Friday, March 20, 2026

ಆಲಗೂರದಲ್ಲಿ ಸಿಡಿಲು ಬಡಿದು 12 ಕುರಿ ಸಾವು.

ದೇವರಹಿಪ್ಪರಗಿ: ತಾಲೂಕಿನ ಆಲಗೂರ ಗ್ರಾಮದಲ್ಲಿ ಗುರುವಾರ ಸಂಜೆ 5.45ಗಂಟೆಗೆ ಸಿಡಿಲು ಬಡಿದು 12 ಕುರಿಗಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. 

ಗ್ರಾಮದ ಮಡಿವಾಳಪ್ಪ ಶರಣಪ್ಪ ಮಾಕೊಂಡ ಎಂಬುವರ ಕುರಿಗಳು ಸಾವನ್ನಪ್ಪಿದೆ. 12 ಕುರಿಗಳ ಸಾವಿನಿಂದ ರೈತನಿಗೆ ಸುಮಾರು 2.5ಲಕ್ಷ ರೂಪಾಯಿ ನಷ್ಟವಾಗಿದೆ. ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತ ಒತ್ತಾಯಿಸಿದ್ದಾನೆ. 
ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಈ ಕುರಿತು ಪ್ರಕರಣ ದಾಖಲಾಗಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment