ವಿಜಯಪುರ : ವಿಜಯಪುರದ ಭಾವೈಕ್ಯತೆಯ ಪ್ರತೀಕವಾಗಿರುವ ಹಜರತ್ ಅರ್ಕಾಟ್ ದರ್ಗಾದ ಉರುಸು ಶ್ರದ್ಧಾ ಭಕ್ತಿಯಿಂದ ಜರುಗಲಿದ್ದು, ಇದರಂಗವಾಗಿ ದಿ.೨೩ ರಂದು ಝೂಲೂಸ್ ಏ. ಗೌಸಿಯಾ ಎಂಬ ಬೃಹತ್ ಶಾಂತಿಯಾತ್ರೆ ನಡೆಯಲಿದೆ ಎಂದು ಧರ್ಮಗುರು ಮೌಲಾನಾ ನೌಷಾದ್ ಆಲಂ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉರುಸು ಅಂಗವಾಗಿ ಅನೇಕ ಸಿದ್ದತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ, ಮಾನವೀಯತೆ, ಶಾಂತಿ, ಸಹೋದರತೆ ತತ್ವ ಸಾರಿದ ಅರ್ಕಾಟ್ ದರ್ಗಾದ ಹಜರತ್ ಸೈಯ್ಯದ್ ನಾ ಅಬ್ದುಲ್ ಷಾ ಖಾದ್ರಿ ಅವರ ಉರುಸಿನಲ್ಲಿ ಹಿಂದೂ ಮುಸ್ಲಿಂ ಬಾಂಧವರು ಸಾವಿರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಹಸಿದವರಿಗೆ ಅನ್ನ, ಆರೋಗ್ಯ ಸಮಸ್ಯೆ ಎದುರಿಸುವವರಿಗೆ ಪಾರಂಪರಿಕ ಆಯುರ್ವೇದ ಔಷಧಿ ದೊರಕುವ ಮೂಲಕ ದವಾ ಹಾಗೂ ದುವಾ ಎರಡು ಇಲ್ಲಿ ಲಭ್ಯ ಎಂದರು.
ಉರುಸು ಅಂಗವಾಗಿ ಶಾಂತಿ ಯಾತ್ರೆ ದಿ.೨೩ ರಂದು ನಡೆಯಲಿದ್ದು, ದರ್ಗಾದ ಪ್ರಸ್ತುತ ಸಜ್ಜಾದೆ ನಷೀನ್ ಹಜರತ್ ಇಕ್ಬಾಲ್ ಪೀರಾ ಹುಸೈನಿ ಹಾಗೂ ಅವರ ಪುತ್ರ ಡಾ.ಸೈಯ್ಯದ್ ತಕೀ ಪೀರಾ ಹುಸೈನಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ದಿ.೨೩ ರಂದು ಭವ್ಯ ಯಾತ್ರೆ ಸೊಲ್ಲಾಪೂರ ನಾಕಾದಿಂದ ಆರಂಭಗೊಳ್ಳಲಿದೆ, ಸಾವಿರಾರು ಭಕ್ತರ ಸಮ್ಮುಖದಲ್ಲಿ ಈ ಯಾತ್ರೆ ಶಹಾಪೂರ ದರ್ವಾಜಾ, ಸರಾಫ್ ಬಜಾರ್, ಗಾಂಧಿವೃತ್ತ, ಅತಾವುಲ್ಲಾ ಸರ್ಕಲ್, ಬಡಿಕಮಾನ್, ಜಾಮೀಯಾ ಮಸೀದಿ ಸೇರಿದಂತೆ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ದರ್ಗಾ ತಲುಪಲಿದೆ ಎಂದರು.
ಶಾAತಿಯಾತ್ರೆಗೂ ಮುನ್ನಾ ದಿನ ದಿ.೨೨ ರಂದು ವಿಚಾರ ಸಂಕಿರಣ ನಡೆಯಲಿದ್ದು, ದಿ.೨೩ ರಂದು ಪವಿತ್ರ ಸಂದಲ್ ಕಾರ್ಯಕ್ರಮಗಳು ದರ್ಗಾದ ಆವರಣದಲ್ಲಿ ನಡೆಯಲಿದೆ. ನಂತರ ಮುಷಾಯಿರಾ ಕಾರ್ಯಕ್ರಮಗಳು ಜರುಗಲಿವೆ ಎಂದು ವಿವರಿಸಿದರು. ಉರುಸು ಅಂಗವಾಗಿ ನೆರೆಯ ಮಹಾರಾಷ್ಟç, ಗುಜರಾತ್, ತಮಿಳುನಾಡು, ಕೇರಳ, ಗುಜರಾತ್, ಆಂದ್ರ ಪ್ರದೇಶ ಮೊದಲಾದ ಭಾಗಗಳಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆ.
ಪ್ರಮುಖರಾದ ಡಾ.ಎಂ.ಎಸ್. ಮುಜಾವರ, ಇರಾಪ ಸುನ್ನೆವಾಲೆ, ಮಹೇಪೊಜ ಅಲಿ ಬಾಗವಾನ, ಮೌಲಾನಾ ಹುಸೇನ ರಜ್ವಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment