Sunday, August 31, 2025

ಡಾ. ಸುಧಾರಾಣಿ ಮಣೂರವರ ಕೃತಿ ಬಿಡುಗಡೆಗೊಳಿಸಿದ ಗುರುಮಹಾಂತ ಶ್ರೀಗಳು ಮಕ್ಕಳ ಸಾಹಿತ್ಯ ಅವಲೋಕನ ಕೃತಿ ; ಮಕ್ಕಳ ಸಾಹಿತ್ಯದಲ್ಲಿ ಕೃಷಿಮಾಡುವವರಿಗೆ ದಿಕ್ಸೂಚಿ

 ವಿಜಯಪುರ: ಡಾ. ಸುಧಾರಾಣಿ ಮಣೂರ ಅವರು ‘ಮಕ್ಕಳ ಸಾಹಿತ್ಯ ಅವಲೋಕನ' ಕೃತಿ ಯುವ ಬರಹಗಾರರಿಗೆ ಆಕರ ಗ್ರಂಥವಾಗಿದೆ. ಮಕ್ಕಳ ಸಾಹಿತ್ಯದಲ್ಲಿ ಕೃಷಿಮಾಡುವವರಿಗೆ ದಿಕ್ಸೂಚಿಯಾಗಿದೆ ಎಂದು ಇಲಕಲ್ ಚಿತ್ತರಗಿ ಮಹಾಂತಮಠದ ಪೂಜ್ಯರಾದ ಮನಿಪ್ರ ಶ್ರೀ ಗುರುಮಹಾಂತ ಮಹಾಸ್ವಾಮಿಗಳು ಹೇಳಿದರು.

 ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಕ್ಕಳ ಸಾಹಿತಿ ಪ.ಗು.ಸಿದ್ದಾಪುರ ಅವರ ಮನೆಯಲ್ಲಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದಲ್ಲಿ ಡಾ. ಸುಧಾರಾಣಿ ಮಣೂರ ಅವರು ರಚಿಸಿದ ಮಕ್ಕಳ ಸಾಹಿತ್ಯ ಅವಲೋಕನ ಗ್ರಂಥವನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿ ಅವರು ಮಾತನಾಡಿದರು. 

 ಡಾ. ಸುಧಾ ರಾಣಿ ಮಣೂರ ಅವರು ‘ಮಕ್ಕಳ ಸಾಹಿತ್ಯ ಅವಲೋಕನ' ಕೃತಿಯಲ್ಲಿ ಮಕ್ಕಳ ಸಾಹಿತ್ಯದಲ್ಲಿ ಕೃಷಿ ಮಾಡಿದ ಹಿರಿಯ ಮಕ್ಕಳ ಸಾಹಿತಿಗಳ ಕೃತಿಗಳನ್ನು ವಿಮರ್ಶೆ ಮಾಡಿದ್ದಾರೆ. ಮಕ್ಕಳ ಸಾಹಿತ್ಯದ ಕುರಿತು ವಿಶೇಷ ಲೇಖನಗಳನ್ನು ಬರೆದಿದ್ದಾರೆ ಎಂದರು. 

 ಈ ಸಂದರ್ಭ ಬಸವರಾಜ ಸಿದ್ದಾಪುರ, ಅರವಿಂದಕುಮಾರ ಸಿದ್ದಾಪುರ, ಶಿವಪ್ಪ ಮಣೂರ, ಡಾ.ಸುಧಾರಾಣಿ ಮಣೂರ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment