Saturday, September 5, 2026

ಎಂ.ಎಸ್. ಖೇಡ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ವಿಜಯಪುರ: ನಗರದ ಎಂ.ಎಸ್. ಖೇಡ್ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಸಂಸ್ಥೆಯ ಖಜಾಂಚಿ ವಿನೋದ ಎಂ. ಖೇಡ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಅಕ್ಷರ ಕಲಿಸಿ ಜ್ಞಾನವನ್ನು ನೀಡುವವರು ಶಿಕ್ಷಕರು; ಜ್ಞಾನ ನೀಡಿ ಬದುಕಿನ ದಾರಿಯನ್ನು ತೋರಿಸುವವರು ಗುರುಗಳು” ಎಂದು ಶಿಕ್ಷಕರ ಮಹತ್ವವನ್ನು ವಿವರಿಸಿದರು. ನಮ್ಮ ಬದುಕಿಗೆ ದಾರಿದೀಪವಾಗಿ, ಜ್ಞಾನದ ಬೆಳಕನ್ನು ಹರಿಸಿ, ಉತ್ತಮ ಭವಿಷ್ಯ ರೂಪಿಸುವ ಗೌರವಾನ್ವಿತ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವೇ ಶಿಕ್ಷಕರ ದಿನಾಚರಣೆ ಎಂದು ತಿಳಿಸಿದರು. ಇದೇ ವೇಳೆ ಶಿಕ್ಷಕ ಸಮುದಾಯಕ್ಕೆ ಮತ್ತೊಮ್ಮೆ ಶಿಕ್ಷಕರ ದಿನದ ಶುಭಾಶಯಗಳನ್ನು ಕೋರಿದರು.

ಶಾಲೆಯ ಮುಖ್ಯಗುರು ಸೀತಾ ಲಮಾಣಿ ಅವರು ಮಾತನಾಡಿ, “ಮುಗ್ಧ ಮನದಲ್ಲಿ ಅಕ್ಷರ ಬಿತ್ತಿ, ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ, ಸುಂದರ ನಾಡು ಕಟ್ಟುವ ಅದ್ಭುತ ಶಿಲ್ಪಿಗಳು ಶಿಕ್ಷಕರು” ಎಂದು ಶಿಕ್ಷಕರ ಸೇವೆ ಹಾಗೂ ಜವಾಬ್ದಾರಿಯನ್ನು ಕೊಂಡಾಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಶ್ರೀದೇವಿ ಸೊನ್ನದ ಹಾಗೂ ಗಂಗೂಬಾಯಿ ಹಂಗರಗಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರಿಗೆ ಶುಭಾಶಯಗಳನ್ನು ಸಲ್ಲಿಸಲಾಯಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment