Monday, December 4, 2023

ಮುಂಬರುವ ಲೋಕಸಭೆ ಚುನಾವಣೆಯ ಬಿಜೆಪಿ ಗೆಲುವಿನ ಮುನ್ನುಡಿ : ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ

ವಿಜಯಪುರ:

 ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಮುಂಬರುವ ಲೋಕಸಭೆ ಚುನಾವಣೆಯ ಬಿಜೆಪಿ ಗೆಲುವಿನ ಮುನ್ನುಡಿಯಾಗಿದ್ದು, ಈ ಗೆಲುವಿನ ನಗೆ ಇದೇ ರೀತಿ ಮುನ್ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಪಕ್ಷಗಳು ಎಷ್ಟೇ ಬಿಜೆಪಿ ಬಗ್ಗೆ ವಿರೋಧ ನಿಲುವು ಬಿತ್ತಲು ಪ್ರಯತ್ನಿಸಿದರೂ ಸಹ ಜನತೆ ಬಿಜೆಪಿಗೆ ಆಶೀರ್ವಾದ ಮಾಡಿ ಮತ್ತೊಮ್ಮೆ ಮೋದಿ ಎನ್ನುವ ಸಂದೇಶವನ್ನು ಈ ಚುನಾವಣೆ‌ ಮೂಲಕ ಇಂದೇ ರವಾನಿಸಿದ್ದಾರೆ. ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸಘಢ  ಹೀಗೆ ಮೂರು ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಪ್ರಧಾನಮಂತ್ರಿ ‌ನರೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಶುದ್ದ ಆಡಳಿತ,‌ ಬಿಜೆಪಿ ಜನಪರ ಚಿಂತನೆ,ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಇದು ಖಂಡಿತವಾಗಿಯೂ ಲೋಕಸಭಾ ಚುನಾವಣೆ ದಿಕ್ಸೂಚಿಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅರಳುವುದು ಖಚಿತವಾಗಿದೆ, ಈ ಗೆಲುವು ಸಮಸ್ತ ಕಾರ್ಯಕರ್ತರ ಗೆಲುವಾಗಿದೆ ಎಂದು ಅವರು ಹೇಳಿದ್ದಾರೆ.
ಕಿಸಾನ್ ಸಮ್ಮಾನ್, ಉಜ್ವಲ ಯೋಜನೆ, ಜನಧನ್ ಹೀಗೆ ಜನರನ್ನು ನೇರವಾಗಿ ತಲುಪುವ ಅನೇಕ ಯೋಜನೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರೂಪಿಸಿದೆ, ಹೀಗಾಗಿ ಅಭಿವೃದ್ಧಿಗೆ ಜನತೆ ಬಿಜೆಪಿಗೆ‌ ಬೆಂಬಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

Saturday, December 2, 2023

ವಿ ಪಿ ಸಿಂಗ್ ಪ್ರಶಸ್ತಿ: ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿಗೆ ಪ್ರಧಾನ

ಬೆಂಗಳೂರು:  ಶುಕ್ರವಾರ ಸಂಜೆ ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ಐಎಚ್‌ಎಸ್‌ ಪ್ರಕಾಶನ ಸಹಯೋಗದಲ್ಲಿ ‘ಮಂಡಲ್‌ ವರದಿ ಆಗಿದ್ದೇನು?’ ವಿಷಯ ಕುರಿತು ವಿಚಾರ ಸಂಕಿರಣ ಅಂಗವಾಗಿ ಕರ್ನಾಟಕ ರಾಜ್ಯ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ, ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಗೌರವಾಧ್ಯಕ್ಷರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ 

ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾದ ಪ್ರೊ.ಬಿ.ಕೆ.ರವಿ ಅವರಿಗೆ ವಿ ಪಿ ಸಿಂಗ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಎಚ್‌.ಎಂ.ರೇವಣ್ಣ, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌, ಮಾಜಿ ಸಚಿವ ಎಚ್‌.ಆಂಜನೇಯ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಆದಿಜಾಂಬವ ಬೃಹನ್ಮಠದ ಷಡಕ್ಷರ ಮುನಿ ದೇಶೀಕೇಂದ್ರ ಸ್ವಾಮೀಜಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ, ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ ಡಾ. ಮನೋಹರ್ ಯಾದವ್, ಪ್ರಜಾಪ್ರಗತಿ ಕನ್ನಡ ಪತ್ರಿಕೆ ಸಂಪಾದಕ ಎಸ್ ನಾಗಣ್ಣ, ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ,

ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ಅಧ್ಯಕ್ಷ ಕೆ.ಆರ್‌.ನೀಲಕಂಠ ಮತ್ತಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಹೆಣ್ಣು ಭ್ರೂಣ ಹತ್ಯೆ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಒತ್ತಾಯ

ವಿಜಯಪುರ: ರಾಜ್ಯದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಹೆಣ್ಣುಭ್ರೂಣ ಹತ್ಯೆಯನ್ನು ತಡೆದು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನಗರದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಮೈಸೂರಿ, ಮಂಡ್ಯ ಜಿಲ್ಲೆಯಗಳಲ್ಲಿ ಹೆಣ್ಣು ಭ್ರೂಣಲಿಂಗ ಪತ್ತೆ- ಹತ್ಯೆ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಬೆಂಗಳೂರು ಪೆÇಲೀಸ್‍ರ ಕಾರ್ಯ ಪ್ರಶಂಸನಿಯ. ಆದರೆ ಕೇವಲ ಈ ಜಾಲ ದಕ್ಷಿಣ ಕರ್ನಾಟಕವಲ್ಲದೇ ಉತ್ತರ ಕರ್ನಾಟಕದಲ್ಲಿಯೂ ಸಕ್ರಿಯವಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಅದರಲ್ಲೂ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ನಡೆಸುತ್ತಿರುವ ರಾಜಕಾರಣಿಗಳು ಉದ್ಯಮಿಗಳು ಸರ್ಕಾರಿ ಅಧಿಕಾರಿಗಳ ಸಂಬಂಧಿಕರ ಆಸ್ಪತ್ರೆಗಳಲ್ಲಿ ಈ ರೀತಿಯ ಪ್ರಕರಣಗಳು ಯಥೇಚ್ಛವಾಗಿ ನಡೆಯುತ್ತಿದೆ ಇದನ್ನು ತಡೆಯುವಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಜಿಲ್ಲಾ ಆರೋಗ್ಯ ಅಧಿಕಾರಿಗಳ ನಿರ್ಲಕ್ಷದಿಂದ ಇಂತಹ ಪಾಪ ಕೃತ್ಯಗಳು ಬೆಳಕಿಗೆ ಬಂದಿಲ್ಲ. ಸರ್ಕಾರ ಈ ಕೂಡಲೇ ಒಂದು ತನಿಖಾ ತಂಡ ರಚಿಸಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಜಿಲ್ಲೆಯಲ್ಲಿ ನಡೆದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಮೈಸೂರು- ಮಂಡ್ಯ ಜಿಲ್ಲೆಯಲ್ಲಿ ಬಂಧನಕ್ಕೆ ಒಳಗಾದ ಈ ಜಾಲದ ಆರೋಪಿಗಳು ಹೇಳುವಂತೆ ಪ್ರತಿ ತಿಂಗಳು 22 ರಿಂದ 25 ಗರ್ಭಪಾತಗಳನ್ನು ಮಾಡಿಸಿದ್ದು, ಕಳೆದ ಎರಡು ವರ್ಷಗಳಲ್ಲಿ ಸುಮಾರು 900 ಭ್ರೂಣ ಹತ್ಯೆಯನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಇದೊಂದು ದೊಡ್ಡ ಅಪರಾಧ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವುದು ಸರ್ಕಾರದ ಕರ್ತವ್ಯ ವ್ಯವಸ್ಥಿತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ರಾಕೇಶ ಇಂಗಳಗಿ, ಹಮೀದ್ ಇನಾಮ್ದಾರ್, ಮಾಳಪ್ಪ ಮಯೂರ, ಶ್ರೀಶೈಲ ಮಠ, ಮೈಬೂಬ ತಾಂಬೋಳಿ, ರಾಘವೇಂದ್ರ ಚಲವಾದಿ, ಸುರೇಂದ್ರ ಕುನಸಲೆ, ಕಾಂತು ಕಗ್ಗೋಡ, ಪ್ರಕಾಶ ದಂಡಿನ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಡಿ.6 ರಿಂದ ಮೂರು ದಿನ ಮಹಾಪುರುಷರ ಛಾಯಾ ಚಿತ್ರ ಪ್ರದರ್ಶನ


ವಿಜಯಪುರ: ಡಾ. ಬಿ.ಆರ್. ಅಂಬೇಡ್ಕರ್ ಅವರ 67 ನೇ ಮಹಾ ಪರಿನಿರ್ವಾಣ ದಿನದ ನಿಮಿತ್ತ ಡಿ.6, 7, ಹಾಗೂ 8 ರಂದು ಬಾಬಾಸಾಹೇಬರ ಹಾಗೂ ಮಹಾಪುರುಷರುಗಳ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಹಾಗೂ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೌದ್ಧವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ 67 ನೇ ಮಹಾ ಪರಿನಿರ್ವಾಣ ದಿನವನ್ನು ಅತ್ಯಂತ ವಿಶೇಷವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಆ ನಿಟ್ಟಿನಲ್ಲಿ ರಾಷ್ಟ್ರ ಸಂತರು, ಮಹಾಪುರುಷರುಗಳ 1000 ಕ್ಕೂ ಅಧಿಕ ಛಾಯಾಚಿತ್ರಗಳನ್ನು ಇಲ್ಲಿನ ಜಲನಗರದಲ್ಲಿರುವ ಸಾರಿಪುತ್ರ ಬೋಧಿದಮ್ಮ ಬುದ್ಧವಿಹಾರದಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತಿದೆ. ಸಾರ್ವಜನಿಕರು ಮುಕ್ತವಾಗಿ ಅವುಗಳನ್ನು ವೀಕ್ಷಣೆ ಮಾಡಬಹುದಾಗಿದೆ ಎಂದರು.

ಡಿ.6 ರಿಂದ 8 ರವರೆಗೆ 3 ದಿನಗಳ ಕಾಲ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆ ವರೆಗೂ ಪ್ರದರ್ಶನಕ್ಕೆ ಇಡಲಾಗುತ್ತಿದೆ. ಡಾ. ಬಾಬಾಸಾಹೇಬರ ಅಪರೂಪದ ಛಾಯಾಚಿತ್ರಗಳನ್ನು ನಿಪ್ಪಾಣಿಯ ದೀಪಕ ಆಕಾರಾಮ ಮಧಾಳೆ ಹಾಗೂ ನಂದಕುಮಾರ ಮಧಾಳೆ ಸಂಗ್ರಹಣೆ ಮಾಡಿರುವ ಛಾಯಾಚಿತ್ರಗಲಾಗಿವೆ ಎಂದರು.

ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಅನುಯಾಯಿಗಳು, ಪ್ರಗತಿಪರ ಚಿಂತಕರು, ಬುದ್ಧಾನುಯಾಯಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಬೇಕು ಎಂದರು.

ನಾನು ಸರ್ಕಾರಿ ನೌಕರಿಯಿಂದ ನಿವೃತ್ತಿಯಾಗಿ, ಕಾಂಗ್ರೆಸ್ ಪಕ್ಷ ಸೇರಿಕೊಂಡು ಪಕ್ಷದ ಕಾರ್ಯಾಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇನೆ ವಿಜಯಪುರ ಎಸ್ಸಿ ಮೀಸಲು ಲೋಕಸಭೆ ಮತಕ್ಷೇತ್ರವಾಗಿದ್ದು, ಕಳೆದ 3 ಬಾರಿ ಬಂಜಾರ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು ಆದರೆ ಗೆಲ್ಲಲು ಸಾಧ್ಯವಾಗಿಲ್ಲ. ಸುಮಾರು 2 ಲಕ್ಷ ಛಲವಾದಿ ಸಮುದಾಯ ಹೊಂದಿರುವ ನಾನು ಈ ಬಾರಿ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಪಕ್ಷ ಟಿಕೆಟ್ ನೀಡಿದಲ್ಲಿ ಗೆದ್ದು ಬಂದು ಜನರ ಸೇವೆ ಮಾಡುತ್ತೇನೆ ಎಂದು ಆಶಯ ವ್ಯಕ್ತಪಡಿಸಿದರು.

ಮಾಜಿ ಶಾಸಕ ರಾಜು ಆಲಗೂರ ಅವರು ಆಕಾಂಕ್ಷಿಯಾಗಿದ್ದು, ನಿಮಗೆ ಟಿಕೆಟ್ ಹೇಗೆ ಸಿಗುತ್ತೆ ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪೆÇ್ರ. ರಾಜು ಆಲಗೂರ ನಮ್ಮ ನಾಯಕರು. ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆ ಅವರು ಕಣದಲ್ಲಿ ಉಳಿಯುತ್ತೇವೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಸಹಿತ ಎಲ್ಲರೂ ಒಟ್ಟಾಗಿ ಚುನಾವಣೆ ಮಾಡಿ ಕಾಂಗ್ರೆಸ್ ಗೆಲ್ಲಿಸುತ್ತೇವೆ ಎಂದರು.

ಮುಖಂಡರಾದ ಶಶಿಕಾಂತ ಹೊನವಾಡಕರ, ನಾಗರಾಜ ಲಂಬು, ರಮೇಶ ಯಡಹಳ್ಳಿ, ಅನಿಲ ಹೊಸಮನಿ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

03-12-2023 EE DIVASA KANNADA DAILY NEWS PAPER

Friday, December 1, 2023

02-12-2023 EE DIVASA KANNADA DAILY NEWS PAPER

ಕೆಲಸ ಬಯಸಿ ಬರುವ ಕೂಲಿಕಾರರಿಗೆ ಕೆಲಸ ನೀಡಲು ವಿಫಲರಾದಲ್ಲಿ ಕಠಿಣ ಕ್ರಮ : ಸಿಇಓ ರಾಹುಲ್ ಶಿಂಧೆ ಎಚ್ಚರಿಕೆ

ವಿಜಯಪುರ : ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ಇರುವುದರಿಂದ  ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಕೆಲಸ ಬಯಸಿ ಬರುವ ಕೂಲಿಕಾರರಿಗೆ  ಕೆಲಸ  ನೀಡಬೇಕು. ಕೆಲಸ ನೀಡಲು ವಿಫಲರಾದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ  ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ & ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಸೂಚನೆ ಮೇರೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಅವರು, 

ಬರ ಪರಿಸ್ಥಿತಿ ಇರುವುದರಿಂದ ಕೂಲಿ ಬಯಸಿ ಅರ್ಜಿ ಸಲ್ಲಿಸಿದ 15 ದಿನಗಳೊಳಗಾಗಿ ಕೆಲಸ ನೀಡಬೇಕು. ಒಂದು ವೇಳೆ ಅರ್ಜಿ ಸಲ್ಲಿಸಿದ 15 ದಿನಗಳೊಳಗಾಗಿ ಕೆಲಸ ನೀಡದಿದ್ದಲ್ಲಿ ಅಂತಹ ಫಲಾನುಭವಿಗಳಿಗೆ ಕಡ್ಡಾಯವಾಗಿ ನಿರುಧ್ಯೋಗ ಭತ್ಯೆ ನೀಡಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

ಸಚಿವರ ಸೂಚನೆಯಂತೆ ತಾಲೂಕು ಪಂಚಾಯತಿ ಹಂತದಲ್ಲಿ ಕಡ್ಡಾಯವಾಗಿ ನಿಗದಿಪಡಿಸಿದ ದಿನದಂದು ಸಭೆಯನ್ನು ಆಯೋಜನೆ ಮಾಡಿ, ಸಭೆಯ ನಡುವಳಿಗಳನ್ನು ಈ ಕಾರ್ಯಾಲಯಕ್ಕೆ ಸಲ್ಲಿಸಬೇಕೆಂದು ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಯಾವದೇ ಕಾರಣಕ್ಕೂ ಸಭೆ ರದ್ದುಗೊಳಿಸುವದನ್ನು, ಮುಂದೊಡುವದನ್ನು ಮಾಡದಂತೆ ಅವರು ಸೂಚಿಸಿದರು.

ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುμÁ್ಟನ ಇಲಾಖೆಗಳು ಸಹ ನಮ್ಮ ಆರ್.ಡಿ.ಪಿ.ಆರ್ ಇಲಾಖೆಯ ಭಾಗವಾಗಿದ್ದು, ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಅತ್ಯಂತ ಸಮನ್ವಯತೆಯಿಂದ ಕಾರ್ಯನಿರ್ವಹಿಸುವÀ ಮೂಲಕ ಬರ ನಿರ್ವಹಣೆಗೆ ಸನ್ನದ್ಧರಾಗುವಂತೆ ಅವರು ತಿಳಿಸಿದರು.

ಪ್ರಗತಿ ಕುಂಠಿತ ಇರುವ ಗ್ರಾಮ ಪಂಚಾಯತಿಗಳಿಗೆ ಖುದ್ದಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರುಗಳು ಭೇಟಿ ನೀಡಿ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರ, ಅಧಿಕಾರಿಗಳ ಸಭೆ, ಗ್ರಾಮದಲ್ಲಿ ಸ್ವ-ಸಹಾಯ ಸಂಘದ ಸಭೆ, ಕಾಯಕ ಬಂಧುಗಳ ಸಭೆ ಆಯೋಜನೆ ಮಾಡುವ ಮೂಲಕ ಮಹಿಳೇಯರು ಹೆಚ್ಚಾಗಿ ಯೋಜನೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು. ನರೇಗಾ ಯೋಜನೆಯಡಿ ಎಲ್ಲ ಕೂಸಿನ ಮನೆಗಳು ಕಡ್ಡಾಯವಾಗಿ ಪ್ರಾರಂಭ ಮಾಡುವ ಮೂಲಕ ಮಹಿಳೆಯರು ಮತ್ತು ವಿಕಲಚೇತನರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ಅವರು ಸೂಚಿಸಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಮನೆ-ಮನೆಗೆ ಅಧಿಕಾರಿಗಳು ಭೇಟಿ ನೀಡಿ ಕರ ಪತ್ರ ಹಂಚುವದರ ಜೊತೆಗೆ ನಮೂನೆ-06ನ್ನು ಹಂಚಿಕೆ ಮಾಡಬೇಕು.. ಹಂಚಿಕೆ ಮಾಡಿದ ನಮೂನೆ-06ನ್ನು ಭರ್ತಿ ಮಾಡಿ ಕೂಲಿಕಾರರು ಗ್ರಾಮ ಪಂಚಾಯತಿಗೆ ಸಲ್ಲಿಸುವ ಮೂಲಕ ಕೆಲಸ ಪಡೆಯಬೇಕು. ಮುಖ್ಯವಾಗಿ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡ, ಅಲ್ಪ ಸಂಖ್ಯಾತ ಸಮುದಾಯ, ಹಿಂದುಳಿದ ವರ್ಗದ ಜನರಿರುವ ಸ್ಥಳಗಳನ್ನು ಗುರಿಯಾಗಿಸಿಕೊಂಡು ಐಇಸಿ ಚಟುವಟಿಕೆಗಳನ್ನು ಆಯೋಜಿಸಿ, ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು. 

ಜಲ ಜೀವನ್ ಮಿಷನ್ ಯೋಜನೆಯ ಕುರಿತು ಗುಣಮಟ್ಟ ಮತ್ತು ಇತರೆ ವಿಷಯಗಳ ಪ್ರಗತಿ ಪರಿಶೀಲನೆಯನ್ನು ತಾಲೂಕು ಹಂತದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಜಂಟಿಯಾಗಿ ನಡೆಸಬೇಕು.ು. ಗ್ರಾಮ ಪಂಚಾಯತಿಯಲ್ಲಿ ತೆರಿಗೆ ವಸೂಲಾತಿಯನ್ನು ಕಡ್ಡಾಯವಾಗಿ ಪಿ.ಓ.ಎಸ್ ಮಷೀನ ಮೂಲಕ ಮಾಡಬೇಕು ಮತ್ತು ಪಿ.ಓ.ಎಸ್ ಮಷಿನ ಮೂಲಕವೇ ಸಾರ್ವಜನಿಕರಿಗೆ ರಶೀದಿ ನೀಡಬೇಕು.. ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಹಾಜರಾತಿಯನ್ನು ಕಡ್ಡಾಯವಾಗಿ ಇ-ಹಾಜರಾತಿಯಲ್ಲಿ ನಮೂದಿಸಬೇಕು. ಸಕಾಲ ಸೇರಿದಂತೆ ವಿವಿಧ ಮಾರ್ಗಗಳ ಮೂಲಕ ಸ್ವೀಕೃತ್ತವಾಗುವ ದೂರುಗಳನ್ನು ಕಾಲಮಿತಿಯೊಳಗೆ ಕಡ್ಡಾಯವಾಗಿ ಪರಿಹರಿಸಬೇಕು ಎಂದು ಅವರು ಸೂಚನೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಯಾದ್ದಲ್ಲಿ ತುರ್ತಾಗಿ ಪರಿಹಾರ ಒದಗಿಸಲು ಎಲ್ಲ ಸಿದ್ಧತಾ ಕ್ರಮಗಳನ್ನು ಮುಂಚಿತವಾಗಿ ಸಿದ್ಧತೆ ಮಾಡಿಟ್ಟುಕೊಳ್ಳುವಂತೆ ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಸ್ವೀಪ್ ಅಭಿಯಾನದ ಪೆÇೀಸ್ಟರ್ ಬಿಡುಗಡೆ: ಇದೇ ಸಂದರ್ಭದಲ್ಲಿ ಸ್ವೀಪ್ ಅಭಿಯಾನದ ಪೆÇೀಸ್ಟರ್ ಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಬಿಡುಗಡೆಗೊಳಿಸಿ ಮಾತನಾಡಿದ ಅವರು,  ದಿನಾಂಕ: 02 & 03 ಡಿಸೆಂಬರ್ ರಂದು ಕಡ್ಡಾಯವಾಗಿ ಎಲ್ಲ ಬೂತಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಪ್ರಯುಕ್ತ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಭಾಗವಾಗಿ ಎಲ್ಲ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯತಿ & ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿ ಅಭಿಯಾನವನ್ನು ಯಶಸ್ವಿಗೊಳಿಸಲು ಸೂಚಿಸಿದರು. ಈ ಅಭಿಯಾನದ ಕುರಿತು ಎಲ್ಲ ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಹಾಗೂ ಸ್ವಚ್ಛ ವಾಹಿನಿಯಲ್ಲಿ ಜಿಂಗಲ್ಸ್ ಅಳವಡಿಸುವ ಮೂಲಕ ಪ್ರಚಾರ ಮಾಡಬೇಕು ಎಂದರು. ಒಟ್ಟಾರೆಯಾಗಿ ಎಲ್ಲ ಅಧಿಕಾರಿಗಳು ಅತೀ ಉತ್ಸಾಹದಿಂದ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಡಾ. ವಿಜಯಕುಮಾರ ಆಜೂರ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ, ಅನುμÁ್ಠನ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು