Wednesday, March 26, 2025

ನಿತ್ಯ ನೂತನವಾಗಿರುವ ರಂಗಭೂಮಿಯ ಸೊಬಗು..!

 

ರಂಗಭೂಮಿ ಇಂದಿಗೂ ತನ್ನ ಗತÀ ವೈಭವವನ್ನು ಕಾಪಾಡಿಕೊಂಡು ಕಲೆ, ನೃತ್ಯ, ಸಾಹಿತ್ಯದ ಹೊನಲನ್ನು ಪ್ರತಿಬಿಂಬಿಸುತ್ತಿದೆ.

ಕಲಿಕೆ, ದುಡಿಮೆ, ಗಳಿಕೆ, ಕೆಲಸದ ಒತ್ತಡ, ಸಂಬಂಧಗಳ ಹಿತದ ಜವಾಬ್ದಾರಿ ಹೀಗೆ ಹತ್ತು ಹಲವು ದಿನ ನಿತ್ಯಗಳ ಜಂಜಾಟದಲ್ಲಿ ಮನರಂಜನೆ ಎಂಬ ಅಸ್ತ್ರ ಮನಸ್ಸು, ಮಸ್ತಕಕ್ಕೆ ವಿಶ್ರಾಂತಿ ನೀಡುತ್ತದೆ. ಹಾಡು ಆಲಿಸುವುದು, ಕಥೆ, ಕಾದಂಬರಿ ಓದುವುದು, ಆಟವಾಡುವುದು, ಪ್ರವಾಸ ಹೋಗುವುದು,  ಸ್ಪೋಟ್ರ್ಸ್ರ, ಸಿನಿಮಾ, ರೀಲ್ಸ್ ವೀಕ್ಷಣೆಗಳಂತಹ ಮನರಂಜನೆಗಳು ಒತ್ತಡ ತಗ್ಗಿಸಿ ದಿನ ನಿತ್ಯ ಜಂಜಾಟದೊಂದಿಗೆ ಮನಸ್ಸಿಗೆ ಮದ ನೀಡಿ ಜೀವನದ ಬಂಡಿ ಮುನ್ನಡೆಸುವ ಅಡಿಪಾಯವಾಗಿವೆ. 

ಸೋಟ್ರ್ಸ್, ರೀಲ್ಸ್, ಸಿನಿಮಾದಂತಹ  ತಂತ್ರಜ್ಞಾನ ಮಾಧ್ಯಮಗಳು ಅವಿಷ್ಕಾರ ಗೊಳ್ಳುವ ಮುನ್ನ  ಮನರಂಜನೆಗಾಗಿ ರಂಗಭೂಮಿ, ವೃತ್ತಿಗಾಗಿ ರಂಗಭೂಮಿ ಎಂದು ಈ ರಂಗ ಪರದೆಯೂ ಜನರನ್ನು ಸೆಳೆಯುತ್ತಿತ್ತು. 

ರಾಮಾಯಣ, ಮಹಾಭಾರತ, ಸತ್ಯ ಹರಿಶ್ಚಂದ್ರ, ಸಮಾಜದಲ್ಲಿನ ದೌರ್ಜನ್ಯ, ತೊಡಕುಗಳಂತಹ ಸಾಂಸ್ಕøತಿ ಹಾಗೂ ಸಾಮಾಜಿಕ  ನಾಟಕಗಳಲ್ಲಿ ಸಿದ್ದಿಸಾಧಿಸಿ ಕಲಾವಿದರು ರಂಗಭೂಮಿಯಲ್ಲಿ ಪ್ರದರ್ಶನ ನೀಡುತ್ತಾ ಮನುರಂಜನೆಯೊಂದಿಗೆ ಸಂದೇಶಗಳ ಬುತ್ತಿಯನ್ನು ತಲೆಯಲ್ಲಿ ಮೆತ್ತಿ ಜಾಗೃತಿ ಮೂಡಿಸುವ ಕಾರ್ಯ ನಡೆಸಲು ಸಹಕಾರಿಯಾಗುತ್ತಿದ್ದವು. 

ರಂಗ ಪರದೆಯ ಮೇಲೆ ವೇಷ ತೊಟ್ಟು ನಟಿಸುವ ಕಲಾವಿದರ ಹಾವಭಾವ ನಟನೆ ಎದುರಿಗಿದ್ದ ವಿಕ್ಷಕರ ಗಮನ ಬೇರೆಲ್ಲೂ ಜಾರದೆ ಮಂತ್ರಮುಗ್ದರನ್ನಾಗಿ ಕೂರಿಸಿದರೇ ಅವರ ಉಡುಗೆ-ತೊಡುಗೆಗಳು, ಹಿನ್ನಲೇ ಧ್ವನಿ ಆ ನಾಟಕಕ್ಕೆ ಜೀವಕಳೆ ತುಂಬುತ್ತಿತ್ತು. 

ನಟನೆಯ ಹವ್ಯಾಸದಿಂದಲೋ, ಬದುಕು ಕಟ್ಟಿಕೊಳ್ಳಲು ಇದನ್ನೇ ವೃತ್ತಿಯನ್ನಾಗಿ ಮಾಡಿಕೊಂಡು ರಂಗಭೂಮಿ ಪ್ರವೇಶಿಸಿದ್ದ ಅದೆμÉ್ಟೂೀ ಕಲಾವಿದರು ತಮ್ಮ ನಟನಾ ಚಾತುರ್ಯದಿಂದ /ಪ್ರತಿಭೆಯಿಂದ   ಪ್ರಖ್ಯಾತಿ ಗಳಿಸಿ, ಸಾಧನೆಗೆ ಪ್ರತಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. 

ಸಿನಿಮಾ ಎಂಬ ಜಗಮಗಿಸುವ ಲೋಕಕ್ಕೆ ಕಾಲಿಟ್ಟಾಗ ರಂಗಭೂಮಿ ಕೊಂಡಿ ಕಳಚದೇ  ಜನಮನದಲ್ಲಿ ತನ್ನದೇ ಒಂದು ಛಾಪು ಮೂಡಿಸಿ ಈಗಲ್ಲೂ ಪ್ರಸ್ತುತದಲ್ಲಿದೆ. ಇದಕ್ಕೆ ಕಾರಣ ನೋಡುಗರ ಹವ್ಯಾಸ ಮತ್ತು ಕಲಾವಿದರ ಆಸಕ್ತಿ ಇದರೊಂದಿಗೆ ಯುವ ಪೀಳಿಗೆಗೆ ರಂಗಭೂಮಿಯ ಬಗ್ಗೆ ಪರಿಚಯಿಸಲು ಪ್ರತಿ ವರ್ಷ ವಿಶ್ವಾದ್ಯಂತ ರಂಗಭೂಮಿ ದಿನ ಆಚರಿಸಲಾಗುತ್ತಿದೆ. 

ಪ್ರತಿ ವರ್ಷ ಮಾರ್ಚ್ 27ರಂದು ವಿಶ್ವ ರಂಗಭೂಮಿ ದಿನಾಚರಣೆಯನ್ನು ವಿಶ್ವಾದ್ಯಂತ ಭಾಷೆ ಭೇದ, ಲಿಂಗ ಭೇದ ಆಚರಣೆ ಮಾಡುತ್ತಾ.. ರಂಗಭೂಮಮಿಯ ರಂಗು ಮಾಸದೇ ಜೀವಂತ ಉಳಿವಿಗೆ ಕಾರಣೀಕರ್ತವಾಗಿದೆ.  

ಅμÉ್ಟೀ ಅಲ್ಲದೆ ಸಿನಿಮಾ  ಎಂಟ್ರಿ ಕೊಡುವ ಮುನ್ನ ಅನೇಕ ನಟ-ನಟಿಯರು ನಟನೆಯ ಸೊಬಗನ್ನು ಹೊಂದಲು ರಂಗಭೂಮಿಯನ್ನು ಮೊದಲು ಆದ್ಯತೆ ನೀಡಿರುವುದನ್ನು ನಾವು ಗಮನಿಸಬಹುದು. 

ಸಿನಿಮಾ ಕಲಾವಿದರೊಂದಿಗೆ ರಂಗಭೂಮಿ ನಂಟು: ಶಾರುಕ್ ಖಾನ್, ಗಿರೀಶ್ ಕಾರ್ನಾಡ್, ಓಂ ಪುರಿ, ಪ್ರಕಾಶ ರಾಜ್, ಬೊಮನ್ ಇರಾನಿ, ಡಾ.ರಾಜಕುಮಾರ, ಶಬಾನಾ ಆಜ್ಮಿ, ಶಂಕರ ನಾಗ್, ಗುಬ್ಬಿ ವೀರಣ್ಣ, ಮಂಡ್ಯ ರಮೇಶ ಸಂಚಾರಿ ವಿಜಯರಂತಹ ಘಟಾನುಘಟಿ ಧಿಗ್ಗಜರು ರಂಗಭೂಮಿಯಲ್ಲಿ ನಟಿಸಿ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದವರು. 

ಹಿನ್ನಲೇ: ಅಂತರಾಷ್ಟ್ರೀಯ ರಂಗಭೂಮಿ ಸಂಸ್ಥೆಯೂ 1962ರಿಂದ ವಿಶ್ವ ರಂಗಭೂಮಿ ದಿನಾಚರಣೆಯನ್ನು ಮಾರ್ಚ್ 27ರಂದು ಆಚರಿಸಲು ಪ್ರಾರಂಭಿಸಿತು. ಇದರ ಬೆನ್ನಲೇ ಪ್ರತಿ ವರ್ಷ ರಂಗಭೂಮಿ ಮತ್ತು ಶಾಂತಿಯ ಸಂಸ್ಕøತಿ ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ರಂಗಭೂಮಿ ದಿನಾಚರಣೆಯನ್ನು ಆಚರಿಸಲಾಗುವುದು. 

ಯಾವುದೇ ಕಟ್, ಎಡಿಟ್  ಇಲ್ಲದೇ ಒಂದೇ ಶಾಟ್ ನಲ್ಲಿ ಸ್ಕೀನ್ ಪ್ಲೆ ಮಾಡಿ ತಮ್ಮ ನಟನಾ ಕಲೆಯಿಂದ  ವೀಕ್ಷಕರ ಮನಮುಟ್ಟುವಂತೆ ವಿಷಯ ಹೂರಣವನ್ನು ಉಣಬಡಿಸುವ ರಂಗಭೂಮಿ ಕಲಾವಿದರ ನಟನೆ ಯಾವ ಆಧುನಿಕ ತಂತ್ರಜ್ಞಾನ ಗಳಿಂದ ಮಾಸದೆ ನಿತ್ಯ ನೂತನವಾಗಿರಲಿ ಎಂಬುದೆ ನಮ್ಮ ಆಶಯ. 

- ವಿದ್ಯಾಶ್ರೀ ಹೊಸಮನಿ 

ಪ್ರಶಿಕ್ಷಣಾರ್ಥಿ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ

ವಿಜಯಪುರ


27-03-2025 EE DIVASA KANNADA DAILY NEWS PAPER

ಸಿದ್ಧಗಂಗಾ ಶ್ರೀ ರತ್ನ ಪ್ರಶಸ್ತಿಗೆ ಮಹೇಶ ಶಿವಶರಣ ಭಾಜನ


ವಿಜಯಪುರ : ವಿಜಯಪುರ ಜಿಲ್ಲೆಯ ನಗರ ನಿವಾಸಿ ಕಲಾವಿದ ಮಹೇಶ ಶಿವಶರಣ ಅವರು ಸಿದ್ಧಗಂಗಾ ಶ್ರೀ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಹೇಶ ಶಿವಶರಣ ಅವರು ಕಲಾ ಕ್ಷೇತ್ರದಲ್ಲಿ ನಿಸ್ವಾರ್ಥ ಮತ್ತು ಪ್ರಾಮಾಣಿಕವಾಗಿ ಶಕ್ತಿಮೀರಿ ಸಲ್ಲಿಸಿದ ಸಾಧನೆಯನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದೆ.

ಅನಾಥ, ನಿರ್ಗತಿಕ ಹಾಗೂ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಗಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ) ಶ್ರೀ ಸಿದ್ಧಗಂಗಾ ಕಿರಿಯ ಪ್ರಾಥಮಿಕ ಶಾಲೆ ತುರಕನಗೇರಿ ತಾ| ತಾಳಿಕೋಟಿ ಜಿ| ವಿಜಯಪುರ ವತಿಯಿಂದ ತ್ರಿವಿದ ದಾಸೋಹಿ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 118 ನೇ ಜಯಂತ್ಯೋತ್ಸವ ಹಾಗೂ ಸಿದ್ಧಗಂಗಾ ಕಿರಿಯ ಪ್ರಾಥಮಿಕ ಶಾಲೆಯ 7ನೇ ವಾರ್ಷಿಕ ಸ್ನೇಹ ಸಮ್ಮೇಳನ ನಿಮಿತ್ಯ “ಸಿದ್ಧಗಂಗಾ ಶ್ರೀ ರತ್ನ ಪ್ರಶಸ್ತಿ”ಯನ್ನು ಕಲಾವಿದ ಮಹೇಶ ಶಿವಶರಣ ಅವರಿಗೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಂಶೂದ್ದೀನ ಇನಾಂದಾರ ಹಾಗೂ ಬಸವರಾಜ ಹೂಗಾರ ಸೇರಿದಂತೆ ರಜಾಕ ಇನಾಮದಾರ, ಅಲ್ತಾಪ ಇನಾಮದಾರ, ವಿರೇಶ ಹಿರೇಮಠ, ಅಮರೇಶ ಬಸವಪಟ್ಟಣ, ಮಂಜುನಾಥ ಮೋಪಗಾರ, ಪ್ರವೀಣ ಮೋಪಗಾರ ಸೇರಿದಂತೆ ಮುಂತಾದವರು ಇದ್ದರು.

ಮಹೇಶ ಶಿವಶರಣ ಸಿದ್ಧಗಂಗಾ ಶ್ರೀ ರತ್ನ ಪ್ರಶಸ್ತಿ ಪಡೆದ ಹಿನ್ನೆಲೆ ಸ್ನೇಹಿತರು, ಹಿತೈಷಿಗಳು, ಕಲಾಭಿಮಾನಿಗಳು, ಕುಟಂಬದ ಸದಸ್ಯರು ಸೇರಿದಂತೆ ಅಪಾರ ಬಂಧು-ಬಳಗದವರು ಶುಭಕೋರಿ ಹಾರೈಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಮಹಿಳೆಯರನ್ನು ಗೌರವಿಸುವ ದೇಶ ನಮ್ಮದಾಗಿದೆ : ಜಿಲ್ಲಾಧಿಕಾರಿ ಟಿ.ಭೂಬಾಲನ್


ವಿಜಯಪುರ : ಮಹಿಳೆಯು ಶಕ್ತಿಯ ಪ್ರತಿಕ. ಮಹಿಳೆಯರನ್ನು ಗೌರವಿಸುವ ದೇಶ ನಮ್ಮದಾಗಿದೆ. ಮಹಿಳೆಯರು ಮುಂಚೂಣಿಯಲ್ಲಿರಬೇಕೆಂಬ ದೃಷ್ಟಿಯಿಂದ ಮಹಿಳೆಯರ ಅಭ್ಯುದಯಕ್ಕಾಗಿ  ಜಿಲ್ಲೆಯಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿ ಆ ಮೂಲಕ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.  

ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಹಕ್ಕುಗಳು, ಸಮಾನತೆ ಹಾಗೂ ಸಬಲೀಕರಣಕ್ಕಾಗಿ-ತ್ವರಿತ ಕ್ರಮ ಎಂಬ ಧ್ಯೇಯದಡಿ ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ-2025 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಈ ಹಿಂದೆ ಅನೇಕ ಮೌಢ್ಯ ಮತ್ತು ಕಂದಾಚಾರಗಳಿದ್ದವು, ಈಗ ಬಹಳಷ್ಟು ಸುಧಾರಣೆಯಾಗಿವೆ. ಸಾÀಮಾಜಿಕ ಸ್ತರದಲ್ಲಿ ಮಹಿಳೆ ಸ್ವಾವಲಂಬಿಯಾಗಿ ತನ್ನ ಕುಟುಂಬವನ್ನು ಸಮರ್ಥವಾಗಿ ನಿಭಾಯಿಸುವ ದೃಷ್ಟಿಯಿಂದ ಹಲವಾರು ಯೋಜನೆಯನ್ನು ಸರ್ಕಾರ ಅನುಷ್ಟಾನ ತಂದಿದ್ದು, ಸಾಮಾಜಿಕ ಸಮಸ್ಯೆಗಳ ನಿವಾರಣೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇಂದು ಮಹಿಳೆ ಎಲ್ಲ ರಂಗಗಳಲ್ಲೂ ಮುಂದಿದ್ದು, ಅಭಿವೃದ್ಧಿಯ ಪಥದಲ್ಲಿ ಮಹಿಳೆಯರ ಪಾತ್ರ ಅಪಾರ.  ಸಮಾಜವು ಮಹಿಳೆಯರನ್ನು ಗೌರವಿಸಬೇಕು. ಮಹಿಳಾÀ ಸಾಧಕರನ್ನು ಸ್ಪೂರ್ತಿಯಾಗಿಟ್ಟುಕೊಂಡು ಸಾಧನೆಯ ಹಾದಿಯಲ್ಲಿ ನಡೆದು ಈ ದೇಶಕ್ಕೆ ಕೊಡುಗೆ ನೀಡಬೇಕೆಂದು ಹೇಳಿದರು.

ಮಹಿಳೆ ಆರ್ಥಿಕವಾಗಿ, ಸಾಮಾಜಿಕವಾಗಿ, ಸಾಂಸ್ಕøತಿಕವಾಗಿ ಪ್ರಗತಿ ಪಥದಲ್ಲಿ ಮುನ್ನಡೆಯಲೂ ಪ್ರಸಕ್ತ ಸರ್ಕಾರ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಮಹಿಳೆ ಶಿಕ್ಷಣ ಪಡೆಯುವ ಮೂಲಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಇಡಬೇಕು ಎಂದು ಅವರು ಹೇಳಿದರು.

ಮಹಿಳೆಯರೊಂದಿಗೆ ನೇರ ಸಂಪರ್ಕದಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಹಿಳಾ ಸಹಾಯಕಿಯರ ಹುದ್ದೆ ಅತ್ಯಂತ ಜವಾಬ್ದಾರಿಯುತವಾಗಿದೆ. ಜಿಲ್ಲೆಯಲ್ಲಿ 1260 ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ತಿಳಿಸಿದ ಅವರು, ಮಹಿಳೆಯರು ಜಿಲ್ಲೆಯಲ್ಲಿ ಸ್ತ್ರೀ ಶಕ್ತಿ ಮತ್ತು ಸ್ವಸಹಾಯ ಸಂಘಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಅವರು ಹೇಳಿದರು.

ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಮಾತನಾಡಿ, ಮಹಿಳೆ ಈ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ತಾಯಿಯ ತ್ಯಾಗ ಜಗತ್ತಿನ ಎಲ್ಲ ಪ್ರಶಸ್ತಿಗಳಿಗೂ ಮಿಗಿಲಾಗಿದೆ ಮಹಿಳೆ ಸ್ವಾವಲಂಬಿ ಜೀವನ ನಡೆಸುವಂತಾಗಬೇಕು. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವುದು ಅತ್ಯವಶ್ಯಕವಾಗಿದ್ದು,  ಅಂಗನವಾಡಿಗಳ ಮೂಲಕ ಮಕ್ಕಳಿಗೆ ಶಿಕ್ಷಣ ದೊರಕಿಸುವ ಇಲಾಖೆ ಕಾರ್ಯವಾಗಿದ್ದು,  ನಾಡಿನ, ನಾಳಿನ ಭವಿಷ್ಯ ಮಕ್ಕಳ ಸೇವೆ ಮಾಡುವ ಅವಕಾಶ ದೊರಕಿದೆ. ಜಿಲ್ಲೆಯ ಎಲ್ಲ ಅಂಗನವಾಡಿಗಳ ಶ್ರೇಯೋಭಿವೃದ್ದಿಗಾಗಿ ಶ್ರಮಿಸಲಾಗುವುದು ಎಂದು ಅವರು ಹೇಳಿದರು.  

ಉಪನ್ಯಾಸ ನೀಡಿದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಅಹಲ್ಯಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನದ ಮುಖ್ಯಸ್ಥರು ಹಾಗೂ ನಿರ್ದೇಶಕರಾದ ಪ್ರೊ. ಲಕ್ಷ್ಮೀದೇವಿ ವೈ. ಅವರು ಮಾತನಾಡಿ, ಮಹಿಳೆಯರನ್ನು ಜೀವ ಪರ ವ್ಯಕ್ತಿಯಾಗಿ ಪರಿಗಣಿಸಬೇಕು. ಆರ್ಥಿಕತೆಗೆ ಮಹಿಳೆಯರ ಕೊಡುಗೆ ಬಹಳಷ್ಟಿದೆ. ಕುಟುಂಬದಲ್ಲಿ ಮಹಿಳೆಯನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯ ಆರ್ಥಿಕ ಸಾಮಾಜಿಕ ಸಾಧನೆ ಕುರಿತು ನೆನಪಿಸುವುದಕ್ಕಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ, ಮಹಿಳಾ ದೌರ್ಜನ್ಯ ಕಾಯ್ದೆ, ಪೋಕ್ಸೊ ಕಾಯ್ದೆ, ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.                  ಅದರಲ್ಲಿ ಉದ್ಯೋಗಿನಿ, ಸ್ತ್ರೀ ಶಕ್ತಿ, ಚೇತನಾ ಯೋಜನೆ, ಧನಶ್ರೀ ಯೋಜನೆ, ಮಾಜಿ ದೇವದಾಸಿಯರಿಗೆ ಮಾಸಿಕ ಪಿಂಚಣಿ ಯೋಜನೆ, ವಸತಿ ಯೋಜನೆ ಸಹ ಇಲಾಖೆಯಿಂದ ಕೊಡಮಾಡಲಾಗುತ್ತದೆ. ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ ಯೋಜನೆ, ಮಹಿಳೆಯರ ಸುರಕ್ಷತೆಗಾಗಿ ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ಸಹಾಯವಾಣಿ, ಮಹಿಳಾ ಸಾಂತ್ವಾನ ಕೇಂದ್ರಗಳು, ಮಹಿಳೆಯರ ಸಹಾಯವಾಣಿ, ಗರ್ಭಿಣಿ ಮಹಿಳೆಯರಿಗೆ ಬಾಣÀಂತಿಯರಿಗೆ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ಹಾಗೂ ಆರೋಗ್ಯ ತಪಾಸಣೆ ಸೇರಿದಂತೆ ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ ಜಿಲ್ಲೆಯಲ್ಲಿ 4,850 ಸ್ವ-ಸಹಾಯ ಸಂಘಗಳನ್ನು ಸ್ಥಾಪಿಸಿ, 70 ಸಾವಿರ ಮಹಿಳೆಯರು ಈ ಸಂಘದಲ್ಲಿ ಸದಸ್ಯತ್ವ ಪಡೆದಿರುತ್ತಾರೆ. ಮಹಿಳೆಯರ ಆರ್ಥಿಕ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಶಿಶು ಅಭಿವೃದ್ದಿ ಅಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕರು. ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು. 

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದವರಿಗೆ ಸನ್ಮಾನಿಸಲಾಯಿತು. ವಿವಿಧ ಆಟೋಟ ಹಾಗೂ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಲಾಯಿತು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಾಲಮಿತಿಯೊಳಗೆ ಇತ್ಯರ್ಥಕ್ಕೆ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ವಿಜಯಪುರ : ದೌಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತರ ಮನೆಗಳಿಗೆ ಭೇಟಿ ಮಾಡಿ, ಮಾಹಿತಿ ಕ್ರೋಡೀಕರಿಸಿ, ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕಟ್ಟುನಿಟ್ಟಿನ  ಸೂಚನೆ ನೀಡಿದರು. 

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು,  ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಅತ್ಯಂತ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ದೌರ್ಜನ್ಯ ಪ್ರಕರಣಗಳನ್ನು  ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ  ಧನವನ್ನು ಆದ್ಯತೆ ಮೇಲೆ ಸಂತ್ರಸ್ತರಿಗೆ ಬಿಡುಗಡೆ ಮಾಡಲು ಕ್ರಮ ವಹಿಸಬೇಕು. ನಿಯಮಾನುಸಾರ ಹಾಗೂ ಪ್ರಕರಣಾನುಸಾರ ಕಾಲಮಿತಿಯೊಳಗೆ ಪರಿಹಾರ ಧನ ಒದಗಿಸಬೇಕು. ಯಾವುದೇ ಬಾಕಿ ಉಳಿಸಿಕೊಳ್ಳದಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಜಿಲ್ಲೆಯ ವಿವಿಧ ನಿಗಮಗಳು ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳ ಮಾಹಿತಿಯನ್ನು ಇಂದೀಕರಣ ಮಾಡಿ, ಆದ್ಯತೆಯ ಮೇಲೆ ಅನುಪಾಲನಾ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. 

ಪರಿಶಿಷ್ಟ ಜಾತಿ ಕಾಲೋನಿ ಸೇರಿದಂತೆ ಎಲ್ಲ ಕಡೆ  ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗದ ಆರ್ಥಿಕ ಮಟ್ಟ ಸುಧಾರಿಸಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕಾರ್ಯನಿರ್ವಹಿಸಿ ಈ ಜನಾಂಗದ ಶ್ರೇಯೋಭಿವೃದ್ದಿಗಾಗಿ ಜಾರಿಗೊಳಿಸಲಾದ ಯೋಜನೆಗಳ ಲಾಭ ದೊರಕಿಸಲು ಕ್ರಮ ವಹಿಸಬೇಕು. ಎಲ್ಲ ಇಲಾಖೆಗಳಲ್ಲಿ ಎಸ್‍ಸಿಪಿ-ಟಿಎಸ್‍ಪಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವ ಮೂಲಕ ಅರ್ಹರಿಗೆ ಲಾಭ ದೊರಕಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು,  ಬ್ಯಾಂಕಿನ ಮೂಲಕ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದಾಗ ಅರ್ಹರಿಗೆ  ಸಾಲ-ಸೌಲಭ್ಯ ಒದಗಿಸಲು ಸೂಚನೆ ನೀಡಿದರು. 

ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವ,ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ನಿರ್ಮಾಣಕ್ಕಾಗಿ ಜಾಗ ಒದಗಿಸುವ,ಸಮುದಾಯ ಭವನ ಕಾಮಗಾರಿ, ಎಸ್ ಸಿಪಿ ಹಾಗೂ ಟಿಎಸ್ಪಿ ಅನುದಾನ ಸಮರ್ಪಕ ಬಳಕೆಗೆ, ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಚರಂಡಿಗಳ ಸ್ವಚ್ಛತೆ, ಅಂಗನವಾಡಿಯಲ್ಲಿ ನೇಮಕಾತಿ, ರಸ್ತೆ ಅತಿಕ್ರಮಣ ತೆರವು,  ಪರಿಶಿಷ್ಟ ಜಾತಿ, ಪಂಗಡದ ನೌಕರರ ಮುಂಬಡ್ತಿ, ಭೂ ಒಡೆತನ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಸಭೆಯ ಗಮನಕ್ಕೆ ತಂದಾಗ ಈ ಕುರಿತು ಜಿಲ್ಲಾಧಿಕಾರಿಗಳು, ಈಗಾಗಲೇ ಸದಸ್ಯರು ಎತ್ತಿರುವ ಸಮಸ್ಯೆಗಳನ್ನು  ಇತ್ಯರ್ಥಗೊಳಿಸಲಾಗಿದ್ದು, ಬಾಕಿ ಇರುವ ಸಮಸ್ಯೆಗಳಿಗೆ ಅತ್ಯಂತ ತ್ವರಿತವಾಗಿ ಪರಿಹರಿಸಿ ಇತ್ಯರ್ಥಪಡಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಎಸ್ಸಿ-ಎಸ್ಟಿ ಕಾಯ್ದೆ ಹಾಗೂ ಪೋಕ್ಸೊ (ಎಸ್ಸಿ-ಎಸ್ಟಿ) ಕಾಯ್ದೆಯಡಿ ಜಿಲ್ಲೆಯಲ್ಲಿ ಕಳೆದ 2024 ರಿಂದ ಫೆಬ್ರವರಿ-2025ರವರೆಗೆ ದಾಖಲಾದ 265 ಪ್ರಕರಣಗಳ ಪೈಕಿ 1 ಪ್ರಕರಣದಲ್ಲಿ ಶಿಕ್ಷೆಯಾಗಿದ್ದು, 34 ಪ್ರಕರಣಗಳನ್ನು ಬಿಡುಗಡೆಗೊಳಿಸಿದ್ದು, 37 ಪ್ರಕರಣಗಳು ವಿಲೇವಾರಿ ಮಾಡಲಾಗಿದೆ.  ತಿಂಗಳ ಅಂತ್ಯದಲ್ಲಿ ಒಟ್ಟು 229 ಪ್ರಕರಣಗಳು ಬಾಕಿ ಉಳಿದಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಂiÀÀುಕುಮಾರ ಅಜೂರ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಘೋಣಸಗಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾ ಶ್ರೀಮತಿ ಎಲ್.ರೂಪಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕÀ ಪುಂಡಲಿಕ ಮಾನವರ, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರುಗಳಾದ ಅಭಿμÉೀಕ ಚಕ್ರವರ್ತಿ, ಮದನಕುಮಾರ ನಾಗರದಿನ್ನಿ, ನಿರ್ಮಲಾ ಹೊಸಮನಿ, ಸಿದ್ದು ರಾಯಣ್ಣವರ, ಬಂದಗಿ ಸಿದ್ದಪ್ಪ ಗಸ್ತಿ, ಯಮನಪ್ಪ ಸಿದರಡ್ಡಿ, ಮಹಾಂತೇಶ ಸಾಸಬಾಳ, ಮಲ್ಲು ತಳವಾರ, ರಾಜಶೇಖರ ಚೌರ, ನಾನು ಸೋಮು ಲಮಾಣಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.