ನಿಡಗುಂದಿ : ಜೂನ್ 1 ರಂದು ನಿಡಗುಂದಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಸವನಬಾಗೇವಾಡಿ ವಿಧಾನಸಭೆಯನ್ನು ಪ್ರತಿನಿಧಿಸುತ್ತಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಅವರು ಚಾಲನೆ ನೀಡಲಿದ್ದಾರೆ.
ನಿಡಗುಂದಿ ಪಟ್ಟಣದಲ್ಲಿ ಜೂನ್ ರಂದು ಸಂಜೆ 4 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 1.45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆಗೊಳ್ಳಲಿದೆ.
ಪೌರಾಡಳಿತ ನಿರ್ದೇಶನಾಲಯದಿಂದ ಸದರಿ ಕಟ್ಟಡ ನಿರ್ಮಾಣಕ್ಕೆ 87 ಲಕ್ಷ ರೂ. ಹಗೂ 48 ಲಕ್ಷ ರೂ. ಮೊತ್ತವನ್ನು ಅಡುಗೆ ಪರಿಕರಗಳಿಗೆ ಹಾಗೂ ಸ್ಥಳೀಯ ಪಟ್ಟಣ ಪಂಚಾಯತ್ನಿಂದ 10 ಲಕ್ಷ ರೂ. ಅನುದಾನ ನೀಡಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ನಿಧಿಯಿಂದ 15 ಲಕ್ಷ ರೂ. ವೆಚ್ಚದಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿಗಳ ದುರಸ್ಥಿ ಕಾಮಗಾರಿ ಭೂಮಿ ಪೂಜೆ ನೆರವೇರಲಿದೆ.
ಇದಲ್ಲದೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 20 ಲಕ್ಷ ರೂ. ಅನುದಾನದಲ್ಲಿ ಸಿದ್ದರ ಕಾಲೋನಿಯಲ್ಲಿ ನಿರ್ಮಿಸಿರುವ ಅಂಗನವಾಡಿ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ.
ಪಟ್ಟಣದ ವಾರ್ಡ್ ನಂ.15 ರಲ್ಲಿ ಮುದ್ದೇಶ್ವರಪ್ರಭು ದೇವಸ್ಥಾನ ಹತ್ತಿರ ನಿರ್ಮಿಸಲಾಗುವ ರಂಗ ಮಂಟಪದ ಭೂಮಿ ಪೂಜೆ ನೆರವೇರಲಿವೆ.
ಸದರಿ ಎಲ್ಲ ಅಭಿವೃದ್ಧಿ ಯೋಜನೆಗಳಿಗೆ ಸಚಿವರು ಚಾಲನೆ ನೀಡಲಿದ್ದಾರೆ ಎಂದು ಸಚಿವರ ಕಛೇರಿ ಪ್ರಕಟಣೆ ತಿಳಿಸಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

