Saturday, January 13, 2024
ಸಮೃದ್ಧಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ
Thursday, January 11, 2024
Wednesday, January 10, 2024
ಭಾರತದ ಇತಿಹಾಸದಲ್ಲೇ ಯಾವ ಸರ್ಕಾರವೂ ಇಷ್ಟು ದೊಡ್ಡ ಜನೋಪಯೋಗಿ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ: ಸಿಎಂ
ಬೆಂಗಳೂರು : ನಾವು ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರ ಸಭೆಯಲ್ಲಿ ಅವರು ಮಾತನಾಡಿದರು.
ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರುಮಾಡಿದ್ದಾರೆ. ನಾವು ಜನರಿಗೆ ಸತ್ಯವನ್ನು ಹೇಳಬೇಕು. ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿಗಳನ್ನು ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು , ಹಿಂದುಳಿದವರು , ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದರು.
*ನಮ್ಮವರೇ ಅಪಪ್ರಚಾರ ಮಾಡುವುದನ್ನು ಬಿಡಬೇಕು.*
ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಿ. ಇಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳು ಹಣವಿಲ್ಲದೆ ನಡೆಯುತ್ತಿದೆಯೇ ಎಂದು ಪ್ರಶ್ನಿಸಿದ ಸಿಎಂ, ನಮ್ಮವರೇ ಬಿಜೆಪಿಯವರ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು. ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆ ಎಂದರು.
*ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ ತೊಂದರೆಯಾಗಿಲ್ಲ*
ಗ್ಯಾರಂಟಿ ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತೊಂದರೆಯಾಗಿಲ್ಲ ಎಂದರು.
ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸಭೆ ಕರೆದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಅಮಿತ್ ಷಾ ಅವರನ್ನು ಭೇಟಿ ಮಾಡಿದಾಗ ಭರವಸೆ ನೀಡಿದ್ದರು. ಕೇಂದ್ರ ಸರ್ಕಾರ ಕೊಡುವವರೆಗೆ ಕಾಯಬಾರದು ಎಂದು 2000 ರೂ ವರೆಗೆ ರೈತರಿಗೆ ಇನ್ ಪುಟ್ ಸಬ್ಸಿಡಿ ಪರಿಹಾರ ಪ್ರಾರಂಭಿಸಲಾಗಿದೆ ಎಂದರು.
ಬಿಜೆಪಿಯವರು ಬರಪರಿಹಾರ ಕೊಟ್ಟಿಲ್ಲ ಎಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಇವರಿಗೆ ಮರ್ಯಾದೆ ಇದೆಯೇ. 25 ಸಂಸದರು ರಾಜ್ಯದಿಂದ ಇದ್ದರೂ ಒಂದು ದಿನವೂ ಈ ಬಗ್ಗೆ ಮಾತನಾಡಿಲ್ಲ. 15 ನೇ ಹಣಕಾಸಿನ ಆಯೋಗವು 14-15 ನೇ ಸಾಲಿಗೆ 1.07 % ಹಣ ಕಡಿಮೆ ಮಾಡಿದರು. 1ಲಕ್ಷ 66 ಸಾವಿರ ಕೋಟಿ ರೂ.ಗಳು ನಮಗೆ ಬರಬೇಕಿತ್ತು. 15 ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5495 ಕೋಟಿ ರೂ.ಗಳನ್ನು ಕೊಡುವುದಾಗಿ ಹೇಳಿ ಕೊಟ್ಟಿಲ್ಲ. ಕರ್ನಾಟಕದ ಬಗ್ಗೆ ಇವರಿಗೆ ಕಾಳಜಿ ಇದೆಯೇ ಎಂದು ಪ್ರಶ್ನಿಸಿದರು. 2018-19 ರಲ್ಲಿ ಕೇಂದ್ರದ ಬಜೆಟ್ ಗಾತ್ರ 23 ಲಕ್ಷ ಕೋಟಿ ರೂ.ಗಳಿತ್ತು . 35 ಸಾವಿರ ಕೋಟಿ ನಮ್ಮ ಪಾಲು ಇತ್ತು. ಈಗ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ ಬರುವುದು ಕೇವಲ 37 ಸಾವಿರ ಕೋಟಿ. ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿದೆ. ಅವರು ಕೊಡುವುದು ನಮ್ಮ ತೆರಿಗೆಯ ಹಣವನ್ನೇ ಎಂದರು.
ಸೆಸ್ , ಸರ್ಚಾರ್ಜ್, ನಲ್ಲಿ ನಮಗೆ ಪಾಲಿಲ್ಲ. 4 ಲಕ್ಷ ಕೋಟಿ ರೂ.ಗಳನ್ನು ನಮ್ಮ ರಾಜ್ಯದಿಂದ ಸಂಗ್ರಹ ಮಾಡುತ್ತಾರೆ. 52 ಸಾವಿರ ಕೋಟಿ ರೂ ಗಳನ್ನು ಮಾತ್ರ ಕೊಡುತ್ತಾರೆ. ಎಲ್ಲಾ ಶಾಸಕರು, ಸಂಸದರು ಇದನ್ನು ಹೇಳಬೇಕು. ಈ 10 ವರ್ಷಗಳಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಜಿಎಸ್ ಟಿ ಯಿಂದಾಗುವ ನಷ್ಟವನ್ನು ಭರಿಸುವುದಾಗಿ ಹೇಳಿದ್ದರೂ, ನಮಗೆ ಹಣವನ್ನು ಕೊಟ್ಟಿಲ್ಲ. ರಾಜ್ಯದ ಸಂಸದರೂ ತುಟಿ ಪಿಟಕ್ಕೆನ್ನದೇ ಇದ್ದಾರೆ ಎಂದರು. ಆರ್ಥಿಕವಾಗಿ ಸ್ವಲ್ಪ ಭಾರವಾದರೂ ಗ್ಯಾರಂಟಿಗಳು ಜನರಿಗೆ ಮುಂದಿನ ದಿನಗಳಲ್ಲಿ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುತ್ತದೆ ಎಂದರು.
*ಪಟ್ಟಿ ಕಳಿಸಿ*
ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯಗಳ ಬಗ್ಗೆ ಶಾಸಕರಿಗೆ ಪಟ್ಟಿ ಕಳಿಸಿಕೊಟ್ಟು ಇದನ್ನು ಜನರಿಗೆ ತಲುಪಿಸಬೇಕು. ಜನರಿಗೆ ನಮ್ಮ ಗ್ಯಾರಂಟಿಗಳನ್ನು ತಲುಪಿಸಬೇಕು ಎಂದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಸಮೃದ್ಧಿ ಶಾಲೆಗೆ ಪ್ರಿಂಟರ್ ದೇಣಿಗೆ
ವಿಜಯಪುರ : ನಗರದ ರಾಜಕುಮಾರ ಲೇಔಟನಲ್ಲಿರುವ ಸಮೃದ್ಧಿ ಶಾಲೆಯಲ್ಲಿ ಇಂದು ಶೇಠ್ ತಾಪಿದಾಸ ತುಳಸಿದಾಸ ಮತ್ತು ವೈಜದಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ರೂ. 20000 ಮೊತ್ತದ ಪ್ರಿಂಟರ್ ಅನ್ನು ಉಚಿತವಾಗಿ ನೀಡಿದರು. ಸಂಸ್ಥೆಯ ಸಮನ್ವಯಾಧಿಕಾರಿ ಶ್ರೀಯುತ ವಿಶ್ವನಾಥ .ಎಮ್. ಸಿಂದಗಿ ಸಮೃದ್ಧಿ ಶಾಲೆಯಲ್ಲಿ ಪ್ರಿಂಟರ್ ನ್ನು ಉದ್ಘಾಟಿಸಿ ಮಾತನಾಡಿ ಈ ಒಂದು ಪ್ರಿಂಟರನ್ನು ಮಕ್ಕಳ ಉದಯೋನ್ಮುಖ ಬೆಳವಣಿಗೆಗೆ ಉಪಯೋಗಿಸಿಕೊಳ್ಳಲು ಸಲಹೆ ನೀಡಿದರು.
ಮುಖ್ಯ ಅಥಿತಿಗಳಾದ ಶ್ರೀಯುತ ಅಂಬಾದಾಸ ಜೋಷಿ ಅವರು ಮಾತನಾಡಿ ಇಂದಿನ ತಾಂತ್ರಿಕ ಯುಗದಲ್ಲಿ ಮಹಾನ್ ದಾನಿಗಳ ಕೊಡುಗೆಯನ್ನು ಶ್ಲಾಘಿಸಿದರು.
ಈ ಒಂದು ಕಾರ್ಯಕ್ರಮದಲ್ಲಿ ಸಂಸ್ಥೆಯಮುಖ್ಯಸ್ಥರಾದ ಶ್ರಿಯುತ ರಮೇಶರವರು ಮುಖ್ಯ ಗುರುಮಾತೆ ಕಾಂತಾ ಬಿ ಕುಲಕರಣಿ, ಶ್ರೀಮತಿ ಸವಿತಾ ಭಜಂತ್ರಿ , ಶ್ರೀಮತಿ ಶ್ರೀದೇವಿ ಶಿಂದೆ , ಶ್ರೀಮತಿ ಪರಿಮಳಾ ಕುಲಕರಣಿ, ಶ್ರೀಮತಿ ಜ್ಯೋತಿ ಬಸರಗಿ , ಶ್ರೀಮತಿ ಅರಚನಾ ಕನಮಡಿ ,ಶ್ರೀಮತಿ ಕವಿತಾ ರಾಠೋಡ , ಶ್ರೀಮತಿ ಭವಾನಿ ದೊಡ್ಡ ಪತ್ತಾರ, ಶ್ರೀಮತಿ ವಿಶಾಲಾಕ್ಷಿ ಅಥಣಿ ಮುಂತಾದವರು ಪಾಲ್ಗೊಂಡಿದ್ದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Tuesday, January 9, 2024
ಕಬ್ಬು ಕಟಾವು ಗ್ಯಾಂಗ್ನವರಿAದ ಲಗಾಣಿ ವಸೂಲಾತಿಗೆ ಕಡಿವಾಣ ಹಾಕಲು ಅಖಂಡ ಕರ್ನಾಟಕ ರೈತ ಸಂಘದ ಮನವಿ
ವಿಜಯಪುರ ಕಬ್ಬು ಕಟಾವು ಗ್ಯಾಂಗ್ನವರಿAದ ಲಗಾಣಿ ವಸೂಲಾತಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ವಿಜಯಪುರ ಜಿಲ್ಲೆ ಮೊದಲೇ ಬರಗಾಲ ಜಿಲ್ಲೆ ಎಂಬ ಹಣೆ ಪಟ್ಟಿಯನ್ನು ಕಟ್ಟಿಕೊಂಡಿದ್ದು ಸಕಾಲಕ್ಕೆ ಮಳೆಯಾಗದೆ ರೈತರು ಎಲ್ಲ ರೀತಿಯಿಂದಲೂ ಸಂಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲಿ ಜಿಲ್ಲೆಯಲ್ಲಿ ಕಬ್ಬು ಬೆಳೆದ ರೈತರು Pಠಾವು ಮಾಡುವ ಸಂದರ್ಭದಲ್ಲಿ ಗ್ಯಾಂಗಿನವರು ಬೇಕಾ ಬಿಟ್ಟಿ ಲಗಾಣಿ ಕೇಳುತ್ತಿರುವುದರಿಂದ ಕಬ್ಬು ಬೆಳೆದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಕಬ್ಬು ಬೆಳೆಗಾರರು ಅಂದು ಕೊಂಡ ಹಾಗೆ ಸಮಯಕ್ಕೆ ಸರಿಯಾಗಿ ಕಬ್ಬು ಕಟಾವು ಆರಂಭವಾಗಿದ್ದರೆ ಜಿಲ್ಲೆಯಲ್ಲಿ ಈಗಾಗಲೇ ಶೇ 40 ರಿಂದ 50 ರಷ್ಟು ಕಬ್ಬು ಕಟಾವು ಆಗಿ ಕ್ರಸ್ಸಿಂಗ್ ಆಗಬೇಕಾಗಿತ್ತು ಆದರೆ ಕಬ್ಬು ಕಟಾವು ಮಾಡುವ ಗ್ಯಾಂಗಿನವರು ಅಂದಾಜು 20 ರಿಂದ 25 ಟನ್ ಕಟಾವು ಮಾಡಲು ನಾಲ್ಕರಿಂದ ಐದು ಸಾವಿರ ರೂಪಾಯಿ ವರೆಗೆ ಲಗಾಣಿ ಕೇಳುತ್ತಾರೆ. ಯಂತ್ರದ ಮುಖಾಂತರ ಕಟಾವು ಮಾಡಿಸಿದರೆ ಅವರು ಕೂಡ ಪ್ರತಿ ಎಕರೆಗೆ 7 ಸಾವಿರದಂತೆ ಹಣ ಕೇಳುತ್ತಾರೆ. ಇದರಿಂದ ಕಬ್ಬು ಬೆಳೆದ ರೈತರು ಗ್ಯಾಂಗಿನವರಿAದ ಶೋಷಣೆಗೆ ಒಳಗಾಗುತ್ತಿದ್ದಾರೆ. ಒಂದು ವೇಳೆ ಲಗಾಣಿ ಕೊಡದಿದ್ದರೆ ಕಬ್ಬು ಕಟಾವು ಮಾಡುವುದಿಲ್ಲ ಎಂದು ಹೇಳುತ್ತಾರೆ. ಆ ಗ್ಯಾಂಗಿನವರಿಗೆ ಸಕ್ಕರೆ ಕಾರ್ಖಾನೆಯವರೇ ನೋಡಿಕೊಳ್ಳಬೇಕು. ಮೊದಲೇ ಬರಗಾಲದಿಂದ ತತ್ತರಿಸಿದ ರೈತರಿಗೆ ಗ್ಯಾಂಗಿನವರಿAದ ಒಂದು ರೀತಿ ಲಗಾಣಿ ವಿಷಯದಲ್ಲಿ ಕಬ್ಬು ಬೆಳೆದ ರೈತರಿಗೆ ತಲೆ ನೋವಾಗಿ ಪರಿಣಮಿಸಿದೆ. ಪ್ರತಿ ಸಲ ಆರಂಭದಲ್ಲಿ ಕಡಿಮೆ ಲಗಾಣಿ 1000 ದಿಂದ 1500 ರೂಪಾಯಿ ವರೆಗೆ ಕೊಡುತ್ತಿದ್ದ ರೈತರಿಗೆ ಇದೀಗ ಕಟಾವು ತಡವಾಗಿ ಆರಂಭಿಸಿದ್ದರಿAದ ಕಟಾವು ಮಾಡುವ ಕಾರ್ಮಿಕರು ಒಂದು ಟ್ರಾö್ಯಕ್ಟರ್ (ಡಬಲ್ ಟ್ರೆöÊಲರಿಗೆ) ಕನಿಷ್ಠ 7 ಸಾವಿರ ರೂಪಾಯಿ ಲಗಾಣಿ ಕೇಳುತ್ತಿದ್ದಾರೆಂದು ಕಬ್ಬು ಬೆಳೆದ ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ. ಇದರಿಂದ 10 ಟನ್ ಕಬ್ಬಿಗೆ ಒಂದು ಟನ್ ಕಬ್ಬಿನ ಬೆಲೆಗಿಂತಲೂ ಹೆಚ್ಚಿಗೆ ಕೊಡಬೇಕಾಗುತ್ತದೆ. ಇದು ರೈತರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಲಗಾಣಿ ಕೊಡಲು ಒಪ್ಪದಿದ್ದರೆ. ಬೇರೆ ರೈತನ ಹೊಲಕ್ಕೆ ಹೋಗುತ್ತಾರೆ. ಹೀಗಾಗಿ ರೈತರು ಜಿದ್ದಿಗೆ ಬಿದ್ದು ಲಗಾಣಿ ಕೊಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಅವಧಿ ಮೀರಿದ ಕಬ್ಬಿಗೆ ಗರಿ ಮೂಡಿದೆ. ಇದರಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸೇರಿದಂತೆ ನಾನಾ ಕಾರಣಗಳಿಂದ ಆಕಸ್ಮಿಕವಾಗಿ ಬೆಂಕಿ ತಗುಲಿ ಆಳೆತ್ತರಕ್ಕೆ ಬೆಳೆದು ನಿಂತ ಕಬ್ಬು ಬೆಂಕಿಗೆ ಆಹುತಿಯಾಗುತ್ತಿವೆ. ಈ ರೀತಿಯಾದ ಕಬ್ಬನ್ನು ಮರುದಿನವೇ ಕಾರ್ಖಾನೆಗೆ ಸಾಗಿಸಬೇಕು. ಇಲ್ಲದಿದ್ದರೆ ಕಬ್ಬಿನಲ್ಲಿನ ಸಕ್ಕರೆ ಅಂಶ ಸೋರಿಕೆಯಾಗಿ ಇಳುವರಿ ಕಡಿಮೆಯಾಗುತ್ತದೆ. ಕಬ್ಬಿಗೆ ಬೆಂಕಿ ಬಿದ್ದ ತಕ್ಷಣವೇ ಸಕ್ಕರೆ ಕಾರ್ಖಾನೆಯವರಿಗೆ ತಿಳಿಸಿದರು ಎರಡ್ಮೂರು ದಿನಗಳ ನಂತರ ಕಬ್ಬು ಕಟಾವು ಮಾಡಲು ಗ್ಯಾಂಗ್ ಕಳುಹಿಸಿಕೊಡುತ್ತಾರೆ. ಹೀಗಾಗಿ ಸಾಲ ಮಾಡಿ ಕಬ್ಬು ಬೆಳೆದರೂ ಮಾಡಿದ ಖರ್ಚು ಬಾರದ ಸ್ಥಿತಿ ನಿರ್ಮಾಣವಾಗುತ್ತಿದೆ. ಒಟ್ಟಾರೆಯಾಗಿ 14 ತಿಂಗಳು ಕಷ್ಟ ಪಟ್ಟು ಕಬ್ಬು ಬೆಳೆದಿರುವ ರೈತರಿಗೆ ಒಂದಿಲ್ಲೊAದು ಸಮಸ್ಯೆಗಳು ಎದುರಾಗುತ್ತಿವೆ. ಇದೀಗ ಲಗಾಣಿ ಬಿಸಿಗೆ ಕಬ್ಬು ಬೆಳೆದ ರೈತರು ನಲಗುವಂತಾಗಿದೆ. ಆದ್ದರಿಂದ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಎಲ್ಲ ಸಕ್ಕರೆ ಕಾರ್ಖಾನೆಯ ಮುಖ್ಯಸ್ಥರ ಸಭೆ ನಡೆಸಬೇಕು ಹಾಗೂ ಸಭೆ ದಿನಾಂಕ ನಿಗಧಿಪಡಿಸಿ ಸಭೆಯಲ್ಲಿ ರೈತ ಮುಖಂಡರನ್ನು ಆಹ್ವಾನಿಸಬೇಕು. ಕಬ್ಬು ಬೆಳೆದ ರೈತರಿಂದ ಗ್ಯಾಂಗಿನವರು ಲಗಾಣಿ ಕೇಳದಂತೆ ಕಡಿವಾಣ ಹಾಕಬೇಕೆಂದು ಅಖಂಡ ಕರ್ನಾಟಕ ರೈತ ಸಂಘ ಒತ್ತಾಯಿಸುತ್ತದೆ.
ಈ ಸಂದರ್ಭದಲ್ಲಿ ಹೊನಕೇರೆಪ್ಪ ತೆಲಗಿ, ಬಾಲಪ್ಪಗೌಡ ಲಿಂಗದಳ್ಳಿ, ಸೋಮನಗೌಡ ಕೋಳೂರ, ರಾಮನಗೌಡ ಹಾದಿಮನಿ, ಬಸನಗೌಡ ಪಾಟೀಲ, ಯಂಕನಗೌಡ ಪಾಟೀಲ, ಹಣಮಂತರಾಯ ಗುಣಕಿ, ಅಪ್ಪಾಸಾಹೇಬಗೌಡ ಕೊಳಗೇರಿ, ಮಲ್ಲಿಕಾರ್ಜುನ ನಾವಿ, ಹಣಮಗೌಡ ಮಂಗ್ಯಾಳ, ಶಿವನಗೌಡ ಪಾಟೀಲ, ರುದ್ರಗೌಡ ಬಿರಾದಾರ, ಬಸನಿಂಗಪ್ಪಗೌಡ ಬಿರಾದಾರ, ಶರಣಪ್ಪಗೌಡ ನರಸಲಗಿ, ಭೀಮಶಪ್ಪಗೌಡ ಬಿರಾದಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

.jpeg)

