Wednesday, March 5, 2025

ವಿದ್ಯಾರ್ಥಿನಿಯರು ಮೊಬೈಲ್ ಗೀಳಿನಿಂದ ಹೊರಬರಲು ಡಾ. ಸೌಮ್ಯಶ್ರೀ ಕರೆ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಕಾಲೇಜು ವಿದ್ಯಾರ್ಥಿನಿಯರು ಮೊಬೈಲ್ ಗೀಳಿನಿಂದ ಹೊರ ಬಂದು ತಮ್ಮ ಅಧ್ಯಯನಕ್ಕೆ ಪುಸ್ತಕಗಳನ್ನು ಹೆಚ್ಚಾಗಿ ಬಳಸಲು ಡಾ. ಸೌಮ್ಯಶ್ರೀ ಮಯೂರ ಕಾಕು ಖ್ಯಾತ ಮಕ್ಕಳ ಮತ್ತು ಹದಿಹರೆಯ ಮನೋರೋಗ ತಜ್ಞರು ಜೆ ಎಸ್ ಎಸ್ ಆಸ್ಪತ್ರೆ, ವಿಜಯಪುರ ಅವರು ಸಲಹೆ ನೀಡಿದರು. 

ಕ.ರಾ.ಅ.ಮ.ವಿ.ವಿ. ವಿಜಯಪುರ ಸ್ನಾತಕ ಅಧ್ಯಯನ ವಿಭಾಗ (NEP) ದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿದ್ಯಾಥಿನಿಯರಿಗೆ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತಾನಾಡಿದರು.

ಸಾಮಾಜಿಕ ಜಾಲತಾಣ ಬಳಕೆಯಲ್ಲಿ ವಿದ್ಯಾರ್ಥಿನಿಯರು ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥಗೊಳಿಸುತ್ತಿದ್ದಾರೆ, ಬೌದ್ಧಿಕ ಬೆಳವಣಿಗೆಗೆ ಹಲವಾರು ಆ್ಯಪ್ ಮಾರಕವಾಗಿವೆ. ವಿದ್ಯಾರ್ಥಿನಿಯರು ಪುಸ್ತಕಗಳೊಂದಿಗೆ ಹೆಚ್ಚು ಸಮಯ ಕಳೆಯುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು. 

ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರುಗೊಳ್ಳಲು ಉಪಯುಕ್ತವಾಗುವಂತಹ ಜ್ಙಾನವನ್ನು ವಿದ್ಯಾರ್ಥಿನಿಯರು ಪಡೆಯಬೇಕು, ಈ ಜ್ಙಾನವು ಮೊಬೈಲ್ ಗಳಲ್ಲಿ ದೊರೆಯುವುದು ವಿರಳ. ಗ್ರಂಥಾಲಯದ ಪುಸ್ತಕಗಳನ್ನು ಅಧ್ಯಯನಕ್ಕೆ ಬಳಸಿಕೊಳ್ಳಬೇಕೆಂದು ಕರಾಅಮವಿವಿ ಕುಲಸಚಿವರಾದ ಶ್ರೀ ಶಂಕರಗೌಡಾ ಸೋಮನಾಳ ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ವಿದ್ಯಾರ್ಥಿನಿಯರಿಗೆ ರಸಪ್ರಶ್ನೆ ಕೇಳುವುದರ ಮೂಲಕ ಕಾರ್ಯಕ್ರಮಕ್ಕೆ ಜ್ಙಾನಸ್ಪರ್ಶ ನೀಡಿದರು. ರಸಪ್ರಶ್ನೆ ವಿಜೇತರಿಗೆ ಬಹುಮಾನ ನೀಡಿ ಗೌರವಿಸಿದರು. 

ಸ್ನಾತಕ ಆಧ್ಯಯನ ವಿಭಾಗದ ವಿಶೇಷಾಧಿಕಾರಿಗಳಾದ ಪ್ರೊ. ಸಕ್ಪಾಲ ಹೂವಣ್ಣ ಅವರು ಮಾತನಾಡಿ ವಿದ್ಯಾರ್ಥಿನಿಯರು ತಮ್ಮ ಉಜ್ವಲ ಭವಿಷ್ಯಕ್ಕಾಗಿ ಉನ್ನತ ಶಿಕ್ಷಣದ ಅಧ್ಯಯನದ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. 

ವಿಭಾಗದ ಸಂಯೋಜಕರಾದ ಡಾ. ಜಿ ಸೌಭಾಗ್ಯ, ಹಾಗೂ ಸಾಂಸ್ಕçತಿಕ ಕರ‍್ಯಕ್ರಮದ ಸಂಯೋಜಕರಾದ ಡಾ. ಮೆಹರಾಜಬೇಗಂ ಸೈಯ್ಯದ ಭಾಗವಹಿಸಿದ್ದರು. ಭವಾನಿ ಅಂಗಡಿ ಸ್ವಾಗತಿಸಿದರು ಚನ್ನಮ್ಮಾ ಕಂಬಾರ ನಿರೂಪಿಸಿದರು. ಶ್ವೇತಾ ನಿಂಬಾಳ ವಂದಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಬಾಲಭಾರತಿ ಶಾಲೆಯ ಶಿಕ್ಷಕಿ ಸುವರ್ಣ ಸಾರಂಗಮಠ ರವರಿಗೆ ಅಂತರರಾಷ್ಟ್ರೀಯ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

 

ಆಲಮೇಲ ; ಪಟ್ಟಣದ ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುವರ್ಣ ಸಾರಂಗಮಠ ರವರಿಗೆ ಚೇತನ ಫೌಂಡೇಶನ್ ಧಾರವಾಡ ,ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ ( ರಿ.) ಹಾಗೂ ಕರ್ನಾಟಕ ಸೋಷಿಯಲ್ ಕ್ಲಬ್ ಬೆಂಗಳೂರು ವತಿಯಿಂದ ಹಮ್ಮಿಕೊಂಡಿರುವ ಅಂತರಾಷ್ಟ್ರೀಯ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಅಂತರರಾಷ್ಟ್ರೀಯ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಪ್ರಶಸ್ತಿ ಸಮಾರಂಭವು ರವಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಗಾಂಧಿ ಭವನದ ಬಾಪು ಸಭಾಂಗಣ ದಲ್ಲಿ ಜರುಗಲಿದೆ ಪ್ರಶಸ್ತಿ ಪ್ರಧಾನವನ್ನು ಬಹುಭಾಷಾ ಚಲನಚಿತ್ರ ಹಿನ್ನೆಲೆ ಗಾಯಕಿ ಹಾಗೂ ಸಂಶೋಧಕಿ ಡಾ.ಪ್ರೀಯದರ್ಶಿನಿ ರವರು ಮಾಡಲಿದ್ದಾರೆ ಎಂದು ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ  ತಿಳಿಸಿದ್ದಾರೆ.ಪ್ರಶಸ್ತಿಗೆ ಆಯ್ಕೆ ಆಗಿದಕ್ಕೆ ಸಂಸ್ಥೆಯ ಅಧ್ಯಕ್ಷರು ಎಸ್.ಆಯ್.ಜೋಗೂರ,ಕಾರ್ಯದರ್ಶಿಗಳು ಪ್ರಶಾಂತ ಬಡದಾಳ,ಕೋಶಾಧ್ಯಕ್ಷರು ಅರವಿಂದ ಕುಲಕರ್ಣಿ ,ಆಡಳಿತ ಮಂಡಳಿಯ ಸದಸ್ಯರು, ಶಾಲಾ ಶಿಕ್ಷಕವೃಂದ ಹಾಗೂ ಶಿಕ್ಷಕ ಪಂಡಿತ ಅವಜಿ ಹರ್ಷ ವ್ಯಕ್ತ ಪಡಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

06-03-2025 EE DIVASA KANNADA DAILY NEWS PAPER

ಎಂ ಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಚಡಚಣ: ಸಂಗಮೇಶ್ವರ  ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಎಂ ಕಾಂ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ  ಆಯೋಜಿಸಿದ್ದರು.

ಪ್ರಾಂಶುಪಾಲ ಡಾ. ಎಸ್.ಬಿ.ರಾಠೋಡರವರು   ದೀಪ ಬೆಳಗಿಸುವುದರ ಮೂಲಕ  ವಿದ್ಯಾರ್ಥಿಗಳಿಗೆ ಕಾಲೇಜಿನ ಸಂಪ್ರದಾಯಗಳು,  ಶೈಕ್ಷಣಿಕ ವ್ಯವಸ್ಥೆ ,  ಅಧ್ಯಾಪಕರ ಬದ್ಧತೆ, ಗುಣಮಟ್ಟದ ಮೂಲಸೌಕರ್ಯ,  ಆಡಳಿತ ಮಂಡಳಿಯ ಬೆಂಬಲ, ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಕುರಿತು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿಂದಿ ಉಪನ್ಯಾಸಕರಾದ ಡಾ. ಎಸ.ಎಸ. ದೇಸಾಯಿ ಮಾತನಾಡಿ   ವಿದ್ಯಾರ್ಥಿಗಳು 

ತಮ್ಮ ವಿಷಯ ಜ್ಞಾನದ ಜೊತೆಗೆ ಕೌಶಲ್ಯಗಳನ್ನು ಪಡೆಯಬೇಕು .  ತಮ್ಮ  ಮುಂದಿನ  ಭವಿಷ್ಯದ ಹೇಗೆ ನಿರ್ಮಿಸ ಬೇಕು  ಎಂದು ಕೆಲವೊಂದು ನೈಜ  ಸನ್ನಿವೇಶಗಳನ್ನು ಹೇಳುವುದರ ಮೂಲಕ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. 

ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಮಾಹತೇಂಶ ಜನವಾಡ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ರಶ್ಮೀ ಗಜಾಕೋಶ, ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಶಂಕರ ಕಡೂರು, ಎಂ .ಕಾಂ ವಿಭಾಗದ ಮುಖ್ಯಸ್ಥರಾದ ಪ್ರೊ. ಎ. ಎಸ್.ಪಾಟೀಲ ಮತ್ತು ಎಮ್. ಕಾಂ . ವಿಭಾಗದ ಪ್ರಾಧ್ಯಾಪಕರಾದ ಪ್ರೊ.‌ಬಸವರಾಜ ನೀಲವಾಣಿ, ಪ್ರೊ. ಜ್ಞಾನೇಶ್ವರಿ ಲಚ್ಯಾಣ, ಪ್ರೊ.ಬಂಗಾರೆವ್ವ ದೈವಾಡಿ, ಪ್ರೊ.  ಐಶ್ವರ್ಯ ಹಕ್ಕೆ, ಹಾಗೂ ಪ್ರಥಮ ಹಾಗೂ ದ್ವಿತೀಯ ಎಂ.ಕಾ. ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. 

ಎಮ.ಕಾಂ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾದ      ತುಳಸಿ ಲೋಲಾ  ಅವರು ಕಾರ್ಯಕ್ರಮ ನಿರೂಪಿಸಿದರೇ, ಅನ್ಯನಾ ಕುಲಕರ್ಣಿ  ಪ್ರಾರ್ಥನಾ ಗೀತೆ ಹಾಡಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಹಿಳಾ ಸಬಲೀಕರಣಕ್ಕೆ ಕೇವಲ ಪ್ರಮಾಣಪತ್ರವಷ್ಟೇ ಸಾಕಾಗದು, ವೈಜ್ಞಾನಿಕ ಜ್ಞಾನ ಮತ್ತು ತಂತ್ರಜ್ಞಾನ ಪ್ರಭಾವವೂ ಅವಶ್ಯಕ


 ವಿಜಯಪುರ: ಮಹಿಳಾ ಸಬಲೀಕರಣಕ್ಕೆ ಕೇವಲ ಪ್ರಮಾಣಪತ್ರವμÉ್ಟೀ ಸಾಕಾಗದು, ವೈಜ್ಞಾನಿಕ ಜ್ಞಾನ ಮತ್ತು ತಂತ್ರಜ್ಞಾನ ಪ್ರಭಾವವೂ ಅವಶ್ಯಕ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು. 

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು  ಕ್ರೀಡಾ ವಿಜ್ಞಾನ ವಿಭಾಗ ಹಾಗೂ ಕ್ರೀಡಾ ನಿರ್ದೇಶನಾಲಯ ಇವರ ಸಂಯುಕ್ತಾಶ್ರಯದಲ್ಲಿ ಮಹಿಳಾ ಸಾಂಸ್ಕøತಿಕ ಹಬ್ಬದ-2025 ಪ್ರಯುಕ್ತ ಬುಧವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಮ್ಯಾರಥಾನ್‍ಗೆ ಚಾಲನೆ ನೀಡಿ ಮಾತನಾಡಿದರು.

ಈ ಮ್ಯಾರಥಾನ್ ನಾಲ್ಕು ದಿಕ್ಕಿನಿಂದ ಆಯೋಜಿಸುವ ಉದ್ದೇಶವೆಂದರೆ ನಮ್ಮ ಮಹಿಳಾ ವಿಶ್ವವಿದ್ಯಾಲಯದ ಅಸ್ತಿತ್ವವನ್ನು ತಲುಪಿಸುವುದಾಗಿದೆ. ಮಹಿಳೆಯರ ಹಕ್ಕುಗಳಿಗೆ ಇನ್ನೂ ಮಹಿಳೆಯರೇ ಹೋರಾಡಬೇಕಾಗಿದೆ. ಎμÉ್ಟೀ ಶಿಕ್ಷಣ ಪಡೆದರೂ ಮಹಿಳೆಯರ ಮೇಲೆ ದೌರ್ಜನ್ಯ ಕಡಿಮೆಯಾಗಿಲ್ಲ. ಮಹಿಳೆಯರು ವಿಶ್ವದ ಮುಂಚೂಣಿಯಲ್ಲಿ ತಲುಪಲು ಅವರಿಗೆ ಸಮಾನ ಅವಕಾಶಗಳನ್ನು ನೀಡಬೇಕಾಗಿದೆ ಎಂದರು. 


ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಸಿಂಡಿಕೇಟ್ ಸದಸ್ಯೆ ಮಲ್ಲಮ್ಮಾ ಯಾಳವಾರ ಮ್ಯಾರಥಾನ್‍ನಲ್ಲಿ ಮಾತನಾಡಿ, ವಿಜಯಪುರದ ಎಲ್ಲಾ ನಾಗರಿಕರಿಗೆ ಮಹಿಳೆಯರ ಹಕ್ಕುಗಳು ಮತ್ತು ಅವರ ಮಹತ್ವದ ಬಗ್ಗೆ ಜಾಗೃತಿಯನ್ನು ಉಂಟುಮಾಡಬೇಕು. ಮಹಿಳೆಯರಿಗೆ ಸಮಾನತೆಯ ನೋಟವುಳ್ಳ ಶಿಕ್ಷಣವನ್ನು ನೀಡುವುದು ಅವಶ್ಯಕ. ಮಹಿಳೆಯರು ತಮ್ಮ ಸ್ವಂತ ಬದುಕನ್ನು ಕಟ್ಟಿಕೊಳ್ಳುವುದರ ಜೊತೆಗೆ, ಸಮಾಜ ಮತ್ತು ದೇಶದ ನಿರ್ಮಾಣದಲ್ಲೂ ಪ್ರಮುಖ ಪಾತ್ರ ವಹಿಸಬೇಕು. ಈ ಕಾರಣಕ್ಕಾಗಿ, ಎಲ್ಲರೂ ಒಗ್ಗೂಡಿ ಮಹಿಳೆಯರನ್ನು ಸಬಲಗೊಳಿಸಲು ಕಾರ್ಯನಿರ್ವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮ್ಯಾರಥಾನ್‍ನಲ್ಲಿ  ಮಾತನಾಡಿ, ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಅವರ ಹಕ್ಕುಗಳನ್ನು ದೊರಕಿಸುವುದು ಅತ್ಯಂತ ಮುಖ್ಯವಾಗಿದೆ. ಮಹಿಳೆಯರು ಶಕ್ತಿಯಾಗಲು, ಸ್ವಯಂ ನಿರ್ಧಾರ ತೆಗೆದುಕೊಳ್ಳಲು ಮತ್ತು ಸಮಾಜದಲ್ಲಿ ಗೌರವಯುತ ಜೀವನ ನಡೆಸಲು ಸಹಾಯ ಮಾಡಬೇಕು. ನಮ್ಮ ಸಮಾಜದಲ್ಲಿ ಮಹಿಳೆಯರ ಸುರಕ್ಷತೆ ಸವಾಲಾಗಿದರೂ, ಅವರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಅಭಿವೃದ್ಧಿ ಅತ್ಯವಶ್ಯಕವಾಗಿದೆ. ಇದನ್ನು ಸಾಧಿಸಲು ಸಮರ್ಥನೀಯ ನೀತಿಗಳು, ಮಕ್ಕಳ ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿಯ ಅಗತ್ಯವಿದೆ ಎಂದರು. 

ನಗರದ ಬಿ.ಎಲ್.ಡಿ.ಇ. ತಾಂತ್ರಿಕ ಮಹಾವಿದ್ಯಾಲಯ, ಗೋಳಗುಮ್ಮಟ, ಜಿಲ್ಲಾ ನ್ಯಾಯಾಲಯ ಹಾಗೂ ಸೈನಿಕ ಶಾಲೆ, ಹೀಗೆ ನಾಲ್ಕು ಕಡೆಗಳಿಂದ ಮ್ಯಾರಥಾನ್ ಹೊರಟು, ಗಾಂಧೀ ವೃತ್ತದ ಬಳಿ ಸಮಾರೋಪಗೊಂಡಿತು. ಈ ಮ್ಯಾರಥಾನ್‍ನಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್. ಎಂ ಚಂದ್ರಶೇಖರ, ಮಹಿಳಾ ಸಾಂಸ್ಕøತಿಕ ಹಬ್ಬದ ಸದಸ್ಯ ಸಂಚಾಲಕಿ ಪ್ರೊ. ಲಕ್ಷ್ಮೀದೇವಿ ವೈ, ಸಂಯೋಜಕರಾದ ಪ್ರೊ.ಸಕ್ಪಾಲ್ ಹೂವಣ್ಣ, ಪ್ರೊ.ಜಿ.ಜಿ.ರಜಪೂತ, ಪ್ರೊ. ಶ್ರೀನಿವಾಸ, ಡಾ.ಜ್ಯೋತಿ ಅವಟಿ, ಪ್ರೊ.ಪಿ.ಜಿ.ತಡಸದ, ಪ್ರೊ ಜ್ಯೋತಿ ಉಪ್ಯಾದೆ, ಡಾ. ಕಸ್ತೂರಿ ರಜಪೂತ, ಪ್ರೊ.ರಾಜಕುಮಾರ ಪಿ ಮಾಲಿಪಾಟೀಲ್, ಡಾ. ಕಿರಣ ಜಿ. ಎನ್, ಪ್ರೊ.ನಾಮದೇವ. ಎಮ್. ಗೌಡ, ಪ್ರೊ.ಹನುಮಂತಯ್ಯ ಪೂಜಾರಿ ಹಾಗೂ ಪ್ರೊ.ವಿಜಯಾ ಕೋರಿಶೇಟ್ಟಿ, ಪ್ರೊ. ಯು.ಕೆ.ಕುಲಕರ್ಣಿ, ಡಾ.ಚಂದ್ರಶೇಖರ ಮಠಪತಿ, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ವಿಷ್ಣು ಶಿಂದೆ ಸ್ವಾಗತಿಸಿ ನಿರೂಪಿಸಿದರು. ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಹಾಗೂ ಕ್ರೀಡಾ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಹನುಮಂತಯ್ಯ ಪೂಜಾರ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.