Wednesday, June 12, 2024

13-06-2024 EE DIVASA KANNADA DAILY NEWS PAPER

ಡೋಣಿ ಪ್ರವಾಹ ನಿರ್ವಹಣೆಗೆ ಮುಂಜಾಗೃತ ಕ್ರಮ ಕೈಗೊಳ್ಳಿ : ಜಿಪಂ ಸಿಇಒ ರಿಷಿ ಆನಂದ


ವಿಜಯಪುರ : ಹೆಗಡಿಹಾಳ, ಸಾತಿಹಾಳ ಹಾಗೂ ಯಾಳವಾರ ಗ್ರಾಮಗಳಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚಿಸಿದರು.

 ಬುಧವಾರ ಜಿಲ್ಲೆಯ ಹೆಗಡಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಕುಮನಾಳ ಗ್ರಾಮದಲ್ಲಿ ಈ ಹಿಂದೆ ಪ್ರವಾಹ ಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ಪ್ರವಾಹವು ಸರಾಗವಾಗಿ ಸಾಗುವಂತೆ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು.

ಈ ಬಾರೀ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅತೀವೃಷ್ಟಿಯಿಂದ ಪ್ರವಾಹ ಬರುವ ಸಂಭವವಿದ್ದು, ಪ್ರವಾಹ ನಿಯಂತ್ರಣದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವುದು, ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕಾರ್ಯಾತ್ಮಕ ಸ್ಥಿತಿಯಲ್ಲಿಡಬೇಕು ಹಾಗೂ ಗ್ರಾಮದಲ್ಲಿನ ಚರಂಡಿಗಳನ್ನು ಸ್ವಚ್ಚಗೊಳಿಸಬೇಕು. ಸಾರ್ವಜನಿಕರಿಗೆ ಕುಡಿಯಲು ಯೋಗ್ಯವಾದ ನೀರನ್ನು ಕ್ಲೋರೀಕರಣಗೊಳಿಸಿ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 ಬಳಿಕ ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ಡೋಣಿ ನದಿಯ ಸೇತುವೆ, ಗ್ರಾಮದಲ್ಲಿನ ಚರಂಡಿಗಳು, ನೀರಿನ ಟ್ಯಾಂಕ್, ಗ್ರಾಮದ ರಸ್ತೆಗಳು ಮತ್ತು ಯಾಳವಾರ ಗ್ರಾಮದ ಡೋಣಿ ನದಿ ಸೇತುವೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಯಿಂದಾಗಿ ಡೋಣಿ ನದಿ ತುಂಬಿ ಹರಿಯುತ್ತಿದ್ದು, ನೀರು ಸರಾಗವಾಗಿ ಸಾಗಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ಡೋಣಿ ನದಿ ನದಿ ದಂಡೆಯಲ್ಲಿರುವ ಎಲ್ಲ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗೂರ ಸಾರಿ ಪ್ರವಾಹ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. ಗ್ರಾಮ ಪಂಚಾಯತಿ ಮಟ್ಟದ ವಿಪತ್ತು ನಿರ್ವಹಣಾ ಸಭೆಯನ್ನು ಆಧ್ಯತೆ ಮೇರೆಗೆ ಏರ್ಪಡಿಸಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ನಂತರ ದೇವರ ಹಿಪ್ಪರಗಿ ತಾಲೂಕ ಪಂಚಾಯಿತಿಗೆ ಭೇಟಿ ನೀಡಿ, ಹಳೆಯ ಪ್ರವಾಸಿ ಮಂದಿರದಲ್ಲಿ ತಾಲೂಕ ಪಂಚಾಯತ ಕಚೇರಿ ಕಾರ್ಯ ನಿರ್ವಹಿಸುತಿದ್ದು, ಹೊಸ ತಾಲೂಕು ಪಂಚಾಯಿತಿ ಕಚೇರಿ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಿ ಜಿಲ್ಲಾ ಪಂಚಾಯಿತಿಗೆ ವರದಿ ನೀಡುವಂತೆ ತಾಲುಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಮು ಅಗ್ನಿ ಅವರಿಗೆ ಸೂಚಿಸಿದರು.

ಪ್ರತಿ ತಿಂಗಳ ಮೊದಲನೇ ಶನಿವಾರವನ್ನು “ಸ್ವಚ್ಛ ಶನಿವಾರ” ಎಂಬ ಪರಿಕಲ್ಪನೆ ಇಟ್ಟುಕೊಂಡು ತಾಲೂಕ ಪಂಚಾಯಿತಿ ಒಳಾಂಗಣ ಹಾಗೂ ಹೊರಾಂಗಣ ಆವರಣಗಳನ್ನು ಸ್ವಚ್ಚಗೊಳಿಸಬೇಕು, ೆÃಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ವಿಜಯಪುರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ಹೊಂಗಯ್ಯ, ದೇವರ ಹಿಪ್ಪರಗಿ ತಾಲೂಕಿನ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮು ಜಿ ಅಗ್ನಿ, ಸಹಾಯಕ ನಿರ್ದೇಶಕರು (ಪಂಚಾಯತ್ ರಾಜ್) ಶಿವಾನಂದ ಮೂಲಿಮನಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಸತೀಶ ಪಾಟೀಲ ಮತ್ತು ಸೆಕ್ಷನ್ ಅಧಿಕಾರಿ ಎಚ್. ಎಮ್. ಸಾರವಾಡ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಜಿ. ವಾಯ್. ಮುರಾಳ, ಬಸವನ ಬಾಗೇವಾಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಾಠೋಡ, ಹೆಗಡಿಹಾಳ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿ ಸರಿತಾ ಟಿ. ನಾಯಕ, ಸಾತಿಹಾಳ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿ ಎಂ. ಎನ್. ಕತ್ತಿ, ಯಾಳವಾರ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿ ಮಲ್ಲು ಮಸಳಿ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ತಾಲೂಕ ಪಂಚಾಯತ Iಇಅ ಸಂಯೋಜಕರಾದ ರಾಘವೇಂದ್ರ ಭಜಂತ್ರಿ, ಸಿದ್ದಪ್ಪ ಕಾಂಬಳೆ ಮತ್ತು ಗ್ರಾಮ ಪಂಚಾಯತ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಬಾಲಕಾರ್ಮಿಕ ನಿರ್ಮೂಲನೆಗೆ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ : ಬಾಲಕಾರ್ಮಿಕತೆ ಅನಿಷ್ಠ ಪದ್ದತಿಯಾಗಿದ್ದು, ಇದರ ನಿರ್ಮೂಲನೆಗೆ ಪರಿಣಾಮಕಾರಿ ಜಾಗೃತಿ ಅಗತ್ಯವಾಗಿದ್ದು, ಎಲ್ಲಾ ಅಧಿಕಾರಿಗಳು, ಸಂಘ- ಸಂಸ್ಥೆಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಕರೆ ನೀಡಿದರು.

ಬುಧವಾರ ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೆÇಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿ ನಿμÉೀಧಿಸಲಾಗಿದೆ. ಇದೊಂದು ಅಪರಾಧವಾಗಿದೆ ಎಂಬುದರ ಕುರಿತು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಿ, ಸಂಪೂರ್ಣ ನಿರ್ಮೂಲನೆಗೆ ಕೈಜೋಡಿಸಬೇಕು. ಬಾಲಕಾರ್ಮಿಕ ಪ್ರಕರಣಗಳು ಕಂಡುಬಂದ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ – 1098ಕ್ಕೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ಕಾರ್ಮಿಕ ಇಲಾಖೆಯು ಸೇರಿದಂತೆ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ರಕ್ಷಿಸಿದ ಮಕ್ಕಳನ್ನು ಬಾಲಮಂದಿರಕ್ಕೆ ದಾಖಲಿಸಿ ಅವರ ಪುನರ್ವಸತಿ ಕಲ್ಪಿಸಿ ಅವರಿಗೆ ಪೂರಕವಾದ ಶಿಕ್ಷಣ, ಕೌಶಲಗಳ ತರಬೇತಿ ಒದಗಿಸಲಾಗುತ್ತಿದೆ ಎಂದು ಹೇಳಿದರು.

ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಕ್ರೋಢೀಕರಿಸಿಕೊಂಡು ಆ ಬಗ್ಗೆ   ಸಂಬಂಧಿಸಿದವರಿಗೆ ಮಾಹಿತಿ ನೀಡಬೇಕು. ಬಾಲಕಾರ್ಮಿಕ ಕಾರ್ಮಿಕ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಶಾಲಾ ಮುಖ್ಯಸ್ಥರೊಂದಿಗೆ ಸಮನ್ವಯ ಸಾಧಿಸಬೇಕು. ವಲಸೆ ಕಾರ್ಮಿಕ ಕುಟುಂಬಗಳ ಬಗ್ಗೆ ಮಾಹಿತಿ ಪಡೆÉದುಕೊಂಡು ಅವರ ಮಕ್ಕಳ ಶಿಕ್ಷಣ, ಮೂಲಭೂತ ಹಕ್ಕುಗಳ ಸಂರಕ್ಷಣೆ ಮಾಡಬೇಕು. ಮಕ್ಕಳ ಭವಿಷ್ಯ ಸುಂದರವಾಗಿಸಲು ಬಾಲಕಾರ್ಮಿಕತೆ ಪಿಡುಗನ್ನು ತೊಲಗಿಸಬೇಕು.  

 ಕಾರ್ಮಿಕ ನಿರೀಕ್ಷಕರಾದ ಜಗದೇವಿ ಸಜ್ಜನ ಬಾಲಕಾರ್ಮಿಕ ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ ಹೆಚ್ಚುವರಿ  ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಯಾದ ರಾಮನಗೌಡ ಹಟ್ಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕರಾದ ನೀಲಮ್ಮಾ ಖೇಡಗಿ, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಎಸ್.ಜಿ. ಕೈನೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಚಾದೋ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎಸ್.ಜಿ. ಕುಲಕರ್ಣಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Tuesday, June 11, 2024

12-06-2024 EE DIVASA KANNADA DAILY NEWS PAPER

ಅಕ್ರಮ ಜಾನುವಾರು ಸಾಗಾಟ , ವಧೆ ತಡೆಗಟ್ಟಿ : ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ : ಜಿಲ್ಲೆಯಲ್ಲಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಜಾನುವಾರು ಸಾಗಾಟ ಹಾಗೂ ವಧೆಯನ್ನು ತಡೆಗಟ್ಟಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರಗಳ ಸಾಗಾಟ ಹಾಗೂ ವಧೆ ತಡೆಗಟ್ಟುವ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2020-21 ನೇ ಕರ್ನಾಟಕ ಅಧ್ಯಾದೇಶ ಸಂಖ್ಯೆ ಕರ್ನಾಟಕ ಜಾನುವಾರು ಹತ್ಯೆ ಪ್ರಭಂದಕ ಮತ್ತು ಸಂರಕ್ಷಣಾ ಅಧ್ಯಾದೇಶ ರನ್ವಯ ಎಲ್ಲಾ ವಯಸ್ಸಿನ ಆಕಳು, ಆಕಳು ಕರ, ಹೋರಿ, 13 ವರ್ಷದೊಳಗಿನ ಎಮ್ಮೆ ಕೋಣಗಳ ವಧೆ ಮಾಡುವಂತಿಲ್ಲ. ಈ ಕಾಯ್ದೆ ಉಲ್ಲಘನೆಯಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಅನಧಿಕೃತ ಜಾನುವಾರುಗಳ ಅಕ್ರಮ ಸಾಗಟು ತಡೆಗೆ ಜಿಲ್ಲೆಯ ಕನಮಡಿ, ಅರಕೇರಿ ಸಿದ್ಧಾಪುರ, ಯತ್ನಾಳ, ಧೂಲಕೇಡ - ಶಿರದೋಣ, ಅಗರಖೇಡ ನಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಹಬ್ಬದ ಹಿಂದಿನ ಮೂರು ದಿನಗಳು ಅಧಿಕಾರಿಗಳು ಕಟ್ಟುನಿಟ್ಟಾಗಿ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಬೇಕು ಎಂದರು. ಹಬ್ಬದ ಮುಂಚಿನ ಮೂರು ದಿನಗಳಲ್ಲಿ ನಗರಪಾಲಿಕೆ, ಪಶುಪಾಲನಾ ಇಲಾಖೆ, ಪೊಲೀಸ್ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ತಾಲೂಕು ವ್ಯಾಪ್ತಿಯಲ್ಲಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಿಕೊಂಡು ಅಕ್ರಮ ಸಾಗಣೆ ಹಾಗೂ ವಧೆಯನ್ನು ತಡೆಗಟ್ಟಲು ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು 13 ವರ್ಷ ದಾಟಿದ ಎಮ್ಮೆ ಹಾಗೂ ಕೊಣಗಳುನ್ನು ವಧೆ ಮಾಡಬಹುದು. ಇದಕ್ಕೆ ಸಂಬಂಧಿಸಿದ ಪಶು ಇಲಾಖೆಯಿಂದ ನಿರಾಪೇಕ್ಷಣೆ ಪತ್ರ ಹಾಗೂ ವೈದ್ಯಕೀಯ ತಪಾಸಣೆ ಪತ್ರ ಹೊಂದಿರಬೇಕು ಎಂದು ತಿಳಿಸಿದರು. ಜಾನುವಾರುಗಳ ಸಾಗಾಟ ಮಾಡುವಾಗ , ಖರೀದಿಸುವಾಗ, ಮಾರಾಟ ಮಾಡುವ ಸಂದರ್ಭದಲ್ಲಿ ಜಾನುವಾರುಗಳಿಗೆ ಕಿವಿಯೋಲೆ ಇರುವುದು ಕಡ್ಡಾಯವಾಗಿರುತ್ತದೆ. ಹಾಗೂ ಸಾಗಾಣಿಕೆ ಸಂಬಂಧಪಟ್ಟಂತೆ ಸಂಭಂದಪಟ್ಟ ಅಧಿಕಾರಿ ಗಳಿಂದ ದೃಢೀಕರಣ ಪತ್ರ ತೆಗೆದುಕೊಂಡು ಸಾಗಾಣಿಕೆ ಮಾಡುವುದು ಕಡ್ಡಾಯವಾಗಿರುತ್ತದೆ ಎಂದರು. ಜಿಲ್ಲೆಯ ಎಲ್ಲಾ ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳಿಗೆ ಗುರುತಿನ ಸಂಖ್ಯೆ ಹೊಂದಿರುವ ಕಿವಿಯೋಲೆ ಹಾಕುವಂತೆ ನಿರ್ದೇಶನ ನೀಡಬೇಕು. ಹಬ್ಬದ ಸಂದರ್ಭದಲ್ಲಿ ಮಾಂಸದ ತಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡುವಂತಿಲ್ಲ. ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಮಹಾನಗರಪಾಲಿಕೆ, ನಗರಪಾಲಿಕೆ, ಗ್ರಾಮ್ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಮಾಂಸ ಮಾರಾಟಗಾರರಿಗೆ ತಿಳಿವಳಿಕೆ ಮೂಡಿಸಬೇಕು, ಅನಧಿಕೃತವಾಗಿ ಜಾನುವಾರಗಳ ಸಾಗಾಟ ಮಾಡುವ ವಾಹನಗಳ ನೋಂದಣಿ ರದ್ದುಪಡಿಸುವ ಕುರಿತು ಕ್ರಮಕೈಗೊಳ್ಳಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪಶುಪಾಲನಾ ಮತ್ತು ಪಶವೈದ್ಯ ಸೇವಾ ಇಲಾಖೆಯ ಅಶೋಕ್ ಗುಣಸಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.