ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ: "ಮನುಷ್ಯ ಸಂಬಂಧಗಳ ಹುಡುಕಾಟವೇ ಸಾಂಸ್ಕೃತಿಕ ಆಂದೋಲನವಾಗಬೇಕು. ಮನುಷ್ಯತ್ವ ಇರದ ಕಲೆ, ಸಾಹಿತ್ಯ, ಸಂಸ್ಕೃತಿ ಉತ್ಸವಗಳಿಗೆ ಅರ್ಥವಿಲ್ಲ. ದೇಶವೆಂದರೆ ಬರಿ ಮಣ್ಣಲ್ಲ, ಕುರ್ಚಿಯಲ್ಲ ಮನುಷ್ಯರು. ನಾವು ಜಾತಿ-ಧರ್ಮಗಳ ಮಧ್ಯವರ್ತಿಗಳಾಗದೇ ಸತ್ಯದ ಮಧ್ಯವರ್ತಿಗಳಾಗಬೇಕು." ಎಂದು ಜಾಜಿ ಮಲ್ಲಿಗೆ ಕವಿ ಡಾ. ಸತ್ಯಾನಂದ ಪಾತ್ರೋಟ ಅಭಿಪ್ರಾಯಪಟ್ಟರು.
ಆವಿಷ್ಕಾರ, ಎಐಡಿಎಸ್ಓ, ಎಐಡಿವೈಓ ಹಾಗೂ ಎಐಎಮ್ಎಸ್ಎಸ್ ಸಂಘಟನೆಗಳ ನೇತೃತ್ವದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ 14ನೇ ವಿಜಯಪುರ ಸಾಂಸ್ಕೃತಿಕ ಜನೋತ್ಸವ'ದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಮುಂದುವರೆದು ಹೇಳಿದ ಅವರು "ನಮ್ಮ ಮಧ್ಯ ಬರೆಯದ ಬರಹಗಾರರಿದ್ದಾರೆ. ಹಾಡದ ಹಾಡುಗಾರರಿದ್ದಾರೆ. ನರ್ತಿಸದ ನರ್ತಕಿಯರಿದ್ದಾರೆ. ಅಂತಹವರ ಬಗ್ಗೆ ನಾವು ಹಾಡಬೇಕು. ಬರೆಯಬೇಕು. ಇಂದು ಮುಖಂಡರು, ಅಧಿಕಾರಿಗಳು ಬ್ರಷ್ಟರಾಗುವ ಜೊತೆಗೆ ಲೇಖನ ಸಹ ಬ್ರಷ್ಟವಾಗಿದೆ. ಹೀಗಾದರೆ ರಕ್ಷಣೆ ಎಲ್ಲಿ. ನಮ್ಮನ್ನು ನಾವು ಕಂಡು ಕೊಳ್ಳುವುದೇ ಇದಕ್ಕೆ ಪರಿಹಾರ. ತನ್ನ ಸಮುದಾಯವನ್ನೂ ಮೀರಿ ಜನಸಾಮಾನ್ಯರಿಗೆ ನಾಯಕರಾದ ಜ್ಯೋತಿಬಾ ಫುಲೆಯವರಂತಹವರು ನಮಗೆ ಆದರ್ಶವಾಗಬೇಕು" ಎಂದು ಹೇಳಿದರು.
ಅತಿಥಿಗಳಾಗಿ ಆಗಮಿಸಿದ್ದ ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಕಾ. ಕೆ. ಸೋಮಶೇಖರ ಅವರು ಮಾತನಾಡಿ, "ಮೂಲ ಸೌಲಭ್ಯ, ವಿಜ್ಞಾನಗಳ ಅಭಿವೃದ್ಧಿಗಿಂತ ನೀತಿ, ಸಂಸ್ಕೃತಿ, ಮೌಲ್ಯಗಳ ಅಭಿವೃದ್ಧಿ ನಿಜವಾದ ಅಭಿವೃದ್ಧಿ, ಇಂದಿನ ಸಮಾಜದ ಪ್ರಗತಿಗೆ ಪೂರಕವಾದದನ್ನು ಮಾತ್ರ ನಾವು ಇತಿಹಾಸದಿಂದ ಅನುಸರಿಸಬೇಕು. ಹೊರತು ಜನರನ್ನು ಓಡೆದು ಆಳುವ ಇತಿಹಾಸ, ಸಂಸ್ಕೃತಿಯನ್ನು ಇತಿಹಾಸದಲ್ಲಿ ಇದ್ದರೂ ಅದನ್ನು ಅನುಸರಿಸಬಾರದು" ಎಂದು ಹೇಳಿದರು.
ರಂಗಮಂದಿರದ ಆವರಣದಲ್ಲಿಯ ಸೂಕ್ತಿ ಹಾಗೂ ಛಾಯಾಚಿತ್ರ ಪ್ರದರ್ಶನವನ್ನು ಸಾಹಿತಿಗಳಾದ ಶ್ರೀ ಮನು ಪತ್ತಾರ ಅವರು ಉದ್ಘಾಟಿಸಿದರು.
ಎಐಡಿಎಸ್ಓನ ಜಿಲ್ಲಾ ಕಾರ್ಯದರ್ಶಿಗಳಾದ ಕಾವೇರಿ ರಜಪೂತರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಐಎಮ್ಎಸ್ಎಸ್ನ ಜಿಲ್ಲಾಧ್ಯಕ್ಷರಾದ ಗೀತಾ ಎಚ್. ಹಾಗೂ ಆವಿಷ್ಕಾರದ ಮುಖಂಡರಾದ ಶ್ರೀ ಅಶೋಕ ದೇಸಾಯಿ ಅವರು ಉಪಸ್ಥಿತರಿದ್ದರು. ಹಾಗೂ ಎ.ಐ.ಡಿ.ವೈ.ಓ. ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಸಿದ್ಧಲಿಂಗ ಬಾಗೇವಾಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಂತರ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮಗಳಾದ ವಿಜಯಪುರದ ವಿದೂಷಿ ಲಕ್ಷ್ಮೀ ತೇರದಾಳಮಠ ಅವರ ನಾಟ್ಯಕಲಾ ಡಾನ್ಸ್ ಕ್ಲಾಸ್ನವರ ನೃತ್ಯ ರೂಪಕ, ಧಾರವಾಡ ಆಕಾಶವಾಣಿಯ ಬಿ ಹೈಗ್ರೇಡ್ ಕಲಾವಿದೆ ಕುಮಾರಿ ಕೃತಿಕಾ ವಿ ಜಂಗಿನಮಠ ಅವರ ಕೊಳಲು ವಾದನ, ಹಾಗೂ ವಿಜಯಪುರದ ಸ್ವಯಂಭೋ ಆರ್ಟ್ ಫೌಂಡೇಶನ್ನ
ನಟಿ ಹಾಗೂ ಭರತನಾಟ್ಯ ಕಲಾವಿದೆ ವಿದೂಷಿ ದೀಕ್ಷಾ ಭೀಸೆ ಹಾಗೂ ದಿವ್ಯಾ ಭೀಸೆ ಮತ್ತು ತಂಡದವರ ನೃತ್ಯ ಪ್ರದರ್ಶನ ಗಳು ಜನರ ಮನ ಸೆಳೆದವು.
ಹಾಗೂ ಬಾದಲ್ ಸರ್ಕಾರರವರು ರಚಿಸಿದ. ರಾಜೇಂದ್ರ ಕಾರಂತ್ ಅವರು ಕನ್ನಡಕ್ಕೆ ರೂಪಾಂತರಿಸಿದ ನಾಟಕ 'ಮೋಜಿನ ಸೀಮೆಯಾಚೆ ಒಂದೂರು' ಒಂದು ಸುಂದರ ವ್ಯವಸ್ಥೆಯ ಬಗ್ಗೆ ಬೆಳಕು ಚೆಲ್ಲಿತು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



