ಈ ದಿವಸ ವಾರ್ತೆ
ಬೆಂಗಳೂರು: ಅನಿಲ್ ಗುನ್ನಾಪೂರ ಅವರು ಬರೆದ 'ಸರ್ವೇ ನಂಬರ್-97' ಎಂಬ ಕಥಾಸಂಕಲನವನ್ನು ಹೊoಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ, ಬಾಗಲಕೋಟೆ ಇವರ ಸಹಯೋಗದಲ್ಲಿ ಭಾನುವಾರ ಸಾಹಿತ್ಯ ಪರಿಷತ್ ನ ಶ್ರೀಕೃಷ್ಣರಾಜ ಪರಿಷತ್ತು ಮಂದಿರದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು.
'ಸರ್ವೆ ನಂಬರ್-97' ಕಥಾಸoಕಲನವನ್ನು ಹಿರಿಯ ಕವಿ ಹಾಗೂ ಚಿಂತಕ ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ರಘುನಾಥ ಚ.ಹ ಹಾಗೂ ಬಿಬಿಎಂಪಿ ವಲಯ ಆಯುಕ್ತರು ಮತ್ತು ಯಲಹಂಕ ವಲಯದ ಕರೀಗೌಡ (ಐಎಎಸ್), ಕವಯಿತ್ರಿ ಜ.ನಾ.ವೇಜಶ್ರೀ ಮತ್ತಿತರರು ಗಣ್ಯರು ಬಿಡುಗಡೆಗೊಳಿಸಿದರು.
ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಮಾತನಾಡಿದ ಅವರು ನಮ್ಮ ಭೂಮಾಪನ ಇಲಾಖೆಯ ಇತಿಹಾಸವು ಕನ್ನಡ ಸಾಹಿತ್ಯದಲ್ಲಿ ಹೆಚ್ಚೆಚ್ಚು ಬರಲೆಂದು ಆಶಿಸುತ್ತ, ಅನಿಲ ಅವರು ಬರೆದ ಕತೆಗಳು ಹಲವು ವಿಶ್ವವಿದ್ಯಾಲಯಗಳಿಗೆ ಪಠ್ಯವಾಗಿವೆ ಹಾಗೂ ಪ್ರತಿಷ್ಠಿತ ಬಹುಮಾನವನ್ನು ಪಡೆದಿರುವ ಅನಿಲ ಗುನ್ನಾಪೂರ ಅವರಂತಹ ಲೇಖಕರನ್ನು ಮತ್ತು ಸಾಹಿತ್ಯಾಸಕ್ತರನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಇದೇ ಸಂದರ್ಭದಲ್ಲಿ ರಘುನಾಥ ಚ.ಹ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಇಂಡಿ ತಾಲೂಕಿನ ಲೇಖಕರು, ಪ್ರಸ್ತುತ ಬಾಗಲಕೋಟೆಯಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅನಿಲ್ ಗುನ್ನಾಪೂರ ಅವರ ಎರಡನೇ ಪುಸ್ತಕದಲ್ಲಿ ತಮ್ಮ ಅನುಭವಕ್ಕೆ ನಿಲುಕಿದ ಜೊತೆಯ ಜೀವಗಳ ಜೀವನವನ್ನು ಬೇರೆ ಜೀವಗಳಿಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿರುವುದು ಇದೊಂದು ವಿಶಿಷ್ಟವಾದದ್ದು, ಹಾಗೆ ಇನ್ನುಳಿದ ಕಥೆಗಳಲ್ಲೂ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಹಿಡಿದಿರುವರು ವಿಶೇಷವಾಗಿದೆ ಎಂದರು.
ಇದೇ ಕಾರ್ಯಕ್ರಮದಲ್ಲಿ ಶೋಭಾ ಗುನ್ನಾಪುರ, ಹೈಕೋರ್ಟ್ ನ್ಯಾಯವಾದಿ ಸುನಿಲ್ ಗುನ್ನಾಪುರ, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಸಾಹಿತ್ಯ ಆಸಕ್ತರು, ಮತ್ತಿತರು ಭಾಗವಹಿಸಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.