ರಂಗಭೂಮಿ ಇಂದಿಗೂ ತನ್ನ ಗತÀ ವೈಭವವನ್ನು ಕಾಪಾಡಿಕೊಂಡು ಕಲೆ, ನೃತ್ಯ, ಸಾಹಿತ್ಯದ ಹೊನಲನ್ನು ಪ್ರತಿಬಿಂಬಿಸುತ್ತಿದೆ.
ಕಲಿಕೆ, ದುಡಿಮೆ, ಗಳಿಕೆ, ಕೆಲಸದ ಒತ್ತಡ, ಸಂಬಂಧಗಳ ಹಿತದ ಜವಾಬ್ದಾರಿ ಹೀಗೆ ಹತ್ತು ಹಲವು ದಿನ ನಿತ್ಯಗಳ ಜಂಜಾಟದಲ್ಲಿ ಮನರಂಜನೆ ಎಂಬ ಅಸ್ತ್ರ ಮನಸ್ಸು, ಮಸ್ತಕಕ್ಕೆ ವಿಶ್ರಾಂತಿ ನೀಡುತ್ತದೆ. ಹಾಡು ಆಲಿಸುವುದು, ಕಥೆ, ಕಾದಂಬರಿ ಓದುವುದು, ಆಟವಾಡುವುದು, ಪ್ರವಾಸ ಹೋಗುವುದು, ಸ್ಪೋಟ್ರ್ಸ್ರ, ಸಿನಿಮಾ, ರೀಲ್ಸ್ ವೀಕ್ಷಣೆಗಳಂತಹ ಮನರಂಜನೆಗಳು ಒತ್ತಡ ತಗ್ಗಿಸಿ ದಿನ ನಿತ್ಯ ಜಂಜಾಟದೊಂದಿಗೆ ಮನಸ್ಸಿಗೆ ಮದ ನೀಡಿ ಜೀವನದ ಬಂಡಿ ಮುನ್ನಡೆಸುವ ಅಡಿಪಾಯವಾಗಿವೆ.
ಸೋಟ್ರ್ಸ್, ರೀಲ್ಸ್, ಸಿನಿಮಾದಂತಹ ತಂತ್ರಜ್ಞಾನ ಮಾಧ್ಯಮಗಳು ಅವಿಷ್ಕಾರ ಗೊಳ್ಳುವ ಮುನ್ನ ಮನರಂಜನೆಗಾಗಿ ರಂಗಭೂಮಿ, ವೃತ್ತಿಗಾಗಿ ರಂಗಭೂಮಿ ಎಂದು ಈ ರಂಗ ಪರದೆಯೂ ಜನರನ್ನು ಸೆಳೆಯುತ್ತಿತ್ತು.
ರಾಮಾಯಣ, ಮಹಾಭಾರತ, ಸತ್ಯ ಹರಿಶ್ಚಂದ್ರ, ಸಮಾಜದಲ್ಲಿನ ದೌರ್ಜನ್ಯ, ತೊಡಕುಗಳಂತಹ ಸಾಂಸ್ಕøತಿ ಹಾಗೂ ಸಾಮಾಜಿಕ ನಾಟಕಗಳಲ್ಲಿ ಸಿದ್ದಿಸಾಧಿಸಿ ಕಲಾವಿದರು ರಂಗಭೂಮಿಯಲ್ಲಿ ಪ್ರದರ್ಶನ ನೀಡುತ್ತಾ ಮನುರಂಜನೆಯೊಂದಿಗೆ ಸಂದೇಶಗಳ ಬುತ್ತಿಯನ್ನು ತಲೆಯಲ್ಲಿ ಮೆತ್ತಿ ಜಾಗೃತಿ ಮೂಡಿಸುವ ಕಾರ್ಯ ನಡೆಸಲು ಸಹಕಾರಿಯಾಗುತ್ತಿದ್ದವು.
ರಂಗ ಪರದೆಯ ಮೇಲೆ ವೇಷ ತೊಟ್ಟು ನಟಿಸುವ ಕಲಾವಿದರ ಹಾವಭಾವ ನಟನೆ ಎದುರಿಗಿದ್ದ ವಿಕ್ಷಕರ ಗಮನ ಬೇರೆಲ್ಲೂ ಜಾರದೆ ಮಂತ್ರಮುಗ್ದರನ್ನಾಗಿ ಕೂರಿಸಿದರೇ ಅವರ ಉಡುಗೆ-ತೊಡುಗೆಗಳು, ಹಿನ್ನಲೇ ಧ್ವನಿ ಆ ನಾಟಕಕ್ಕೆ ಜೀವಕಳೆ ತುಂಬುತ್ತಿತ್ತು.
ನಟನೆಯ ಹವ್ಯಾಸದಿಂದಲೋ, ಬದುಕು ಕಟ್ಟಿಕೊಳ್ಳಲು ಇದನ್ನೇ ವೃತ್ತಿಯನ್ನಾಗಿ ಮಾಡಿಕೊಂಡು ರಂಗಭೂಮಿ ಪ್ರವೇಶಿಸಿದ್ದ ಅದೆμÉ್ಟೂೀ ಕಲಾವಿದರು ತಮ್ಮ ನಟನಾ ಚಾತುರ್ಯದಿಂದ /ಪ್ರತಿಭೆಯಿಂದ ಪ್ರಖ್ಯಾತಿ ಗಳಿಸಿ, ಸಾಧನೆಗೆ ಪ್ರತಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ.
ಸಿನಿಮಾ ಎಂಬ ಜಗಮಗಿಸುವ ಲೋಕಕ್ಕೆ ಕಾಲಿಟ್ಟಾಗ ರಂಗಭೂಮಿ ಕೊಂಡಿ ಕಳಚದೇ ಜನಮನದಲ್ಲಿ ತನ್ನದೇ ಒಂದು ಛಾಪು ಮೂಡಿಸಿ ಈಗಲ್ಲೂ ಪ್ರಸ್ತುತದಲ್ಲಿದೆ. ಇದಕ್ಕೆ ಕಾರಣ ನೋಡುಗರ ಹವ್ಯಾಸ ಮತ್ತು ಕಲಾವಿದರ ಆಸಕ್ತಿ ಇದರೊಂದಿಗೆ ಯುವ ಪೀಳಿಗೆಗೆ ರಂಗಭೂಮಿಯ ಬಗ್ಗೆ ಪರಿಚಯಿಸಲು ಪ್ರತಿ ವರ್ಷ ವಿಶ್ವಾದ್ಯಂತ ರಂಗಭೂಮಿ ದಿನ ಆಚರಿಸಲಾಗುತ್ತಿದೆ.
ಪ್ರತಿ ವರ್ಷ ಮಾರ್ಚ್ 27ರಂದು ವಿಶ್ವ ರಂಗಭೂಮಿ ದಿನಾಚರಣೆಯನ್ನು ವಿಶ್ವಾದ್ಯಂತ ಭಾಷೆ ಭೇದ, ಲಿಂಗ ಭೇದ ಆಚರಣೆ ಮಾಡುತ್ತಾ.. ರಂಗಭೂಮಮಿಯ ರಂಗು ಮಾಸದೇ ಜೀವಂತ ಉಳಿವಿಗೆ ಕಾರಣೀಕರ್ತವಾಗಿದೆ.
ಅμÉ್ಟೀ ಅಲ್ಲದೆ ಸಿನಿಮಾ ಎಂಟ್ರಿ ಕೊಡುವ ಮುನ್ನ ಅನೇಕ ನಟ-ನಟಿಯರು ನಟನೆಯ ಸೊಬಗನ್ನು ಹೊಂದಲು ರಂಗಭೂಮಿಯನ್ನು ಮೊದಲು ಆದ್ಯತೆ ನೀಡಿರುವುದನ್ನು ನಾವು ಗಮನಿಸಬಹುದು.
ಸಿನಿಮಾ ಕಲಾವಿದರೊಂದಿಗೆ ರಂಗಭೂಮಿ ನಂಟು: ಶಾರುಕ್ ಖಾನ್, ಗಿರೀಶ್ ಕಾರ್ನಾಡ್, ಓಂ ಪುರಿ, ಪ್ರಕಾಶ ರಾಜ್, ಬೊಮನ್ ಇರಾನಿ, ಡಾ.ರಾಜಕುಮಾರ, ಶಬಾನಾ ಆಜ್ಮಿ, ಶಂಕರ ನಾಗ್, ಗುಬ್ಬಿ ವೀರಣ್ಣ, ಮಂಡ್ಯ ರಮೇಶ ಸಂಚಾರಿ ವಿಜಯರಂತಹ ಘಟಾನುಘಟಿ ಧಿಗ್ಗಜರು ರಂಗಭೂಮಿಯಲ್ಲಿ ನಟಿಸಿ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದವರು.
ಹಿನ್ನಲೇ: ಅಂತರಾಷ್ಟ್ರೀಯ ರಂಗಭೂಮಿ ಸಂಸ್ಥೆಯೂ 1962ರಿಂದ ವಿಶ್ವ ರಂಗಭೂಮಿ ದಿನಾಚರಣೆಯನ್ನು ಮಾರ್ಚ್ 27ರಂದು ಆಚರಿಸಲು ಪ್ರಾರಂಭಿಸಿತು. ಇದರ ಬೆನ್ನಲೇ ಪ್ರತಿ ವರ್ಷ ರಂಗಭೂಮಿ ಮತ್ತು ಶಾಂತಿಯ ಸಂಸ್ಕøತಿ ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ರಂಗಭೂಮಿ ದಿನಾಚರಣೆಯನ್ನು ಆಚರಿಸಲಾಗುವುದು.
ಯಾವುದೇ ಕಟ್, ಎಡಿಟ್ ಇಲ್ಲದೇ ಒಂದೇ ಶಾಟ್ ನಲ್ಲಿ ಸ್ಕೀನ್ ಪ್ಲೆ ಮಾಡಿ ತಮ್ಮ ನಟನಾ ಕಲೆಯಿಂದ ವೀಕ್ಷಕರ ಮನಮುಟ್ಟುವಂತೆ ವಿಷಯ ಹೂರಣವನ್ನು ಉಣಬಡಿಸುವ ರಂಗಭೂಮಿ ಕಲಾವಿದರ ನಟನೆ ಯಾವ ಆಧುನಿಕ ತಂತ್ರಜ್ಞಾನ ಗಳಿಂದ ಮಾಸದೆ ನಿತ್ಯ ನೂತನವಾಗಿರಲಿ ಎಂಬುದೆ ನಮ್ಮ ಆಶಯ.
- ವಿದ್ಯಾಶ್ರೀ ಹೊಸಮನಿ
ಪ್ರಶಿಕ್ಷಣಾರ್ಥಿ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ವಿಜಯಪುರ


