Sunday, April 28, 2024

ಲೋಕಸಭಾ ಚುನಾವಣೆ - 2024 : ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮಕ್ಕೆ ಚಾಲನೆ


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಸುಭದ್ರ ರಾಷ್ಟ್ರ ನಿರ್ಮಾಣ ಹಾಗೂ ಪ್ರಜಾಪ್ರಭುತ್ವದ ಭದ್ರ ಬುನಾದಿಗಾಗಿ ಭವಿಷ್ಯದ ಆಲೋಚನೆಯೊಂದಿಗೆ  ಪ್ರತಿಯೊಬ್ಬರು ಮೇ.7 ರಂದು ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು. 

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ, ಸಂಯುಕ್ತಾಶ್ರಯದಲ್ಲಿ  ಭಾನುವಾರ ನಗರದ ದರಬಾರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ “ನಮ್ಮ ನಡೆ ಮತಗಟ್ಟೆ ಕಡೆ” ಕಾರ್ಯಕ್ರಮದಲ್ಲಿ ಚುನಾವಣಾ ಧ್ವಜಾರೋಹಣ ನೆರವೇರಿಸಿ, ಮತದಾನದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು ಹಾಗೂ ಜವಾಬ್ದಾರಿ. ಪ್ರಜಾಪ್ರಭುತ್ವದಲ್ಲಿ ಇಂತಹ ಅವಕಾಶ ಸಂವಿಧಾನ ಕಲ್ಪಿಸಿದೆ. ಸಂವಿಧಾನ ನೀಡಿದ ಅಧಿಕಾರವನ್ನು ಕಳೆದುಕೊಳ್ಳಬಾರದು. ಮತದಾನ ಮಾಡುವ ಮುಲಕ ಪ್ರಜಾಪ್ರಭುತ್ವ ಹಬ್ಬ ಆಚರಿಸಬೇಕು. 18 ವರ್ಷ ತುಂಬಿದ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಹೇಳಿದರು.

ನಮ್ಮ ದೇಶವನ್ನು 5 ವರ್ಷಗಳ ಕಾಲ ಆಡಳಿತ ನಡೆಸುವ ಸರ್ಕಾರದ ಆಯ್ಕೆ ನಮ್ಮ ಕೈಯಲ್ಲಿದೆ. ಸಂವಿಧಾನ ನೀಡಿದ ಮತದಾನದ ಹಕ್ಕಿನಿಂದ ಯಾರೂ ಕೂಡ ವಂಚಿತರಾಗದೇ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ದಿನ ಮತಗಟ್ಟೆಗಳಿಗೆ ತೆರಳಿ ಮುಂದಿನ ಭವಿಷ್ಯದ ಆಲೋಚನೆಯೊಂದಿಗೆ ಯೋಗ್ಯ ಅಭ್ಯರ್ಥಿಗಳ ಆಯ್ಕೆಗಾಗಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಅವರು ಹೇಳಿದರು.



ಜಿಲ್ಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಲ್ಲಿ ಮತದಾರರ ಅನುಕೂಲಕ್ಕಾಗಿ  ಎಲ್ಲ ಮತಗಟ್ಟೆಗಳಲ್ಲಿ ಬಿಸಿಲಿನ ರಕ್ಷಣೆಗಾಗಿ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಿಕಲಚೇತನರಿಗಾಗಿ ರ್ಯಾಂಪ್, ಅಶಕ್ತರಿಗೆ ವ್ಹೀಲ್ ಚೇರ್ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಶೇಕಡಾ ನೂರರಷ್ಟು ಮತದಾನ ಪ್ರಮಾಣ ಹೆಚ್ಚಿಸುವ ಗುರಿ ಹೊಂದಲಾಗಿದೆ. ಗ್ರಾಮಿಣ ಹಾಗೂ ನಗರ ಪ್ರದೇಶದಲ್ಲಿ ಕಳೆದ ಚುನಾವಣೆಳಲ್ಲಿ ಅತಿ  ಕಡಿಮೆ ಮತದಾನವಾದ  ಪ್ರದೇಶಗಳನ್ನು ಗುರುತಿಸಿ, ಈ ಸ್ಥಳಗಳಲ್ಲಿ ಸ್ವೀಪ್ ಕಾರ್ಯಚಟುವಟಿಕೆಗಳನ್ನು  ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಮತದಾರರನ್ನು ಮತಗಟ್ಟೆಯತ್ತ ಆಕರ್ಷಿಸಿ ಹೆಚ್ಚಿನ ಮತದಾನಕ್ಕೆ ಕ್ರಮ ವಹಿಸಲಾಗುತ್ತಿದೆ. ನೋಟಾ ಮತಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಮೇ 07ರಂದು ಮತದಾನ  ನಡೆಯಲಿದೆ. ಎಲ್ಲ ಕುಟುಂಬದವರು ಅರ್ಹ ಮತದಾರರೊಂದಿಗೆ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವಂತೆ ಮನವಿ ಮಾಡಿಕೊಂಡ ಅವರು, ಮತದಾನದ ಹಕ್ಕು ಅತ್ಯಂತ ಪವಿತ್ರ ಹಾಗೂ ಅಮೂಲ್ಯವಾದದ್ದು ಹಾಗೂ ಪವಿತ್ರವಾದದ್ದು, ಉತ್ತಮ ಸಮಾಜ, ಸುಭದ್ರ ದೇಶ ನಿರ್ಮಾಣದಲ್ಲಿ ಪ್ರತಿಯೊಬ್ಬರ ಮತ ಅತ್ಯಅಮೂಲ್ಯ ಹಾಗಾಗಿ ಯಾರೂ ಕೂಡ ನಿರ್ಲಕ್ಷ್ಯ ಭಾವನೆ ತೋರದೆ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಮತದಾನದ ಮೌಲ್ಯವನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದರು. 

ಚುನಾವಣಾ ಆಯೊಗದ ನಿರ್ದೇಶನದಂತೆ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗ್ರಾಮ ಪಂಚಾಯತ್ ಸೇರಿದಂತೆ ನಗರ ಮಟ್ಟದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ಸಮಿತಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಮಾತನಾಡಿ, ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನ ಹೊಂದಿದ ದೇಶ ನಮ್ಮದು. ಇಂತಹ ದೇಶದದಲ್ಲಿ ಜನಿಸಿದ ಪ್ರತಿಯೊಬ್ಬ ನಾಗರಿಕನೂ ಪುಣ್ಯವಂತ. ಉತ್ತಮ ಪ್ರಜಾಪ್ರಭುತ್ವ ಹೊಂದಿರುವ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆನ್ನು ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಕರ್ತವ್ಯವನ್ನು ನಿಭಾಯಿಸಲು  ಮತದಾನ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬರು ಮತದಾನ ಹಬ್ಬದಲ್ಲಿ ಸಕ್ರೀಯವಾಗಿ ಭಾಗವಹಿಸಿ, ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದ ಅವರು, ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ  ಯೋಗ್ಯ ಅಭ್ಯರ್ಥಿಗಳ ಆಯ್ಕೆಗಾಗಿ ಕಡ್ಡಾಯವಾಗಿ ಮತ ಚಲಾಯಿಸುವಂತೆ  ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ ರಚಿಸಿದ ಮತದಾರರ ಜಾಗೃತಿ ಗೀತೆಯನ್ನು ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ಸಾಕ್ಷಿ ಹಿರೇಮಠ ಹಾಡಿದರು. ಎಲ್ಲರೂ ಮತದಾನ ಜಾಗೃತಿ ಕುರಿತು ಘೋಷಣೆಗಳನ್ನು ಕೂಗಿದರು. ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಮತದಾನ ಜಾಗೃತಿ ಅಭಿಯಾನ ಅಂಗವಾಗಿ ಹಮ್ಮಿಕೊಂಡ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಇದಕ್ಕೂ ಮೊದಲು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಿಂದ ಆರಂಭಗೊಂಡ ಮತದಾನ ಜಾಗೃತಿ ಜಾಥಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಮಹಾನಗರ ಪಾಲಿಕೆ ಆಯುಕ್ತ ಆಶಾದ ಉರ್ ರೆಹಮಾನ ಶರೀಫ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.  

ಜಾಗೃತಿ ಜಾಥಾ ಅಭಿಯಾನವು ದರಬಾರ ಶಿಕ್ಷಣ ಸಂಸ್ಥೆ ಆವರಣದರೆಗೆ ಸಾಗಿತು.

ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾದ ಡಾ. ರತನ್ ಕನ್ವರ್ ಹೆಚ್. ಗಧವಿಚರಣ, ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ ಆರ್ ಮುಂಡರಗಿ, ಉಪಕಾರ್ಯದರ್ಶಿ ಬಿ ಎಸ್ ಮೂಗನೂರಮಠ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಪ್ರೀತಮ್ ನಸಲಾಪುರ, ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿಗಳಾದ ರಾಜೇಶ್ ಪವಾರ, ಸಹನಾ ಕುಡಿಗನೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕಾಲೇಜ್ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಇತರರು. ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, April 25, 2024

ಭಕ್ತಿ ಮತ್ತು ಶಕ್ತಿಗೆ ಹುನುಮಂತನೆ ಮೂಲ : ಜಂಬುನಾಥ ಕಂಚ್ಯಾಣಿ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಸತ್ಸಂಗದಿಂದ ಮಾತ್ರ ಮನಸ್ಸು ಶುದ್ಧೀಕರಣಗೊಳ್ಳಲು ಸಾಧ್ಯ ಎಂದು ಹಿರಿಯ ಸಾಹಿತಿ ಜಂಬುನಾಥ ಕಂಚ್ಯಾಣಿ ಹೇಳಿದರು, 

  ನಗರದ ಸಾಯಿ ರೆಸಿಡೆನ್ಸಿ ಬಡವಾಣೆಯ ವೀರಾಂಜನೇಯ ದೇವಸ್ಥಾನದ ಕ್ಷೇಮಾಭಿವೃದ್ಧಿ ಸಮಿತಿಯು  ಹಮ್ಮಿಕೊಂಡ ಹನುಮಾನ ಜಯಂತಿ ಉತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿ   ಜಾತ್ರೆ ಮತ್ತು ಮಹಾತ್ಮರ ಜಯಂತ್ಯೋತ್ಸವಗಳ ನೆಪದಲ್ಲಿ ಮನಸ್ಸು ವಿಕಸನಗೊಳ್ಳುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ  ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ರಾಮನ ಬಂಟನಾದ ಹನುಮಂತ ಬಹು ಜನ ಪ್ರಿಯನಾದ ನಾಡ ದೇವತೆ, ಊರ ಹೊರಗಿದ್ದ ಹುನುಮಾನ ದೇವಾಲಗಳು ಇಂದು ಊರಿನ ಮಧ್ಯ ಹಾಗೂ ಜನರ ಹೃದಯದಲ್ಲಿ ಸ್ಥಾಪಿತವಾಗಿವೆ, ನಾವು ಮಾಡುವ ಭಕ್ತಿ ಮನಸ್ಸುಗಳನ್ನು ಬೆಸೆಯುವ ಹಾಗಿರಬೇಕು, ರಾಮ ಮತ್ತು ಸೀತೆಯರನ್ನು ಒಂದುಗೂಡಿಸಿದ ಹುನುಮಂತ ಭಕ್ತಿಗೆ, ಶಕ್ತಿಗೆ, ಯುಕ್ತಿಗೆ, ಜ್ಞಾನಕ್ಕೆ ಮೂಲನಾಗಿರುವನು ಎಂದರು .


ಸಾನಿಧ್ಯ ವಹಿಸಿ ಮಾತನಾಡಿದ ಶಿವ ಬಸವ ಯೋಗಾಶ್ರಮದ ಮಾತೋಶ್ರೀ ದಾನಮ್ಮ ತಾಯಿಯವರು ಮಾತನಾಡಿ ಮಹಾತ್ಮರನ್ನು ನೆನೆಯುವುದೇ ಘನ ಮುಕ್ತಿ ಪದಂ ಎನ್ನುವಂತೆ ಈ ನಾಡಿನಲ್ಲಿ ಜನಿಸಿ ಜನರ ಬದುಕನ್ನು ಹಸನುಗೊಳಿಸಲು ಶ್ರಮಿಸಿದ ಶರಣರನ್ನು ಸತ್ಪುರುಷರನ್ನು ನಾವು ನಿತ್ಯವೂ ನೆನೆಯಬೇಕು, ಹನುಮಾನ ಜಯಂತಿಯ ಮೂಲಕ ನಿಷ್ಠೆಯಿಂದ ಭಕ್ತಿ ಮಾಡುವ ಮನೋಭಾವ ಹೆಚ್ಚಿಸಿಕೊಂಡು ಯಾವತ್ತೂ ಸತ್ಸಂಗದಲ್ಲಿ ಭಾಗಿಯಾಗಿ ನಿಜ ಸುಖವನ್ನು ಅನುಭವಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಾಂಜನೇಯ ದೇವಸ್ಥಾನದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎಸ್ ಡಿ ಕೃಷ್ಣಮೂರ್ತಿ  ವಹಿಸಿಕೊಂಡಿದ್ದರು,  ವೇದಿಕೆಯಲ್ಲಿ  ಮಲ್ಲಿಕಾರ್ಜುನ ಗಡಗಿ, ಮಹಾಲಕ್ಷ್ಮಿ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷರಾದ  ಸುಧಾ ರಾ ಇಂಡಿ, ರಾಣಿ ಕಿತ್ತೂರು ಚೆನ್ನಮ್ಮ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷರಾದ ಗೌರಮ್ಮ ಕುಬಕಡ್ಡಿ  ಅತಿಥಿಗಳಾಗಿ ಭಾಗವಹಿಸಿದ್ದರು, ಇದೇ ಸಂದರ್ಭದಲ್ಲಿ ಡಾ. ಸಿ ಕೆ ಹೊಸಮನಿ, ಎಸ್ ಬಿ ಪೂಜಾರ, ಅಮೋಘಸಿದ್ದ ಹಂಜಗಿ ದಂಪತಿಗಳನ್ನು ಸನ್ಮಾನಿಸಲಾಯಿತು, ಕಾರ್ಯಕ್ರಮದಲ್ಲಿ ಮುಖಂಡರಾದ ಮಹಾದೇವ ಕಾಮಗೊಂಡ, ಈರಣ್ಣ ನಾಗರಾಳ, ಎಸ್ ಬಿ ಹಳಗುಣಕಿ, ಬೇವೂರು, ಎಸ್ ಟಿ ಕನಕ, ಶಿವಾನಂದ ಯಾಳವಾರ, ಹೆಚ್ ಹೆಚ್ ಭರಡ್ಡಿ, ಶ್ರೀಕಾಂತ್ ಜಮಖಂಡಿ, ಬಿ ಆರ್ ನರಗುಂದ, ಹೆಚ್ ಎಲ್ ಸಂಕ, ರಾಜಶೆಖರ ಇಂಡಿ, ಎಸ್ ಎಸ್ ದುರಗದ, ಚಿದಾನಂದ ಗಡಗಿ, ಸಿದ್ದು ಇಜೇರಿ, ಬಸವರಾಜ ಪವಾರ, ಸುನೀಲ್ ಟಂಕಸಾಲೆ ಸೇರಿದಂತೆ ಹಲವರು ಭಾಗವಹಿಸಿದ್ದರು  ಎಂ ಬಿ ಮಮದಾಪೂರ ಹಾಗೂ ಸಾವಿತ್ರಿಬಾಯಿ ಮುಂಡಾಸ್ ಕಾರ್ಯಕ್ರಮ ನಿರೂಪಿಸಿದರು ಪಂಡಿತರಾವ ಪಾಟೀಲ್  ವಂದಿಸಿದರು 

ಬೆಳಿಗ್ಗೆ ದೇವಸ್ಥಾನದ ಆವರಣದ ವೀರಾಂಜನೇಯ ಸ್ವಾಮಿಯ ಮೂರ್ತಿಗೆ ಅಭಿಷೇಕ, ವಿಶೇಷ ಪೂಜೆ ನಡೆದವು ನಂತರ ಅತ್ಯಂತ ಸಂಭ್ರಮ ಹಾಗೂ ಭಕ್ತಿ ಭಾವದಿಂದ ಮಹಿಳಾ ಭಕ್ತರು ಬಾಲ ಹನುಮನನ್ನು ತೊಟ್ಟಿಲಲ್ಲಿ ಹಾಕಿ ಜೋಗುಳ ಪದಗಳನ್ನು ಹಾಡಿ ನಾಮಕರಣ ಕಾರ್ಯಕ್ರಮವನ್ನು  ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮಾಡುವ ಮೂಲಕ ಸಂಭ್ರಮಿಸಿದರು, ಮಧ್ಯಾಹ್ನ ಅನ್ನ ಪ್ರಸಾದ ನಡೆಯಿತು ಈ ಕಾರ್ಯಕ್ರಮದಲ್ಲಿ ಸಾಯಿ ರೆಸಿಡೆನ್ಸಿ, ಸದಾಶಿವ ನಗರದ ಹಾಗೂ ಎಕ್ಸಾಟಿಕ್ ಕಾಲೋನಿಗಳ ನೂರಾರು ಜನ ಭಕ್ತರು ಭಾಗವಹಿಸಿ ಹನುಮ ಜಯಂತಿಯನ್ನು ಭಕ್ತಿ ಸಡಗರದಿಂದ ಆಚರಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

26-04-2024 EE DIVASA KANNADA DAILY NEWS PAPER

Wednesday, April 24, 2024

25-04-2024 EE DIVASA KANNADA DAILY NEWS PAPER

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಶ್ರೀಶೈಲ ಮುಳಜಿ ನೇಮಕ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ವಿಜಯಪರ ನಗರದ ಯುವ ನ್ಯಾಯವಾದಿ ಹಾಗೂ ಹೋರಾಟಗಾರ ಶ್ರೀಶೈಲ ಮುಳಜಿ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ವಿಜಯಪುರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಆದೇಶ ಹೊರಡಿಸಿದ್ದಾರೆ.


ಶ್ರೀಶೈಲ ಮುಳಜಿ ಅವರು ಕನ್ನಡಪರ, ಜನಪರ ಚಳುವಳಿಯಲ್ಲಿ ಹಲವಾರು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಶ್ರೀಶೈಲಮುಳಜಿಯವರು ಕರ್ನಾಟಕ ರಕ್ಷಣಾ ವೇದಿಕೆಯ ತತ್ವ-ಸಿದ್ಧಾಂತ ಮತ್ತು ನೀತಿ-ನಿಯಮಗಳನ್ನು ಒಪ್ಪಿ ಬಸವಾದಿ ಶರಣರ ನೆಲವಾದ ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯನ್ನು ಬಲಪಡಿಸಲು ಮುಂದೆ ಬಂದಿದ್ದಾರೆ. ಮುಳಜಿಯವರ ಕನ್ನಡಪರವಾದ ಕೆಲಸವನ್ನು ಮೆಚ್ಚಿ ವಿಜಯಪುರ ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಈ ನೇಮಕಾತಿ ಪತ್ರವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಶ್ರೀಯುತರಿಗೆ ನೀಡಿರುವ ಈ ಗುರುತರ ಜವಾಬ್ದಾರಿಯನ್ನು ಅತ್ಯಂತ ಶ್ರದ್ದೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ 'ಸಮಗ್ರ ಕರ್ನಾಟಕದ ಅಭಿವೃದ್ಧಿಯೇ ನಮ್ಮ ಗುರಿ' ಎಂಬ ಕರ್ನಾಟಕ ರಕ್ಷಣಾ ವೇದಿಕೆಯ ಉದ್ದೇಶವನ್ನು ಈಡೇರಿಸಲಿದ್ದಾರೆಂದು ನೇಮಕ ಪತ್ರದಲ್ಲಿ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.