Friday, April 12, 2024

ಪಿಯು ಪರೀಕ್ಷೆಯಲ್ಲಿ ದಿವ್ಯಾ ರಾಜೇಂದ್ರಸಿಂಗ್ ಹಜೇರಿ ಡಿಸ್ಟಿಂಕ್ಷನ್

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ನಗರದ ನಾಗೂರ ಕ್ಯಾಂಪಸ್‌ನಲ್ಲಿನ ದ್ರೋಣ ಅಕಾಡೆಮಿ ಪಿಯು ವಿಜ್ಞಾನ ಕಾಲೇಜನ ವಿದ್ಯಾರ್ಥಿನಿ ದಿವ್ಯಾ ರಾಜೇಂದ್ರಸಿಂಗ್ ಹಜೇರಿ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದಾಳೆ.

ವಿದ್ಯಾರ್ಥಿನಿ ದಿವ್ಯಾ ರಾಜೇಂದ್ರಸಿಂಗ್ ಹಜೇರಿ 600 ಅಂಕಗಳ ಪೈಕಿ 538 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದು, ವಿದ್ಯಾರ್ಥಿನಿ ಸಾಧನೆಗೆ ಪಾಲಕರು, ಶಿಕ್ಷರು ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿ ಆಲಗೂರರಿಂದ ನಾಮತ್ರ ಸಲ್ಲಿಕೆ


 ಈ‌ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಕಾಂಗ್ರೆಸ್‌ನ ಕೆಲಸ ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು.

ನನಗೆ ಪೂರ್ತಿ ಜಿಲ್ಲೆ ಗೊತ್ತಿಲ್ಲ ಎನ್ನುವ ಸಂಸದ ರಮೇಶ ಜಿಗಜಿಣಗಿಯವರಿಗೆ ಏನು ಹೇಳಬೇಕು. ನಾನು ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ಇಡೀ ಜಿಲ್ಲೆ ಪರಿಚಿತನಿದ್ದೇನೆ. ಎರಡು ಸಲ ಶಾಸಕನಾಗಿದ್ದೇನೆ. ನನಗೆ ರಾಜಕೀಯದ ಇತಿಹಾಸವಿದೆ, ದುಡಿದಿದ್ದೇನೆ. ಆದರೆ, ಚಿರಪರಿಚಿತರಾಗಿರುವ ಜಿಗಜಿಣಗಿಯವರ ಮುಖವನ್ನೇ ಜನರು ಮರೆತಿದ್ದಾರಲ್ಲ, ಯಾಕೆಂದರೆ ಇವರು ಯಾರಿಗೆ ಮುಖ ತೋರಿಸಿದ್ದಾರೆ ಹೇಳಿ ಎಂದು ವ್ಯಂಗ್ಯವಾಡಿದರು.

ಯಾರು ಏನೇ ಮಾತಾಡಿದರೂ ಮತದಾರರಿಗೆ ಕಾಂಗ್ರೆಸ್ ಪಕ್ಷ ಜನಾನುರಾಗಿ ಅಂತ ಗೊತ್ತಾಗಿದೆ. ಅಭಿವೃದ್ಧಿ ಮಂತ್ರವಾಗಿಸಿಕೊಂಡು ಅವರ ಮುಂದೆ ನಾನೀಗ ನಿತಿದ್ದೇನೆ. ಗೆಲುವು ಆಗೇ ಆಗುತ್ತದೆ, ಜನರ ಪ್ರತಿಕ್ರಿಯೆ-ಉತ್ಸಾಹದಿಂದ ಈ ಮಾತು ಹೇಳುತ್ತಿರುವೆ. ಗೆದ್ದರೆ ಅವರ ಋಣ ತೀರಿಸುತ್ತೇನೆ ಎಂದು ಹೇಳಿದರು.

15ಕ್ಕೆ ಮತ್ತೆ ನಾಮಪತ್ರ

ಸಾವಿರಾರು ಸಂಖ್ಯೆಯ ಬೆಂಬಲಿಗರು, ಮುಖಂಡರು, ಪಕ್ಷದ ಕಾರ್ಯಕರ್ತರೊಂದಿಗೆ ಸೋಮವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ಆಲಗೂರ್ ತಿಳಿಸಿದರು.

ಜಿಲ್ಲೆಯ ಉಸ್ತುವಾರಿ ಸಚಿವರಾದ ಎಂ‌.ಬಿ.ಪಾಟೀಲರು ಸೇರಿದಂತೆ ಅನೇಕರು ಜತೆಗೆ ಇರಲಿದ್ದಾರೆ. ಜಿಲ್ಲೆಯ ಎಲ್ಲ ಕಡೆಯಿಂದ ಜನರು ಬರಲಿದ್ದಾರೆ ಎಂದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಸಶಕ್ತ ರಾಷ್ಟ್ರ ನಿರ್ಮಾಣಕ್ಕಾಗಿ ಮತ ಚಲಾಯಿಸಿ : ಜಿಲ್ಲಾಧಿಕಾರಿ ಟಿ.ಭೂಬಾಲನ್

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಸಧೃಡ  ರಾಷ್ಟ್ರ ನಿರ್ಮಾಣಕ್ಕಾಗಿ,  ಭಾರತವನ್ನು ಮುನ್ನೆಡಸಲು ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಲು ಮತದಾನ ಅತ್ಯಗತ್ಯವಾಗಿದೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲೋಕಸಭೆ ಚುನಾವಣೆ-2024ರ ನಿಮಿತ್ತ ಮತದಾನ ಜಾಗೃತಿ ಮೂಡಿಸುವ ಸ್ಥಬ್ಧಚಿತ್ರ ವಾಹನಕ್ಕೆ ಶುಕ್ರವಾರ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಮತ ಚಲಾಯಿಸುವುದರ ಮೂಲಕ ದೇಶದ ಸಮಗ್ರತೆ ಹಾಗೂ ಪ್ರಗತಿಗೆ ಮುನ್ನುಡಿ ಬರೆಯಬೇಕು. ನಾವು ಹಾಕುವ ಮತ ಕೇವಲ ಒಬ್ಬ ವ್ಯಕ್ತಿಗೆ ಸೀಮಿತವಾಗಿರುವುದಿಲ್ಲ ಅದು ದೇಶದ ಭವಿಶ್ಯವನ್ನು ನಿರ್ಮಾಣ ಮಾಡುವ, ಅಭಿವೃದ್ಧಿಗೆ ಪೂರಕವಾಗಿರುವ ಮೆಟ್ಟಿಲು ಆಗಿರುತ್ತದೆ ಎಂದು ಹೇಳಿದರು.



ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಮಾತನಾಡಿ, ಮತದಾನದಿಂದ ದೇಶದ ಆಭಿವೃದ್ಧಿ ಸಾಧ್ಯ. ನನ್ನ ಒಂದು ಒಂದು ಮತವೂ ದೇಶದ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂಬುದನ್ನು ಅರಿತುಕೊಂಡು ಮತ ಚಲಾಯಿಸಬೇಕು. ಬಹುದೊಡ್ಡ ಪ್ರಜಾಪ್ರಭುತ್ವದ ಭಾರತಕ್ಕೆ ಮತದಾನ ಎಂಬುದು ಅತ್ಯಂತ ಪ್ರಾಮುಖ್ಯತೆ ಹೊದಿಂರುವ ಕರ್ತವ್ಯವಾಗಿದೆ ಎಂದರು.

ಈಗಾಗಲೇ ಸ್ವೀಪ್ ವತಿಯಿಂದ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲೆಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರೂ ತಪ್ಪದೆ ಮತ ಚಲಾಯಿಸಿ ಸುಭದ್ರ ದೇಶ ನಿರ್ಮಾಣ ಮಾಡಲು ಸಹಕರಿಸಬೇಕು ಎಂದರು.

ಈ ವೇಳೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ಅರ್ಷದ,  ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ,   ಸೇರಿದಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಪಿಯು ಪರೀಕ್ಷೆ: ರಕ್ಷಿತಾ ಸಿದ್ದರೆಡ್ಡಿ ಡಿಸ್ಟಿಂಕ್ಸನ್


 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ನಗರದ ಎಕ್ಸಲೆಂಟ್ ಪಿಯು ವಿಜ್ಞಾನ ಕಾಲೇಜನ ವಿದ್ಯಾರ್ಥಿನಿ ರಕ್ಷಿತಾ ಸಿದ್ದರೆಡ್ಡಿ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಡಿಸ್ಟಿಂಕ್ಸನ್ ಪಡೆದಿದ್ದಾಳೆ.

ವಿದ್ಯಾರ್ಥಿನಿ ರಕ್ಷಿತಾ ಸಿದ್ದರೆಡ್ಡಿ 600 ಅಂಕಗಳ ಪೈಕಿ 556 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದು, ವಿದ್ಯಾರ್ಥಿನಿ ಸಾಧನೆಗೆ ಪಾಲಕರು, ಶಿಕ್ಷರು ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, April 10, 2024

ಲೋಕಸಭೆ ಚುನಾವಣೆ - 2024 ಏ.12ರಿಂದ ನಾಮಪತ್ರ ಸ್ವೀಕಾರ : ಡಿಸಿ ಟಿ.ಭೂಬಾಲನ್

 ಈ‌  ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ :  ಲೋಕಸಭಾ ಸಾವರ್ಬತ್ರಿಕ ಚುನಾವಣೆ 2024 ರ ನಾಮಪತ್ರಗಳನ್ನು ಸ್ವೀಕರಿಸಲು   ಏ.12 ರಿಂದ 19 ರವರೆಗೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುತ್ತದೆ  ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯೂ ಆದ ಟಿ.ಭೂಬಾಲನ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ  ಲೋಕಸಭಾ ಚುನಾವಣೆ ಅಧಿಸೂಚನೆ ಕುರಿತು  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಮಪತ್ರಗಳನ್ನು ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ ಬೆಳಗ್ಗೆ 11ಗಂಟೆ ಯಿಂದ ಮಧ್ಯಾಹ್ನ 3ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾದ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಸ್ವೀಕರಿಸಲಾಗುವುದು ಎಂದು ತಿಳಿಸಿದರು.

ನಾಮಪತ್ರ ಸಲ್ಲಿಸಲು ಏ.19 ಕೊನೆಯ ದಿನವಾಗಿರುತ್ತದೆ. 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏ.22ರವರೆಗೆ ಕಾಲಾವಕಾಶವಿರುತ್ತದೆ.  ಮೇ 7 ರಂದು ಮತದಾನ ನಡೆಯಲಿದ್ದು, ಜು 4 ರಂದು ಮತ ಎಣಿಕೆ ನಡೆಯಲಿದೆ. ಜು.6ರಂದು ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಏ.10 ರ ಅಂತ್ಯಕ್ಕೆ 19,43,566 ಮತದಾರರಿದ್ದು 9,86,778 ಪುರುಷ ಹಾಗೂ 9,56,578 ಮಹಿಳಾ ಮತ್ತು 210 ಇತರೆ ಮತದಾರರಿದ್ದಾರೆ. ಈ ಪೈಕಿ 43,468 ಯುವ ಮತದಾರರು, 21,764 ವೀಕಲಚೇತನ,  1,874 ಸೇವಾ ಮತದಾರರು ಇದ್ದಾರೆ ಎಂದರು. .

ಸುಗಮ, ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣಾ ಜರಗಿಸುವ ದೃಷ್ಟಿಯಿಂದ ವಿಧಾನಸಭಾ ಮತಕ್ಷೇತ್ರವಾರು ಒಟ್ಟು 167 ಸೆಕ್ಟರ್ ಅಧಿಕಾರಿಗಳು, 72 ಪ್ಲಾಯಿಂಡ್ ಸ್ವಾ÷್ಕಡ್, 87 ಸ್ಟೆಟಿಕ್ ಸರ್ವಲೈನಸ್ ಟೀಮ್, 24 ವಿಡೀಯೋ ಸರ್ವಲೈನಸ್ ಟೀಮ್, 8 ವಿಡೀಯೋ ವಿವ್ಹಿಂಗ್ ಟೀಮ್, 8 ಅಕೌಂಟಿAಗ್ ಟೀಮ್ ರಚನೆ ಮಾಡಲಾಗಿದೆ ಎಂದು ಹೇಳಿದರು.

ದೂರು ನಿರ್ವಹಣೆಯಲ್ಲಿ ಪ್ರಥಮ ಸ್ಥಾನ: 

ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದ ದಿನದಿಂದ  ಇಲ್ಲಿಯವರೆಗೆ ಸಿವಿಜಿಲ್ ತಂತ್ರಾAಶದಲ್ಲಿ 3,929 ದೂರುಗಳು ದಾಖಲಾಗಿದ್ದು, ಬಂದAತಹ ದೂರುಗಳನ್ನು ಸಮರ್ಪಕವಾಗಿ ಬಗೆಹರಿಸಲಾಗಿರುತ್ತದೆ,  ರಾಜ್ಯದಲ್ಲಿ ವಿಜಯಪುರ ಜಿಲ್ಲೆ ದೂರುಗಳ ನಿವಾರಣೆ ಮಾಡುವಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಮುಂಜಾಗೃತವಾಗಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್‌ಪೋಸ್ಟಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗಿದ್ದು, ಇಲ್ಲಿಯವರೆಗೆ 3 ಕೋಟಿ 24 ಲಕ್ಷ ದಾಖಲೆ ಇಲ್ಲದ ಹಣವನ್ನು ವಶಕ್ಕೆ ಪಡೆಯಲಾಗಿದೆ. 3,707 ಲೀಟರ್ ಮದ್ಯ,  624 ಗ್ರಾಂ ಡ್ರಗ್ಸ್ನ್ನು ವಶಕ್ಕೆ ಪಡೆಯಲಾಗಿದೆ. ಹಣ ಸೇರಿದಂತೆ ವಶಪಡಿಸಿಕೊಳ್ಳಲಾದ ಮಧ್ಯ, ಡ್ರಗ್ಸ್ನ ನ ಒಟ್ಟು ಮೌಲ್ಯ 3 ಕೋಟಿ 39 ಲಕ್ಷವಾಗುತ್ತದೆ ಎಂದು ಮಾಹಿತಿ ನೀಡಿದರು.

ಮುಕ್ತ, ಶಾಂತಿಯುತ ಹಾಗೂ ಸಮರ್ಪಕವಾಗಿ ಚುನಾವಣೆ ನಡೆಸಲು ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಈಗಾಗಲೇ ಮೊದಲನೇ ಹಂತದ ತರಬೇತಿಯನ್ನು ನೀಡಲಾಗಿದೆ. ಬರುವ ದಿನಗಳಲ್ಲಿ ಎರಡನೇ ಹಂತದ ತರಬೇತಿ ಕಾರ್ಯಕ್ರಮವನ್ನು ನಡೆಸಲಾಗುವುದು. ಈಗಾಗಲೇ ಚುನಾವಣೆ ವೀಕ್ಷಕರು ನೀಯೋಜನೆಗೊಂಡಿರುತ್ತಾರೆ. ಜಿಲ್ಲೆಯಲ್ಲಿ ಪರವಾನಿಗೆ ಪಡೆದ ಶಸ್ತಾçಸ್ತçಗಳನ್ನು ಠೇವಣಿ ಇರಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಪರವಾನಿಗೆ ಹೊಂದಿರುವ 2,900 ಶಸ್ತಾçಸ್ತçಗಳಿದ್ದು,  ಈ ಪೈಕಿ ಕೇವಲ 45 ಶಸ್ತಾçಸ್ತçಗಳಿಗೆ ಜೀವಬೆದರಿಕೆ ಇರುವ ವ್ಯಕ್ತಿ ಹಾಗೂ ಬ್ಯಾಂಕ್‌ನ ಭದ್ರತಾ ದೃಷ್ಟಿಯಿಂದ  ವಿನಾಯತಿ ನೀಡಲಾಗಿದೆ, ಇನ್ನೂ 7 ಅರ್ಜಿಗಳು  ಪರಿಶೀಲನೆ ಹಂತದಲ್ಲಿವೆ ಎಂದು ತಿಳಿಸಿದರು.



 ಅವಹೇಳನಕಾರಿ ಪ್ರಚೋದನೆ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಚುನಾವಣೆ ಪ್ರಚಾರ ಮಾಡಿದ ಹಿನ್ನಲೆಯಲ್ಲಿ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಉಪಸ್ಥಿತರಿದ್ದರು.