Monday, December 4, 2023

ಅಮೋಘ ಲೋಗಾಂವಿ ವಿಜಯಪುರ ನಗರ ಅಧ್ಯಕ್ಷರಾಗಿ ಆಯ್ಕೆ

 


ಈ ದಿವಸ ವಾರ್ತೆ

ವಿಜಯಪುರ : ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ‌ ವಿಜಯಪುರ ನಗರಾಧ್ಯಕ್ಷರನ್ನಾಗಿ ಯುವ ಮುಖಂಡ ಅಮೋಘ ಲೋಗಾಂವಿ ಅವರನ್ನ ನೇಮಕ‌ ಮಾಡಲಾಗಿದೆ‌.

ಸಮಾಜದಲ್ಲಿ ಶೋಷಿತ ,ನೊಂದ ಹಾಗೂ ಧ್ವನಿ‌ಇಲ್ಲದವರ ಪರವಾಗಿ ಅಮೋಘ ಅವರು ಸಾಕಷ್ಟು ಹೋರಾಟ ಹಾಗೂ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ರಾದ ಅಮಿತ್ ಎ.ಕೆ. ಹಾಗೂ ಪ್ರಧಾನ‌ ಕಾರ್ಯದರ್ಶಿ ಗಳಾದ ಶಂಕರ್ ಬಿ.ಜೆ. ಅವರು ವಿಜಯಪುರ ನಗರ ಘಟಕದ ಹಿತರಕ್ಷಣಾ ಸಮಿತಿಯ‌ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಸಮಾಜದ ಹಿತದೃಷ್ಟಿಯಿಂದ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯ ಪ್ರಗತಿಗಾಗಿ ಮತ್ತು ಸಮಾಜದ ಜಾಗೃತಿಗಾಗಿ ಅಮೋಘ ಅವರು ತೋರಿಸುವ ಕಾಳಜಿ‌ಯಿಂದ ಅವರನ್ನ‌ ನೇಮಕ‌ ಮಾಡಲಾಗಿದ್ದು ಮುಂಬರುವ ದಿನಗಳಲ್ಲಿ ಸಮಾಜವನ್ನು‌ ಇನ್ನಷ್ಟು ಒಗ್ಗೂಡಿಸಲು‌ ಹಾಗೂ ನ್ಯಾಯ ಕೊಡಿಸಲು‌ ಪ್ರಾಮಾಣಿಕ ಪ್ರಯತ್ನ ಮಾಡಬೇಕು  ಸಮಿತಿ‌ಯ ಪದಾಧಿಕಾರಿಗಳು ಆಶಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಅವಘಡದಲ್ಲಿ ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವದು : ಸಚಿವ ಪಾಟೀಲ

ಈ ದಿವಸ ವಾರ್ತೆ

ವಿಜಯಪುರ; ನಗರದ ಹೊರವಲಯದ ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ರಾಜಗುರು ಇಂಡಸ್ಟ್ರೀಸ್ ನ ಮೆಕ್ಕೆಜೋಳ ಸಂಸ್ಕರಣೆ ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿದ್ದ ಸಚಿವರು ಸೋಮವಾರ ಸಂಜೆ ನಡೆದ ಈ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ತಡರಾತ್ರಿ ವಿಜಯಪುರ ನಗರಕ್ಕೆ ದೌಡಾಯಿಸಿದರು.  ಅಲ್ಲದೇ, ಘಟನಾ ಸ್ಥಳಕ್ಕೆ ತೆರಳಿ ಮಧ್ಯರಾತ್ರಿ ಬಹಳ ಹೊತ್ತಿನವರೆಗೂ ರಕ್ಷಣಾ ಕಾರ್ಯಾಚರಣೆ ಪರಿಶೀಲನೆ ನಡೆಸಿದರು.  ಘಟನೆಯ ಕುರಿತು ಜಿಲ್ಲಾಧಿಕಾರಿ ಟಿ. ಭೂಬಾಲನ್, ಎಸ್ಪಿ ಋಷಿಕೇಶ ಸೋನಾವಣೆ, ಜಿ. ಪಂ. ಸಿಇಓ ರಾಹುಲ ಶಿಂಧೆ ಅವರಿಂದ ಘಟನೆ ಮತ್ತು ನಂತರ ಕೈಗೊಳ್ಳಲಾದ ರಕ್ಷಣಾ ಕಾರ್ಯಾಚರಣೆಯ ಕುರಿತು ಸಂಪೂರ್ಣ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸೇರಿದ್ದ ಉಳಿದ ಕಾರ್ಮಿಕರೊಂದಿಗೆ ಮಾತನಾಡಿದ ಸಚಿವರು, ಈ ಅವಘಡದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಾಗುವುದು.  ಮೆಕ್ಕೆಜೋಳದ ರಾಶಿಯಡಿ ಸಿಲುಕಿರುವ ಎಲ್ಲ ಕಾರ್ಮಿಕರ ಶವಗಳನ್ನು ಹೊರತೆಗೆದು ಶವ ಪರೀಕ್ಷೆಯ ಬಳಿಕ ಅವರ ಮೂಲ ರಾಜ್ಯವಾದ ಬಿಹಾರಕ್ಕೆ ಗೌರವಪೂರಕವಾಗಿ ಕಳುಹಿಸಿ ಕೊಡಲಾಗುವುದು.  ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಾಂತ್ವನ ಹೇಳಿದರು.  ಅಲ್ಲದೇ, ಅವರಿಗೆ ನೈತಿಕವಾಗಿ ಧೈರ್ಯ ತುಂಬಿದರು.  

ಈ ದುರ್ಘಟನೆಯಲ್ಲಿ ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಲಾಗುವುದು.  ಇದರ ಜೊತೆಗೆ ರಾಜಗುರು ಇಂಡಸ್ಟ್ರಿಸ್  ಮಾಲಿಕರಿಂದಲೂ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.  ಜಿಲ್ಲಾ ಉಸ್ತುವಾರಿ ಸಚಿವನಾಗಿ ಸರಕಾರದಿಂದ ಎಲ್ಲ ರೀತಿಯ ನೆರವು ಒದಗಿಸುವುದಾಗಿ ಕಾರ್ಮಿಕರಿಗೆ ಭರವಸೆ ನೀಡಿದರು.

ಇದಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಘಟನೆ ಮನಸಿಗೆ ನೋವುಂಟು ಮಾಡಿದೆ.  ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ, ಬೆಳಗಾವಿ ಅಧಿವೇಶನದಿಂದ ಇಲ್ಲಿಗೆ ನೇರವಾಗಿ ಬಂದಿದ್ದೇನೆ.  ಘಟನೆ ನಡೆದ ತಕ್ಷಣದಿಂದ ಡಿಸಿ, ಎಸ್ಪಿ ಜೊತೆ ಸತತ ಸಂಪರ್ಕದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಯ ಕುರಿತು ಸತತವಾಗಿ ಮಾಹಿತಿ ಪಡೆದಿದ್ದೇನೆ.  ಈಗ ಮೆಕ್ಕೆಜೋಳದ ರಾಶಿಯಡಿ ಸಿಲುಕಿರುವ ಕಾರ್ಮಿಕರನ್ನು ಹೊರ ತೆಗೆಯಲು ಮೊದಲ ಆದ್ಯತೆ ನೀಡಲಾಗುತ್ತಿದೆ.  ಈ ಘಟನೆಯಲ್ಲಿ ಸಾವಿಗೀಡಾದವರ ಮೃತದೇಹಗಳನ್ನು ಹೊರತೆಗೆದು ಶವಪರೀಕ್ಷೆಯ ಬಳಿಕ ಅವರ ಊರುಗಳಿಗೆ ಕಳುಹಿಸಲಾಗುವುದು.  ಬಿಹಾರದ ಆಯಾ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಆಯಾ ಕಾರ್ಮಿಕರ ಊರುಗಳಿಗೆ ಪಾರ್ಥಿವ ಶರೀರ ಕಳುಹಿಸಲು ಸಕಲ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.  

ಈ ಘಟನೆಗೆ ನಿಖರ ಕಾರಣ ಏನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ.  ಈ ಕುರಿತು ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.  ಈ ಘಟನೆಯಲ್ಲಿ ಯಾರದೇ ತಪ್ಪಿದ್ದರೂ ಆ ಕುರಿತೂ ವಿಚಾರಣೆ ನಡೆಸಲಾಗುವುದು.  ಒಟ್ಟಾರೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.  ಅಲ್ಲದೇ, ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ಮಾನವೀಯತೆ ದೃಷ್ಠಿಯಿಂದ ರಾಜ್ಯ ಸರಕಾರದಿಂದ ಪರಿಹಾರ ನೀಡಲು ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.  ಅಷ್ಟೇ ಅಲ್ಲ, ರಾಜಗುರು ಇಂಡಸ್ಟ್ರಿಸ್ ಮಾಲಿಕರಿಂದಲೂ ಪರಿಹಾರ ನೀಡುವಂತೆ ಸೂಚಿಸಲಾಗುವುದು.  ಗಾಯಾಳುಗಳಿಗೂ ಪರಿಹಾರ ನೀಡಲಾಗುವುದು ಎಂದು ಎಂ. ಬಿ. ಪಾಟೀಲ ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಡಿವೈಎಸ್ಪಿ ಬಸವರಾಜ ಯಲಿಗಾರ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಮುಂಬರುವ ಲೋಕಸಭೆ ಚುನಾವಣೆಯ ಬಿಜೆಪಿ ಗೆಲುವಿನ ಮುನ್ನುಡಿ : ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ

ವಿಜಯಪುರ:

 ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಮುಂಬರುವ ಲೋಕಸಭೆ ಚುನಾವಣೆಯ ಬಿಜೆಪಿ ಗೆಲುವಿನ ಮುನ್ನುಡಿಯಾಗಿದ್ದು, ಈ ಗೆಲುವಿನ ನಗೆ ಇದೇ ರೀತಿ ಮುನ್ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಪಕ್ಷಗಳು ಎಷ್ಟೇ ಬಿಜೆಪಿ ಬಗ್ಗೆ ವಿರೋಧ ನಿಲುವು ಬಿತ್ತಲು ಪ್ರಯತ್ನಿಸಿದರೂ ಸಹ ಜನತೆ ಬಿಜೆಪಿಗೆ ಆಶೀರ್ವಾದ ಮಾಡಿ ಮತ್ತೊಮ್ಮೆ ಮೋದಿ ಎನ್ನುವ ಸಂದೇಶವನ್ನು ಈ ಚುನಾವಣೆ‌ ಮೂಲಕ ಇಂದೇ ರವಾನಿಸಿದ್ದಾರೆ. ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸಘಢ  ಹೀಗೆ ಮೂರು ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಪ್ರಧಾನಮಂತ್ರಿ ‌ನರೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಶುದ್ದ ಆಡಳಿತ,‌ ಬಿಜೆಪಿ ಜನಪರ ಚಿಂತನೆ,ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಇದು ಖಂಡಿತವಾಗಿಯೂ ಲೋಕಸಭಾ ಚುನಾವಣೆ ದಿಕ್ಸೂಚಿಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅರಳುವುದು ಖಚಿತವಾಗಿದೆ, ಈ ಗೆಲುವು ಸಮಸ್ತ ಕಾರ್ಯಕರ್ತರ ಗೆಲುವಾಗಿದೆ ಎಂದು ಅವರು ಹೇಳಿದ್ದಾರೆ.
ಕಿಸಾನ್ ಸಮ್ಮಾನ್, ಉಜ್ವಲ ಯೋಜನೆ, ಜನಧನ್ ಹೀಗೆ ಜನರನ್ನು ನೇರವಾಗಿ ತಲುಪುವ ಅನೇಕ ಯೋಜನೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರೂಪಿಸಿದೆ, ಹೀಗಾಗಿ ಅಭಿವೃದ್ಧಿಗೆ ಜನತೆ ಬಿಜೆಪಿಗೆ‌ ಬೆಂಬಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

Saturday, December 2, 2023

ವಿ ಪಿ ಸಿಂಗ್ ಪ್ರಶಸ್ತಿ: ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿಗೆ ಪ್ರಧಾನ

ಬೆಂಗಳೂರು:  ಶುಕ್ರವಾರ ಸಂಜೆ ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ಐಎಚ್‌ಎಸ್‌ ಪ್ರಕಾಶನ ಸಹಯೋಗದಲ್ಲಿ ‘ಮಂಡಲ್‌ ವರದಿ ಆಗಿದ್ದೇನು?’ ವಿಷಯ ಕುರಿತು ವಿಚಾರ ಸಂಕಿರಣ ಅಂಗವಾಗಿ ಕರ್ನಾಟಕ ರಾಜ್ಯ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ, ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಗೌರವಾಧ್ಯಕ್ಷರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ 

ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾದ ಪ್ರೊ.ಬಿ.ಕೆ.ರವಿ ಅವರಿಗೆ ವಿ ಪಿ ಸಿಂಗ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಎಚ್‌.ಎಂ.ರೇವಣ್ಣ, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌, ಮಾಜಿ ಸಚಿವ ಎಚ್‌.ಆಂಜನೇಯ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಆದಿಜಾಂಬವ ಬೃಹನ್ಮಠದ ಷಡಕ್ಷರ ಮುನಿ ದೇಶೀಕೇಂದ್ರ ಸ್ವಾಮೀಜಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ, ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ ಡಾ. ಮನೋಹರ್ ಯಾದವ್, ಪ್ರಜಾಪ್ರಗತಿ ಕನ್ನಡ ಪತ್ರಿಕೆ ಸಂಪಾದಕ ಎಸ್ ನಾಗಣ್ಣ, ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ,

ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ಅಧ್ಯಕ್ಷ ಕೆ.ಆರ್‌.ನೀಲಕಂಠ ಮತ್ತಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಹೆಣ್ಣು ಭ್ರೂಣ ಹತ್ಯೆ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಒತ್ತಾಯ

ವಿಜಯಪುರ: ರಾಜ್ಯದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಹೆಣ್ಣುಭ್ರೂಣ ಹತ್ಯೆಯನ್ನು ತಡೆದು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನಗರದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಮೈಸೂರಿ, ಮಂಡ್ಯ ಜಿಲ್ಲೆಯಗಳಲ್ಲಿ ಹೆಣ್ಣು ಭ್ರೂಣಲಿಂಗ ಪತ್ತೆ- ಹತ್ಯೆ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಬೆಂಗಳೂರು ಪೆÇಲೀಸ್‍ರ ಕಾರ್ಯ ಪ್ರಶಂಸನಿಯ. ಆದರೆ ಕೇವಲ ಈ ಜಾಲ ದಕ್ಷಿಣ ಕರ್ನಾಟಕವಲ್ಲದೇ ಉತ್ತರ ಕರ್ನಾಟಕದಲ್ಲಿಯೂ ಸಕ್ರಿಯವಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಅದರಲ್ಲೂ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ನಡೆಸುತ್ತಿರುವ ರಾಜಕಾರಣಿಗಳು ಉದ್ಯಮಿಗಳು ಸರ್ಕಾರಿ ಅಧಿಕಾರಿಗಳ ಸಂಬಂಧಿಕರ ಆಸ್ಪತ್ರೆಗಳಲ್ಲಿ ಈ ರೀತಿಯ ಪ್ರಕರಣಗಳು ಯಥೇಚ್ಛವಾಗಿ ನಡೆಯುತ್ತಿದೆ ಇದನ್ನು ತಡೆಯುವಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಜಿಲ್ಲಾ ಆರೋಗ್ಯ ಅಧಿಕಾರಿಗಳ ನಿರ್ಲಕ್ಷದಿಂದ ಇಂತಹ ಪಾಪ ಕೃತ್ಯಗಳು ಬೆಳಕಿಗೆ ಬಂದಿಲ್ಲ. ಸರ್ಕಾರ ಈ ಕೂಡಲೇ ಒಂದು ತನಿಖಾ ತಂಡ ರಚಿಸಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಜಿಲ್ಲೆಯಲ್ಲಿ ನಡೆದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಮೈಸೂರು- ಮಂಡ್ಯ ಜಿಲ್ಲೆಯಲ್ಲಿ ಬಂಧನಕ್ಕೆ ಒಳಗಾದ ಈ ಜಾಲದ ಆರೋಪಿಗಳು ಹೇಳುವಂತೆ ಪ್ರತಿ ತಿಂಗಳು 22 ರಿಂದ 25 ಗರ್ಭಪಾತಗಳನ್ನು ಮಾಡಿಸಿದ್ದು, ಕಳೆದ ಎರಡು ವರ್ಷಗಳಲ್ಲಿ ಸುಮಾರು 900 ಭ್ರೂಣ ಹತ್ಯೆಯನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಇದೊಂದು ದೊಡ್ಡ ಅಪರಾಧ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವುದು ಸರ್ಕಾರದ ಕರ್ತವ್ಯ ವ್ಯವಸ್ಥಿತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ರಾಕೇಶ ಇಂಗಳಗಿ, ಹಮೀದ್ ಇನಾಮ್ದಾರ್, ಮಾಳಪ್ಪ ಮಯೂರ, ಶ್ರೀಶೈಲ ಮಠ, ಮೈಬೂಬ ತಾಂಬೋಳಿ, ರಾಘವೇಂದ್ರ ಚಲವಾದಿ, ಸುರೇಂದ್ರ ಕುನಸಲೆ, ಕಾಂತು ಕಗ್ಗೋಡ, ಪ್ರಕಾಶ ದಂಡಿನ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಡಿ.6 ರಿಂದ ಮೂರು ದಿನ ಮಹಾಪುರುಷರ ಛಾಯಾ ಚಿತ್ರ ಪ್ರದರ್ಶನ


ವಿಜಯಪುರ: ಡಾ. ಬಿ.ಆರ್. ಅಂಬೇಡ್ಕರ್ ಅವರ 67 ನೇ ಮಹಾ ಪರಿನಿರ್ವಾಣ ದಿನದ ನಿಮಿತ್ತ ಡಿ.6, 7, ಹಾಗೂ 8 ರಂದು ಬಾಬಾಸಾಹೇಬರ ಹಾಗೂ ಮಹಾಪುರುಷರುಗಳ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಹಾಗೂ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೌದ್ಧವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ 67 ನೇ ಮಹಾ ಪರಿನಿರ್ವಾಣ ದಿನವನ್ನು ಅತ್ಯಂತ ವಿಶೇಷವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಆ ನಿಟ್ಟಿನಲ್ಲಿ ರಾಷ್ಟ್ರ ಸಂತರು, ಮಹಾಪುರುಷರುಗಳ 1000 ಕ್ಕೂ ಅಧಿಕ ಛಾಯಾಚಿತ್ರಗಳನ್ನು ಇಲ್ಲಿನ ಜಲನಗರದಲ್ಲಿರುವ ಸಾರಿಪುತ್ರ ಬೋಧಿದಮ್ಮ ಬುದ್ಧವಿಹಾರದಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತಿದೆ. ಸಾರ್ವಜನಿಕರು ಮುಕ್ತವಾಗಿ ಅವುಗಳನ್ನು ವೀಕ್ಷಣೆ ಮಾಡಬಹುದಾಗಿದೆ ಎಂದರು.

ಡಿ.6 ರಿಂದ 8 ರವರೆಗೆ 3 ದಿನಗಳ ಕಾಲ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆ ವರೆಗೂ ಪ್ರದರ್ಶನಕ್ಕೆ ಇಡಲಾಗುತ್ತಿದೆ. ಡಾ. ಬಾಬಾಸಾಹೇಬರ ಅಪರೂಪದ ಛಾಯಾಚಿತ್ರಗಳನ್ನು ನಿಪ್ಪಾಣಿಯ ದೀಪಕ ಆಕಾರಾಮ ಮಧಾಳೆ ಹಾಗೂ ನಂದಕುಮಾರ ಮಧಾಳೆ ಸಂಗ್ರಹಣೆ ಮಾಡಿರುವ ಛಾಯಾಚಿತ್ರಗಲಾಗಿವೆ ಎಂದರು.

ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಅನುಯಾಯಿಗಳು, ಪ್ರಗತಿಪರ ಚಿಂತಕರು, ಬುದ್ಧಾನುಯಾಯಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಬೇಕು ಎಂದರು.

ನಾನು ಸರ್ಕಾರಿ ನೌಕರಿಯಿಂದ ನಿವೃತ್ತಿಯಾಗಿ, ಕಾಂಗ್ರೆಸ್ ಪಕ್ಷ ಸೇರಿಕೊಂಡು ಪಕ್ಷದ ಕಾರ್ಯಾಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇನೆ ವಿಜಯಪುರ ಎಸ್ಸಿ ಮೀಸಲು ಲೋಕಸಭೆ ಮತಕ್ಷೇತ್ರವಾಗಿದ್ದು, ಕಳೆದ 3 ಬಾರಿ ಬಂಜಾರ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು ಆದರೆ ಗೆಲ್ಲಲು ಸಾಧ್ಯವಾಗಿಲ್ಲ. ಸುಮಾರು 2 ಲಕ್ಷ ಛಲವಾದಿ ಸಮುದಾಯ ಹೊಂದಿರುವ ನಾನು ಈ ಬಾರಿ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಪಕ್ಷ ಟಿಕೆಟ್ ನೀಡಿದಲ್ಲಿ ಗೆದ್ದು ಬಂದು ಜನರ ಸೇವೆ ಮಾಡುತ್ತೇನೆ ಎಂದು ಆಶಯ ವ್ಯಕ್ತಪಡಿಸಿದರು.

ಮಾಜಿ ಶಾಸಕ ರಾಜು ಆಲಗೂರ ಅವರು ಆಕಾಂಕ್ಷಿಯಾಗಿದ್ದು, ನಿಮಗೆ ಟಿಕೆಟ್ ಹೇಗೆ ಸಿಗುತ್ತೆ ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪೆÇ್ರ. ರಾಜು ಆಲಗೂರ ನಮ್ಮ ನಾಯಕರು. ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆ ಅವರು ಕಣದಲ್ಲಿ ಉಳಿಯುತ್ತೇವೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಸಹಿತ ಎಲ್ಲರೂ ಒಟ್ಟಾಗಿ ಚುನಾವಣೆ ಮಾಡಿ ಕಾಂಗ್ರೆಸ್ ಗೆಲ್ಲಿಸುತ್ತೇವೆ ಎಂದರು.

ಮುಖಂಡರಾದ ಶಶಿಕಾಂತ ಹೊನವಾಡಕರ, ನಾಗರಾಜ ಲಂಬು, ರಮೇಶ ಯಡಹಳ್ಳಿ, ಅನಿಲ ಹೊಸಮನಿ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

03-12-2023 EE DIVASA KANNADA DAILY NEWS PAPER