Friday, June 19, 2020

20-06-2020 EE DIVASA KANNADA DAILY NEWS PAPER

ವಿಜಯಪುರ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಲಿಂಗರಾಜ್ ಎನ್. ಬಳ್ಳಾರಿ ಅವರ ನೇತೃತ್ವ: ಅಶೋಕ ಗಸ್ತಿ ಅವರಿಗೆ ಸೇಬು ಹಣ್ಣಿನ ಹಾರ ಹಾಕುವುದರ ಮೂಲಕ ವಿಶೇಷವಾಗಿ ಸನ್ಮಾನ


ದಿವಸ ವಾರ್ತೆ

ವಿಜಯಪುರ : ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡರಾದ ಹಿಂದುಳಿದ ವರ್ಗದ ನಾಯಕರಾದ ಸರಳ ಸಜ್ಜಿನಿಕೆ ವ್ಯಕ್ತಿ ಪಕ್ಷದ ನಿಷ್ಠಾವಂತ ಪ್ರಮಾಣಿಕ ಕಾರ್ಯಕರ್ತರಾದ ಅಶೋಕ ಗಸ್ತಿ ಅವರಿಗೆ ರಾಜ್ಯಸಭೆಗೆ ಕರ್ನಾಟಕದಿಂದ (ಎಂ.ಪಿ)ಆಗಿ ಆಯ್ಕೆಗೊಂಡಿರುವ ಹಿನ್ನೆಲೆ ಅವರಿಗೆ ವಿಜಯಪುರ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಲಿಂಗರಾಜ್ ಎನ್. ಬಳ್ಳಾರಿ ಅವರ ನೇತೃತ್ವದೊಂದಿಗೆ ಅಶೋಕ ಗಸ್ತಿ ಅವರ ನಿವಾಸ ರಾಯಚೂರನಲ್ಲಿ ಮೆನೆಗೆ ತೆರಳಿ ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸುವುದರೊಂದಿಗೆ ಸೇಬು ಹಣ್ಣಿನ ಹಾರ ಹಾಕುವುದರ ಮೂಲಕ ವಿಶೇಷವಾಗಿ ಸನ್ಮಾನ ಮಾಡಲಾಯಿತು.

       ಸಂದರ್ಭದಲ್ಲಿ ಸವಿತಾ ಸಮಾಜದ ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ರಾಘವೇಂದ್ರ ಇಟಗಿ, ವಿಠ್ಠಲ ಕಾಸೆದ್, ಮಲ್ಲೇಶ ನಾವಿ, ಗಣೇಶ ಬಳ್ಳಾರಿ, ಬಾಪು ಕ್ಷೀರಸಾಗರ, ಗಡ್ಡೆಪ್ಪ ನಾವಿ, ರಾಜಕುಮಾರ ನಾವಿ, ನರ್ಸಿಂಗ್ ಮೋತಕ್‌ಪಲ್ಲಿ, ಕಿರಣ ಹಡಪದ ಮುಂತಾದವರು ಇದ್ದರು.


ನೂತನ ಕುಲಪತಿಯಾಗಿ ಪ್ರೊ.ಓಂಕಾರ ಕಾಕಡೆ ನೇಮಕ



ಈ ದಿವಸ ವಾರ್ತೆ
ವಿಜಯಪುರ: ಹಾಲಿ ಕುಲಪತಿ ಪ್ರೊ..ಸಬಿಹಾ ಭೂಮಿಗೌಡ ಅವರು ನಾಲ್ಕು ವರ್ಷಗಳ ಸೇವೆಯ ನಂತರ ಜೂನ್ 19ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಓಂಕಾರ ಕಾಕಡೆ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಶ್ರೀ.ವಜುಬಾಯಿ ವಾಲಾ ಅವರು ಆದೇಶ ಹೊರಡಿಸಿದ್ದಾರೆ.  

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- 2000ನ ಸೆಕ್ಷನ್ 16 (2) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ಈ ನೇಮಕ ಮಾಡಲಾಗಿದೆ. ಇವರ ಅಧಿಕಾರ ಅವಧಿ 20-6-2020ರಿಂದ 13-12-2020ರ ವರೆಗೆ ಅಥವಾ ನೂತನ ಕುಲಪತಿಗಳ ನೇಮಕ ಇದರಲ್ಲಿ ಯಾವುದು ಮೊದಲೋ ಅಲ್ಲಿಯ ವರೆಗೆ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ಪ್ರೊ.ಸಬಿಹಾ ಭೂಮಿಗೌಡ ಅವರು ನೂತನ ಕುಲಪತಿ ಪ್ರೊ.ಓಂಕಾರ ಕಾಕಡೆ ಅವರಿಗೆ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಾಲ್ಕು ವರ್ಷಗಳ ಸೇವೆಯಿಂದ ನಿವೃತ್ತರಾದ ಪ್ರೊ.ಸಬಿಹಾ ಅವರನ್ನು ವಿಶ್ವವಿದ್ಯಾನಿಲಯದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಪ್ರೊ.ಸಬಿಹಾ ಅವರು ತಮ್ಮ ಮಾತೃ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠಕ್ಕೆ ಮರಳಲಿದ್ದಾರೆ ಎಂದು ವಿವಿ ಪ್ರಕಟಣೆ ತಿಳಿಸಿದೆ.


ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ನೇಮಕವಾಗಿರುವ ಪ್ರ್ರೊ.ಓಂಕಾರ ಕಾಕಡೆ ಅವರು, ಪ್ರೊ.ಸಬಿಹಾ ಭೂಮಿಗೌಡ ಅವರಿಂದ ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದರು.  ಚಿತ್ರದಲ್ಲಿ ಕುಲಸಚಿವೆ ಪ್ರೊ.ಆರ್.ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಪ್ರೊ.ಪಿ.ಜಿ.ತಡಸದ, ಆರ್ಥಿಕ ಅಧಿಕಾರಿ ಪ್ರೊ.ವಿಜಯಾ ಕೋರಿಶೆಟ್ಟಿ ಮತ್ತಿತರರು ಇದ್ದಾರೆ. 

ಡಾ.ಬಸವರಾಜ ಎಲ್. ಲಕ್ಕಣ್ಣನವರ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕಾರ


ಈ ದಿವಸ ವಾರ್ತೆ
ವಿಜಯಪುರ :  ಕರ್ನಾಟಕ ರಾಜ್ಯ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್  ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಜಯಪುರದಲ್ಲಿ ಶಿಕ್ಷಣ ಅಧ್ಯಯನ ವಿಭಾಗದ ಡೀನ ಮತ್ತು ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ಬಸವರಾಜ ಎಲ್. ಲಕ್ಕಣ್ಣನವರ ಅವರು ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಕುಲಸಚಿವರಾದ ಪ್ರೊ.ಡಾ. ಸುರೇಶ ವಿ. ನಾಡಗೌಡರ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು.
ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ವಿಷ್ಣುಕಾಂತ ಎಸ್.ಚಟಪಲ್ಲಿ ಅವರು ನೂತನ ಕುಲಸಚಿವರನ್ನು ಬರಮಾಡಿಕೊಂಡರು.

ಟಿಕ್ ಟಾಕ್ ಖಾತೆ ಕ್ಲೋಜ್ ಮಾಡಿ ಚೀನಾದ ವಿರುದ್ದ ಆಕ್ರೋಶ ಹೊರಹಾಕಿದ ಕಲಾವಿದರು



ದಿವಸ ವಾರ್ತೆ ವಿಜಯಪುರ : ಟಿಕ್ ಟಾಕ್ ಖಾತೆ ಕ್ಲೋಜ್ ಮಾಡಿ ಚೀನಾದ ವಿರುದ್ದ ಆಕ್ರೋಶ ಹೊರಹಾಕಿದ ಗುಮ್ಮಟನಗರಿ ಗಾನಯೋಗಿ ಸಂಘದ  ಟಿಕ್ ಟಾಕ್ ಕಲಾವಿದರು.

ಕಾಲ್ಕೆರೆದು ಜಗಳಕ್ಕೆ ನಿಂತು ಭಾರತದ ವಿರುದ್ಧ ಮಸಲತ್ತು ನಡೆಸುತ್ತಿರುವ ಡ್ರ್ಯಾಗನ್ ದೇಶ ಚೀನಾದ ವಿರುದ್ಧ ದೇಶದ ಉತ್ಪನ್ನಗಳು ಹಾಗೂ ಆ್ಯಪ್ ಗಳ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ.ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಸಾಮಾಜಿಕ ತಾಣದಲ್ಲಿ ಟ್ರೆಂಡ್  ಚೀನಾ ಆ್ಯಪ್ ವಿರುದ್ಧದ ಅಭಿಯಾನ ವಿವಿಧ ಸಾಮಾಜಿಕ ತಾಣಗಳಲ್ಲಿ ಟ್ರೆಂಡ್ ಸೃಷ್ಟಿಸಿದ್ದು, ಸಾಫ್ಟ್ವೇರ್ ಇನ್ ವೀಕ್, ಹಾರ್ಡ್ವೇರ್ ಇನ್ ಇಯರ್ ಎನ್ನುವ ಹ್ಯಾಶ್ಟ್ಯಾಗ್ ಕೂಡ ಟ್ರೆಂಡ್ ಆಗಿದ್ದು, ಮೊದಲಿಗೆ ಚೀನಾದ ಆ್ಯಪ್, ಸಾಫ್ಟ್ವೇರ್ಗಳನ್ನು ಕಿತ್ತೊಗೆಯುವ ಮತ್ತು ನಂತರದಲ್ಲಿ ಹಂತಹAತವಾಗಿ ಒಂದೊAದೆ ಚೀನಾ ಸರಕುಗಳನ್ನು ನಿರ್ಬಂಧಿಸುವ ಸಂದೇಶವನ್ನು ಜನರು ಹಂಚಿಕೊಳ್ಳುತ್ತಿದ್ದಾರೆ. ಅಭಿಯಾನಕ್ಕೆ ಸಾಥ್ ನೀಡಿರುವ ಗುಮ್ಮಟನಗರಿ ಟಿಕಟಾಕ್ ಕಲಾವಿದರಾದ ಪ್ರಕಾಶ ಆರ್.ಕೆ, ರವಿ ಆರ್.ಎಸ್.ವಿಕಾಸ ಕೆ, ಶ್ರೀಶೈಲ, ಸಚಿನ್ ವಾಲಿಕರ್, ಸಚಿನ್ ಹಳ್ಳಿಕಟ್ಟಿ, ರಾಜಕುಮಾರ್ ಹೊಸಟ್ಟಿ, ಕಿರಣ್ ಶಿವಣ್ಣನವರ, ಸಂತೋಷ್ ಚವಾಣ್, ಪ್ರಮೋದ್ ಚವಾಣ್, ಮಹೇಶ್ ಕುಂಬಾರ್, ಮತ್ತಿತರರು ತಮ್ಮ ಟಿಕಟಾಕ್ ಖಾತೆ ಕ್ಲೋಜ್ ಮಾಡಿ ನಮಗೆ ದೇಶ ಮೊದಲು, ದೇಶಕ್ಕಿಂತ ಮೀಗಿಲಾದ್ದದ್ದು ಯಾವದು ಇಲ್ಲಾ,  ಪ್ರಕಾಶ್. ಆರ್. ಕೆ.ಯುಟ್ಯೂಬ್ ಚಾನೆಲ್ ನಲ್ಲಿ ತಮಗೆ ಎಂದಿನAತೆ ಮನೋರಂಜನೆ ಪಡಿಸುತ್ತೇವೆ ಎಂದರು.

ಆದ್ರೆ  ಚೀನಾ ಆ್ಯಪ್ ಗಳನ್ನು ಬಳಸೊದಿಲ್ಲಾ ಎಂದು ವಿಡಿಯೋ ಸಂದೇಶ ಕಳಿಸುವ ಮೂಲಕ ದೇಶಪ್ರೇಮ ಮೆರೆದಿದ್ದಾರೆ.