Saturday, August 30, 2025

ಡೋಣಿ ನದಿ ಪಾತ್ರದಲ್ಲಿನ ಬೆಳೆ ನಷ್ಟ ಕುರಿತು ಜಂಟಿ ಸಮೀಕ್ಷೆ ಶೀಘ್ರದಲ್ಲೇ ಪೂರ್ಣ ಸಮೀಕ್ಷೆ ವರದಿಯಾಧಾರಿಸಿ ಬೆಳೆ ಪರಿಹಾರಕ್ಕೆ ಕ್ರಮ : ಜಿಲ್ಲಾಧಿಕಾರಿ ಡಾ.ಆನಂದ ಕೆ.


 ವಿಜಯಪುರ: ಮುಂಗಾರು ಮಳೆ ಹಿನ್ನಲೆಯಲ್ಲಿ ಡೋಣಿ ನದಿ ತೀರದ ಪ್ರದೇಶದಲ್ಲಿನ ಕೃಷಿ ಭೂಮಿ ಪ್ರವಾಹಕ್ಕೊಳಗಾಗಿ ಅಂದಾಜು 5500 ಹೆಕ್ಟೇರ್ ಜಮೀನು ಮುಳುಗಡೆಯಾಗಿ ಬೆಳೆಗಳು ಹಾನಿಯಾಗಿದ್ದು, ಈ ಕುರಿತು ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಶೀಘ್ರದಲ್ಲೇ ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಲಿದ್ದು, ವರದಿಯನುಸಾರ ಬೆಳೆ ನಷ್ಟವಾಗಿರುವ ರೈತರ ಖಾತೆಗೆ ನೇರವಾಗಿ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ತಿಳಿಸಿದರು. 

 ಡೋಣಿ ನದಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಶನಿವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರೊಂದಿಗೆ ಜಂಟಿಯಾಗಿ ಜಿಲ್ಲೆಯ ಸಾರವಾಡ, ದದಾಮಟ್ಟಿ, ಉಕುಮನಾಳ ಹಾಗೂ ಎಂಬತ್ನಾಳ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿ ಮಾತನಾಡಿದರು. 

 ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಈಗಾಗಲೇ ಸ್ಥಳೀಯ ರೈತರು ಕೆಲವು ಬೇಡಿಕೆಗಳನ್ನು ಸಲ್ಲಿಸಿದ್ದು, ಇವರ ಬೇಡಿಕೆಯನ್ವಯ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾಗುವ ಅನುದಾನ, ಸೂಕ್ತ ಯೋಜನೆ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು. 

 ಡೋಣಿ ನದಿಯ ಪ್ರವಾಹ ನಿಯಂತ್ರಣಕ್ಕಾಗಿ ಅಂದಾಜು 7.5 ಕೋಟಿ ರೂ.ಗಳ ವಿಪತ್ತು ನಿರ್ವಹನಾ ಉಪಶಮನ ನಿಧಿಯಡಿ ಈಗಾಗಲೇ ಪಂಚಾಯತ್ ರಾಜ್ ಇಂಜಿನೀಯರಿAಗ್ ವಿಭಾಗದಿಂದ ಸೇತುವೆ ಮುಂಭಾಗ ಹಾಗೂ ಹಿಂಭಾಗದಲ್ಲಿನ ಒಂದು ಕಿ.ಮೀ. ಅಂತರದಲ್ಲಿ ಹೂಳೂ ತೆಗೆಯುವುದು, ಗಿಡಗಂಟಿಗಳನ್ನು ತೆರವುಗೊಳಿಸುವುದು ಹಾಗೂ ಪಕ್ಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗದಂತೆ ಅರಣ್ಯೀಕರಣ ಕಾಮಗಾರಿ ಸೇರಿದಂತೆ ಪ್ರವಾಹ ನಿಯಂತ್ರಣಕ್ಕಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ನವೆಂಬರ್ ಅಂತ್ಯದಲ್ಲಿ ಹೂಳು ತೆಗೆಯುವುದು, sಸೇತುವೆ ಪಾತ್ರದಲ್ಲಿ ಅರಣ್ಯೀಕರಣ ಕಾಮಗಾರಿ ಸಹ ಆರಂಭವಾಗಲಿದ್ದು, ಡೋಣಿನದಿ ಪ್ರವಾಹ ನಿಯಂತ್ರಣ ಕಾಮಗಾರಿಗಳನ್ನು ಆದ್ಯತೆಯಾಗಿ ತೆಗೆದುಕೊಂಡು ಡೋಣಿ ನದಿಯಿಂದಾಗುವ ಸಮಸ್ಯೆಗಳನ್ನು ಅವಲೋಕಿಸಿ ಅದಕ್ಕೆ ಸಂಬAಧಿಸಿದ ಕಾಮಗಾರಿಗಳನ್ನು ಹಂತ ಹಂತವಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. 

 ಈ ಸಂದರ್ಭದಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ,ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್ ಭಾವಿದೊಡ್ಡಿ,ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ ತಹಶಿಲ್ದಾರರಾದ ಶ್ರೀಮತಿ ಶಾಂತಲಾ ಚಂದನ, ರೈತರಾದ ಭೀಮಸೇನ, ಮಲ್ಲಿಕಾರ್ಜುನ ಭಟಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕ್ರೀಡೆ ಕೇವಲ ಆಟವಲ್ಲ, ಜೀವನದ ಶಿಸ್ತು, ಮೌಲ್ಯಗಳ ಪಾಠ – ಡಾ.ರವಿ ಗೋಲಾ

ವಿಜಯಪುರ: ಹಾಕಿಯ ಜಾದುಗಾರ ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ ಹಾಗೂ ಶಿಸ್ತುಪರ ವ್ಯಕ್ತಿತ್ವದ ಮಾದರಿ ಎಂದು ಸಿಂದಗಿ ಪೊರವಾಲ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ರವಿ ಗೋಲಾ ಅವರು ಹೇಳಿದರು.

“ನಗರದ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣಾ ಕಾರ್ಯಕ್ರಮದಲ್ಲಿ, ಭಾರತದ ಹಾಕಿ ದಂತಕಥೆ ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.”

ಅವರ ಅದ್ಭುತ ಆಟದ ಬಗ್ಗೆ ಮಾತನಾಡಿ, ಹಿಟ್ಲರ್ ಕೂಡ ಧ್ಯಾನಚಂದರನ್ನು ಮೆಚ್ಚಿಕೊಂಡಿದ್ದ ಘಟನೆ ಪ್ರಸ್ತಾಪ ಮಾಡಿದರು. ಒಲಿಂಪಿಕ್ ಕ್ರೀಡಾಕೂಟದಲ್ಲಿ ನೀಡಿದ ಶ್ರೇಷ್ಠ ಪ್ರದರ್ಶನದಿಂದ ಧ್ಯಾನಚಂದ ವಿಶ್ವದ ಗಮನ ಸೆಳೆದಿದ್ದರು. ಹಿಟ್ಲರ್ ಅವರಿಗೂ ಆಶ್ಚರ್ಯ ಹುಟ್ಟಿದಂತಹ ಕ್ರೀಡಾ ಪ್ರತಿಭೆ ಅವರದ್ದಾಗಿತ್ತು. ಧ್ಯಾನಚಂದರ ಸಾಧನೆಗಳು ಇಂದಿಗೂ ಪ್ರತಿಯೊಬ್ಬ ಕ್ರೀಡಾಭಿಮಾನಿಗೆ ಪ್ರೇರಣೆಯಾಗಿದೆ ಎಂದು ಅವರು ಹೇಳಿದರು. 

ವಿವಿಯ ಕುಲಸಚಿವ ಶಂಕರಗೌಡ ಎಸ್. ಸೋಮನಾಳ ಮಾತನಾಡಿ, ವಿದ್ಯಾರ್ಥಿಗಳೊಂದಿಗೆ ರಸಪ್ರಶ್ನೆ ನಡೆಸಿ ನಗದು ಬಹುಮಾನ ವಿತರಿಸಿದರು. ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಭೋದಿಸಿ, ಮಕ್ಕಳಿಗೆ ಕ್ರೀಡೆಯ ಮಹತ್ವವನ್ನು ಮನದಟ್ಟು ಮಾಡಿಕೊಟ್ಟರು. ಕ್ರೀಡೆಯ ಮೂಲಕ ಶಿಸ್ತು, ಆರೋಗ್ಯ ಹಾಗೂ ಸಹಕಾರ ಮನೋಭಾವವನ್ನು ಬೆಳೆಸಿಕೊಳ್ಳಬಹುದೆಂದು ಅವರು ವಿದ್ಯಾರ್ಥಿಗಳಿಗೆ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ವಿಜಯಾ ಕೋರಿಶೆಟ್ಟಿ ಮಾತನಾಡಿ, ಕ್ರೀಡೆಯ ಮೂಲಕ ಅನೇಕ ಸಾಮಾಜಿಕ ಹಾಗೂ ನೈತಿಕ ಗುಣಗಳನ್ನು ಬೆಳೆಸಿಕೊಳ್ಳಬಹುದು. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ಮತ್ತು ಮಾನಸಿಕ ಶಕ್ತಿ ವೃದ್ಧಿಯಾಗುವುದರೊಂದಿಗೆ, ಸೋಲು–ಗೆಲುವುಗಳನ್ನು ಸಮಾನ ಮನೋಭಾವದಿಂದ ಸ್ವೀಕರಿಸುವ ಗುಣ ಬೆಳೆಯುತ್ತದೆ ಎಂದು ವಿದ್ಯಾರ್ಥಿನಿಯರಿಗೆ ತಿಳಿಸಿದರು.

ಶಿಕ್ಷಣ ನಿಕಾಯದ ಡೀನ್ ಪ್ರೊ. ಸಕ್ಪಾಲ್ ಹೂವಣ್ಣ ಮಾತನಾಡಿ, ವಿದ್ಯಾರ್ಥಿನಿಯರಿಗೆ ದೈಹಿಕ ಚಟುವಟಿಕೆಗಳ ಮಹತ್ವವನ್ನು ವಿವರಿಸಿದರು. ನಿತ್ಯದ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಿಂದ ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಶಕ್ತಿ, ಆತ್ಮವಿಶ್ವಾಸ ಮತ್ತು ಶಿಸ್ತು ಕೂಡ ಬೆಳೆಸಿಕೊಳ್ಳಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ.ಶ್ರೀನಿವಾಸ, ಡಾ.ಕಿರಣ ಜಿ.ಎನ್, ಪ್ರೊ.ಜ್ಯೋತಿ ಉಪಾದ್ಯೆ, ಡಾ.ರಮೇಶ ಸೋನಕಾಂಬ್ಳೆ, ಡಾ.ವಿಶ್ವನಾಥ ನಡಕಟ್ಟಿ, ಮತ್ತು ಸ್ನಾತಕ, ಸ್ನಾತಕೋತ್ತರ ಹಾಗೂ ಬೊಧಕ ಮತ್ತು ಬೊಧಕೇತರ ಸಿಬ್ಬಂದಿಗಳು ಮತ್ತಿತರಿದ್ದರು. ಕ್ರೀಡಾ ನಿರ್ದೇಶಕ ಪ್ರೊ. ಹನುಮಂತಯ್ಯ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೊ.ಜ್ಯೋತಿ ಉಪಾದ್ಯೆಯವರು ನಿರೂಪಿಸಿದರು, ಡಾ.ಕಿರಣ ಜಿ.ಎನ್ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.