ವಿಜಯಪುರ : ಜಿಲ್ಲೆಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡಲು ಒತ್ತಾಯಿಸಿ ನಡೆದ ಹೋರಾಟವನ್ನು ರಾಜ್ಯ ಸರಕಾರ ಕಡೆಗಣಿಸಿದ್ದರಿಂದ ರಾಜ್ಯ ಸರಕಾರದ ಧೋರಣೆ ವಿರುದ್ಧ ಜಿಲ್ಲೆಗೆ ಸರಕಾರದಿಂದಲೇ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಲು ಆಗ್ರಹಿಸಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಡಿಸೆಂಬರ್ ತಿಂಗಳಲ್ಲೇ ಸಲ್ಲಿಸಲಾಗಿದೆ ಎಂದು ಅರ್ಜಿದಾರ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರಕಾರ ಜಿಲ್ಲೆಯ ಜನರ ಬೇಡಿಕೆಯು ಸಾರ್ವಜನಿಕ ಹಿತಾಸಕ್ತಿಯ ಬೇಡಿಕೆಯಾಗಿದೆ. ಸಾರ್ವಜನಿಕರಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡ ಬೇಕಾಗಿರುವುದು ಪ್ರಜಾಪ್ರಭುತ್ವ ಸರಕಾರದ ಸಂವಿಧಾನಬದ್ದ ಕರ್ತವ್ಯವಾಗಿದೆ.
ಸರಕಾರ ತನ್ನ ಕರ್ತವ್ಯ ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಶಾಸಕಾಂಗ ಮತ್ತು ಕಾರ್ಯಾಂಗಗಳು ವಿಫಲವಾಗಿರುವುದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ನ್ಯಾಯಾಂಗದ ಗಮನಕ್ಕೆ ತರಲಾಗಿದೆ, ಭಾರತ ಸರಕಾರ ಮತ್ತು ಕರ್ನಾಟಕ ಸರಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಸರಕಾರದ ಕಾರ್ಯದರ್ಶಿ ವಿಜಯಪುರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಕಾನೂನು ಬದ್ದ ನೋಟೀಸ್ ನೀಡಿ ವಿಜಯಪುರ ಜಿಲ್ಲೆಗೆ ಉದ್ದೇಶಿತ ಪಿ ಪಿ ಪಿ ಮಾದರಿಯ ಖಾಸಗೀಕರಣ ಕೈಬಿಡಲು ಒತ್ತಾಯಿಸುತ್ತಿರುವ ಜನರ ಬೇಡಿಕೆ ಕುರಿತು ಸ್ಪಷ್ಟ ಅಭಿಪ್ರಾಯ ಕೇಳಲಾಗಿದೆ. ಜೊತೆಗೆ ರಾಜ್ಯ ಸರಕಾರದಿಂದ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡುವ ಕುರಿತು ಹಾಗೂ ಕೇಂದ್ರ ಸರಕಾರದಿಂದ ಏಮ್ಸ್ ಸ್ಥಾಪನೆ ಮಾಡುವ ಕುರಿತು ಲಿಖಿತ ಸ್ಪಷ್ಟನೆ ಕೇಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉಚ್ಚ ನ್ಯಾಯಾಲಯದ ಮುಂದೆ ಲಿಖಿತ ಉತ್ತರ ನೀಡಬೇಕಾಗಿದೆ.
ಕರ್ನಾಟಕ ಉಚ್ಚ ನ್ಯಾಯಾಲಯವು ಜಿಲ್ಲೆಯ ಜನರ ಬೇಡಿಕೆಗೆ ನ್ಯಾಯ ಒದಗಿಸುವ ವಿಶ್ವಾಸವಿದೆ ಎಂದು ಅರ್ಜಿದಾರ ಹಾಗೂ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ತಿಳಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
