Thursday, September 17, 2026

ವಿಜಯಪುರದಲ್ಲಿ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ನಮ್ಮ ಯುವಜನಾಂಗಕ್ಕೆ ಸ್ಫೂರ್ತಿ : ಜಗದೇವ ಸೂರ್ಯವಂಶಿ

ವಿಜಯಪುರ : ನಗರದ   ವಲ್ಲಭಾಯಿ ಪಟೇಲ ವೃತ್ತದಲ್ಲಿ ವಿಜಯಪುರ ಜಿಲ್ಲಾ 371 (ಜೆ) ಹೋರಾಟ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ  ಸ್ವಾಭಿಮಾನಿ ಸೇನೆ ವತಿಯಿಂದ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಆಚರಿಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ರಾಜ್ಯಾಧ್ಯಕ್ಷ ಜಗದೇವ ಸೂರ್ಯವಂಶಿ ಅವರು ಮಾತನಾಡಿ  ಆಪರೇಷನ್ ಪೋಲೊ ಮೂಲಕ ಹೈದ್ರಾಬಾದ್ ಪ್ರಾಂತವನ್ನು ಭಾರತದ ಒಕ್ಕೂಟದಲ್ಲಿ ಸೇರಿಸಿದ ಕೀರ್ತಿ ಸರದಾರ ವಲ್ಲಭಾಯಿ ಪಟೇಲ ಅವರಿಗೆ ಸಲ್ಲುತ್ತದೆ. ಅಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ನಮ್ಮ ಯುವಜನಾಂಗಕ್ಕೆ ಸ್ಫೂರ್ತಿ ಎಂದು ಹೇಳಿದರು.

ವಿಜಯಪುರ ಜಿಲ್ಲೆಯು ಹೈದ್ರಾಬಾದ್ ರಾಜ್ಯದ ಭಾಗವಾಗಿತ್ತು ಜಿಲ್ಲೆಯ ಸ್ವಾಮಿ ರಾಮಾನಂದ ತೀರ್ಥರು ವಿಮೋಚನಾ ಚಳುವಳಿಯ ನೇತೃತ್ವ ವಹಿಸಿ ವಿಮೋಚನಾ ಚಳುವಳಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

371 (ಜೆ ) ಹೋರಾಟಗಾರರಾದ ವಿನೋದ ಖೇಡ, ಕರವೇ ಸ್ವಾಭಿಮಾನಿ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ಎಮ್ ಆರ್ ಗುರಿಕಾರ ಅವರು ಮಾತನಾಡಿ , ಹೈದ್ರಾಬಾದ್ ಪ್ರಾಂತ ವಿಮೋಚನಾ ಚಳುವಳಿಗೆ  ಜಿಲ್ಲೆಯ ಸಾವಿರಾರು ಜನ ಯೋಧರು ಬಲಿದಾನ ಗೈದಿದ್ದಾರೆ. ಸರ್ದಾರ ಬಸವರಾಜ ನಾಗೂರ , ಸಿದ್ದಗೊಂಡಪ್ಪಗೌಡ‌ ಪಾಟೀಲ, ಸಂಗಯ್ಯ ಹಿರೇಮಠ ಸೇರಿದಂತೆ ಹಲವರು ವಿಮೋಚನಾ ಚಳುವಳಿಗೆ ಅವಿರತವಾಗಿ ಶ್ರಮಿಸಿದ ಫಲವಾಗಿ ಹೈದ್ರಾಬಾದ್ ಪ್ರಾಂಥವು ಭಾರತದ ಒಕ್ಕೂಟ ವ್ಯವಸ್ಥೆಯ ಭಾಗವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 371 ಜೆ ಹೊರಾಟಗಾರ ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ ಮಾತನಾಡಿ, ವಿಜಯಪುರ ಜಿಲ್ಲೆಯು  ಅಖಂಡ ಹೈದ್ರಾಬಾದ ಪ್ರಾಂತದ ಸ್ವಾತಂತ್ರ್ಯ ಚಳುವಳಿಯ ಹೆಬ್ಬಾಗಿಲಾಗಿದೆ. ಇಲ್ಲಿನ ಚಳುವಳಿಗಾರರು ನೇತೃತ್ವ ವಹಿಸಿದ್ದಕ್ಕಾಗಿ ಹೈದ್ರಾಬಾದ್ ಪ್ರಾಂತ ವಿಮೋಚನೆಗೊಂಡಿದೆ. ವಿಮೋಚನೆ ಚಳುವಳಿಯ ಶ್ರೇಯಸ್ಸು ಸ್ವಾಮಿ ರಾಮಾನಂದ ತೀರ್ಥರಿಗೆ ಸಲ್ಲಬೇಕು ಎಂದು ಹೇಳಿದ ಅವರು ವಿಜಯಪುರ ಜಿಲ್ಲೆಯನ್ನು ಸರ್ಕಾರ 371 ಜೆ ಮೀಸಲಾತಿ ಅಡಿ ಸೇರಿಸಿ ಜಿಲ್ಲೆಯ ಹೈದ್ರಾಬಾದ ವಿಮೋಚನಾ ಚಳುವಳಿಗಾರರಿಗೆ ಗೌರವ ಸಲ್ಲಿಸಬೇಕೆಂದರು.

ಕಾರ್ಯಕ್ರಮದಲ್ಲಿ ಹೋರಾಟಗಾರರಾದ ಮಲ್ಲಿಕಾರ್ಜುನ ಬಟಗಿ, ಅನಿಲ ಇಕ್ಕಡೆ, ಚಂದ್ರಶೇಖರ ಹೊಸಮನಿ, ಮಲ್ಲನಗೌಡ ಬಿರಾದಾರ,ಮಲ್ಲಿಕಾರ್ಜುನ ಲಂಗೋಟಿ, ಅಂಬಣ್ಣ ಗುನ್ನಾಪೂರ, ನೀಲಾಂಬಿಕಾ ಬಿರಾದಾರ , ಈಶ್ವರ ಚಂದ್ರ ಪಡಗಾನೂರ, ಶಂಕರ ಸಾತಪೋತೆ, ಶರಣಪ್ಪ ಕಟ್ಟಿ, ತಿಮ್ಮನಗೌಡ ಪಾಟೀಲ, ರಾಜಕುಮಾರ ಉಪ್ಪಾರ, ಚಿದಾನಂದ ಹಳ್ಳಿ, ವಿಠ್ಠಲ ಕರಿಗಾರ, ಉಮೇಶ ದೊಡಮನಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



No comments:

Post a Comment