Monday, June 30, 2025

ದೌರ್ಜನ್ಯ ಪ್ರಕರಣಗಳನ್ನು ತ್ವರಿತ ವಿಲೇವಾರಿಗೆ ಕ್ರಮ ವಹಿಸುವಂತೆ -ಜಿ.ಪಂ.ಸಿಇಓ ರಿಷಿ ಆನಂದ ಸೂಚನೆ


ವಿಜಯಪುರ :  ದೌರ್ಜನ್ಯ ಪ್ರಕರಣಗಳಲ್ಲಿ ಸಕಾಲದಲ್ಲಿ ತ್ವರಿತ ಪರಿಹಾರ ಒದಗಿಸಿಕೊಡಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಪಂಚಾಯತಿಯ ಮುಖ್ಯಕಾರ್ಯ ನಿರ್ವಣಾಧಿಕಾರಿಗಳಾದ ರಿಷಿ ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಈ ಸೂಚನೆ ನೀಡಿದರು.

ಅರ್ಹ ಫಲಾನುಭವಿಗಳು ಪಹಣಿ ಪತ್ರ ಪಡೆಯಲು ಸಮಾಜ ಕಲ್ಯಾಣ ಇಲಾಖೆಯಿಂದ ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಿ, ತಹಶೀಲ್ದಾರರಿಗೆ ಸಲ್ಲಿಸಿ, ಪಹಣಿಪತ್ರ ಸಿದ್ದಪಡಿಸಲು ಸಹಕರಿಸಬೇಕು ಎಂದು ಅವರು ಹೇಳಿದರು. 

ಡಾ. ಬಿ.ಆರ್.ಅಂಬೇಡ್ಕರ ವೃತ್ತ ನಿರ್ಮಾಣಕ್ಕೆ ಸ್ಥಳಾವಕಾಶ ಕುರಿತು ಸದಸ್ಯರಾದ ಯಮನಪ್ಪ ಸಿದರಡ್ಡಿ ಅವರು ಮಾಡಿದ ಮನವಿ ಆಲಿಸಿದ ಅವರು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಿದರು. 

ಪ್ರತಿ ಸಭೆಗೂ ಮುನ್ನ ಸಭೆಯ ಕುರಿತು ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ, ಉಸ್ತುವಾರಿ ಸಮಿತಿಯ ಸದಸ್ಯರಿಗೆ  ಒದಗಿಸುವಂತೆ ಹಾಗೂ ಸಣ್ಣ ಪುಟ್ಟ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ  ಭೇಟಿ ನೀಡಿ  ಪ್ರಕರಣ ಕುರಿತು ಮಾಹಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುವಂತೆ ಅವರು ಸಭೆಗೆ ತಿಳಿಸಿದರು.

ಪರಿಶಿಷ್ಟ ಜಾತಿ ಕಾಲೋನಿಯಲ್ಲಿರುವ ಚರಂಡಿಗಳನ್ನು ಕಾಲಕಾಲಕ್ಕೆ ಸ್ವಚ್ಚಗೊಳಿಸಿ, ಶುಚಿತ್ವ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. 

ಭೂ ಒಡೆತನ ಯೋಜನೆಯಡಿ ಖರೀದಿಯಾದ ಜಮೀನುಗಳಿಗೆ ಆರ್‍ಟಿಸಿ ಹಾಗೂ ಪಹಣಿ ಬದಲಾವಣೆ ಅರ್ಹ ಫಲಾನುಭವಿಗಳಿಗೆ ತೊಂದರ ತಪ್ಪಿಸಿ  ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಕ್ರೂಢೀಕರಿಸಿಕೊಂಡು ಅರ್ಹ ಫಲಾನುಭವಿಗಳಿಗೆ ಅನುಕೂಲವಾಗಲು ಕ್ರಮವಹಿಸುವಂತೆ ಅವರು ಸೂಚಿಸಿದರು. 

ಭೂ ಒಡೆತನ ಯೋಜನೆಯಡಿ ಇಲ್ಲಿಯವರೆಗೆ ಸ್ವೀಕರಿಸಿದ ಅರ್ಜಿ ಹಾಗೂ ಇತ್ಯರ್ಥಗೊಳಿಸಿದ್ದ ಕುರಿತ ಪಟ್ಟಿ ನೀಡುವಂತೆ ಸಂಬಂಧಿಸಿದ್ದ ಅಧಿಕಾರಿಗಳಿಗೆ ಸೂಚಿಸಿದ ಅವರು ಸಮಾಜ ಕಲ್ಯಾಣ ಇಲಾಖೆಯು ಪ್ರಗತಿಯ ಕುರಿತು ಆಗಾಗ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಬೇಕು ಎಂದು ಹೇಳಿದರು. 

  ಈಗಾಗಲೇ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆಯೂ,ಸ್ಮಶಾನದ ಜಾಗ ಒತ್ತುವರಿ,ಮಹರ್ಷಿ ವಾಲ್ಮಿಕಿ ಸಮುದಾಯ ಭವನ ನಿರ್ಮಾಣ ಸೇರಿದಂತೆ ಸಮಿತಿ ಸದಸ್ಯರ ಮನವಿಗೆ ಸ್ಪಂದಿಸಿ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಸಮಿತಿ ಸದಸ್ಯರಾದ ಅಭಿಷೇಕ ಚಕ್ರವರ್ತಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಜಾತಿ ನಿಂದನೆ, ದೌರ್ಜನ್ಯ ನಿಂದನೆ ಪ್ರಕರಣಗಳು ದಾಖಲಾಗದಂತೆ  ಸೂಕ್ತ ಜಾಗೃತಿ ಮೂಡಿಸಬೇಕು. ಈಗಾಗಲೇ ದಾಖಲಾಗಿರುವ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆ ಸಭೆಯಲ್ಲಿ  ಅವರು ಮನವಿ ಮಾಡಿದರು. 

ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಮಾತನಾಡಿ, ಪ್ರತಿ ತಿಂಗಳು ಜಿಲ್ಲೆಯ ಎಲ್ಲ ಪೆÇಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಕುಂದು ಕೊರತೆ ದೌರ್ಜನ್ಯ ಪರಿಹಾರ ಕುರಿತು ಸಭೆಗಳನ್ನು ಏರ್ಪಡಿಸಲಾಗುತ್ತಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಇಲಾಖೆಯ ವತಿಯಿಂದ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಸಹಾಯ ಸಹಕಾರ ನೀಡುವುದಾಗಿ ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಉಪವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ, ಹೇಮಲತಾ ವಸ್ತ್ರದ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ  ರಾಜಶೇಖರ ಚೌರ, ನಾನು ಸೋಮಲು ಲಮಾಣಿ, ಮಹಾಂತೇಶÀ ಧರ್ಮಣ್ಣ ಸಾಸಬಾಳ, ಬಂದಗಿ ಸಿದ್ದಪ್ಪ ಗಸ್ತಿ, ಮದನಕುಮಾರ ನಾಗರದಿನ್ನಿ, ರವಿಕಾಂತ ಬಿರಾದಾರ, ಯಮನಪ್ಪ ಸಿದರಡ್ಡಿ, ಸಿದ್ದು ರಾಯಣ್ಣವರ, ಮಲ್ಲು ತಳವಾರ ಸೇರಿದಂತೆ  ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಅಂಗನವಾಡಿ ಕಾರ್ಯಕರ್ತೆಯರು ಬಿ.ಎಲ್.ಓ. ಕೆಲಸ ಮಾಡುವದಿಲ್ಲ : ಉಪನಿರ್ದೇಶಕ ಕೆ.ಕೆ. ಚವ್ಹಾಣ ಅವರಿಗೆ ಮನವಿ


 ವಿಜಯಪುರ : ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ವತಿಯಿಂದ ಇಂಡಿ ತಾಲೂಕಾ ಸಮಿತಿ ಚಡಚಣ ಅಂಗನವಾಡಿ ಕಾರ್ಯಕರ್ತೆಯರು ಬಿ.ಎಲ್.ಓ. ಕೆಲಸ ಮಾಡುವದಿಲ್ಲ ಎನ್ನುವ ಕುರಿತು ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಕೆ. ಚವ್ಹಾಣ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಇಂಡಿ ತಾಲೂಕಾಧ್ಯಕ್ಷರು ಭಾರತಿ ವಾಲಿ ಮಾತನಾಡಿ ನಮ್ಮ ಅಂಗನವಾಡಿ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಆದ ಕಾರಣ ಎಫ್.ಆರ್.ಎಸ್. ಪೋಟೊ ಕ್ಯಾಪ್ಟರ ಮಾಡುವದಕ್ಕೆ ಕಷ್ಟ ಆಗುತ್ತದೆ. ಅಂಗನವಾಡಿ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಕ ಕೊಡುವದು ಆಗುವದಿಲ್ಲ. ಅಂಗನವಾಡಿ ಹೇಗೆ ನಡೇಯುತ್ತದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ನೇಮಕಾತಿ ಬಿಡುಗಡೆ ಆಗಿರುವದಿಲ್ಲ. ಆದ ಕಾರಣ ಬಿ.ಎಲ್.ಒ. ಕೆಲಸ ಮಾಡಲು ಆಗುವದಿಲ್ಲ ಎಂದು ಅಂಗನವಾಡಿ ಕಾರ್ಯಕತೆಯರು ಬರೆದುಕೊಟ್ಟಿರುತ್ತಾರೆ. ತಾವುನಮ್ಮ ಮಹಿಳೆಯರ ಪರವಾಗಿ ಕುಟುಂಬ ಮತ್ತು ಮಕ್ಕಳು ಅಂಗವಿಕಲ ತಂದೆ+ತಾಯಿ ವಯಸ್ಸಾದವರೆ ಇದ್ದಾರೆ ಅಂಗನವಾಡಿ ಕಾರ್ಯಕತ್ರೆ ಯೋಗಕ್ಷೇಮ ಕೇಳುವವರು ಯಾರೂ ಅಂಗನವಾಡಿ ಕಾರ್ಯಕತ್ರೆಯರ ಮನೆಯಲ್ಲಿ ತೀರಿಕೊಂಡರೂ ಕೇಂದ್ರ ಸರ್ಕಾರದ ಆದೇಶ ಇರುತ್ತದೆ ಇಲ್ಲವಾದರೆ ಕೆಲಸ ಕಳೆದುಕೊಳ್ಳುತ್ತೀರಿ ಅಂತಾ ಮೇಲ್ವಿಚಾರಕರು ಹೇಳುತ್ತಾರೆ.

ಅಂಗನವಾಡಿ ಬೆಳಿಗ್ಗೆ 8 ರಿಂದಾ 10 ರ ವರೆಗೆ ಆನ್‌ಲೈನದಲ್ಲಿ ಕೆಲಸ ಮಾಡಬೇಕಗಿದೆ. ನಮ್ಮ ಅಂಗನವಾಡಿ ಕೆಲಸ ಬಿಟ್ಟು ಬಿ.ಎಲ್.ಒ. ಕೆಲಸ ಯಾವ ಸಮಯದಲ್ಲಿ ಮಾಡಬೇಕೆಂದು ಅಧಿಕಾರಿಗಳು ವಿಚಾರ ಮಾಡಬೇಕು ಇನ್ನು ಮುಂದೆ ರಾತ್ರಿ ಕೆಲಸ ಮಾಡಬೇಕಾಗುತ್ತದೆ ಮಹಿಳೆಯರು ಮನೆಯಲ್ಲಿ ಯಾವಾಗ ಕೆಲಸ ಮಾಡಬೇಕು ಸರಿಯಾಗಿ ಗೌರವಧನ ತೆಗೆಯುವದಿಲ್ಲ ಬಾಡಿಗೆ ತಗೆಯುವದಿಲ್ಲ. ಹೆಚ್ಚುವರಿ ಗೌರವಧನ ತಗೆಯುವದಿಲ್ಲ. ಎಲ್ಲಾ ತಾಲೂಕುಗಳಲ್ಲಿ ಹೆಚ್ಚಿನ ಗೌರವಧನ ತಗೆದಿರುತ್ತಾರೆ. ಗೌರವಧನದಲ್ಲಿ ಬಿ.ಲ್.ಒ. ಕೆಲಸ ನಿರ್ವಹಿಸಲು ಆಗುವದಿಲ್ಲ. ಕಡಿಮೆ ಕಾರ ಕಾರಣ ಸಿ.ಡಿ.ಪಿ.ಒ. ಆಫೀಸಿನಿಂದ ಕೈ ಬಿಡಬೇಕು ಸರಕಾರಿ ಶಾಲಾ ಪುರುಷ ಶಿಕ್ಷಕರಿಗೆ ಹಾಕಬೇಕು ಎಂದರು

ಈ ಸಂದರ್ಭದಲ್ಲಿ ಶೋಭಾ ಕಬಾಡೆ, ಅಶ್ವಿನಿ ತಳವಾರ ಪ್ರಧಾನ ಕಾರ್ಯದರ್ಶಿ, ಫರಜಾನ ಬೇಗಂ, ಬಿ. ಶೇಖ, ಸುಜಾತಾ ಬಿರಾದಾರ, ಸುಮಿತ್ರಾ ನಾಯ್ಕೋಡಿ, ಕಲಾವತಿ ಕೂಡಿಗನೂರ, ಶೋಭಾ ಕುದರಿ, ಶಾರದಾ ತಾಂಬೆ, ಸರೋಜನಿ ದೋಷಿ, ಬುದ್ದವ ಬ್ಯಾಕೋಡ, ಸಾವಿತ್ರಿ ಬಿರಾದಾರ, ಹಸೀನಾಬಾನು ಮುಲ್ಲಾ, ಶೋಭಾ ಹೊಟಕೋರ, ಭಾಗಿರಥಿ ತಳವಾರ, ರಾಜೇಶ್ವರಿ ಪೂಜಾರಿ, ಪಾರ್ವತಿ ದಾರೆಕರ, ಸುನಂದ ಸುg, ರೇಣುಕಾ ಕನಸೆ, ಗಿರಿಜಾ ಸಕ್ಕರಿ, ಶಂಕ್ರವ್ವ ಪುಠಾಣಿ ಬಿ.ಎಚ್. ಮಂಜಗೊAಡ, ನೀಲಮ್ಮ ಬಿಜಾಪುರ, ಎಸ್.ಎಸ್. ಪಾಟೀಲ, ಶೀಲಾ ಸಾವಳಗಿಮಠ, ರಾಜೇಶ್ವರಿ ಕಂಬಾ, ಜ್ಯೋತಿ ವಗ್ಗಿ, ಪದ್ಮಾವತಿ ಬಿರಾದಾರ, ಸುನಂದಾ ವಾಲಿ, ದಾನಮ್ಮ ಮಸೂತಿ ಭಾಗ್ಯಶ್ರೀ ಕಟಕದೊಂಡ, ಆರತಿ ಭಾವಿಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಹಿಳಾ ವಿವಿ: ನೂತನ ಹಂಗಾಮಿ ಕುಲಪತಿಯಾಗಿ ಪ್ರೊ.ನಾಮದೇವಗೌಡ ನೇಮಕ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ಪ್ರೊ.ನಾಮದೇವಗೌಡ ಅವರು, ಸೋಮವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಚಿತ್ರದಲ್ಲಿ ಪ್ರೊ..ಮಲ್ಲಿಕಾರ್ಜುನ ಎನ್.ಎಲ್, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚAದ್ರಶೇಖರ್, ಇದ್ದಾರೆ.

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಭಾಷಾ ನಿಕಾಯದ ಡೀನ್ ಪ್ರೊ.ನಾಮದೇವಗೌಡ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಶ್ರೀ.ಥಾವರಚಂದ ಗೆÀಹಲೋಟ್ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.  

ಹಂಗಾಮಿ ಕುಲಪತಿಯಾಗಿದ್ದ ಪ್ರೊ..ಶಾಂತಾದೇವಿ ಟಿ ಅವರ ಡೀನ್‍ಶಿಪ್ ಅವಧಿ ಜೂನ್ 27ರಂದು ಪೂರ್ಣಗೊಂಡಿದ್ದರಿಂದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ಹಂಗಾಮಿ ಕುಲಪತಿಯಾಗಿ ನೇಮಕ ಮಾಡಲಾಗಿತ್ತು. ಪ್ರೊ.ಮಲ್ಲಿಕಾರ್ಜುನ ಅವರ ಅಧಿಕಾರ ಅವಧಿ 27-6-2025ರ ಮಧ್ಯಾಹ್ನದಿಂದ 30-06-2025ರ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಇರುತ್ತದೆ ಎಂದು ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿತ್ತು. 

ಪ್ರೊ.ಮಲ್ಲಿಕಾರ್ಜುನ ಅವರ ಡೀನ್‍ಶಿಪ್ ಅವಧಿ ಸೋಮವಾರ ಪೂರ್ಣಗೊಂಡಿದ್ದರಿಂದ ರಾಜ್ಯಪಾಲರು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- 2000ನ ಸೆಕ್ಷನ್ 16 (2) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ದಿನಾಂಕ 26-7-2025 ಅಥವಾ ಖಾಯಂ ಕುಲಪತಿಗಳ ನೇಮಕವಾಗುವವರೆಗೆ ಅಥವಾ ಮುಂದಿನ ಆದೇಶದ ವರೆಗೆ ಹಂಗಾಮಿ ಕುಲಪತಿಯಾಗಿ ಪ್ರೊ.ನಾಮದೇವಗೌಡ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. 

ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ನೂತನ ಹಂಗಾಮಿ ಕುಲಪತಿ ಪ್ರೊ.ನಾಮದೇವಗೌಡ ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪ್ರೊ..ಮಲ್ಲಿಕಾರ್ಜುನ ಎನ್.ಎಲ್., ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್ sಸಿಂಡಿಕೇಟ್ ಸದಸ್ಯರಾದ ಶಿವಯೋಗೆಪ್ಪ ಮಾಡ್ಯಾಳ, ಅತೀಕ್ ಮಕಾನದಾರ,  ಸೈದಪ್ಪ ಮಾದರ, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು,  ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ s ಉಪಸ್ಥಿತರಿದ್ದರು ಎಂದು ವಿವಿ ಪ್ರಕಟಣೆ ತಿಳಿಸಿದೆ.


 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಕಸಾಪ ಅಧ್ಯಕ್ಷರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ; ಮುಖ್ಯಮಂತ್ರಿ ತಾವು ಕನ್ನಡ ಪ್ರೇಮಿ ಎಂದು ಸಾಬೀತು ಪಡಿಸಲಿ : ಲಾಯಪ್ಪ ಇಂಗಳೆ

ವಿಜಯಪುರ : ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ರಾಜ್ಯ ಘಟಕದ ಅಧ್ಯಕರಾದ ನಾಡೋಜ ಮಹೇಶ ಜೋಶಿ ಅವರಿಗೆ ಹಿಂದಿನ ಸರ್ಕಾರ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಕನ್ನಡದ ಕೆಲಸಕ್ಕೆ ಪ್ರೋತ್ಸಾಹಿಸಿತ್ತು. ಸದ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ನೀಡಿದ ಸಂಪುಟ ದರ್ಜೆಯ ಸ್ಥಾನವನ್ನು ಹಿಂಪಡೆದಿರುವ ಪುನಃ ನೀಡಬೇಕೆಂದು ಒತ್ತಾಯಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಘನತವೆತ್ತ ರಾಜ್ಯ ಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಅವರು ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಮನವಿ ಮಾಡಿಕೊಂಡಿರುವ ಅವರು, ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್. ಎಂ.ವಿಶ್ವೇಶ್ವರಯ್ಯ ನವರು ಸ್ಥಾಪಿಸಿದ ಕನ್ನಡ ನಾಡಿನ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು ಶತಮಾನ ಪೂರೈಸಿದ ಕನ್ನಡದ ಹೆಮ್ಮೆಯ ಸಂಸ್ಥೆಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಅನೇಕ ಹಿರಿಯ ಸಾಹಿತಿಗಳು ಹಾಗೂ ನಾಡು ನುಡಿಗಾಗಿ ಶ್ರಮಿಸಿದ ಹಿರಿಯರ ಮಾರ್ಗದರ್ಶನದಲ್ಲಿ ನಾಡಿನಲ್ಲಿ ಕನ್ನಡವನ್ನು ಕಟ್ಟಿ ಬೆಳೆಸುವ, ಉಳಿಸುವ ಕೆಲಸ ಮಾಡುತ್ತಾ ಬಂದಿರುವುದು ಅದರ ಹಿರಿಮೆ ಹಿಡಿದ ಕೈಗನ್ನಡಿಯಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಹಿಂಬಾಲಕರ ಮಾತನ್ನು ಕೇಳಿ ಸಾಹಿತ್ಯ ಪರಿಷತ್ತಿನಲ್ಲಿ ರಾಜಕೀಯ ಮಾಡಲು ಹೊರಟಿರುವುದು ಪರಿಷತ್ತಿನ ಇತಿಹಾಸದಲ್ಲಿಯೇ ಕಪ್ಪು ಚುಕ್ಕೆಯಾಗಿದೆ. ಕೂಡಲೇ ಈ ಹಿಂದಿನAತೆ ಸಂಪುಟ ದರ್ಜೆಯ ಸ್ಥಾನಮಾನವನ್ನು ಮುಂದುವರೆಸಿ ಕನ್ನಡ ಕಟ್ಟುವ ಕೆಲಸಕ್ಕೆ ಅನುಕೂಲ ಮಾಡಿಕೊಟ್ಟು, ತಾವು ಅಪ್ಪಟ ಕನ್ನಡ ಪ್ರೇಮಿ ಎಂದು ಸಾಬೀತು ಪಡಿಸಬೇಕು ಎಂದು ಮನವಿ ಪತ್ರದಲ್ಲಿ ಇಂಗಳೆ ಅವರು ಆಗ್ರಹಿಸಿದ್ದಾರೆ.

 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.