ಮುದ್ದೇಬಿಹಾಳ : 371 ಜೆ ಮೀಸಲಾತಿ ಅಡಿ ಬಿಟ್ಟು ಹೋದ ವಿಜಯಪುರ ಜಿಲ್ಲೆಗೆ ಕಲ್ಯಾಣ ಕರ್ನಾಟಕ ಮೀಸಲಾತಿಗೆ ಸೇರಿಸಲು ಕೇಂದ್ರ ಸರಕಾಕ್ಕೆ ಶಿಫಾರಸ್ಸು ಕಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ವಿವಿದೋದ್ದೇಶ (ಒಖW), ಗ್ರಾಮೀಣ ಪುನರ್ವಸತಿ (ಗಿಖW), ನಗರ ಪುನರ್ವಸತಿ (UಖW) ರಾಜ್ಯ ಒಕ್ಕೂಟ ಹಾಗೂ ತಾಲೂಕಾ ವಿಕಲಚೇತನರ ಸಂಘ -ಸಂಸ್ಥೆಗಳು ಮುದ್ದೇಬಿಹಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಶೇಷ ಚೇತನರ ವಿವಿಧೋದ್ದೇಶಗಳ ಒಕ್ಕೂಟದ ತಾಲೂಕಾ ಅಧ್ಯಕ್ಷ ಎಸ್.ಕೆ.ಘಾಟಿಯವರು ಮಾತನಾಡಿ, ಡಾ.ಡಿ.ಎಂ. ನಂಜುಡಪ್ಪ ವರದಿಯ ಪ್ರಕಾರ ರಾಜ್ಯದಲ್ಲಿ ಹಿಂದುಳಿದ ಜಿಲ್ಲೆಗಳಿಗೆ 371 ಜೆ ಮೀಸಲಾತಿ ಒದಗಿಸಲಾಗಿದೆ. ಮೀಸಲಾತಿ ಪಡೆದ ಈಗಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗಿಂತ ಅತ್ಯಂತ ಹಿಂದುಳಿದ ವಿಜಯಪುರ ಜಿಲ್ಲೆಗೆ ಮೀಸಲಾತಿಯಿಂದ ಕೈ ಬಿಟ್ಟಿದ್ದರಿಂದ ದೊಡ್ಡ ಅನ್ಯಾಯವಾಗಿದೆ. ಕೂಡಲೇ ವಿಜಯಪುರ ಜಿಲ್ಲೆಗೆ 371 ಜೆ ಮೀಸಲಾತಿ ಸೌಲಭ್ಯ ತಕ್ಷಣಕ್ಕೆಒದಗಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸುವ ಮೂಲಕ ಅನ್ಯಾಯವನ್ನು ಸರಿಪಡಿಸಿ ಜಿಲ್ಲೆಯ ಜನತೆಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪದವಿದರ ಒಕ್ಕೂಟದ ಮುಖಂಡ ಚಂದ್ರಶೇಖರ ಹೊಸಮನಿ ಮಾತನಾಡಿ, ರಾಜ್ಯದಲ್ಲಿ ಪ್ರತಿಯೊಂದು ವಿಷಯದಲ್ಲಿ ಅನ್ಯಾಯಕ್ಕೊಳಗಾಗುತ್ತಿರುವ ಏಕೈಕ ಜಿಲ್ಲೆ ವಿಜಯಪುರವಾಗಿದೆ. ಅಖಂಡ ಹೈದ್ರಾಬಾದ್ ಪ್ರಾಂತದ ಭಾಗವಾಗಿದ್ದ ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿಯಿಂದ ಹೊರಗಿಡುವ ಮೂಲಕ ಜಿಲ್ಲೆಯ ಜನರಿಗೆ ಅನ್ಯಾಯ ಮಾಡಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಜಿಲ್ಲೆಯ ಸಾರಿಗೆ ವ್ಯವಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಡಿ ಇದೆ, ನ್ಯಾಯಾಂಗ ವ್ಯವಸ್ಥೆ ಕೂಡಾ ಕಲ್ಬುರ್ಗಿ ಉಚ್ಛ ನ್ಯಾಯಾಲಯ, ಕರ್ನಾಟಕ ಆಡಳಿತ ಮಂಡಳಿ ಪ್ರಾಧಿಕಾರ, ಪ್ರಾಚ್ಯವಸ್ತು ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಕಲಬುರಗಿ ವಿಭಾಗದಲ್ಲಿ ಇದ್ದರು ಕೂಡಾ ವಿಜಯಪುರ ಜಿಲ್ಲೆಯನ್ನು 371 ಜೆ ಅಡಿ ಸೇರಿಸದೆ ಇರುವುದು ಖಂಡನೀಯ ಎಂದರು. ಜಿಲ್ಲೆಯ ಶಾಸಕರು, ಸಚಿವರು ಒಗ್ಗಟ್ಟಿನಿಂದ ಕೂಡಲೇ ಜಿಲ್ಲೆಯನ್ನು 371 ಜೆ ಮೀಸಲಾತಿ ಅಡಿ ಸೇರಿಸಿ ಜಿಲ್ಲೆಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರುಗಳಾದ ಈರಣ್ಣ ತಾರನಾಳ, ಬಸವರಾಜ ನಾಯ್ಕೋಡಿ, ಪವಾಡೆಪ್ಪ ಚಲವಾದಿ, ಗುರುರಾಜ ಡಂಬಳ, ಮಂಜುನಾಥ ಬಿರಾದಾರ, ಸುದೀಪ ಚಲವಾದಿ, ಸಂಗಮ್ಮ ಜಂಬಗಿ, ಸಂಗನಗೌಡ ಬಗಲಿ, ಶಶಿಕಾಂತ ಯಾಳಗಿ, ಪ್ರಭುಗೌಡ ಚಿಂಚೋಲಿ, ಮಹಾದೇವ ಮಾದಿನಾಳ, ರುದ್ರಗೌಡ ಜಿ. ಗೌಡರ, ಶಿವಪುತ್ರ ಮೋಟಗಿ, ಉಮೇಶ ಸಾತಿ, ನಾಗೇಶ ಅಮರಾವತಿ, ಬಾಲಪ್ಪ ಬಿಸಲದಿನ್ನಿ, ಅಡಿವೆಪ್ಪ ಪಡಗಾನೂರ, ಎಸ್.ಸಿ.ಮೇಟಿ, ಯಲ್ಲಪ್ಪ ಮಾದರ, ಸಂಗೀತಾ ಕೋಳೂರ ಸೇರಿದಂತೆ ನೂರಾರು ಜನ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

