Thursday, August 28, 2025

ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡ ತರಬೇತಿ ಎಣ್ಣೆಕಾಳು ಉತ್ಪಾದನೆ ಹೆಚ್ಚಳಕ್ಕೆ ಕ್ರಮವಹಿಸಿ

ವಿಜಯಪುರ : ಇತ್ತೀಚೆಗೆ ಎಣ್ಣೆಕಾಳು ಬೆಳೆಗಳ ಉತ್ಪಾದನೆ ಕುಂಠಿತಗೊಳ್ಳುತ್ತಿದ್ದು, ಇವುಗಳ ಉತ್ಪಾದನೆ ಹೆಚ್ಚಳಕ್ಕಾಗಿ ಸರಕಾರದ ವಿಶೇಷ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು. 

2025-26ನೇ ಸಾಲಿನ ರಾಷ್ಟಿçÃಯ ಖಾದ್ಯತೈಲ ಅಭಿಯಾನ ಎಣ್ಣೆಕಾಳು ಯೋಜನೆ ಅಡಿಯಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡ ತರಬೇತಿದಾರರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಣ್ಣೆಕಾಳುಗಳನ್ನು ಪ್ರಮುಖವಾಗಿ ಅಡುಗೆಗಾಗಿ, ಸೌದರ್ಯವರ್ದಕವಾಗಿ, ಜೈವಿಕ ಇಂದನ ಉತ್ಪಾದನೆಯಲ್ಲಿ ಬಳಸಲಾಗುತ್ತಿದೆ. ನಮ್ಮ ಪ್ರದೇಶದಲ್ಲಿ ಶೇಂಗಾ, ಸೂರ್ಯಕಾಂತಿ, ಸೋಯಾಬೀನ್ ಅಗಸೆ, ಎಳ್ಳು, ಸಾಸಿವೆ ಇತ್ಯಾದಿ ಬೆಳೆಗಳನ್ನು ಬೆಳೆಯಲಾಗುತ್ತದೆ. ಇವುಗಳು ಹೇರಳ ವಿಟಮನ್, ಖನಿಜಾಂಶ ಹಾಗೂ ಓಮೇಗಾ-3 ಹೊಂದಿದ್ದು, ಪ್ರತಿಯೊಬ್ಬನ ಆರೋಗ್ಯವೃದ್ಧಿಗೆ ಸಹಕಾರಿಯಾಗಲಿದ್ದು, ಕೃಷಿ ಅಧಿಕಾರಿಗಳು ರೈತರಿಗೆ ಈ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕೆಂದರು. 

 ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕ ಡಾ. ಬಾಲರಾಜ ಬಿರಾದಾರ ಮಾತನಾಡಿ, ರೈತರಿಗೆ, ಅಧಿಕಾರಿಗಳಿಗೆ ಕಾಲಕಾಲಕ್ಕೆ ವಿವಿಧ ವಿಷಯಗಳ ಕುರಿತು ಸಾಂಸ್ಥಿಕ ತರಬೇತಿಗಳನ್ನು ಆಯೋಜಿಸಿ, ಅವರ ಜ್ಞಾನ, ಕೌಶಲ್ಯ ವೃದ್ಧಿಸಲಾಗುತ್ತಿದೆ. ಈ ಸಲ ಹವಾಮಾನ ವೈಪರೀತ್ಯದಿಂದಾಗಿ ವಿವಿಧ ಬೆಳೆಗಳಲ್ಲಿ ಇಳುವರಿಯಲ್ಲಿ ವ್ಯತ್ಯಾಸವಾಗಿದೆ. ಎಣ್ಣೆಕಾಳು ಯೋಜನೆಯಡಿಯಲ್ಲಿ ಸೂರ್ಯಕಾಂತಿ ಬೆಳೆಯ ಪ್ರದೇಶ ಹೆಚ್ಚಳವಾಗಿದ್ದು, ಇದರ ಉತ್ಪಾದನೆ, ಕೀಟರೋಗ ಹತೋಟಿ ಕುರಿತು ಸಮಗ್ರ ಮಾಹಿತಿ ನೀಡಲಾಗುತ್ತಿದೆ ಎಂದರು. 

ಕ್ರಿಬ್ಕೋ ಸಂಸ್ಥೆಯ ಬಾಬು ಎ. ಜಿ. ಮಾತನಾಡಿ, ವಿವಿಧ ಎಣ್ಣೆಕಾಳು ಬೆಳೆಗಳಲ್ಲಿ ರಸಗೊಬ್ಬರ ಬಳಕೆ, ಪೋಷಕಾಂಶ ನಿರ್ವಹಣೆ ಮಾಡಬೇಕು. ಪ್ರಸಕ್ತ ಸಂದರ್ಭದಲ್ಲಿ ರಸಗೊಬ್ಬರ ಬೆಲೆ ಏರಿಕೆಯಾಗಿದ್ದು, ಪರ್ಯಾಯ ರಸಗೊಬ್ಬರ ಬಳಕೆ ಮಹತ್ವ ಕುರಿತು ಮಾಹಿತಿ ನೀಡಿದರು. 

ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಎಸ್. ಎಂ. ವಸ್ತçದ, ಎಣ್ಣೆಕಾಳು ಬೆಳೆಗಳ ಸಮಗ್ರರೋಗ ನಿರ್ವಹಣೆ, ಡಾ. ಶಿಲ್ಪಾ ಚೋಗಟಾಪೂರ ಎಣ್ಣೆಕಾಳು ಬೇಸಾಯ ಕ್ರಮಗಳು, ಡಾ. ಎಸ್. ಎಸ್. ಕರಬಂಟನಾಳ ಎಣ್ಣೆಕಾಳು ಬೆಳೆಗಳಿಗೆ ತಗಲುವ ವಿವಿಧ ಕೀಟ ಹತೋಟಿ ಕುರಿತು ಉಪನ್ಯಾಸ ನೀಡಿದರು. ತರಬೇತಿಯಲಿ, ಡಾ. ಶ್ರೀಕಾಂತ ಚವ್ಹಾಣ, ಕೃಷಿ ಅಧಿಕಾರಿಗಳಾದ ಗೀತಾ ಭಜಂತ್ರಿ, ಲಕ್ಷಿö್ಮÃ ಕಾಮಗೊಂಡ, ವೆಂಕನಗೌಡ ಪಾಟೀಲ, ತಮಗೊಂಡ, ಸೋಮನಗೌಡ ಬಿರಾದಾರ, ಶಿಲ್ಪಾ, ಜಯಪ್ರದಾ ದಶವಂತ, ತಹಜೀಬ, ಶಹಾನನವಾಜ್ ಸೇರಿದಂತೆ ಜಿಲ್ಲೆಯ ಕೃಷಿ ಅಧಿಕಾರಿಗಳು, ರೈತ ಭಾಂದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಖಾಯಂ ಜನತಾ ನ್ಯಾಯಾಲಯದ ವಿಶೇಷ ಅಭಿಯಾನಕ್ಕೆ ಚಾಲನೆ ಖಾಯಂ ಜನತಾ ನ್ಯಾಯಾಲಯದ ಸದುಪಯೋಗಕ್ಕೆ ನ್ಯಾಯಾಧೀಶ ಹರೀಶ ಕರೆ

 ವಿಜಯಪುರ : ಖಾಯಂ ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಂಡು ನೆಮ್ಮದಿ ಜೀವನ ನಡೆಸುವಂತೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ ಎ.ಕರೆ ನೀಡಿದರು.

 ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ, ಖಾಯಂ ಜನತಾ ನ್ಯಾಯಾಲಯ ಕಲ್ಬುರ್ಗಿ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡ ಖಾಯಂ ಜನತಾ ನ್ಯಾಯಾಲಯದ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

 ಖಾಯಂ ಜನತಾ ನ್ಯಾಯಾಲಯ ಮುಖ್ಯವಾಗಿ ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ, ವಿವಾದಗಳನ್ನು ಹಾಗೂ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಖಾಯಂ ಜನತಾ ನ್ಯಾಯಾಲಯ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಯಾಣಿಕರನ್ನು ಅಥವಾ ಸರಕು ಸಾಗಾಣೆ ಮಾಡುವ ಭೂಸಾರಿಗೆ, ಜಲಸಾರಿಗೆ ಹಾಗೂ ವಾಯು ಸಾರಿಗೆ ಸೇವೆಗಳು, ಅಂಚೆ, ತಂತಿ ಹಾಗೂ ದೂರವಾಣಿ ಸೇವೆಗಳು, ವಿದ್ಯುತ್, ಬೆಳಕು, ನೀರು ಸರಬರಾಜು ಮಾಡುವ ಯಾವುದೇ ಸಂಸ್ಥೆಗಳ ಸೇವೆಗಳ, ಸಾರ್ವಜನಿಕ ನೈರ್ಮಲ್ಯ ವ್ಯವಸ್ಥೆ, ಚರಂಡಿ ವ್ಯವಸ್ಥೆ ಕಾರ್ಯಗಳು ವಿಮಾ ಸೇವೆಗಳು, ಆಸ್ಪತ್ರೆ ಅಥವಾ ಔಷಧಾಲಯ ಸೇವೆಗಳು, ಬ್ಯಾಂಕ್ ಸೇರಿದಂತೆ ಹಣಕಾಸು ಸಂಸ್ಥೆಗಳಿಗೆ ಸಂಬAಧಪಟ್ಟ ಪ್ರಕರಣಗಳು, ಶಿಕ್ಷಣ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸಂಬAಧಿಸಿದ ಸೇವೆಗಳು, ಗೃಹ ಮತ್ತು ರಿಯಲ್ ಎಸ್ಟೇಟ್ ಸಂಬAಧಪಟ್ಟ ಸೇವೆಗಳಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಅರ್ಜಿಯನ್ನು ನೇರವಾಗಿ ಅಥವಾ ವಕೀಲರ ಮೂಲಕ ಖಾಯಂ ನ್ಯಾಯಾಲಯಕ್ಕೆ ಸಲ್ಲಿಸಿ ಯಾವುದೇ ಶುಲ್ಕವಿಲ್ಲದೇ ಪರಿಹಾರ ಕಂಡು ಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು. 

 ರಾಜ್ಯದಲ್ಲಿ ಒಟ್ಟು 6 ಖಾಯಂ ಜನತಾ ನ್ಯಾಯಾಲಯಗಳಿದ್ದು, ಜಿಲ್ಲೆಯು ಕಲ್ಬುರ್ಗಿಯ ಖಾಯಂ ಜನತಾ ನ್ಯಾಯಾಲಯಕ್ಕೆ ಒಳಪಡುತ್ತದೆ. ಕಲ್ಬುರ್ಗಿ ವ್ಯಾಪ್ತಿಯಲ್ಲಿ ಕಲ್ಬುರ್ಗಿ, ಬೀದರ, ರಾಯಚೂರು, ಯಾದಗಿರ ಹಾಗೂ ವಿಜಯಪುರ ಜಿಲ್ಲೆ ಒಳಪಡುತ್ತದೆ. ಜನತಾ ನ್ಯಾಯಾಲಯದಲ್ಲಿ ಒಂದು ಕೋಟಿ ರೂ. ಒಳಗಿನ ವ್ಯಾಜ್ಯಗಳ ಪ್ರಕರಣಗಳನ್ನು ಸಮಸ್ಯೆಗಳನ್ನು ದಾಖಲಿಸಬಹುದಾಗಿದೆ. ಪ್ರಕರಣಗಳನ್ನು ದಾಖಲು ಮಾಡುವ ಅರ್ಜಿದಾರರಿಗೆ ಯಾವುದೇ ಆದಾಯಮಿತಿ ಇರುವುದಿಲ್ಲ. ಜನತಾ ನ್ಯಾಯಾಲಯದಲ್ಲಿ ದಾಖಲಿಸುವ ಪ್ರಕರಣ ಬೇರೆ ಯಾವುದೇ ನ್ಯಾಯಾಲಯಗಳಲ್ಲಿ ದಾವೆ ಅಥವಾ ಪ್ರಕರಣ ಹೂಡಿರಬಾರದು. ಖಾಯಂ ಜನತಾ ನ್ಯಾಯಾಲಯ ನೀಡುವ ತೀರ್ಪು ಯಾವುದೇ ಸಿವ್ಹಿಲ್ ಅಥವಾ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವಿರುವುದಿಲ್ಲ. ಆದ್ಯಾಗ್ಯೂ ಉಚ್ಛನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸುವ ಮೂಲಕ ತೀರ್ಪನ್ನು ಪ್ರಶ್ನಿಸಬಹುದಾಗಿದೆ ಎಂದು ಅವರು ಹೇಳಿದರು. 

 ಖಾಯಂ ಜನತಾ ನ್ಯಾಯಾಲಯದಲ್ಲಿ ಸಲ್ಲಿಸಿದ ಪ್ರಕರಣಗಳಿಗೆ ಸಂಬAಧಿಸಿದAತೆ ಉಭಯ ಪಕ್ಷಿದಾರರಿಗೆ ಮನವೊಲಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುತ್ತದೆ. ಆದ್ಯಾಗ್ಯೂ ಉಭಯ ಪಕ್ಷಗಾರರು ಒಪ್ಪದೇ ಇದ್ದ ಸಂದರ್ಭದಲ್ಲಿ ಖಾಯಂ ಜನತಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಕಾನೂನಿನ್ವಯ ತ್ವರಿತವಾಗಿ ಪ್ರಕರಣ ಇತ್ಯರ್ಥಪಡಿಸಲು ಖಾಯಂ ಜನತಾ ನ್ಯಾಯಾಲಯದಿಂದ ತೀರ್ಪು ನೀಡಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಈ ಖಾಯಂ ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಂಡು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ನೆಮ್ಮದಿ ಜೀವನಕ್ಕೆ ಮುಂದಾಗುವAತೆ ಅವರು ಕರೆ ನೀಡಿದರು. 

 ಜಿಲ್ಲೆಯ ವಕೀಲರ ಸತತ ಪರಿಶ್ರಮದಿಂದಾಗಿ ಜಿಲ್ಲೆಯಲ್ಲಿ ಖಾಯಂತ ಜನತಾ ನ್ಯಾಯಾಲಯ ನಿರ್ವಹಿಸಲಾಗುತ್ತಿದ್ದು, ರೈತರಿಗೆ, ಸಾಮಾನ್ಯ ಜನರಿಗೆ ಈ ಖಾಯಂ ಜನತಾ ನ್ಯಾಯಾಲಯ ಅತ್ಯುಪಯುಕ್ತವಾಗಿದೆ. ಅಧಿಕಾರಿಗಳು ತಮ್ಮ ಹಂತದ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಿ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರೇರೆಪಣೆ ಹಾಗೂ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು. 

 ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಮಾತನಾಡಿ, ಪ್ರಕರಣ ವ್ಯಾಜ್ಯಗಳಿಗೆ ಸಂಬAಧಿಸಿದAತೆ ಸಾರ್ವಜನಿಕರು ಯಾವುದೇ ಭಯವಿಲ್ಲದೇ ತಮ್ಮ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಖಾಯಂ ಜನತಾ ನ್ಯಾಯಾಲಯ ವೇದಿಕೆಯಾಗಿದೆ. ಜನರು ನೇರವಾಗಿ ಅಥವಾ ವಕೀಲರ ಮೂಲಕ ನ್ಯಾಯಾಲಯಕ್ಕೆ ಹೋಗಿ ತಮ್ಮ ಪ್ರಕರಣಗಳನ್ನು ದಾಖಲಿಸಿ ಪರಿಹರಿಸಿಕೊಳ್ಳಬಹುದಾಗಿದೆ. ಖಾಯಂ ಜನತಾ ನ್ಯಾಯಾಲಯದಿಂದ ಶೀಘ್ರವೇ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ಈ ಕುರಿತು ಜಿಲ್ಲೆಯ ವಿವಿಧ ತಾಲೂಕಾ, ಗ್ರಾಮ ಪಂಚಾಯತ್ ಮಟ್ಟದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜಾಗೃತಿ ಮೂಡಿಸಿ ಜಿಲ್ಲೆಯ ಜನರು ಸದುಪಯೋಗ ಪಡೆದುಕೊಳ್ಳುವಂತೆ ಅವರು ಹೇಳಿದರು. 

 ಕಲ್ಬುರ್ಗಿಯ ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷರೂ ಆದ ಜಿಲ್ಲಾ ನ್ಯಾಯಾಧೀಶ ಎಸ್.ಎಲ್. ಚವ್ಹಾಣ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಹಯೋಗದಲ್ಲಿ ಪ್ರತಿ ತಿಂಗಳೂ ಜನತಾ ನ್ಯಾಯಾಲಯ ನಡೆಸಲಾಗುತ್ತದೆ. 1987ರ ಕಾನೂನು ಸೇವೆಗಳ ಪ್ರಾಧಿಕಾರದ ಕಾಯ್ದೆಯನ್ನು 2007ರಲ್ಲಿ ತಿದ್ದುಪಡಿ ಮಾಡಿದ ನಂತರ 2007ರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಬೆಂಗಳೂರ, ಬೆಳಗಾವಿ, ಧಾರವಾಡ, ಕಲ್ಬುರ್ಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ಖಾಯಂ ಜನತಾ ನ್ಯಾಯಾಲಯಗಳನ್ನು ಸ್ಥಾಪಿಸಿದೆ ಎಂದು ಅವರು ಹೇಳಿದರು. 

 ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ,ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ.ಬಿರಾದಾರ, ಕಲ್ಬುರ್ಗಿ ಖಾಯಂ ಜನತಾ ನ್ಯಾಯಾಲಯದ ಸದಸ್ಯರಾದ ವಿಜಯ ವಿಠ್ಠಲ, ಜಿ.ಪಂ. ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಸಿದ್ಧಯ್ಯ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಜಿಲ್ಲಾ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ದಾಖಲೆಗಳಿಂದ ದಿಟ್ಟ ಹೆಜ್ಜೆ: ರಾಷ್ಟ್ರ ಮಟ್ಟದಲ್ಲಿ 30ನೇ ಸ್ಥಾನ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ನಿರಂತರ ಪ್ರಗತಿ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ೧೦೬ ವರ್ಷಗಳ ಇತಿಹಾಸವುಳ್ಳ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ರೈತರಿಗೆ ಆರ್ಥಿಕ ಬಲ ತುಂಬುವ ಜೊತೆಗೆ ಲಾಭಾಂಶ ಗಳಿಸುವ ಮೂಲಕ ದಾಪುಗಾಲು ಇರಿಸುತ್ತಿದ್ದು, ಈ ಎಲ್ಲ ಸಾಧನೆಗಳ ಜೊತೆಗೆ ರಾಷ್ಟçಮಟ್ಟದ ಟಾಪ್ ೩೦ಯಲ್ಲಿ ವಿವಿಧ ವಿಭಾಗಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಸಚಿವ ಶಿವಾನಂದ ಪಾಟೀಲ ಪ್ರಕಟಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಹಂಚಿಕೊAಡ ಅವರು, ರಾಷ್ಟçದಲ್ಲಿ ೩೫೧ ಕೇಂದ್ರ ಸಹಕಾರಿ ಬ್ಯಾಂಕುಗಳು ಕಾರ್ಯನಿರ್ವಹಿಸುತ್ತಿದ್ದು ಆ ಪೈಕಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕು ವಿವಿಧ ವಿಭಾಗಗಳಲ್ಲಿ ಟಾಪ್ ೩೦ ರಲ್ಲಿ ಸ್ಥಾನ ಪಡೆದುಕೊಂಡಿದೆ. ಠೇವಣಿ ವಿಭಾಗದಲ್ಲಿ ರಾಷ್ಟçಮಟ್ಟದಲ್ಲಿ ೨೭ ನೇ ಸ್ಥಾನ ಪಡೆದರೆ, ರಾಜ್ಯ ಮಟ್ಟದಲ್ಲಿ ನಾಲ್ಕನೇಯ ಸ್ಥಾನ, ಸಾಲ ಹಾಗೂ ಸಾಲ ಬಾಕಿ ವಸೂಲಾತಿಯಲ್ಲಿ ರಾಷ್ಟçಮಟ್ಟದಲ್ಲಿ ೨೭ ನೇ ಸ್ಥಾನ ಹಾಗೂ ರಾಜ್ಯಮಟ್ಟದಲ್ಲಿ ೫ ನೇ ಸ್ಥಾನ, ಒಟ್ಟು ವ್ಯವಹಾರ ವಿಭಾಗದಲ್ಲಿ ರಾಷ್ಟçಮಟ್ಟದಲ್ಲಿ ೨೧ ನೇ ಹಾಗೂ ರಾಜ್ಯದಲ್ಲಿ ೪ ನೇ ಸ್ಥಾನ ಹಾಗೂ ದುಡಿಯುವ ಬಂಡವಾಳ ಹೊಂದಿರುವ ವಿಭಾಗದಲ್ಲಿ ರಾಷ್ಟçಮಟ್ಟದಲ್ಲಿ ೨೮ ಹಾಗೂ ರಾಜ್ಯಮಟ್ಟದಲ್ಲಿ ನಾಲ್ಕನೇಯ ಸ್ಥಾನ ಪಡೆದುಕೊಂಡಿದೆ ಎಂದರು.

ಕೋ-ಆಪರೇಟಿವ್-ತರಬೇತಿಗೆ ಕಾರ್ಪೋರೇಟ್ ಟಚ್:

ಉತ್ತರ ಕರ್ನಾಟಕದಲ್ಲಿಯೇ ಸಹಕಾರ ಸಂಘಗಳ ಸಿಇಓ ಹಾಗೂ ವಲಯದಲ್ಲಿ ತೊಡಗಿಸಿಕೊಂಡವರಿಗೆ ಅತ್ಯಾಧುನಿಕ ರೀತಿಯ ತರಬೇತಿ ನೀಡುವ ಮಹತ್ವದ ಯೋಜನೆಯನ್ನು ವಿಜಯಪುರ ಜಿಲ್ಲಾ ಕೇಂದ್ರ ಡಿಸಿಸಿ ಬ್ಯಾಂಕ್ ಮುಂದಾಗಿದ್ದು, ೮೦ ಕೋಟಿ ರೂ. ಒಟ್ಟು ಯೋಜನಾ ವೆಚ್ಚದಲ್ಲಿ ಅತ್ಯಾಧುನಿಕ ಕಾರ್ಪೋರೇಟ್ ಶೈಲಿಯ ತರಬೇತಿ ಕೇಂದ್ರ ಕಾರ್ಯಾರಂಭಕ್ಕೆ ಮುಂದಾಗಿರುವ ವಿಷಯವನ್ನು ಸಚಿವ ಶಿವಾನಂದ ಪಾಟೀಲ ಪ್ರಕಟಿಸಿದರು.

ಪಿಪಿಪಿ ಮೂಲಕ ಉದ್ದೇಶಿತ ಕಟ್ಟಡದ ಕಾರ್ಯವೈಖರಿ, ಸ್ವರೂಪವನ್ನು ಪ್ರದರ್ಶಿಸಿದ ಅವರು, ಕಾರ್ಪೋರೇಟ್ ಮಾದರಿಯಲ್ಲಿ ಅತ್ಯಾಧುನಿಕ ವರ್ಕ್ ಸ್ಟೇಷನ್, ೨೫೦೦ ಸಾವಿರಕ್ಕೂ ಹೆಚ್ಚು ಜನರಿಗೆ ಏಕಕಾಲಕ್ಕೆ ತರಬೇತಿ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಈ ದೊಡ್ಡ ಯೋಜನೆಯನ್ನು ರೂಪಿಸಲಾಗಿದ್ದು, ಉತ್ತರ ಕರ್ನಾಟದಲ್ಲಿಯೇ ಈ ತರಬೇತಿ ಕೇಂದ್ರ ಪ್ರಥಮ ಹಾಗೂ ಏಕೈಕವಾಗಲಿದೆ ಎಂದರು.

ತೋಟದ ಮನೆ ನಿರ್ಮಾಣಕ್ಕೆ ರಾಜ್ಯದಲ್ಲಿಯೇ ಹೊಸ ಸಾಲ ವ್ಯವಸ್ಥೆ:

ರೈತರು ತೋಟದ ಮನೆ ನಿರ್ಮಾಣಕ್ಕೆ ಸಾಲ ನೀಡುವ ವ್ಯವಸ್ಥೆಯನ್ನು ವಿಜಯಪುರ ಡಿಸಿಸಿ ಬ್ಯಾಂಕ್ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ ರೈತರು ಸ್ವಂತ ಕೃಷಿ ಭೂಮಿಯಲ್ಲಿ ತಓಟದ ಮನೆ ನಿರ್ಮಿಸಿಕೊಳ್ಳಲು ಶೇ.೧೦ ರಷ್ಟು ಬಡ್ಡಿದರದಲ್ಲಿ ೨೦ ಲಕ್ಷ ರೂ.ವರೆಗೆ ಸಾಲ ನೀಡಲು ನಿರ್ಧರಿಸಲಾಗಿದೆ. ಈ ಸಾಲ ಪಡೆದುಕೊಳ್ಳಲು ಎನ್.ಎ. ಸರ್ಟಿಫಿಕೇಟ್ ಬೇಕಾಗಿಲ್ಲ, ರೈತರು ತಮ್ಮ ಜಮೀನುಗಳಲ್ಲಿಯೇ ವಾಸ್ತವ್ಯ ಮಾಡುವುದರಿಂದ ಕೃಷಿಗೆ ಹೆಚ್ಚಿನ ಸಮಯ ಕೊಡಲು ಅನುಕೂಲವಾಗುತ್ತದೆ, ಹೀಗಾಗಿಯೇ ರಾಜ್ಯದಲ್ಲಿಯೇ ಈ ರೀತಿ ಸಾಲ ಕೊಡುವ ಯೋಜನೆಯನ್ನು ಪ್ರಥಮ ಬಾರಿಗೆ ಜಾರಿಗೆ ತರಲಾಗಿದೆ ಎಂದರು.

27 ವರ್ಷಗಳಿಂದ ಅಧ್ಯಕ್ಷ ಹೊಸ ದಾಖಲೆ:

ಈ ಎಲ್ಲ ದಾಖಲೆಗಳ ಜೊತೆಗೆ ಸಹಕಾರಿ ರಂಗದ ದಿಗ್ಗಜ ಪಿ.ಎಂ. ನಾಡಗೌಡರು ೨೫ ವರ್ಷ ೦೯ ತಿಂಗಳು ಕಾಲ ಡಿಸಿಸಿ ಬ್ಯಾಂಕ್ ಕರ್ಣಧಾರತ್ವವನ್ನು ವಹಿಸಿದ್ದರೆ, ಈಗ ೨೭ ವರ್ಷಗಳ ಕಾಲ ಅಧ್ಯಕ್ಷರಾಗಿರುವ ಶಿವಾನಂದ ಪಾಟೀಲರು ಹೊಸ ದಾಖಲೆ ಬರೆದಿದ್ದಾರೆ.

ರಾಜ್ಯದಲ್ಲಿಯೇ ಗರಿಷ್ಠ ಕೃಷಿ ಸಾಲ ನೀಡಿದ ಪ್ರಥಮ ಮೂರು ಬ್ಯಾಂಕುಗಳಲ್ಲಿಯೂ ವಿಡಿಸಿಸಿ ಸ್ಥಾನ ಪಡೆದಿದ್ದು, ೨೦೦೮ ಕೋಟಿ ರೂ. ಕೃಷಿ ಸಾಲ ನೀಡುವ ಮೂಲಕ ರಾಜ್ಯದಲ್ಲಿಯೇ ಅತೀ ಹೆಚ್ಚು ಕೃಷಿ ಸಾಲ ನೀಡಿದ ಮೂರನೇಯ ಬ್ಯಾಂಕ ಪಟ್ಟಿಯಲ್ಲಿದೆ.

ವಿಡಿಸಿಸಿ ಬ್ಯಾಂಕ್ ಆರ್ಥಿಕ ವರ್ಷದಲ್ಲಿ ೨೫.೧೮ ಕೋಟಿ ರೂ. ನಿವ್ವಳ ಲಾಭ:

ವಿಜಯಪುರ : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಸಕ್ತ ರ್ಥಿಕ ರ್ಷದಲ್ಲಿ ೨೫.೧೮ ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜವಳಿ, ಸಕ್ಕರ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಟಕಟ್ಟೆ ಸಚಿವ ರಾದ ಶಿವಾನಂದ ಪಾಟೀಲ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ರ್ಷ ಬ್ಯಾಂಕು ಗಳಿಸಿರುವ ನಿವ್ವಳ ಲಾಭದ ಪ್ರಮಾಣ ಬ್ಯಾಂಕಿನ ಇತಿಹಾಸದಲ್ಲಿಯೇ ಗರಿಷ್ಠವಾಗಿದ್ದು, ವಾಸ್ತವವಾಗಿ ಬ್ಯಾಂಕು ೩೩.೭೧ ಕೋಟಿ ರೂ. ಲಾಭ ಗಳಿಸಿದ್ದು, ಅದರಲ್ಲಿ ೮.೫೩ ಕೋಟಿ ರೂ. ತೆರಿಗೆ ಪಾವತಿ ಮಾಡುವ ಮೂಲಕ ೨೫.೧೮ ಕೋಟಿ ರೂ. ನಿವ್ವಳ ಲಾಭಗಳಿಸಿದಂತಾಗಿದೆ ಎಂದರು.

ಪ್ರಸಕ್ತ ರ್ಥಿಕ ರ್ಷದ ಮರ್ಚ್ ಮಾಸಾಂತ್ಯದ ಅಂಕಿ-ಅಂಶಗಳನ್ನು ಅವಲೋಕಿಸಿದಾಗ ಬ್ಯಾಂಕು ೧೮೫.೪೦ ಕೋಟಿ ರೂ. ಷೇರು, ೪೧೨.೩೬ ಕೋಟಿ ರೂ. ನಿಧಿಗಳು, ೩೮೧೪.೧೬ ಕೋಟಿ ರೂ. ಠೇವು, ೪೯೦೧ ಕೋಟಿ ರೂ. ದುಡಿಯುವ ಬಂಡವಾಳ, ೧೬೮ ಕೋಟಿ ರೂ. ಸಾಲದ ಬಾಕಿ ಹೊಂದಿದೆ ಎಂದು ವಿವರಿಸಿದರು.

ಸ್ವಂತ ಬಂಡವಾಳ ಪ್ರಮಾಣದಲ್ಲಿಯೂ ಏರಿಕೆಯಾಗಿದ್ದು, ಕಳೆದ ರ್ಷ ೫೪೦ ಕೋಟಿ ರೂ. ಇದ್ದ ಸ್ವಂತ ಬಂಡವಾಳ ಪ್ರಸಕ್ತ ರ್ಷದಲ್ಲಿ ೫೯೮ ಕೋಟಿ ರೂ.ಗೆ ಏರಿಕೆಯಾಗಿದ್ದು, ಠೇವಣಿ ಪ್ರಮಾಣ ೩೪೯೫ ಕೋಟಿ ರೂ.ಗಳಿಂದ ೩೮೧೪ ಕೋಟಿ ರೂ.ಗಳಷ್ಟು ಏರಿಕೆ, ದುಡಿಯುವ ಬಂಡವಾಳ ಪ್ರಮಾಣ ೪೭೦೧ ಕೋಟಿ ರೂ.ಗಳಿಂದ ೪೯೦೨ ಕೋಟಿ ರೂ ಅಂದರೆ ೨೦೧ ಕೋಟಿ ರೂ. ಏರಿಕೆಯಾಗಿರುವ ವಿಷಯವನ್ನು ಸಚಿವ ಶಿವಾನಂದ ಪಾಟೀಲ ಹಂಚಿಕೊಂಡರು. ಕೃಷಿ ಚಟುವಟಿಕೆಗಳಿಗಾಗಿ ೧೮೬೪ ಕೋಟಿ ರೂ. ಕೃಷಿಯೇತರ ಸಾಲವಾಗಿ ೧೧೦೬ ಕೋಟಿ ರೂ. ಸೇರಿದಂತೆ ಒಟ್ಟು ೨೯೭೦ ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದರು.


ವಹಿವಾಟು ಪ್ರಮಾಣದಲ್ಲಿ ದಾಖಲೆ ಏರಿಕೆ:

೧೨೩೩ ಕೋಟಿ ರೂ,.ಗಳ ಹೆಚ್ಚುವರಿ ಸಂಪನ್ಮೂಲವನ್ನು ಶಾಸನಬದ್ಧ ಹಾಗೂ ಇತರ ಬ್ಯಾಂಕುಗಳಲ್ಲಿ ಲಾಭದಾಯಕವಾಗಿ ಹೂಡಿಕೆ ಮಾಡಲಾಗಿದೆ, ಕಳೆದ ರ್ಷ ೬೬೦೭ ಕೋಟಿ ರೂ. ವಹಿವಾಟು ನಡೆಸಿದ್ದು ಬ್ಯಾಂಕು ಈ ರ್ಷ ೭೦೯೫ ಕೋಟಿ ರೂ. ವಹಿವಾಟು ನಡೆಸಿದ್ದು, ವಹಿವಾಟು ಪ್ರಮಾಣದಲ್ಲಿ ೪೮೮ ಕೋಟಿ ರೂ. ಏರಿಕೆಯಾಗಿದೆ ಎಂದರು.

ಶಿವಾನಂದ ಪಾಟೀಲರ ಅವಧಿಯಲ್ಲಿ ೨೩೩ ಕೋಟಿ ರೂ.ಲಾಭ:

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಚಿವ ಶಿವಾನಂದ ಪಾಟೀಲರು ಅಧಿಕಾರ ಸ್ವೀಕರಿಸಿದ ಅವಧಿಯಿಂದ ಇಲ್ಲಿಯವರೆಗೂ ಬ್ಯಾಂಕು ಲಾಭದತ್ತ ಮುನ್ನಡೆಯುತ್ತಿದೆ, ಇದಕ್ಕೆ ಎಲ್ಲ ರೈತ ಬಂಧುಗಳು, ಆಡಳಿತ ಮಂಡಳಿ, ಸಿಬ್ಬಂದಿಯ ಸಹಕಾರವೇ ಕಾರಣ ಎಂದ ಅವರು ಬ್ಯಾಂಕಿನ ಒಟ್ಟು ಲಾಭಕ್ಕೆ ನನ್ನ ಅವಧಿಯಲ್ಲಿ ಆಗಿರುವ ಲಾಭದ ಪ್ರಮಾಣ ಶೇ. ೯೭.೪೪ ರಷ್ಟು ಸೇರಿದೆ ಎಂದು ಸಂತಸ ಹಂಚಿಕೊಂಡರು.

೧೯೯೭ ರಿಂದ ಇಲ್ಲಿಯವರೆಗೆ ವಿಭಜನೆ ಪರ್ವದಲ್ಲಿ ೩೩.೨೬ ಕೋಟಿ ರೂ. ಲಾಭ ಗಳಿಸಿದ್ದರೆ ವಿಭಜನೆ ನಂತರ ೨೦೦೩ ರಿಂದ ೨೦೨೫ ರವರೆಗೆ ಒಟ್ಟು ೨೦೦.೪೨ ಕೋಟಿ ರೂ. ಸೇರಿದಂತೆ ಒಟ್ಟು ೨೩೩.೬೮ ಕೋಟಿ ರೂ. ಲಾಭ ಗಳಿಸಿದೆ.

ಪುರ್ಧನಕ್ಕಾಗಿ ಕೇಂದ್ರಕ್ಕೆ ಒತ್ತಾಯಿಸಿ:

ಡಿಸಿಸಿ ಬ್ಯಾಂಕುಗಳು ಷೆಡ್ಯೂಲ್ಡ್ ಬ್ಯಾಂಕ್ ಆಗಲು ಎಲ್ಲ ರ್ಹತೆ ಹೊಂದಿವೆ, ಆದರೆ ಆರ್ಬಿಐ ನಿಯಮಾವಳಿಗಳ ಪ್ರಕಾರ ಷೆಡ್ಯೂಲ್ಡ್ ಬ್ಯಾಂಕ್ ಆಗಲು ಇನ್ನೂ ಸಮಯ ಬೇಕು, ಏಕೆಂದರೆ ಈ ಎಲ್ಲ ಬ್ಯಾಂಕುಗಳು ರೈತರಿಗೆ ಸಾಲ ನೀಡುತ್ತವೆ ಲಾಭದ ದೃಷ್ಟಿಯಿಂದ ಈ ಸಂಸ್ಥೆಗಳು ಸಾಲ ನೀಡುವುದಿಲ್ಲ, ಹೀಗಾಗಿ ಲಾಭಾಂಶ ಕಡಿಮೆ ಆಗುವುದರಿಂದ ಷೆಡ್ಯೂಲ್ಡ್ ಬ್ಯಾಂಕ್ ಆಗುವುದು ಕಷ್ಟ ಸಾಧ್ಯ ಎಂದು ಸಚಿವ ಶಿವಾನಂದ ಪಾಟೀಲ ವಿಶ್ಲೇಷಿಸಿದರು.

ಈ ಹಿಂದೆ ನಬಾರ್ಡ್ ಪುರ್ಧನ ಡಿಸಿಸಿ ಬ್ಯಾಂಕುಗಳ ಮೂಲಕ ರೈತರಿಗೂ ವರದಾನವಾಗಿತ್ತು, ಈ ಹಿಂದೆ ನಬರ್ಡ್ ಶೇ.೬೦ ರಷ್ಟು ಪುರ್ಧನ ನೀಡುತ್ತಿತ್ತು, ಈ ಪ್ರಮಾಣ ಶೇ.೫೦, ನಂತರ ಶೇ.೪೦ ಕ್ಕೆ ಇಳಿಕೆಯಾಗಿ ಈಗ ಕೇವಲ ಶೇ.೧೩ ಕ್ಕೆ ಸೀಮಿತಗೊಂಡಿದೆ, ಹೀಗಾಗಿ ಈ ಪುರ್ಧನ ಪ್ರಮಾಣ ಏರಿಕೆಗಾಗಿ ರಾಜ್ಯದ ಎಲ್ಲ ಸಂಸದರು ಕೇಂದ್ರ ರ್ಕಾರಕ್ಕೆ ಒತ್ತಾಯ ಮಾಡಬೇಕು ಎಂದು ಈ ಸಂರ್ಭದಲ್ಲಿ ಅವರಿಗೆ ಮನವಿ ಮಾಡಿಕೊಳ್ಳುವೆ ಎಂದರು.  

ಡಿಸಿಸಿ ಬ್ಯಾಂಕ್ ನರ್ದೇಶಕರಾದ ಚಂದ್ರಶೇಖರಗೌಡ ಪಾಟೀಲ ಮನಗೂಳಿ, ಸುರೇಶ ಬಿರಾದಾರ, ಸಹಕಾರ ಸಂಘಗಳ ಉಪನಿಬಂಧಕಿ ಎಸ್.ಕೆ. ಭಾಗ್ಯಶ್ರೀ, ಆಡಳಿತ ಮಂಡಳಿ ಸಲಹೆಗಾರ ಜೆ. ಕೋಟ್ರೇಶಿ, ಸಿಇಓ ಎಸ್.ಎ. ಢವಳಗಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಪಿಪಿಪಿ ಮಾದರಿ ಕಾಲೇಜಿನಿಂದ ಶೋಷಣೆಗೆ ದಾರಿ : ಸಚಿವ ಶಿವಾನಂದ ಆತಂಕ


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯ ಅಪರಸ್ವರ ಜಿಲ್ಲೆಯಾದ್ಯಂತ ಪ್ರತಿಧ್ವನಿಸುತ್ತಿದ್ದು, ಈ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯ ಬಗ್ಗೆ ಸ್ವತ: ಸಚಿವ ಶಿವಾನಂದ ಪಾಟೀಲ ಸಹ ವಿರೋಧ ವ್ಯಕ್ತಪಡಿಸಿದ್ದು, ಇದು ಜನರ ಶೋಷಣೆಗೆ ಕಾರಣವಾಗುತ್ತದೆ ಹೊರತು ಜನರಿಗೆ ಯಾವ ರೀತಿಯ ಪ್ರಯೋಜನವೂ ಆಗುವುದಿಲ್ಲ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರದಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಅನಿವಾರ್ಯತೆಯೇ ಇಲ್ಲ, ಒಂದು ವೇಳೆ ಈ ಮಾದರಿಯಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆಯಾದರೆ ಅದು ಒಂದು ರೀತಿ ಜನರ ಶೋಷಣೆಗೆ ಕಾರಣವಾಗುತ್ತದೆ, ಈ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿಯೂ ವಿರೋಧಿಸಿದ್ದೇನೆ, ಮುಖ್ಯಮಂತ್ರಿಗಳಿಗೂ ಸಹ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿರುವೆ ಎಂದರು.

ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿಯೇ ಸಾಕಷ್ಟು ಜಾಗ ಹಾಗೂ ನಾನು ಸಚಿವನಾಗಿದ್ದ ಸಂದರ್ಭದಲ್ಲಿ ಅನೇಕ ಪೂರಕ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ, ನೂರಾರು ಎಕರೆ ಜಾಗ, ಟ್ರಾಮಾ ಸೆಂಟರ್, ಕ್ಯಾನ್ಸರ್ ಸೆಂಟರ್ ಹೀಗೆ ಎಲ್ಲವೂ ಇದೆ, ಹೀಗಿರುವಾಗ ಖಾಸಗಿಯವರೆಗೆ ಮಣೆ ಹಾಕುವ ಅವಶ್ಯಕತೆಯೇ ಇಲ್ಲ ಎಂದರು.

ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ವಿಷಯವಾಗಿ ಈ ಹಿಂದೆಯೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾಕ್ಕೆ ಪತ್ರ ಬರೆದಿದ್ದೇನೆ, ಅವಶ್ಯಕತೆ ಇದ್ದರೆ ಇನ್ನೊಮ್ಮೆ ಪತ್ರ ಬರೆಯುವೆ ಎಂದರು.

ನನಗೆ ಕ್ರೆಡಿಟ್ ಬೇಡವೇ ಬೇಡ :

ನಾನು ಆರೋಗ್ಯ ಸಚಿವನಾಗಿದ್ದ ಸಂದರ್ಭದಲ್ಲಿ ಟ್ರಾಮಾ ಸೆಂಟರ್, ೩೦೦ ಹಾಸಿಗೆಯುಳ್ಳ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಸೆಂಟರ್ ಎಲ್ಲವೂ ಆರಂಭಿಸಲು ದಿವ್ಯ ಸಂಕಲ್ಪ ಮಾಡಿ ಯಶಸ್ವಿಯೂ ಆಗಿದೆ, ಆದರೆ ಅದರ ಕಾರ್ಯಾರಂಭಕ್ಕೆ ಸರ್ಕಾರಕ್ಕೆ ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂಬ ನೋವು ನನ್ನನ್ನು ಈಗಲೂ ಕಾಡುತ್ತದೆ ಎಂದು ಸಚಿವ ಶಿವಾನಂದ ಪಾಟೀಲ ಬೇಸರ ವ್ಯಕ್ತಪಡಿಸಿದರು.

ನನಗೆ ಕ್ರೆಡಿಟ್ ಬರುವುದನ್ನು ತಪ್ಪಿಸಲು ಸಹ ಈ ರೀತಿ ವಿಳಂಬವಾಗುತ್ತಿದೆಯೇನೋ ಎಂದು ಸಹ ನೋವಾಗುತ್ತದೆ, ಆದರೆ ನಾನು ಕ್ರೆಡಿಟ್ಗಾಗಿ ಮಾಡಿಲ್ಲ, ಜನರ ಒಳಿತಿಗಾಗಿ ಇದನ್ನು ಮಾಡಿದ್ದೇನೆ, ನನಗೆ ಕ್ರೆಡಿಟ್ ಬರುತ್ತದೆ ಎಂದು ಯೋಚಿಸುವವರು ಬೇಕಾದರೆ ತಾವೇ ಕ್ರೆಡಿಟ್ ತೆಗೆದುಕೊಂಡರೂ ಚಿಂತೆಯಿಲ್ಲ ಜನರಿಗಾಗಿ ಈ ಕಾರ್ಯ ಮಾಡಲಿ ಎಂದರು. ಈ ವಿಷಯದಲ್ಲಿ ನನಗೆ ಸಹಕಾರ ಸಿಗಲಿಲ್ಲ ಎನ್ನುವ ವಿಷಯದಲ್ಲಿಯೂ ನನಗೆ ನೋವಿದೆ ಎಂದರು.

ವಿಜಯಪುರಕ್ಕೆ ಸಂಸದರು  ಏಮ್ಸ್ ತರಲಿ:

ವಿಜಯಪುರ : ನೀವು ಗೋಳಗುಮ್ಮಟವಂತೂ ಕಟ್ಟಲು ಆಗಲ್ಲ, ಕೊನೆಪಕ್ಷ ಏಮ್ಸ್ ಕಾಲೇಜು ವಿಜಯಪುರದಲ್ಲಿ ಸ್ಥಾಪನೆಯಾಗುವಂತೆ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿ ಎಂದು ಸಚಿವ ಶಿವಾನಂದ ಪಾಟೀಲ ಸಂಸದ ರಮೇಶ ಜಿಗಜಿಣಗಿ ಅವರಿಗೆ ಒತ್ತಾಯಿಸಿದರು.

ಈಗಾಗಲೇ ಧಾರವಾಡದಲ್ಲಿ ಐಐಟಿ ಸೇರಿದಂತೆ ಅನೇಕ ಪ್ರತಿಷ್ಠಿತ ಕಾಲೇಜುಗಳು ಸ್ಥಾಪನೆಯಾಗಿವೆ, ವಿಜಯಪುರದಲ್ಲಿ ಏಮ್ಸ್ ಸ್ಥಾಪನೆಯಾದರೆ ಅತ್ಯಂತ ಅನುಕೂಲವಾಗಿದೆ, ಈ ವಿಷಯದಲ್ಲಿ ಸಂಸದರು ಗಂಭೀರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಏಮ್ಸ್ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಸೆ.1 ರಂದು ಬಸವ ಸಂಸ್ಕೃತಿ ಅಭಿಯಾನಕ್ಕೆ ಚಾಲನೆ | ನಾಡಿನ ಎಲ್ಲೆಡೆಯಿಂದ ಬಸವ ಜನ್ಮಭೂಮಿಗೆ ಜನಸಾಗರ

ಈ ದಿವಸ ಕನ್ನಡ‌ ದಿನ ಪತ್ರಿಕೆ ವಾರ್ತೆ

ವಿಜಯಪುರ : ಬಸವ ಸಂಸ್ಕೃತಿ ವಿಶ್ವ ಸಂಸ್ಕೃತಿ, ಈ ಸಂಸ್ಕೃತಿಯ ಶ್ರೇಷ್ಠತೆಯ ಪ್ರಸಾರಕ್ಕಾಗಿ ಬಸವ ಸಂಸ್ಕೃತಿ ಅಭಿಯಾನವನ್ನು ಲಿಂಗಾಯತ ಮಠಾಧೀಪತಿಗಳ ಒಕ್ಕೂಟದ ನೇತೃತ್ವದಲ್ಲಿ ಸಂಘಟಿಸಲಾಗಿದ್ದು, ಸೆ.೧ ರಿಂದ ಬಸವ ಜನ್ಮಭೂಮಿ ಬಸವನ ಬಾಗೇವಾಡಿಯಿಂದ ಈ ಅಭಿಯಾನ ಆರಂಭಗೊಳ್ಳಲಿದ್ದು ಅ.೧ರವರೆಗೆ ಬಸವ ಸಂಸ್ಕೃತಿ ಅಭಿಯಾನ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲುಪಲಿದೆ ಎಂದು ಬಸವನಬಾಗೇವಾಡಿ ವಿರಕ್ತಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು ಹೇಳಿದರು,

ಗುರುವಾರ ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಭಿಯಾನದ ವಿವರ ನೀಡಿದ ಶ್ರೀಗಳು, ಬಸವಾದಿ ಶರಣರ ಆಶಯಗಳನ್ನು ಬಿತ್ತುವ ದೃಷ್ಟಿಯಿಂದ ಈ ಅಭಿಯಾನ ನಡೆಸಲಾಗುತ್ತಿದೆ, ಬಸವಣ್ಣ ಅವರನ್ನು ರಾಜ್ಯದ ಸಾಂಸ್ಕೃತಿಕ ನಾಯಕನನ್ನಾಗಿ ಘೋಷಣೆ ಮಾಡಿ ಒಂದು ವರ್ಷ ಪೂರ್ಣಗೊಂಡ ಸಂತಸದಲ್ಲಿಯೂ ಈ ಅಭಿಯಾನ ಮಹತ್ವ ಪಡೆದುಕೊಂಡಿದೆ ಎಂದರು.

ಸೆ.೧ ರಂದು ಬಸವನ ಬಾಗೇವಾಡಿಯಲ್ಲಿ ಸಂಜೆ ೬ ಕ್ಕೆ ಬಸವೇಶ್ವರ ಸಿಬಿಎಸ್ಐ ಶಾಲೆಯ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಈ ಅಭಿಯಾನಕ್ಕೆ ವಿದ್ಯುಕ್ತವಾಗಿ ಸಂಚರಿಸಲಿದೆ. ಅದಕ್ಕೂ ಮುನ್ನ ಬಸವಜನ್ಮ ಸ್ಮಾರಕದಿಂದ ಅಭಿಯಾನ ಉದ್ಘಾಟನೆಯಾಗುವ ಸ್ಥಳದವರೆಗೆ ಬೃಹತ್ ಪಾದಯಾತ್ರೆ ನಡೆಯಲಿದೆ. ಹುಬ್ಬಳ್ಳಿ ಮೂರು ಸಾವಿರಮಠದ ಶ್ರೀ ಡಾ.ಗುರುಸಿದ್ಧ ರಾಜಯೋಗಿಂದ್ರ ಮಹಾಸ್ವಾಮಿಜಿ, ಶಿವಮೊಗ್ಗದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ, ಡಾ.ಗಂಗಾಮಾತಾಜಿ ಸೇರಿದಂತೆ ಹಲವಾರು ಮಠಾಧೀಶರ ಪಾವನ ಸಾನಿಧ್ಯದಲ್ಲಿ ಅಭಿಯಾನಕ್ಕೆ ಚಾಲನೆ ದೊರಕಲಿದೆ. `ಮಾತು ವಚನವಾಗಬೇಕು' ಎಂಬ ವಿಷಯದ ಕುರಿತು ಖ್ಯಾತ ಸಾಹಿತಿ ವೀರಣ್ಣ ರಾಜೂರ ಹಾಗೂ ಶಿವಶರಣೆಯರೆ ಜೀವನಾದರ್ಶ ಎಂಬ ವಿಷಯದ ಕುರಿತು ಡಾ.ಮೀನಾಕ್ಷಿ ಬಾಳಿ ಉಪನ್ಯಾಸ ಮಂಡಿಸಲಿದ್ದು, ಸಚಿವರಾದ ಡಾ.ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಹಲವಾರು ಜನಪ್ರತಿನಿಧಿಗಳು ಉಪಸ್ಥಿತರಿರುವರು ಎಂದರು.

ಅಂದು ಆರಂಭವಾಗುವ ಅಭಿಯಾನ ಹಾಗೂ ಅಭಿಯಾನಕ್ಕಾಗಿ ಸಿದ್ಧಪಡಿಸಿದ ಬಸವಾದಿ ಶರಣರ ರಥ ಕಲಬುರ್ಗಿ, ಬೀದರ್, ಯಾದಗೀರ, ರಾಯಚೂರು, ಬಳ್ಳಾರಿ, ವಿಜಯನಗರ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ ಬೆಂಗಳೂರು ನಗರಕ್ಕೆ ತಲುಪಿ ಸಂಪನ್ನಗೊಳ್ಳಲಿದೆ ಎಂದರು.

ಒಟ್ಟುಗೂಡಿಸುವ ಪ್ರಯತ್ನ

ಆಮಮಂತ್ರಣ ಪತ್ರಿಕೆ ಹಾಗೂ ಪ್ರಚಾರ ಪರಿಕರಗಳನ್ನು ಬಿಡುಗಡೆ ಮಾಡಿದ ಮಾತನಾಡಿದ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ವೀರಶೈವ ಹಾಗೂ ಲಿಂಗಾಯತದಲ್ಲಿ ಆಗಿರುವ ಎಲ್ಲ ಭಿನ್ನಾಭಿಪ್ರಾಯಗಳನ್ನು ದೂರ ಮಾಡಿ ಒಟ್ಟಿಗೆ ಹೋಗುವ ನಿಟ್ಟಿನಲ್ಲಿ ಮೊನ್ನೆ ಮಹತ್ವದ ಚರ್ಚೆ ನಡೆದಿದೆ, ಹೀಗಾಗಿ ಸಾಮರಸ್ಯ ಕಾಪಾಡಿಕೊಂಡು ಹೋಗಲು ಎರಡು ಕಡೆ ಮನವಿ ಮಾಡಿಕೊಳ್ಳಲಾಗಿದೆ. ಹೀಗಾಗಿ ಒಟ್ಟಾಗಿ ಹೋಗುವ ಪ್ರಯತ್ನ ನಡೆದಿದೆ ಎಂದರು.

ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ, ಸರ್ಕಾರ ಅನುದಾನ ಒದಗಿಸದೇ ಹೋದರೆ ಸ್ಥಳೀಯ ಸಂಪನ್ಮೂಲಗಳಿಂದ ಅರ್ಧ ಅನುದಾನ ಪ್ರಾಧಿಕಾರ ಬಳಕೆ ಮಾಡುವ ನಿಟ್ಟಿನಲ್ಲಿಯೂ ಕ್ರಮ ವಹಿಸಲಾಗುವುದು ಎಂದರು.  

ಸಂಘಟಕರಾದ ಬಸನಗೌಡ ಹರನಾಳ ಮಾತನಾಡಿ, ಬಸವ ಸಂಸ್ಕೃತಿ ವಿಶ್ವ ಸಂಸ್ಕೃತಿ, ನಮ್ಮಲ್ಲಿ ಯಾವ ಬೇಧವಿಲ್ಲ, ಈ ಬಸವಾದಿ ಶರಣರ ಆಶಯವನ್ನು ತಿಳಿಸುವುದಕ್ಕಾಗಿಯೇ ಈ ಅಭಿಯಾನ ನಡೆಸಲಾಗುತ್ತಿದ್ದು, ೧,೧೦೦ ಮಹಿಳೆಯರು ವಚನ ಪುಸ್ತಕಗಳ ಹೊತ್ತು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ವಿ.ಸಿ. ನಾಗಠಾಣ, ಸಾಹಿತಿ ಜಂಬುನಾಥ ಕಂಚ್ಯಾಣಿ, ಈರಣ್ಣ ಪಟ್ಟಣಶೆಟ್ಟಿ, ಡಾ.ರವಿ ಬಿರಾದಾರ, ಪ್ರಭುಗೌಡ ಪಾಟೀಲ, ಮಹಾದೇವಿ ಗೋಕಾಕ, ಹಾಸಿಂಪೀರ ವಾಲೀಕಾರ, ಪ್ರಕಾಶ ಬೆಣ್ಣೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.