ವಿಜಯಪುರ : ವಿಜಯಪುರ ಜಿಲ್ಲಾ ಗುತ್ತಿಗೆದಾರರ ಸಂಘ ವಿಜಯಪುರ ವತಿಯಿಂದ ಗುತ್ತಿಗೆದಾರರ ಬೃಹತ್ ಪ್ರತಿಭಟನೆಯನ್ನು ದಿನಾಂಕ : 06-03-2026 ರಂದು ಶುಕ್ರವಾರ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 6 ರಂದು ನಡೆಯಲಿರುವ ರಾಜ್ಯ ಮಟ್ಟದ ಗುತ್ತಿಗೆದಾರರ ಬೃಹತ್ ಪ್ರತಿಭಟನೆ ಬೆಂಗಳೂರಿನ ಪ್ರಿಡಂ ಪಾರ್ಕ್ನಲ್ಲಿ ನಡೆಯಲಿದ್ದು ಅದರ ಅಂಗವಾಗಿ ವಿಜಯಪುರ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ ಕಾಮಗಾರಿಗಳನ್ನು ಸಂಪೂರ್ಣ ಬಂದ್ ಮಾಡಿ ವಿಜಯಪುರ ಜಿಲ್ಲಾ ಎಲ್ಲಾ ಗುತ್ತಿಗೆದಾರರು ಒಂದು ದಿನ ನಡೆಯುತ್ತಿರುವ ಬಹೃತ್ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾಧ್ಯಕ್ಷರಾದ ಸಿ.ಆರ್. ರೂಡಗಿ, ಗೌರವ ಅಧ್ಯಕ್ಷರಾದ ಅರುಣ ಎಸ್. ಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ. ಪಟ್ಟಣಶೆಟ್ಟಿ, ಮುದ್ದೇಬಿಹಾಳ ತಾಲೂಕಾ ಅಧ್ಯಕ್ಷರಾದ ಸುರೇಶಗೌಡ ಪಾಟೀಲ (ಇಂಗಳಗೇರಿ), ಇಂಡಿ ತಾಲೂಕಾಧ್ಯಕ್ಷ ರಮೇಶಗೌಡ ಪಾಟೀಲ, ಸಿಂದಗಿ ತಾಲೂಕಾಧ್ಯಕ್ಷ ಮುತ್ತು ಮುಂಡೇವಾಡಿ, ಬಸವನ ಬಾಗೇವಾಡಿ ತಾಲೂಕಾಧ್ಯಕ್ಷ ಎ.ಬಿ. ನರಸರೆಡ್ಡಿ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment