Wednesday, December 31, 2025

ಸಚಿವರ ನಿವಾಸದ ಎದುರು ಪ್ರತಿಭಟನೆ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟಗಾರರ ಬಂಧನ

ವಿಜಯಪುರ : ಜಿಲ್ಲೆಗೆ ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಗುರುವಾರ 106ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆ, ಹೊಸ ವರ್ಷದಂದೂ ನಗರದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ನಿವಾಸದ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದ ಸಂದರ್ಭ ಪೊಲೀಸರು ಹೋರಾಟಗಾರರನ್ನು ಬಂಧಿಸಿ ವಾಹನದಲ್ಲಿ ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಗೆ ಕರೆದೊಯ್ದಿರುವ ಘಟನೆ ನಡೆದಿದೆ.

ಹೋರಾಟಗಾರರು ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಈ ವೇಳೆ ಹೋರಾಟಗಾರರು ಸರ್ಕಾರಕ್ಕೆ ಧಿಕ್ಕಾರ.. ಧಿಕ್ಕಾರ.., ಸರ್ಕಾರಿ ವೈದ್ಯಕೀಯ ಕಾಲೇಜು ಹೊರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕುತ್ತಿರುವ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 ಸಂಗನ ಬಸವೇಶ್ವರ ಶ್ರೀಗಳು, ಹೋರಾಟಗಾರರಾದ ಅರವಿಂದ ಕುಲಕರ್ಣಿ, ಸುರೇಖಾ ರಜಪೂತ, ಅನಿಲ ಹೊಸಮನಿ, ಭಿ. ಭಗವಾನ ರೆಡ್ಡಿ, ಸಿದ್ಧರಾಮ ಹಳ್ಳೂರ, ಜಗದೇವ ಸೂರ್ಯವಂಶಿ, ಮಲ್ಲಿಕಾರ್ಜುನ ಎಚ್. ಟಿ, ಗಿರೀಶ ಕಲಘಟಗಿ, ವಿನೋದ ಖೇಡ, ಮಲ್ಲಿಕಾರ್ಜುನ ಬಟಗಿ, ಅಕ್ರಮ ಮಾಶ್ಯಾಳಕರ, ಲಲಿತಾ ಬಿಜ್ಜರಗಿ, ಲಾಯಪ್ಪ ಇಂಗಳೆ, ಭೋಗೇಶ ಸೋಲಾಪುರ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ ಎಚ್., ಶಿವಬಾಳಮ್ಮ ಕೊಂಡಗೂಳಿ ಇದ್ದರು.

No comments:

Post a Comment