Monday, April 28, 2025

ಏ.29 ಹಾಗೂ 30 ರವರೆಗೆ ಹೊನಗನಹಳ್ಳಿಯಲ್ಲಿ ಜಾತ್ರೆ

ವಿಜಯಪುರ: ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಸಂಗಣ್ಣ ಅಜ್ಜನವರು ನಿರ್ಮಿಸಿದ ಬ್ರಹ್ಮಾನಂದ ಆಶ್ರಮದ ವೀರಭದ್ರೇಶ್ವರ, ಕಾಳಿಕಾದೇವಿ ಹಾಗೂ ಬಸವೇಶ್ವರ ದೇವಸ್ಥಾನದ ಜಾತ್ರೆ ಈಗಾಗಲೇ ಆರಂಭಗೊಂಡಿದ್ದು, ಎ. 30ರ ವರೆಗೆ ನಡೆಯಲಿದೆ. ನಿತ್ಯ ಸಂಜೆ 7ಕ್ಕೆ ಮಾದೇವ ಶಾಸ್ತ್ರಿಗಳಿಂದ ಶ್ರೀಗುರು ವಚನದಿಂದ ಅಧಿಕ ಸುಧೆಯುಂಟೆ ಪ್ರವಚನ ನಡೆಯಲಿದ್ದು, ನಂತರ ಪ್ರಸಾದ ವಿತರಣೆ ಜರುಗಲಿದೆ. ಏ. 29 ರಂದು ಸಂಗಣ್ಣಜ್ಜ ಮತ್ತು ಶಾರದಾ ಅವರ 50ನೇ ವರ್ಷದ ವಿವಾಹ ವಾರ್ಷಿಕೋತ್ಸವದಂಗವಾಗಿ ಮರು ವಿವಾಹ ಕಾರ್ಯಕ್ರಮ ನಡೆಯಲಿದೆ. ಹಿರೇಆಸಂಗಿಯ ಅಭಿನವ ಅಖಂಡೇಶ್ವರ ಮುತ್ಯಾನವರು ಅಧ್ಯಕ್ಷತೆ ವಹಿಸುವರು. ಬಾಡಗಿ ಹಿರೇಮಠದ ಬುಕ್ಕಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬಾಡಗಿಯ ಶಿವಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಕಾಖಂಡಕಿಯ ಕಾಶಿನಾಥ ಗುರುಗಳು ಹಾಗೂ ಆಹೇರಿ-ಶಿವಣಗಿ ಯಲ್ಲಾಲಿಂಗ ಆಶ್ರಮದ ಸಂಜು ಮಹಾರಾಜರು ಉಪಸ್ಥಿತಿ ಮತ್ತು ಸ್ಥಳೀಯ ಚಂದ್ರಶೇಖರಯ್ಯ ಮಠಪತಿ ಹಾಗೂ ಎಸ್.ಡಿ. ಕುಮಾನಿ ಜ್ಯೋತಿ ಬೆಳಗಿಸಲಿದ್ದಾರೆ. ಏ. 30 ರಂದು ಬೆಳಗ್ಗೆ 6ಕ್ಕೆ ರುದ್ರಾಭಿಷೇಕ, 8ಕ್ಕೆ ಕುಂಭಮೇಳ, ಪಲ್ಲಕ್ಕಿ ಉತ್ಸವ, ಗೋ ಪೂಜೆ, ಎತ್ತುಗಳ ಮೆರವಣಿಗೆ ಪುರವಂತರ ಸೇವೆಯೊಂದಿಗೆ ಗಂಗಸ್ಥಳ ನೆರವೇರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮರಳಿ ಆಶ್ರಮಕ್ಕೆ ಬರಲಿದೆ. ಮಧ್ಯಾಹ್ನ 2ಕ್ಕೆ ಅನ್ನಸಂತರ್ಪಣೆ, ಸಂಜೆ 4ಕ್ಕೆ ಪ್ರವಚನ, ಆಶೀರ್ವಚನ ಹಾಗೂ ಮಹಾಮಂಗಳಾರತಿ ಮತ್ತು ರಾತ್ರಿ 10ಕ್ಕೆ ಭಜನೆ ನಡೆಯಲಿದೆ ಎಂದು ಆಶ್ರಮದ ಸಮಿತಿ ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



ಯತ್ನಾಳ ವಿರುದ್ಧ ಒಮ್ಮೆ ಸ್ಪರ್ಧಿಸುವ ಇರಾದೆ ಇದೆ : ಸಚಿವ ಶಿವಾನಂದ ಪಾಟೀಲ

ವಿಜಯಪುರ : ಕೆಲ ದಿನಗಳ ಹಿಂದೆ ಅಣ್ಣ ಬಸವಣ್ಣನವರ ಕುರಿತು ಅಪಮಾನಕರ ರೀತಿ ಮಾತನಾಡಿದ್ದ ಹುಚ್ಚು ಮನಸ್ಥಿತಿಯ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಇದೀಗ ಇಸ್ಲಾಂ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಪ್ರವಾದಿ ಮಹಮ್ಮದ್ ಪೈಗಂಭರ ಕುರಿತು  ಅವಮಾನಕರ ಮಾತನಾಡಿದ್ದಾರೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶ್ರೀ ಶಿವಾನಂದ ಪಾಟೀಲ ಅವರು ವಾಗ್ದಾಳಿ ನಡೆಸಿದರು.

ಸೋಮವಾರ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ  ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಜಂಟಿ ಆಕ್ಷನ್‌ ಕಮಿಟಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಸಚಿವರು, ನಗರದ ಜನತೆ ನೀಡಿರುವ ಅಧಿಕಾರವನ್ನು ಸದ್ಬಳಕೆ ಮಾಡಿಕೊಳ್ಳದೆ ಸಮಾಜದಲ್ಲಿ ಜಾತಿ ಹೆಸರಿನಲ್ಲಿ ವಿಷಬೀಜ ಬಿತ್ತುವ ಕೆಲಸ ನಡೆಸಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಜಿಲ್ಲೆಯ ಜನತೆ ಸಚಿವ : ಯತ್ನಾಳ ಅವರನ್ನು ಶಾಸಕ, ಸಂಸದ, ಕೇಂದ್ರ ಸಚಿವರನ್ನಾಗಿ ಮಾಡಿದೆ. ದೇವರು ಎಲ್ಲವನ್ನೂ ಕೊಟ್ಟರೂ ಇವರು ಹಾಳು ಮಾಡಿಕೊಂಡಿದ್ದಾರೆ. ಇಂಥ ವರ್ತನೆಯ ಕಾರಣಕ್ಕೆ ಅವರ ಪಕ್ಷದಿಂದಲೂ ಹೊರ ಹಾಕಿಸಿಕೊಂಡರೂ ಬುದ್ದ ಬಂದಿಲ್ಲ. ಸಮಾಜ ಒಡೆಯುವ ಮನಸ್ಥಿತಿಯ ಹೇಳಿಕೆ ನೀಡುತ್ತಿರುವ ಯತ್ನಾಳಗೆ ಈ ಬೃಹತ್ ಹೋರಾಟದ ಮ‌ೂಲಕ ಈ ವೇದಿಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಇನ್ನಾದರೂ ಮನುಷ್ಯತ್ವ ಇರಿಸಿಕೊಂಡು ಬದಲಾವಣೆಗೆ ದೇವರು ಬುದ್ದಿ ಕೊಡಲಿ ಎಂದರು.

 ಆಕಾಶಕ್ಕೆ ಉಗಿದರೆ ಆತನ ಮುಖಕ್ಕೇ ಬೀಳುತ್ತದೆ ಎಂಬ ಪರಿಜ್ಞಾನ ಇಲ್ಲದ ವ್ಯಕ್ತಿ ಎಂದು ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ ನಡೆಸಿದ ಸಚಿವರು,ಒಮ್ಮೆ ಆತನ ವಿರುದ್ದ ಸ್ಪರ್ಧೆ ಮಾಡಿ ಬುದ್ಧಿ ಕಲಿಸುವ ಇಚ್ಛೆ ಇದೆ ಎಂದರು.

ಯತ್ನಾಳ ವರ್ತನೆ  ಸಹಿಸದೇ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಇಡೀ ರಾಜ್ಯದ  ಜನರು ಯತ್ನಾಳಗೆ ಪಾಠ ಕಲಿಸಬೇಕಿದೆ. ಯಾವುದೇ ಪಕ್ಷದ ವ್ಯಕ್ತಿ ಇದ್ದತೂ ಯತ್ನಾಳ ರೀತಿ ಮಾತನಾಡಬಾರದು.

ಭಾರತ ನಮ್ಮ‌ ಮನೆ ನಮ್ಮನ್ನು ಕೆಡಿಸೋಕೆ ಜಾತಿ ವಿಷ ಬೀಜ ಬಿತ್ತುತ್ತಾರೆ, ಇಂಥ ವ್ಯಕ್ತಿಗಳ ಕುರಿತು ಎಚ್ಚತವಾಗಿರಬೇಕು. ಪೆಹೆಲ್ಗಾಮ್‌ ಘಟನೆಯನ್ನು ಖಂಡಿಸಿದ ಸಚಿವರು, ಜನರೆಲ್ಲರೂ ದೇಶದ ಪರವಾಗಿದ್ದಾರೆ. ಉಗ್ರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ನಮ್ಮೆಲ್ಲರ ಬೆಂಬಲ ಇದೆ ಎಂದರು.

ಮುಸ್ಲಿಂ ಧರ್ಮಗುರು ತನ್ವೀರ ಪೀರಾ, ಮನಗೂಳಿ ವಿರಕ್ತ ಮಠದ ವಿರತೀಶಾನಂದ ಶ್ರೀಗಳು, ಜೈನಾಪುರದ ಸಿದ್ಧಲಿಂಗ ಶ್ರೀಗಳು, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೊಂಡ, ಅಶೋಕ ಮನಗೂಳಿ, ವಿಜಯಾನಂದ ಕಾಶಪ್ಪನವರ, ಸುನಿಲಗೌಡ ಪಾಟೀಲ, ಮಾಜಿ ಶಾಸಕ ರಾಜು ಆಲಗೂರ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಜ್ಞಾನೋತ್ಸವದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಶ್ರದ್ಧೆ, ಬದ್ಧತೆ ಇದ್ದರೆ ಸಾಧನೆ ಸಾಧ್ಯ : ಡಾ.ಕಾಪಸೆ

ವಿಜಯಪುರ : ಶೈಕ್ಷಣಿಕ ಹಂತದಲ್ಲಿ ವಿದ್ಯಾರ್ಥಿಗಳು ಬದ್ಧತೆ, ಶ್ರದ್ಧೆಯಿಂದ ಅಧ್ಯಯನ ಮಾಡಿದಲ್ಲಿ ಭವಿಷ್ಯದಲ್ಲಿ ನಿಶ್ಚಿತ ಗುರಿ ಈಡೇರಿಸಿಕೊಳ್ಳಲು, ನಿರೀಕ್ಷಿತ ಸಾಧನೆ ಮಾಡಲು ಸಾಧ್ಯ ಎಂದು ನಗರದ ಎಸ್.ಎಸ್.ಬಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ. ಮಹೇಂದ್ರ ಕಾಪಸೆ ಅಭಿಪ್ರಾಯಪಟ್ಟರು.

ನಗರದ ಪ್ರತಿಷ್ಟಿತ ಶೈಕ್ಷಣಿಕ ಸಂಸ್ಥೆಯಾದ ಶ್ರೀಶರಣಬಸವೇಶ್ವರ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜ್ಞಾನೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,  2024-25ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿರುವ 24 ವಿದ್ಯಾರ್ಥಿಗಳು  ಮತ್ತು ಎಇಇ ಪರೀಕ್ಷೆಯಲ್ಲಿ ನಾಲ್ವರು ಸಾಧಕ ವಿದ್ಯಾರ್ಥಿಗಳು, ಸಾಧಕ ಮಕ್ಕಳ ಪೋಷಕರು, ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಅವರು, ಗುರಿ ಸಾಧಿಸುವ ಛಲ ಇದ್ದವರಿಗೆ ಅಂದುಕೊಂಡುದನ್ನು ಪಡೆಯುವುದು ಅಸಾಧ್ಯವೇನಲ್ಲ. ಆದರೆ ಇದಕ್ಕಾಗಿ ಸತತ ಪರಿಶ್ರಮ, ಬದ್ಧತೆ, ಶ್ರದ್ಧೆ ಬೇಕು ಎಂದು ಕಿವಿಮಾತು ಹೇಳಿದರು.
ಸಂಸ್ಥೆಯ ಕಾರ್ಯಕಾರಿ  ನಿರ್ದೇಶಕಿ ಸಂಪ್ರದಾ ಪಾಟೀಲ ಮಾತನಾಡಿ, ಬಲಿಷ್ಠ ಭಾರತ ನಿರ್ಮಾಣ ಮಾಡುವುದು ಪ್ರಸಕ್ತ ಸಂದರ್ಭದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿ ಇಬ್ಬರಿಂಧ ಮಾತ್ರ ಸಾಧ್ಯವಿದೆ. ಶ್ರದ್ಧೆಯ ಶಿಷ್ಯ, ಮಾದರಿ ಗುರು ಇದ್ದಲ್ಲಿ ನೈತಿಕ ಮೌಲ್ಯಗಳ, ಸುಶೀಕ್ಷಕ್ಷಿತ ಮಾನವೀಯ ಸಮಾಜ ನಿರ್ಮಾಣ ಸಾಧ್ಯ ಎಂದರು.
 ಸಂಸ್ಥೆಯ ಸಲಹಾ ಸಮಿತಿಯ ಅಧ್ಯಕ್ಷರಾದ ಎಸ್.ಕೆ.ಪಾಟೀಲ, ಫಾರ್ಮಸಿ ಕಾಲೇಜಿನ ಪ್ರಾಚಾರ್ಯರಾದ ಶಿವಕುಮಾರ ಹೂಗಾರ, ನರ್ಸಿಂಗ್ ಕಾಲೇಜಿನ ಪ್ರಾಚಾರ್ಯರಾದ ಈರಣ್ಣ ಶಿರಾಳಶೆಟ್ಟಿ ಮತ್ತು ಪಿ.ಯು.ಸಿ ಕಾಲೇಜಿ£ ಪ್ರಾಚಾರ್ಯರಾದ ಎಸ್.ಪ್ರಜ್ವಲ್ ವೇದಿಕೆ ಮೇಲೆ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಬೇಸಿಗೆಗಾಲದ ಬಾಯಾರಿಕೆ ಕಡಿಮೆಗೊಳಿಸಿದ ತುಳಸಿಗಿರೀಶ ಫೌಂಡೇಶನ್ ಮತ್ತು ಶ್ರೀ ಅಸೋಸಿಯೇಷನ್


 ವಿಜಯಪುರ: ಈ ಬಿರು ಬೇಸಿಗೆಯಲ್ಲಿ ಸೂರ್ಯನ ತಾಪಮಾನಕ್ಕೆ ಬೆವರು ಹರಿಯುತ್ತಿದೆ‌. ಬಾಯಾರಿಕೆ ಕೂಡಾ ಸಾಮಾನ್ಯವಾಗಿದೆ. ವಿಜಯಪುರ ನಗರದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಶ್ರೀ ತುಳಸಿಗಿರೀಶ ಫೌಂಡೇಶನ್ ಮತ್ತು  ಶ್ರೀ ಶಿವಾನಂದ ಕೇಲೂರ್ ಅಧ್ಯಕ್ಷರು ಶ್ರೀ ಅಸೋಸಿಯೇಷನ್ ಅವರ ಸಂಯುಕ್ತಾಶ್ರಯದಲ್ಲಿ ವಿಜಯಪುರ ನಗರದ ಪ್ರಮುಖ ಸ್ಥಳಗಳಾದ ಬಂಜಾರ ಕ್ರಾಸ್, ಗೋದಾವರಿ ಸರ್ಕಲ್, ಅಂಬೇಡ್ಕರ್ ಸರ್ಕಲ್ , ಜಡ್.ಪಿ. ಕ್ರಾಸ್ ಹಾಗೂ ಗೋಡಬೋಳೆ ಮಾಲಾದಲ್ಲಿ ಕುಡಿಯುವ ನೀರಿನ ಅರವಟಿಗೆಗಳನ್ನು ಅಳವಡಿಸಿದ್ದಾರೆ. 

ಅರವಟಿಗೆಗಳನ್ನು ಅಳವಡಿಸಿ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದ ಶ್ರೀ ತುಳಸಿಗಿರೀಶ ಫೌಂಡೇಶನ್ ಅಧ್ಯಕ್ಷರಾದ ಡಾ.ಬಾಬುರಾಜೇಂದ್ರ ನಾಯಿಕ ಮಾತನಾಡಿ ಬೇಸಿಗೆಗಾಲದಲ್ಲಿ ಆದಷ್ಟು ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಬೇಕು, ಹೆಚ್ಚು ನೀರಿನ ಅಂಶ ಇರುವ ತರಕಾರಿ ಹಣ್ಣು ತಿನ್ನಬೇಕು, ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಇವತ್ತು ಈ ನೀರಿನ ಅರವಟಿಗೆಗಳನ್ನು ಅಳವಡಿಸಿದ್ದೇವೆ ಮತ್ತು ಅವುಗಳನ್ನು ನಿರ್ವಹಿಸುತ್ತೇವೆ ಎಂದರು. 

ಈ ಸಂದರ್ಭದಲ್ಲಿ ಲೋಕಾಯುಕ್ತ ಸಿ.ಪಿ.ಐಗಳಾದ ಆನಂದ ಠಕ್ಕಣ್ಣವರ ಅರವಟಿ ಸ್ಥಾಪಿಸಿದ್ದನ್ನು ಶ್ಲಾಘಿಸಿ ಜನರು ನೀರಿನ ಮಹತ್ವ ಅರಿತು ಉಪಯೋಗಿಸಬೇಕು ಎಂದರು.ಇದೆ ಸಂದರ್ಭದಲ್ಲಿ ಫೌಂಡೇಶನ್ ಸದಸ್ಯರಾದ ಅಪ್ಪು ರಾಠೋಡ್, ಸಂಜು ಪವಾರ, ನಿವೃತ್ತ ಪಿ.ಡಬ್ಲೂ.ಡಿ ಇಂಜಿನಿಯರ್ ನಾಮದೇವ ರಾಠೋಡ್, ರವಿ ರಾಠೋಡ್, ರಾಕೇಶ ರಜಪೂತ, ಸುನೀಲ್ ರಾಠೋಡ್, ಅನಿಲ ಶಿಂಧೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



ರಾಷ್ಟ್ರ ಕವಿ ಕುವೆಂಪು ರಚಿಸಿದ ಸಾಹಿತ್ಯ ಸರ್ವಶ್ರೇಷ್ಠವಾಗಿದೆ : ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಚನ್ನಪ್ಪ ಕಟ್ಟಿ ಅಭಿಪ್ರಾಯ

ವಿಜಯಪುರ: ಸಮಾಜದಲ್ಲಿ ಅಂಚಿಗೆ ತಳ್ಳಲಾಗಿದ್ದ ಮಹಿಳೆಯರು ಮತ್ತು ರೈತರನ್ನು ಕೇಂದ್ರವನ್ನಾಗಿಟ್ಟುಕೊಂಡು ರಾಷ್ಟ್ರ ಕವಿ ಕುವೆಂಪು ರಚಿಸಿದ ಸಾಹಿತ್ಯ ಸರ್ವಶ್ರೇಷ್ಠವಾಗಿದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಚನ್ನಪ್ಪ ಕಟ್ಟಿ ಅಭಿಪ್ರಾಯಪಟ್ಟರು.

ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ವತಿಯಿಂದ  ಹಮ್ಮಿಕೊಂಡಿರುವ ಎರಡು ದಿನಗಳ ‘ಕುವೆಂಪು ಓದು’  ಕಮ್ಮಟವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಪಠ್ಯವು  ಶ್ರೇಷ್ಠವಾಗಿದ್ದಲ್ಲಿ ಅದು ಮತ್ತೇ ಮತ್ತೇ ಓದಿಸಿಕೊಳ್ಳುತ್ತದೆ. ಕುವೆಂಪು ರಚಿಸಿದ ಸಾಹಿತ್ಯ ಮತ್ತೆ ಮತ್ತೆ  ಓದಿಸಿಕೊಳ್ಳುವುದರಿಂದ ಆ ಕವಿ ಜೀವಂತವಾಗಿರುತ್ತಾನೆ.  ರಾಷ್ಟ್ರಕವಿ ಜಿ. ಎಸ್ ಶಿವರುದ್ರಪ್ಪನವರ ಕವಿತೆಯ ಸಾಲುಗಳಂತೆ ಕವಿಗೆ ವಯಸ್ಸಾಗುತ್ತದೆ ಆದರೆ ಕಾವ್ಯಕ್ಕೆ ಅಲ್ಲಾ ಎಂದರು.


ಕುವೆಂಪು ಅವರು ಕನ್ನಡ ಕವಿಗಳಲ್ಲಿಯೇ  ಅಗ್ರಗಣ್ಯರು. ಅವರ ಸುದೀರ್ಘವಾದ ಸಾಹಿತ್ಯ ಮಾನವೀಯ ಮೌಲ್ಯವನ್ನು ಸಾರುತ್ತದೆ. ಮನುಷ್ಯ  ಮನುಷತ್ವವನ್ನು ಹೊಂದಲು ಕುವೆಂಪುರವರ ಸಾಹಿತ್ಯ ಓದಲೇಬೇಕು ಎಂದು ಅವರು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿದ್ದ ಸಿಂಡಿಕೇಟ್ ಸದಸ್ಯ ಡಾ.ನಟರಾಜ ಬೂದಾಳು ಅವರು ಮಾತನಾಡಿ, ಕುವೆಂಪು ಅವರ ಸಾಹಿತ್ಯ  ಮಾನವೀಯ ಒಲುಮೆಯ ಆಗರ. ಈ ನಿಟ್ಟಿನಲ್ಲಿ ಮಹಿಳೆಯರನ್ನು ಕುವೆಂಪುರವರ ಓದಿಗೆ ಸ್ಪಂದಿಸುವುದು ಅತ್ಯಂತ ಅವಶ್ಯಕವಾಗಿದೆ. ಓದು ಸಹಜವಾದ ಓದಾಗಿರದೇ ವ್ಯಕ್ತಿತ್ವ ವಿಕಸನವನ್ನು ಮಾಡುವ ಓದಾಗಬೇಕು. ಅಂತಹ ಓದನ್ನು ಕುವೆಂಪುರವರ ಸಾಹಿತ್ಯದಿಂದ ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ. ಅವರು, ಕುವೆಂಪುರವರು ಆತ್ಮವಿಶ್ವಾಸ ತುಂಬುವ ಕವಿಗಳು. ಯಾವ ವ್ಯಕ್ತಿಯ ಆತ್ಮ ವಿಕಾಸ ಬೆಳೆಸುತ್ತದೆಯೋ ಮೌಲ್ಯವನ್ನು ಪ್ರತಿಪಾದಿಸುತ್ತಿದೆಯೋ, ನಂಬಿಕೆಯನ್ನು ದೃಡಗೊಳಿಸುತ್ತದೆಯೋ, ಸಾಮಾಜಿಕ ಪ್ರಸ್ತುತತೆಯನ್ನು ಬಿಂಬಿಸುತ್ತದೆಯೋ ಅದು ನಿಜವಾದ ಸಾಹಿತ್ಯ. ಅಂತಹ ಸಾಹಿತ್ಯವನ್ನು ನೀಡಿದವರು ಕುವೆಂಪುರವರು. ಮಾನವನ ವೈಜ್ಞಾನಿಕ ಜ್ಞಾನ ಸಾರ್ವತ್ರಿಕ ಸತ್ಯವನ್ನು  ಪ್ರತಿಪಾದಿಸುವ ಸಾಹಿತ್ಯವೇ ಜಗತ್ತಿನ  ಶ್ರೇಷ್ಠ ಸಾಹಿತ್ಯ.  ಇಂತಹ ಸಾಹಿತ್ಯವನ್ನು ನೀಡಿದ ಕುವೆಂಪು ಅವರು ಕನ್ನಡದ ಜ್ಞಾನ ಬೆಳವಣಿಗೆಯ ಬೆಳಕಾಗಿ ನಿಂತವರು ಎಂದು ತಿಳಿಸಿದರು. 

ನಾಡಗೀತೆಯನ್ನು ನೀಡಿದ ವಿಶ್ವಕವಿಗಳಲ್ಲೇ ಶ್ರೇಷ್ಠವಾದ ಕುವೆಂಪುರವರ ಸಾಹಿತ್ಯ ‘ಮನುಜ ಮತ ವಿಶ್ವಪಥ’ ಎಂಬ ಸಂದೇಶವನ್ನು ಸಾರುತ್ತದೆ. ವೈಜ್ಞಾನಿಕತೆ ಮತ್ತು ವೈಚಾರಿಕತೆ ಕುವೆಂಪುರವರ ಮಹತ್ವದ ಸಂದೇಶಗಳು. ಮೊಬೈಲ್ ಸಂದೇಶಗಳನ್ನು ಬಿಟ್ಟು ಪುಸ್ತಕ ಓದುವ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಆ ಮೂಲಕ ವಿದ್ಯಾರ್ಥಿಗಳು ಜ್ಞಾನದ ಬೆಳಕನ್ನು ಹೊಂದಬೇಕೆಂದು  ಕುಲಸಚಿವ ಶಂಕರಗೌಡ ಸೋಮನಾಳ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.  

ಪ್ರಾಧಿಕಾರದ ಸದಸ್ಯ ಸಂಚಾಲಕ ಎಸ್.ಗಂಗಾಧರಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ  ಡಾ.ರಾಮಲಿಂಗಪ್ಪ ಟಿ.ಬೇಗೂರು ಕಮ್ಮಟದ ರೂಪರೇಷಗಳನ್ನು ವಿವರಿಸಿದರು. ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ  ಡಾ.ಎಂ.ನಾಗರಾಜ ಸ್ವಾಗತಿಸಿದರು. ಕುಮಾರಿ. ನಂದಿನಿ ಕಾರ್ಯಕ್ರಮ ನಿರೂಪಿಸಿದರು.  ವೆಂಕಟಲಕ್ಷ್ಮೀ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.