Wednesday, June 17, 2020

18-06-2020 EE DIVASA KANNADA DAILY NEWS PAPER

ಜಿಲ್ಲೆಯಲ್ಲಿ ಬುಧವಾರ ಯಾವುದೇ ಕೋವಿಡ್-೧೯ ಪಾಸಿಟಿವ್ ದೃಢಪಟ್ಟಿಲ್ಲ : ೧೪ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ


ಈ ದಿವಸ ವಾರ್ತೆ
ವಿಜಯಪುರ : ಜಿಲ್ಲೆಯಲ್ಲಿ ಈವರೆಗೆ ಒಟ್ಟು ೨೩೬ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲಾಸ್ಪತ್ರೆಯಲ್ಲಿ ೩೪ ರೋಗಿಗಳು ಕೋವಿಡ್-೧೯ ಪಾಸಿಟಿವ್ ಸಕ್ರಿಯ ರೋಗಿಗಳಾಗಿದ್ದಾರೆ.  ಯಾಡ್ವುhದೇ ಕೋವಿಡ್-೧೯ ಪಾಸಿಟಿವ್ ಪ್ರಕರಣ ದೃಢಪಟ್ಟಿಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಅದರಂತೆ ರೋಗಿ ಸಂಖ್ಯೆ ೧೧೮೪ (೨೦ ವರ್ಷದ ಹೆಣ್ಣು), ರೋಗಿ ಸಂಖ್ಯೆ ೩೯೨೭ (೭೦ ವರ್ಷದ ಹೆಣ್ಣು), ರೋಗಿ ಸಂಖ್ಯೆ ೪೮೩೩ (೫೮ ವರ್ಷದ ಹೆಣ್ಣು), ರೋಗಿ ಸಂಖ್ಯೆ ೫೦೧೧ (೩೦ ವರ್ಷದ ಗಂಡು), ರೋಗಿ ಸಂಖ್ಯೆ ೫೦೧೩ (೪೨ ವರ್ಷದ ಹೆಣ್ಣು), ರೋಗಿ ಸಂಖ್ಯೆ ೫೪೨೭ (೮ ವರ್ಷದ ಬಾಲಕಿ), ರೋಗಿ ಸಂಖ್ಯೆ ೫೪೨೮ (೨೮ ವರ್ಷದ ಹೆಣ್ಣು), ರೋಗಿ ಸಂಖ್ಯೆ ೫೪೨೯ (೨೨ ವರ್ಷದ ಹೆಣ್ಣು), ರೋಗಿ ಸಂಖ್ಯೆ ೫೯೮೪ (೨೫ ವರ್ಷದ ಹೆಣ್ಣು), ರೋಗಿ ಸಂಖ್ಯೆ ೬೧೧೪ (೩೫ ವರ್ಷದ ಗಂಡು), ರೋಗಿ ಸಂಖ್ಯೆ ೪೫೯೮ (೨೬ ವರ್ಷದ ಹೆಣ್ಣು), ರೋಗಿ ಸಂಖ್ಯೆ ೪೮೧೧ (೩೬ ವರ್ಷದ ಗಂಡು), ರೋಗಿ ಸಂಖ್ಯೆ ೫೯೭೭ (೨೫ ವರ್ಷದ ಗಂಡು), ರೋಗಿ ಸಂಖ್ಯೆ ೫೯೭೮ (೨೪ ವರ್ಷದ ಗಂಡು), ಸೋಂಕಿನಿAದ ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
 
ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ ೩೦೩೬೧ ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಇಲ್ಲಿಯವರೆಗೆ ಒಟ್ಟು ೨೩೬ ಕೋವಿಡ್ -೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದಾರೆ. ೯೩೦೦ ಜನರು ೨೮ ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. ೨೦೮೫೯ ಜನರು (೧ ರಿಂದ ೨೮ ದಿನಗಳ) ರಿಪೋರ್ಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು ೬ ಜನ ಕೋವಿಡ್-೧೯ ರೋಗಿಗಳು ಮೃತಪಟ್ಟಿದ್ದಾರೆ. ೧೯೬ ಜನರು ಕೋವಿಡ್-೧೯ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ೩೪ ಜನರು ಆಸ್ಪತ್ರೆಯಲ್ಲಿರುವ ಕೋವಿಡ್-೧೯ ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ ೨೬೯೪೨ ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, ೨೬೫೫೮ ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ ೧೪೮ ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

25 ಸಾವಿರ ವಿದ್ಯಾರ್ಥಿಗಳಿಗೆ ಮಾಸ್ಕ, ಸ್ಯಾನಿಟೈಜರ್ ವಿತರಿಸಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ



ಈ ದಿವಸ ವಾರ್ತೆ
ಮುದ್ದೇಬಿಹಾಳ:
ಬುಧವಾರದಂದು ಮುದ್ದೇಬಿಹಾಳ ಪಟ್ಟಣದ ದಾಸೋಹ ನಿಲಯದಲ್ಲಿ   ದೇವರಹಿಪ್ಪರಗಿ ಕ್ಷೇತ್ರದ ಬಸವನಬಾಗೇವಾಡಿ ತಾಲೂಕಿನ ವ್ಯಾಪ್ತಿ, ಹಾಗೂ ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷಾ ಕೇಂದ್ರಗಳ ಮುಖ್ಯೋಪಾಧ್ಯಾಯರು ಹಾಗೂ ಮುಖ್ಯಸ್ಥರ  ಸಭೆ ನಡೆಸಿ, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಮಾಸ್ಕ ಮತ್ತು 100 ಎಮ್‌ಎಲ್ ಸ್ಯಾನಿಟೈಜರ್‌ವನ್ನು ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಶಾಲಾ ಆಡಳಿತಾಧಿಕಾರಿಗಳಿಗೆ ವಿತರಿಸಿದರು.


ದಿವ್ಯ ಸಾನ್ನಿಧ್ಯವನ್ನು ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಿದ್ದರು.
ಶಾಸಕ ಎ.ಎಸ್. ಪಾಟೀಲ ಅವರ ತಂದೆಯವರಾದ ಸಂಗನಗೌಡ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಸೋಮನಗೌಡ ಪಾಟೀಲ, ಬಿ.ಇ.ಓ ರೇಣುಕಾ ಕಲ್ಬುರ್ಗಿ, ಪಿ.ಎಸ್.ಐ. ಮಲ್ಲಪ್ಪ ಮಡ್ಡಿ, ಶಂಕರಗೌಡ ಹಿರೇಗೌಡ, ಗೋಪಾಲ ಹೂಗಾರ, ಸ್ಕೌಟ್ಸ್ & ಗೌಡ್ಸ್ ಉಪಾಧ್ಯಕ್ಷರಾದ ಜಿ.ಎಚ್.ಚವ್ಹಾಣ, ಎಲ್.ಕೆ.ನದಾಫ್, ಎಸ್.ಆರ್. ಸುಲ್ಪಿ, ಎಸ್.ಜಿ. ಮುತ್ತಪ್ಪನವರ, ಪುರಸಭೆ ಸದಸ್ಯರಾದ ಸಂಗಮ್ಮ ದೇವರಳ್ಳಿ, ಸಿದ್ದಮ್ಮ ಸಿದರಡ್ಡಿ, ಯು.ಬಿ.ಧರಿಕಾರ, ಎ.ಎಸ್. ಬಾಗವಾನ, ಎಚ್.ಎಲ್.ಕರಂಡೆ, ಪ್ರೊ. ಎಸ್.ಎಸ್.ಹೂಗಾರ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಕಾ.ನಿ.ಪ. ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಡಿ.ಬಿ.ವಡವಡಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಕೊರೋನಾ ಮಹಾಮಾರಿ ರೋಗದ ಮಧ್ಯೆಯೇ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಶಾಸಕ ನಡಹಳ್ಳಿ ಅವರು ಇಡೀ ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಾಸ್ಕ್, ಸಾನಿಟೈಜರ್ ವಿತರಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ.
ಎ.ಎಸ್. ಬಾಗವಾನ ಪ್ರಾರ್ಥಿಸಿದರು. ಜಿ.ಎಚ್. ಚವ್ಹಾಣ ಸ್ವಾಗತಿಸಿದರು. ಗೋಪಾಲ ಹೂಗಾರ ನಿರೂಪಿಸಿದರು. 

ಕೃಷಿ ಹೊಂಡದಲ್ಲಿ ಸ್ನಾನ ಮಾಡಲು ಹೋಗಿ ಕಾಲುಜಾರಿ ಬಿದ್ದು, ಮೃತಪಟ್ಟ ಯುವಕ


ಈ ದಿವಸ ವಾರ್ತೆ
ವಿಜಯಪುರ: ಕೃಷಿ ಹೊಂಡದಲ್ಲಿ ಯುವಕನೊಬ್ಬ ಬಿದ್ದು ಸಾವಿಗೀಡಾದ ಘಟನೆ ಜಿಲ್ಲೆಯ ನಿಡಗುಂದಿ ಸಮೀಪದ ಹೆಬ್ಬಾಳ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.
ಮೃತನನ್ನು ಹೆಬ್ಬಾಳ ಗ್ರಾಮದ ಹುಸನಪ್ಪ ಹನುಮಂತ ತಳವಾರ (24) ಎಂದು ಗುರುತಿಸಲಾಗಿದೆ.
ಹುಸನಪ್ಪ ತಳವಾರ ಈತನು ಕೃಷಿ ಹೊಂಡದಲ್ಲಿ ಸ್ನಾನ ಮಾಡಲು ಹೋಗಿ ಕಾಲುಜಾರಿ ಬಿದ್ದು, ಮೃತಪಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tuesday, June 16, 2020

17-06-2020 EE DIVASA KANNADA DAILY NEWS PAPER

‘’ಕೋವಿಡ್-19 ಹಿನ್ನಲೆ ಸಂಕಷ್ಟಕ್ಕೆ ಒಳಗಾದ ಉದ್ಯಮಿದಾರರಿಗೆ ಸಾಲ ಸೌಲಭ್ಯ ಕಲ್ಪಿಸಿ’’ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ




ಈ ದಿವಸ ವಾರ್ತೆ
ವಿಜಯಪುರ : ಕೋವಿಡ್-19 ಹಿನ್ನಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಒಳಗಾದ ಉತ್ಪಾದನಾ ಮತ್ತು ಸೇವಾ ಘಟಕಗಳ ಸಣ್ಣ, ಅತೀ ಸಣ್ಣ ಹಾಗೂ ಮಧ್ಯಮ ಉದ್ಯಮಿದಾರರಿಗೆ ಸಕಾಲಕ್ಕೆ ಸಾಲ ನೀಡುವಲ್ಲಿ ನೆರವಾಗುವಂತೆ ಖಾಸಗಿ ಬ್ಯಾಂಕ್‍ಗಳಿಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಸೂಚಿಸಿದ್ದಾರೆ. 

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿಂದು ಆತ್ಮನಿರ್ಭರ ಮತ್ತು ಎಮರ್ಜನ್ಸಿ ಕ್ರೇಡಿಟ್ ಲೈನ್ ಗ್ಯಾರೆಂಟಿ ಯೋಜನೆ ಕುರಿತು ಆಯೋಜಿಸಲಾಗಿದ್ದ ವಿವಿಧ ಉದ್ಯಮೆಗಾರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೋವಿಡ್-19 ಹಿನ್ನಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಒಳಗಾದ ಉದ್ಯಮಿದಾರರ ಪುನಶ್ಚೇತನಕ್ಕಾಗಿ ಆತ್ಮನಿರ್ಭರ ಮತ್ತು ಎಮರ್ಜನ್ಸಿ ಕ್ರೇಡಿಟ್ ಲೈನ್ ಗ್ಯಾರೆಂಟಿ ಈ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು ಜಿಲ್ಲೆಯಲ್ಲಿ ಒಟ್ಟು 253 ಕೋಟಿ ರೂ,ಗಳನ್ನು ಸಾಲಕ್ಕಾಗಿ ಮೀಸಲಿಡಲಾಗಿದೆ. ಅರ್ಹರಿಗೆ ಇದರ ಸದುಪಯೋಗ ದೊರಕುವಂತೆ ನೋಡಿಕೊಳ್ಳಲು ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ಅದರಂತೆ ಕೋವಿಡ್-19 ಹಿನ್ನಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಜಿಲ್ಲೆಯ ಉದ್ಯಮಿದಾರರಿಗೆ ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಕೇನೆರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ಇಂಡಿಯನ್ ಒವರ್‍ಸಿಸ್ ಬ್ಯಾಂಕ್, ಪಂಜಾಬ್ ಮತ್ತು ಸಿಂಧ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಯು.ಸಿ.ಓ ಬ್ಯಾಂಕ್ ಮತ್ತು ಯುನಿಯನ್ ಬ್ಯಾಂಕ್ ಆಫ್ ಇಂಡಿಯಾಗಳ ಮೂಲಕ ಸಾಲ ಮಂಜೂರಾತಿ ಮಾಡಲಾಗುತ್ತಿದ್ದು, ಈವರಗೆ ಒಟ್ಟು 28 ಕೋಟಿ ರೂಗಳ ಸಾಲ ವಿತರಿಸಲಾಗಿದೆ ಎಂದು ಹೇಳಿದರು.

ಕೋವಿಡ್-19 ತೀವ್ರ ಸಂಕಷ್ಟ ಮತ್ತು ವಿಷಮ ಪರಿಸ್ಥಿತಿ ಇದಾಗಿದ್ದು ಆರ್.ಬಿ.ಐ ಮಾರ್ಗಸೂಚಿ ಮತ್ತು ನಿರ್ದೇಶನಗಳಂತೆ ಖಾಸಗಿ ಬ್ಯಾಂಕ್‍ಗಳು ಕೂಡಾ ಸಕಾಲಕ್ಕೆ ಅರ್ಹ ಫಲಾನುಭವಿ ಉದ್ಯಮಿದಾರರಿಗೆ ಸಾಲ ಮಂಜೂರಾತಿಗೆ ಕ್ರಮಕೈಗೊಳ್ಳಬೇಕು. ಕಷ್ಟದ ಈ ಪರಿಸ್ಥಿತಿಯಲ್ಲಿ ತೊಂದರೆ ಅನುಭವಿಸಿದ ಗ್ರಾಹಕರಿಗೆ ಸಕಾಲಕ್ಕೆ ನೆರವಾಗಬೇಕು. ಇದಕ್ಕೆ ಸ್ಪಂದಿಸದ ಬ್ಯಾಂಕ್‍ಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾತಿಗೆ ಕ್ರಮಕೈಗೊಳ್ಳುವುದರ ಜೊತೆಗೆ ಸರ್ಕಾರದ ಗಮನಕ್ಕೂ ಸಹ ತರುವುದಾಗಿ ಎಚ್ಚರಿಕೆ ನೀಡಿದರು.

ಈ ಯೋಜನೆಯ ರೋಪುರೇಷೆಗಳ ಬಗ್ಗೆ ಖಾಸಗಿ ಬ್ಯಾಂಕ್‍ಗಳಿಗೆ ಮನವರಿಕೆ ಮಾಡುವಂತೆ ತಿಳಿಸಿದ ಅವರು ಆರ್.ಬಿ.ಐ ಮಾರ್ಗಸೂಚಿಯನ್ವಯ ಕಾರ್ಯ ನಿರ್ವಹಿಸುವಂತೆ ಸೂಕ್ತ ತಿಳುವಳಿಕೆ ನೀಡಲು ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು 2020ರ ಅಕ್ಟೋಬರ್ 31ರ ರೊಳಗೆ ಈ ಯೋಜನೆಯಡಿ ಸೌಲಭ್ಯ ಕಲ್ಪಿಸಲು ಅವಕಾಶ ಇರುವುದರಿಂದ ಮತ್ತು ವ್ಯಾಪಾರ ವಹಿವಾಟಿಗೆ ಪ್ರೋತ್ಸಾಹದಾಯಕ ವಾಗಿರುವುದರಿಂದ ಇವುಗಳ ಲಾಭ ದೊರಕಿಸುವಂತೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಲೀಡ್ ಬ್ಯಾಂಕ್ ಮ್ಯಾನೇಜರ್ ಶ್ರೀ ಸೋಮನಗೌಡ ಅವರು ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಯಡಿ 3 ಲಕ್ಷ ರೂಗಳ ವರೆಗೆ ಸಾಲ ಪಡೆಯಲು ಅವಕಾಶವಿದ್ದು, ಅರ್ಹ ಸಣ್ಣ, ಅತೀ ಸಣ್ಣ ಮತ್ತು ಮದ್ಯಮ (ಎಂ.ಎಸ್.ಎಂ.ಇ) ಉದ್ಯಮಿದಾರರು ಸಂಬಂಧಪಟ್ಟ ಬ್ಯಾಂಕ್ ಶಾಖೆಗಳಿಗೆ ಸಂಪರ್ಕಿಸಿ ಸಾಲ ಸೌಲಭ್ಯ ಪಡೆಯಬಹುದಾಗಿದ್ದು, ಬರುವ ಅಕ್ಟೋಬರ್ 31 ರೊಳಗೆ ಮೊದಲು ಬಂದವರಿಗೆ ಪ್ರಥಮ ಆಧ್ಯತೆ ಮೇಲೆ ಸಾಲ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕೋರಿದ್ದಾರೆ. 

ಇದೇ ಸಂದರ್ಭದಲ್ಲಿ ವಿವಿಧ ಉದ್ಯಮಿಗಳೊಂದಿಗೆ ಸಂವಾದ ನಡೆಸಿ ವಿವಿಧ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಆಲಿಸಿದರು. ಸಭೆಯಲ್ಲಿ ಜಿಲ್ಲಾಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಟಿ.ಸಿದ್ದಣ್ಣ, ಲೀಡ್ ಬ್ಯಾಂಕ್ ಮ್ಯಾನೇಜರ್ ಸೋಮನಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.