Friday, August 18, 2023
Thursday, August 17, 2023
ಮುರುಗೇಶ ನಿರಾಣಿ ದಲಿತ ವಿರೋಧಿ ಕೈಗಾರಿಕಾ ಮಾಜಿ ಸಚಿವ: ಶ್ರೀನಿವಾಸನ ಆರೋಪ
ವಿಜಯಪುರದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಸಿ.ಎ. ಶ್ರೀನಿವಾಸ ಮಾತನಾಡಿದರು.
ನಗರದಲ್ಲಿ ಗುರುವಾರ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುರುಗೇಶ ನಿರಾಣಿ ಕೈಗಾರಿಕಾ ಸಚಿವರಾಗಿದ್ದ ಸಂದರ್ಭ, ದಲಿತರಿಗೆ ಬಹಳಷ್ಟು ವಂಚಿಸಿದ್ದು, ಕೆಐಎಡಿಬಿಯ ನಿವೇಶನ ಹಂಚಿಕೆಯ ಕಮಿಟಿಯಲ್ಲಿ ದಲಿತರಿಗೆ ಇಟ್ಟಿದ್ದ ಜಾಗವನ್ನು ಬೇರೆಯವರಿಗೆ ಹಂಚಿಕೆ ಮಾಡಿರುವುದು ಸರಿಯಲ್ಲ. ಈ ಸಂಬಂಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿ ಇಟ್ಟಿದ್ದ 675 ಎಕರೆ ಜಮೀನನ್ನು ಬೇರೆಯವರಿಗೆ ನೀಡಿದ್ದಾರೆ. ಈ ಬಗ್ಗೆ ಮುರುಗೇಶ ನಿರಾಣಿಯವರ ಗಮನಕ್ಕೆ ತಂದರೂ ಅಂದು ಅವರು ಬಗೆಹರಿಸುವ ಪ್ರಯತ್ನವನ್ನು ಮಾಡಲಿಲ್ಲ. ಇದು ಅವರ ದಲಿತ ವಿರೋಧಿ ನೀತಿಯಾಗಿದೆ. ಈ ಅಕ್ರಮವನ್ನು ದಾಖಲೆ ಸಮೇತ ನಾನು ಸಾಬೀತು ಪಡಿಸುವೆ. ಅಲ್ಲದೆ ಈ ಬಗ್ಗೆ ನನ್ನ ಬಳಿ ಸಾಕ್ಷ್ಯಗಳು ಇವೆ ಎಂದರು.
ಕೆಐಎಡಿಬಿಯ ನಿವೇಶನ ಹಂಚಿಕೆಯಲ್ಲಿ ಈ ಹಿಂದೆ ಪರಿಶಿಷ್ಟ ಜಾತಿಯವರಿಗೆ ಅನ್ಯಾಯವಾಗಿರುವ ಕುರಿತು ಸದ್ಯ ಸರ್ಕಾರದ ಗಮನಕ್ಕೆ ತಂದಿರುವೆ. ಕೂಡಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದರು.
ಇನ್ನು ವಿಜಯಪುರ- ಬಾಗಲಕೋಟೆ ಅವಳಿ ಜಿಲ್ಲೆಯ ದಲಿತ ಉದ್ದಿಮೆದಾರರ ಸಂಘದ ಜಿಲ್ಲಾ ಘಟಕಗಳ ಅಡಿಯಲ್ಲಿ ನಗರದಲ್ಲಿ ದಲಿತ ಉದ್ದಿಮೆದಾರರ ಐತಿಹಾಸಿಕ ಸಮ್ಮೇಳನ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಭೇಟಿಯಾಗಿ ಮನವಿ ಮಾಡಲಾಗಿದ್ದು, ಅವರು ಸಮಾವೇಶಕ್ಕೆ ಆಗಮಿಸಲು ಒಪ್ಪಿಕೊಂಡಿದ್ದಾರೆ. ಅತಿ ಶೀಘ್ರದಲ್ಲಿ ನಗರದಲ್ಲಿ ದಲಿತ ಉದ್ದಿಮೆದಾರರ ಐತಿಹಾಸಿಕ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ ಎಂದರು.
ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಉದ್ದಿಮೆದಾರರು ಹೆಚ್ಚಿದ್ದು, ಈ ನಿಟ್ಟಿನಲ್ಲಿಯೂ ಬೆಳಗಾವಿ ಜಿಲ್ಲೆಯಲ್ಲಿಯೂ ಜವಳಿ ಕ್ಷೇತ್ರದ ದಲಿತ ಕೈಗಾರಿಕಾ ಉದ್ದಿಮಿಗಳ ಬೃಹತ್ ಸಮಾವೇಶ ಕೂಡಾ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಜವಳಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರಿಗೂ ಭೇಟಿ ಮಾಡಿ ಮನವಿ ಮಾಡಿದ್ದು, ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಿವೃತ್ತ ಅಧಿಕಾರಿ ರಾಜಶೇಖರ ಯಡಿಹಳ್ಳಿ ಇದ್ದರು.
Wednesday, August 16, 2023
Tuesday, August 15, 2023
ಸ್ವಾತಂತ್ರ್ಯ ಹೋರಾಟಗಾರರು ಹಾಕಿ ಕೊಟ್ಟ ದಾರಿಯಲ್ಲಿ ನಡೆದು ಜೀವನ ಸಾರ್ಥಕಗೊಳಿಸೋಣ : ಸಿಇಓ ರಾಹುಲ್ ಶಿಂಧೆ
ವಿಜಯಪುರ : ನಮ್ಮ ಹಿರಿಯರ ಶ್ರಮ ಮತ್ತು ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಸ್ವಾತಂತ್ರ್ಯ ಭಾರತದಲ್ಲಿ ಜನಿಸಿದ ನಾವೆಲ್ಲರೂ ನಿಜಕ್ಕೂ ಹೆಮ್ಮೆ ಪಡಬೇಕು. ಹಿರಿಯರು, ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಬಲಿದಾನಗೈದ ಹೋರಾಟಗಾರರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯೋಣ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಹೇಳಿದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತಿಯ ಆವರಣದಲ್ಲಿ ಧ್ವಜಾರೋಹಣ ನೇರೆವೇರಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸೇರಿದಂತೆ ಜಿಲ್ಲಾ ಪಂಚಾಯತಿಯ ಎಲ್ಲ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದಲ್ಲಿ ಧ್ವಜಾರೋಹಣ
ಈ ದಿವಸ ವಾರ್ತೆ
ವಿಜಯಪುರ : ನಗರದ ಜಿಪಂ ರಸ್ತೆಯಲ್ಲಿರುವ ಹೊಸ ಪತ್ರಿಕಾ ಭವನ ಹಾಗೂ ಹಳೆ ತಹಸೀಲ್ದಾರ್ ಕಚೇರಿ ಬಳಿಯಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಹಾಗೂ ನಿವೃತ್ತ ವಾರ್ತಾಧಿಕಾರಿ ಪಿ.ಎಸ್. ಹಿರೇಮಠ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಬಳಿಕ ಸಾಮೂಹಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲಿಸಲಾಯಿತು.
ಉಪಾಧ್ಯಕ್ಷ ಫಿರೋಜ್ ರೋಜಿನದಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಕಾರ್ಯದರ್ಶಿ ಅವಿನಾಶ ಬಿದರಿ, ಖಜಾಂಚಿ ರಾಹುಲ್ ಆಪ್ಟೆ, ಕಾರ್ಯಕಾರಿಣಿ ಸದಸ್ಯ ಸಮೀರ ಇನಾಂದಾರ, ನಾಮನಿರ್ದೇಶನ ಸದಸ್ಯೆ ಕೌಶಲ್ಯ ಪನಾಳಕರ, ಪತ್ರಕರ್ತರಾದ ಸೀತಾರಾಮ ಕುಲಕರ್ಣಿ, ಶಶಿಕಾಂತ ಮೆಂಡೇಗಾರ, ಬಸವರಾಜ ಕುಂಬಾರ, ದೇವೇಂದ್ರ ಹೆಳವರ, ಸುಮೀತರಾಜಕುಮಾರ ಶಿವಶರಣ,ಕಲ್ಲಪ್ಪ ಶಿವಶರಣ, ಲಾಯಪ್ಪ ಇಂಗಳೆ, ಎಸ್.ಬಿ. ಪಾಟೀಲ್, ಬಾಲು ಸಾರವಾಡ, ನಾಗರಾಜ ಚೋಳಕೆ, ಕೆ.ಕೆ. ಬನ್ನಟ್ಟಿ, ಜಿ.ಬಿ. ಲೋಕುರಿ, ಮಲಕಪ್ಪ ಹೂಗಾರ, ಶಿವಕುಮಾರ ಉಪ್ಪಿನ, ವಿಠ್ಠಲ ಲಂಗೋಟಿ, ಇಸ್ಮಾಯಿಲ್ ಮುಲ್ಲಾ, ಅಲ್ತಾಫ ಯಂಬತ್ನಾಳ, ಮತ್ತಿತರರಿದ್ದರು.



