Friday, November 17, 2023

18-11-2023 EE DIVASA KANNADA DAILY NEWS PAPER

ನ.20ರಂದು ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಶತಮಾನೋತ್ಸವ ಭವನ ಉದ್ಘಾಟನೆ

ವಿಜಯಪುರ : ಅಖಿಲ ಭಾರತ ಸಹಕಾರ ಸಪ್ತಾಹದ 70ನೇ ಸಮಾರೋಪ ಸಮಾರಂಭ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ ಶತಮಾನೋತ್ಸವ ಭವನ ಉದ್ಘಾಟನೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಮತ್ತು ಸಹಕಾರ ಸಚಿವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದು, ಸಮಾರಂಭದ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರೂ ಆದ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಹೇಳಿದರು.

ನಗರದ ಕೇಂದ್ರ ಸಹಕಾರಿ ಬ್ಯಾಂಕ್‍ನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನವೆಂಬರ್ 20 ರಂದು ನಡೆಯು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲೆಯ ಡಿಸಿಸಿ ಸಂಘಗಳ ಸದಸ್ಯರು, ವಿವಿಧ ಸಹಕಾರಿ ಸಂಘಗಳ ಸಹಕಾರಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೆ ವೈಯಕ್ತಿಕವಾಗಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಬ್ಯಾಂಕಿನ ಎಲ್ಲಾ ನಿರ್ದೇಶಕರು, ಸದಸ್ಯರು ಸೇರಿ ಸಮಾರೋಪ ಸಮಾರಂಭದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಸಮಾರಂಭದಲ್ಲಿ ಸಹಕಾರಿ ಇಲಾಖೆ ಎಲ್ಲಾ ಹಿರಿಯ, ಮಾಜಿ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ದೇಶದಲ್ಲಿ ಎಲ್ಲರಿಗಿಂತಲು ಮೊದಲು ರಾಜ್ಯದಲ್ಲಿ ಸಹಕಾರಿ ಚಳುವಳಿ ಪ್ರಾರಂಭವಾದರೂ ಮಹಾರಾಷ್ಟ್ರ, ಗುಜರಾತ್ ಸಹಕಾರಿ ರಂಗದಲ್ಲಿ ಮುಂದಿದೆ. ಮಹಾರಾಷ್ಟ್ರ, ಗುಜರಾತ್ ಮಾದರಿಯಲ್ಲಿ ರಾಜ್ಯಕ್ಕೆ ಪೆÇ್ರೀತ್ಸಾಹ ಸಿಗಬೇಕು ಎನ್ನುವುದು  ಎಲ್ಲಾ ಸಹಕಾರಿಗಳ ಮಹದಾಸೆಯಾಗಿದೆ.  ನಮ್ಮಲ್ಲೂ ಸಹಕಾರ ಪೆÇ್ರೀತ್ಸಾಹ ನೀಡಿದರೆ ಜನರಿಗೆ ಇನಷ್ಟು ಆಸಕ್ತಿ ಮೂಡಿ ಸಹಕಾರಿ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಇದಕ್ಕೆ ಪೂರಕವಾಗಿ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸೇರಿದಂತೆ ಸಚಿವರುಗಳಿಗೆ ಎಲ್ಲಾ ಸಹಕಾರಿಗಳು ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ನಿರ್ದೇಶಕರು ಸೇರಿ ಮನವಿ ಮಾಡಿಕೊಳ್ಳಲಿದ್ದೇವೆ ಎಂದು ಅವರು ತಿಳಿಸಿದರು.

ಇದು ಪಕ್ಷಾತೀತ ಸಮಾರಂಭ. ಕೇವಲ ಸಹಕಾರಿ ರತ್ನಗಳಿಗೆ ಪ್ರಶಸ್ತಿ, ಪೆÇ್ರೀತ್ಸಾಹ ನೀಡುವ  ಕಾರ್ಯಕ್ರಮ ಅμÉ್ಟೀ ಅಲ್ಲ. ಜೊತೆಗೆ ಸಹಕಾರಿ ತತ್ವಕ್ಕೆ  ಶಕ್ತಿ ತುಂಬಬೇಕು ಎನ್ನುವ ಪ್ರಯತ್ನವಾಗಿದೆ. ಸಮಾರೋಪ ಸಮಾರಂಭದಲ್ಲಿ ಸಹಕಾರಿ ಕಟ್ಟಡಗಳು ಉದ್ಘಾಟನೆ ನೆರವೇರಲಿವೆ. ಸಮಾರಂಭಕ್ಕೆ  ಅಂದಾಜು ಮೂವತ್ತು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಸಿದ್ಧತೆಗಳ ಪರಿಶೀಲನೆ : ನವೆಂಬರ್ 20 ರಂದು ನಡೆಯುವ ಸಮಾರಂಭಕ್ಕೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಹಕಾರ ಸಚಿವರು ಸೇರಿದಂತೆ ವಿವಿಧ ಗಣ್ಯರು ಆಗಮಿಸುವ ಹಿನ್ನಲೆಯಲ್ಲಿ ವೇದಿಕೆ ವಿನ್ಯಾಸ, ಆಸನಗಳ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳ ಕುರಿತು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರೂ ಆದ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಪರಿಶೀಲನೆ ನಡೆಸಿದರು.


Thursday, November 16, 2023

17-11-2023 EE DIVASA KANNADA DAILY NEWS PAPER

ನ.18ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ವಿಜಯಪುರ : 110 ಕೆವಿ ದೇವರಹಿಪ್ಪರಗಿ-ಸಿಂದಗಿ ವಿದ್ಯುತ್ ಪ್ರಸರಣ  ಜೋಡಿ ಮಾರ್ಗದಲ್ಲಿ ವಾಹಕಗಳ ಮತ್ತು ಗೋಪುರಗಳ ಬದಲಾವಣೆ ಕಾಮಗಾರಿ ಕೈಗೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ 33 ಕೆವಿ ಗೋಲಗೇರಿ ಹಾಗೂ 33 ಕೆವಿ ಕಲಕೇರಿ ಮತ್ತು 11 ಕೆವಿ ಬ್ಯಾಕೋಡ ಹಾಗೂ 11 ಕೆವಿ ಬಂದಾಳ ಐಪಿ ಮಾರ್ಗಗಳಲ್ಲಿ  ನವೆಂಬರ್ 18ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ. 


ಅತೀಸಾರ ಬೇಧಿಯಿಂದಾಗುವ ಸಾವಿನ ಪ್ರಮಾಣ ಶೂನ್ಯಕ್ಕೆ : ಡಾ.ಬಸವರಾಜ ಹುಬ್ಬಳ್ಳಿ

ವಿಜಯಪುರ : ಅತೀಸಾರ ಭೇದಿಯಿಂದ ಉಂಟಾಗುವ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅತೀಸಾರ ಭೇದಿಗೆ ಒಳಗಾಗಬಾರದು ಎಂಬ ಉದ್ದೇಶದಿಂದ ತೀವ್ರಗೊಂಡ ಅತೀಸಾರ ಬೇಧಿ ನಿಯಂತ್ರಣ ಪಾಕ್ಷಿಕ (ಐಡಿಸಿಎಫ್) ಕಾರ್ಯಕ್ರಮ ಅನುಷ್ಟಾನ ಮಾಡಲಾಗುತ್ತಿದೆ. ಇಲಾಖೆಯ ವೈದ್ಯಾಧಿಕಾರಿಗಳು ನರ್ಸಿಂಗ್ ಅಧಿಕಾರಿಗಳು ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡಿ, ಅತೀಸಾರ ಬೇಧಿಯಿಂದಾಗುವ ಸಾವಿನ ಪ್ರಮಾಣ ಶೂನ್ಯಕ್ಕೆ ತರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ  ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ತೀವ್ರತರ ಅತೀಸಾರ ನಿಯಂತ್ರಣ ಪಾಕ್ಷಿಕ, ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಹಾಗೂ ನ್ಯುಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನ್ಯುಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರಿಯೆ ಕಾರ್ಯಕ್ರಮದ ಬಗ್ಗೆ ಆಶಾ ಮತ್ತು ಪಿ.ಹೆಚ್.ಸಿ.ಓ ಅವರು ಮನೆ ಮನೆಗೆ ತೆರಳಿ ನ್ಯೂಮೊನಿಯಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಮಕ್ಕಳಲ್ಲಿ ಶ್ವಾಸಕೋಶದ ಸೋಂಕು, ಕಫ ಗಟ್ಟುವಿಕೆಯ ಲಕ್ಷಣಗಳು ಕಂಡು ಬಂದರೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕರು ಮಾತನಾಡಿ, ನವಜಾತ ಶಿಶು ಕಾರ್ಯಕ್ರಮ ಬಹು ಮುಖ್ಯವಾದದ್ದು, ಶಿಶು ಮರಣ ದರ ಕಡಿಮೆ ಮಾಡಲು ಇದೊಂದು ಪ್ರಮುಖ ಅಸ್ತ್ರವಾಗಿದೆ. ಬಾಲ್ಯದಿಂದ 7 ದಿನದೊಳಗಾಗಿ ನವಜಾತ ಶಿಶುಗಳಿಗೆ ತೊಂದರೆಯಾದರೆ ತಕ್ಷಣ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಕೆ.ಡಿ.ಗುಂಡಬಾವಡಿ ಅವರು ಮಾತನಾಡಿ, ಈ ಕಾರ್ಯಕ್ರಮ ಸಮರ್ಪಕ ಅನುಷ್ಠಾನಕ್ಕೆ ಇಲಾಖೆಯ ಸಮನ್ವಯತೆ ಅಗತ್ಯವಾಗಿದ್ದು,  ತೀವ್ರತರ ಅತೀಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ರೂಪಿಸಿ ಅನುಷ್ಟಾನಕ್ಕೆ ತರಲಾಗುತ್ತಿದ್ದು, ಅತೀಸಾರ ಭೇದಿಯಿಂದ ಅಪೌಷ್ಟಿಕತೆ, ನಿರ್ಜಲೀಕರಣ ಮತ್ತು ಧೀರ್ಘಾವಧಿ ಕಾಯಿಲೆಗಳಿಗೆ ಶಿಶುಗಳು ತುತ್ತಾಗುತ್ತಾರೆ. ಅತೀಸಾರ ಬೇಧಿಗೆ ಪ್ರಮುಖವಾಗಿ ಅನೈರ್ಮಲ್ಯ, ಕಲುಷಿತ ನೀರು, ಸ್ವಚ್ಛತೆಯ ಕೊರತೆ, ಅನಕ್ಷರತೆ ಕಾರಣಗಳಾಗಿದ್ದು ಈ ಬಗ್ಗೆ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡಿ ಅರಿವು ಮೂಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.  

ಈ ಕಾರ್ಯಕ್ರಮದಲ್ಲಿ ಸ್ಥಾನಿಕ ವೈದ್ಯಾಧಿಕಾರಿ ಡಾ. ಇಕಲು ರಾಠೋಡ,  ಜಿಲ್ಲಾ ಆಯುಷ್ ಅಧಿಕಾರಿ ಡಾ.ಆರ್.ಎಸ್. ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪರುಶುರಾಮ ಹಿಟ್ನಳಿ,  ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್ ಬಾಗವಾನ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಮತ್ತು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಮಹಾದೇವ ನಿಲಂಗಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.  

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


ಪಂಢರಾಪುರ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ

ವಿಜಯಪುರ : ಮಹಾರಾಷ್ಟ್ರದ ಪಂಢರಪುರದಲ್ಲಿ ದಿನಾಂಕ: 19-11-2023 ರಿಂದ 25-11-2023ರವರೆಗೆ ನಡೆಯುವ ಕಾರ್ತಿಕ ಏಕಾದಶಿ ಜಾತ್ರೆ ಅಂಗವಾಗಿ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ವಿಶೇಷ ಸಾರಿಗೆ ವ್ಯವ್ಯಸ್ಥೆ ಕಲ್ಪಿಸಲಾಗಿದೆ. ಜಾತ್ರೆಯ ಅಂಗವಾಗಿ ವಿಜಯಪುರ ವಿಭಾಗದ ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು.

ಒಂದೇ ಗುಂಪಿನಿಂದ ಪ್ರಾಯಾಣಿಸುವ ಕನಿಷ್ಠ 55 ಜನ ಪ್ರಯಾಣಿಕರು ಲಭ್ಯವಾದಲ್ಲಿ ಅವರ ಸ್ವಸ್ಥಳದಿಂದಲೇ ನೇರವಾಗಿ ಪಂಢರಪುರಕ್ಕೆ ಬಸ್ಸಿನ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಬಸ್ ನಿಲ್ದಾಣ ವಿಜಯಪುರ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ: 7760992258, ಘಟಕ ವ್ಯವಸ್ಥಾಪಕರು ವಿಜಯಪುರ-1: ಮೊ: 7760992263, ವಿಜಯಪುರ-2 ಮೊ: 7760992264, ವಿಜಯಪುರ-3 ಮೊ: 7760914008, ಇಂಡಿ ಮೊ: 7760992265, ಸಿಂದಗಿ ಮೊ: 7760992266, ಮುದ್ದೇಬಿಹಾಳ ಮೊ: 7760992267, ತಾಳಿಕೋಟ ಮೊ: 7760992268, ಬಸವನಬಾಗೇವಾಡಿ ಮೊ: 7760992269, ಕೇಂದ್ರ ಬಸ್ ನಿಲ್ದಾಣ ವಿಜಯಪುರ ದೂರವಾಣಿ ಸಂಖ್ಯೆ 08352-251344 ಗೆ ಸಂಪರ್ಕಿಸಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಪದವಿ ಪ್ರಶಸ್ತಿಗಳಿಗಿಂತ ಸಾಧನೆಯೇ ಸರ್ವಶ್ರೇಷ್ಠ: ನ್ಯಾಯವಾದಿ ಶ್ರೀಧರ ಕುಲಕರ್ಣಿ

ವಿಜಯಪುರ: ಜೀವನದಲ್ಲಿ ಹಣ ಅಧಿಕಾರ ಅಂತಸ್ತು ಪದವಿ ಪ್ರಶಸ್ತಿಗಳಿಗಿಂತ ಫಲಾಪೇಕ್ಷೆ ಇಲ್ಲದ ಸತತ ಸಾಧನೆಯೇ ಸರ್ವಶ್ರೇಷ್ಠ ಎಂದು ಖ್ಯಾತ ಹಿರಿಯ ನ್ಯಾಯವಾದಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶ್ರೀಧರ ಕುಲಕರ್ಣಿ ನುಡಿದರು.

ನಗರದ ಮನಗೂಳಿ ರಸ್ತೆಯ ಬಾಲಕಿಯರ ಬಾಲಮಂದಿರದಲ್ಲಿ ಏರ್ಪಡಿಸಿದ್ದ ದೀಪಾವಳಿ ಸಂಭ್ರಮ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ನ್ಯಾಯವಾದಿ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಶ್ರೀಧರ ಕುಲಕರ್ಣಿಯವರಿಗೆ ಏರ್ಪಡಿಸಿದ ಸನ್ಮಾನ್ಯ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಫಲಾಪೇಕ್ಷೆ ಇಲ್ಲದ ಸೇವೆ ಮಾಡಿದರೆ ಪದವಿ ಪ್ರಶಸ್ತಿ ತಾನಾಗಿಯೇ ಲಭಿಸುತ್ತವೆ. ಅವುಗಳ ಹಿಂದೆ ನಾವು ಹೋಗದೆ ಸದ್ದಿಲ್ಲದೆ ಸಮರ್ಪಣಾಭಾವದಿಂದ ಸೇವೆ ಮಾಡಬೇಕು. ಅದು ಭಗವಂತನಿಗೂ ಇಷ್ಟವಾಗುವದಲ್ಲದೇ ಆತ್ಮತೃಪ್ತಿಯನ್ನು ನೀಡುತ್ತದೆ. ಮಕ್ಕಳು ತಮ್ಮ ಪ್ರತಿಭೆ ಸ್ವ ಸಾಮಥ್ರ್ಯವನ್ನು ಗುರುತಿಸಿಕೊಂಡು ಆಯಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡಬೇಕು ಹಾಗೂ ಕೀರ್ತಿವಂತರಾಗಬೇಕೆಂದು ಹಾರೈಸಿ.  ತಮಗೆ ದೊರೆತ ಪ್ರಶಸ್ತಿ ಮಕ್ಕಳಿಗೆ ಸಮರ್ಪಿತ ಎಂದರು.

ಉದ್ಘಾಟಕರಾಗಿ ಆಗಮಿಸಿದ್ದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಹಾಗೂ ನ್ಯಾಯವಾದಿ ದಾನೇಶ ಅವಟಿ  ಸಸಿಗೆ ನಿರೇರೆದು ಕಾರ್ಯಕ್ರಮ ಉದ್ಘಾಟಿಸಿ ಮಾನವನ ಅಂತರಂಗದಲ್ಲಿ ಹುದುಗಿದ ಪ್ರತಿಭೆಯನ್ನು ಹೊರಗೆಡಹುದೇ ಶಿಕ್ಷಣ. ಅಂತಹ ಒಳ್ಳೆಯ ಶಿಕ್ಷಣ ಸಂಸ್ಕಾರ ಹೊಂದಿ ಜೀವನದಲ್ಲಿ ಮಕ್ಕಳು ಮುಂದೆ ಬರಬೇಕೆಂದು ಕರೆ ನೀಡಿದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಮತ್ತು ನ್ಯಾಯವಾದಿಗಳಾದ ಸೂರ್ಯಕಾಂತ ಬಿರಾದಾರ, ಹಾಗೂ ಯಲ್ಲಪ್ಪ ಈರಕಲ್ ಮಕ್ಕಳ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು. ಹಾಗೂ ದೀಪಾವಳಿ ಸಂಭ್ರಮ ಪ್ರತಿಯೊಬ್ಬರಿಗೂ ಸುಖ ಶಾಂತಿ ನೆಮ್ಮದಿ ತರಲಿ ಎಂದು ಹಾರೈಸಿದರು.

ರೋಹಿಣಿ ದೇಸಾಯಿ, ಜಯಶ್ರಿ ಗುಗ್ಗರಿ, ರೇಣುಕಾ ಕಾಂಬಳೆ, ಲತಾ ಹಿರೇಮಠ, ಈರಮ್ಮ ಶ್ರೀಕಂಡೆ, ವಿದ್ಯಾ ನಾಗೋಡ, ಗೀತಾ ಮಾದರ, ರಾಧಾ ಜಗದಾಳೆ, ಭುವನೇಶ್ವರಿ ಗುಗ್ಗರಿ, ಶೋಭಾ ಸದಲಗಿ, ರೇಣುಕಾ ಪಾಟೀಲ ಉಪಸ್ಥಿತರಿದ್ದರು. ಮಕ್ಕಳಿಂದ ವಿವಿಧ ಹಾಡು ನೃತ್ಯ, ಮನರಂಜನಾ ಕಾರ್ಯಕ್ರಮ ಜರುಗಿದವು.

ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿ ಶ್ರೀಮತಿ ಸುಮಂಗಲಾ ಕರಿಗಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯೋಪಾದ್ಯಾಯಿನಿ ಸರ್ವ ಮಂಗಳ ಹಿರೇಮಠ ನಿರೂಪಿಸಿದರು. ಗೃಹಮಾತೆ ರಂಜಿತಾ ಬೋಳಬಂಡಿ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು