Thursday, June 11, 2026

ಅಭಿವೃದ್ಧಿ ಯೋಜನೆಗಳ ಜಾಗೃತಿ ಪತ್ರಕರ್ತರ ಆದ್ಯ ಕರ್ತವ್ಯ: ಯಡಳ್ಳಿ


ವಿಜಯಪುರ: ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಮತ್ತಿತರ ಅಭಿವೃದ್ಧಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಪತ್ರಕರ್ತರು ಮಕ್ಕಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕಾನಿಪ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಹೇಳಿದರು.

ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಹೈದರಾಬಾದ್‍ನ ಯುನಿಸೆಫ್ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡ ಮಕ್ಕಳ ವಿಷಯಗಳ ಕುರಿತು ಕರ್ನಾಟಕ ರಾಜ್ಯದ ಪತ್ರಕರ್ತರಿಗೆ ಪರಿಚಯ ವಿಷಯದಡಿ ಕಿಶೋಧರ ಆರೋಗ್ಯ ಮತ್ತು ಪೌಷ್ಟಿಕತೆ, ಸಾಂಕ್ರಾಮಿಕವಲ್ಲದ ರೋಗಗಳು, ಆರೋಗ್ಯಕರ ಆಹಾರ ಪದ್ಧತಿ ಹಾಗೂ ರಸ್ತೆ ಸುರಕ್ಷತೆ ಕುರಿತ ಎರಡನೇ ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಪತ್ರಕರ್ತರು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಯುನಿಸೆಫ್ ಮಕ್ಕಳಿಗಾಗಿ ಜಗತ್ತಿನಾದ್ಯಂತ ಸಕ್ರಿಯ ಕೆಲಸ ಮಾಡುತ್ತಿದೆ. ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಇನ್ನಿತರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಒಬ್ಬ ಪತ್ರಕರ್ತನಿಗೆ ಈ ಕಾರ್ಯಾಗಾರ ನೀಡುವುದರಿಂದ ಒಂದು ಲಕ್ಷ ಜನರಿಗೆ ಮಾಹಿತಿ ತಲುಪಿಸಿದಂತೆ ಆಗಲಿದೆ. ಒತ್ತಡದ ನಡುವೆಯೂ ನೀವೆಲ್ಲ ಕಾರ್ಯಾಗಾರಕ್ಕೆ ಬಂದಿದ್ದು ಖುಷಿ ತಂದಿದೆ. ಮಾಧ್ಯಮ ಬದಲಾಗಿದೆ. ಆದರೂ ಬದಲಾವಣೆ ಮಾಧ್ಯಮದಿಂದಲೇ ಸಾಧ್ಯ. ಇಂದು ರೀಲ್ಸ್ ಯುಗ ಬಂದಿದೆ. ಜನರಿಗೆ ಕೇಳಿಸಿಕೊಳ್ಳುವ ವ್ಯವಧಾನ ಇಲ್ಲ. ತಪ್ಪು ಮಾಹಿತಿ ನೀಡಿದರೂ ನಾವು ಸರಿಯಾದ ವಿಷಯ ಬರೆಯಬೇಕು ಎಂದರು.

ಎರಡು ದಿನದ ಕಾರ್ಯಾಗಾರ ಬಗ್ಗೆ ಪತ್ರಕರ್ತರು ತಮ್ಮ ಅನುಭವ ಹಂಚಿಕೊಂಡರು.

ಯುನಿಸೆಫ್ ಪ್ರತಿನಿಧಿ ಪ್ರಶೂನ್ ಸೇನ್, ಮೈಸೂರು ವಿವಿಯ ಸ್ವಪ್ನ ಎಂ.ಎಸ್., ಡಾ.ರಾಕೇಶ್, ಮಂಜುನಾಥ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಅಖಿಲ ಕರ್ನಾಟಕ ಜೊತಿಷಿಗಳ ಒಕ್ಕೂಟ : ಅಧ್ಯಕ್ಷರಾಗಿ ಗುರುರಾಜ ಆಚಾರ್ಯ ಆಯ್ಕೆ

 

ಅಖಿಲ ಕರ್ನಾಟಕ ಜೊತಿಷಿಗಳ ಒಕ್ಕೂಟ : ಅಧ್ಯಕ್ಷರಾಗಿ ಗುರುರಾಜ ಆಚಾರ್ಯ ಆಯ್ಕೆ

ವಿಜಯಪುರ : ಅಖಿಲ ಕರ್ನಾಟಕ ಜೊತಿಷಿಗಳ ಒಕ್ಕೂಟದ ನೂತನ ರಾಜ್ಯಾಧ್ಯಕ್ಷರಾಗಿ ವಿಜಯಪುರದ ಶ್ರೀ ಸಾಕ್ಷಿ ಪಂಚಾಂಗ ಕರ್ತ ಗುರುರಾಜ ಆಚಾರ್ಯ ಹೆರಕಲ್ಲ, ಉಪಾಧ್ಯಕ್ಷರಾಗಿ ಚಿದಂಬರ ಪಂಚಾಂಗ ಸಹಾಯಕ ಪಂಚಾಂಗ ಕರ್ತ ಭುಜಂಗಶರ್ಮಾ ವಿ.ಜೋಷಿ ಆಯ್ಕೆಯಾಗಿದ್ದಾರೆ.

ಧಾರವಾಡದಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯಲ್ಲಿ ಸಂಸ್ಥಾಪಕ ಅಧ್ಯಕ್ಷ ಡಾ.ಆನಂದ ಹಂದಿಗೋಳ, ಪೆÇ್ರ.ಶ್ರೀಕಾಂತ ಮಂಗಸೂಳಿ, ವಾಸ್ತು ತಜ್ಞ ಸುರೇಶ ಕೊಪ್ಪರ ಸೇರಿದಂತೆ ನಿರ್ದೇಶಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಇದೇ ದಿ.13, ಶನಿವಾರ ದಂದು ನೂತನ ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ವಿಜಯಪುರದಲ್ಲಿ ನಡೆಯಲಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, June 5, 2026

ಸಾಧಕರನ್ನು ಪ್ರಶಸ್ತಿಗಳು ಹುಡುಕಿಕೊಂಡು ಬರಬೇಕು: ಚನ್ನಪ್ಪ ಕಟ್ಟಿ

ವಿಜಯಪುರ: ಪ್ರಶಸ್ತಿಗಳು ಸಾಧಕರನ್ನು ಹುಡುಕಿಕೊಂಡು ಬರಬೇಕೇ ವಿನಃ ಪ್ರಶಸ್ತಿಗಳ ಬೆನ್ನತ್ತಿ ಅವರು ಹೋಗಬಾರದು ಎಂದು ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಚನ್ನಪ್ಪ ಕಟ್ಟಿ ಹೇಳಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕಲಬುರಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ, ದಲಿತ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡ ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಪ್ರಶಸ್ತಿಯು ಲೇಖಕರ ಸಾಮಾಜಿ ಜವಾಬ್ದಾರಿಯನ್ನು ಹೆಚ್ಚಿಸುವುದಲ್ಲದೇ ಸಾಧಕರನ್ನು ಪ್ರೋತ್ಸಾಹಿಸಿದಂತಾಗುತ್ತದೆ. ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಈಗಾಗಲೇ ಹಲವು ನಾಡಿನ ಖ್ಯಾತನಾಮ ಹಿರಿಯ ಲೇಖಕರಿಗೆ ಪ್ರಶಸ್ತಿಯನ್ನು ನೀಡಿ, ಅವರನ್ನು ಗೌರವಿಸಿದ್ದು ಕನ್ನಡ ನಾಡು, ನುಡಿಗೆ ಹಿರಿಮೆ ತಂದAತಾಗಿದೆ. ಕಳೆದ ೧೧ ವರ್ಷದ ಹಿಂದೆ ರಾಯಚೂರಿನಲ್ಲಿ ನಡೆದ ಸಮಾರಂಭದಲ್ಲಿ ನನಗೂ ಈ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿ. ಸದ್ಯ ಈ ಪ್ರಶಸ್ತಿಯನ್ನು ಮತ್ತೊಬ್ಬ ಸಾಧಕಿಗೆ ಪ್ರದಾನ ಮಾಡುವ ಭಾಗ್ಯ ದೊರಕಿರುವುದು ಸಂತಸದ ಸಂಗತಿ ಎಂದರು.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ವೆಂಕಟೇಶ ಮಾತನಾಡಿ, ಜವತ್ತಿನ ಜನರ ಬದುಕು ಸಂಕೀರ್ಣವಾಗಿದೆ. ಎಐ ತಂತ್ರಜ್ಞಾನವು ಮನುಷ್ಯನನ್ನು ಆಳುತ್ತಿದೆ. ಮನುಷ್ಯ ತಂತ್ರಜ್ಞಾನದ ಅಡಿಯಾಳಾಗಬಾರದು, ತಂತ್ರಜ್ಞಾನವೇ ಮನುಷ್ಯನ ಅಡಿಯಲ್ಲಿರಬೇಕು ಎಂದು ಹೇಳಿದರು.


ಮುಂಬರುವ ದಿನಗಳಲ್ಲಿ ಜನರು ಒಂದೆಡೆ ಸೇರಿ ಸಾಹಿತ್ಯ ಸಂಗೀತದAತಹ ಸಮಾರಂಭಗಳಿಗೆ ಬರುವುದು ತುಂಬಾ ವಿರಳವಾಗುವುದು. ಒಂದೆಡೆ ಸೇರಿ ಬದುಕಿನ ಕಷ್ಟ, ಸುಖಗಳನ್ನು ಹಂಚಿಕೊಳ್ಳುವ ಕಾಲ ಮರೆಯಾಗುವುದು. ಮನುಷ್ಯ ಒಂಟಿಯಾಗಿ ತಂತ್ರಜ್ಞಾನದ ಜೊತೆಗೆ ಯಾಂತ್ರಿಕ ಜೀವನ ನಡೆಸುತ್ತಾನೆ. ಇದರಿಂದ ಪಾರಾಗಲು ಪ್ರತಿಯೊಬ್ಬರು ಪುಸ್ತಕದೊಂದಿಗೆ ಜೀವನ ನಡೆಸಬೇಕು ಎಂದರು.
ಕಲಬುರಗಿ ವಿವಿಯ ಪ್ರೊ. ಎಚ್.ಟಿ. ಪೋತೆ ಮಾತನಾಡಿ, ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ನಾಡಿನ ಪ್ರತಿಷ್ಠ ಪ್ರಶಸ್ತಿಯಾಗಿದೆ. ನಾಡಿನ ನೈಜಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದು ವಾಡಿಕೆಯಾಗಿದೆ. ಈ ಹಿಂದೆ ಹಲವಾರು ನಾಡಿನ ಗಣ್ಯ ಸಾಹಿತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸದ್ಯ ಸುಜಾತಾ ಚಲವಾದಿ ಅವರಿಗೆ ಪ್ರಶಸ್ತಿ ನೀಡುತ್ತಿರುವುದು ಮಹಿಳಾ ಸಬಲೀಕರಣಕ್ಕೆ ಒತ್ತುನೀಡಿದಂತಾಗಿದೆ. ದಲಿತ ಸಮುದಾಯದ ಮಹಿಳೆಯರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.
ಪ್ರೊ. ಮಲ್ಲೇಪುರಂ ವೆಂಕಟೇಶ ಅವರು ೭೫ ನೇ ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭವನ್ನು ಸಾಂಸ್ಕೃತಿಕ ಹಬ್ಬದ ಪ್ರತೀಕವಾಗಿದೆ ಎಂದು ಬಣ್ಣಿಸಿದರು.
ಧಾರವಾಡ ಕರ್ನಾಟಕ ವಿವಿಯ ಪ್ರಾಧ್ಯಾಪಕ ಡಾ. ನಿಂಗಪ್ಪ ಮುದೇನೂರ ಉಪನ್ಯಾಸ ನೀಡಿ ಮಾತನಾಡಿ, ಡಾ. ಸುಜಾತಾ ಚಲವಾದಿ ಅವರ ಪ್ರಮುಖ ಕೃತಿಗಳಾದ ಲಚಮ್ಮವ್ವ ಮತ್ತು ಇತರೆ ಕಥೆಗಳು, ಕೊರಗು, ನಿರ್ಭಯಲ ಬೆರಗು, ಬುದ್ಧ ಇದ್ದನಲ್ಲಿ ಈ ಕೃತಿಗಳಲ್ಲಿರುವ ಸಾಹಿತ್ಯಿಕ ಮೌಲ್ಯಗಳನ್ನು ವಿಮರ್ಶಾತ್ಮಕವಾಗಿ ವಿವರಿಸಿ, ಲೇಖಕಿಯ ಬರಹದ ವಿಸ್ತಾರವನ್ನು ಮತ್ತು ಅವರ ಚಿಂತನಾ ಕ್ರಮವನ್ನು ಪರಿಚಯಿಸಿದರು.
ಇದೇ ಸಂದರ್ಭ ಲೇಖಕಿ ಡಾ. ಸುಜಾತಾ ಚಲವಾದಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಅಧ್ಯಕ್ಷ ಎಂ.ಎನ್. ಮದಭಾವಿ ಅಧ್ಯಕ್ಷತೆ ವಹಿಸಿದ್ದರು.
ಪ್ರೊ. ಮಲ್ಲೇಪುರಂ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ನಾಗರಾಜ, ಅನಿಲ ಹೊಸಮನಿ, ಅಭಿಷೇಕ ಚಕ್ರವರ್ತಿ, ಡಾ. ಎಂ.ಎA. ಪಡಶೆಟ್ಟಿ, ಶ್ರೀಕಾಂತ ಹೊಸಮನಿ, ರವಿ ಕಿತ್ತೂರ ಸೇರಿದಂತೆ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, June 2, 2026

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ, ವೈದ್ಯಕೀಯ ಶಿಕ್ಷಣ ಖಾತೆ ನೀಡಲು ಆಗ್ರಹ


ವಿಜಯಪುರ : ಮಾಜಿ ಸಚಿವರು ಹಾಗೂ ಬಸವನ ಬಾಗೇವಾಡಿ ಕ್ಷೇತ್ರದ ಜನಪ್ರಿಯ ಶಾಸಕರಾದ ಶಿವಾನಂದ ಎಸ್ ಪಾಟೀಲ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಡಿಸಿಎಂ ಸ್ಥಾನ ನೀಡಿ ವೈದ್ಯಕೀಯ ಶಿಕ್ಷಣ ಖಾತೆಯನ್ನು ನೀಡಬೇಕು ಎಂದು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಟಾನ ಸಂಚಾಲಕರಾದ ಅನಿಲ ಹೊಸಮನಿ ಹಾಗೂ ಕಾರ್ಯದರ್ಶಿ ಲಾಯಪ್ಪ ಇಂಗಳೆ ಆಗ್ರಹಿಸಿದ್ದಾರೆ.

ಈ ಹಿಂದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ರಾಜ್ಯದ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಸಲ್ಲಿಸಿದ್ದಾರೆ. ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ -ಮಕ್ಕಳ ಆಸ್ಪತ್ರೆ, ಟ್ರಾಮಾ ಸೆಂಟರ್ ಸೆಂಟರ್ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಜೊತೆಗೆ ಜಿಲ್ಲಾ ಆಸ್ಪತ್ರೆಗೆ ತಾಜಬಾವಡಿಯಿಂದ ನೀರಿನ ಸಂಪರ್ಕ ಒದಗಿಸಿ ರಾಜ್ಯದಲ್ಲಿ ಮಾದರಿ ಆಸ್ಪತ್ರೆಯಾಗಿ ಮೇಲದರ್ಜೆಗೆ ಏರಿಸಿದ್ದಾರೆ, ಜೊತೆಗೆ ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲಿ ವಿವಿಧ ಮೂಲಭೂತ ಸೌಲಭ್ಯ ಒದಗಿಸಿ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ.

ಹಿಂದಿನ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ, ಕಬ್ಬು ಸಕ್ಕರೆ ಮತ್ತು ಜವಳಿ ಸಚಿವರಾಗಿ ರಾಜ್ಯ ಮತ್ತು ಜಿಲ್ಲೆಯಲ್ಲಿ ಹಲವು ರೈತಪರ, ಜನಪರ ಕೆಲಸ ಕಾರ್ಯಗಳನ್ನು ಮಾಡಿರುವ ಶಿವಾನಂದ ಪಾಟೀಲರಿಗೆ ನೂತನ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಹೈಕಮಾಂಡ್ ಉಪ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಿ ವೈದ್ಯಕೀಯ ಶಿಕ್ಷಣ ಖಾತೆಯನ್ನು ನೀಡಬೇಕು ಎಂದು ಅವರು ಆಗ್ರಹಿಸಿದ ಅವರ ಸುಧೀರ್ಘ ರಾಜಕೀಯ ಅನುಭವ ರಾಜ್ಯದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದ್ದಾರೆ.

Sunday, May 10, 2026

ಮಕ್ಕಳು ತಂದೆ ತಾಯಿಯ ಮಾತು ಕೇಳಿದ್ದರೆ ; ವೃದ್ಧಾಶ್ರಮ ಅನಾಥವಾಗಿರುತ್ತಿದ್ದವು..!

 ಇಂದಿನ ಆಧುನಿಕ ಸಮಾಜದಲ್ಲಿ “ತಾಯಿ ದಿನ”, “ತಂದೆ ದಿನ”, “ಹಿರಿಯರ ದಿನ” ಎಂಬ ವಿಶೇಷ ಆಚರಣೆಗಳು ಬಹಳ ಜನಪ್ರಿಯವಾಗಿವೆ. ಆ ದಿನ ಮಕ್ಕಳಿಂದ ಪೋಷಕರಿಗೆ ಉಡುಗೊರೆಗಳು, ಶುಭಾಶಯಗಳು, ಪ್ರೀತಿಯ ಮಾತುಗಳು, ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಪೋಸ್ಟ್ಗಳು ಹರಿದು ಬರುತ್ತವೆ. ಆದರೆ ಮನಸ್ಸಿಗೆ ನೋವು ಕೊಡುವ ಸತ್ಯ ಏನೆಂದರೆ, ಇದೇ ಪ್ರೀತಿ ಮತ್ತು ಕಾಳಜಿ ಪ್ರತಿದಿನ ತೋರಿಸಲ್ಪಟ್ಟಿದ್ದರೆ, ಇಂದು ನಮ್ಮ ಸಮಾಜದಲ್ಲಿ ಇಷ್ಟು ವೃದ್ಧಾಶ್ರಮಗಳ ಅಗತ್ಯವೇ ಉಂಟಾಗುತ್ತಿರಲಿಲ್ಲ.

 ತಾಯಿ-ತಂದೆಗಳು ಮಕ್ಕಳಿಗಾಗಿ ತಮ್ಮ ಸಂಪೂರ್ಣ ಜೀವನವನ್ನೇ ಅರ್ಪಿಸುತ್ತಾರೆ. ಮಗು ಹುಟ್ಟಿದ ಕ್ಷಣದಿಂದಲೇ ಅವರ ಕನಸು, ಸಂತೋಷ, ಭವಿಷ್ಯ ಎಲ್ಲವೂ ಮಗುವಿನ ಸುತ್ತಲೇ ತಿರುಗುತ್ತವೆ. ತಾಯಿ ತನ್ನ ನಿದ್ರೆಯನ್ನು ಬಿಟ್ಟು ಮಗುವಿನ ಅಳುವಿಗೆ ಸ್ಪಂದಿಸುತ್ತಾಳೆ. ತಂದೆ ತನ್ನ ಆಸೆಗಳನ್ನು ಬದಿಗಿಟ್ಟು ಮಗುವಿನ ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕಾಗಿ ದುಡಿಯುತ್ತಾನೆ. ಮಕ್ಕಳಿಗೆ ನೋವಾಗದಂತೆ ತಮ್ಮ ನೋವನ್ನು ಮರೆಮಾಡಿಕೊಳ್ಳುವವರು ಪೋಷಕರು. ಮಗುವಿನ ಒಂದು ನಗು ನೋಡಲು ಸಾವಿರ ಕಷ್ಟಗಳನ್ನು ಸಹಿಸುವ ಮಹಾನ್ ಹೃದಯಗಳು ಅವರದು.

 ಆದರೆ ಕಾಲ ಬದಲಾಗುತ್ತಾ, ಮಕ್ಕಳು ದೊಡ್ಡವರಾದ ನಂತರ ತಮ್ಮದೇ ಜೀವನದಲ್ಲಿ ಬ್ಯುಸಿಯಾಗುತ್ತಾರೆ. ಉದ್ಯೋಗ, ಹಣ, ವೈಭವ, ವೈಯಕ್ತಿಕ ಸ್ವಾತಂತ್ರ‍್ಯ ಇವೆಲ್ಲದರ ನಡುವೆ ಪೋಷಕರಿಗೆ ಸಮಯ ಕೊಡಲು ಮರೆತುಬಿಡುತ್ತಾರೆ. ಕೆಲವು ಮಕ್ಕಳು ವರ್ಷದಲ್ಲಿ ಒಂದು ದಿನ ಮಾತ್ರ “ಅಮ್ಮಾ, ಅಪ್ಪಾ ನೀವು ನನ್ನ ಜಗತ್ತು” ಎಂದು ಹೇಳುತ್ತಾರೆ. ಆದರೆ ಉಳಿದ ದಿನಗಳಲ್ಲಿ ಅವರ ಜೊತೆ ಮಾತನಾಡಲು ಸಹ ಸಮಯ ಕೊಡೋದಿಲ್ಲ. ಈ ಒಂದು ದಿನದ ಪ್ರೀತಿ ಪೋಷಕರ ಮನದ ಖಾಲಿತನವನ್ನು ತುಂಬಲಾರದು.

 ಇಂದು ಅನೇಕ ವೃದ್ಧಾಶ್ರಮಗಳಲ್ಲಿ ವಾಸಿಸುವ ಹಿರಿಯರು ಹಣಕ್ಕಾಗಿ ಅಲ್ಲ, ಪ್ರೀತಿಗಾಗಿ ಕಾಯುತ್ತಿದ್ದಾರೆ. ಅವರಿಗೆ ದುಬಾರಿ ಉಡುಗೊರೆಗಳು ಬೇಕಿಲ್ಲ. “ಊಟ ಮಾಡಿದ್ದೀರಾ?”, “ಔಷಧಿ ತೆಗೆದುಕೊಂಡಿರಾ?”, “ಹೇಗಿದ್ದೀರಾ?” ಎಂದು ಕೇಳುವ ಒಂದು ಆತ್ಮೀಯ ಧ್ವನಿ ಸಾಕು. ಆದರೆ ಈ ಮಾತುಗಳು ಕೇಳಿಸದೇ ಹೋದಾಗ, ಅವರ ಜೀವನದಲ್ಲಿ ಒಂಟಿತನ ಹೆಚ್ಚಾಗುತ್ತದೆ. ಮಕ್ಕಳು ಜೀವಂತವಾಗಿದ್ದರೂ, ಅವರ ನೆನಪುಗಳಲ್ಲಿ ಮಾತ್ರ ಬದುಕುವ ಪರಿಸ್ಥಿತಿ ಬರುತ್ತದೆ.

 ವೃದ್ಧಾಶ್ರಮಗಳ ಗೋಡೆಗಳು ಅನೇಕ ಮೌನ ಕಣ್ಣೀರಿನ ಕಥೆಗಳನ್ನು ಹೇಳುತ್ತವೆ. ಅಲ್ಲಿ ಇರುವ ಪ್ರತಿಯೊಬ್ಬ ತಂದೆ-ತಾಯಿಯ ಕಣ್ಣುಗಳಲ್ಲಿ ಒಂದೇ ಪ್ರಶ್ನೆ ಕಾಣುತ್ತದೆ. “ನಮ್ಮ ಮಕ್ಕಳಿಗಾಗಿ ಬದುಕಿದ್ದ ನಾವು, ಇಂದು ಏಕೆ ಅನಾಥರಂತೆ ಬದುಕಬೇಕು?” ಎಂಬುದು. ಈ ಪ್ರಶ್ನೆ ಕೇವಲ ಅವರದು ಮಾತ್ರವಲ್ಲ; ಅದು ಇಡೀ ಸಮಾಜದ ಮನಸ್ಸನ್ನು ಕಾಡುವ ಪ್ರಶ್ನೆಯಾಗಿದೆ.

 ಪ್ರೀತಿ ಎಂದರೆ ಕೇವಲ ಒಂದು ದಿನದ ಆಚರಣೆ ಅಲ್ಲ. ಅದು ಪ್ರತಿದಿನದ ವರ್ತನೆಯಲ್ಲಿ ಕಾಣಬೇಕು. ಪೋಷಕರ ಜೊತೆ ಕೆಲವು ಕ್ಷಣ ಕಳೆಯುವುದು, ಅವರ ಆರೋಗ್ಯದ ಕಡೆ ಗಮನ ಕೊಡುವುದು, ಅವರ ಮಾತುಗಳನ್ನು ಸಹನೆಯಿಂದ ಕೇಳುವುದು, ಅವರಿಗೆ ಒಂಟಿತನ ಅನ್ನಿಸದಂತೆ ನೋಡಿಕೊಳ್ಳುವುದು ಇವೆಲ್ಲವೇ ನಿಜವಾದ ಪ್ರೀತಿ ಮತ್ತು ಕಾಳಜಿ. ಮಕ್ಕಳು ಈ ಸಣ್ಣ ಸಣ್ಣ ವಿಷಯಗಳನ್ನು ಪ್ರತಿದಿನ ಪಾಲಿಸಿದ್ದರೆ, ಇಂದು ಅನೇಕ ವೃದ್ಧಾಶ್ರಮಗಳು ಖಾಲಿಯಾಗುತ್ತಿದ್ದವು.

 ಬಾಲ್ಯದಲ್ಲಿ ಮಗು ನಡೆಯಲು ಕಲಿತಾಗ ತಂದೆ ಕೈ ಹಿಡಿದಿದ್ದ. ಇಂದು ವಯಸ್ಸಾದ ತಂದೆ ನಡೆಯಲು ಕಷ್ಟಪಟ್ಟಾಗ ಮಗ ಕೈ ಹಿಡಿಯಬೇಕು. ತಾಯಿ ಬಾಲ್ಯದಲ್ಲಿ ಮಗು ತಿನ್ನದೇ ಇದ್ದರೆ ಕಥೆ ಹೇಳಿ ಊಟ ಮಾಡಿಸುತ್ತಿದ್ದಳು. ಇಂದು ಅದೇ ತಾಯಿಗೆ ಸಮಯಕ್ಕೆ ಔಷಧಿ ಕೊಡುವುದು ಮಗುವಿನ ಕರ್ತವ್ಯ. ಜೀವನದ ನಿಜವಾದ ಅರ್ಥ ಇದೇ ಪೋಷಕರು ನಮ್ಮನ್ನು ನೋಡಿಕೊಂಡAತೆ, ನಾವು ಅವರ ವಯಸ್ಸಿನಲ್ಲಿ ಅವರನ್ನು ನೋಡಿಕೊಳ್ಳಬೇಕು.

 ಹಿರಿಯರು ಮನೆಯ ಭಾರವಲ್ಲ; ಅವರು ಮನೆಯ ಆಶೀರ್ವಾದ. ಅವರ ಅನುಭವ ಜೀವನದ ದಾರಿ ತೋರಿಸುವ ದೀಪ. ಅವರ ಸಾನ್ನಿಧ್ಯ ಮನೆಯ ಶಾಂತಿ ಮತ್ತು ಸಂಸ್ಕೃತಿಯ ಸಂಕೇತ. ಅವರನ್ನು ದೂರ ಮಾಡುವ ಸಮಾಜ ಯಾವತ್ತೂ ಸಂಪೂರ್ಣ ಸಂತೋಷ ಕಂಡುಕೊಳ್ಳಲು ಸಾಧ್ಯವಿಲ್ಲ.

 ಒಂದು ದಿನದ ಪ್ರೀತಿಯನ್ನು ಪ್ರದರ್ಶಿಸುವುದಕ್ಕಿಂತ ಪ್ರತಿದಿನ ಅವರ ಜೊತೆ ನಿಂತು ಬದುಕುವುದು ಮುಖ್ಯ. ಪೋಷಕರಿಗೆ ಬೇಕಾಗಿರುವುದು ದೊಡ್ಡ ಉಡುಗೊರೆಗಳಲ್ಲ, ಪ್ರೀತಿಯಿಂದ ತುಂಬಿದ ಕೆಲವು ಕ್ಷಣಗಳು. ಮಕ್ಕಳು ಪ್ರತಿದಿನ ಕಾಳಜಿ ತೋರಿಸಿದರೆ, ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗುವುದಷ್ಟೇ ಅಲ್ಲ, ಪೋಷಕರ ಕಣ್ಣೀರಿನ ಜಾಗದಲ್ಲಿ ಸಂತೋಷ ಕಾಣಿಸಿಕೊಳ್ಳುತ್ತದೆ. ಯಾಕೆಂದರೆ ತಾಯಿ-ತಂದೆಗಳಿಗೆ ಬೇಕಾಗಿರುವುದು “ವಿಶೇಷ ದಿನದ ಗೌರವವಲ್ಲ… ಜೀವನಪೂರ್ತಿ ಇರುವ ಆತ್ಮೀಯತೆ.”

ವಿಶೇಷ ವರದಿ : ಕಲ್ಲಪ್ಪ ಶಿವಶರಣ, 7207279187

11-05-2026 EE DIVASA KANNADA DAILY NEWS PAPER

Sunday, May 3, 2026

ವಿಜಯಪುರ ಕರ್ನಾಟಕದ ಸಾಂಸ್ಕೃತಿಕ ನಗರವಾಗಿದೆ : ಡಾ. ಕುಶಾಲ ಬರಗೂರು

ವಿಜಯಪುರ: ಕಾವ್ಯಕ್ಕೆ ಸಂಗೀತ ಮತ್ತು ದೃಶ್ಯದ ಸ್ಪರ್ಶ ನೀಡಿದರೆ ಜನಮನ ತಲುಪುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯರಾದ ಡಾ. ಕುಶಾಲ ಬರಗೂರು ಹೇಳಿದರು. 

ಅವರು ನಗರದ ಗಾನಬನದ ಶ್ರೀಗುರು ಕುಮಾರೇಶ್ವರ ಸಂಗೀತ ಮಹಾವಿದ್ಯಾಲಯದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಹಾಗೂ ಸಿದ್ಧರಾಮೇಶ್ವರ ಟೆಲಿಫಿಲಂ ಆಶ್ರಯದಲ್ಲಿ ಹಮ್ಮಿಕೊಂಡ ಸೋಮು ಹಿಪ್ಪರಗಿ ಅವರ ‘ವಿಜಯಪುರ’ ಕನ್ನಡ ಅಲ್ಬಮ್ ಸಾಂಗ್ ಲೋಕಾರ್ಪಣೆ ಹಾಗೂ ವರ್ತಮಾನ ಕಾವ್ಯ ಸಿಂಚನ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಹಿತ್ಯದ ಓದು ವ್ಯಕ್ತಿಯ ಚಿಂತನೆಯ ಹರಿವನ್ನು ಹೆಚ್ಚಿಸುವುದರ ಜೊತೆಗೆ ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ದಿವ್ಯ ಶಕ್ತಿಯಾಗಿದೆ. ಕವಿತೆ ಗಟ್ಟಿಗೊಳ್ಳಲು ಅಧ್ಯಯನ ಅಗತ್ಯವಾಗಿದೆ. ಕವಿ ಸೋಮು ಅವರ ವಿಜಯಪುರ ಸಾಂಸ್ಕೃತಿಕ ಪರಂಪರೆ ಸಾರುವ ಸಾಹಿತ್ಯವನ್ನು ದೃಶ್ಯಗಳಲ್ಲಿ ಸೆರೆ ಹಿಡಿದಿರುವ ನಿರ್ದೇಶಕ ಸುನೀಲಕುಮಾರ ಸುಧಾಕರ ಅವರ ಕ್ರಿಯಾಶೀಲತೆಗೆ ವಿಜಯಪುರ ಅಲ್ಬಮ್ ಸಾಂಗ್ ಹಿಡಿದ ಕೈಗನ್ನಡಿಯಾಗಿದೆ ಆ ಮೂಲಕ ವಿಜಯಪುರ ಕರ್ನಾಟಕದ ಸಾಂಸ್ಕೃತಿಕ ನಗರವಾಗಿದೆ ಎಂದರು.

ಅಲ್ಬಮ್ ಸಾಂಗ ಬಿಡುಗಡೆಗೊಳಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ದಾಕ್ಷಾಯಣಿ ಹುಡೇದ ಮಾತನಾಡಿ, ಇತಿಹಾಸ ಎಲ್ಲರನ್ನು ಕರೆದುಕೊಂಡು ಹೋಗುವ ಸಂದೇಶಗಳನ್ನು ಹೇಳುತ್ತದೆ. ಸಾಮರಸ್ಯದ ನೆಲೆಗಳನ್ನು ಹುಡುಕುತ್ತಾ ಹೋಗುವ ಸಂದರ್ಭದಲ್ಲಿ ಪರಸ್ಪರ ಒಬ್ಬರನ್ನೊಬ್ಬರು ಬೆಸೆಯುವ ಅಲ್ಬಮ್ ಸಾಂಗ್ ಬಿಡುಗಡೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾದುದು ಎಂದರು.

ಈ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿದ ಸಂಶೋಧಕ ಲಾಯಪ್ಪ ಇಂಗಳೆ ಮಾತನಾಡಿ, ವಿಜಯಪುರದಲ್ಲಿ ಎರಡು ಗುಮ್ಮಟಗಳಿವೆ. ಒಂದು ಭೌತಿಕ ಗೋಳ ಗುಮ್ಮಟ ಇನ್ನೊಂದು ಬೌದ್ಧಿಕ ವಚನ ಗುಮ್ಮಟ, ಭೌತಿಕ ಗುಮ್ಮಟವು ಪ್ರವಾಸಿಗರನ್ನು ತನ್ನತ್ತ ಸೆಳೆದರೆ, ಬೌದ್ಧಿಗ ವಚನ ಗುಮ್ಮಟವು ನಿರಂತರವಾಗಿ ಶರಣರ ಸಂದೇಶಗಳ ಮೂಲಕ ಎಲ್ಲರನ್ನು ಎಚ್ಚರಿಸುತ್ತಿವೆ. ವಿಶ್ವಗುರು ಬಸವಣ್ಣನವರ ವಚನ ಸಂದೇಶಗಳನ್ನು ಮಾನವ ಕುಲಕ್ಕೆ ದಾರಿದೀಪವಾಗಿವೆ. ಜನ ಬಯಸುವ ರೀತಿಯಲ್ಲಿ ನಾವು ಸಾಹಿತ್ಯವನ್ನು ಹೇಳುವ ಪರಿ ಬದಲಿಸಿಕೊಳ್ಳಬೇಕಿದೆ ಜನ ದೃಶ್ಯ ಮಾಧ್ಯಮದತ್ತ ವಾಲುತ್ತಿರುವಾಗ ಸಾಹಿತ್ಯಕ್ಕೆ ಸಂಗೀತ ಮತ್ತು ದೃಶ್ಯದ ಅಳವಡಿಕೆ ಇಂದಿನ ಕಾಲದಲ್ಲಿ ಅಗತ್ಯವಾಗಿದೆ ಆ ನಿಟ್ಟಿನಲ್ಲಿ ಸೋಮು ಮತ್ತು ಅವರ ತಂಡದ ಪ್ರಯತ್ನ ಅಭಿನಂದನಾರ್ಹವಾದುದು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯರಾದ ರಾಜೇಶ್ವರಿ ಮೋಪಗಾರ ಮಾತನಾಡಿ, ಚಿತ್ರ ಕಲಾವಿದರು ತಮ್ಮ ಲಲಿತ ಕಲೆಗಳ ಮೂಲಕ ಭಾವನೆಗಳನ್ನು ಕಟ್ಟಿಕೊಟ್ಟರೆ ಕವಿ ಸಾಹಿತ್ಯದ ಮೂಲಕ ಭಾವನೆಗಳನ್ನು ಅಭಿವ್ಯಕ್ತಗೊಳಿಸುತ್ತಾನೆ. ಚಲನಚಿತ್ರ ನಿರ್ದೇಶಕ ಭಾವನೆಗಳಿಗೆ ಜೀವ ತುಂಬುವ ಕೆಲಸ ಮಾಡುತ್ತಾನೆ. ಪ್ರಸ್ತುತ ಸಂದರ್ಭದಲ್ಲಿ ವಿಜಯಪುರ ಕನ್ನಡ ಅಲ್ಬಮ್ ಸಾಂಗ್ ಉದಾಹರಣೆಯಾಗಿದೆ ಎಂದರು.

ಈ ಸಂದರ್ಭ ಕವಿ ಸೋಮು ಹಿಪ್ಪರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಕವಿಗೋಷ್ಠಿಯಲ್ಲಿ ಗೀತಾ ಸನದಿ, ಮುರುಗೇಶ ಸಂಗಮ, ಭೀಮರಾವ ಉಪ್ಪಾರ, ಭರತಕುಮಾರ ಎಚ್.ಟಿ., ಕಲ್ಲಪ್ಪ ಶಿವಶರಣ, ಲಕ್ಷಿö್ಮÃ ಗೋಡೆಕರ, ಪ್ರಶಾಂತ ಬಿಳೆಭಾವಿ, ಜಯಶ್ರೀ ಚಲವಾದಿ, ಮಲ್ಲಿಕಾರ್ಜುನ ನಾಟೀಕಾರ, ಧಾನೇಶ್ವರಿ ಆಲಾಳೆ, ಶಿವಾಜಿ ಮೋರೆ, ರೇಣುಕಾ ಕೋಟ್ಯಾಳ ಅವರು ತಮ್ಮ ಸ್ವರಚಿತ ಕವಿತೆಗಳನ್ನು ವಾಚಿಸಿದರು.


ಇದೇ ಸಂದರ್ಭ ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟಗಾರರಾದ ನೀಲಾಂಬಿಕಾ ಕಟ್ಟಿಮನಿ, ಶಿವರಂಜಿನಿ ಉಪ್ಪಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 

ಶ್ರೀ ಗುರು ಕುಮಾರೇಶ್ವರ ಸಂಗೀತ ಮಹಾವಿದ್ಯಾಲಯದ ಗಾನ ಬನದ ಪಂಡಿತ ತೋಂಟದಾರ್ಯ ಕವಿಗವಾಯಿಗಳು ವೇದಿಕೆಯಲ್ಲಿ ಇದ್ದರು. 

ಕಾರ್ಯಕ್ರಮದಲ್ಲಿ ಅಲ್ಬಾಮ್ ಸಾಂಗ್ ನಲ್ಲಿ ಅಭಿನಯಿಸಿದ ಕಲಾವಿದರು ಹಾಗೂ ಗಾನಬದನ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಮಲಾಬಾಯಿ ಹಿಪ್ಪರಗಿ, ಲಕ್ಷಿö್ಮÃ ಸೇಜಾಳ, ದುಂಡಮ್ಮ ಹಿಪ್ಪರಗಿ, ರಾಮನಗೌಡ ಚೌಧ್ರಿ, 

ಶ್ರೀಕಾಂತ ಮೆಂಡೆಗಾರ, ಭೀಮರಾಯ ಕುಂಟೋಜಿ, ಪ್ರಕಾಶ ಚೌಧ್ರಿ, ಆನಂದ ಕುಂಟೋಜಿ, ಎ.ಎಚ್.ಕೊಳಮಲಿ, ಶರಣಗೌಡ ಪಾಟೀಲ, ಉಮೇಶ ಶಿವಶರಣ, ದೀಪಕ ಶಿಂಧೆ, ಸೋಮಶೇಖರ ಕುರ್ಲೆ, ವಿನೋದ ಪಟ್ಟಣದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉಮೇಶ ಶಿವಶರಣ ಸ್ವಾಗತಿಸಿದರು. ಮುರುಗೇಶ ಸಂಗಮ ನಿರೂಪಿಸಿದರು. ಕಲ್ಲಪ್ಪ ಶಿವಶರಣ ವಂದಿಸಿದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, May 1, 2026

ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಅವರ ಕೊಡುಗೆ ಅನನ್ಯ : ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ


ಸಿಂದಗಿ: ಸಿಂದಗಿ ನಗರದಲ್ಲಿ ಬಿದಿಯುದ್ಧಕ್ಕೂ ರಸ್ತೆ ಗುಂಡಿ, ಕಸ ಹಾಗೆಯೇ ಇದೆ. ಇದೆಲ್ಲವನ್ನು ಬರುವ ಸಮಯದಲ್ಲಿ ಗಮನಿಸಿದ್ದನ್ನು ನೋಡಿದರೆ ನಗರವು ಅಶುಚಿತ್ವ ಮತ್ತು ಗುಂಡಿಗಳಿAದ ಕುಡಿದೆ ಎಂದು ತಿಳಿಯುತ್ತದೆ. ಇದರ ಕುರಿತಾಗಿ ತಾಲೂಕು ದಂಡಾಧಿಕಾರಿ ಹಾಗೂ ಪೌರಾಯುಕ್ತರಿಗೆ ಕ್ರಮಕೈಗೊಳ್ಳು ವಂತೆ ಮೇಲಾಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನವನ್ನು ವಹಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಎಂದರು.  

ಸಿಂದಗಿ ನಗರದ ವಿಜಯಪುರ ರಸ್ತೆಯಲ್ಲಿರುವ ಮಾಂಗಲ್ಯ ಭವನದಲ್ಲಿ ಸಿಂದಗಿಯ ಡಾ.ಚನ್ನಪ್ಪ ಕಟ್ಟಿ ಅಭಿನಂದನ ಸಮಿತಿ ಹಮ್ಮಿಕೊಂಡ ಅಭಿನಂದನ ಸಮಾರಂಭ ನೆಲೆ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನವನ್ನು ವಹಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಮಾತನಾಡಿ, ಆಂಗ್ಲ ಪ್ರಾಧ್ಯಾಪಕರರಾಗಿ ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಅವರ ಕೊಡುಗೆ ಅನನ್ಯ. ಕಥೆ, ಕಾವ್ಯ, ಸಂಶೋಧನೆ, ಜೀವನ ಚರಿತ್ರೆ ಮತ್ತು ಅನುವಾದದ ಮೂಲಕ ಸಾಹಿತ್ಯದ ಕೃಷಿಯನ್ನು ಮಾಡಿ ಅಮೋಘ ಸಾಧನೆ ಮಾಡಿದ್ದಾರೆ. ಅವರ ಈ ಅವಿರತ ಪರಿಶ್ರಮದಿಂದಲೇ ಇಂದು ಅವರು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಒದಗಿ ಬಂದಿದ್ದು ಸಿಂದಗಿ ನೆಲೆಗೆ ಹೆಮ್ಮೆಯ ಗರಿ. ಒಟ್ಟಿನಲ್ಲಿ ಡಾ.ಚನ್ನಪ್ಪ ಕಟ್ಟಿ ಅವರ ಬದುಕು, ಬರಹ ಮತ್ತು ಆಡಳಿತ ಕಾರ್ಯವೈಖರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ಗರಿಮೆಯನ್ನು ಹೆಚ್ಚಿಸಿದ್ದಾರೆ ಎಂದರು.

  ಈ ವೇಳೆ ನೆಲೆ ಅಭಿನಂದನ ಗ್ರಂಥವನ್ನು ಬಿಡುಗಡೆಗೊಳಿಸಿದ ಬೆಂಗಳೂರಿನ ಸಂಸ್ಕೃತಿ ಚಿಂತಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, ನೆಲೆ ಎನ್ನುವ ಹೆಸರೇ ಚನ್ನಪ್ಪ ಕಟ್ಟಿ ಅವರ ಅಸ್ಮಿತೆ. ಅವರ ಇಡೀ ಬದುಕು ಮತ್ತು ಸಾಹಿತ್ಯ ಚಟುವಟಿಕೆಗೆ ಒಂದು ನೆಲೆ ಸಿಕ್ಕಿರುವುದೇ ಈ ನೆಲೆ ಎನ್ನುವ ಶಬ್ದ ಅವರ ವ್ಯಕ್ತಿತ್ವದ ಗುಣವಾಗಿದೆ. ಸ್ವಾಹಿತ ಮತ್ತು ಸಮಾಜ ಹಿತಕ್ಕಾಗಿ ಕಾರ್ಯ ಮಾಡಿದಾಗ ಮಾತ್ರ ಅದು ಸತ್ಯ ಶುದ್ಧ ಕಾಯಕ. ೫ ಭಾಗಗಳಾಗಿ ಈ ಕೃತಿಯನ್ನು ರಚನೆ ಮಾಡಲಾಗಿದೆ. 

ಇದು ನೆಲೆ ೧೦೦ರೊಳಗಿನ ಒಂದಲ್ಲ. ಇದೊಂದು ವಿಶೇಷ ಅಭಿನಂದನಾ ಗ್ರಂಥವಾಗಿದೆ. ಅಕ್ಷರ ಮಾಧ್ಯಮ ಆಚೆಗಿನ ಮಾತುಗಳನ್ನು ಕಥೆಯ ರೂಪದಲ್ಲಿ ತರಲಾಗಿದೆ ಎಂದರು. 

ಇದೇ ಸಂದರ್ಭದಲ್ಲಿ ವಿಜಯಪುರದ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ.ಎಂ.ಎಸ್.ಮದಭಾವಿ ಅಭಿನಂದನಾ ನುಡಿಗಳನ್ನಾಡಿದರು. ಡಾ.ಅರವಿಂದ ಮನಗೂಳಿ, ಅಭಿನಂದನ ಗ್ರಂಥದ ಗೌರವ ಸಂಪಾದಕ ಡಾ.ಶ್ರೀರಾಮ ಇಟ್ಟಣ್ಣವರ ಮಾತನಾಡಿ ದರು. ಮಾಜಿ ವಿಪ ಸದಸ್ಯ ಅರುಣ ಶಹಾಪುರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಗಮೇಶ ಮೇತ್ರಿ ಸಂಪಾದಿಸಿದ ಅಮೋಘಸಿದ್ಧ ಜನಪದ ಮಹಾಕಾವ್ಯ ಸಾಂಸ್ಕೃತಿಕ ಮುಖಾಮುಖಿ ಗ್ರಂಥವನ್ನು ಮಾಜಿ ಶಾಸಕ ರಮೇಶ ಭೂಸನೂರ ಮತ್ತು ಚನ್ನಪ್ಪ ಕಟ್ಟಿ ಅವರ ವಿಮರ್ಶಾ ಸಂಕಲನ ಒಕ್ಕಣೆಯನ್ನು ವಿಪ ಮಾಜಿ ಸದಸ್ಯ ಅರುಣ ಶಹಾಪೂರ ಬಿಡುಗಡೆಗೊಳಿ ಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ವೀರಶೈವ ಶಿವಾ ಚಾರ್ಯ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷರು, ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾ ರ್ಯರು, ಸಮ್ಮುಖವನ್ನು ಹಾಲುಮತ ಗುರುಪೀಠ ಅಗತೀರ್ಥದ ಸರೂರದ ರೇವಣಸಿದ್ದೇಶ್ವರ ಶಾಂತಮ ಯ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು. 

ಸಮಾರಂಭದಲ್ಲಿ ವಿಜಯಪುರ ಲೋಕಾಯುಕ್ತ ಎಸ್‌ಪಿ ಟಿ.ಮಲ್ಲೇಶ, ಪ್ರಧಾನ ಸಂಪಾದಕ ಡಾ.ಎಂ.ಎA. ಪಡಶೆಟ್ಟಿ, ಡಾ.ಸಂಗಮೇಶ ಮೇತ್ರಿ, ಡಾ.ಚನ್ನಪ್ಪ ಕಟ್ಟಿ, ಪತ್ನಿ ಸರೋಜಾ ಕಟ್ಟಿ, ಎಂ.ಎಸ್.ಹೈಯ್ಯಾಳಕರ, ಶಿವಪ್ಪ ಗವಸಾಯಿ, ಬಿ.ಎಸ್.ಹಣಮಶೆಟ್ಟಿ, ಚಿದಂಬರ ಬಂಡಗಾರ, ಡಾ.ರವಿ. ಗೋಲಾ, ಡಾ.ಶರಣಬಸವ ಜೋಗುರ, ಶಿವಾನಂದ ಕಲಬುರ್ಗಿ ಸೇರಿದಂತೆ ಅವರ ಗೆಳೆಯರ ಬಳಗ, ಶಿಷ್ಯ ಬಗಳ ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೂ ಪೂರ್ವದಲ್ಲಿ: ಬೆಳಿಗ್ಗೆ ೧೦ಗಂಟೆಗೆ ಡಾ.ಚನ್ನಪ್ಪ ಕಟ್ಟಿ ಸಾಹಿತ್ಯ ಮುಖಾಮುಖಿ ವಿಚಾರ ಸಂಕಿರಣವನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಮಕ್ಕಳ ಸಾಹಿತಿಗಳಾದ ಹ.ಮ.ಪೂಜಾರ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಅಥಣಿಯ ಕತೆಗಾರ ಕಾದಂಬರಿಕಾರ ಡಾ.ಬಾಳಾಸಾಹೇಬ ಲೋಕಾಪುರ ಅವರು ಡಾ.ಚನ್ನಪ್ಪ ಕಟ್ಟಿ ಅವರ ಕತೆಯ ಕುರಿತು ಮಾತನಾಡಿದರು. ಬೆಂಗಳೂರಿನ ವಿಮರ್ಶಕಿ ಎನ್.ಆರ್.ಲಲಿತಾಂಬಾ ಕಟ್ಟಿ ಅವರ ಕಾವ್ಯ ಕುರಿತು, ತಿಪಟೂರಿನ ಅನುವಾದಕ ಬರಹಗಾರ ಎಸ್. ಗಂಗಾಧರಯ್ಯ ಅನುವಾದ ಕುರಿತು, ಹಂಪಿ ಕನ್ನಡ ವಿಶ್ವವಿದ್ಯಾಯದ ಸಂಶೋಧಕ ಡಾ.ಎಫ್.ಟಿ.ಹಳ್ಳಿಕೇರಿ ಅವರು ಕಟ್ಟಿ ಸಂಶೋಧನೆ ಕುರಿತಾಗಿ ಮಾತನಾಡಿ ದರು. ಮುಖ್ಯ ಅತಿಥಿಗಳಾಗಿ ವಿಜಯಪುರದ ಚಾಣಕ್ಯ ಕರಿಯರ ಅಕಾಡೆಮಿ ಸಂಸ್ಥಾಪಕ ಎನ್.ಎಂ.ಬಿರಾದಾರ ಸೇರಿದಂತೆ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಶ್ರಮಜೀವಿಗಳಿಗೆಂದೇ ಮೀಸಲಾದ ದಿನ ಕಾರ್ಮಿಕರ ದಿನ : ಸಿದ್ರಾಮ ಕಾಸೆ


 ಕಾರ್ಮಿಕರು ಜಗತ್ತಿನ ಆಸ್ತಿ. ಕಾರ್ಮಿಕರಿಲ್ಲದ ಜಗತ್ತನ್ನು ಊಹಿಸುವುದಕ್ಕೇ ಸಾಧ್ಯವಿಲ್ಲ. ಇಂತಹ ಶ್ರಮಜೀವಿಗಳನ್ನು ಗೌರವಿಸುವ, ಅವರ ಸೇವೆಯನ್ನು ಸ್ಮರಿಸುವ ದಿನವಾಗಿ ಪ್ರತಿವರ್ಷ `ಅಂತಾರಾಷ್ಟ್ರೀಯ ಕಾರ್ಮಿಕರ ದಿನ'ವನ್ನು ಆಚರಿಸಲಾಗುತ್ತದೆ ಎಂದು ರವಿ ಇಂಡಸ್ಟ್ರೀಸ್ ಮಾಲೀಕರಾದ ಸಿದ್ರಾಮ ಕಾಸೆ ಹೆಳಿದರು.

ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕ  ದಿನಾಚರಣೆ ನಿಮಿತ್ಯವಾಗಿ ಕಾರ್ಮಿಕರಿಗೆ ಸಿಹಿ ವಿತರಿಸಿ ಶಾಲು ಹೊದಿಸಿ ಸನ್ಮಾನಿಸದ ಸಂದರ್ಭದಲ್ಲಿ ಅವರು ಮಾತನಾಡಿದರು. 


ಮೇ 1 ಅಂತಾರಾಷ್ಟ್ರೀಯ ಕಾರ್ಮಿಕರ ದಿನ. ಇದು ಶ್ರಮಜೀವಿಗಳಿಗೆಂದೇ ಮೀಸಲಾದ ದಿನ. ಪ್ರತಿಯೊಂದು ಕ್ಷೇತ್ರದಲ್ಲೂ ಶ್ರಮಪಟ್ಟು ದುಡಿಯುವ ಕೆಲಸಗಾರರು ದೇಶ, ರಾಜ್ಯದ ಅಭಿವೃದ್ಧಿಗೆ ಹೆಗಲು ಕೊಡುತ್ತಾರೆ. ಇಂತಹ ಶ್ರಮಜೀವಿಗಳ ಪ್ರಯತ್ನ, ಕೆಲಸದಲ್ಲಿಯೇ ದೇಶದ ಅಭಿವೃದ್ಧಿಯಡಗಿದೆ. ಹೀಗೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುವ ಕಾರ್ಮಿಕರ ಶ್ರಮ ಮತ್ತು ಸೇವೆಯನ್ನು ಗೌರವಿಸುವ, ಅವರ ಸೇವೆಗೆ ಕೃತಜ್ಞತೆ ಸಲ್ಲಿಸುವ ನಮ್ಮ ಕರ್ತವ್ಯವಾಗಿದೆ ಎಂದರು.

ನೇತಾ, ಬಡಕನ, ಬುಲಾಯಿ, ಗೋಪಾಲ ಕಾರ್ಮಿಕರಿಗೆ ಸನ್ಮಾನಿಸಲಾಯಿತು. 

ಇದೇ ಸಂದರ್ಭದಲ್ಲಿ ಬಸವರಾಜ ಮಲಘಾಣ, ಉಮೇಶ ಶಿವಶರಣ, ಸುರೇಶ ಜಾಧವ, ಶ್ರೀನಿವಾಸ ವಾಘ್ಮೋರೆ, ಶ್ರೀಕಾಂತ ಬಂಡಿವಡ್ಡರ, ಭೀಮಶಿ, ಗೋವಿಂದ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸಾಹಿತ್ಯದ ಕಿನ್ನುರಿ ನುಡಿಸಿದ ಡಾ.ಚನ್ನಪ್ಪ ಕಟ್ಟಿ ಅವರಿಗೆ "ನೆಲೆ" ಅಭಿನಂದನಾ ಗ್ರಂಥ ಸಮರ್ಪಣೆ:


ಸೃಜನಶೀಲತೆಯೇ ಜೀವಾಳವಾಗಿಸಿಕೊಂಡ ಕನ್ನಡದ ಅಪರೂಪದ ಲೇಖಕರಲ್ಲಿ ಡಾ. ಚನ್ನಪ್ಪ ಕಟ್ಟಿ ಅವರು ಕೂಡಾ ಒಬ್ಬರು, ಸಿಂದಗಿ ಎಂಬ 'ಅರೆ ನಗರಿ' ಯಲ್ಲಿ ನೆಲೆ ನಿಂತು, ಕಾವ್ಯದ ಮೂಲಕ  ಸಾಹಿತ್ಯದ ಯಾನವನ್ನು ಪ್ರಾರಂಭಿಸಿ ಕಥೆ, ವಿಮರ್ಶೆ, ಸಂಶೋಧನೆ, ಜೀವನ ಚರಿತ್ರೆ, ಸಂಪಾದನೆ, ಅನುವಾದ ಹೀಗೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಅನೂಹ್ಯವಾದ ಕಾರ್ಯ ಮಾಡಿ ಮೌನ ಸಾಧಕರಾದ ಡಾ. ಚನ್ನಪ್ಪ ಕಟ್ಟಿ ಅವರು ಅಪ್ಪಟ ಗ್ರಾಮೀಣ ಪ್ರತಿಭೆ, ತಮ್ಮ ಗ್ರಾಮ ಬದುಕಿನ ಸಶಕ್ತ ಅನುಭವಗಳಿಗೆ ಸಾಹಿತ್ಯದ ಆಧುನಿಕ ಚಿಂತನಾ ದಾರಿಯನ್ನು ತಂದು ಜೋಡಿಸುವ ಮೂಲಕ ಬರಹಕ್ಕೆ ಹೊಸ ಮೆರುಗನ್ನು ತಂದುಕೊಟ್ಟವರು.

ಸಿಂದಗಿಯ ನಿವಾಸಿಯಾದ ಡಾ. ಚನ್ನಪ್ಪ ಕಟ್ಟಿ ಅವರು ಮೂಲತಃ ಗದಗ ಜಿಲ್ಲೆಯ ರೋಣ ತಾಲೂಕಿನ ಕೊನೆಯ ಸಣ್ಣ ಹಳ್ಳಿ ಹಿರೇಹಾಳ ಗ್ರಾಮದವರು, ಕೃಷಿಯನ್ನೇ ಅವಲಂಬಿಸಿದ ಕನಕಪ್ಪ ಮತ್ತು ವೆಂಕವ್ವ ನವರ ಆರನೆಯ ಮಗನಾಗಿ ಮೇ 1, 1956 ರಲ್ಲಿ ಜನಿಸಿ ಅಲ್ಲಿಯೇ ಪ್ರಾಥಮಿಕ ಶಿಕ್ಷಣ, ಬಾದಾಮಿಯಲ್ಲಿ ಮಾಧ್ಯಮಿಕ ಮತ್ತು ಪದವಿಪೂರ್ವ ಶಿಕ್ಷಣವನ್ನು ಪಡೆದು ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪದವಿ, 1979 ರಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಭಾಷಾ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿ ಅದೇ ವರ್ಷವೇ ಸಿಂದಗಿಯ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಜಿ. ಪಿ ಪೋರವಾಲ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಸೇವೆಯನ್ನು ಪ್ರಾರಂಭಿಸಿದರು ನಂತರ ಅದೇ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾಗಿರುವರು, ಒಟ್ಟು ಮೂವತ್ತೇಳು ವರ್ಷಗಳ ಕಾಲ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವಿಷಯವನ್ನು ಮನ ಮುಟ್ಟುವಂತೆ ಪಾಠ ಮಾಡಿ ಸಾವಿರಾರು ವಿದ್ಯಾರ್ಥಿಗಳಿಗೆ ಪೂಜ್ಯ ಗುರುಗಳಾಗಿ, ಮಾರ್ಗದರ್ಶಕರಾಗಿ ಇವತ್ತಿಗೂ ಶಿಷ್ಯ ಬಳಗವನ್ನು ಪ್ರೋತ್ಸಾಹಿಸುತ್ತಲೇ ಸಾಗಿದ್ದಾರೆ.

ಡಾ. ಚನ್ನಪ್ಪ ಕಟ್ಟಿ ಅವರದ್ದು ಸುಖೀ ಹಾಗೂ ಸುಂದರ ಕುಟುಂಬ, 1985 ರಲ್ಲಿ ಸರೋಜಾ ಅವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿದರು, ಸಚಿನ್ ಮತ್ತು ಸುಮಾ ಎಂಬ ಇಬ್ಬರು ಮಕ್ಕಳನ್ನು ಪಡೆದ ಚನ್ನಪ್ಪ ಕಟ್ಟಿ ಹಾಗೂ ಸರೋಜಾ ಅವರು ಇಂದು ಅಜ್ಜ ಅಜ್ಜಿಯಾಗಿ ಮೊಮ್ಮಕ್ಕಳಾದ ಧೃತಿ ಮತ್ತು ಅವ್ಯುಕ್ತ ರವರೊಂದಿಗೆ ಕಾಲ ಕಳೆಯುತ್ತಿದ್ದಾರೆ.


ಸಾಹಿತ್ಯದ ವಾತಾವರಣವೇ ಇಲ್ಲದ ಕುಟುಂಬದ ಪರಿಸರದಲ್ಲಿ ಬೆಳೆದ ಬಂದ ಕಟ್ಟಿ ಅವರಿಗೆ ಪಾಠ ಹೇಳಿಕೊಟ್ಟ ಗುರುಗಳು  ಸಾಹಿತ್ಯದ ದಾರಿಗೆ ಕರೆದುಕೊಂಡು ಬಂದರೆ, ಅಣ್ಣ ನ ಉಸ್ತುವಾರಿಕೆ ಉನ್ನತ ಶಿಕ್ಷಣ ನೀಡಿತು, ಧಾರವಾಡದ ಗಾಳಿ ಸಾಹಿತ್ಯದ ರುಚಿ ತೋರಿಸಿತು , ಸಿಂದಗಿಯ ಜಾನಪದ ಹಾಗೂ ಸಂಶೋಧನೆಯಲ್ಲಿ ತೊಡಗಿಸಿಕೊಂಡ ಡಾ. ಎಂ ಎಂ ಪಡಶೆಟ್ಟಿ ಅಪರಿಮಿತ ಗೆಳೆಯರಾಗಿ ದೊರೆತು ಸಾಹಿತ್ಯವು ಹುಲುಸಾಗಿ ಬೆಳೆಯಲು ಸಾಧ್ಯವಾಯಿತು.


ಬಂಡಾಯ ಸಾಹಿತ್ಯ ಚಳವಳಿಯ ಸಂದರ್ಭದಲ್ಲಿ ಗೆಳೆಯರಾದ ನಾಗೇಶ್ ರಾಂಪೂರ ಅವರೊಂದಿಗೆ ಸೇರಿಕೊಂಡು " ಎರಡು ಸೆಲೆ, ಒಂದು ನೆಲೆ " ಕವನ ಸಂಕಲನ ಪ್ರಕಟಿಸಿ ಆಧುನಿಕ ಬದುಕಿಗೆ ಮುಖ ಮಾಡಿರುವ ಮನುಷ್ಯನ ಒಳ ತುಮುಲಗಳನ್ನು ತೆರದು ತೋರುವ ಪ್ರಯತ್ನಕ್ಕೆ ಮುನ್ನುಡಿ ಬರೆದರು,                  " ಇಂಡಿಯಾದಲ್ಲಿ", " ನೆನಪುಗಳು ಸಾಯುವುದಿಲ್ಲ", " ಸೂರ್ಯನಿಗೆ ಸಾವ ನೋಡಲು ಬೇಸರವಿಲ್ಲ", " ಬೇರು - ಚಿಗುರು" , " ಓಡುವ ಪಾದ, ಕಾಡುವ ಸರಪಳಿ" ಕವಿತಾ ಸಂಕಲನಗಳಲ್ಲಿ ' ಸಾಮಾಜಿಕ ನ್ಯಾಯಕ್ಕಾಗಿ ಸದಾ ಹಂಬಲಿಸುವ ತಮ್ಮ ಧ್ವನಿಯನ್ನು ಮಾರ್ದನಿಸುವಂತೆ ಚಿತ್ರಿಸಿರುವುದನ್ನು ಕಾಣಬಹುದಾಗಿದೆ  " ಹೇಳಲೇಬೇಕಾದುದನ್ನು ಹೇಳುವ ಸಲುವಾಗಿ, ಹೇಳಲಾಗದನ್ನು ಹೇಳಿಯೇ ತೀರುವ ಸಲುವಾಗಿ "  ಬರೆಯುವೆ ಎನ್ನುವ ಅವರ ಮಾತು ಆಪ್ತವೆಸುತ್ತದೆ.


ಕಾವ್ಯದೊಳಗಿದ್ದು ಕಥೆಯ ಕಡೆಗೆ ಕಣ್ಣು ಹಾಯಿಸಿದ ಕಟ್ಟಿ ಅವರು " ಮುಳುಗಡೆ ಮತ್ತು ಇತರ ಕಥೆಗಳು", " ಬೆಂಕಿ ಇರದ ಬೆಳಕು", ಹಾಗೂ " ಏಕತಾರಿ" ಕಥಾ ಸಂಕಲನಗಳ ಮೂಲಕ ಗ್ರಾಮೀಣ ಪರಿಸರ, ಅಲ್ಲಿನ ಸಂಘರ್ಷ, ಶೋಷಣೆ, ಶ್ರೀಮಂತಿಕೆಯ ಅಮಲು, ಹೆಣ್ಣೆ ಮಕ್ಕಳ ಅಸಹಾಯಕತೆ, ಜಗಳ ಈರ್ಷೆ, ಹಾದರ, ಮಹಿಳೆಯರ ದಿಟ್ಟತನ, ಪ್ರೀತಿ- ಪ್ರಣಯ- ಸಂಬಂಧ ಗಳ ಕುರಿತಾಗಿ ಗಾಢವಾಗಿ ಪರಿಣಾಮ ಬೀರುವ ಹಾಗೆ ಕಾವ್ಯಾತ್ಮಕ ಭಾಷೆಯಲ್ಲಿ ರೂಪಿತಗೊಂಡ ಕಥೆಗಳು ಕನ್ನಡದ ಕಥನ ಲೋಕವನ್ನು ಇನ್ನಷ್ಟು ವಿಸ್ತರಿಸಿ ಮನುಷ್ಯ ಸಂಬಂಧಗಳನ್ನು ಹಾಗೂ ಸಮುದಾಯದ ಧಾರಣ ಶಕ್ತಿಯ ಮೇಲಿರುವ ವಿಶ್ವಾಸ ಮತ್ತು ನಂಬಿಕೆಗಳನ್ನು ಮತ್ತಷ್ಟು ಗಟ್ಟಿಗೊಳಿಸಿವೆ ಹೀಗಾಗಿ ಕಟ್ಟಿ ಅವರ ಕಥೆಗಳನ್ನು ಓದಲು ಓದುಗ ಹಾಗೂ ವಿಮರ್ಶಕ ಒಟ್ಟಿಗೆ  ಕಾತುರತೆಯಿಂದ ಕಾಯುವರು.


ಸಾಹಿತ್ಯ ಮತ್ತು ಸಾಂಸ್ಕೃತಿಕಯ ಕುರಿತಾಗಿ ತೀವ್ರ ತುಡಿತ ಹೊಂದಿರುವ ಕಟ್ಟಿ ಅವರು "ಸಾರಣೆ", " ಕುಯಿಲು", " ಶಬ್ದ ಸೋಪಾನ", " ಒಕ್ಕಣೆ", ವಿಮರ್ಶಾ ಕೃತಿಗಳ ಮೂಲಕವೂ ತಮ್ಮ ಓದಿನ ಹರವನ್ನು ಬಿಚ್ಚಿಟ್ಟು,  ಕಾವ್ಯ, ಕಥೆಗಳು ಹಾಗೂ ಸೃಜನಶೀಲ ಆಶೆಯದ ಬರಹದ ಒಳ ಸುಳಿವುಗಳ ಮರ್ಮ ಹೇಗಿರಬೇಕೆಂಬುದರ ಕುರಿತಾಗಿ ಚರ್ಚಿಸಿ ಕನ್ನಡ ವಿಮರ್ಶೆಗೆ ಹೊಸತಾದ ದಾರಿಯೊಂದನ್ನು  ರೂಪಿಸಿಕೊಟ್ಟಿರುವರು.

" ಚೆನ್ನುಡಿ" - ಮುನ್ನುಡಿ ಬೆನ್ನುಡಿ ಅಭಿಪ್ರಾಯಗಳ ಸಂಕಲನ, " ಕಸವರಮೆಂಬುದು" - ವೈಚಾರಿಕ ಲೇಖನಗಳ ಸಂಕಲನ, " ಬಬಲೇಶ್ವರ ಶಾಂತವೀರ ಪಟ್ಟಾಧ್ಯಕ್ಷರು", " ಇಟಗಿ ಶ್ರೀ ಭೀಮಾಂಬಿಕೆ" - ಜೀವನ ಚರಿತ್ರೆಗಳು, " ನೆನಹು ಮಂದಾರ" - ವ್ಯಕ್ತಿಗಳ ಕಿರು ಜೀವನ ಚರಿತ್ರೆಗಳು ಈ ಕೃತಿಗಳ ಮೂಲಕ ಡಾ. ಚನ್ನಪ್ಪ ಕಟ್ಟಿ ಕನ್ನಡದ ಸಾಂಸ್ಕೃತಿಕ ಲೋಕದ ಕಾಳಜಿಯನ್ನು ಎತ್ತಿ ತೋರಿಸಿದ್ದಾರೆ 

ಕಾವ್ಯ, ಕಥೆ ಹಾಗೂ ವಿಮರ್ಶಾಯಲ್ಲಿ ದಾಪುಗಾಲು ಇಡುತ್ತಲೇ ಡಾ. ಕಟ್ಟಿ ಅವರು ಸಂಶೋಧನಾ ಕ್ಷೇತ್ರಕ್ಕೂ ತಮ್ಮ " ಅಮೋಘಸಿದ್ದ ಪರಂಪರೆ " ಸಂಶೋಧನಾ ಕೃತಿಯ ಮೂಲಕ ಹೊಸ ಬೆಳಕನ್ನು ತಂದು ಚೆಲ್ಲಿರುವರು, ಸಂಶೋಧಕರಿಗೆ ಮಾದರಿಯಾದ ಈ ಮಹಾಪ್ರಬಂಧ ಅಕ್ಷರ ಇತಿಹಾಸದ ಹೊರಗಿರುವ ಸಿದ್ದರ, ಸಂತರ, ಅನುಭಾವಿಗಳ ಹಾಗೂ ಆರೂಢರ ಪರಂಪರೆಗಳ ಅಧ್ಯಯನಕ್ಕೆ ಮಾರ್ಗಿ ಆಗಿದೆ 

" ಅಮೋಘಸಿದ್ದ ಜನಪದ ಮಹಾಕಾವ್ಯ", " ಕುರುಬ ಮಹಿಳೆ", " ಕುರುಬ ಸಮುದಾಯದ: ವಿದೇಶಿ ವಿದ್ವಾಂಸರ ಅಧ್ಯಯನಗಳು", " ಸೀತಾಳ ಬಿಂದಿಗೆ " ಈ ಕೃತಿಗಳು ಡಾ. ಚನ್ನಪ್ಪ ಕಟ್ಟಿ ಅವರು ಹಾಲುಮತ ಸಂಬಂಧಿ ಕೃತಿಗಳು,  ಸಾಹಿತ್ಯ ಸಮ್ಮೇಳನದ, ಸಂಘ ಸಂಸ್ಥೆಗಳ ಸ್ಮರಣಯ ಗ್ರಂಥಗಳನ್ನು  ಹಾಗೂ ನಾಡಿನ ಹತ್ತಾರು ಹಿರಿಯ ಲೇಖಕರ ಅಭಿನಂದನಾ ಗ್ರಂಥಗಳಿಗೂ ಕೂಡಾ ಸಂಪಾದಕರಾಗಿ ಅಮೂಲ್ಯವಾದ ಕೃತಿಗಳನ್ನು ಈ ನಾಡಿಗೆ ನೀಡಿರುವುದು ಸ್ಮರಣೀಯವಾಗಿದೆ.

ಸೃಜನಶೀಲತೆಯನ್ನು ಕಾಪಿಟ್ಟುಕೊಂಡ ಡಾ. ಚನ್ನಪ್ಪ ಕಟ್ಟಿ ಅವರಿಗೆ ಹೊಸತೇನಾದರೂ ನೀಡಬೇಕೆಂಬ ಹಂಬಲ ಯಾವತ್ತೂ ಅವರಲ್ಲಿ ಜಂಗಮತ್ವವನ್ನು ಪಡೆದುಕೊಂಡದೆ ಇದಕ್ಕೆ ಸಾಕ್ಷಿ ಎಂಬಂತೆ ಅವರ ಅನುವಾದ ಕೃತಿಗಳಾದ " ಸ್ಕಾರ್ಲೆಟ್ ಪ್ಲೇಗ ( ಕಾದಂಬರಿ), " ಯುದ್ಧ ಕಾಲದ ಹುಡುಗಿಯರು" ( ಕಥಾ ಸಂಕಲನ), " ಮೃತ್ಯು ಮುಟ್ಟದ ಮುನ್ನ "( ಸಾವ ಧೇನಿಸುವ ಕವಿತೆಗಳು), " ಕುವರಿಯಾದೊಡೆ ಕುಂದೇನು?" ( ಏಳು ಏಕಾಂಕ ನಾಟಕಗಳು) ಕೃತಿಗಳು ವೈವಿಧ್ಯಮಯ ಸಾಂಸ್ಕೃತಿಕ ಲೋಕವನ್ನು ಕಟ್ಟಿಕೊಡುವಲ್ಲಿ ಸಫಲತೆಯನ್ನು ಸಾಧಿಸಿವೆ.

ರಾಜಧಾನಿಯಿಂದ ಐದುನೂರಾದ ಮೂವತ್ತು ಹಾಗೂ ಸಾಂಸ್ಕೃತಿಕ ನಗರಿ ಧಾರವಾಡದಿಂದ ಎರಡು ನೂರದಾ ಐವತ್ತು ಕಿಲೋಮೀಟರ್ ದೂರದಲ್ಲಿರುವ ಸಿಂದಗಿ ಪಟ್ಟಣದಲ್ಲಿ ಠಿಕಾಣಿ ಹೂಡಿದ ಚನ್ನಪ್ಪ ಕಟ್ಟಿ ಅವರು ಡಾ. ಎಂ ಎಂ ಪಡಶೆಟ್ಟಿ ಹಾಗೂ ನಾಗೇಶ್ ರಾಂಪೂರ ಅವರೊಂದಿಗೆ ಸೇರಿಕೊಂಡು ಸಿಂದಗಿಯ ಸಾಂಸ್ಕೃತಿಕ ಚಹರೆಯನ್ನು ಬದಲಿಸಿ, ನೆಲೆ ಪ್ರಕಾಶನ ಸಂಸ್ಥೆಯನ್ನು ಹುಟ್ಟು ಹಾಕಿ ಎಪ್ಪತ್ತಕ್ಕೂ ಹೆಚ್ಚು ವೈವಿಧ್ಯಮಯ ಪುಸ್ತಕಗಳನ್ನು ಪ್ರಕಟಿಸಿ ಕಿರಿಯ ಲೇಖಕರನ್ನು ಸಾಹಿತ್ಯ ಕ್ಷೇತ್ರಕ್ಕೆ ಪರಿಚಯಿಸಿ ಕೊಡುವಲ್ಲಿ ಸಫಲರಾಗಿದ್ದಾರೆ, ಬೋಧನೆ, ಬರವಣಿಗೆ ಮತ್ತು ಆಡಳಿತ ವನ್ನು ತಮ್ಮ ಪ್ರಾಮಾಣಿಕ ನಡೆಯ ಮೂಲಕ ನ್ಯಾಯ ಒದಗಿದ ಕಟ್ಟಿ ಅವರದು ಬಹುಮುಖ ವ್ಯಕ್ತಿತ್ವ , ಯಾವಾಗಲೂ ಗೋಜು ಮತ್ತು ಗದ್ದಲಗಳ ಆಚೆ ನಿಂತು ತಮ್ಮ ನಿತಾಂತ ಸಂಯಮದಿಂದ ಪ್ರತಿಯೊಂದನ್ನು ಅವಲೋಕಿಸಿ ನಿರ್ಣಯಿಸುವ ಇವರ ನಡೆ ನಿಧಾನವಾದರೂ ಪ್ರಧಾನವಾಗಿದೆ. 

ಡಾ. ಚನ್ನಪ್ಪ ಕಟ್ಟಿ ಅವರು ಇದುವರೆಗೂ ಸುಮಾರು ನಾಲವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದು ಎಲ್ಲಾ ಕೃತಿಗಳು ಕನ್ನಡ ನಾಡಿಗೆ ವೈವಿಧ್ಯಮಯ ಸಾಂಸ್ಕೃತಿಕ ಲೋಕವನ್ನು ಪರಿಚಯಿಸಿಕೊಟ್ಟಿವೆ, ಡಾ. ಕಟ್ಟಿ ಅವರು ತಮ್ಮ ಕಾವ್ಯ ಭಾಷೆಯ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಹೊಸ ಧ್ವನಿಯೊಂದನ್ನು ತಂದು ಸೇರಿಸಿದ್ದಾರೆ ಎಂದು ವಿಮರ್ಶಕರು ಗುರುತಿಸಿದ್ದಾರೆ. 

ಚನ್ನಪ್ಪ ಕಟ್ಟಿ ಅವರ ಸಾಹಿತ್ಯದ ಈ ಸುದೀರ್ಘ ಪಯಣದ ಹಾದಿಯಲ್ಲಿ ಕಟ್ಟಿ ಅವರನ್ನು - ಜಯತೀರ್ಥ ರಾಜಪುರೋಹಿತ ದತ್ತಿನಿಧಿ ಸಣ್ಣ ಕಥಾ ಸ್ಪರ್ಧೆಯಲ್ಲಿ ಚಿನ್ನದ ಪದಕ, ಸಂಕ್ರಮಣ ಕಾವ್ಯ ಪ್ರಶಸ್ತಿ, ಎಚ್ ಎಂ ಟಿ ಕಥಾ ಪ್ರಶಸ್ತಿ, ಮಲ್ಲೇಪುರಂ ಜಿ. ವೆಂಕಟೇಶ ಸಾಂಸ್ಕೃತಿಕ ಪ್ರತಿಷ್ಠಾನದ ಬಿ. ಶ್ಯಾಮಸುಂದರ ಪ್ರಶಸ್ತಿ, ರತ್ನಾಕರವರ್ಣಿ - ಮುದ್ದಣ ಕಾವ್ಯ ಪ್ರಶಸ್ತಿ, ಅಮ್ಮ ಪ್ರಶಸ್ತಿ, ಬೆಟದೂರು ಅಮರಮ್ಮ ಚೆನ್ನಬಸಪ್ಪ ಪ್ರಶಸ್ತಿ, ಡಾ. ಬೆಸಗರಹಳ್ಳಿ ರಾಮಣ್ಣ ಕಥಾ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡೆಮಿಯ ಪುಸ್ತಕ ಬಹುಮಾನ, ಡಾ. ಬಸವರಾಜ ಕಟ್ಟಿಮನಿ ಕಥಾ ಪ್ರಶಸ್ತಿ, ಸ್ವಾಭಿಮಾನಿ ಕನ್ನಡ ಬಳಗ ಪುಸ್ತಕ ಬಹುಮಾನ, ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, " ಊರ್ಧರೇತ" ಕಿರು ಚಲನಚಿತ್ರದ ಕಥೆಗೆ ಉತ್ತರ ಕರ್ನಾಟಕ ಇಂಟರ್ ನ್ಯಾಷನಲ್ ಶಾರ್ಟ್ ಫಿಲ್ಮ್ ಫೆಸ್ಟಿವಲ್ 2022 ಟೆಲೆ ಫಿಲ್ಮ್ ಬೆಸ್ಟ್ ಸ್ಟೋರಿ ಅವಾರ್ಡ್ ಗಳು ಹುಡುಕಿಕೊಂಡು ಬಂದಿವೆ.

ಸಿಂದಗಿ ನೆಲೆ ಪ್ರಕಾಶನ ಸಂಸ್ಥೆಯ ಸಂಸ್ಥಾಪಕ ಸದಸ್ಯರಾಗಿ , ವಿಜಯಪುರದ ಕಲಬುರಗಿ ಫೌಂಡೇಶನ್ ದ ಸದಸ್ಯ, ಹಲಸಂಗಿ ಪ್ರತಿಷ್ಠಾನದ ಸದಸ್ಯ, ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸದಸ್ಯರಾಗಿ ಕನ್ನಡ ಭಾಷೆಯನ್ನು ನವೀನವಾಗಿ ಕಟ್ಟುವಲ್ಲಿ ನಿರಂತರತೆಯನ್ನು ಕಾಯ್ದುಕೊಂಡಿರುವರು ಎಲ್ಲಕ್ಕೂ ಮಣಿಮುಕುಟದಂತೆ ಸದ್ಯ ಕರ್ನಾಟಕದ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಬೆಂಗಳೂರು ವಲಯದಲ್ಲಿ ಉತ್ತರ ಕರ್ನಾಟಕದ ಸಿಂದಗಿಯ ಸೊಗಡನ್ನು ತಮ್ಮ ಬರಹ ಮಾತು ಮತ್ತು ಆಡಳಿತದ ಮೂಲಕ ಸಾದರ ಪಡಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.

ಒಟ್ಟಾರೆ ಡಾ. ಚನ್ನಪ್ಪ ಕಟ್ಟಿ ಅವರ ಬದುಕು, ಬರಹ ಮತ್ತು ಆಡಳಿತದ ಹರಿವು ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕವನ್ನು ಸಮೃದ್ಧಗೊಳಿಸಿವೆ, ಇವರ ಚಿಂತನೆ ಮತ್ತು ವಿಚಾರಗಳು, ಕಾರ್ಯವೈಖರಿ ಹೊಸ ಬರಹಗಾರರಿಗೆ ಹೊಸ ವಿವೇಕವನ್ನು ತುಂಬುವ ಈ ಸಂದರ್ಭದಲ್ಲಿಯೇ ಅವರಿಗೀಗ ಎಪ್ಪತ್ತು ವರ್ಷ ಈ ಸಂದರ್ಭದಲ್ಲಿ ಅವರ ಶಿಷ್ಯ ಬಳಗ ಮತ್ತು ಅಭಿಮಾನಿಗಳು ಸೇರಿ  ಸಿಂದಗಿಯಲ್ಲಿ ಇದೇ ಮೇ 1 ನೇ ತಾರೀಖಿನಂದು "ನೆಲೆ" ಎನ್ನುವ ಅಭಿನಂದನಾ ಗ್ರಂಥ ಅರ್ಪಿಸುವ ಮೂಲಕ ಅವರ ಎಪ್ಪತ್ತನೇಯ ವರ್ಷದ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ.

                                                                            -    ಮನು ಪತ್ತಾರ, ಕಲಕೇರಿ

                                                                                    ವಿಜಯಪುರ

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Sunday, April 26, 2026

ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳ ಯಶಸ್ವಿ : ಅನಿಲ ಹೊಸಮನಿ 30 ಲಕ್ಷ ರೂ.ಗಳಿಗೂ ಮಿಕ್ಕಿ ಪುಸ್ತಕದ ವ್ಯಾಪಾರ-ವಹಿವಾಟು

 

 ವಿಜಯಪುರ : ಸಾಮಾಜಿಕ ಜಾಲತಾಣದಲ್ಲಿ ಮುಳುಗಿ ಹೋಗಿರುವ ಯುವಕರಿಗೆ ಹೊತ್ತಿಗೆಯ ಬಗ್ಗೆ ಒಲವು ಮೂಡಿಸಿ ಅವರಲ್ಲಿ ಬುದ್ಧ-ಬಸವ-ಬಾಬಾಸಾಹೇಬರ ಚಿಂತನೆಯನ್ನು ಬೆಳೆಸುವ ನಿಟ್ಟಿನಲ್ಲಿ ಪ್ರಥಮ ಪ್ರಯತ್ನವಾಗಿ ಮೇ ಸಾಹಿತ್ಯ ಬಳಗದಿಂದ ಸಂಘಟಿಸಲಾಗಿದ್ದ ಪುಸ್ತಕ ಮೇಳ ಯಶಸ್ವಿಯಾಗಿದ್ದು, 30 ಲಕ್ಷ ರೂ. ಮಿಕ್ಕಿ ವಹಿವಾಟು ನಡೆದಿದೆ, ಜನರು ಪುಸ್ತಕದ ಬಗ್ಗೆ ಒಲವು ಕಡಿಮೆಯಾಗಿಲ್ಲ ಎನ್ನುವುದು ಇದಕ್ಕೆ ಮತ್ತೊಮ್ಮೆ ಸಾಕ್ಷೀಕರಿಸಿದೆ, ಈ ಮೇಳವನ್ನು ಮುಂದಿನ ವರ್ಷವೂ ಅತ್ಯಂತ ಅಚ್ಚುಕಟ್ಟುತನಿಂದ ಆಯೋಜಿಸಲಾಗುವುದು ಎಂದು ಮೇ ಸಾಹಿತ್ಯ ಬಳಗದ ಅನಿಲ ಹೊಸಮನಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ಮೇ ಸಾಹಿತ್ಯ ಬಳಗ ಸಂಘಟಿಸಿದ ಪುಸ್ತಕ ಮೇಳ ಯಶಸ್ವಿಯಾಗಿದೆ, ಬುದ್ಧ, ಬಸವ ಹಾಗೂ ಬಾಬಾಸಾಹೇಬರ ತತ್ವ ಚಿಂತನೆ, ಆಶಯಗಳ ಆಧರಿಸಿ ಸಮಾಜ ಇನ್ನೂ ನಿರ್ಮಾಣವಾಗಿಲ್ಲ, ಈ ಮಹನೀಯರ ಸಮ ಸಮಾಜದ ಕನಸು ನನಸಾಗಿಸಲು ಪ್ರತಿಯೊಬ್ಬರು ಶ್ರಮಿಸಬೇಕಿದೆ, ಈ ಪ್ರಯತ್ನದ ಭಾಗವಾಗಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮುಳುಗಿ ಹೋಗಿರುವ ಯುವಜನರಿಗೆ ಪುಸ್ತಕಕದ ಕಡೆಗೆ ಒಲವು ಮೂಡಿಸುವ ನಿಟ್ಟಿನಲ್ಲಿ ಈ ಪುಸ್ತಕ ಮೇಳವನ್ನು ಆಯೋಜಿಸಲಾಗಿತ್ತು. ಪುಸ್ತಕ ಮೇಳದಲ್ಲಿ ಲಡಾಯಿ, ಸ್ವಪ್ನಾ ಬುಕ್ ಹೌಸ್, ನವ ಕರ್ನಾಟಕ, ಆರ್ ಎಸ್ ಬುಕ್ ವರ್ಲ್ಡ್ ಸೇರಿ 35 ಕ್ಕೂ ಹೆಚ್ಚು ಪ್ರಕಾಶನ ಸಂಸ್ಥೆಗಳು ಭಾಗವಹಿಸಿದ್ದವು ಎಂದರು.

ವಿಜಯಪುರದಲ್ಲಿ ಪುಸ್ತಕ ಖರೀದಿ ಆಗುವುದಿಲ್ಲ ಎಂಬ ಮನೋಭಾವ ಹೊಂದಿದ್ದ ಪ್ರಕಾಶಕರಿಗೆ ಮೇಳದಲ್ಲಿ ಭಾಗವಹಿಸಿದ ಮೇಲೆ ಅವರ ಅಭಿಪ್ರಾಯ ಹಾಗೂ ಮನೋಭಾವ ಬದಲಾಗಿದ್ದು, ಪುಸ್ತಕ ಪ್ರೇಮಿಗಳು ಆಸಕ್ತಿಯಿಂದ ಪುಸ್ತಕ ಖರೀದಿ ಮಾಡಿರುವುದು ಅನೇಕ ಪ್ರಕಾಶಕರಿಗೆ ಸಂತೋಷ ತಂದಿದೆ, ಹಲವು ಪ್ರಕಾಶರಿಗೆ ತಲಾ 5 ಲಕ್ಷ ರೂ.ಗಳಿಗೂ ಮಿಕ್ಕಿ ಪುಸ್ತಕದ ವ್ಯಾಪಾರ-ವಹಿವಾಟು ನಡೆದಿರುವುದು ಜನತೆ ಪುಸ್ತಕದ ಬಗ್ಗೆ ಹೊಂದಿರುವ ಒಲವಿಗೆ ಸಾಕ್ಷಿ ಎಂದರು.

ಸಾಮಾನ್ಯ ಬಡ ಕುಟುಂಬದಿAದ ಬಂದವರೇ ಸಂಘಟಿಸಿದ ಈ ಪುಸ್ತಕ ಮೇಳಕ್ಕೆ ಅನೇಕರು ಉದಾರವಾದ ಸಹಾಯ ಹಸ್ತ ಚಾಚಿದ್ದಾರೆ, ಅವರಿಗೆ ಮೇಳ ಚಿರ ಋಣಿಯಾಗಿದೆ, ಅನೇಕ ಸ್ವಯಂ ಪ್ರೇರಿತವಾಗಿ ಶ್ರಮಿಸಿದ ದೊಡ್ಡ ಪಡೆಯೇ ಇದೆ ಎಂದರು. ಅವರಿವರೆನ್ನದೆ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮೇ ಸಾಹಿತ್ಯ ಬಳಗದ ಪ್ರಮುಖರಾದ ಚೆನ್ನು ಕಟ್ಟಿಮನಿ, ಯಮನಪ್ಪ ಗುಣಕಿ ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ,ಸಾಯಬಣ್ಣ ಹಳ್ಳಿ, ಸೋಮಲಿಂಗ ರಣದೇವಿ, ಲಿಂಗರಾಜ ಬೀದರಕುಂದಿ ಇದ್ದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Tuesday, April 21, 2026

ಸರಕಾರಿ ಮೆಡಿಕಲ್ ಕಾಲೇಜ್ ಹೋರಾಟಗಾರ್ತಿ ಗೀತಾಗೆ ಪಿ ಎಚ್ ಡಿ ಪದವಿ


ವಿಜಯಪುರ:  ವಿಜಯಪುರ ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟಗಾರ್ತಿ ಹಾಗೂ ವಿಜಯಪುರ ನಿವಾಸಿ ಗೀತಾ ಎಚ್ ಅವರಿಗೆ ಪಿ ಎಚ್ ಡಿ ಪದವಿ ಲಭಿಸಿದೆ.

ಗೀತಾ ಹೆಚ್ ಅವರು ಮಹಿಳಾ ಅಧ್ಯಯನ ವಿಭಾಗದ , ಪ್ರೋ ಹೇಮಲತಾ ಹೆಚ್ ಎಮ್ ಅವರ ಮಾರ್ಗದರ್ಶನದಲ್ಲಿ "ವಿಜಯಪುರ ಜಿಲ್ಲೆಯ ಆಶಾ ಕಾರ್ಯಕರ್ತೆಯರ ಕುರಿತು ಒಂದು ಅಧ್ಯಯನ" ಎಂಬ ವಿಷಯದಲ್ಲಿ ಸಂಶೋಧನೆಯನ್ನು ಮಂಡಿಸಿದ್ದ ಪ್ರಬಂಧಕ್ಕೆ  ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯವು ಪದವಿ ನೀಡಿದೆ.
ಮಂಗಳವಾರ ವಿಜಯಪುರ ನಗರ ಹೊರವಲಯದ ತೊರವಿಯಲ್ಲಿ ಹಮ್ಮಿಕೊಂಡ  17ನೇ ಘಟಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ  ಗೆಲ್ಹೋಟ್ ಅವರು ಪಿ ಎಚ್ ಡಿ ಪ್ರಧಾನ ಮಾಡಿದರು.
ಡಾಕ್ಟರೇಟ್ ಪದವಿ ಪಡೆದಿರುವ ಗೀತಾ ಎಚ್. ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಮಹಿಳಾ ವಿವಿಯಲ್ಲಿ ಓದುವ ವಿದ್ಯಾರ್ಥಿನಿಯರು ಅಧ್ಯಯನ ಮಾಡುವಾಗಲೇ ಒಂದಷ್ಟು ದುಡ್ಡು ಸಂಪಾದಿಸುವ ಅವಕಾಶಗಳ ಸೃಷ್ಟಿ : ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ

 ವಿಜಯಪುರ: ಮುಂಬರುವ ದಿನಗಳಲ್ಲಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ “ಓದುತ್ತಿರುವಾಗಲೇ ಗಳಿಕೆ” ಎಂಬ ವಿನೂತನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿನಿಯರಿಗೆ ಬಯೋಡೀಸೆಲ್ ಘಟಕ, ಕಾಗದ ಮರುಬಳಕೆ ಘಟಕ, ಅನನ್ಯ ಆಹಾರ ಸಂಸ್ಕರಣಾ ಕೇಂದ್ರ ಮತ್ತು ಗ್ರೀನ್‌ಹೌಸ್‌ಗಳಲ್ಲಿ ವಿವಿಧ ಕೌಶಲಗಳನ್ನು ಕಲಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಅವರು ಘೋಷಿಸಿದರು.

ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ೧೭ನೆಯ ವಾರ್ಷಿಕ ಘಟಿಕೋತ್ಸವದಲ್ಲಿ ವಿವಿಯ ಪ್ರಗತಿ ವರದಿ ಮಂಡಿಸಿದ ಅವರು, ಕೌಶಲ್ಯ ಮಹಿಳಾ ತಂತ್ರಜ್ಞಾನ ಪಾರ್ಕ್ ಮೂಲಕ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಹಾಗೂ ಗ್ರಾಮೀಣ  ಮಹಿಳೆಯರಿಗೆ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶವಿದೆ ಎಂದರು.

ವಿದೇಶಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ವಾರಕ್ಕೆ ೨೦ ಗಂಟೆಗಳ ಕಾಲ ಪಾರ್ಟ್ ಟೈಂ ಕೆಲಸ ಮಾಡುವ ಪದ್ಧತಿ ವ್ಯಾಪಕವಾಗಿ ಬಳಕೆಯಲ್ಲಿದೆ. ಅದೇ ಮಾದರಿಯಲ್ಲಿ ಮಹಿಳಾ ವಿವಿಯಲ್ಲಿ ಓದುವ ವಿದ್ಯಾರ್ಥಿನಿಯರು ತಮ್ಮ ಬಿಡುವಿನ ವೇಳೆಯಲ್ಲಿ ಪಾರ್ಟ್ ಟೈಂ ಕೆಲಸ ಮಾಡುವ ಮೂಲಕ ವಿವಿಧ ಕೌಶಲಗಳನ್ನು ಕಲಿಯುವುದರ ಜತೆಗೆ ವಿವಿಧ ಕೋರ್ಸ್ಗಳಲ್ಲಿ ಅಧ್ಯಯನ ಮಾಡುವಾಗಲೇ ಒಂದಷ್ಟು ದುಡ್ಡು ಸಂಪಾದಿಸುವ ಅವಕಾಶಗಳನ್ನು ಸೃಷ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿನಿಯರ ಪಾಲಕರ ಆರ್ಥಿಕ ಹೊರೆ ಒಂದಷ್ಟು ಕಡಿಮೆ ಮಾಡಬಹುದಾಗಿದೆ ಎಂದು ವಿವರಿಸಿದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕುಲಪತಿಗಳ ಸಮಾವೇಶದಲ್ಲಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ದೂರಶಿಕ್ಷಣ ಪುನರಾಂಭಿಸುವ ಬಗೆಗೆ ವಿಸ್ತೃತ ಚರ್ಚೆಗಳನ್ನು ನಡೆಸಿದ್ದು ಈ ಸಂಬAಧ ಅಗತ್ಯ ಕ್ರಮಗಳನ್ನು ಕೈಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಉನ್ನತ ಶಿಕ್ಷಣದ ಅಭಿವೃದ್ಧಿಯಲ್ಲಿ ಮೂಲಸೌಕರ್ಯದ ಮಹತ್ವವನ್ನು ಅರಿತು, ನಮ್ಮ ವಿಶ್ವವಿದ್ಯಾಲಯವು ಕ್ಯಾಂಪಸ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಕೊಂಡಿದೆ. ೨೦೨೫-೨೬ ನೇ ಶೈಕ್ಷಣಿಕ ವರ್ಷದಲ್ಲಿ ದಶಮಾನೋತ್ಸವದ ಮೊದಲ ಮಹಡಿಯಲ್ಲಿ  ರೂ. ೩.೭೩ ಕೋಟಿ ಅನುದಾನದಲ್ಲಿ  ಸ್ನಾತಕ  ಕೋರ್ಸುಗಳನ್ನು ನಡೆಸುವ  ಸಲುವಾಗಿ ತರಗತಿ  ಕೊಠಡಿಗಳನ್ನು  ನಿರ್ಮಾಣ ಮಾಡಲಾಗಿದೆ. ಕೇಂದ್ರ ಸರ್ಕಾರದ ಪಿಮ್_ಉಷಾ   ಯೋಜನೆಯಡಿ  ೯.೦೭ ಕೋಟಿ ಮೊತ್ತದ ಅನುದಾನದಲ್ಲಿ “ಮಹಿಳಾ ಕ್ಷೇಮಾಭಿವೃದ್ಧಿ ಕೇಂದ್ರ” ಹಾಗೂ  ಮಹಿಳಾ ಶೌಚಾಲಯಗಳ ನವೀಕರಣ ಕಟ್ಟಡ  ನಿರ್ಮಾಣದ  ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.  

ವಿವಿಯ ಜ್ಞಾನಶಕ್ತಿ ಕ್ಯಾಂಪಸ್‌ನಲ್ಲಿ ನಾಲ್ಕು ಸ್ನಾತಕೋತ್ತರ ವಿದ್ಯಾರ್ಥಿನಿಯರ ವಸತಿ ನಿಲಯಗಳು ಇವೆ. ಇದಲ್ಲದೆ, ಸ್ನಾತಕ ವಿದ್ಯಾರ್ಥಿನಿಯರಿಗಾಗಿ ಎರಡು ವಸತಿ ಸೌಲಭ್ಯಗಳನ್ನು ಒದಗಿಸಲಾಗಿದೆ. ವಿಶ್ವವಿದ್ಯಾಲಯವು ವಿದ್ಯಾರ್ಥಿನಿಯರಿಗೆ ೫೦೦ ಲೀಟರ್ ಸಾಮರ್ಥ್ಯದ ಆರ್.ಒ. ನೀರು ಶುದ್ಧೀಕರಣ ಯಂತ್ರ, ಗೀಸರ್‌ಗಳು, ಸೌರ ಹೀಟರ್‌ಗಳು, ಸೌರ ದೀಪಗಳು ಮತ್ತು ವಸತಿ ನಿಲಯಗಳ ಸುತ್ತಲೂ ಸೌರ ರಸ್ತೆ ದೀಪಗಳಂತಹ ಸೌಲಭ್ಯಗಳನ್ನು ಒದಗಿಸುತ್ತದೆ. ವಿದ್ಯಾರ್ಥಿನಿಯರ ಭದ್ರತೆಯನ್ನು ಖಚಿತಪಡಿಸಲು ೨೪ ಗಂಟೆಗಳ ಭದ್ರತಾ ವ್ಯವಸ್ಥೆ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿನಿಯರ ಕಲ್ಯಾಣಕ್ಕಾಗಿ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ನರ್ಸ್ ನೇಮಕವಾಗಿದ್ದು, ಆರೋಗ್ಯ ಕೇಂದ್ರದಲ್ಲಿ ೨೪x೭ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲು ಆಂಬ್ಯುಲೆನ್ಸ್ ಸೇವೆಯೂ ಲಭ್ಯವಿದೆ ಎಂದೂ ಕುಲಪತಿಗಳು ವಿವರಿಸಿದರು.

ವೇದಿಕೆಯ ಮೇಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯ ಅತಿಥಿ ಮುಂಬೈನ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಉಜ್ವಲಾ ಚಕ್ರದೇವ್, ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಶ್ರೀಮತಿ ಪಾರ್ವತೆವ್ವ ಸಿದ್ದಪ್ಪ ಹೊಂಗಲ್, ಡಾ.ಸಂಗೀತಾ ಎನ್ ಕಟ್ಟಿಮನಿ ಮತ್ತು ಶ್ರೀಮತಿ ಆಶಾದೇವಿ ಜಗದೀಶ ಗುಡಗುಂಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್.ಲಕ್ಕಣ್ಣವರ, ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ, ಸಿಂಡಿಕೇಟ್, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



Monday, April 20, 2026

ಬುದ್ಧ ಬಸವ ಭೀಮರ ತತ್ವ ದೇಶ ಆಳಿದರೆ ಅಸ್ಪೃಶ್ಯತೆ ನಿವಾರಣೆ ಸಾಧ್ಯ : ಡಾ. ಹೇಮಂತ ಭೂತ್ನಾಳ

ಶರಣ ಅಲ್ಲಮಪ್ರಭು ಶರಣ ಸಿದ್ದರಾಮೇಶ್ವರ ವೇದಿಕೆ

ವಿಜಯಪುರ : ಇವನಾರವ ಇವನಾರವ ಎಂದರೆ ಜಾತಿ ಇವ ಇವ ನಮ್ಮವ, ನಮ್ಮವ ಎಂದರೆ ಧರ್ಮ, ಪ್ರಧಾನಿ ಬಸವಣ್ಣವರಿಂದ ಎರಡು ಸಲ ಶರಣಾರ್ಥಿ ಪಡೆದ ಹರಳಯ್ಯ -ಕಲ್ಯಾಣಮ್ಮ ಮಾಡಿದ ತಮ್ಮ ಚರ್ಮದ ಚಮ್ಮಾವುಗೆಯಲ್ಲಿ ಕಲ್ಯಾಣ ಕ್ರಾಂತಿ ಬೀಜ ಅಡಗಿತ್ತು ದೇಶದಲ್ಲಿ 3600 ಜಾತಿಗಳಿವೆ ಪ್ರತಿ ಜಾತಿ ತನಗಿಂತ ಕೆಳಗ ಒಂದು ಜಾತಿ ಇರಬೇಕಂತ ಬಯಸುತ್ತದೆ, ಒಂದು ಜಾತಿ ಇನ್ನೊಂದು ಜಾತಿಯ ಪಕ್ಕ ಕೂರೂದಿಲ್ಲ ಈ ದೇಶದಲ್ಲಿ ಒಂದು ಜಾತಿ ಇನ್ನೊಂದು ಜಾತಿಯನ್ನು ಅಸ್ಪೃಶ್ಯತೆಯಿಂದ ಕಾಣುತ್ತಿದೆ ಇಡಿ ದೇಶ ಅಸ್ಪೃಶ್ಯತೆಯಿಂದ ಬಳಲುತ್ತಿದೆ ಬುದ್ಧ, ಬಸವ ಭೀಮರ ತತ್ವಗಳು ಈ ದೇಶವನ್ನು ಆಳಿದರೆ ಮಾತ್ರ ಅಸ್ಪೃಶ್ಯತೆ ನಿವಾರಣೆ ಸಾಧ್ಯ ಎಂದು ಕಾಲೇಜ್ ಶಿಕ್ಷಣ ಇಲಾಖೆಯ ವಿಶ್ರಾಂತ ನಿರ್ದೇಶಕ ಡಾ ಹೇಮಂತ ಭೂತನಾಳ ಹೇಳಿದರು,
ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮAದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಉತ್ಸವದ ಅಂಗವಾಗಿ ಎರಡನೇ ದಿನ ಕಲ್ಯಾಣ ಕ್ರಾಂತಿ ನೆನಪು ರಾಷ್ಟ್ರೀಯ ಬಹು ಭಾಷಾ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಈ ಸಂದರ್ಭ ಕಾರ್ಯಕ್ರಮವನ್ನು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಕಲಬುರಗಿಯ ಹಿರಿಯ ಸಾಹಿತಿ ಡಾ ಶ್ರೀಶೈಲ ನಾಗರಾಳ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿ ಸಾಂಸ್ಕೃತಿಕವಾಗಿ ಸಾಮಾಜಿಕವಾಗಿ ಅಂಧಕಾರದಲ್ಲಿ ಮುಳುಗಿದ ಸಮಾಜದಲ್ಲಿ ಬಸವಣ್ಣ ಮತ್ತು ಶರಣರು ಹಚ್ಚಿದ ವಚನ ಸಾಹಿತ್ಯ ಜ್ಯೋತಿ ಹಚ್ಚಿದ್ದಾರೆ, ವಚನ ಸಾಹಿತ್ಯವೇ ಕನ್ನಡ ನೆಲದ ಮೊದಲ ಸಾಹಿತ್ಯದ ಫಸಲಾಗಿದೆ, ಶರಣರ ವಚನ ಸಾಹಿತ್ಯ ಪ್ರತಿಭಟನೆಯ ರೂಪವಾಗಿದೆ, ವಚನಗಳು ಬದುಕಿನ ಶೋಧ ಮಾಡುತ್ತವೆ, ಜಗತ್ತಿನಲ್ಲಿ ಮೊಟ್ಟ ಮೊದಲ ಬಾರಿಗೆ ಸಾಮಾಜಿಕ ಕಟ್ಟಳೆಗಳನ್ನು ಮೀರಿ ಬಸವಣ್ಣನ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ರಚನೆಯಾದದ್ದು ವಚನ ಸಾಹಿತ್ಯ ಎಂದರು.
ಶರಣರು ಮೆಟ್ಟಿದ ಕಲ್ಯಾಣ ನಾಡು ಭೂ ಕೈಲಾಸವಾಗಿತ್ತು ಜಗತ್ತಿನ ವಿವಿಧ ಭಾಗದ ಜನ ವಚನ ಚಳುವಳಿ ಪ್ರಭಾವಕ್ಕೆ ಒಳಪಟ್ಟು ಕಲ್ಯಾಣಕ್ಕೆ ಬಂದರು, ಕಾವ್ಯ ಏನು ಮಾಡಬಲ್ಲದು ಎಂಬುದಕ್ಕೆ ಉತ್ತರ ವಚನಗಳಲ್ಲಿಯೇ ಇದೆ ಎಂದರು.

ಕವಿಗೋಷ್ಠಿ ಆಶಯ ನುಡಿ ಆಡಿ ಪ್ರೊ ಬಸವರಾಜ ಜಾಲವಾದಿ ಅವರು ಮಾತನಾಡಿ, 21ನೇ ಶತಮಾನದಲ್ಲಿ ಬಸವಣ್ಣನ ಅರ್ಥ ಶಾಸ್ತ್ರವನ್ನು ನಾವೆಲ್ಲ ಅಪ್ಪಿಕೊಳ್ಳಬೇಕು, ಒಪ್ಪಿಕೊಳ್ಳಬೇಕು ಕಾಯಕ ಮಾಡಿದ ಸಂಪಾದನೆಯನ್ನು ಸಮಾಜಕ್ಕೆ ಸದುಪಯೋಗಪಡಿಸಬೇಕು ಎಂದು ಹೇಳಿದ ಬಸವಾದಿ ಶರಣರ ತತ್ವ ಎಲ್ಲರು ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮ ಸಂಯೋಜಕ ಶಂಕರ ಬೈಚಬಾಳ ಮಾತನಾಡಿ ಕನ್ನಡದ ಕವಿಗಳ ಸಂದೇಶ ಬೇರೆ ಭಾಷೆಗೆ ತಲುಪಿಸುವ ಉದ್ದೇಶದಿಂದ ಬಹುಭಾಷಾ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದರು.
ಕವಿಗೋಷ್ಠಿಯಲ್ಲಿ ಕನ್ನಡಲ್ಲಿ ಕಲಾವತಿ ಬೈಚಬಾಳ, ಬಸರಾಜ ಗವಿಮಠ, ಶೇಷರಾವ ಮಾನೆ, ಪರಶುರಾಮ ಶಿವಶರಣ, ಶಿವಪುತ್ರ ಅಜಮನಿ, ಕೆ ಎಸ್ ಬಾಗೇವಾಡಿ, ಇಂಗ್ಲಿಷ್‌ನಲ್ಲಿ ಬಸಮ್ಮ ಬಾಗೋಜಿ, ಅನು ಮುಲ್ಲಾ, ಎಸ್.ಬಿ. ಕಮತಿ, ಹಿಂದಿಯಲ್ಲಿ ಶಿವಣ್ಣ ಹದಿಮೂರ, ಸಂಸ್ಕೃತದಲ್ಲಿ ಗೀತಾ ಸನದಿ, ಕೊಂಕಣಿಯಲ್ಲಿ ಪ್ರಶಾಂತ ದೈವಜ್ಞ, ತೆಲಗುದಲ್ಲಿ ಡಿ. ಜೋಸೆಫ್, ಉರ್ದುದಲ್ಲಿ ಎಂ.ಎA.ಕಲಾಸಿ, ಡಾ. ಅಮೀರುದ್ದೀನ ಖಾಜಿ, ಲಂಬಾಣಿಯಲ್ಲಿ ವಸಂತ ಚವ್ಹಾಣ ಕವನ ವಾಚಿಸಿದರು.


ಕಾರ್ಯಕ್ರಮದಲ್ಲಿ ವೇದಿಕೆಯ ಮೇಲಿನ ಗಣ್ಯರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.


ವೇದಿಕೆಯಲ್ಲಿ ವಿದ್ಯಾವತಿ ಅಂಕಲಗಿ, ದಾನಮ್ಮ ಮಹಾಜನ, ಲಕ್ಷ್ಮೀ ಹೊಸಮನಿ, ಸುಭಾಸ ಕನ್ನೂರ, ಘನಶ್ಯಾಮ ತೋಸ್ನಿವಾಲಾ, ಮಹಾದೇವಿ ತೆಲಗಿ, ರಾಜಶೇಖರ ಉಮರಾಣಿ, ದಾನೇಶ ಅವಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಭುಗೌಡ ಪಾಟೀಲ, ಕೆ.ಎಫ್. ಅಂಕಲಗಿ, ಮಹಾದೇವಿ ಗೋಕಾಕ, ವ್ಹಿ.ಸಿ. ನಾಗಠಾಣ, ಅಡಿವೆಪ್ಪ ಸಾಲಗಲ್ಲ, ಅನಿಲ ಹೊಸಮನಿ, ಭಾರತಿ ಪಾಟೀಲ, ಶಾಂತವೀರ ಥಾಲಬಾವಡಿ, ಲಾಯಪ್ಪ ಇಂಗಳೆ, ಕಲ್ಲು ಶಿವಶರಣ, ಶರಣು ಕಿರಣಗಿ, ಬಸನಗೌಡ ಹರನಾಳ, ವ್ಹಿ.ಡಿ.ಐಹೊಳ್ಳಿ, ಜಂಬುನಾಥ ಕಂಚ್ಯಾಣಿ, ಸುಧಾರಾಣಿ ಬಿರಾದಾರ, ಸಂಗೀತಾ ಪೂಜಾರಿ, ಅನುಪ್ರಿಯಾ ಬಿರಾದಾರ, ಶಿವಾನಂದ ಸಾಂಗೋಲಿ, ಚೆನ್ನು ಕಟ್ಟಿಮನಿ, ತಿಪ್ಪಣ್ಣ ದೊಡಮನಿ, ಯಮನಪ್ಪ ಗುಣಕಿ, ಶ್ರೀನಾಥ ಪೂಜಾರಿ, ಸುಭಾಸ ಯಾದವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Sunday, April 19, 2026

ಪಾಲಿ ಭಾಷೆ ಪರೀಕ್ಷೆ: ಮಲ್ಲಿಕಾರ್ಜುನ ಕೆಳಗಡೆ ವಿಶೇಷ ಸಾಧನೆ

ವಿಜಯಪುರ: ನಗರದ ಕನಕದಾಸ ಬಡಾವಣೆ ನಿವಾಸಿ, ವಾರ್ತಾ ಇಲಾಖೆ ವಿಶ್ರಾಂತ ಉನ್ನತ ಅಧಿಕಾರಿ ಮಲ್ಲಿಕಾರ್ಜುನ ಕೆಳಗಡೆ ಅವರು ತಮ್ಮ 75 ನೇ ಇಳಿವಯಸ್ಸಿನಲ್ಲೂ ಪಾಲಿ ಭಾಷೆ ಪರೀಕ್ಷೆಯಲ್ಲಿ ವಿಶೇಷ ಸಾಧನೆ ತೋರಿದ್ದಾರೆ.

ಪಾಲಿ ಭಾಷೆ ಕಲಿಯುವ ಆಸಕ್ತಿಯಿಂದ ಕಲಬುರಗಿಯ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಪಾಲಿ ಸಂಸ್ಥೆಯಲ್ಲಿ ಹೆಸರು ನೋಂದಾಯಿಸಿ, ಒಂದು ವರ್ಷದ ಡಿಪ್ಲೋಮಾ ಪಾಲಿ ಕೋರ್ಸ್ ಅಧ್ಯಯನ ಮಾಡಿ, ಪರೀಕ್ಷೆ ಬರೆದು ಅತ್ಯುತ್ತಮ ಸ್ಥಾನ (500 ಕ್ಕೆ 403 ಅಂಕ) ಪಡೆದಿದ್ದು, ಕರ್ನಾಟಕ ಸಂಸ್ಕೃತಿ ವಿಶ್ವ ವಿದ್ಯಾಲಯ ಪ್ರಮಾಣ ಪತ್ರ ನೀಡಿದೆ.

ಮಲ್ಲಿಕಾರ್ಜುನ ಕೆಳಗಡೆ ಅವರ ವಿಶೇಷ ಸಾಧನೆಗೆ ಸ್ನೇಹಿತರ ಬಳಗ, ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳು ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ :  9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



ಬಸವಣ್ಣನ ಆರ‍್ಶ ಎಲ್ಲರಿಗೂ ಮಾಧರಿ- ಸುಭಾಸ ಯಾದವಾಡ


ಶರಣ ಅಲ್ಲಮಪ್ರಭು, ಶರಣ ಸಿದ್ದರಾಮೇಶ್ವರ ವೇದಿಕೆ
ವಿಜಯಪುರ: ಆಧುನಿಕ ಎಲ್ಲ ಕವಿಗಳಿಗೆ ಬಸವಣ್ಣ ಆವರಿಸಿದ್ದಾನೆ.ಬಸವಣ್ಣನ ಸಮ ಸಮಾಜದ ಆರ‍್ಶ ಎಲ್ಲರಿಗೂ ಇಂದಿಗೂ ಮಾದರಿಯಾಗಿದ್ದಾವೆ ಎಂದು ಹಿರಿಯ ಕವಿ ಸುಭಾಸ ಯಾದವಾಡ ಹೇಳಿದರು.
ಅವರು ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಉತ್ಸವದಲ್ಲಿ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಧುನಿಕ ಕನ್ನಡ ಕಾವ್ಯಲೋಕದಲ್ಲಿ ಬಸವಣ್ಣನ ಪ್ರಭಾವ ಅತೀವ ಗಾಢವಾಗಿದೆ. ಸಮಾನತೆ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಮಹತ್ವವನ್ನು ಸಾರಿದ ಬಸವಣ್ಣನ ವಚನಗಳು ಇಂದಿಗೂ ಎಲ್ಲ ಕವಿಗಳಿಗೆ ಪ್ರೇರಣೆಯಾಗಿವೆ. ವರ್ಣಭೇದ, ಜಾತಿ ಅಸಮಾನತೆ, ಅಂಧಶ್ರದ್ಧೆಗಳ ವಿರುದ್ಧ ಬಸವಣ್ಣ ಹೋರಾಡಿದ ರೀತಿ ಇಂದಿನ ಸಮಾಜಕ್ಕೂ ಪ್ರಸ್ತುತವಾಗಿದೆಯೆಂದು ಹೇಳಿದರು. ದುಡಿಮೆ ಮತ್ತು ಸತ್ಯನಿಷ್ಠ ಜೀವನದ ಮಹತ್ವವನ್ನು ಪ್ರತಿಪಾದಿಸುತ್ತದೆ. ಆಧುನಿಕ ಕವಿಗಳು ತಮ್ಮ ಕಾವ್ಯಗಳಲ್ಲಿ ಬಸವಣ್ಣನ ತತ್ವಗಳನ್ನು ಅಳವಡಿಸಿಕೊಂಡು, ಸಮಾಜದ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಸಮಾನತೆ ಮತ್ತು ಸಹಿಷ್ಣುತೆ ಎಂಬ ಮೌಲ್ಯಗಳು ಇಂದಿನ ಜಗತ್ತಿನಲ್ಲಿ ಅತ್ಯಂತ ಅಗತ್ಯವಾಗಿವೆ. ಈ ಹಿನ್ನೆಲೆಯಲ್ಲಿ ಬಸವಣ್ಣನ ಆದರ್ಶಗಳು ಮಾದರಿಯಾಗಿವೆ  ಎಂದರು.  .ಸಾಹಿತಿ ಶೇಷರಾವ ಮಾನೆ ಅವರು ಮಾತನಾಡಿ ಕವಿಗಳಲ್ಲಿ ಹನ್ನೆರಡನೇ ಶತಮಾನದ ಶರಣರ ಚಿಂತನೆಗಳು ಕಾಣುತ್ತಿವೆ, ಕನ್ನಡದಲ್ಲಿ ಮೊದಲ ಬಾರಿಗೆ ಸಾಹಿತ್ಯ ರಚನೆ ಮಾಡುವ ಮೂಲಕ ಕನ್ನಡ ಸಾಹಿತ್ಯದ ಮಾದರಿ ಪುರುಷ ಎಂದರು.
ಸವಿತಾ ಬಿ ಎನ್

ಕವಿಗೋಷ್ಠಿಯಲ್ಲಿ ಸವಿತಾ ಬಿ ಎನ್, ಶಿವಬಾಳಮ್ಮ ಕೊಂಡಗೂಳಿ, ಲಾಯಪ್ಪ ಇಂಗಳೆ , ಕಲ್ಲಪ್ಪ ಶಿವಶರಣ, ದೀಪಕ ಶಿಂಧೆ, ಮಯೂರ ಸಜ್ಜನ, ಲಕ್ಷ್ಮಿ ಗೋಡೆಕರ, ಭರತಕುಮಾರ ಎಚ್ ಟಿ, ಅನುಪ್ರಿಯಾ ಬಿರಾದಾರ, ಸುನೀತಾ ಮೋರೆ, ಕಾವೇರಿ ಹೊಸಮನಿ, ವಿದ್ಯಾಶ್ರೀ ಪೂಜಾರಿ, ಯಲ್ಲಾಲಿಂಗ ಜಮಾದಾರ, ಸುಧಾರಾಣಿ ಬಿರಾದಾರ, ಶಿವಾಜಿ ಮೋರೆ, ಮುರುಗೇಶ ಸಂಗಮ, ಬಿ.ಎಸ್. ಪೂಜಾರಿ, ಚೇತನ ಹಿರೇಕುರುಬರ., ಬೋರಮ್ಮ ಬೇನೂರ, ಮಲ್ಲಿಕರ‍್ಜುನ ಹಡಪದ, ಮಹಾದೇವಿ ಪಾಟೀಲ, ಚಂದ್ರಶೇಖರ,ಅಕ್ಷಯ ಬಲತಿ, ಸುರೇಖಾ ಜಾಲವಾದಿ, ಡಾ. ವನಜಾಕ್ಷಿ ಬಡಿಗೇರ, ದಾನಮ್ಮ ಹೂಗಾರ , ಶಿವರಾಜ ಬಡಿಗೇರ, ತೇಜಸ್ವಿನಿ ಚಾಂದಕವಟೆ,ಅರುಣಕುಮಾರ ರಾಜಮಾನೆ, ರೇಣುಕಾ ಬಿಸನಾಳ, ಗೀತಾ ದೊಡಮನಿ, ಮಂಜುಳಾ ಜಾಲವಾದಿ, ಸುನಂದಾ ಕೋರಿ, ರುಕ್ಷಿಣಿ ಅಗಸರ, ರತ್ನಾ ಬೊಮ್ಮನಹಳ್ಳಿ, ಸುಜ್ಞಾನಿ ಪಾಟೀಲ,ಸಂತೋಷ ಎಸ್.ಎನ್,ವಿದ್ಯಾಶ್ರೀ ರಾಠೋಡ ಸೇರಿದಂತೆ 41 ಜನ ಕವಿಗಳು ಕವಿತೆ ವಾಚಿಸಿದರು.
ಶಿವಬಾಳಮ್ಮ ಕೊಂಡಗೂಳಿ

ವೇದಿಕೆಯಲ್ಲಿ ನಂದಾ ತಿಕೋಟಿ, ರಾಜಶೇಖರ ಉಮರಾಣಿ, ವಿಜಯಕುಮಾರ ಘಾಟಗೆ ಬಸವರಾಜ ಜಾಲವಾದಿ ಕುಮಾರಗೌಡ ಹರನಾಳ ದಾನೇಶ ಅವಟಿ, ಉಪಸ್ಥಿತರಿದ್ದರು.
ಕರ‍್ಯಕ್ರಮದಲ್ಲಿ ಪ್ರಭುಗೌಡ ಪಾಟೀಲ ವಿ ಸಿ ನಾಗಠಾಣ,ಜಂಬನಾಥ ಕಂಚಾಣಿ ಡಾ ವಿ ಡಿ ಐಹೊಳ್ಳಿ, ಭಾರತಿ ಪಾಟೀಲ ಮಹಾದೇವಿ ಗೋಕಾಕ, ಶರಣಗೌಡ ಪಾಟೀಲ ದಾನೇಶ ಅವಟಿ, ಸವಿತಾ ಶಹಾಪುರ, ಶ್ರೀಧರ ಕನ್ನೂರ, ಶರಣು ಕಾಟಕರ,ಶರಣು ಕಿರಣಗಿ, ಚಂದ್ರಶೇಖರ ಹೊಸಮನಿ, ತನ್ಮಯ ಚಂದಕಾವಟೆ ಸೇರಿ ಹಲವರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಬಸವ ಜಯಂತಿಯಲ್ಲಿ ಮಕ್ಕಳಿಂದ ವಚನ ಕಂಠಪಾಠ

ಶರಣ ಅಲ್ಲಮಪ್ರಭು, ಶರಣ ಸಿದ್ದರಾಮೇಶ್ವರ ವೇದಿಕೆ
ವಿಜಯಪುರ: ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಉತ್ಸವದಲ್ಲಿ ಪುಟಾಣಿ ಮಕ್ಕಳು ಹಾಗೂ ವಿದ್ಯಾರ್ಥಿಗಳಿಂದ  ವಚನ ಕಂಠಪಾಠ ಕಾರ್ಯಕ್ರಮ ಜರುಗಿತು.
ವೇದಿಕೆಯಲ್ಲಿ ಲಕ್ಷ್ಮಿ ಮೋರೆ, ಡಾ ನೀಲಕಂಠ ಹಳ್ಳಿ, ಶರಣಗೌಡ ಪಾಟೀಲ ಉಪಸ್ಥಿತರಿದ್ದರು.
ಚೇತನ ವಜ್ರಮಟ್ಟಿ, ಸೌಜನ್ಯ ಕೃಪಾಸಿಂಧು ಜಾಲವಾದಿ,ಸೃಜನ ಕವಡಿಮಟ್ಟಿ, ಸಾಮ್ರಾಟ ಲಿಂಗದಹಳ್ಳಿ,ಓಂಕಾರ ವೀರಣ್ಣವರ,ಯುಕ್ತಿ ಮಾಡಗಿ ಆವಂತಿಕಾ ಹೆಗಡಿಹಾಳ,ವಿದ್ಯಾ ಹಳಕಟ್ಟಿ,ಸಾಕ್ಷಿ ಮಟ್ಯಾಳ,ಸಂಜನಾ ಭೋವಿ, ವಚನಾ ತಳೆವಾಡಿ,ಕೃತಿಕಾ, ಶೋಭಾರಾಣಿ ಕನ್ನೂರ ವಚನ ಕಂಠಪಾಠದಲ್ಲಿ ಭಾಗವಹಿಸಿ ಬಸವಾದಿ ಶರಣರ ವಚನಗಳನ್ನು ಹೇಳಿದರು.
ಇದೆ ಸಂದರ್ಭದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೆ ಪ್ರಮಾಣ ಪತ್ರ  ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಲಕ್ಷ್ಮಿ ಮೋರೆ, ಡಾ ನೀಲಕಂಠ ಹಳ್ಳಿ, ಶರಣಗೌಡ ಪಾಟೀಲ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರಮುಖರಾದ  ಎಸ್ ಎಚ್ ನಾಡಗೌಡ, ಮ ಗು ಯಾದವಾಡ, ಪ್ರಭುಗೌಡ ಪಾಟೀಲ ಬಸನಗೌಡ ಹರನಾಳ ಬಸವರಾಜ ಜಾಲವಾದಿ ಶಂಕರ ಬೈಚಬಾಳ,ಸವಿತಾ ಬಿ ಎನ್ ಶೇಷರಾವ ಮಾನೆ,ಚಂದ್ರಶೇಖರ ಗಂಟೆಪ್ಪಗೋಳ ರವಿಕುಮಾರ ಬಿರಾದಾರ, ಕಲ್ಲಪ್ಪ ಶಿವಶರಣ, ಲಾಯಪ್ಪ ಇಂಗಳೆ, ಶರಣು ಕಿರಣಗಿ ದಾನೇಶ ಅವಟಿ ಜಗದೇವ ಸೂರ್ಯವಂಶಿ, ಶಾಂತವೀರ ಥಾಲಬಾವಡಿ ವೈ ಎಚ್ ಲಂಬು ಬಸನಗೌಡ ಹರನಾಳ, ಜಂಬುನಾಥ ಕಂಚಾಣಿ, ಮಹಾದೇವಿ ಗೋಕಾಕ, ಭಾರತಿ ಭುಯ್ಯಾರ ಶಶಿಕಲಾ ಕೊಟಗಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಜಾತಿ ವರ್ಗ ರಹಿತ ಅನುಭವ ಮಂಟಪ ಕಟ್ಟಿದ್ದು ಬಸವಣ್ಣನ ತಾಕತ್ತು -ಅನುಷಾ ಹಿರೇಮಠ



ಶರಣ ಅಲ್ಲಮಪ್ರಭು, ಶರಣ ಸಿದ್ದರಾಮೇಶ್ವರ ವೇದಿಕೆ

ವಿಜಯಪುರ : ಸಮಾಜದ ಎಲ್ಲ ವರ್ಗದವರನ್ನು ಬಸವಣ್ಣ ಎತ್ತಿ ಹಿಡಿದು ಅಪ್ಪಿಕೊಂಡಿದ್ದ, ಬಸವಣ್ಣನ ಸಮಾಜ ಜಾತಿ ವರ್ಗ ವರ್ಣ ರಹಿತವಾಗಿತ್ತು, ಬಸವಣ್ಣ ಕಟ್ಟಿದ ವಿಶ್ವದ ಮೊದಲ ಸಂಸತ್ತು ಎಂದು ಹೆಸರಾದ ಅನುಭವ ಮಂಟಪದಲ್ಲಿ ದೇಶ-ವಿದೇಶದ ಶರಣ ಶರಣೆಯರು ಇದ್ದರು ಇದು ಬಸವಣ್ಣನ ಅನುಭಾವದ ತಾಕತ್ತು ಎಂದು ವಚನ ಗಾಯಕಿ ಕುಮಾರಿ ಅನುಷಾ ಕರಿಬಸವಯ್ಯ ಹಿರೇಮಠ ಹೇಳಿದರು.
ಅವರು ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ಸಮಾಜದದಲ್ಲಿ ಗಂಡು-ಹೆಣ್ಣು ಜಾತಿ, ವರ್ಗ ಭೇದ ಇರಬಾರದು ಎಂದು ಬಸವಣ್ಣ ಬಯಸಿದ್ದರು ಬಸವಣ್ಣನವರ ಚಿಂತನೆಗಳನ್ನು ಎಲ್ಲರು ಅಳವಡಿಸಿಕೊಳ್ಳೋಣ ಎಂದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಮಾತನಾಡಿ ನಾನು ಭಕ್ತ ಎಂದು ಹೇಳಿದ ಬಸವಣ್ಣ ಎಲ್ಲರಿಗಿಂತ ದೊಡ್ಡವರಾಗಿದ್ದಾರೆ.ಬಸವಣ್ಣ ಎಲ್ಲರನ್ನು ಪ್ರೀತಿಸಿದರು ಅವರ ಭಾವಕ್ಕೆ ಬೆಲೆ ಕಟ್ಟಲಾಗದು, ಬಸವಣ್ಣ ಸಮಾಜದ ಮೈಲಿಗೆ ತೊಳೆಯಲು ಬಂದ ಕ್ರಾಂತಿ ಪುರುಷರಾಗಿದ್ದಾರೆ ಅವರ ವಚನ ಇಂದು ಸಮಾಜವನ್ನು ಮುನ್ನಡೆಸುತ್ತಿವೆ ಸಮಾಜದ ಮೈಲಿಗೆ ಕಳೆಯುತ್ತಿವೆ ಎಂದರು.
ಕಾರ್ಯಕ್ರಮದದಲ್ಲಿ ಚಿಂತಕ  ಜೆ ಎಸ್ ಪಾಟೀಲ ಮುಖ್ಯ ಉಪನ್ಯಾಸ ನೀಡಿದರು, ವೀರಶೈವ ಮಹಾಸಭಾ ಅಧ್ಯಕ್ಷ ವಿ ಸಿ ನಾಗಠಾಣ ಮಾತನಾಡಿದರು.
ಉತ್ಸವ ಸಮಿತಿ ಅಧ್ಯಕ್ಷ ವಹಿಸಿ ಘನಶಾಮ ತೋಸ್ನಿವಾಲಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಬಸವಲಿಂಗ ಸ್ವಾಮೀಜಿ, ಗುರುಲಿಂಗ ಸ್ವಾಮೀಜಿ ಬಸನಗೌಡ ಹರನಾಳ, ಜಂಬುನಾಥ ಕಂಚಾಣಿ, ಸಂಗನಬಸಪ್ಪ ಸಜ್ಜನ, ಡಾ ರವಿಕುಮಾರ ಬಿರಾದಾರ ಮಹಾದೇವಿ ಗೋಕಾಕ, ಭಾರತಿ ಭುಯ್ಯಾರ ಶಶಿಕಲಾ ಕೊಟಗಿ, ತ್ರಿವೇಣಿ ಬುರ್ಲಿ, ಸುಧಾರಾಣಿ ಬಿರಾದಾರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರಮುಖರಾದ ಎಸ್ ಎಚ್ ನಾಡಗೌಡ, ಮ ಗು ಯಾದವಾಡ, ಪ್ರಭುಗೌಡ ಪಾಟೀಲ ಬಸನಗೌಡ ಹರನಾಳ ಬಸವರಾಜ ಜಾಲವಾದಿ ಶಂಕರ ಬೈಚಬಾಳ, ಸವಿತಾ ಬಿ ಎನ್ ಶೇಷರಾವ ಮಾನೆ,ಚಂದ್ರಶೇಖರ ಗಂಟೆಪ್ಪಗೋಳ ರವಿಕುಮಾರ ಬಿರಾದಾರ, ಕಲ್ಲಪ್ಪ ಶಿವಶರಣ, ಲಾಯಪ್ಪ ಇಂಗಳೆ, ಶರಣು ಕಿರಣಗಿ ದಾನೇಶ ಅವಟಿ ಜಗದೇವ ಸೂರ್ಯವಂಶಿ, ಶಾಂತವೀರ ಥಾಲಬಾವಡಿ ವೈ ಎಚ್ ಲಂಬು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.





ಬಸವ ಜಯಂತಿ ಅಂಗವಾಗಿ ಮಹಿಳೆಯರಿಂದ ಬೈಕ್ ರ್ಯಾಲಿ


ವಿಜಯಪುರ :ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಕಾರ್ಯಕ್ರಮ ಅಂಗವಾಗಿ

ಬೆಳಿಗ್ಗೆ 9.00 ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹಣಮಂತರಾಯ ರಂಗಮಂದಿರದವರೆಗೆ ಮಹಿಳೆಯರಿಂದ ಬೈಕ್ ರ್ಯಾಲಿ ಜರುಗಿತು. ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷೆ ಮಹಾದೇವಿ ಗೋಕಾಕ ಉಪಾಧ್ಯಕ್ಷೆ ಶಶಿಕಲಾ ಕೊಟಗಿ ಅವರು ರ್ಯಾಲಿಗೆ ಚಾಲನೆ ನೀಡಿದರು.

ಬೈಕ್ ರ್ಯಾಲಿಯಲ್ಲಿ ಭಾರತಿ ನಾವಿ, ಪ್ರತಿಭಾ ಪಾಟೀಲ, ಶೀಲಾ ಆರ್. ಬಿರಾದಾರ, ಶ್ವೇತಾ ಹರನಾಳ, ವಿದ್ಯಾವತಿ ಅಂಕಲಗಿ, ಭಾರತಿ ಪಾಟೀಲ,  ಶಾರದ ಕೊಪ್ಪ, ಸಂಗೀತಾ ಪೂಜಾರಿ,ಸುಮಾ ಅಂಗಡಿ, ಶ್ರೀದೇವಿ ಪಾಟೀಲ,ಸ್ವೇತಾ ಅಕ್ಕಲಕೋಟ, ಅನುಸೂಯಾ ಬಿರಾದಾರ, ಶಿವಲೀಲಾ ಮನಗೊಂಡ, ಸುಮಾ ದುದಗಿ ರಾಜೇಶ್ವರಿ ಮನಗೂಳಿ, ಅಕ್ಕಮ್ಮ ಮಠ ನೀತಾ ಸೂಳಿಭಾವಿ, ಸ್ನೇಹಾ ಬಿರಾದಾರ, ಶಕುಂತಲಾ ಬಗಲಿ ಮಂಗಲಾ ಡೊಮ್ಮನಾಳ ಅನಿತಾ ಕುಮಶಿ, ಶೈಲಾ ಬಸವಪ್ರಭು., ತ್ರಿವೇಣಿ ಬುರ್ಲಿ, ಜಯಶ್ರೀ ಲದ್ವಾ, ಅಶ್ವಿನಿ ಮಾನೆ, ಪೂರ್ಣಿಮಾ ಯಾದವಾಡ, ಸುನಿತಾ ಬಿರಾದಾರ, ರೇಖಾ ಬಿರಾದಾರ, ಐಶ್ವರ್ಯ ಬಿರಾದಾರ ಸೇರಿ ನೂರಾರು ಮಹಿಳೆಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಿ ಸಿ ನಾಗಠಾಣ,ಎಸ್ ಎಚ್ ನಾಡಗೌಡ, ಜೆ ಎಸ್ ಪಾಟೀಲ,ಮ ಗು ಯಾದವಾಡ, ಪ್ರಭುಗೌಡ ಪಾಟೀಲ ಬಸನಗೌಡ ಹರನಾಳ ಚಂದ್ರಶೇಖರ ಗಂಟೆಪ್ಪಗೋಳ ರವಿಕುಮಾರ ಬಿರಾದಾರ, ಶರಣು ಕಿರಣಗಿ ಕಲ್ಲಪ್ಪ ಶಿವಶರಣ, ಲಾಯಪ್ಪ ಇಂಗಳೆ, ದಾನೇಶ ಅವಟಿ ಜಗದೇವ ಸೂರ್ಯವಂಶಿ, ಶಾಂತವೀರ ಥಾಲಬಾವಡಿ ವೈ ಎಚ್ ಲಂಬು ಉಪಸ್ಥಿತರಿದ್ದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Monday, April 13, 2026

ಪದ್ಮಶ್ರೀ ಕಾಕಾ ಅವರ ತ್ಯಾಗಕ್ಕೆ ಬೆಲೆ ಕಟ್ಟಲಾಗದು -ನ್ಯಾಯವಾದಿ ಕೆ ಎಫ್ ಅಂಕಲಗಿ

ವಿಜಯಪುರ :  ಪದ್ಮಶ್ರೀ ಕಾಕಾ ಕಾರ್ಖಾನೀಸ್ ಅವರನ್ನು ನೋಡಿದರೆ ಗಾಂಧೀಜಿ ಅವರನ್ನು ನೋಡಿದಂತೆ ಆಗುತ್ತಿತ್ತು ಅವರು ಶೋಷಿತರ ಮಕ್ಕಳಿಗೆ ಶಿಕ್ಷಣ ಕೊಡಲು ಮಾಡಿದ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದು ನ್ಯಾಯವಾದಿ ಕೆ ಎಫ್ ಅಂಕಲಗಿ ಅವರು ಹೇಳಿದರು.  

ಅವರು ವಿಜಯಪುರ ನಗರದ ದರಾಬಾರ್ ಪ್ರೌಢ ಶಾಲೆ ಮೈದಾನದಲ್ಲಿ ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ 5ದಿನಗಳ ಕಾಲ ಹಮ್ಮಿಕೊಂಡಿರುವ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ಅಂಗವಾಗಿ 4ನೇ ದಿನ ಕಾಕಾ ಕಾರಖಾನೀಸ್ ಬೋರ್ಡಿಂಗ್ ನಲ್ಲಿದ್ದು ವಿದ್ಯಾರ್ಜನೆ ಮಾಡಿದವರು, ಅವರ ಕುಟುಂಬಸ್ಥರಿಂದ ಕಾಕಾ ಕಾರಖಾನೀಸ್ ಸ್ಕೂಲ್‌ ನಿಂದ ಪುಸ್ತಕ ಮೇಳ ಸ್ಥಳದವರೆಗೆ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ಕಾಕಾ ಅವರ ಶತಮಾನೋತ್ಸವ ಆಚರಿಸಿದ ಸಂದರ್ಭದಲ್ಲಿ ಉಳಿದ ದೇಣಿಗೆಯ ಹಣದಲ್ಲಿ ಕನ್ಯಾ ಮಂದಿರ ಜಗದಲ್ಲಿ ಅವರ ಸ್ಮಾರಕ ಪ್ರೌಢ ಶಾಲೆ ನಿರ್ಮಿಸಿದ್ದು ಅತ್ಯಂತ ಮಹತ್ವದ ಕೆಲಸವಾಗಿದೆ ಅವರು ಹೇಳಿದರು.


ಮೆರವಣಿಗೆಯುದ್ಧಕ್ಕೂ ದಲಿತ ಮತ್ತು ಮಹಿಳೆಯರಿಗೆ ಶಿಕ್ಷಕಣ ನೀಡಿದ ಕಾಕಾ ಅವರಿಗೆ ಜಯಘೋಷ ಮೊಳಗಿದವು .
ಈ ಸಂದರ್ಭದಲ್ಲಿ ಬಿ ಆರ್ ಬನಸೋಡೆ, ರಾಜಶೇಖರ ಯಡಹಳ್ಳಿ, ವಿದ್ಯಾವತಿ ಅಂಕಲಗಿ, ವೈ.ಎಚ್. ಲಂಬು, ಮಿಲನಕುಮಾರ ನಾಮದಾರ, ಮಲ್ಲಿಕಾರ್ಜುನ ಕೆಂಗನಾಳ, ಸುರೇಶ ಸಿಂಧೂರ, ಶಂಕರ ಚಲವಾದಿ, ರಾಜೇಶ ತೊರವಿ, ಸವಿತಾ ವಗ್ಗರ, ಈಶ್ವರ ಅವಧಿ, ಸಾಬು ಚಲವಾದಿ, ಸುಲೋಚನಾ ಮಾಮಾದಾಪುರ, ನಾಗರಾಜ ಲಂಬು, ಕೆ ಎಂ ಕೂಡಲಗಿ, ಅನಿಲ ಹೊಸಮನಿ, ಬಸವರಾಜ ಸೂಳಿಬಾವಿ, ವೈ ಎಸ್ ಗುಣಕಿ, ಸೋಮು ರಣದೇವಿ, ಸುರೇಶ ಬಿಜಾಪುರ, ಚೆನ್ನು ಕಟ್ಟಿಮನಿ, ಪರಶುರಾಮ ಶಿವಶರಣ, ನೀಲಾಂಬಿಕಾ ಬಿರಾದಾರ, ಶಾರದಾ ಹೊಸಮನಿ, ಸವಿತಾ ವಾಘಮೋರೆ,ಸಂಘರ್ಷ ಹೊಸಮನಿ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ ಎಚ್ ಟಿ, ಕಲ್ಲಪ್ಪ ಶಿವಶರಣ, ಲಾಯಪ್ಪ ಇಂಗಳೆ, ಶರಣು ಕಿರಣಗಿ, ಬಸವರಾಜ ಕಾಂಬಳೆ ಸೇರಿದಂತೆ ಪದ್ಮಶ್ರೀ ಕಾಕಾ ಕಾರ್ಖಾನೀಸ್ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು ಮತ್ತು ಅವರ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು  ಹಾಗೂ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Sunday, April 12, 2026

ಬುದ್ಧ ಬಸವ ಅಂಬೇಡ್ಕರ್ ಅಗ್ರಗಣ್ಯ ಸಾಲಿನಲ್ಲಿ ನಿಲ್ಲುವ ಸಮಾಜ ಸುಧಾರಕರು -ಮಹೇಶ ಪೋದಾರ

ವಿಜಯಪುರ : ಬುದ್ಧ ಬಸವ ಡಾ ಬಿ ಆರ್ ಅಂಬೇಡ್ಕರ್ ಅವರು ಭಾರತ ದೇಶದ ಸಮಾಜ ಸುಧಾರಕರಲ್ಲಿ ಅಗ್ರಗಣ್ಯ ಸಾಲಿನಲ್ಲಿ ನಿಲ್ಲುತ್ತಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶರಾದ ಮಹೇಶ ಪೋದಾರ ಹೇಳಿದರು.

ವಿಜಯಪುರ :ಅವರು ವಿಜಯಪುರ ನಗರದ ದರಾಬಾರ್ ಪ್ರೌಢ ಶಾಲೆ ಮೈದಾನದಲ್ಲಿ ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ 5ದಿನಗಳ ಕಾಲ ಹಮ್ಮಿಕೊಂಡಿರುವ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ಅಂಗವಾಗಿ ಬಸವೇಶ್ವರ ವೃತ್ತದಿಂದ ವೇದಿಕೆ ವರೆಗೆ ನಡೆದ ಮೆರವಣಿಗೆಗೆ ಚಾಲನೆ ಕೊಟ್ಟು ಮಾತನಾಡಿದರು.


ಮೆರವಣಿಗೆ ನೇತೃತ್ವ ವಹಿಸಿ ವಿದ್ಯಾರಣಿ ತುಂಗಳ ಅವರು ಮಾತನಾಡಿ ಮಹಿಳೆಯರು ಇಂದು ಅರಿವಿಲ್ಲದೆ ಅನುಭವಿಸುತ್ತಿರುವ ಸ್ವಾತಂತ್ರ್ಯಕ್ಕೆ ಡಾ ಬಿ ಆರ್ ಅಂಬೇಡ್ಕರ್ ಅವರು ಕಾರಣವಾಗಿದ್ದರೆ  ನಾವು ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ಸಾಗಬೇಕಿದೆ ಎಂದು ಹೇಳಿದರು.
ಜಾಥಾಕ್ಕೆ ಚಾಲನೆ ನೀಡಿ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮಗು ಯಾದವಾಡ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ವಿ ಸಿ ನಾಗಠಾಣ ಮಾತನಾಡಿ ಬುದ್ದ ಬಸವ ಅಂಬೇಡ್ಕರ್ ಹೆಸರಲ್ಲಿ ಪುಸ್ತಕ ಮೇಳ ಹಮ್ಮಿಕೊಂಡಿರುವುದು ಸ್ವಾಗತಾರ್ಹವಾದುದು.
ಮೆರವಣಿಗೆಯುದ್ಧಕ್ಕೂ ಬುದ್ದ ಬಸವ ಅಂಬೇಡ್ಕರ್ ಹಾಗೂ ಬಸವಾದಿ ಶರಣರಿಗೆ ಜಯಘೋಷ ಮೊಳಗಿದವು.
ಮೆರವಣಿಗೆಯಲ್ಲಿ ಚಂದ್ರಶೇಖರ  ಗಂಟೆಪ್ಪಗೋಳ, ನಾಗರಾಜ ಲಂಬು, ಬಸವರಾಜ ಸೂಳಿಬಾವಿ, ಅನಿಲ ಹೊಸಮನಿ, ಚೆನ್ನು ಕಟ್ಟಿಮನಿ, ಸುರೇಶ ಬಿಜಾಪುರ, ಜಗದೇವ ಸೂರ್ಯವಂಶಿ, ಬಸನಗೌಡ ಹರನಾಳ ,ದಾನೇಶ ಅವಟಿ, ಜೆ ಎಸ್ ಪಾಟೀಲ, ನೀಲಾಂಬಿಕಾ ಬಿರಾದಾರ , ಪ್ರಭುಗೌಡ ಪಾಟೀಲ, ಸಂಘರ್ಷ ಹೊಸಮನಿ , ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ,  ಶರಣು ಕಿರಣಗಿ, ಅಕ್ಷಯ ಅಜಮನಿ, ಗೌಡಪ್ಪ ಬಡಿಗೇರ ಸೇರಿ ನೂರಾರು ಜನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಬಸವಣ್ಣ ಜಗತ್ತಿನ ಮೊದಲ ಪ್ರಜಾಪ್ರಭುತ್ವವಾದಿಯಾಗಿದ್ದಾರೆ : ಡಾ ಎಚ್ ಎಸ್ ಅನುಪಮಾ


(ಹರ್ಡೇಕರ ಮಂಜಪ್ಪ, ಡಾ ಫ.ಗು ಹಳಕಟ್ಟಿ, ಕುಮಾರ ಕಕ್ಕಯ್ಯ ಪೋಳ ವೇದಿಕೆ) ವಿಜಯಪುರ : ಶರಣ ಸಂಕುಲ ಅಂದರೆ ಜಾತಿ ವರ್ಣ ರಹಿತವಾಗಿ ಎಲ್ಲರನ್ನು ಒಳಗೊಳ್ಳುವಿಕೆಯಾಗಿದೆ ನುಡಿಯಲ್ಲಿ ಒಂದಾಗಿರುವ ಬಸವಾದಿ ಶರಣರ ತತ್ವಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಾಗಿದೆ ಜಗತ್ತಿನಲ್ಲಿ ಕಾಯಕದ ಹೆಸರಲ್ಲಿ ಇರುವ ಏಕೈಕ ಧರ್ಮವೆಂದರೆ ಶರಣ ಧರ್ಮ, ಬಸವಣ್ಣ ಜಗತ್ತಿನ ಮೊದಲ ಪ್ರಜಾಪ್ರಭುತ್ವವಾದಿಯಾಗಿದ್ದಾರೆ, ಸಮಾಜಕ್ಕೆ ಇಂದು ಬಸವಾದಿ ಶರಣರ ಸಮಾಜಕ್ಕೆ ಅನಿವಾರ್ಯವಾಗಿದೆ ಹಿರಿಯ ಸಾಹಿತಿ ಡಾ. ಎಚ್.ಎಸ್. ಅನುಪಮಾ ಅವರು ಹೇಳಿದರು.

ಅವರು ವಿಜಯಪುರ ನಗರದ ದರಾಬಾರ್ ಪ್ರೌಢ ಶಾಲೆ ಮೈದಾನದಲ್ಲಿ ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ 5ದಿನಗಳ ಕಾಲ ಹಮ್ಮಿಕೊಂಡಿರುವ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದಲ್ಲಿ ಮೂರನೇ ದಿನದ ಮೊದಲ ಗೋಷ್ಠಿ ಬಸವಾನುಯಾಯಿಗಳ ಸಮಾವೇಶದಲ್ಲಿ ಮುಖ್ಯ ಉಪನ್ಯಾಸ ನೀಡಿ ಮಾತನಾಡಿದರು.
ವಚನ ಪಿತಾಮಹ ಫ ಗು ಹಳಕಟ್ಟಿ ತಮ್ಮ ಮನೆ ಮಾರಿ ಬಸವಾದಿ ಶರಣರ ವಚನಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಣೆ ಮಾಡಿ ಶರಣ ಸಾಹಿತ್ಯವನ್ನು ನಮಗೆ ಕೊಟ್ಟಿದ್ದಾರೆ ಅವರ ತ್ಯಾಗ ನಮಗೆಲ್ಲ ಸ್ಫೂರ್ತಿಯಾಗಿದೆ ಎಂದರು.
ಆಧುನಿಕ ಸಾಹಿತ್ಯದಲ್ಲಿ ಕುಮಾರ ಕಕ್ಕಯ್ಯ ಪೋಳ ಕಾವ್ಯ ನಾಮದಲ್ಲಿ ಸಾಹಿತ್ಯ ರಚನೆ ಮಾಡಿ ಸಮಾಜದ ಅಂಕುಡೊಂಕು ತಿದ್ದಿದ ಬಿ ಎಸ್  ಪೋಳ ನಮಗೆ ಮಾದರಿಯಾಗಿದ್ದಾರೆ ಶರಣರ ಮಾರ್ಗದಲ್ಲಿ ನಾವು ಸಾಗಬೇಕಾದರೆ ಮೊದಲು ಪ್ರತಿಯೊಬ್ಬರೂ ತಮ್ಮ ಜಾತಿ ವರ್ಗವನ್ನು ಮರೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹಿರಿಯ ಸಾಹಿತಿ ಜೆ ಎಸ್ ಪಾಟೀಲ ಅವರು ಮಾತನಾಡಿ ಕರ್ನಾಟಕದಲ್ಲಿ ಬ್ರಾಹ್ಮಣೇತರ ಚಳುವಳಿ ನೇತೃತ್ವ ವಹಿಸಿಕೊಂಡವರು ಡಾ ಫ.ಗು ಹಳಕಟ್ಟಿಯವರು ಅದನ್ನು ನಮ್ಮ ಇತಿಹಾಸಕಾರರು ಮರೆತ್ತಿದ್ದಾರೆ ಎಂದು ಹೇಳಿದರು.

ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ವಿ ಸಿ ನಾಗಠಾಣ ಅವರು ಮಾತನಾಡಿ ಅಂಬೇಡ್ಕರ್ ಅವರು ಸಾಕಷ್ಟು ಅಧ್ಯಯನ ಮಾಡಿ ಭಾರತದಲ್ಲಿ ಜನ್ಮ ತಳೆದ ಬೌದ್ಧ ಧರ್ಮ ಸ್ವೀಕಾರ ಮಾಡಿದ್ದಾರೆ, ಬುದ್ಧ ಬಸವ ಅಂಬೇಡ್ಕರ್ ಸಮಾನತೆಗಾಗಿ  ಹೋರಾಟ ಮಾಡಿದ್ದಾರೆ ಮೂರು ಜನ ದಾರ್ಶನಿಕರು  ಮಾನವ ಜನಾಂಗಕ್ಕೆ ಮಾದರಿಯಾಗಿದ್ದಾರೆ ಬಸವಣ್ಣನ ಕಾಯಕ ತತ್ವ ಅಳವಡಿಸಿಕೊಂಡರೆ ದೇಶಕ್ಕೆ ಕಾಡುತ್ತಿರು ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ಹೇಳಿದರು.
ಭಾರತೀಯ ಬೌದ್ದ ಮಹಾಸಭಾದ ಕಾರ್ಯದರ್ಶಿ ಬಸವರಾಜ ಹೋಳ್ಕರ್ ಅವರು ಮಾತನಾಡಿ
ಸಮಾಜದಲ್ಲಿನ ಅಸಮಾನತೆ ಅಂಧಕಾರ ಅಳಸಿ ಹಾಕಲು ಇಂದು ಪುಸ್ತಕ ಮೇಳಗಳ ಅವಶ್ಯಕತೆಯಿದೆ ಎಂದರು.
ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸನಗೌಡ ಹರನಾಳ ಅವರು ಮಾತನಾಡಿ ಅಂಬೇಡ್ಕರ್ ಮತ್ತು ಫ. ಗು ಹಳಕಟ್ಟಿ ಅವರು ಬಸವಣ್ಣನಷ್ಟೇ ಕೆಲಸ ಮಾಡಿದ್ದಾರೆ, ಅವರ ಹೆಸರಲ್ಲಿ ನಡೆಯುತ್ತಿರುವ ಪುಸ್ತಕ ಮೇಳದಲ್ಲಿ ಪ್ರತಿಯೊಬ್ಬರು ಪುಸ್ತಕ ಖರೀದಿ ಮಾಡುವ ಮೂಲಕ ಜ್ಞಾನದ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ರಾಷ್ಟ್ರೀಯ ಬಸವ ಸೈನ್ಯ ಅಧ್ಯಕ್ಷ ಶಂಕರಗೌಡ ಬಿರಾದಾರ ಅವರು ಮಾತನಾಡಿದರು
ಚಂದ್ರಶೇಖರ ಗಂಟೆಪ್ಪಗೋಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಕುಡಿಸಿಕೊಂಡು ಮೇ ಸಾಹಿತ್ಯ ಬಳಗದವರು ಪುಸ್ತಕ ಮೇಳ ವೈಚಾರಿಕ ಕಾರ್ಯಕ್ರಮ ಹಮ್ಮಿಕೊಂಡಿರುವುದು  ಔಚಿತ್ಯವಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ನಾಗರಾಜ ಲಂಬು, ಜಗದೇವ ಸೂರ್ಯವಂಶಿ, ಅಭಿಷೇಕ ಚಕ್ರವರ್ತಿ, ದಾನೇಶ ಅವಟಿ, ಜಂಬುನಾಥ ಕಂಚ್ಯಾಣಿ, ಮಿಲನಕುಮಾರ ನಾಮದಾರ, ಪ್ರಭುಗೌಡ ಪಾಟೀಲ ಇದ್ದರು.
ಕಾರ್ಯಕ್ರಮದಲ್ಲಿ ಬಸವರಾಜ ಸೂಳಿಬಾವಿ, ಅನಿಲ ಹೊಸಮನಿ, ಚೆನ್ನು ಕಟ್ಟಿಮನಿ, ವೈ ಎಸ್ ಗುಣಕಿ, ಸಂಘರ್ಷ ಹೊಸಮನಿ, ಸುರೇಶ ಬಿಜಾಪುರ, ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ, ಶಿವು ಕಟ್ಟಿಮನಿ, ಬೋಗೇಶ ಸೋಲಾಪುರ, ಅಪ್ಪಸಾಹೇಬ ಯರನಾಳ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.