಗಿದ ನಂತರ ಯಾವೊಬ್ಬ ಜನಪ್ರತಿನಿಧಿಗಳು ವಿಜಯಪುರ ಜಿಲ್ಲೆಗೆ ನ್ಯಾಯಯುತವಾಗಿ ಸಿಗಬೇಕಾಗಿರುವ ಶೈಕ್ಷಣಿಕ ಹಾಗೂ ಉದ್ಯೋಗದ ಮೀಸಲಾತಿ ಒದಗಿಸುವ ಪಯತ್ನ ಮಾಡದೇ ಇರವುದು ದುರಂತದ ಸಂಗತಿ. ಪದೇ ಪದೇ ಸುಳ್ಳು ಭರವಸೆಗಳನ್ನು ರಾಜಕಾರಣಿಗಳು ನೀಡಿ ಜನರಿಗೆ ದಿಕ್ಕು ತಪ್ಪಿಸುತ್ತಿದ್ದಾರೆ. ಇಂದಿಗೆ ಮೀಸಲಾತಿ ಜಾರಿಯಾಗಿ 10 ವರ್ಷ ಗತಿಸಿವೆ. ಜಿಲ್ಲೆಯು ಅಭಿವೃದ್ಧಿಯಿಂದ ಹತ್ತು ವರ್ಷ ವಂಚಿತವಾಯಿತು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆಯ ರಾಜ್ಯ ಉಪಾಧ್ಯಕ್ಷರಾದ ಮಂಜುಳಾ ವಾಲಿ ಮಾತನಾಡಿ, ವಿಜಯಪುರ ಜಿಲ್ಲೆಯು 371 ಜೆ ವಿಶೇಷ ಸ್ಥಾನ ಮಾನ ಪಡೆಯಲು ಎಲ್ಲ ಅರ್ಹತೆ ಹೊಂದಿದೆ. ಜೊತೆಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಹಾಗೂ ಕಲಬುರಗಿ ಉಚ್ಛ ನ್ಯಾಯಾಲಯ ಪೀಠದ ಆಧೀನದಲ್ಲಿ ಜಿಲ್ಲೆಯು ಒಳಪಟ್ಟಿದೆ. ಕೂಡಲೇ ವಿಜಯಪುರ ಜಿಲ್ಲೆಯನ್ನು ಬಿಟ್ಟು ಹೋದ ಪ್ರದೇಶವೆಂದು ಪರಿಗಣಿಸಿ 371ಜೆ ಮೀಸಲಾತಿ ಅಡಿ ಸೇರಿಸಿ ಈ ಭಾಗದ ಪ್ರತಿಯೊಬ್ಬ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಗಳವೆ, ಜಿಲ್ಲಾಧ್ಯಕ್ಷರಾದ ವಾಣೀಶ್ರೀ ಪಟ್ಟಣಶೆಟ್ಟಿ, ಬಸವನ ಬಾಗೇವಾಡಿ ತಾಲೂಕಾಧ್ಯಕ್ಷರಾದ ಸಿದ್ದಮ್ಮ ಹೇರೂರ, ಜಿಲ್ಲಾ ಉಪಾಧ್ಯಕ್ಷರಾದ ಸಮಿತ್ರಾ ಪಟ್ಟಣಶೆಟ್ಟಿ, ಎಸ್ಸಿ ಎಸ್ಟಿ ಘಟಕ ಜಿಲ್ಲಾಧ್ಯಕ್ಷ ಯಮನಪ್ಪ ಬೂದಿಹಾಳ, ಜಿಲ್ಲಾ ಕಾನೂನು ಸಲಹೆಗಾರರಾದ ಉತ್ತಮ ಹೊಸಮನಿ, ವಿಜಯಪುರ ತಾಲೂಕಾಧ್ಯಕ್ಷರಾದ ವಿಠ್ಠಲ ತಳವಾರ, ಜಿಲ್ಲಾ ಮುಖಂಡರಾದ ಸಕಾರಾಮ ಪವಾರ, ಜಿಲ್ಲಾ ಮುಖಂಡರಾದ ರಾಜು ಕೋಟ್ಯಾಳ, ಕೇಧಾರನಾಥ ರಜಪೂತ,ಶಂಕರಗೌಡ ಬಿರಾದಾರ, ಮಹಾದೇವ ಢಗೆ, ರಾಜು ಬಿಸೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, July 22, 2025

ವಿಡಿಸಿಸಿ ಬ್ಯಾಂಕ್ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ವಿಜಯಪುರ : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಗಜಾನನ ಉತ್ಸವ ಮಂಡಳಿಯಿಂದ ಗಣೇಶ ಚತುರ್ಥಿ ಅಂಗವಾಗಿ ಕ್ರೀಡಾಕೂಟ ಆಯೋಜಿಸಲಾಗಿತ್ತು.

ನಗರದ ರೂಪಾದೇವಿ ಶಾಲಾ ಪರಿಸರದ ಬಳಿ ಹಮ್ಮಿಕೊಂಡಿದ್ದ ಕ್ರೀಡಾಕೂಟಕ್ಕೆ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಗುಡದಿನ್ನಿ ಚಾಲನೆ ನೀಡಿದರೆ, ನಿರ್ದೇಶಕರಾದ ಜಿ.ಬಿ. ನಿಡೋಣಿ ಕ್ರಿಕೆಟ್ ಕ್ರೀಡೆಗೆ ಟಾಸ್ ಮಾಡಿದರು.

ನಿರ್ದೇಶಕರಾದ ಹನುಮಂತ್ರಾಯಗೌಡ ಪಾಟೀಲ ಪುಷ್ಪ ಗುಚ್ಚಗಳನ್ನು ನೀಡುವ ಮೂಲಕ ಕ್ರೀಡಾಪಟುಗಳಿಗೆ ಶುಭಕೋರಿದರು.

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಎ.ಢವಳಗಿ ಅವರು ಕ್ರೀಡಾ ಸಾಮಗ್ರಿ ಬಿಡುಗಡೆ ಮಾಡಿದರು.

ಬ್ಯಾಂಕ್ ಅಧಿಕಾರಿಗಳಾದ ಸತೀಶ ಡಿ. ಪಾಟೀಲ, ಪಿ.ವೈ.ಡೆಂಗಿ, ಎಂ.ಜಿ.ಬಿರಾದಾರ, ಎಂ.ಎಚ್.ಹಟ್ಟಿ, ಎಂ.ಎಸ್.ದೇಸಾಯಿ, ಎಸ್.ಬಿ.ಹೊಸಮನಿ, ಬಿ.ಎಸ್.ಪಾಟೀಲ, ಐ.ಎಸ್.ಸಂಖ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಆರ್.ಪಿ. ಪವಾರ ಸ್ವಾಗತಿಸಿದರೆ, ಸಂತೋಷ ಮಾನಕರ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗಣೇಶ ಹಬ್ಬ : ಪರಿಸರ ಸ್ನೇಹಿ ಗಣಪತಿ ವಿಗ್ರಹಗಳ ಪ್ರತಿಷ್ಠಾಪನೆ ಕುರಿತು ಜುಲೈ 25ರಂದು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸಭೆ

 ವಿಜಯಪುರ  : ಜಿಲ್ಲೆಯಲ್ಲಿ ಆಗಸ್ಟ್ ಮಾಹೆಯಲ್ಲಿ ಆಚರಿಸಲಾಗುವ ಗೌರಿ ಗಣೇಶ ಚತುರ್ಥಿ ಉತ್ಸವದಲ್ಲಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಹಾಗೂ ಬಡಾವಣೆಗಳಲ್ಲಿ ಜೇಡಿ-ಇತರೆ ಮಣ್ಣಿನಿಂದ ತಯಾರಿಸಲಾದ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದು ಹಾಗೂ ವಿಗ್ರಹಗಳನ್ನು ಪಾಲಿಕೆಯಿಂದ ನಿರ್ಮಿಸಲಾದ ಕೃತಕ ಹೊಂಡಗಳು, ಸಂಚಾರಿ ಗಣೇಶ ವಿಸರ್ಜನಾ ವಾಹನಗಳಲ್ಲಿ ವಿಸರ್ಜಿಸುವ ಕುರಿತು ದಿನಾಂಕ : 25-07-2025 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಸಭಾಭವನದಲ್ಲಿ ಮಹಾನಗರ ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿದೆ. 

 ಈ ಸಭೆಗೆ ಸಾರ್ವಜನಿಕರು, ಪ್ರತಿನಿಧಿಗಳು, ಗಣೇಶ ಮಹಾಮಂಡಳಿ ಮತ್ತು ಮಂಡಳಗಳ ಅಧ್ಯಕ್ಷರು, ಪದಾಧಿಕಾರಿಗಳು, ಗಣೇಶ ವಿಗ್ರಹ ಮಾರಾಟಗಾರರು ಹಾಗೂ ಸಂಘ-ಸAಸ್ಥೆಗಳು ಭಾಗವಹಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Monday, July 21, 2025

ಮೃತ ಗದಿಗೆಪ್ಪ ಕುಟುಂಬಕ್ಕೆ ಸಚಿವ ಪಾಟೀಲ ಲಕ್ಷ ರೂ. ವಯಕ್ತಿಕ ನೆರವು

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಹಾವೇರಿ : ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಡ್ಡದಮಲ್ಲಾಪುರ ಗ್ರಾಮದಲ್ಲಿ ಗೋಡೆ ಕುಸಿದು ಮೃತಪಟ್ಟಿದ್ದ ರೈತ ಗದಿಗೆಪ್ಪ ಕೊಪ್ಪದ ಕುಟುಂಬಕ್ಕೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ವೈಯಕ್ತಿಕವಾಗಿ 1 ಲಕ್ಷ ರೂ. ಆರ್ಥಿಕ ನೆರವು ವಿತರಿಸಿದರು.

ಸೋಮವಾರ ಹಾವೇರಿ ನಗರದಲ್ಲಿ ಜರುಗಿದ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಮೃತ ಗದಿಗೆಪ್ಪ ಅವರ ಪುತ್ರ ಮೂಕೇಶ ಕೊಪ್ಪದ ಅವರನ್ನು ಕರೆಸಿ 1 ಲಕ್ಷ ರೂ. ನಗದು ಪರಿಹಾರವನ್ನು ಹಸ್ತಾಂತರಿಸಿದರು.

ಇದೇ ವೇಳೆ ಶಾಸಕರಾದ ಬಸವರಾಜ ಶಿವಣ್ಣವರ, ಪ್ರಕಾಶ ಕೋಳಿವಾಡ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ. ಸಿಇಒ  ರುಚಿರಾ ಬಿಂದು, ಎಸ್ಪಿ ಯಶೋಧಾ ವಂಟಗೋಡಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಂಜೀವ ನೀರಲಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ನಿರುದ್ಯೋಗ ನಿವಾರಿಸುವಲ್ಲಿ ಪೆಂಡಾಲ ಮಾಲೀಕರ ಪಾತ್ರ ದೊಡ್ಡದು ; ಸಚಿವ ಶಿವಾನಂದ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಶಾಮೀಯಾನಾ, ಪೆಂಡಾಲ್, ಲೈಟಿಂಗ್, ಡೆಕೋರೇಶನ್ ಮಾಲೀಕರು ಸಮಾಜದಲ್ಲಿ ನಿರುದ್ಯೋಗ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಸರ್ಕಾರದ ಮೇಲೆ ಭಾರ ಕಡಿಮೆ ಆಗಿದೆ ಎಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ನಗರದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಿಂಭಾಗದ ಆಲಕುಂಟೆ ಪ್ರದೇಶದಲ್ಲಿ ಹಮ್ಮಿಕೊಂಡಿರುವ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಸಂಘ ಹಮ್ಮಿಕೊಂಡಿದ್ದ ವಿಜಯಪುರ ಉತ್ಸವದ ವಸ್ತು ಪ್ರದರ್ಶನದಲ್ಲಿ ಅದೃಷ್ಟದ ಬಹುಮಾನ ವಿತರಿಸಿ ಮಾತನಾಡಿದರು.

ದೇಶದಲ್ಲಿರು ಜನಸಂಖ್ಯೆಯಲ್ಲಿ ಸರ್ಕಾರವೇ ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಿಲ್ಲ. ದೇಶದಲ್ಲಿ ಶೇ.93 ಕ್ಕಿಂತ ಅಧಿಕ ಜನರಿಗೆ  ಉದ್ಯೋಗವಿಲ್ಲ. ಆದರೆ  ಭಾರತೀಯ ಕೃಷಿರಂಗ ಶೇ.70 ರಷ್ಟು ಜನರಿಗೆ ಉದ್ಯೋಗ ಕಲ್ಪಿಸಿದೆ. ಉದ್ಯೋಗ ನೀಡಿ ನಿರುದ್ಯೋಗ ಸಮಸ್ಯೆ ನೀಗಿರುವ ರೈತ, ದೇಶದ 140 ಕೋಟಿ ಜನತ ಹಸಿವನ್ನೂ ನೀಗಿದ್ದು, ಭಾರತ ಆಹಾರ ಸ್ವಾವಲಂಬನೆ ಪಡೆಯುವಲ್ಲಿ ಸಹಕಾರಿ ಆಗಿದೆ ಎಂದು ವಿಶ್ಲೇಷಿಸಿದರು.

ಅದೇರೀತಿ ಪೆಂಡಾಲ್, ಶಾಮೀಯಾನಾ ಮಾಲೀಕರು ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ 2 ಲಕ್ಷ ಜನರಿಗೆ ಉದ್ಯೋಗ ನೀಡಿದ್ದಾರೆ. ಇದು ಸರ್ಕಾರದ ಮೇಲೆ ಉದ್ಯೋಗ ನೀಡುವ ಒತ್ತಡ ಕಡಿಮೆ ಮಾಡಿದೆ ಎಂದರು.

ಪೆಂಡಾಲ್ ವ್ಯವಸ್ಥೆಯಿಂದ ಮಳೆ, ಛಳಿ, ಬಿಸಿಲು ಏನೆ ವೈಪರೀತ್ಯಗಳಿದ್ದರೂ ಎಂಥದ್ದೇ ಬೃಹತ್ ಕಾರ್ಡ್ ಇದ್ದರೂ ನಿರಾಳವಾಗಿ ಮಾಡಲು ಸಾಧ್ಯವಾಗಿದೆ. ಈಚೆಗೆ ಹೊಸಪೇಟೆಯಲ್ಲಿ ಜರುಗಿದ ಸರ್ಕಾರದ ಬೃಹತ್ ಕಾರ್ಯಕ್ರಮ ವಿಪರೀತ ಮಳೆಯ ಮಧ್ಯೆಯೂ 6-7 ಲಕ್ಷ ಜನರು ನಿರಾಳವಾಗಿ ಕಾರ್ಯಕ್ರಮ ವೀಕ್ಷಿಸಲು ಸಾಧ್ಯವಾಗಿದ್ದೇ ನಿಮ್ಮ ಪರಿಶ್ರಮದಿಂದ ಎಂದರು.

ಯಾವುದೇ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಬಳಸಿ ಮಾತನಾಡಿದರೆ ಲಕ್ಷ, ಕೋಟಿ ಜನರಿಗೆ ನಮ್ಮ ಮಾತು ಕೇಳುವಂತೆ ಸಾಧ್ವವಾಗಿಸಿದೆ. ಜಗಮಗಿಸುವ ಬೆಳಕು ನೀಡಿ, ಕಾರ್ಯಕ್ರಮದ ವೇದಿಕೆಯನ್ನು ಜನಾಕರ್ಷಣೆ ಮಾಡುವಲ್ಲಿ ನಿಮ್ಮ ಪಾತ್ರ ದೊಡ್ಡದಿದೆ ಎಂದು ಶ್ಲಾಘಿಸಿದರು.

ಆಧುನಿಕತೆಗೆ ತಕ್ಕಂತೆ ಪೆಂಡಾಲ್, ಶಾಮೀಯಾನಾ, ಲೈಟಿಂಗ್, ಮೈಕ್ ಮಾಲೀಕರು ಕೂಡ ತಾಂತ್ರಿಕವಾಗಿ ಬದಲಾವಣೆಗಳನ್ನು ಅಳವಡಿಸಿಕೊಳ್ಳುತ್ತಾ ಬರುತ್ತಿದ್ದೀರಿ. ಇದರಿಂದಾಗಿ ಭವಿಷ್ಯದಲ್ಲಿ ನಿಮ್ಮ ಮೇಲೆ ಇನ್ನೂ ಹೆಚ್ಚಿನ ನಿರೀಕ್ಷೆ ಇದೆ ಎಂದರು.

ಪೆಂಡಾಲ್ ಮಾಲೀಕರು ಸಂಘಟನೆಗಳು ಒಗ್ಗೂಡಿ ಕೆಲಸ ಮಾಡಬೇಕು. ಡಾ.ಅಂಬೇಡ್ಕರ್ ಅವರು ಹೇಳಿದ ಶಿಕ್ಷಣ, ಸಂಘಟನೆ, ಹೋರಾಟ ನಿಮ್ಮ ಮೂಲ ಮಂತ್ರವಾಗಲಿ ಎಂದು ಕಿವಿಮಾತು ಹೇಳಿದರು.

ನೀವು ನಿಮ್ಮ ಸಾಮಗ್ರಿಗಳನ್ನು ದಾಸ್ತಾನು ಮಾಡಿಕೊಳ್ಳಲು ವಿಸ್ತಾರವಾದ ಗೋದಾಮು ಬೇಕಿದೆ. ಇದಕ್ಕಾಗಿ ನಿಮ್ಮ ಸಂಘಟನೆಯಿಂದ ಪತ್ರ ಬರೆದರೆ ಕಡಿಮೆ ದರದಲ್ಲಿ ಬಿಡಿಎ ನಿವೇಶನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಒಂದೊಮ್ಮೆ ನೀವೇ ಜಮೀನು ಖರೀದಿಸಿ, ಕೃಷಿಯೇತರ ಭೂಮಿ ಪರಿವರ್ತನೆಗೆ ಮುಂದಾದರೂ ಅದಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಸಂಘಟನೆಯ ಪ್ರಮುಖರಾದ ಅಪ್ಪಣ್ಣ, ಅಮರೇಶ ಹಿರೇಮಠ, ಶಿವಾನಂದ ಮಾನಕರ, ಪ್ರಕಾಶ,  ಚನ್ನಬಸಪ್ಪ ಗಸ್ತಿ, ಲಕ್ಷ್ಮಣ ದಿಗ್ಗಾವಿ, ಪ್ರಕಾಶ, ಬಷೀರ ಅಹ್ಮದ್ ಬಾಂಗಿ, ದ್ಯಾವಣ್ಣ ಬಜಂತ್ರಿ, ಅಮರಸಿಂಗ್ ರಜಪೂತ, ಎಂ.ಆರ್.ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.




Thursday, July 17, 2025

ಜಿಲ್ಲಾ ಪತ್ರಕರ್ತರ ಪ್ರಶಸ್ತಿಗೆ ವಿನೋದ ಎಂ.ಸಾರವಾಡ ಆಯ್ಕೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡ ಲಾಗುವ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ರಣರಂಗ ದಿನ ಪತ್ರಿಕೆಯ ಸಂಪಾದಕರಾದ ವಿನೋದ ಎಂ.ಸಾರವಾಡ ಆಯ್ಕೆ ಯಾಗಿದ್ದಾರೆ ಎಂದು ಕಾನಿಪ ವಿಜಯಪುರ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ. ಜುಲೈ 19 ಶನಿವಾರ ವಿಜಯಪುರದ ಕಂದಗಲ್ ಹಣಮಂತರಾಯ ರಂಗಮಂದಿ ಕರ್ತರ ವಾರ್ಷಿಕ ಪ್ರಶಸ್ತಿಯನ್ನು ರದಲ್ಲಿ ನಡೆಯಲಿರುವ ಪತ್ರಿಕಾ ವಿನೋದ ಎಂ.ಸಾರವಾಡ ಅವರಿಗೆ ದಿನಾಚರಣೆ ಸಮಾರಂಭದಲ್ಲಿ ಪತ್ರ ನೀಡಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಏಷ್ಯಾನೆಟ್ ಸುವರ್ಣ ನ್ಯೂಸ್ ಕ್ಯಾಮರಾಮೆನ್ ಅಪ್ಪು ಚಿನಗುಂಡಿಗೆ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ..!

 

ವಿಜಯಪುರ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾ‌ಮಟ್ಟದಲ್ಲಿ ನೀಡಲಾಗುವ ಉತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನ ವಿಜಯಪುರ ಏಷ್ಯಾನೆಟ್ ಸುವರ್ಣ ನ್ಯೂಸ್ ಕ್ಯಾಮರಾಮೆನ್ ಅಪ್ಪಾಸಾಹೇಬ್ ಚಿನಗುಂಡಿಗೆ ಅವರಿಗೆ ನೀಡಲಾಗ್ತಿದೆ. ಕಳೆದ 14 ವರ್ಷಗಳಿಂದ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ ಅಪ್ಪಾಸಾಹೇಬ್ ಚಿನಗುಂಡಿಯವರು ಮಾಡಿರುವ ಸ್ಟಿಂಗ್ ಆಫರೇಶನ್ ಗಳು ರಾಜ್ಯಮಟ್ಟದಲ್ಲಿ ಸದ್ದು ಮಾಡಿವೆ‌. ಅದ್ಭುತ ಛಾಯಾಗ್ರಹಣ, ಸೂಕ್ಷ್ಮ ಸಂವೇದನೆಯ ದೃಶ್ಯಗಳನ್ನು ಸೆರೆಹಿಡಿಯುವುದರಲ್ಲಿ ನಿಪುಣರಾಗಿದ್ದಾರೆ. ಕಸ್ತೂರಿ ನ್ಯುಸ್ 24, ಪ್ರಜಾ ಟಿವಿ, ಸಧ್ಯ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಜಿಲ್ಲಾ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಸ್ತೂರಿ ನ್ಯುಸ್ 24 ನಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಹುಬ್ಬಳ್ಳಿಯಲ್ಲಿ ನಡೆದಿದ್ದ ಕಳಸಾ ಬಂಡೂರಿಗಾಗಿ ಚಿತ್ರರಂಗದಿಂದ ನಡೆದ ಹೋರಾಟದ ವೇಳೆ ಉತ್ತಮ ಕವರೇಜ್ ಗಾಗಿ ಸಂಸ್ಥೆಯಿಂದ ಪ್ರಶಂಸೆ ಪಡೆದಿದ್ದರು. ಗದಗ ಜಿಲ್ಲೆಯಲ್ಲಿ ವಿಶೇಷ ಸ್ಟೋರಿಗಳಿಗಾಗಿ ಅದ್ಭತ ದೃಶ್ಯಗಳನ್ನ ಸೆರೆಹಿಡಿದಿದ್ದರು. ಇನ್ನು ಮಹಾರಾಷ್ಟ್ರದ ರೆಡ್‌ಲೈಟ್ ಏರಿಯಾಗಳಲ್ಲಿ ನಡೆಯುತ್ತಿದ್ದ ಕನ್ನಡದ ಹೆಣ್ಣು ಗೋಳಾಟದ ಕುರಿತು ರಹಸ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಮನಕಲಕುವ ಎಕ್ಸಕ್ಲೂಜಿವ್ ದೃಶ್ಯಗಳನ್ನ ಸೆರೆಹಿಡಿದು ಭೇಷ್ ಎನಿಸಿಕೊಡಿದ್ದರು. ಇನ್ನೂ ಕಳೆದ 4 ವರ್ಷಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ನಲ್ಲಿ‌ ವಿಜಯಪುರ ಜಿಲ್ಲಾ ಕ್ಯಾಮರಾಮೆನ್ ಆಗಿ ಸೇವೆ ಸಲ್ಲಿಸ್ತಿರೋ ಅಪ್ಪಾಸಾಹೇಬ್ ಅವರು ಅನೇಕ ವಿಶೇಷ ತನಿಖಾ ವರದಿಗಳಲ್ಲಿ ತಮ್ಮ ಕ್ಯಾಮರಾ ಕೈಚಳಕ ತೋರಿಸಿರೋದು ಗಮನಾರ್ಹವಾಗಿದೆ. ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಇವರ ಈ ಸೇವೆಯನ್ನ ಪರಿಗಣಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ ನೀಡಿ ಗೌರವಿಸಲಾಗ್ತಿದೆ. ದಿನಾಂಕ 19 ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುತ್ತಿರುವ ಪತ್ರಿಕಾದಿನಾಚರಣೆಯಲ್ಲಿ ಸಚಿವ ಎಂ ಬಿ ಪಾಟೀಲ್, ಸಚಿವ ಶಿವಾನಂದ ಪಾಟೀಲ್, ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವ್ಹಿ ಪ್ರಭಾಕರ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಧ್ಯಕ್ಷರಾದ ಶಿವಾನಂದ ತಗಡೂರ್ ಅವರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

18-07-2025 EE DIVASA KANNADA DAILY NEWS PAPER

ಜು. 19 ರಂದು ಪತ್ರಿಕಾ ದಿನಾಚರಣೆ : ಪ್ರಕಾಶ ಬೆಣ್ಣೂರ

ವಿಜಯಪುರ: ಜಿಲ್ಲೆಯ ಹಿರಿಯ ಪತ್ರಕರ್ತರರಿಗೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪತ್ರಿಕಾ ದಿನಾಚರಣೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭವನ್ನು ಜು.19 ರಂದು ಶನಿವಾರ ಬೆಳಿಗ್ಗೆ 10 ಕೈ ವಿಜಯಪುರ ನಗರದ ಕಂದಗಲ ಹನುಮಂತರಾಯ ರಂಗಮAದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಬೆಣ್ಣೂರ ಹೇಳಿದರು.

ನಗರದಲ್ಲಿ ಜಿಲ್ಲಾಪಂಚಾಯತ ರಸ್ತೆಯ ಪತ್ರಿಕಾ ಭವನದಲ್ಲಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.

ಪತ್ರಿಕಾ ದಿನಾಚರಣೆ ಮತ್ತು ಜಿಲ್ಲೆಯ ಹಿರಿಯ ಪತ್ರಕರ್ತರರಿಗೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭವನ್ನು ಜು.19 ರಂದು ಶನಿವಾರ ಬೆಳಿಗ್ಗೆ 10 ಕೈ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಪತ್ರಕರ್ತರು ಹಾಗೂ ಸಂಘದ ಎಲ್ಲ ಸರ್ವ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ. ಹಾವೇರಿ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸಂಸದ ರಮೇಶ ಜಿಗಜಿಣಗಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ್), ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವ್ಹಿ. ಪ್ರಭಾಕರ, ಕೆ ಯು ಡಬ್ಲ್ಯೂ ಜೆ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ ಲೋಕೇಶ, ಉಪಾಧ್ಯಕ್ಷ ಪುಂಡಲೀಕ ಬಾಳೊಜಿ, ಭವಾನಿ ಸಿಂಗ ಠಾಕೂರ ಭಾಗವಹಿಸಲಿದ್ದಾರೆ.

ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪುರಸ್ಕೃತರು :

ಸರೋಜಿನಿ ಕುಲಕರ್ಣಿ (ಕನ್ನಡ ಕೋಗಿಲೆ), ಪರಶುರಾಮ ಶಿವಶರಣ (ಹೊಸದಿಗಂತ), ನವೀದ ಅಂಜುಮ್ ಮಮದಾಪುರ, (ಸಂಯುಕ್ತ ಕರ್ನಾಟಕ), ವಿನೋದ್ ಸಾರವಾಡ (ರಣರಂಗ), ಶರಣಬಸಪ್ಪ ಮಸಳಿ (ಕರುನಾಡು ಪ್ರಭ), ಅಪ್ಪು ಚಿನಗುಂಡಿ (ಸುವರ್ಣ ಟಿವಿ ವಾಹಿನಿಯ ಕ್ಯಾಮೆರಾ ಮ್ಯಾನ), ಗುರಪ್ಪ ಲೋಕುರಿ (ವಿಜಯವಾಣಿ), ಸಿಂದಗಿಯ ಮಲ್ಲಿಕಾರ್ಜುನ ಅಲ್ಲಾಪುರ (ವಿಶ್ವವಾಣಿ), ಬಸವನಬಾಗೇವಾಡಿಯ ಮಂಜು ಕಲಾಲ (ವಿಶ್ವವಾಣಿ), ಕೊಲ್ಹಾರದ ಮಲ್ಲಿಕಾರ್ಜುನ ಕುಬಕಡ್ಡಿ (ಕನ್ನಡ ಪ್ರಭ), ನಿಡಗುಂದಿಯ ಬಸಲಿಂಗಯ್ಯ ಮಠಪತಿ (ಹೊಸದಿಗಂತ), ಇಂಡಿಯ ಬೀರಪ್ಪ ಹೊಸೂರ (ರವಿವಾಣಿ), ಅಲಮೇಲದ ಗುರು ಹಿರೇಮಠ (ವಿಜಯ ಕರ್ನಾಟಕ), ತಿಕೋಟಾದ ಲಕ್ಷಿö್ಮÃ ಹಿರೇಮಠ (ಸಂಯುಕ್ತ ಕರ್ನಾಟಕ), ದೇವರಹಿಪ್ಪರಗಿಯ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ (ಕನ್ನಡಪ್ರಭ), ಚಡಚಣದ ಶಿವಯ್ಯ ಮಠÀಪತಿ (ಉದಯವಾಣಿ), ಮುದ್ದೇಬಿಹಾಳದ ನೂರ್‌ನಬಿ ನದಾಫ (ಗುಮ್ಮಟ ನಗರಿ), ತಾಳಿಕೋಟೆಯ ಶಿವಾನಂದ್ ಸಜ್ಜನ (ವಿಜಯ ಕರ್ನಾಟಕ).

ಇದೇ ಸಂದರ್ಭ ಹಿರಿಯ ಪತ್ರಕರ್ತ ಗೋಪಾಲ ನಾಯಕ ಉಪನ್ಯಾಸ ನೀಡಲಿದ್ದಾರೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಧಿಕಾರಿ ರಿಷಿ ಆನಂದ, ಡಿವೈಎಸ್ಪಿ ಬಸವರಾಜ ಯಲಿಗಾರ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.

ಸಭೆಯಲ್ಲಿ ಕೆ ಯು ಡಬ್ಲ್ಯೂ ಜೆ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಇಂದುಶೇಖರ್ ಮಣ್ಣೂರ, ರಾಷ್ಟ್ರೀಯಮಂಡಳಿಯ ಮಹೇಶ ಶೆಟ್ಟಿಗಾರ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಡಿ.ಬಿ.ವಡವಡಗಿ, ನಾಮನಿರ್ದೇಶನ ಸದಸ್ಯರಾದ ಕೌಶಲ್ಯ ಪನಾಳಕರ, ಕೆ.ಕೆ. ಕುಲಕರ್ಣಿ, ಖಜಾಂಜಿ ರಾಹುಲ್ ಆಪ್ಟೆ, ಅಶೋಕ ಯಡಹಳ್ಳಿ, ಗುರು ಗದ್ದನಕೇರಿ, ಬಸವರಾಜ ಉಳ್ಳಾಗಡ್ಡಿ, ಇರ್ಫಾನ್ ಶೇಖ, ಶಶಿಕಾಂತ ಮೇಂಡೆಗಾರ, ಶರಣು ಮಸಳಿ, ಗುರು ಲೋಕೂರಿ, ಮಲ್ಲು ಕೆಂಭಾವಿ, ನಾಗೇಶ್ ನಾಗೂರ, ಮಹ್ಮದ ಸಮೀರ ಇನಾಮದಾರ ಹಾಗೂ ತಾಲೂಕು ಪದಾಧಿಕಾರಿಗಳು ಇದ್ದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಪತ್ರಕರ್ತರ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ಪರಶುರಾಮ ಶಿವಶರಣ ಆಯ್ಕೆ


ವಿಜಯಪುರ: ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ ಪರಶುರಾಮ ಶಿವಶರಣ ಭಾಜನರಾಗಿದ್ದಾರೆ.

ಪರಶುರಾಮ ಶಿವಶರಣ ಅವರು ರಾಜ್ಯ ಮಟ್ಟದ ಕನ್ನಡ ದಿನ ಪತ್ರಿಕೆ ಹೊಸ ದಿಗಂತದ ವಿಜಯಪುರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ತಾವು ತೊಡಗಿಸಿಕೊಂಡು, ನಿರ್ಭಿತಿಯಾಗಿ ಜನಮುಖಿ, ಸಮಾಜಮುಖಿ ವರದಿಗಳನ್ನು ಮಾಡುತ್ತ ಖ್ಯಾತಿ ಪಡೆದವರು.

ಪರಶುರಾಮ ಶಿವಶರಣ ಅವರು ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವುದರ ಜೊತೆಗೆ ಸಾಹಿತಿಗಳು ಆಗಿದ್ದಾರೆ. ಈಗಾಗಲೇ ಹಲವು ಕೃತಿಗಳನ್ನು ಹೊರ ತಂದಿದ್ದು, 

ಜೀವಪೀಠ, ನೀಲಿ ಮಿಂಚು ಕವನ ಸಂಕಲನ, ರಾಣಿ ಬಗೀಚ್ ಕಥಾ ಸಂಕಲನ ಹಾಗೂ ವಾರ ನೋಟ ಅಂಕಣ ಸಂಕಲನಗಳನ್ನು ಹೊರ ತಂದಿದ್ದಾರೆ. ಇವರ ಕೃತಿಗಳು ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಗಿವೆ. ಅದರಂತೆ ಶಿವಶರಣ ಅವರ ವಿರಚಿತ ‘ಜೀವ ಪೀಠ’ ಕೃತಿಗೆ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ ‘ಅರಳು ಪ್ರತಿಭೆ’ ಪ್ರಶಸ್ತಿ ದೊರೆತಿದೆ.

ವಿವಿಧ ಸಂಘ, ಸಂಸ್ಥೆಗಳು ಕೊಡಮಾಡುವ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಜು. 19 ರಂದು ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ನೋಂ) ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡ ಪತ್ರಕರ್ತರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ - ಜಿಲ್ಲಾಧಿಕಾರಿ ಡಾ.ಆನಂದ.ಕೆ

ವಿಜಯಪುರ : ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬAಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಸೂಚಿಸಿದರು.

 ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಒಳಗೊಂಡAತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕೊಳಗಾಗಿರುವ ಮಹಿಳೆಯರಿಗೆ ಕೌನ್ಸೆಲಿಂಗ್ ಹಾಗೂ ಅಗತ್ಯ ಕಾನೂನು ನೆರವು ಒದಗಿಸುವಂತೆ ಅವರು ಸೂಚನೆ ನೀಡಿದರು.

 ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಬAಧಿಸಿದ ಇಲಾಖೆಗಳು ನಿರಂತರ ಸಭೆ, ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಏರ್ಪಡಿಸುವ ಮೂಲಕ ಸೂಕ್ತ ಕಾನೂನು ಅರಿವು ಮತ್ತು ತಿಳುವಳಿಕೆ ಮೂಡಿಸಬೇಕು. ಈ ವಿಷಯದಲ್ಲಿ ತುಂಬಾ ಗಂಭೀರತೆಯಿAದ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು.

 ಬಾಲ್ಯವಿವಾಹ ತಡೆಗಟ್ಟುವಲ್ಲಿ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಆಡಳಿತಗಳ ಪಾತ್ರ ಬಹುಮುಖ್ಯವಾಗಿದ್ದು, ಸಮನ್ವಯವಾಗಿ ಕಾರ್ಯನಿರ್ವಹಿಸಿ, ಬಾಲ್ಯವಿವಾಹ ನಡೆಯುವ ಮುನ್ನವೇ ಪತ್ತೆ ಹಚ್ಚಿ ತಪ್ಪಿತಸ್ಥರ ಸಂಬAಧಿಸಿದ ಪೋಷಕರು, ಬಾಲ್ಯವಿವಾಹವನ್ನು ಪ್ರೋತ್ಸಾಹಿಸುವವರ ವಿರುದ್ದ ವಿಳಂಬ ಮಾಡದೇ ಪ್ರಕರಣ ದಾಖಲಿಸಬೇಕು ಎಂದು ಅವರು ಸೂಚಿಸಿದರು.

 ಬಾಲ್ಯವಿವಾಹ ಅದೊಂದು ಅಪರಾಧ. ಸಾರ್ವಜನಿಕರಿಗೆ ಸೂಕ್ತ ಕಾನೂನಿನ ಅರಿವು ನೀಡುವುದರ ಜೊತೆಗೆ ಬಾಲ್ಯವಿವಾಹ ನಡೆಯುವುದು ಕಂಡುಬAದಲ್ಲಿ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳುವುದರ ಮೂಲಕ ಮಕ್ಕಳ ಭವ್ಯ ಭವಿಷ್ಯ ಹಾಳಾಗದಂತೆ ಸಂಬAಧಿಸಿದ ಇಲಾಖಾ ಅಧಿಕಾರಿಗಳು ಮುಂಜಾಗ್ರತೆವಹಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

 ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಫ್ ಕೇಂದ್ರಗಳಲ್ಲಿ ಪೋಕ್ಸೋ, ಬಾಲ್ಯವಿವಾಹ, ಮಹಿಳಾ ದೌರ್ಜನ್ಯ, ಕಿರುಕುಳ ಸೇರಿದಂತೆ ವಿವಿಧ ದೌರ್ಜನ್ಯಕೊಳಗಾದವರನ್ನು ಕೌನ್ಸೆಲಿಂಗ್ ಪ್ರಕ್ರಿಯೆಗೆ ಒಳಪಡಿಸಿ, ಅವರ ಮನೋಸ್ಥೆöÊರ್ಯ ಹೆಚ್ಚಿಸಬೇಕು. ಈ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು.ವೈದ್ಯರು, ಪೊಲೀಸ್ ಇಲಾಖೆ ಸಹಕಾರ ಒದಗಿಸಬೇಕು. ಸಂಬAಧಿಸಿದ ಸಂತ್ರಸ್ತರ ಕುರಿತ ವಸ್ತುಸ್ಥಿತಿ ಆಗಾಗ ವರದಿ ಮಾಡಬೇಕು ಹೇಳಿದರು.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ತೊಲಗಿಸಲು ಸಾರ್ವಜನಿಕರಿಗೆ ಜಾಗೃತಿ ಅವಶ್ಯವಾಗಿದ್ದು, ಈ ಬಗ್ಗೆ ನಿರಂತರ ಶಿಬಿರ, ಸಭೆ ನಡೆಸಬೇಕು. ಪ್ರಕರಣ ನಡೆದ ಸಂದರ್ಭದಲ್ಲಿ ಮಾಹಿತಿ ಒದಗಿಸಿದರೆ ಪೊಲೀಸ್ ಇಲಾಖೆಯಿಂದ ಈ ನಿಟ್ಟಿನಲ್ಲಿ ಶೀಘ್ರ ಕ್ರಮ ವಹಿಸಲಾಗುವುದು. ಸಂಬAಧಿಸಿದ ಇಲಾಖೆಗಳು ವಾಟ್ಸಾಫ್ ಗ್ರೂಪ್ ರಚಿಸಿಕೊಂಡು ಸಮರ್ಪಕ ಮಾಹಿತಿಯನ್ನು ವಿನಿಮಯ ಮಾಡಬೇಕು ಎಂದು ಅವರು ಹೇಳಿದರು.

 ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯ ಆಜೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತçಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Monday, July 14, 2025

ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆ ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 

ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು. 

4157 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, 401 ಕೋಟಿ ಮೊತ್ತದ ಕಾಮಗಾರಿ ಉದ್ಘಾಟನೆ ಮಾಡಿದ್ದೇನೆ. ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ. ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರದ ಸಾಧನೆ ಮತ್ತು ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ಸಾರ್ವಜನಿಕ‌ವಾಗಿ ದಾಖಲೆ ಸಮೇತ ಚರ್ಚೆ ನಡೆಸೋಣ. ಜನರೇ ತೀರ್ಮಾನಿಸಲಿ ಎಂದು ನುಡಿದರು. 

ಬಿಜಾಪುರ ಜಿಲ್ಲೆ ಮೊದಲು ಹೇಗಿತ್ತು ? ನಮ್ಮ ಸರ್ಕಾರದಲ್ಲಿ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿಯನ್ನು ಕೈಯಲ್ಲಿ ಹಿಡಿದು ನೋಡಿ. ಬಿಜಾಪುರ ಜಿಲ್ಲೆಯಲ್ಲಿ ನೀರಾವರಿ ಈ ಮಟ್ಟಕ್ಕೆ ಅಭಿವೃದ್ಧಿಗೊಳಿಗೆ, ಬರದ ನಾಡಾಗಿದ್ದ ಬಿಜಾಪುರವನ್ನು ಹಸಿರು ನಾಡು ಮಾಡಿದ್ದು ನಾವು ಎಂದು ನುಡಿದರು. 

ಹಿಂದೆ ಬರಗಾಲ ಬಂದಾಗ ಜನ ನಿಂಬೆ ಗಿಡ ಕಿತ್ತು ಹಾಕುತ್ತಿದ್ದರು. ಅದೇ ದಿನ‌ ನಾನು ಇಂಡಿಗೆ ಬಂದಿದ್ದೆ. ನಿಂಬೆ ಬೆಳೆಗಾರರಿಗೆ ಭರವಸೆ ನೀಡಿದ್ದೆ. ಇಂದು ನಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನ ಬಿಡುಗಡೆ ಮಾಡಿ ನುಡಿದಂತೆ ನಡೆಯುವ ಕಾಂಗ್ರೆಸ್ಸಿನ ಪರಂಪರೆಯನ್ನು ಮುಂದುವರೆಸಿದ್ದೇವೆ ಎಂದರು. 

ಬಿಜೆಪಿ-ಜೆಡಿಎಸ್ ಇಬ್ಬರೂ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಅಪಪ್ರಚಾರ ಮಾಡಿ ಜನರಿಂದಲೇ ತಿರಸ್ಕಾರಕ್ಕೆ ಒಳಗಾಗಿದ್ದಾರೆ. ನಾವು ಇವರ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳ ಮೂಲಕವೇ ಉತ್ತರ ಕೊಡುತ್ತಿದ್ದೇವೆ ಎಂದರು. 

500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವುದು, 1.23 ಕೋಟಿ ಕುಟುಂಬಗಳು ಗೃಹಲಕ್ಷ್ಮಿ ಹಣ ಪಡೆದಿರುವುದು, 1.64 ಕೋಟಿ ಮನೆಗಳಿಗೆ ಉಚಿತವಾಗಿ 200 ಯೂನಿಟ್ ಹಣ ಪಡೆಯುತ್ತಿರುವುದು,  ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳ ಮೂಲಕ ಕೋಟಿ ಕೋಟಿ ಕನ್ನಡಿಗರ ಬದುಕಿಗೆ ನೆರವಾಗಿರುವುದು ಅಭಿವೃದ್ಧಿ ಅಲ್ಲವೇ ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಗ್ಯಾರಂಟಿಗಳಲ್ಲದೆ 83 ಸಾವಿರ ಕೋಟಿ ರೂಪಾಯಿ ಹಣ ಅಭಿವೃದ್ಧಿಗೆ ತೆಗೆದಿಟ್ಟುರುವುದು ನಮ್ಮ ಅಭಿವೃದ್ಧಿಪರವಾದ ಆಡಳಿತಕ್ಕೆ ಸ್ಪಷ್ಟ ನಿದರ್ಶನ. ಆದ್ದರಿಂದ ಬಿಜೆಪಿ-ಜೆಡಿಎಸ್ ನ ಸುಳ್ಳು ಆರೋಪಗಳನ್ನು ನಂಬಬೇಡಿ. ನಿಮ್ಮ ಕಣ್ಣೆದುರಿಗೇ ಇರುವ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿಯವರ ಮುಖಕ್ಕೆ ಹಿಡಿದು ಉತ್ತರಿಸಿ ಎಂದು ಕರೆ ನೀಡಿದರು.

ಸ್ಥಳೀಯ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಅವರಿಗೆ ಸರ್ಕಾರದಿಂದ ಹಣ ತಂದು ಕ್ಷೇತ್ರದ ಅಭಿವೃದ್ಧಿ ಮಾಡುವುದು ಹೇಗೆ ಎನ್ನುವುದರಲ್ಲಿ ಬಹಳ ಪ್ರಾಮಾಣಿಕರು ಮತ್ತು ಚಾಣಾಕ್ಷರು. ನಮ್ಮದು ಸರ್ವರ ಅಭಿವೃದ್ಧಿಗೆ ಬದ್ದವಾಗಿರುವ ಸರ್ಕಾರ ಎಂದರು. 

ಸ್ಥಳೀಯ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಅವರ ಅಧ್ಯಕ್ಷತೆಯ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ್, ಹೆಚ್.ಕೆ.ಪಾಟೀಲ್, ಶಿವಾನಂದ ಎಸ್.ಪಾಟೀಲ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವು ಮಂದಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.