Friday, August 14, 2026

ನಿವೃತ್ತ ಬಿಎಸ್‌ಎನ್‌ಎಲ್ ಸಿಬ್ಬಂದಿ, ರೈತ ಡಿ. ಶ್ರೀ ಶಂಕರಗೌಡ ಗೌಡಪ್ಪಗೌಡ ಬಿರಾದಾರ ನಿಧನ


ವಿಜಯಪುರ: ನಗರದ ನಿವಾಸಿ, ನಿವೃತ್ತ ಟೆಲಿಕಾಂ–ಬಿಎಸ್‌ಎನ್‌ಎಲ್ ಸಿಬ್ಬಂದಿ ಹಾಗೂ ಪ್ರಸಿದ್ಧ ರೈತರಾದ ಡಿ. ಶ್ರೀ ಶಂಕರಗೌಡ ಗೌಡಪ್ಪಗೌಡ ಬಿರಾದಾರ ಅವರು ಶುಕ್ರವಾರ, ಆಗಸ್ಟ್ 14, 2026ರಂದು ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು 1953ರ ಜೂನ್ 1ರಂದು ಜನಿಸಿದ್ದರು.

ಸಮಾಜಮುಖಿ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸರಳ, ಸಜ್ಜನ ಸ್ವಭಾವದವರಾಗಿ ಕುಟುಂಬಸ್ಥರು, ಬಂಧುಗಳು, ಸ್ನೇಹಿತರು ಹಾಗೂ ಸಮಾಜದವರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಅವರ ನಿಧನದಿಂದ ಕುಟುಂಬ ಹಾಗೂ ಬಂಧುಬಳಗದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಮೃತರ ಅಂತ್ಯಕ್ರಿಯೆ ಶನಿವಾರ, ಆಗಸ್ಟ್ 15ರಂದು ಬೆಳಿಗ್ಗೆ ನಡೆಯಲಿದ್ದು, ವಿಜಯಪುರದ ಶಿವನಗಿ ರಸ್ತೆಯ ಸ್ವಗೃಹದಿಂದ ಅಂತಿಮ ಯಾತ್ರೆ ನೆರವೇರಲಿದೆ. ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಹೆಗಡಿಹಾಳದ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ದೊರಕಲಿ ಎಂದು ಬಂಧುಗಳು, ಸ್ನೇಹಿತರು ಮತ್ತು ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment