Sunday, April 19, 2026

ಪಾಲಿ ಭಾಷೆ ಪರೀಕ್ಷೆ: ಮಲ್ಲಿಕಾರ್ಜುನ ಕೆಳಗಡೆ ವಿಶೇಷ ಸಾಧನೆ

ವಿಜಯಪುರ: ನಗರದ ಕನಕದಾಸ ಬಡಾವಣೆ ನಿವಾಸಿ, ವಾರ್ತಾ ಇಲಾಖೆ ವಿಶ್ರಾಂತ ಉನ್ನತ ಅಧಿಕಾರಿ ಮಲ್ಲಿಕಾರ್ಜುನ ಕೆಳಗಡೆ ಅವರು ತಮ್ಮ 75 ನೇ ಇಳಿವಯಸ್ಸಿನಲ್ಲೂ ಪಾಲಿ ಭಾಷೆ ಪರೀಕ್ಷೆಯಲ್ಲಿ ವಿಶೇಷ ಸಾಧನೆ ತೋರಿದ್ದಾರೆ.

ಪಾಲಿ ಭಾಷೆ ಕಲಿಯುವ ಆಸಕ್ತಿಯಿಂದ ಕಲಬುರಗಿಯ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಪಾಲಿ ಸಂಸ್ಥೆಯಲ್ಲಿ ಹೆಸರು ನೋಂದಾಯಿಸಿ, ಒಂದು ವರ್ಷದ ಡಿಪ್ಲೋಮಾ ಪಾಲಿ ಕೋರ್ಸ್ ಅಧ್ಯಯನ ಮಾಡಿ, ಪರೀಕ್ಷೆ ಬರೆದು ಅತ್ಯುತ್ತಮ ಸ್ಥಾನ (500 ಕ್ಕೆ 403 ಅಂಕ) ಪಡೆದಿದ್ದು, ಕರ್ನಾಟಕ ಸಂಸ್ಕೃತಿ ವಿಶ್ವ ವಿದ್ಯಾಲಯ ಪ್ರಮಾಣ ಪತ್ರ ನೀಡಿದೆ.

ಮಲ್ಲಿಕಾರ್ಜುನ ಕೆಳಗಡೆ ಅವರ ವಿಶೇಷ ಸಾಧನೆಗೆ ಸ್ನೇಹಿತರ ಬಳಗ, ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳು ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ :  9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಬಸವಣ್ಣನ ಆರ‍್ಶ ಎಲ್ಲರಿಗೂ ಮಾಧರಿ- ಸುಭಾಸ ಯಾದವಾಡ


ಶರಣ ಅಲ್ಲಮಪ್ರಭು, ಶರಣ ಸಿದ್ದರಾಮೇಶ್ವರ ವೇದಿಕೆ
ವಿಜಯಪುರ: ಆಧುನಿಕ ಎಲ್ಲ ಕವಿಗಳಿಗೆ ಬಸವಣ್ಣ ಆವರಿಸಿದ್ದಾನೆ.ಬಸವಣ್ಣನ ಸಮ ಸಮಾಜದ ಆರ‍್ಶ ಎಲ್ಲರಿಗೂ ಇಂದಿಗೂ ಮಾದರಿಯಾಗಿದ್ದಾವೆ ಎಂದು ಹಿರಿಯ ಕವಿ ಸುಭಾಸ ಯಾದವಾಡ ಹೇಳಿದರು.
ಅವರು ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಉತ್ಸವದಲ್ಲಿ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಧುನಿಕ ಕನ್ನಡ ಕಾವ್ಯಲೋಕದಲ್ಲಿ ಬಸವಣ್ಣನ ಪ್ರಭಾವ ಅತೀವ ಗಾಢವಾಗಿದೆ. ಸಮಾನತೆ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಮಹತ್ವವನ್ನು ಸಾರಿದ ಬಸವಣ್ಣನ ವಚನಗಳು ಇಂದಿಗೂ ಎಲ್ಲ ಕವಿಗಳಿಗೆ ಪ್ರೇರಣೆಯಾಗಿವೆ. ವರ್ಣಭೇದ, ಜಾತಿ ಅಸಮಾನತೆ, ಅಂಧಶ್ರದ್ಧೆಗಳ ವಿರುದ್ಧ ಬಸವಣ್ಣ ಹೋರಾಡಿದ ರೀತಿ ಇಂದಿನ ಸಮಾಜಕ್ಕೂ ಪ್ರಸ್ತುತವಾಗಿದೆಯೆಂದು ಹೇಳಿದರು. ದುಡಿಮೆ ಮತ್ತು ಸತ್ಯನಿಷ್ಠ ಜೀವನದ ಮಹತ್ವವನ್ನು ಪ್ರತಿಪಾದಿಸುತ್ತದೆ. ಆಧುನಿಕ ಕವಿಗಳು ತಮ್ಮ ಕಾವ್ಯಗಳಲ್ಲಿ ಬಸವಣ್ಣನ ತತ್ವಗಳನ್ನು ಅಳವಡಿಸಿಕೊಂಡು, ಸಮಾಜದ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಸಮಾನತೆ ಮತ್ತು ಸಹಿಷ್ಣುತೆ ಎಂಬ ಮೌಲ್ಯಗಳು ಇಂದಿನ ಜಗತ್ತಿನಲ್ಲಿ ಅತ್ಯಂತ ಅಗತ್ಯವಾಗಿವೆ. ಈ ಹಿನ್ನೆಲೆಯಲ್ಲಿ ಬಸವಣ್ಣನ ಆದರ್ಶಗಳು ಮಾದರಿಯಾಗಿವೆ  ಎಂದರು.  .ಸಾಹಿತಿ ಶೇಷರಾವ ಮಾನೆ ಅವರು ಮಾತನಾಡಿ ಕವಿಗಳಲ್ಲಿ ಹನ್ನೆರಡನೇ ಶತಮಾನದ ಶರಣರ ಚಿಂತನೆಗಳು ಕಾಣುತ್ತಿವೆ, ಕನ್ನಡದಲ್ಲಿ ಮೊದಲ ಬಾರಿಗೆ ಸಾಹಿತ್ಯ ರಚನೆ ಮಾಡುವ ಮೂಲಕ ಕನ್ನಡ ಸಾಹಿತ್ಯದ ಮಾದರಿ ಪುರುಷ ಎಂದರು.
ಸವಿತಾ ಬಿ ಎನ್

ಕವಿಗೋಷ್ಠಿಯಲ್ಲಿ ಸವಿತಾ ಬಿ ಎನ್, ಶಿವಬಾಳಮ್ಮ ಕೊಂಡಗೂಳಿ, ಲಾಯಪ್ಪ ಇಂಗಳೆ , ಕಲ್ಲಪ್ಪ ಶಿವಶರಣ, ದೀಪಕ ಶಿಂಧೆ, ಮಯೂರ ಸಜ್ಜನ, ಲಕ್ಷ್ಮಿ ಗೋಡೆಕರ, ಭರತಕುಮಾರ ಎಚ್ ಟಿ, ಅನುಪ್ರಿಯಾ ಬಿರಾದಾರ, ಸುನೀತಾ ಮೋರೆ, ಕಾವೇರಿ ಹೊಸಮನಿ, ವಿದ್ಯಾಶ್ರೀ ಪೂಜಾರಿ, ಯಲ್ಲಾಲಿಂಗ ಜಮಾದಾರ, ಸುಧಾರಾಣಿ ಬಿರಾದಾರ, ಶಿವಾಜಿ ಮೋರೆ, ಮುರುಗೇಶ ಸಂಗಮ, ಬಿ.ಎಸ್. ಪೂಜಾರಿ, ಚೇತನ ಹಿರೇಕುರುಬರ., ಬೋರಮ್ಮ ಬೇನೂರ, ಮಲ್ಲಿಕರ‍್ಜುನ ಹಡಪದ, ಮಹಾದೇವಿ ಪಾಟೀಲ, ಚಂದ್ರಶೇಖರ,ಅಕ್ಷಯ ಬಲತಿ, ಸುರೇಖಾ ಜಾಲವಾದಿ, ಡಾ. ವನಜಾಕ್ಷಿ ಬಡಿಗೇರ, ದಾನಮ್ಮ ಹೂಗಾರ , ಶಿವರಾಜ ಬಡಿಗೇರ, ತೇಜಸ್ವಿನಿ ಚಾಂದಕವಟೆ,ಅರುಣಕುಮಾರ ರಾಜಮಾನೆ, ರೇಣುಕಾ ಬಿಸನಾಳ, ಗೀತಾ ದೊಡಮನಿ, ಮಂಜುಳಾ ಜಾಲವಾದಿ, ಸುನಂದಾ ಕೋರಿ, ರುಕ್ಷಿಣಿ ಅಗಸರ, ರತ್ನಾ ಬೊಮ್ಮನಹಳ್ಳಿ, ಸುಜ್ಞಾನಿ ಪಾಟೀಲ,ಸಂತೋಷ ಎಸ್.ಎನ್,ವಿದ್ಯಾಶ್ರೀ ರಾಠೋಡ ಸೇರಿದಂತೆ 41 ಜನ ಕವಿಗಳು ಕವಿತೆ ವಾಚಿಸಿದರು.
ಶಿವಬಾಳಮ್ಮ ಕೊಂಡಗೂಳಿ

ವೇದಿಕೆಯಲ್ಲಿ ನಂದಾ ತಿಕೋಟಿ, ರಾಜಶೇಖರ ಉಮರಾಣಿ, ವಿಜಯಕುಮಾರ ಘಾಟಗೆ ಬಸವರಾಜ ಜಾಲವಾದಿ ಕುಮಾರಗೌಡ ಹರನಾಳ ದಾನೇಶ ಅವಟಿ, ಉಪಸ್ಥಿತರಿದ್ದರು.
ಕರ‍್ಯಕ್ರಮದಲ್ಲಿ ಪ್ರಭುಗೌಡ ಪಾಟೀಲ ವಿ ಸಿ ನಾಗಠಾಣ,ಜಂಬನಾಥ ಕಂಚಾಣಿ ಡಾ ವಿ ಡಿ ಐಹೊಳ್ಳಿ, ಭಾರತಿ ಪಾಟೀಲ ಮಹಾದೇವಿ ಗೋಕಾಕ, ಶರಣಗೌಡ ಪಾಟೀಲ ದಾನೇಶ ಅವಟಿ, ಸವಿತಾ ಶಹಾಪುರ, ಶ್ರೀಧರ ಕನ್ನೂರ, ಶರಣು ಕಾಟಕರ,ಶರಣು ಕಿರಣಗಿ, ಚಂದ್ರಶೇಖರ ಹೊಸಮನಿ, ತನ್ಮಯ ಚಂದಕಾವಟೆ ಸೇರಿ ಹಲವರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಬಸವ ಜಯಂತಿಯಲ್ಲಿ ಮಕ್ಕಳಿಂದ ವಚನ ಕಂಠಪಾಠ

ಶರಣ ಅಲ್ಲಮಪ್ರಭು, ಶರಣ ಸಿದ್ದರಾಮೇಶ್ವರ ವೇದಿಕೆ
ವಿಜಯಪುರ: ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಉತ್ಸವದಲ್ಲಿ ಪುಟಾಣಿ ಮಕ್ಕಳು ಹಾಗೂ ವಿದ್ಯಾರ್ಥಿಗಳಿಂದ  ವಚನ ಕಂಠಪಾಠ ಕಾರ್ಯಕ್ರಮ ಜರುಗಿತು.
ವೇದಿಕೆಯಲ್ಲಿ ಲಕ್ಷ್ಮಿ ಮೋರೆ, ಡಾ ನೀಲಕಂಠ ಹಳ್ಳಿ, ಶರಣಗೌಡ ಪಾಟೀಲ ಉಪಸ್ಥಿತರಿದ್ದರು.
ಚೇತನ ವಜ್ರಮಟ್ಟಿ, ಸೌಜನ್ಯ ಕೃಪಾಸಿಂಧು ಜಾಲವಾದಿ,ಸೃಜನ ಕವಡಿಮಟ್ಟಿ, ಸಾಮ್ರಾಟ ಲಿಂಗದಹಳ್ಳಿ,ಓಂಕಾರ ವೀರಣ್ಣವರ,ಯುಕ್ತಿ ಮಾಡಗಿ ಆವಂತಿಕಾ ಹೆಗಡಿಹಾಳ,ವಿದ್ಯಾ ಹಳಕಟ್ಟಿ,ಸಾಕ್ಷಿ ಮಟ್ಯಾಳ,ಸಂಜನಾ ಭೋವಿ, ವಚನಾ ತಳೆವಾಡಿ,ಕೃತಿಕಾ, ಶೋಭಾರಾಣಿ ಕನ್ನೂರ ವಚನ ಕಂಠಪಾಠದಲ್ಲಿ ಭಾಗವಹಿಸಿ ಬಸವಾದಿ ಶರಣರ ವಚನಗಳನ್ನು ಹೇಳಿದರು.
ಇದೆ ಸಂದರ್ಭದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೆ ಪ್ರಮಾಣ ಪತ್ರ  ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಲಕ್ಷ್ಮಿ ಮೋರೆ, ಡಾ ನೀಲಕಂಠ ಹಳ್ಳಿ, ಶರಣಗೌಡ ಪಾಟೀಲ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರಮುಖರಾದ  ಎಸ್ ಎಚ್ ನಾಡಗೌಡ, ಮ ಗು ಯಾದವಾಡ, ಪ್ರಭುಗೌಡ ಪಾಟೀಲ ಬಸನಗೌಡ ಹರನಾಳ ಬಸವರಾಜ ಜಾಲವಾದಿ ಶಂಕರ ಬೈಚಬಾಳ,ಸವಿತಾ ಬಿ ಎನ್ ಶೇಷರಾವ ಮಾನೆ,ಚಂದ್ರಶೇಖರ ಗಂಟೆಪ್ಪಗೋಳ ರವಿಕುಮಾರ ಬಿರಾದಾರ, ಕಲ್ಲಪ್ಪ ಶಿವಶರಣ, ಲಾಯಪ್ಪ ಇಂಗಳೆ, ಶರಣು ಕಿರಣಗಿ ದಾನೇಶ ಅವಟಿ ಜಗದೇವ ಸೂರ್ಯವಂಶಿ, ಶಾಂತವೀರ ಥಾಲಬಾವಡಿ ವೈ ಎಚ್ ಲಂಬು ಬಸನಗೌಡ ಹರನಾಳ, ಜಂಬುನಾಥ ಕಂಚಾಣಿ, ಮಹಾದೇವಿ ಗೋಕಾಕ, ಭಾರತಿ ಭುಯ್ಯಾರ ಶಶಿಕಲಾ ಕೊಟಗಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಜಾತಿ ವರ್ಗ ರಹಿತ ಅನುಭವ ಮಂಟಪ ಕಟ್ಟಿದ್ದು ಬಸವಣ್ಣನ ತಾಕತ್ತು -ಅನುಷಾ ಹಿರೇಮಠ



ಶರಣ ಅಲ್ಲಮಪ್ರಭು, ಶರಣ ಸಿದ್ದರಾಮೇಶ್ವರ ವೇದಿಕೆ

ವಿಜಯಪುರ : ಸಮಾಜದ ಎಲ್ಲ ವರ್ಗದವರನ್ನು ಬಸವಣ್ಣ ಎತ್ತಿ ಹಿಡಿದು ಅಪ್ಪಿಕೊಂಡಿದ್ದ, ಬಸವಣ್ಣನ ಸಮಾಜ ಜಾತಿ ವರ್ಗ ವರ್ಣ ರಹಿತವಾಗಿತ್ತು, ಬಸವಣ್ಣ ಕಟ್ಟಿದ ವಿಶ್ವದ ಮೊದಲ ಸಂಸತ್ತು ಎಂದು ಹೆಸರಾದ ಅನುಭವ ಮಂಟಪದಲ್ಲಿ ದೇಶ-ವಿದೇಶದ ಶರಣ ಶರಣೆಯರು ಇದ್ದರು ಇದು ಬಸವಣ್ಣನ ಅನುಭಾವದ ತಾಕತ್ತು ಎಂದು ವಚನ ಗಾಯಕಿ ಕುಮಾರಿ ಅನುಷಾ ಕರಿಬಸವಯ್ಯ ಹಿರೇಮಠ ಹೇಳಿದರು.
ಅವರು ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ಸಮಾಜದದಲ್ಲಿ ಗಂಡು-ಹೆಣ್ಣು ಜಾತಿ, ವರ್ಗ ಭೇದ ಇರಬಾರದು ಎಂದು ಬಸವಣ್ಣ ಬಯಸಿದ್ದರು ಬಸವಣ್ಣನವರ ಚಿಂತನೆಗಳನ್ನು ಎಲ್ಲರು ಅಳವಡಿಸಿಕೊಳ್ಳೋಣ ಎಂದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಮಾತನಾಡಿ ನಾನು ಭಕ್ತ ಎಂದು ಹೇಳಿದ ಬಸವಣ್ಣ ಎಲ್ಲರಿಗಿಂತ ದೊಡ್ಡವರಾಗಿದ್ದಾರೆ.ಬಸವಣ್ಣ ಎಲ್ಲರನ್ನು ಪ್ರೀತಿಸಿದರು ಅವರ ಭಾವಕ್ಕೆ ಬೆಲೆ ಕಟ್ಟಲಾಗದು, ಬಸವಣ್ಣ ಸಮಾಜದ ಮೈಲಿಗೆ ತೊಳೆಯಲು ಬಂದ ಕ್ರಾಂತಿ ಪುರುಷರಾಗಿದ್ದಾರೆ ಅವರ ವಚನ ಇಂದು ಸಮಾಜವನ್ನು ಮುನ್ನಡೆಸುತ್ತಿವೆ ಸಮಾಜದ ಮೈಲಿಗೆ ಕಳೆಯುತ್ತಿವೆ ಎಂದರು.
ಕಾರ್ಯಕ್ರಮದದಲ್ಲಿ ಚಿಂತಕ  ಜೆ ಎಸ್ ಪಾಟೀಲ ಮುಖ್ಯ ಉಪನ್ಯಾಸ ನೀಡಿದರು, ವೀರಶೈವ ಮಹಾಸಭಾ ಅಧ್ಯಕ್ಷ ವಿ ಸಿ ನಾಗಠಾಣ ಮಾತನಾಡಿದರು.
ಉತ್ಸವ ಸಮಿತಿ ಅಧ್ಯಕ್ಷ ವಹಿಸಿ ಘನಶಾಮ ತೋಸ್ನಿವಾಲಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಬಸವಲಿಂಗ ಸ್ವಾಮೀಜಿ, ಗುರುಲಿಂಗ ಸ್ವಾಮೀಜಿ ಬಸನಗೌಡ ಹರನಾಳ, ಜಂಬುನಾಥ ಕಂಚಾಣಿ, ಸಂಗನಬಸಪ್ಪ ಸಜ್ಜನ, ಡಾ ರವಿಕುಮಾರ ಬಿರಾದಾರ ಮಹಾದೇವಿ ಗೋಕಾಕ, ಭಾರತಿ ಭುಯ್ಯಾರ ಶಶಿಕಲಾ ಕೊಟಗಿ, ತ್ರಿವೇಣಿ ಬುರ್ಲಿ, ಸುಧಾರಾಣಿ ಬಿರಾದಾರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರಮುಖರಾದ ಎಸ್ ಎಚ್ ನಾಡಗೌಡ, ಮ ಗು ಯಾದವಾಡ, ಪ್ರಭುಗೌಡ ಪಾಟೀಲ ಬಸನಗೌಡ ಹರನಾಳ ಬಸವರಾಜ ಜಾಲವಾದಿ ಶಂಕರ ಬೈಚಬಾಳ, ಸವಿತಾ ಬಿ ಎನ್ ಶೇಷರಾವ ಮಾನೆ,ಚಂದ್ರಶೇಖರ ಗಂಟೆಪ್ಪಗೋಳ ರವಿಕುಮಾರ ಬಿರಾದಾರ, ಕಲ್ಲಪ್ಪ ಶಿವಶರಣ, ಲಾಯಪ್ಪ ಇಂಗಳೆ, ಶರಣು ಕಿರಣಗಿ ದಾನೇಶ ಅವಟಿ ಜಗದೇವ ಸೂರ್ಯವಂಶಿ, ಶಾಂತವೀರ ಥಾಲಬಾವಡಿ ವೈ ಎಚ್ ಲಂಬು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.





ಬಸವ ಜಯಂತಿ ಅಂಗವಾಗಿ ಮಹಿಳೆಯರಿಂದ ಬೈಕ್ ರ್ಯಾಲಿ


ವಿಜಯಪುರ :ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಕಾರ್ಯಕ್ರಮ ಅಂಗವಾಗಿ

ಬೆಳಿಗ್ಗೆ 9.00 ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹಣಮಂತರಾಯ ರಂಗಮಂದಿರದವರೆಗೆ ಮಹಿಳೆಯರಿಂದ ಬೈಕ್ ರ್ಯಾಲಿ ಜರುಗಿತು. ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷೆ ಮಹಾದೇವಿ ಗೋಕಾಕ ಉಪಾಧ್ಯಕ್ಷೆ ಶಶಿಕಲಾ ಕೊಟಗಿ ಅವರು ರ್ಯಾಲಿಗೆ ಚಾಲನೆ ನೀಡಿದರು.

ಬೈಕ್ ರ್ಯಾಲಿಯಲ್ಲಿ ಭಾರತಿ ನಾವಿ, ಪ್ರತಿಭಾ ಪಾಟೀಲ, ಶೀಲಾ ಆರ್. ಬಿರಾದಾರ, ಶ್ವೇತಾ ಹರನಾಳ, ವಿದ್ಯಾವತಿ ಅಂಕಲಗಿ, ಭಾರತಿ ಪಾಟೀಲ,  ಶಾರದ ಕೊಪ್ಪ, ಸಂಗೀತಾ ಪೂಜಾರಿ,ಸುಮಾ ಅಂಗಡಿ, ಶ್ರೀದೇವಿ ಪಾಟೀಲ,ಸ್ವೇತಾ ಅಕ್ಕಲಕೋಟ, ಅನುಸೂಯಾ ಬಿರಾದಾರ, ಶಿವಲೀಲಾ ಮನಗೊಂಡ, ಸುಮಾ ದುದಗಿ ರಾಜೇಶ್ವರಿ ಮನಗೂಳಿ, ಅಕ್ಕಮ್ಮ ಮಠ ನೀತಾ ಸೂಳಿಭಾವಿ, ಸ್ನೇಹಾ ಬಿರಾದಾರ, ಶಕುಂತಲಾ ಬಗಲಿ ಮಂಗಲಾ ಡೊಮ್ಮನಾಳ ಅನಿತಾ ಕುಮಶಿ, ಶೈಲಾ ಬಸವಪ್ರಭು., ತ್ರಿವೇಣಿ ಬುರ್ಲಿ, ಜಯಶ್ರೀ ಲದ್ವಾ, ಅಶ್ವಿನಿ ಮಾನೆ, ಪೂರ್ಣಿಮಾ ಯಾದವಾಡ, ಸುನಿತಾ ಬಿರಾದಾರ, ರೇಖಾ ಬಿರಾದಾರ, ಐಶ್ವರ್ಯ ಬಿರಾದಾರ ಸೇರಿ ನೂರಾರು ಮಹಿಳೆಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಿ ಸಿ ನಾಗಠಾಣ,ಎಸ್ ಎಚ್ ನಾಡಗೌಡ, ಜೆ ಎಸ್ ಪಾಟೀಲ,ಮ ಗು ಯಾದವಾಡ, ಪ್ರಭುಗೌಡ ಪಾಟೀಲ ಬಸನಗೌಡ ಹರನಾಳ ಚಂದ್ರಶೇಖರ ಗಂಟೆಪ್ಪಗೋಳ ರವಿಕುಮಾರ ಬಿರಾದಾರ, ಶರಣು ಕಿರಣಗಿ ಕಲ್ಲಪ್ಪ ಶಿವಶರಣ, ಲಾಯಪ್ಪ ಇಂಗಳೆ, ದಾನೇಶ ಅವಟಿ ಜಗದೇವ ಸೂರ್ಯವಂಶಿ, ಶಾಂತವೀರ ಥಾಲಬಾವಡಿ ವೈ ಎಚ್ ಲಂಬು ಉಪಸ್ಥಿತರಿದ್ದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.